PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಕ್ಷಮೆ ಕೇಳದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

March 29, 2023

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023
Facebook Twitter Instagram
Thursday, March 30
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಕನ್ನಡದ 14 ಸಿನಿಮಾಗಳು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿಯ ಅಂತಿಮ ಸುತ್ತಿಗೆ ಆಯ್ಕೆ
ಚಲನಚಿತ್ರ Prajatv KannadaBy Prajatv KannadaMarch 17, 2023

ಕನ್ನಡದ 14 ಸಿನಿಮಾಗಳು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿಯ ಅಂತಿಮ ಸುತ್ತಿಗೆ ಆಯ್ಕೆ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: 14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಕನ್ನಡ ಸ್ಪರ್ಧಾ ವಿಭಾಗದ ಅಂತಿಮ ಸುತ್ತಿಗೆ ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಅವರ ‘ಗಂಧದಗುಡಿ’, ಮಂಸೋರೆ ನಿರ್ದೇಶನದ ‘19.20.21’, ಪೃಥ್ವಿ ನಿರ್ದೇಶನದ ‘ಹದಿನೇಳೆಂಟು’ ಸೇರಿದಂತೆ 14 ಸಿನಿಮಾಗಳು ಆಯ್ಕೆಯಾಗಿವೆ.

ಚಲನಚಿತ್ರೋತ್ಸವದ ವೆಬ್‌ಸೈಟ್‌ನಲ್ಲಿ ಏಷಿಯನ್‌, ಭಾರತೀಯ ಹಾಗೂ ಕನ್ನಡ ಹೀಗೆ ಮೂರು ಸ್ಪರ್ಧಾ ವಿಭಾಗಗಳಲ್ಲಿ ಸ್ಪರ್ಧೆಗೆ ಆಯ್ಕೆಯಾದ ಸಿನಿಮಾಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಕನ್ನಡ ಸಿನಿಮಾಗಳ ಸ್ಪರ್ಧೆಗೆ 108ಕ್ಕೂ ಅಧಿಕ ಸಿನಿಮಾಗಳು ನೋಂದಣಿಯಾಗಿದ್ದವು. ಈ ಪೈಕಿ ಅಮೋಘವರ್ಷ ಜೆ.ಎಸ್‌. ನಿರ್ದೇಶನದ, ಪುನೀತ್ ರಾಜ್ ಕುಮಾರ್ ನಟನೆಯ ‘ಗಂಧದಗುಡಿ’, ಮಂಸೋರೆ ನಿರ್ದೇಶನದ ‘19.20.21’, ಜಡೇಶ ಕೆ.ಹಂಪಿ ನಿರ್ದೇಶನದ ‘ಗುರು ಶಿಷ್ಯರು’, ಬೂಸಾನ್‌ ಅಂತರರಾಷ್ಟ್ರೀಯ ಸಿನಿಮೋತ್ಸವ ಹಾಗೂ ಗೋವಾ ಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡ ಪೃಥ್ವಿ ಕೊಣನೂರು ನಿರ್ದೇಶನದ ‘ಹದಿನೇಳೆಂಟು’, ವಿಶಾಲ್‌ ರಾಜ್‌ ನಿರ್ದೇಶನದ ‘ಕನಕ ಮಾರ್ಗ’, ಶಿವಧ್ವಜ್‌ ಶೆಟ್ಟಿ ನಿರ್ದೇಶನದ ತುಳು ಸಿನಿಮಾ ‘ಕೋರಮ್ಮ’, ರಘು ರಾಮಚರಣ್‌ ನಿರ್ದೇಶನದ ‘ಕುಬುಸ’, ಪ್ರದೀಪ್‌ ಕೆ.ಶಾಸ್ತ್ರಿ ಅವರ ‘ಮೇಡ್‌ ಇನ್‌ ಬೆಂಗಳೂರು’, ತ್ರಿಪಾಠಿ ಸುಂದರ್‌ ಅಭಿಕಾರ್‌ ಅವರ ‘ನಲ್ಕೆ’, ಕೃಷ್ಣೇಗೌಡ ಅವರ ‘ನಾನು ಕುಸುಮ’, ಸುನಿಲ್‌ ಮೈಸೂರು ನಿರ್ದೇಶನದ ‘ಆರ್ಕೆಸ್ಟ್ರಾ ಮೈಸೂರು’, ಉತ್ಸವ್‌ ಅವರ ‘ಫೋಟೊ’, ರವೀಂದ್ರ ವೆಂಶಿ ನಿರ್ದೇಶನದ ‘ಮಠ’, ರಿಷಿಕಾ ಶರ್ಮಾ ನಿರ್ದೇಶನದ ‘ವಿಜಯಾನಂದ’ ಸಿನಿಮಾಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿವೆ. ಈ ಪೈಕಿ ಮೂರು ಸಿನಿಮಾಗಳು ಪ್ರಶಸ್ತಿ ಪಡೆಯಲಿದ್ದು, ಮಾರ್ಚ್‌ 30ರಂದು ನಡೆಯಲಿರುವ ಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಇದು ಘೋಷಣೆಯಾಗಲಿದೆ.

ಏಷಿಯನ್‌ ಸ್ಪರ್ಧಾ ವಿಭಾಗದಲ್ಲಿ ‘ವಿರಾಟಪುರ ವಿರಾಗಿ‘
ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ಚಿತ್ರೋತ್ಸವದ ಏಷಿಯನ್ ವಿಭಾಗದ ಸ್ಪರ್ಧೆಗೆ ಆಯ್ಕೆಯಾಗಿದೆ. ಈ ಸಿನಿಮಾ ಕಥನ ಹಾನಗಲ್‌ನ ವಿರಕ್ತಮಠದ ಕುಮಾರಸ್ವಾಮಿಗಳ ಜೀವನ ವೃತ್ತಾಂತದ ನಿರೂಪಣೆಯಾಗಿದೆ. ಈ ಸ್ಪರ್ಧಾ ವಿಭಾಗದಲ್ಲಿ ಭಾರತ, ಇರಾನ್, ಜಪಾನ್, ಶ್ರೀಲಂಕಾ, ಬಾಂಗ್ಲಾದೇಶ, ಫ್ರಾನ್ಸ್‌ ಸೇರಿದಂತೆ ಹಲವು ದೇಶಗಳ 14 ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ ಕನ್ನಡದ ಎರಡು ಸಿನಿಮಾಗಳು ಆಯ್ಕೆಯಾಗಿರುವುದು ವಿಶೇಷ. ‘ವಿರಾಟಪುರ ವಿರಾಗಿ’ ಜೊತೆಗೆ ಕೆ.ಶಿವರುದ್ರಯ್ಯ ನಿರ್ದೇಶನದ ಕನ್ನಡ ಸಿನಿಮಾ ‘ಸಿಗ್ನಲ್‌ ಮ್ಯಾನ್‌ 1971’ ಸಿನಿಮಾ ಈ ವಿಭಾಗದಲ್ಲಿ ಆಯ್ಕೆಯಾಗಿದೆ.

ಭಾರತೀಯ ಸ್ಪರ್ಧಾ ವಿಭಾಗದಲ್ಲಿ ಕನ್ನಡದ ಐದು ಸಿನಿಮಾಗಳಿವೆ. ಸಂದೀಪ್‌ ಶೆಟ್ಟಿ ನಿರ್ದೇಶನದ ‘ಆರಾರಿರಾರೋ’, ಇಸ್ಲಾಹುದ್ದೀನ್‌ ಎನ್‌.ಎಸ್. ನಿರ್ದೇಶನದ ‘ಅನ್ನ’, ಚಂಪಾ ಪಿ. ಶೆಟ್ಟಿ ಅವರ ‘ಕೋಳಿ ಎಸ್ರು’, ಕೆ.ಸುಚೇಂದ್ರ ಪ್ರಸಾದ್‌ ಅವರ ‘ಮಾವು ಬೇವು’, ಹರೀಶ್‌ ಕುಮಾರ್‌ ಎಲ್‌. ಅವರ ನಿರ್ದೇಶನದ ‘ತನುಜಾ’ ಈ ಪಟ್ಟಿಯಲ್ಲಿವೆ.

ಮಾರ್ಚ್‌ 23ರಂದು ಚಲನಚಿತ್ರೋತ್ಸವ ಆರಂಭವಾಗಲಿದ್ದು, ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ಸಂಜೆ 6ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ

 

Share. Facebook Twitter WhatsApp Pinterest LinkedIn Tumblr Telegram Email

Related Posts

‘ಐಟಂ ಸಾಂಗ್ ಬೇಡ, ಮನೆಯಲ್ಲೇ ಇರು ಎಂದಿದ್ದರು: ವಿಚ್ಛೇದನದ ದಿನಗಳನ್ನು ನೆನಪಿಸಿಕೊಂಡ ನಟಿ ಸಮಂತಾ

March 29, 2023

ಪ್ರಭುದೇವ ಹುಟ್ಟಿದ್ದು ಅಮಾವಾಸ್ಯೆ ದಿನ: ಮೂಗೂರ್‌ ಸುಂದರ್‌

March 29, 2023

ಲಂಡನ್ ನಲ್ಲಿ ಶೋಭಿತಾ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಾಗಚೈತನ್ಯ

March 29, 2023

ಸಂಭಾವನೆಗಾಗಿ ಯಾವತ್ತು ಬೇಡಬಾರದು: ನಟಿ ಸಮಂತಾ

March 29, 2023

ಅಂಬರೀಶ್ ಯಾರ ಬಳಿಯೂ ಕೈಚಾಚಿದವರಲ್ಲ ಆದರೆ ಸ್ಮಾರಕ್ಕಾಗಿ ಸುಮಲತಾ ಕೈಚಾಚಿದರು: ನಟ ಚೇತನ್

March 29, 2023

ಪ್ರಿಯಾಂಕಾ ಬಾಲಿವುಡ್ ಬಿಡೋಕೆ ಕರಣ್ ಜೋಹಾರ್ ಕಾರಣ: ಕಂಗನಾ ರಣಾವತ್

March 29, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.