Author: Prajatv Kannada

ನವದೆಹಲಿ: ಮಣಿಪುರದ ಜನಾಂಗೀಯ ಗಲಭೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ವಿಷಯದಲ್ಲಿ ಪ್ರತಿಪಕ್ಷ ‘ಇಂಡಿಯಾ’ ಮೈತ್ರಿಕೂಟದ ಸದಸ್ಯರು ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ವಾಗ್ದಾಳಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಮಣಿಪುರ ಹೊತ್ತಿ ಉರಿದಿತ್ತು. ನೂರಾರು ಹತ್ಯೆಗಳು ನಡೆದಿದ್ದವು. ಆದರೆ ಅಂದಿನ ಪ್ರಧಾನಿ ಸದನದಲ್ಲಿ ತುಟಿಬಿಚ್ಚಲಿಲ್ಲ ಎಂದು ಕಿಡಿಕಾರಿದ್ದಾರೆ. ಮಣಿಪುರ ಗಲಭೆಯ ಸೂಕ್ಷ್ಮತೆಯ ಬಗ್ಗೆ ಚರ್ಚೆ ಮಾಡಲು ನಾವು ಯಾವಾಗಲೂ ಸಿದ್ಧರಿದ್ದೇವೆ. ಮಣಿಪುರಕ್ಕೆ ಹೋದ ಎಲ್ಲಾ ಸಂಸದರು  ಚರ್ಚೆಗೆ ಸದನಕ್ಕೆ ಬರುತ್ತಾರೆ ಎಂದು ಆಶಿಸುತ್ತೇವೆ. ಓಡಿಹೋಗದೇ ನಿಮ್ಮ ಅನುಭವಗಳನ್ನು ಹಂಚಿಕೊಳ್ಳಿ ಎಂದು ಸಚಿವ ಅನುರಾಗ್ ಠಾಕೂರ್ ಸವಾಲು ಹಾಕಿದ್ದಾರೆ.

Read More

ಬೀಜಿಂಗ್: ಚೀನಾದ ನೂತನ ವಿದೇಶಾಂಗ ಸಚಿವರಾಗಿ ವಾಂಗ್ ಯಿ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ. ತಿಂಗಳುಗಳಿಂದ ಕಾಣೆಯಾಗಿರುವ ಮಾಜಿ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಅವರನ್ನು ಪದಚ್ಯುತಿಗೊಳಿಸಲಾಗಿದೆ. ಅವರ ಜಾಗಕ್ಕೆ ವಾಂಗ್ ಯಿ ಅವರನ್ನು ನೇಮಕ ಮಾಡಲಾಗಿದೆ. ಚೀನಾದ ಉನ್ನತ ಶಾಸಕಾಂಗವು ಅಧಿವೇಶನದಲ್ಲಿ ವಾಂಗ್ ಯಿ ಅವರನ್ನು ವಿದೇಶಾಂಗ ಸಚಿವರನ್ನಾಗಿ ನೇಮಿಸಲು ಮತ ಚಲಾಯಿಸಿದೆ. ಕಿನ್ ಗ್ಯಾಂಗ್ ಅವರು ಎಲ್ಲಿದ್ದಾರೆ ಎಂಬುದು ಇನ್ನೂ ತಿಳಿದಿಲ್ಲ. ಜೂನ್ 25 ರಂದು ಭೇಟಿ ನೀಡಿದ ರಷ್ಯಾ, ಶ್ರೀಲಂಕಾ ಮತ್ತು ವಿಯೆಟ್ನಾಂ ಅಧಿಕಾರಿಗಳೊಂದಿಗೆ ಅವರ ಕೊನೆಯ ಸಾರ್ವಜನಿಕ ಸಭೆಯಾಗಿತ್ತು. ಅಂದಿನಿಂದ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಚೀನಾ ಈ ಬಗ್ಗೆ ಮಾತನಾಡಿಲ್ಲ. ಅವರ ಗೈರುಹಾಜರಿಯ ಕುರಿತಾದ ಚರ್ಚೆಯನ್ನು ಚೀನಾದ ಸಾಮಾಜಿಕ ಮಾಧ್ಯಮ ಸೈಟ್ ವೀಬೊದಲ್ಲಿ ಸ್ಪಷ್ಟವಾಗಿ ಸೆನ್ಸಾರ್ ಮಾಡಲಾಗಿದೆ. ವರದಿಯು ಕಿನ್ ಅವರ ಪದಚ್ಯುತಿಗೆ ಕಾರಣವನ್ನು ನೀಡಲಿಲ್ಲ. ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ನಿರ್ಧಾರವನ್ನು ಜಾರಿಗೆ ತರಲು ಅಧ್ಯಕ್ಷೀಯ ಆದೇಶಕ್ಕೆ ಸಹಿ ಹಾಕಿದ್ದಾರೆ…

Read More

ಇಸ್ಲಾಮಾಬಾದ್‌: ಜಾಮಿಯತ್‌ ಉಲೇಮಾ ಇಸ್ಲಾಂ-ಫಜಲ್‌(ಜೆಯುಐ-ಎಫ್‌) ಪಕ್ಷದ ನಾಯಕರು ನಡೆಸುತ್ತಿದ್ದ ಸಭೆ ಮೇಲೆ ನಡೆದ ಬಾಂಬ್‌ ದಾಳಿಯಲ್ಲಿ 39 ಮಂದಿ ಮೃತಪಟ್ಟು. 123 ಜನರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಜರುಗಿದೆ. ಬಾಂಬ್‌ ಸ್ಫೋಟದಲ್ಲಿ ಜಾಮಿಯತ್‌ ಉಲೇಮಾ ಇಸ್ಲಾಂ-ಫಜಲ್‌ ಪಕ್ಷದ ಪ್ರಭಾವಿ ನಾಯಕ ಮೌಲಾನಾ ಜಿಯಾವುಲ್ಲಾಜಾನ್‌ ಮೃತಪಟ್ಟಿದ್ದಾರೆ. ಗಾಯಗೊಂಡಿರುವ 123 ಜನರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 12 ಜನರ ಪರಿಸ್ಥಿತಿ ಗಂಭೀರವಾಗಿದೆ ಎಂದು ಬಜೌರ್‌ ಜಿಲ್ಲಾತುರ್ತು ನಿರ್ವಹಣಾ ಅಧಿಕಾರಿ ಸಾದಾ ಖಾನ್‌ ಮಾಹಿತಿ ನೀಡಿದ್ದಾರೆ.

Read More

ಮಾದಕವಸ್ತು ಕಳ್ಳಸಾಗಣೆ ಆರೋಪದ ಮೇಲೆ ಸಿಂಗಾಪುರವು ಕಳೆದ 20 ವರ್ಷಗಳಲ್ಲಿ ಮೊದಲ ಬಾರಿಗೆ ಮಹಿಳೆಯೊಬ್ಬರನ್ನು ಈ ತಿಂಗಳು ಗಲ್ಲಿಗೇರಿಸಿದೆ. ಸಮಾಜವನ್ನು ರಕ್ಷಿಸಲು ಇಂಥ ಕಠಿಣ ಕಾನೂನು ಅಗತ್ಯ ಎಂದು ಹೇಳುವ ಸಿಂಗಾಪುರ ಇದಕ್ಕಾಗಿ ಸ್ಥಳೀಯ ಜನರಿಂದಲೂ ದೊಡ್ಡ ಮಟ್ಟದ ಬೆಂಬಲವನ್ನು ಪಡೆದುಕೊಂಡಿದೆ. ಸರಿದೇವಿ ಜಮಾನಿ ಅವರ ಗಲ್ಲು ಶಿಕ್ಷೆ ಪ್ರಕರಣ 2022ರ ಮಾರ್ಚ್ 15ರ ಬಳಿಕ ಸಿಂಗಾಪುರದಲ್ಲಿ 15ನೇ ಗಲ್ಲು ಶಿಕ್ಷೆಯಾಗಿದೆ. 2018ರಲ್ಲಿ ಕೇವಲ 30 ಗ್ರಾಮ್‌ ಹೆರಾಯಿನ್‌ ಕಳ್ಳಸಾಗನೆ ಮಾಡಿದ್ದ ಕಾರಣಕ್ಕೆ ಸರಿದೇವಿ ಜಮಾನಿ ಬಂಧಿತರಾಗಿ ವಿಚಾರಣೆಗೆ ಒಳಪಟ್ಟಿದ್ದರು ಎಂದು ಬಿಬಿಸಿ ವರದಿ ಮಾಡಿದೆ.  ಸಿಂಗಾಪುರದ ಕಾನೂನಿನ ಪ್ರಕಾರ, 15 ಗ್ರಾಂಗಿಂತ ಹೆಚ್ಚು ಹೆರಾಯಿನ್ ಮತ್ತು 500 ಗ್ರಾಂ ಗಾಂಜಾ ಸಾಗಣೆಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಲಾಗುತ್ತದೆ. ವಿಚಾರಣೆಯ ಸಮಯದಲ್ಲಿ, ರಂಜಾನ್‌ ಉಪವಾಸದ ತಿಂಗಳಲ್ಲಿ ವೈಯಕ್ತಿಕ ಬಳಕೆಗಾಗಿ ಹೆರಾಯಿನ್ ಅನ್ನು ಸಂಗ್ರಹಿಸುತ್ತಿದ್ದೆ ಎಂದು ಎಂದು ಸರಿದೇವಿ ಸಾಕ್ಷ್ಯ ಹೇಳಿದ್ದರು. ತನ್ನ ಫ್ಲಾಟ್‌ನಿಂದ ಹೆರಾಯಿನ್ ಮತ್ತು ಮೆಥಾಂಫೆಟಮೈನ್‌ನಂತಹ ಮಾದಕ ದ್ರವ್ಯಗಳನ್ನು ಮಾರಾಟ ಮಾಡುತ್ತಿರುವುದನ್ನೂ…

Read More

ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸುವಂತೆ ಕೋರಿದ್ದ ಕೇಂದ್ರದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ನಡೆಸಲಿದೆ. ಮೆರವಣಿಯ ಸಂತ್ರಸ್ತರಾದ ಇಬ್ಬರು ಮಹಿಳೆಯರು ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಕೀಲ ಜಾವೆದುರ್ ರೆಹಮಾನ್ ಸಂತ್ರಸ್ತರ ಪರವಾಗಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ಕ್ರಮ ಕೈಗೊಂಡು ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗೆ ಆದೇಶಿಸಬೇಕು ಎಂದು ಅರ್ಜಿಗಳು ಕೋರಿವೆ. ಸಂತ್ರಸ್ತರು ತಮ್ಮ ಗುರುತನ್ನು ರಕ್ಷಿಸಬೇಕು ಎಂದು ಮನವಿ ಮಾಡಿದ್ದಾರೆ. ಜುಲೈ 20 ರಂದು, ಸುಪ್ರೀಂ ಕೋರ್ಟ್ ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿತ್ತು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ತಿಳಿಸುವಂತೆ ಸೂಚಿಸಿತ್ತು. ವಿಚಾರಣೆಯನ್ನು ರಾಜ್ಯದಿಂದ ಹೊರಗೆ ಸ್ಥಳಾಂತರಿಸುವಂತೆ ಕೇಂದ್ರವು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಆರು…

Read More

ಲಕ್ನೋ: ಬಿಎಸ್‍ಪಿ ಮಾಜಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೀಡಾದ ದರೋಡೆಕೋರ ಅತೀಕ್ ಅಹ್ಮದ್‍ನ (Atiq Ahmed) ವಕೀಲನನ್ನು ಉತ್ತರ ಪ್ರದೇಶ (Uttar Pradesh) ಪೊಲೀಸರು (Police) ಬಂಧಿಸಿದ್ದಾರೆ. ಆರೋಪಿ ವಿಜಯ್ ಮಿಶ್ರಾ ಹತ್ಯೆಗೀಡಾದ ಉಮೇಶ್ ಪಾಲ್ ಇರುವ ಸ್ಥಳದ ಮಾಹಿತಿಯನ್ನು ಹಂತಕರಿಗೆ ನೀಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಲಕ್ನೋದ ಹೋಟೆಲ್ ಒಂದರಲ್ಲಿ ಮಿಶ್ರಾನನ್ನು ಬಂಧಿಸಲಾಗಿದೆ. ಅಲ್ಲದೇ ವಕೀಲ ವಿಜಯ್ ಮಿಶ್ರಾ 3 ಕೋಟಿ ರೂ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ ಎಂದು ಉದ್ಯಮಿಯೊಬ್ಬರು ಆರೋಪಿಸಿದ್ದಾರೆ. ಈ ಸಂಬಂಧ ಆತನ ವಿರುದ್ಧ ಪ್ರಯಾಗ್‍ರಾಜ್‍ನ ಅತ್ತರ್ಸುಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದರೋಡೆಕೋರ ಅತೀಕ್ ಅಹ್ಮದ್ ಹತ್ಯೆಯ ನಂತರ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಮೊಹಮ್ಮದ್ ಸಯೀದ್ ಎಂಬ ಪ್ಲೈವುಡ್ ವ್ಯಾಪಾರಿ ಪೊಲೀಸ್ ಠಾಣೆಗೆ ಬಂದು ವಿಜಯ್ ಮಿಶ್ರಾ ಬೇಡಿಕೆಗಳ ಬಗ್ಗೆ ಮಾಹಿತಿ ನೀಡಿದ್ದರು. ಹಣ ನೀಡದಿದ್ದರೆ ತೀವ್ರ ಪರಿಣಾಮ…

Read More

ನವದೆಹಲಿ: ಆದಾಯಕ್ಕೂ ಮೀರಿ‌ ಆಸ್ತಿಗಳಿಕೆ ಪ್ರಕರಣದಲ್ಲಿ (Disproportionate Assets Case) ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (DK Shivakumar) ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಮಧ್ಯಂತರ ತಡೆ ನೀಡಿದ್ದ ಹೈಕೋರ್ಟ್ (High Court) ಆದೇಶ ಪ್ರಶ್ನಿಸಿ ಸಿಬಿಐ (CBI) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾ ಮಾಡಿದೆ. 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಈ ತನಿಖೆಗೆ ಡಿಕೆ ಶಿವಕುಮಾರ್ ರಾಜ್ಯ ಹೈಕೋರ್ಟ್‌ನಿಂದ ಮಧ್ಯಂತರ ತಡೆ ತಂದಿದ್ದರು. ಆದೇಶ ವಿಸ್ತರಣೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಫೆಬ್ರವರಿ 10ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ಆರ್ ಗವಾವಿ, ನ್ಯಾ.ಸಿ.ಟಿ.ರವಿಕುಮಾರ್ ಮತ್ತು ನ್ಯಾ.ಸಂಜಯ್ ಕುಮಾರ್ ಅವರಿದ್ದ ತ್ರಿಸದಸ್ಯ ಪೀಠ ಮಧ್ಯಂತರ ತಡೆಯಾಗಿರುವ ಹಿನ್ನಲೆ ಈ ಹಂತದಲ್ಲಿ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಹೇಳಿದೆ. ಫೆಬ್ರವರಿ 10 ರಂದು ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿರುವ…

Read More

ಬೆಂಗಳೂರು: ಈ ನಕಲಿ ಸುಲಿಗೆ ಪ್ರಕರಣಕ್ಕೆ ಕಥೆ-ಚಿತ್ರಕಥೆ ನಿರ್ದೇಶನ ಎಲ್ಲವೂ..ಈತನದ್ದೇ.. ಅರ್ಥಾತ್ ದೂರುದಾರನೇ ಆರೋಪಿಯಾಗಿದ್ದಾನೆ.‌ ಸಿನಿಶೈಲಿಯಲ್ಲಿ ವ್ಯವಸ್ಥಿತ ಸಂಚು ರೂಪಿಸಿ ಅಪರಾಧವೆಸಗಲು 20 ದಿನಗಳ ಕಾಲ ತರಬೇತಿ ಪಡೆದು ನಡೆಯದಿರುವ‌ ಅಪರಾಧಕ್ಕೆ ನಡೆದಿದೆ ಸಾಕ್ಷ್ಯಧಾರ ತೋರಿಸಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. Video Player 00:00 00:21 ಇನ್ಸೂರೆನ್ ಹಣ‌ ಕ್ಲೇಮ್ ಮಾಡಿಕೊಳ್ಳಲು ಪಕ್ಕ ಪ್ಲ್ಯಾನ್ ಮಾಡಿ ಬೈಕ್ ನಲ್ಲಿ ಹೋಗುವಾಗ ಸುಲಿಗೆಕೋರರು 4 ಕೋಟಿ ಮೌಲ್ಯದ 3.780 ಕೆ.ಜಿ. ಚಿನ್ನ ದೋಚಿದ್ದಾರೆ ಎಂದು ಸುಳ್ಳು ದೂರು ನೀಡಿದ್ದ ಜ್ಯೂವೆಲ್ಲರಿ ಶಾಪ್ ಮಾಲೀಕನನ್ನ‌ ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಕೃತ್ಯವೆಸಲು ಬಳಸಿಕೊಂಡಿದ್ದ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಾಜಸ್ತಾನ ಮೂಲದ ರಾಜು ಜೈನ್ ಬಂಧಿತ ಮಾಲೀಕ. ನಗರ್ತಪೇಟೆಯ ಕೇಸರ್ ಜ್ಯೂವೆಲರ ಶಾಪ್ ನ ಮಾಲೀಕನಾಗಿದ್ದಾನೆ. ಜುಲೈ 12 ರಂದು ಸಂಜೆ 7.30ಕ್ಕೆ ಹೈದರಬಾದಿಗೆ 3.780 ಕೆ.ಜಿ ಚಿನ್ನ ಕಳುಹಿಸಲು ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ತೆಗೆದುಕೊಂಡು ಹೋಗುವಾಗ ಮಾರ್ಕೆಟ್…

Read More

ಬೆಂಗಳೂರು: ಸೌತ್ ಬ್ಯೂಟಿ ಸಮಂತಾ ಸದ್ಯ ಸಿಂಗಲ್ ಆಗಿ ತಮ್ಮ ಲೈಫ್‌ನ ತಮ್ಮದೇ ಶೈಲಿಯಲ್ಲಿ ಎಂಜಾಯ್ ಮಾಡ್ತಿದ್ದಾರೆ. ನಟನೆಯಿಂದ ಬ್ರೇಕ್ ಪಡೆದು ಬಾಲಿಯಲ್ಲಿ ಕಾಲ ಕಾಳೆಯುತ್ತಿದ್ದಾರೆ. ಇದೀಗ ಅವರ ಬಗ್ಗೆ ಹೊಸ ವಿಚಾರವೊಂದು ಹೊರಹಾಕಿದ್ದಾರೆ. ನಾಗಚೈತನ್ಯ ಜೊತೆಗಿನ ಡಿವೋರ್ಸ್ ಮತ್ತೆ ಪ್ರೀತಿಯಲ್ಲಿ ಬಿದ್ರಾ ಎಂಬ ಅನುಮಾನ ಅಭಿಮಾನಿಗಳನ್ನ ಕಾಡ್ತಿದೆ ಅದಕ್ಕೆಲ್ಲಾ ಸದ್ಯದಲ್ಲೇ ಉತ್ತರ ನೀಡ್ತೀನಿ ಅಂದಿದ್ದಾರೆ. ನಟಿ ಸಮಂತಾ ಮೈಯೋಸಿಟೀಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಆರೋಗ್ಯ ಚೇತರಿಕೆಗಾಗಿಯೇ ಒಂದು ವರ್ಷ ನಟಿ ಬ್ರೇಕ್ ಪಡೆದುಕೊಂಡಿದ್ದಾರೆ. ಕಳೆದ ವರ್ಷ ನಾಗಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಮೇಲೆ ಸಿನಿಮಾಗಳಲ್ಲಿ ಸಮಂತಾ ಬ್ಯುಸಿಯಾದರು. ‘ಪುಷ್ಪ’ (Pushpa) ಸಿನಿಮಾ ಸಾಂಗ್, ಯಶೋದ ಸಿನಿಮಾದ ಸಕ್ಸಸ್ ಮೂಲಕ ಸದ್ದು ಮಾಡಿದ್ರು. ಈಗ ತಮ್ಮ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಡಿವೋರ್ಸ್ ನಂತರ ಈಗ ಮತ್ತೆ ಪ್ರೀತಿಯಲ್ಲಿ ಸಮಂತಾ ಬಿದ್ದಿದ್ದಾರಾ ಎಂಬ ಗುಮಾನಿ ಶುರುವಾಗಿದೆ. ಇದಕ್ಕೆಲ್ಲಾ ಕಾರಣ ಆಗಿರೋದು ಸಮಂತಾರ ನಯಾ ಪೋಸ್ಟ್. ಸಮಂತಾ…

Read More

ಬೆಂಗಳೂರು: ದೊಡ್ಮನೆ ಮೊಮ್ಮಗ ಯುವ ರಾಜ್‌ಕುಮಾರ್ ಅಭಿನಯಿಸುತ್ತಿರುವ ‘ಯುವ’ ಸಿನಿಮಾ ಶೂಟಿಂಗ್ ಶುರು ಆಗಿದೆ. ಈ ಮೊದಲೇ ಸುದ್ದಿ ಆದಂತೆ ಯುವ ಚಿತ್ರದ ಚಿತ್ರೀಕರಣ ಏಪ್ರಿಲ್-09 ರಂದು ಆರಂಭಗೊಂಡಿದೆ. ಯುವ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಸೀನ್‌ಗಳೇ ಇವೆ. ಇದಕ್ಕಾಗಿಯೇ ಕಳೆದ ಕೆಲವು ದಿನಗಳಿಂದಲೂ ಸೆಟ್ ನಿರ್ಮಾಣ ಕಾರ್ಯವೂ ಆರಂಭ ಆಗಿತ್ತು. ಸೆಟ್ ವರ್ಕ್‌ ಶುರು ಮಾಡೋ ಮೊದಲು ಸಿಂಪಲ್ ಪೂಜೆ ಕೂಡ ನಡೆದಿತ್ತು. ಇದೀಗ ಬೆಂಗಳೂರಿನ ಬಸವನಗುಡಿಯ ಕೆಫೆಶ್ರೀ ಹೌಸ್’ನಲ್ಲಿ ಯುವ ಚಿತ್ರದ ಮುಂದುವರೆದ ಭಾಗದ ಶೂಟಿಂಗ್ ನಡೆಯುತ್ತಿದ್ದು ಈ ವೇಳೆ ಶೂಟಿಂಗ್ ಸೆಟ್’ಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಭೇಟಿ ಕೊಟ್ಟಿದ್ದಾರೆ. ಶೂಟಿಂಗ್ ಜಾಗಕ್ಕೆ ಸಪ್ರೈಸ್ ವಿಸಿಟ್ ಕೊಟ್ಟ ಧ್ರುವ ಸರ್ಜಾ ಶೂಟಿಂಗ್ ಸ್ಪಾಟ್ ನಲ್ಲಿ ಕೆಲಹೊತ್ತು ಯುವ ಮತ್ತು ಸಂತೋಷ್ ಆನಂದ್ ರಾಮ್ ಜೊತೆ ಕಾಲಕಳೆದರು.

Read More