ಸೂರ್ಯೋದಯ: 06.05 AM, ಸೂರ್ಯಾಸ್ತ : 06.47 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಅದಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ವರ್ಷ ಋತು, ತಿಥಿ: ಇವತ್ತು ತ್ರಯೋದಶಿ 07:26 AM ತನಕ ನಂತರ ಚತುರ್ದಶಿ ನಕ್ಷತ್ರ: ಇವತ್ತು ಆಷಾಢ 06:58 PM ತನಕ ನಂತರ ಉತ್ತರ ಆಷಾಢ ಯೋಗ: ಇವತ್ತು ವೈಧೃತಿ 03:02 AM ತನಕ ನಂತರ ವಿಷ್ಕುಂಭ ಕರಣ: ಇವತ್ತು ತೈತಲೆ 07:26 AM ತನಕ ನಂತರ ಗರಜ 05:41 PM ತನಕ ನಂತರ ವಣಿಜ ರಾಹು ಕಾಲ: 07:30 ನಿಂದ 09:00 ವರೆಗೂ ಯಮಗಂಡ: 10:30 ನಿಂದ 12:00 ವರೆಗೂ ಗುಳಿಕ ಕಾಲ: 03:00 ನಿಂದ 04:30 ವರೆಗೂ ಅಮೃತಕಾಲ: 02.41 PM to 04.07 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:56 ನಿಂದ ಮ.12:48 ವರೆಗೂ ಮೇಷ: ಹಿತ ಶತ್ರುಗಳಿಂದ ತೊಂದರೆ,ಉದ್ಯೋಗ ಕ್ಷೇತ್ರದಲ್ಲಿ ಬಂದಿರುವ ಸಮಸ್ಯೆಗಳಿಗೆ ಆಪ್ತರಿಂದ ಪರಿಹಾರಗಳು ದೊರೆಯಲಿದೆ, ಮದುವೆ ಸಾಲಾವಳಿ ಕೇಳುವ…
Author: Prajatv Kannada
ಲಕ್ನೋ: ಹಲವು ವರ್ಷಗಳಿಂದ ನಾಪತ್ತೆಯಾಗಿದ್ದ ಪತಿ ಎಂದು ಭಾವಿಸಿ ಮಹಿಳೆಯೊಬ್ಬರು (Woman) ಬೇರೊಬ್ಬ ವ್ಯಕ್ತಿಯನ್ನು ಮನೆಗೆ ಕರೆದುಕೊಂಡು ಬಂದು ಬಳಿಕ ಶಾಕ್ ಆದ ಘಟನೆ ಉತ್ತರಪ್ರದೇಶದ (Uttar Pradesh) ಬಲ್ಲಿಯಾದಲ್ಲಿ ನಡೆದಿದೆ. ಜಾನಕಿ ದೇವಿ ಎಂಬ ಮಹಿಳೆ 10 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ತನ್ನ ಪತಿ ಮೋತಿ ಚಂದ್ ಎಂದು ಭಾವಿಸಿ ವಿಶೇಷಚೇತನ ವ್ಯಕ್ತಿಯೊಬ್ಬನನ್ನು ಮನೆಗೆ ಕರೆತಂದಿದ್ದಾಳೆ. ಮಹಿಳೆ ಆತನನ್ನು ಬಲ್ಲಿಯಾ ಜಿಲ್ಲಾ ಆಸ್ಪತ್ರೆಯ (Hospital) ಹೊರಗೆ ನೋಡಿದ್ದಾಳೆ. ತನ್ನ ಗಂಡ ಎಂದು ತಪ್ಪಾಗಿ ಭಾವಿಸಿ ‘ಇಷ್ಟು ದಿನ ಎಲ್ಲಿಗೆ ಹೋಗಿದ್ದೆ?’ ಎಂದು ವಿಚಾರಿಸಿದ್ದಾಳೆ. ಬಳಿಕ ಆತನನ್ನು ಮನೆಗೆ ಕರೆದೊಯ್ದಿದ್ದಾಳೆ. ಎಷ್ಟೇ ಮಾತಾಡಿಸಿದರು ಆತ ಮೌನವಾಗಿದ್ದ. ಬಳಿಕ ವ್ಯಕ್ತಿಯ ದೇಹದ ಗುರುತುಗಳನ್ನು ಪರಿಶೀಲಿಸಿದಾಗ ಆತ ಮೋತಿ ಚಂದ್ ಅಲ್ಲ ಎಂಬುದು ಅರಿವಿಗೆ ಬಂದಿದೆ. ಆತನನ್ನು ರಾಹುಲ್ ಎಂದು ಗುರುತಿಸಲಾಗಿದೆ. ತನ್ನ ತಪ್ಪಿನ ಅರಿವಾದ ಮೇಲೆ ಮಹಿಳೆ ರಾಹುಲ್ ಹಾಗೂ ಆತನ ಕುಟುಂಬಸ್ಥರ ಕ್ಷಮೆ ಕೇಳಿದ್ದಾಳೆ. ಬಳಿಕ ರಾಹುಲ್ ಸಂಬಂಧಿಕರನ್ನು ಸಂಪರ್ಕಿಸಲಾಗಿದೆ. ಗ್ರಾಮದ ಮುಖಂಡರು ಮತ್ತು…
ಜೈಪುರ: ಇನ್ಸ್ಟಾಗ್ರಾಂ (Instagram) ಸ್ನೇಹಿತನನ್ನು ಭೇಟಿ ಮಾಡುವ ಸಲುವಾಗಿ ಪಾಸ್ಪೋರ್ಟ್ (Passport) ಮತ್ತು ವೀಸಾ (Visa) ಇಲ್ಲದೆ ಪಾಕಿಸ್ತಾನಕ್ಕೆ (Pakistan) ತೆರಳಲು ಮುಂದಾಗಿದ್ದ 16 ವರ್ಷದ ಅಪ್ರಾಪ್ತ (Minor) ಬಾಲಕಿಯನ್ನು ಜೈಪುರ (Jaipur) ವಿಮಾನ ನಿಲ್ದಾಣದಲ್ಲಿ (Airport) ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಬಾಲಕಿಯನ್ನು ಗಜಲ್ ಪರ್ವಿನ್ ಎಂದು ಗುರುತಿಸಲಾಗಿದೆ. ಈಕೆ ರಾಜಸ್ಥಾನದ ಸಿಕಾರ್ನ ಶ್ರೀಮಧೋಪುರದ ನಿವಾಸಿಯಾಗಿದ್ದು, ಪಾಕಿಸ್ತಾನಕ್ಕೆ ತೆರಳಲು ಬೇಕಾದ ಅಗತ್ಯ ದಾಖಲೆಗಳನ್ನು ಆಕೆ ಹೊಂದಿರಲಿಲ್ಲ ಎಂದು ವಿಮಾನ ನಿಲ್ದಾಣದ ಠಾಣಾಧಿಕಾರಿ ದಿಗ್ಪಾಲ್ ಸಿಂಗ್ ಹೇಳಿದ್ದಾರೆ. ತನ್ನ ಇನ್ಸ್ಟಾಗ್ರಾಂ ಸ್ನೇಹಿತನನ್ನು ಭೇಟಿ ಮಾಡಲು ಪಾಕಿಸ್ತಾನದ ಲಾಹೋರ್ಗೆ ತೆರಳಲು ನಿರ್ಧರಿಸಿ ವಿಮಾನ ನಿಲ್ದಾಣಕ್ಕೆ ಬಂದಿರುವುದಾಗಿ ವಿಚಾರಣೆ ವೇಳೆ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಕುರಿತು ಆಕೆಯ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಆಕೆಯನ್ನು ಅವರಿಗೆ ಒಪ್ಪಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನಕ್ಕೆ ಟಿಕೆಟ್ ಪಡೆಯುವ ಸಲುವಾಗಿ ಈಕೆ ಸುಳ್ಳು ಕಥೆಯೊಂದನ್ನು ಹೆಣೆದಿದ್ದು, ವಿಚಾರಣೆ ವೇಳೆ ನಿಜಾಂಶ ಹೊರಬಿದ್ದಿದೆ. ವಿಮಾನ ನಿಲ್ದಾಣಕ್ಕೆ…
ನವದೆಹಲಿ ;- ದೇಶದಾದ್ಯಂತ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನ ಕೈಗೊಳ್ಳುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ದೇಶಕ್ಕಾಗಿ ಹೋರಾಡಿ ಹುತಾತ್ಮರಾದ ವೀರ ಯೋಧರನ್ನು ಗೌರವಿಸಲು ದೇಶದಾದ್ಯಂತ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನ ಕೈಗೊಳ್ಳುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ಮನ್ ಕಿ ಬಾತ್’ ಬಾನುಲಿ ಭಾಷಣದ 103 ನೇ ಸಂಚಿಕೆಯಲ್ಲಿ ಭಾಷಣ ಮಾಡಿದ ಪ್ರಧಾನಿ, ದೇಶದ ನಿಜವಾದ ಹೀರೋಗಳ ಬಗ್ಗೆ ಜನರಲ್ಲಿ ಅಭಿಮಾನ ಮೂಡಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಶಿಲಾ ಶಾಸನಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ದೇಶದ ಭದ್ರತೆಗಾಗಿ ಹೋರಾಡಿ ಹುತಾತ್ಮರಾದ ವೀರ ಯೋಧರ ಗೌರವಾರ್ಥ ‘ಮೇರಿ ಮಾಟಿ ಮೇರಾ ದೇಶ್’ ಅಭಿಯಾನ ನಡೆಸಲಾಗುವುದು. ದೇಶದ ಮೂಲೆ ಮೂಲೆಯಿಂದ 7,500 ಕಲಶಗಳ ಮೂಲಕ ಮಣ್ಣು ತರುವ ಅಮೃತ ಕಲಶ ಯಾತ್ರೆ ಕೈಗೊಳ್ಳಲಾಗುವುದು. ಯಾತ್ರೆ ಸಂದರ್ಭದಲ್ಲೇ ನಾನಾ ಪ್ರದೇಶಗಳಿಂದ ವಿವಿಧ ಬಗೆಯ ಸಸಿಗಳನ್ನು ತರಲಿದ್ದು, ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ ಅಮೃತ ವಾಟಿಕಾ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮೈಸೂರು ;- ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಂಜೆ 4 ಗಂಟೆಗೆ ದಸರಾ ಮಹೋತ್ಸವ ಕುರಿತು ಸಭೆ ನಡೆಯಲಿದೆ. ದಸರಾ ಪ್ರಮುಖ ಆಕರ್ಷಣೆಯಾದ ಗಜಪಡೆಯನ್ನು ಮೈಸೂರಿಗೆ ಕರೆತರಲು ಸಿದ್ದತೆ ನಡೆದಿದ್ದು. ಆಗಸ್ಟ್ 21 ರಂದು ಗಜಪಯಣ ನಡೆಸಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ಇಂದು ಸಿಎಂ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದೆ. ಈ ಬಾರಿ ಅದ್ದೂರಿ ‘ಮೈಸೂರು ದಸರಾ’ ಮಹೋತ್ಸವ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.ಕಳೆದ ಬಾರಿ ಕೋವಿಡ್ ಹಿನ್ನೆಲೆ ರಾಜ್ಯದ ಜನರು ಸಂಕಷ್ಟಕ್ಕೆ ಒಳಗಾಗಿದ್ದರು. ಅದ್ದೂರಿಯಾಗಿ ಮೈಸೂರು ದಸರಾ ನಡೆದಿರಲಿಲ್ಲ . ಈ ಬಾರಿ ಅದ್ದೂರಿಯಾಗಿ ‘ಮೈಸೂರು ದಸರಾ’ ನಡೆಸಲು ಪ್ಲ್ಯಾನ್ ಮಾಡಲಾಗಿದೆ. ದಸರಾ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ ಎಂದರು.
ಮೈಸೂರು;- ಅರಮನೆ ಆಡಳಿತ ಮಂಡಳಿಯು ಮೈಸೂರು ಅರಮನೆ ಭೇಟಿಗೆ ಎರಡು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಮೈಸೂರಿನಲ್ಲಿ ನಾಳೆಯಿಂದ ಜಿ 20 ಶೃಂಗಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ವಿದೇಶಿ ಗಣ್ಯರು ಅರಮನೆಗೆ ಭೇಟಿ ನೀಡಲಿದ್ದಾರೆ. ಮುಂಜಾಗೃತಾ ಕ್ರಮವಾಗಿ ಅರಮನೆಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಆಗಸ್ಟ್ 1ರ ಮಧ್ಯಾಹ್ನ 2:30ರಿಂದ ಮೈಸೂರು ಅರಮನೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ ಆಗಸ್ಟ್ 2ರಂದು ರಾತ್ರಿ 7ರಿಂದ 8 ಗಂಟೆಯವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮ ವೀಕ್ಷಣೆಗೂ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯಿಂದ (Muzrai Department) ಕಾಶಿ ಯಾತ್ರೆಗೆ (Kashi Darshan) ವಿಶೇಷ ರೈಲು (Train) ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆಯ ನಾಲ್ಕನೇ ರೈಲಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಯಶವಂತಪುರ ರೈಲ್ವೆ ನಿಲ್ದಾಣದಿಂದ ಹೊರಟಿರುವ ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆ ರೈಲು ವಾರಣಾಸಿ, ಅಯೋಧ್ಯೆ, ಪ್ರಯಾಗ್ ರಾಜ್ ದರ್ಶನ ಮಾಡಲಿರುವ ಯಾತ್ರ್ರಿಗಳನ್ನು ಕರೆದೊಯ್ಯಲಿದೆ. ಒಟ್ಟು 8 ದಿನಗಳ ಕಾಶಿ ಪ್ರವಾಸಕ್ಕೆ ಒಬ್ಬರಿಗೆ 20 ಸಾವಿರ ರೂ. ದರ ನಿಗದಿ ಮಾಡಲಾಗಿದೆ. ಇದರಲ್ಲಿ ಸಬ್ಸಿಡಿ 5 ಸಾವಿರ ರೂ. ಸರ್ಕಾರದಿಂದ ಸಿಗಲಿದೆ. ಅಂದರೆ ಒಬ್ಬರಿಗೆ 15 ಸಾವಿರ ರೂ. ಖರ್ಚು ಪ್ರಯಾಣಿಕರಿಗೆ ಬರಲಿದೆ. ಊಟ, ವಸತಿ ವ್ಯವಸ್ಥೆ ಸಹ ಇರಲಿದೆ. 700 ಸೀಟ್ ಸಾಮಥ್ರ್ಯ ಹೊಂದಿರುವ ರೈಲಿನಲ್ಲಿ ಸದ್ಯ 403 ಸೀಟ್ ಬುಕ್ಕಿಂಗ್ ಆಗಿವೆ ಕಾಶಿ ವಿಶ್ವನಾಥ ದರ್ಶನ ಪಡೆದ ಬಳಿಕ ಒಂದು ದಿನ ಕಾಶಿಯಲ್ಲಿ ತಂಗುವುದು. ಬಳಿಕ 5ನೇ ದಿನ ವಾರಣಾಸಿಯಿಂದ ಆಯೋಧ್ಯೆಗೆ ತೆರಳುವುದು. ಇಲ್ಲಿ…
ಬೆಂಗಳೂರು ;- ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರು ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ ಬೆಂಗಳೂರು ಫುಟ್ಬಾಲ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರಾಜ್ಯ ಫುಟ್ಬಾಲ್ ಸಂಸ್ಥೆಯ 54ನೇ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಪಿ.ಎಂ. ಶಕೀಲ್ ಅಬ್ದುಲ್ ರಹಿಮಾನ್, ಬಿ. ಕಮಲ್, ಜಿ.ಆರ್. ಸಂಜಯ್ (ಮೈಸೂರು), ಅಮಿತ್ ಪಾಟೀಲ (ಬೆಳಗಾವಿ) ಮತ್ತು ಇಸ್ಮಾಯಿಲ್ ಮುಸ್ಬಾ (ಉತ್ತರ ಕನ್ನಡ), ಉಪಪ್ರಧಾನ ಕಾರ್ಯದರ್ಶಿಗಳಾಗಿ ಹನೀಫ್ ಮಹಮ್ಮದ್, ಅಸ್ಲಂ ಅಹಮದ್ ಖಾನ್ ಮತ್ತು ಸರವಣನ್ ಧರ್ಮನ್, ಖಜಾಂಚಿಯಾಗಿ ಬಿ.ಕೆ.ಮುನಿರಾಜ್ ಆಯ್ಕೆಯಾದರು.
ಬೆಂಗಳೂರು ;- ಜುಲೈ ತಿಂಗಳ ಕರೆಂಟ್ ಬಿಲ್ ಕಟ್ಟಿದ್ರೆ ವಾಪಸ್ ಹಣ ಕೊಡ್ತೀವಿ ಎಂದು ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಜೂನ್ ತಿಂಗಳ ವಿದ್ಯುತ್ ಬಿಲ್ನಲ್ಲಿ ಸ್ವಲ್ಪ ಗೊಂದಲಗಳಿತ್ತು. ಆ ತಿಂಗಳ ಬಿಲ್ನಲ್ಲಿ ಜುಲೈ ತಿಂಗಳ ಕೆಲವು ದಿನಗಳು ಸೇರಿಕೊಂಡಿವೆ. ಈ ಸಮಸ್ಯೆ ಕೆಲವರಿಗೆ ಮಾತ್ರ ಆಗಿದೆ. ಅಂತಹ ಗ್ರಾಹಕರಿಗೆ ಕ್ರೆಡಿಟ್ ಕೊಡುತ್ತೇವೆ. ಬಾಕಿ ಮೊತ್ತ ಇಲ್ಲದಿದ್ದರೆ ನಾಲ್ಕು ತಿಂಗಳ ಬಳಿಕ ಹಣ ಹಿಂದಿರುಗಿಸುತ್ತೇವೆ. ಜುಲೈ ತಿಂಗಳ ಬಿಲ್ ಕಟ್ಟಿದರೆ ವಾಪಸ್ ಹಣ ನೀಡುತ್ತೇವೆ ಎಂದರು. ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆ ಜಾರಿಯಾಗಿದೆ. ಆದರೆ ಇದಕ್ಕೆ ಅಧಿಕೃತವಾಗಿ ಚಾಲನೆಯನ್ನು ಅಗಸ್ಟ್ 5 ಕ್ಕೆ ನೀಡಲಾಗುವುದು. ಇದಕ್ಕಾಗಿ ಕಲಬುರಗಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು. ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ನೋಂದಣಿಗೆ ಅವಕಾಶ ನೀಡಲಾಗಿತ್ತು. ಅದರಂತೆ, 1 ಕೋಟಿ 40 ಲಕ್ಷ ಮಂದಿ…
ಬೆಂಗಳೂರು;- ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಇಂದಿನಿಂದ ಆಗಸ್ಟ್ 3ರವರೆಗೆ 6ರಿಂದ 11 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡಿನ ಪ್ರದೇಶಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಆಗಸ್ಟ್ 3ಕ್ಕೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇನ್ನುಳಿದಂತೆ ದಕ್ಷಿಣ ಒಳನಾಡಿನ ಭಾಗದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಹಗರು ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಇದೇ ವಾತಾವರಣ ಮುಂದುವರಿಯಲಿದೆ. ಪಶ್ಚಿಮ ಘಟ್ಟಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ನದಿಗಳಿಗೆ ಜೀವ ಕಳೆ ಬಂದಿದೆ. ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.