PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Shilpa Shetty: ಸತ್ಯವತಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ನಟಿ ಶಿಲ್ಪಾ ಶೆಟ್ಟಿ

March 22, 2023

ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ: 7 ನಿಧನ

March 22, 2023

ಕೋವಿಡ್ ಪ್ರಕರಣ ಸಂಖೆ ಹೆಚ್ಚಳ: ಮೋದಿಯಿಂದ ಉನ್ನತ ಮಟ್ಟದ ಸಭೆ

March 22, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ವಿಶ್ವಸಂಸ್ಥೆಯ ಸಭೆಯಲ್ಲಿ ಭಾಗವಹಿಸಿದ ನಿತ್ಯಾನಂದನ ಕೈಲಾಸದ ಮಹಿಳಾ ಪ್ರತಿನಿಧಿ
ಅಂತರಾಷ್ಟ್ರೀಯ Prajatv KannadaBy Prajatv KannadaMarch 1, 2023

ವಿಶ್ವಸಂಸ್ಥೆಯ ಸಭೆಯಲ್ಲಿ ಭಾಗವಹಿಸಿದ ನಿತ್ಯಾನಂದನ ಕೈಲಾಸದ ಮಹಿಳಾ ಪ್ರತಿನಿಧಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಜಿನೇವಾ: ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ ಮಹಾಸಭೆಯಲ್ಲಿ ಸ್ವಘೋಷಿತ ದೇವಮಾನವ ಹಾಗೂ ಕೈಲಾಸ ದೇಶದ ಸಂಸ್ಥಾಪಕ ಸ್ವಾಮಿ ನಿತ್ಯಾನಂದನ ಕೈಲಾಸ ದೇಶದ ಪ್ರತಿನಿಧಿ ಭಾಗವಹಿಸಿದ್ದರು ಎನ್ನಲಾಗಿದೆ.

ಇತ್ತಿಚೆಗೆ ವಿಶ್ವಸಂಸ್ಥೆ ವತಿಯಿಂದ ಜಿನೇವಾದಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ ಮಹಾಸಭೆ ನಡೆದಿದ್ದು, ಈ ಸಭೆಯಲ್ಲಿ ಅಮೆರಿಕ, ಯುಕೆ, ಸ್ಲೊವೇನಿಯಾ, ಫ್ರಾನ್ಸ್ ಮುಂತಾದ ಕಡೆಗಳಲ್ಲಿ ನಿತ್ಯಾನಂದ ಆಶ್ರಮಗಳನ್ನು ನಡೆಸುತ್ತಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸದ ಮಹಿಳಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಸ್ವಘೋಷಿತ ದೇವಮಾನವ, ಕಾಲ್ಪನಿಕ ʼಕೈಲಾಸʼ ರಾಷ್ಟ್ರದ ಸೂತ್ರಧಾರಿ, ಅತ್ಯಾಚಾರ ಆರೋಪಿ ಸ್ವಾಮಿ ನಿತ್ಯಾನಂದನ ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆ ಸಭೆಯೊಂದರಲ್ಲಿ ತನ್ನ ಪ್ರತಿನಿಧಿಗಳು ಭಾಗವಹಿಸಿದ್ದಾರೆ ಎಂದು ಹೇಳಿಕೊಂಡಿದ್ದಾನೆ. ನಿತ್ಯಾನಂದ ತನ್ನ ದ್ವೀಪವನ್ನು ʼಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸʼ ಎಂದು ಕರೆದುಕೊಂಡಿದ್ದಾನೆ. ಈ ದ್ವೀಪಕ್ಕೆ ವಿಶ್ವಸಂಸ್ಥೆ ರಾಷ್ಟ್ರದ ಸ್ಥಾನಮಾನ ನೀಡಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ಈತನ ದ್ವೀಪ ಎಲ್ಲಿದೆ ಎಂಬುದೂ ಖಚಿತವಾಗಿಲ್ಲ. ಅತ್ಯಾಚಾರ ಆರೋಪ ಹೊತ್ತು ಭಾರತ ಬಿಟ್ಟು ಪರಾರಿಯಾಗಿರುವ ನಿತ್ಯಾನಂದನ ಕಾಲ್ಪನಿಕ ದೇಶ ಕೈಲಾಸದ ಪ್ರತಿನಿಧಿಯಾಗಿ ಭಾಗವಹಿಸಿರುವ ವಿಜಯಪ್ರಿಯಾ ನಿತ್ಯಾನಂದ ಎಂಬಾಕೆ, ʼʼಹಿಂದೂಧರ್ಮದ ಸುಪ್ರೀಂ ಗುರುವಾಗಿರುವ ನಿತ್ಯಾನಂದ ಭಾರತದಿಂದ ಕಿರುಕುಳ, ಅತ್ಯಾಚಾರ ಆರೋಪ ಅನುಭವಿಸುತ್ತಿದ್ದಾರೆ. ಅವರಿಗೆ ರಕ್ಷಣೆ ನೀಡಬೇಕುʼʼ ಎಂದು ವಾದಿಸಿದ್ದಾಳಂತೆ. 2019ರಲ್ಲಿ ಈತ ಭಾರತ ಬಿಟ್ಟು ಪರಾರಿಯಾಗಿದ್ದ.

ಅದಕ್ಕೆ ಮುನ್ನ ಇಲ್ಲಿ ಹಲವಾರು ಕಡೆ ಆಶ್ರಮಗಳನ್ನು ನಡೆಸುತ್ತಿದ್ದ ಈತನ ಮೇಲೆ ಅತ್ಯಾಚಾರ, ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ಮಕ್ಕಳ ಅಪಹರಣ ಮುಂತಾದ ಪ್ರಕರಣಗಳು ದಾಖಲಾಗಿವೆ. 2010ರಲ್ಲಿ ಕರ್ನಾಟಕದ ಕೋರ್ಟ್ ಈತನಿಗೆ ಜಾಮೀನುರಹಿತ ವಾರಂಟ್ ಹೊರಡಿಸಿತ್ತು. ಜಗತ್ತಿನಲ್ಲಿ ಶೇ.82ರಷ್ಟು ಮಹಿಳೆಯರು ಪದೇ ಪದೇ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಪುರುಷ ಪ್ರಧಾನ ವ್ಯವಸ್ಥೆಯನ್ನು ಪ್ರಶ್ನಿಸಿದ್ದಕ್ಕಾಗಿ ಶೇ. 42ರಷ್ಟು ಮಹಿಳೆಯರು, ಅತ್ಯಾಚಾರ ಸೇರಿದಂತೆ ಅನೇಕ ದೌರ್ಜನ್ಯಗಳಿಗೆ ಒಳಗಾಗುತ್ತಿದ್ದಾರೆ ಎಂದು ಮಹಿಳಾ ಪ್ರತಿನಿಧಿಗಳು ಹೇಳಿದ್ದಾರೆ.

 

Share. Facebook Twitter WhatsApp Pinterest LinkedIn Tumblr Telegram Email

Related Posts

ಯುಗಾದಿ ಹಬ್ಬದಂದು ₹ 78,800 ಕೋಟಿ ಗಾತ್ರದ ಬಜೆಟ್ ಮಂಡಿಸಿದ ಕೇರ್ಜಿ ಸರ್ಕಾರ

March 22, 2023

ಉಕ್ರೇನ್‌ಗೆ ಭೇಟಿ ನೀಡಿದ ಜಪಾನ್‌ ಪ್ರಧಾನಿ ಕಿಶಿದಾ: ಝೆಲೆನ್‌ಸ್ಕಿ ಜತೆ ಮಾತುಕತೆ

March 22, 2023

ಪಾಕಿಸ್ತಾನದಲ್ಲಿ 6.5 ತೀವ್ರತೆಯ ಭೂಕಂಪ: 12 ಮಂದಿ ನಿಧನ, 100ಕ್ಕೂ ಅಧಿಕ ಜನರಿಗೆ ಗಾಯ

March 22, 2023

Rishi Sunak: ಇಂಗ್ಲಿಷ್ ಪರೀಕ್ಷಾ ಹಗರಣ: ಕ್ರಮ ಕೈಗೊಳ್ಳುವಂತೆ ಪ್ರಧಾನಿಗೆ ಒತ್ತಾಯಿಸಿದ ಭಾರತೀಯ ವಿದ್ಯಾರ್ಥಿಗಳು

March 22, 2023

ಲಂಡನ್‌ನಲ್ಲಿ ಖಲಿಸ್ತಾನಿ ಹಿಂಸಾಚಾರದ ವಿರುದ್ಧ ಬೀದಿಗಿಳಿದ ಭಾರತೀಯರು

March 22, 2023

ಇಂಗ್ಲಿಷ್ ಪರೀಕ್ಷಾ ಹಗರಣ: ವೀಸಾ ಹಿಂಪಡೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಿಷಿ ಸುನಕ್‌ಗೆ ಭಾರತೀಯ ವಿದ್ಯಾರ್ಥಿಗಳ ಮನವಿ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.