ಗದಗ: ಭಾರತ ಕೇವಲ ಹಿಂದೂಗಳ ದೇಶ ಅಲ್ಲ. ಇಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ದಲಿತರು ಹೀಗೆ ಅನೇಕ ಜಾತಿ ಜನಾಂಗದವರಿದ್ದು, ಇದು ಬಹುತ್ವದ ದೇಶ. ಭಾರತ ಹಿಂದೂ ರಾಷ್ಟ್ರ ಎನ್ನುವುದು ಬಿಜೆಪಿಯ ಸ್ಲೋಗನ್ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇದೇವೇಳೆ ಬಿಜೆಪಿ, ಸಂಘ ಪರಿವಾರ, ಎಬಿವಿಪಿ, ಬಜರಂಗದಳ,
ಯುವ ಮೋರ್ಚಾ ಎಲ್ಲವೂ ಸುಳ್ಳಿನ ಕಾರ್ಖಾನೆ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1950ರಲ್ಲಿ ಜನಸಂಘ ಸ್ಥಾಪನೆಯಾಯಿತು. ಅಂದಿನಿಂದ ಇಂದಿನ ವರೆಗೆ ಭಾರತ ಹಿಂದೂ ರಾಷ್ಟ್ರ ಮಾಡುತ್ತೇವೆ ಎನ್ನುತ್ತಲೇ ಬಂದಿದ್ದಾರೆ. ಹಿಂದೂ ರಾಷ್ಟ್ರ ಬಿಜೆಪಿಯ ಸ್ಲೋಗನ್ ಅಷ್ಟೇ, ಭಾರತ ಕೇವಲ ಹಿಂದೂ ರಾಷ್ಟç ಆಗಲು ಸಾಧ್ಯವಿಲ್ಲ ಎಂದರು.
ಎಬಿವಿಪಿ, ಭಜರಂಗದಳ ಇವೆಲ್ಲಾ ಬಿಜೆಪಿ ಅಂಗ ಸಂಸ್ಥೆಗಳು. ಸುಳ್ಳು ಹೇಳುವುದೇ ಇವರ ಕೆಲಸ. ಬಿಜೆಪಿ ಎಂದರೆ ಸುಳ್ಳಿನ ಕಾರ್ಖಾನೆ. ನಮ್ಮ ಸರಕಾರ ನುಡಿದಂತೆ ನಡೆದಿದೆ. 4 ಗ್ಯಾರಂಟಿಗಳನ್ನು ಈಗಾಗಲೇ ಈಡೇರಿಸಲಾಗಿದೆ. 5 ಗ್ಯಾರಂಟಿಯನ್ನು 2024ರ ಜನವರಿಯಲ್ಲಿ ಜಾರಿಗೊಳಿಸಲಾಗುವುದು. ಸರಕಾರದ ಬಳಿ ಅನುದಾನದ ಕೊರತೆ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.