ಬೆಂಗಳೂರು ;– ಮೆಗಾಸಿಟಿ ಹಗರಣಕ್ಕೆ ಸಂಬಂಧಿಸಿದಂತೆ ಎಂಎಲ್ಸಿ ಸಿಪಿ ಯೋಗೇಶ್ವರ್ ವಿರುದ್ಧದ ಪ್ರಕರಣ ರದ್ಧತಿಗೆ ಹೈಕೋರ್ಟ್ ನಿರಾಕರಿಸಿದೆ.
ಕೇಂದ್ರ ಸರ್ಕಾರದ ಗಂಭೀರ ಅಪರಾಧಗಳ ತನಿಖಾ ಇಲಾಖೆ ದಾಖಲಿಸಿದ್ದ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಯೋಗೇಶ್ವರ್ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯಪೀಠ ವಜಾಗೊಳಿಸಿದೆ.
ಆರೋಪ ಸಂಬಂಧ ಈಗಾಗಲೇ ಎಸ್ಎಫ್ಐಒ ಪ್ರಕರಣ ದಾಖಲಿಸಿ ಅದು ವಿಚಾರಣೆ ಹಂತದಲ್ಲಿದೆ. ಆದ್ದರಿಂದ ಈ ಹಂತರದಲ್ಲಿ ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಇದರಿಂದಾಗಿ ಯೋಗೇಶ್ವರ್ ಮತ್ತು ಅವರ ಕುಟುಂಬದವರು ವಿಚಾರಣೆ ಎದುರಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ.
![Demo](https://prajatvkannada.com/wp-content/uploads/2023/08/new-Aston-Band.jpeg)