ಆಡಿಷನ್ ನೆಪದಲ್ಲಿ ನನ್ನನ್ನು ಹೋಟೆಲ್ ಗೆ ಕರೆದು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 31 ವರ್ಷದ ನಟರೊಬ್ಬರು ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯಾ.ಹೇಮಾ ಸಮಿತಿ ವರದಿ ಬಿಡುಗಡೆಯಾದ ನಂತರ ರಂಜಿತ್ ಬಂಗಾಳಿ ನಟಿಯೊಬ್ಬರಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿದ್ದರು. ಈ ಬೆನ್ನಲ್ಲೇ ರಂಜಿತ್ ವಿರುದ್ಧ ಮತ್ತೊಂದು ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ನಟನೊಬ್ಬನನ್ನ ಐಷಾರಾಮಿ ಹೋಟೆಲ್ಗೆ ಕರೆಸಿ, ವಿವಸ್ತ್ರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಈ ಕುರಿತು ಬೆಂಗಳೂರು ಈಶಾನ್ಯ ವಿಭಾಗದ ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕೇರಳ ಪೊಲೀಸರು ಪ್ರಕರಣವನ್ನು ಬೆಂಗಳೂರು ಪೊಲೀಸರಿಗೆ ವರ್ಗಾಯಿಸಿದ ನಂತರ ರಂಜಿತ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ರಂಜಿತ್ ವಿರುದ್ಧ ಐಟಿ ಕಾಯ್ದೆಯ ಐಪಿಸಿ ಸೆಕ್ಷನ್…
Author: Prajatv Kannada
ಬಿಗ್ ಬಾಸ್ ಮೂಲಕ ಖ್ಯಾತಿ ಘಳಿಸಿದ ನಟಿ ಜಯಶ್ರೀ ಆರಾಧ್ಯ ಲೈಫ್ ನಲ್ಲಿ ಬಿರುಗಾಳಿ ಎದ್ದಿದೆ. ಜಯಶ್ರೀ ತಮ್ಮ ಪ್ರಿಯರ ಸ್ಟೀವನ್ ನಿಂದ ದೂರವಾಗಿದ್ದಾರೆ. ಸಾಕಷ್ಟು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಈ ಜೋಡಿ ಮನಸ್ತಾಪ ಹುಟ್ಟಿಕೊಂಡಿದೆ ಇದೇ ಕಾರಣಕ್ಕೆ ಜಯಶ್ರೀ ಆರಾಧ್ಯ ಹಾಗೂ ಸ್ಟೀವನ್ ದೂರ ದೂರವಾಗಿದ್ದಾರೆ ಎನ್ನಲಾಗುತ್ತಿದೆ. ಚಂದನ್ ನಿವೇದಿತಾ ಡೈವರ್ಸ್ ಬಳಿಕ ಇದೀಗ ಮತ್ತೊಂದು ತಾರಾ ಜೋಡಿ ಜೀವನದಲ್ಲಿ ಬಿರುಗಾಳಿ ಎದ್ದಿದೆ. ರಾಜಾರಾಣಿ ರೀಲೋಡೆಡ್ ಕಂಪ್ಲೀಟ್ ಆಗಿರೋ ಸಂಭ್ರಮ ಇನ್ನು ಹಸಿಯಾಗಿಯೇ ಇರುವಾಗಲೇ ಜಯಶ್ರೀ ಆರಾಧ್ಯ ಹಾಗೂ ಸ್ಟೀವನ್ ಜೋಡಿ ಬಹುಕಾಲದ ಸಂಬಂಧಕ್ಕೆ ಬ್ರೇಕ್ ಹಾಕಿದೆ ಎನ್ನಲಾಗ್ತಿದೆ. ಈ ಜೋಡಿ ರಾಜಾ ರಾಣಿ ಶೋಗೆ ಕಾಲಿಟ್ಟಾಗಿದ್ದಗಿನಿಂದ ಸಿಕ್ಕಾಪಟ್ಟೆ ಸುದ್ದಿಯಲ್ಲಿತ್ತು. ಇದಕ್ಕೆ ಕಾರಣ ಅವರ ಮದುವೆ ವಿಚಾರ. ಶಾಸ್ತ್ರೋಕ್ತವಾಗಿ ನಾವು ಮದುವೆ ಆಗಿಲ್ಲ. ಆದರೆ ಪತಿ ಪತ್ನಿ ಹೇಗೆ ಇರುತ್ತಾರೋ ನಾವು ಹಾಗೇ ಇದ್ದೀವಿ. ನಮಗೆ ಮದುವೆ ಆಗಬಾರದು ಅಂತೇನಿಲ್ಲ. ಯಾಕೋ ಮದುವೆಗೆ ಟೈಮ್ ಕೂಡಿ ಬಂದಿಲ್ಲ ಅಂತ ಜಯಶ್ರೀ…
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ವಿಪರೀತ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ವೈದ್ಯರು ಕೆಲವೊಂದು ತಪಾಸಣೆಗೆ ಒಳಪಡಿಸಿದ್ದಾರೆ. ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ನೀಡಿ ದರ್ಶನ್ ಪರ ವಕೀಲರು ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅದರ ವಿಚಾರಣೆ ಸೋಮವಾರ ಹೈಕೋರ್ಟ್ನಲ್ಲಿ ನಡೆದಿದೆ. ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ಮಾಡಲಾಗಿದೆ. ಮುಚ್ಚಿದ ಲಕೋಟೆಯಲ್ಲಿ ದರ್ಶನ್ ಅವರ ವೈದ್ಯಕೀಯ ವರದಿ ನೀಡಲಾಯಿತು. ವರದಿಯ ಪ್ರತಿ ನೀಡಲು ನಿರ್ದೇಶಿಸುವಂತೆ ಎಸ್ಪಿಪಿ ಮನವಿ ಮಾಡಿದರು. ಇಂದು ಮಧ್ಯಾಹ್ನ 2.30ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ತೀವ್ರ ಬೆನ್ನು ನೋವಿನ ಹಿನ್ನೆಲೆಯಲ್ಲಿ ದರ್ಶನ್ ಕುಟುಂಬ ಸದಸ್ಯರ ಉಪಸ್ಥಿತಿಯಲ್ಲಿ ‘ಎಂಆರ್ಐ, ಸಿಟಿ ಸ್ಕ್ಯಾನ್ ಮಾಡಿಸಲಾಗಿದೆ. ಈ ವೇಳೆ ನ್ಯೂರೋ ಸರ್ಜನ್ ಮೂರು ಅಂಶಗಳನ್ನು ಹೇಳಿದ್ದಾರೆ. ನಂಬ್ ನೆಸ್ ಇದೆ. ರಕ್ತಪರಿಚಲನೆ ಆಗುತ್ತಿಲ್ಲ. ಇದರಿಂದ ಕಿಡ್ನಿಗೆ ಸಮಸ್ಯೆ ಆಗಬಹುದು. ಡಿಸ್ಕ್ ಸಮಸ್ಯೆ ಇದೆ. ತಕ್ಷಣ ಸರ್ಜರಿಗೆ ಸೂಚಿಸಿದ್ದಾರೆ. ಇಲ್ಲವಾದರೆ…
ಇಷ್ಟು ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಸೈಲೆಂಟ್ ಆಗಿದ್ದ ಪಾರು ಧಾರವಾಹಿ ಖ್ಯಾತಿಯ ನಟಿ ಮೋಕ್ಷಿತಾ ಪೈ ಸದ್ಯ ಸಖತ್ ವೈಲೆಂಟ್ ಆಗಿದ್ದಾರೆ. ಈ ವಾರ ಮೋಕ್ಷಿತ ಎಲಿಮಿನೇಷನ್ನಿಂದ ಪಾರಾಗಿದ್ದಾರೆ. ತಾವು ಸೇಫ್ ಆಗಿರುವುದು ತಿಳಿಯುತ್ತಿದ್ದಂತೆ ನಟಿ ತಮ್ಮ ಆಟದ ವರಸೆಯನ್ನೇ ಬದಲಾಯಿಸಿದ್ದಾರೆ. ಈವರೆಗೆ ತಮ್ಮ ಬಗ್ಗೆ ಕೆಲವರು ಆಡಿದ ಮಾತುಗಳನ್ನು ಅವರು ನಿರ್ಲಕ್ಷಿಸುತ್ತಿದ್ದ ಮೋಕ್ಷಿತಾ ಪೈ ಇದೀಗ ಆ ಎಲ್ಲ ಮಾತುಗಳಿಗೆ ತಿರುಗೇಟು ನೀಡಲು ಶುರು ಮಾಡಿದ್ದಾರೆ. ‘ಇವರೆಲ್ಲ 10 ವಾರ ಮಾತ್ರ ಇರೋದು’ ಎಂದು ಹೇಳಿದ್ದ ತ್ರಿವಿಕ್ರಮ್ಗೆ ಮೋಕ್ಷಿತಾ ಕ್ಲಾಸ್ ತೆಗೆದುಕೊಂಡಿದ್ದಾರೆ. ಮೋಕ್ಷಿತಾ ಸೇರಿದಂತೆ ಇನ್ನೂ ಕೆಲವರು ಕೇವಲ 10 ವಾರ ಇರುತ್ತಾರೆ ಎಂದು ತ್ರಿವಿಕ್ರಮ್ ಅವರು ಉಗ್ರಂ ಮಂಜು ಬಳಿ ಹೇಳಿದ್ದರು. ಆ ವಿಷಯ ಮೋಕ್ಷಿತಾ ಅವರ ಕಿವಿಗೆ ಬಿದ್ದಿತ್ತು. ಇಷ್ಟು ದಿನ ಸುಮ್ಮನಿದ್ದ ಅವರು ಈಗ ಎಲಿಮಿನೇಷನ್ನಿಂದ ಪಾರಾದ ಬಳಿಕ ಅದೇ ವಿಷಯ ಇಟ್ಟುಕೊಂಡು ಜಗಳ ಆರಂಭಿಸಿದ್ದಾರೆ. ಆಗ ತ್ರಿವಿಕ್ರಮ್ ಅವರ ಇನ್ನೊಂದು…
ನಟಿ ಹಂಸಾ ಅವರ ಬಿಗ್ ಬಾಸ್ ಜರ್ನಿ ಮುಕ್ತಾಯವಾಗಿದೆ. 28ನೇ ದಿನಕ್ಕೆ ಹಂಸಾ ಮನೆಯಿಂದ ಹೊರ ಬಿದಿದ್ದಾರೆ. ಕಳೆದ ವಾರ ಚೈತ್ರಾ ಕುಂದಾಪುರ, ಗೋಲ್ಡ್ ಸುರೇಶ್, ಉಗ್ರಂ ಮಂಜು, ಭವ್ಯಾ, ಮೋಕ್ಷಿತಾ ಪೈ, ಹಂಸಾ, ಮಾನಸಾ ಮುಂತಾದವರು ನಾಮಿನೇಟ್ ಆಗಿದ್ದರು. ಆದರೆ ಅಂತಿಮವಾಗಿ ಹಂಸಾ ಅವರು ಎಲಿಮಿನೇಟ್ ಆಗಬೇಕಾಯಿತು. ಡೇಂಜರ್ ಝೋನ್ ನ ಅಂತಿಮ ಹಂತಕ್ಕೆ ಮೋಕ್ಷಿತಾ ಮತ್ತು ಹಂಸಾ ಬಂದಿದ್ದರು. ಇಬ್ಬರಲ್ಲಿ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಭಾನುವಾರದ ಸಂಚಿಕೆಯಲ್ಲಿ ತೋರಿಸಿರಲಿಲ್ಲ. ಆದರೆ ಸೋಮವಾರದ (ಅ.28) ಸಂಚಿಕೆಯಲ್ಲಿ ಹಂಸಾ ಎಲಿಮಿನೇಟ್ ಆಗಿರುವುದು ಕರ್ನ್ಪಾರ್ಮ್ ಆಗಿದೆ. ಪ್ರತಿ ವಾರ ಎಲಿಮಿನೇಟ್ ಆದವರನ್ನು ಕಿಚ್ಚ ಸುದೀಪ್ ಅವರು ವೇದಿಕೆಗೆ ಕರೆಸಿ ಮಾತನಾಡಿಸುತ್ತಾರೆ. ಆದರೆ ಇತ್ತೀಚೆಗೆ ಅವರ ತಾಯಿ ನಿಧನರಾದ್ದರಿಂದ ವೀಕೆಂಡ್ ಸಂಚಿಕೆ ನಡೆಸಿಕೊಡಲು ಸುದೀಪ್ ಅವರಿಗೆ ಸಾಧ್ಯವಾಗಿಲ್ಲ. ಹಾಗಾಗಿ ಹಂಸಾ ಅವರು ವೇದಿಕೆಯಲ್ಲಿ ಸುದೀಪ್ ಜೊತೆ ಮಾತನಾಡದೇ ಬಿಗ್ ಬಾಸ್ ಆಟವನ್ನು ಮುಗಿಸುವಂತಾಯಿತು. ಈ ಮೊದಲು ಎಲಿಮಿನೇಟ್ ಆದ ರಂಜಿತ್, ಜಗದೀಶ್ ಅವರಿಗೂ…
ರೇಣುಕಾಸ್ವಾಮಿ ಕೊಲೆ ಕೇಸ್ ನ ಎ2 ಆರೋಪಿ ದರ್ಶನ್ ಬೇಲ್ ಅರ್ಜಿಯನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರು ಹೈಕೋರ್ಟ್ನಲ್ಲಿ ಬೇಲ್ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಇಂದು ಹೈಕೋರ್ಟ್ ನಲ್ಲೂ ದರ್ಶನ್ ಗೆ ಜಾಮೀನು ಸಿಕ್ಕಿಲ್ಲ. ಅಕ್ಟೋಬರ್ 22ರಂದು ಹೈಕೋರ್ಟ್ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಬಳಿಕ ಅಕ್ಟೋಬರ್ 28ಕ್ಕೆ ಬೇಲ್ ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು. ಅದರಂತೆ ಇಂದು ಬೇಲ್ ಅರ್ಜಿ ವಿಚಾರಣೆ ನಡೆಸಿದ್ದು, ನಾಳೆಗೆ ವಿಚಾರಣೆ ಮುಂದೂಡಲಾಗಿದೆ. ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹಿನ್ನಲೆ ದರ್ಶನ್ ಮೆಡಿಕಲ್ ರಿಪೋರ್ಟ್ ಅನ್ನು ಕೂಡ ಜೈಲು ಅಧಿಕಾರಿಗಳು ಕೊರ್ಟ್ಗೆ ಸಲ್ಲಿಸಿದ್ದಾರೆ. ಮುಚ್ಚಿದ ಲಕೋಟೆಯಲ್ಲಿ ವೈದ್ಯಕೀಯ ವರದಿ ತಂದ ಜೈಲಾಧಿಕಾರಿಗಳು ಜಾಮೀನು ಅರ್ಜಿ ವಿಚಾರಣೆ ವೇಳೆ ಕೋರ್ಟ್ ಗೆ ರಿಪೋರ್ಟ್ ಸಲ್ಲಿಸಲಿದ್ದಾರೆ. ನಾಳೆ ಅಕ್ಟೋಬರ್ 29ರಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ದರ್ಶನ್ಗೆ ಬೆನ್ನುನೋವು ನಿವಾರಣೆಗೆ ಶಸ್ತ್ರ ಚಿಕಿತ್ಸೆ ಅವಶ್ಯವಿದೆ ಅಂತ ಎಂಆರ್ಐ ಸ್ಕ್ಯಾನಿಂಗ್ನಲ್ಲಿ ವೈದ್ಯರು…
ರೇಣುಕಾಸ್ವಾಮಿ ಕೊಲೆ ಕೇಸ್ ನ ಎ2 ಆರೋಪಿ ದರ್ಶನ್ ಬೇಲ್ ಅರ್ಜಿಯನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರು ಹೈಕೋರ್ಟ್ನಲ್ಲಿ ಬೇಲ್ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಇಂದು ಹೈಕೋರ್ಟ್ ನಲ್ಲೂ ದರ್ಶನ್ ಗೆ ಜಾಮೀನು ಸಿಕ್ಕಿಲ್ಲ. ಅಕ್ಟೋಬರ್ 22ರಂದು ಹೈಕೋರ್ಟ್ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಬಳಿಕ ಅಕ್ಟೋಬರ್ 28ಕ್ಕೆ ಬೇಲ್ ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು. ಅದರಂತೆ ಇಂದು ಬೇಲ್ ಅರ್ಜಿ ವಿಚಾರಣೆ ನಡೆಸಿದ್ದು, ನಾಳೆಗೆ ವಿಚಾರಣೆ ಮುಂದೂಡಲಾಗಿದೆ. ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹಿನ್ನಲೆ ದರ್ಶನ್ ಮೆಡಿಕಲ್ ರಿಪೋರ್ಟ್ ಅನ್ನು ಕೂಡ ಜೈಲು ಅಧಿಕಾರಿಗಳು ಕೊರ್ಟ್ಗೆ ಸಲ್ಲಿಸಿದ್ದಾರೆ. ಮುಚ್ಚಿದ ಲಕೋಟೆಯಲ್ಲಿ ವೈದ್ಯಕೀಯ ವರದಿ ತಂದ ಜೈಲಾಧಿಕಾರಿಗಳು ಜಾಮೀನು ಅರ್ಜಿ ವಿಚಾರಣೆ ವೇಳೆ ಕೋರ್ಟ್ ಗೆ ರಿಪೋರ್ಟ್ ಸಲ್ಲಿಸಲಿದ್ದಾರೆ. ನಾಳೆ ಅಕ್ಟೋಬರ್ 29ರಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಕೆಲ ಕಾಲ ವಾದ ಮಾಡಿದ್ರು.
ಇರಾನ್ ನ ಸರ್ವೋಚ್ಚ ನಾಯಕ ಅಯಾತುಲ್ಲಾ ಅಲಿ ಖಮೇನಿ ಅವರ ಹೊಸ ಖಾತೆಗೆ ಎಕ್ಸ್ ನಿರ್ಬಂಧ ಹೇರಿದೆ. ಖಮೇನಿ ಅವರ ಹೆಸರಲ್ಲಿ ಹಿಬ್ರೂ ಭಾಷೆಯ (@Khamenei_Heb) ಖಾತೆಯನ್ನು ಭಾನುವಾರವಷ್ಟೇ ತೆರೆಯಲಾಗಿತ್ತು. ಇದರಲ್ಲಿ ‘ದೇವರು ಅತ್ಯಂತ ಕರುಣಾಮಯಿ’ ಎಂಬ ಸಂದೇಶವನ್ನು ಹಂಚಿಕೊಳ್ಳಲಾಗಿತ್ತು. ನಿರ್ಬಂಧಕ್ಕೆ ಸಂಬಂಧಿಸಿದಂತೆ ಆ ಖಾತೆಯಲ್ಲಿ, ‘ಎಕ್ಸ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಖಾತೆ ಅಮಾನತಿನಲ್ಲಿಡಲಾಗಿದೆ’ ಎನ್ನಲಾಗಿದೆ. ಯಾವ ನಿಯಮದ ಉಲ್ಲಂಘನೆಯಾಗಿದೆ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಉದ್ಯಮಿ ಎಲಾನ್ ಮಸ್ಕ್ ಒಡೆತನದ ಕಂಪನಿಯು ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಈ ತಿಂಗಳ ಆರಂಭದಲ್ಲಿ ಇರಾನ್ ನಡೆಸಿದ್ದ ಸರಣಿ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್ ಶನಿವಾರ ಪ್ರತಿದಾಳಿ ನಡೆಸಿತ್ತು. ಅದಕ್ಕೆ ಸಂಬಂಧಿಸಿದಂತೆ ಭಾನುವಾರ ಪ್ರತಿಕ್ರಿಯಿಸಿದ್ದ ಖಮೇನಿ, ದಾಳಿಯನ್ನು ಉತ್ಪ್ರೇಕ್ಷಿಸುವಂತಿಲ್ಲ ಎಂದಿದ್ದರು. 85 ವರ್ಷದ ಖಮೇನಿ ಅವರ ಹೆಸರಿನ ಹಲವು ಖಾತೆಗಳು ‘ಎಕ್ಸ್’ನಲ್ಲಿವೆ. ಅವರ ಕಚೇರಿಯು ಬೇರೆ ಬೇರೆ ಭಾಷೆಗಳಲ್ಲಿ ಸಂದೇಶಗಳನ್ನು ಹಂಚಿಕೊಳ್ಳುತ್ತದೆ. ಸಾಮಾಜಿಕ ಮಾಧ್ಯಮಗಳಲ್ಲಿ ಖಮೇನಿ ಅವರ ಖಾತೆಗೆ ನಿರ್ಬಂಧ ಹೇರುತ್ತಿರುವುದು ಇದೇ ಮೊದಲಲ್ಲ.…
ಇರಾನ್ ದೇಶದ ಮೇಲೆ ದಾಳಿ ನಡೆಸಿದ ಇಸ್ರೇಲ್ ವಿರುದ್ಧ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಕಿಡಿಕಾರಿದ್ದಾರೆ. ಅಲ್ಲದೆ ಇಸ್ರೇಲ್ಗೆ ಅಮೆರಿಕ ಬೆಂಬಲ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕೃತ ಟಿವಿ ವಾಹಿನಿಗೆ ಹೇಳಿಕೆ ನೀಡಿರುವ ಮಸೂದ್, ‘ನಾವು ಯುದ್ಧವನ್ನು ಬಯಸುವುದಿಲ್ಲ. ಆದರೆ ನಮ್ಮ ದೇಶದ ಹಕ್ಕು ಮತ್ತು ರಾಷ್ಟ್ರವನ್ನು ಕಾಪಾಡುತ್ತೇವೆ. ಯಹೂದಿಗಳ ಆಡಳಿತದ ಆಕ್ರಮಣಕ್ಕೆ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ’ ಎಂದಿದ್ದಾರೆ. ಇರಾನ್ ದಾಳಿ ನಡೆಸದಿದ್ದರೆ ಗಾಜಾ ಮತ್ತು ಲೆಬನಾನ್ನಲ್ಲಿ ಸಂಘರ್ಷ ಕೊನೆಗೊಳಿಸುವುದಾಗಿ ಅಮೆರಿಕ ಭರವಸೆ ನೀಡಿತ್ತು ಎಂದಿರುವ ಅವರು, ‘ನಮ್ಮ ಸಂಯಮಕ್ಕೆ ಪ್ರತಿಯಾಗಿ ಯುದ್ಧ ಅಂತ್ಯಗೊಳಿಸುವುದಾಗಿ ಅಮೆರಿಕ ಮಾತು ಕೊಟ್ಟಿದ್ದರು. ಆದರೆ, ಅದನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದ್ದಾರೆ’ ಎಂದು ಕಿಡಿಕಾರಿದ್ದಾರೆ. ‘ಆಕ್ರಮಣಕಾರಿ ಪ್ರವೃತ್ತಿ ಮುಂದುವರಿಸಿದರೆ, ಉದ್ವಿಗ್ನತೆ ತೀವ್ರಗೊಳ್ಳಲಿದೆ’ ಎಂದು ಇಸ್ರೇಲ್ಗೆ ಎಚ್ಚರಿಸಿರುವ ಅವರು, ‘ಇಂತಹ ಕೃತ್ಯಗಳನ್ನು ನಡೆಸಲು ಇಸ್ರೇಲ್ಗೆ ಕುಮ್ಮಕ್ಕು ನೀಡುತ್ತಿರುವುದು ಗೊತ್ತಿದೆ’ ಎನ್ನುವ ಮೂಲಕ ಅಮೆರಿಕಕ್ಕೂ ತಿವಿದಿದ್ದಾರೆ.
ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾ ರಿಲೀಸ್ಗೆ ಇನ್ನು ಕೆಲವೇ ವಾರಗಳು ಬಾಕಿ ಉಳಿದಿವೆ. ಡಿಸೆಂಬರ್ 5ರಂದು ಸಿನಿಮಾ ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಹೀಗಿರುವಾಗಲೇ ಕರ್ನಾಟಕದಲ್ಲಿ ಸಿನಿಮಾ ರಿಲೀಸ್ ಮಾಡಲು ದೊಡ್ಡ ತೊಡಕು ಉಂಟಾಗಿದೆ. ಈ ಚಿತ್ರದ ಬಿಸ್ನೆಸ್ಗೆ ಕರ್ನಾಟಕದಲ್ಲಿ ದೊಡ್ಡ ಹೊಡೆತ ಉಂಟಾಗೋದು ಖಚಿತ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ‘ಪುಷ್ಪ 2’ ಈವೆಂಟ್ನಲ್ಲಿ ಕರ್ನಾಟಕ ಹಂಚಿಕೆದಾರ ಲಕ್ಷ್ಮೀಕಾಂತ್ ರೆಡ್ಡಿ ಮಾತನಾಡಿ, ‘ಪುಷ್ಪ 2’ ಚಿತ್ರ ಕರ್ನಾಟಕದಲ್ಲಿ ಭರ್ಜರಿ ಬಿಸ್ನೆಸ್ ಮಾಡಲಿದೆ ಎಂದು ಭವಿಷ್ಯ ನುಡಿದಿದ್ದರು. ಆದೆರ ಪರಭಾಷೆಯವರು ಸುಲಭದಲ್ಲಿ ಬಿಸ್ನೆಸ್ ಮಾಡಿಕೊಂಡು ಹೋಗುತ್ತಿರುವ ವಿಚಾರವನ್ನು, ಹಾಗೂ ಟಿಕೆಟ್ ದರಕ್ಕೆ ಕಡಿವಾಣ ಇಲ್ಲದನ್ನು ಕನ್ನಡ ಚಲಚಿತ್ರ ವಾಣಿಜ್ಯ ಮಂಡಳಿ ತುಂಬಾ ಗಂಭೀರವಾಗಿ ಪರಿಗಣಿಸಿದೆ. ಏಕರೂಪ ಟಿಕೆಟ್ ದರದ ಕೂಗು ಕೂಡ ಎದ್ದಿದೆ. ಈ ಬಗ್ಗೆ ಮಾತನಾಡಿರುವ ಸಾರಾ ಗೋವಿಂದು ಅವರು, ‘ಮಲ್ಟಿಪ್ಲೆಕ್ಸ್ನಲ್ಲಿ ರಜಿನಿಕಾಂತ್ ಚಿತ್ರಕ್ಕೆ 6 ಸ್ಕ್ರೀನ್ ಕೊಟ್ಟರೆ ಕನ್ನಡ ಸಿನಿಮಾಗೆ 2 ಸ್ಕ್ರೀನ್ ಕೊಡಲಾಗಿತ್ತು. ಟಿಕೆಟ್ ಬೆಲೆ 1500 ರೂಪಾಯಿ ನಿಗದಿ…