PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಓಲಾ ಶೇರಿಂಗ್, ಉಬರ್ ಪೂಲಿಂಗ್‌ʼಗೆ ಅವಕಾಶ ನೀಡಲು ಸಂಸದರ ಪಟ್ಟು: ಕೆರಳಿದ ಖಾಸಗಿ ಸಾರಿಗೆ ಚಾಲಕರು

October 2, 2023

BMTC ನೌಕರರಿಗೆ ಗುಡ್ ನ್ಯೂಸ್: ಡಿಪೋಗಳಲ್ಲೇ ಊಟ ತಿಂಡಿ ಒದಗಿಸುವ ಕ್ಯಾಂಟೀನ್‌ ಆರಂಭ!

October 2, 2023

ಗಾಂಧಿಜೀ ಅವರ ಕನಸಾದ ಸ್ವಚ್ಛ ಭಾರತ ಕನಸನ್ನ ನನಸು ಮಾಡಬೇಕಿದೆ: ಗ್ರಾ.ಪಂ.ಅಧ್ಯಕ್ಷ ಅಶೋಕ್

October 2, 2023
Facebook Twitter Instagram
Monday, October 2
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಟೆನ್ನೀಸ್ ಕೃಷ್ಣ ಬಳಿಕ ಮತ್ತೋರ್ವ ನಟನಿಗೆ ಟಿಕೆಟ್ ಘೋಷಿಸಿದ ಆಮ್ ಆದ್ಮಿ ಪಾರ್ಟಿ
ಚಲನಚಿತ್ರ Prajatv KannadaBy Prajatv KannadaMarch 21, 2023

ಟೆನ್ನೀಸ್ ಕೃಷ್ಣ ಬಳಿಕ ಮತ್ತೋರ್ವ ನಟನಿಗೆ ಟಿಕೆಟ್ ಘೋಷಿಸಿದ ಆಮ್ ಆದ್ಮಿ ಪಾರ್ಟಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಕರ್ನಾಟಕ ವಿಧಾನಸಭಾ ಚುನಾವಣೆ ಎದುರಿಸಲು ಆಮ್ ಆದ್ಮಿ ಪಕ್ಷ ಹಲವು ತಿಂಗಳಿನಿಂದ ಸಿದ್ಧತೆ ನಡೆಸಿತ್ತು. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ತೀವ್ರ ಪೈಪೋಟಿ ನೀಡುವುದಕ್ಕಾಗಿಯೇ ಹಲವು ರೀತಿಯಲ್ಲಿ ಕಸರತ್ತು ಕೂಡ ನಡೆಸಿಕೊಂಡು ಬರುತ್ತಿದೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳಿಗಿಂತ ಮುಂದೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಆಮ್ ಆದ್ಮಿ ಪಾರ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಇಬ್ಬರು ಸಿನಿಮಾ ರಂಗದವರು ಇದ್ದಾರೆ ಎನ್ನುವುದು ವಿಶೇಷವಾಗಿದೆ.

ಮುಂದಿನ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಕಾರ್ಯಕರ್ತರು ಚುನಾವಣಾ ತಯಾರಿ ಆರಂಭಿಸಿದ್ದರು. ಕೆಲವರಿಗೆ ಆಗಲೇ ಟಿಕೆಟ್ ಕನ್ಫರ್ಮ್ ಕೂಡ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ 80 ಕ್ಷೇತ್ರಗಳ ಮೊದಲ ಪಟ್ಟಿಯನ್ನು ಆಮ್ ಆದ್ಮಿ ಪಾರ್ಟಿ ರಿಲೀಸ್ ಮಾಡಿದೆ.

ಆಮ್ ಆದ್ಮಿ ಪಕ್ಷ ರಿಲೀಸ್ ಮಾಡಿರುವ ಪಟ್ಟಿಯಲ್ಲಿ ಏಳು ಜನ ರೈತ ಹೋರಾಟಗಾರರು. ಏಳು ಜನ ಮಹಿಳೆಯರು, 5 ಮಂದಿ ಸಮಾಜಸೇವಕರು, ಮೂರು ಜನ ಡಾಕ್ಟರೇಟ್, 15 ಜನ ಮಾಸ್ಟರ್ಸ್ ಮುಗಿಸಿರುವವರು , 3 ಜನ ಎಂಬಿಬಿಎಸ್ ಮುಗಿಸಿರುವವರು, 13 ಜನ ಲಾಯರ್ಸ್,  ಪತ್ರಕರ್ತರು ಹಾಗೂ ಕಲಾವಿದರು ಇದ್ದಾರೆ.

ಹಲವು ದಶಕಗಳಿಂದ ಸಿನಿಮಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ನೂರಾರು ಚಿತ್ರಗಳನ್ನು ಮಾಡಿರುವ ಟೆನ್ನಿಸ್ ಕೃಷ್ಣಗೆ ಆಮ್ ಆದ್ಮಿ ಪಾರ್ಟಿ ಟಿಕೆಟ್ ಘೋಷಣೆ ಮಾಡಿದ್ದು, ಇವರು ತುರುವೇಕರೆ ಕ್ಷೇತ್ರದಿಂದ ಕಣಕ್ಕೆ ಇಳಿಯುತ್ತಿದ್ದಾರೆ. ಹಾಸ್ಯ ಪಾತ್ರದ ಮೂಲಕ ಗುರುತಿಸಿಕೊಂಡಿರುವ ಟೆನ್ನಿಸ್ ಕೃಷ್ಣ, ಕನ್ನಡದ ಅನೇಕ ಹೆಸರಾಂತ ತಾರೆಯರ ಜೊತೆ ತೆರೆ ಹಂಚಿಕೊಂಡಿದ್ದಾರೆ.

ನಿರ್ದೇಶಕರಾಗಿ, ನಿರ್ಮಾಪಕರಾಗಿ, ನಟರಾಗಿ ಹಲವಾರು ಚಿತ್ರಗಳನ್ನು ಮಾಡಿರುವ ಸ್ಮೈಲ್ ಶ್ರೀನು ಅವರಿಗೆ ಕೂಡ್ಲಿಗಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ. ಈಗಾಗಲೇ ಹಲವು ತಿಂಗಳಿಂದ ಕೂಡ್ಲಿಗಿ ಕ್ಷೇತ್ರದಲ್ಲಿ ಶ್ರೀನಿವಾಸ್ ಪ್ರಚಾರವನ್ನೂ ಆರಂಭಿಸಿದ್ದರು. ಹಲವಾರು ಜನಪರ ಹಾಗೂ ಸಮಾಜಮುಖಿ ಕೆಲಸಗಳಲ್ಲೂ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ನಟ ಶಶಿಕುಮಾರ್ ಪುತ್ರನನ್ನು ಸಿನಿಮಾ ರಂಗಕ್ಕೆ ಪರಿಚಯಿಸಿದ ಕೀರ್ತಿ ಶ್ರೀನಿವಾಸ್ ಇವರದ್ದು.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ದೊಡ್ಮನೆ ಆಟಕ್ಕೆ ಎಂಟ್ರಿ ಬಗ್ಗೆ ಮೇಘಾ ಶೆಟ್ಟಿ ಕೊಟ್ಟ ಉತ್ತರವೇನು?

October 2, 2023

ಅಕ್ಟೋಬರ್ 3ಕ್ಕೆ ವಿಚಾರಣೆಗೆ ಬರುವಂತೆ ನಟ ನಾಗಭೂಷಣ್‌ʼಗೆ ನೋಟಿಸ್!

October 2, 2023

’ಶುಗರ್ ಫ್ಯಾಕ್ಟರಿ’ಯಲ್ಲಿ ಡಾರ್ಲಿಂಗ್ ಕೃಷ್ಣ ಮಿಂಚಿಂಗ್…ಯಾವಾಗ ರಿಲೀಸ್ ಆಗ್ತಿದೆ ಸಿನಿಮಾ?

September 30, 2023

ಸಂಯುಕ್ತಾ ಬೋಲ್ಡ್​ ಡಾನ್ಸ್​​, ನೆಟ್ಟಿಗರ ತರಾಟೆ – ಡ್ಯಾನ್ಸರ್ ಕಿಶನ್ ರಿಯಾಕ್ಷನ್ ಹೀಗಿತ್ತು!

September 30, 2023

‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಕಲೆಕ್ಷನ್ ಎಷ್ಟು ಗೊತ್ತಾ: ಕೇಳಿದ್ರೆ ಅಬ್ಬಾ ಅನ್ಸುತ್ತೆ!

September 30, 2023

ರಾಕಿಭಾಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್ – ಸಲಾರ್ ರಿಲೀಸ್ ಬಳಿಕ‌ ಕೆಜಿಎಫ್-3 ಕೆಲಸ ಶುರು

September 30, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.