Author: Prajatv Kannada

ನವದೆಹಲಿ ;-ಮಹಿಳೆಯರ ಮೇಲಿನ ದೌರ್ಜನ್ಯಗಳ ಕುರಿತು ಮಾತನಾಡಲು ವಿಪಕ್ಷಗಳಿಗೆ ಯಾವಾಗ ಧೈರ್ಯ ಬರುತ್ತದೆ ಎಂದು ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ. ಸಂಸತ್ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ನ ಆಮೀ ಯಾಗ್ನಿಕ್ ಮಣಿಪುರದಲ್ಲಿನ ಘರ್ಷಣೆ ಕುರಿತು ಮಹಿಳಾ ಸಚಿವೆಯರು ಯಾಕೆ ತಮ್ಮ ಧ್ವನಿಯನ್ನು ಎತ್ತುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಸಚಿವೆ ಸ್ಮೃತಿ ಇರಾನಿ ಮಹಿಳಾ ಸಚಿವರು ಹಾಗೂ ರಾಜಕಾರಣಿಗಳು ಮಣಿಪುರ, ಛತ್ತೀಸ್ಗಢ, ಬಿಹಾರ, ರಾಜಸ್ಥಾನದ ಬಗ್ಗೆಯೂ ಸಹ ಮಾತನಾಡುತ್ತಾರೆ. ಮಣಿಪುರ ಹೊರತುಪಡಿಸಿ ಈ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಚರ್ಚಿಸಲು ನಿಮಗೆ ಯಾವಾಗ ಧೈರ್ಯ ಬರುತ್ತದೆ ಎಂದು ವಿಪಕ್ಷ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿನ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ಮಾತನಾಡಲು ನಿಮಗೆ ಯಾವಾಗ ಧೈರ್ಯ ಬರುತ್ತದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿಪಕ್ಷ ನಾಯಕರಿಗೆ ತಿರುಗೇಟು ನೀಡಿದ್ದಾರೆ.

Read More

ಬೆಂಗಳೂರು: ಉಡುಪಿಯಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಮಾಜಿ ಸಚಿವ ಬಿ.ಸಿ.ನಾಗೇಶ್​ ಆರೋಪ ಮಾಡಿದ್ದಾರೆ. ಈ ಪ್ರಕರಣದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಭಾಗಿಯಾಗಿದ್ದಾರೆ. ಹಾಗಾಗಿ ಈ ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ. ಪೊಲೀಸರು ಮೊಬೈಲ್ ವಶಪಡಿಸಿಕೊಳ್ಳುವ ಪ್ರಯತ್ನ ಏಕೆ ಮಾಡಿಲ್ಲ. ಈ ಘಟನೆಯನ್ನು ಖಂಡಿಸಿ ನಮ್ಮ ಕಾರ್ಯಕರ್ತೆ ಟ್ವೀಟ್​​ ಮಾಡಿದ್ರು. ಆಕೆಯನ್ನು ಉಗ್ರಗಾಮಿಯ ರೀತಿಯಲ್ಲಿ ಕರೆದುಕೊಂಡು ಹೋಗಿದ್ದರು. ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ತುಮಕೂರಿನಲ್ಲಿ ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಬಿ.ಸಿ.ನಾಗೇಶ್​ ಕಿಡಿಕಾರಿದ್ದಾರೆ.

Read More

ಬೆಂಗಳೂರು: ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದವರ ಮನೆ ಮೇಲೆ ಪೊಲೀಸರು ರೇಡ್ ಮಾಡಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಕಲ್ಲುಗುಡ್ಡದಹಳ್ಳಿ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದು ಸ್ಫೋಟಕಕ್ಕೆ ಬಳಸುತ್ತಿದ್ದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಕಲ್ಲುಗುಡ್ಡದಹಳ್ಳಿಯ ಶಂಕರ್(30), ಕುಮಾರ್(21), ದಾಸೇನಹಳ್ಳಿಯ ಶ್ರೀನಿವಾಸ್(40)ನನ್ನು ಬಂಧಿಸಿದ್ದಾರೆ. ಸಲ್ಫರ್ ಪೌಡರ್, ಪೋಟ್ಯಾಶಿಯಂ ನೈಟ್ರೇಟ್ ಸೇರಿ ಹಲವು ವಸ್ತು ಜಪ್ತಿ ಮಾಡಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಉಡುಪಿಯಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ. ಮಣಿಪುರ ಹೊತ್ತಿ ಉರಿಯುತ್ತಿದೆ, ಅದರ ಬಗ್ಗೆ ಯಾರೂ ಮಾತನಾಡ್ತಿಲ್ಲ. ಅಲ್ಲಿ ಮಹಿಳೆಯರ ಮೇಲೆ ರೇಪ್ ಆಗಿದೆ, ಇಲ್ಲಿ ಕ್ಯಾಮರಾ ಅಂತಿದ್ದೀರಾ. ಕಾಂಗ್ರೆಸ್, ಬಿಜೆಪಿಯವರು ನಮ್ಮನ್ನು ತೋರಿಸಿ ವೋಟ್ ಪಡೆದರು. ಎರಡೂ ಪಕ್ಷಗಳು ಜೆಡಿಎಸ್​​ ಕಡೆ ಬೆರಳು ಮಾಡಿ ವೋಟ್ ಪಡೆದವು. ಭಯೋತ್ಪಾದನೆ ಶುರುವಾಗ್ತಿದೆ ಅನ್ನೋದು ಅವರಿಗೆ ಚುನಾವಣೆ ವಿಷಯ ಎಂದು ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧ JDS​ ರಾಜ್ಯಾಧ್ಯಕ್ಷ ಇಬ್ರಾಹಿಂ ಕಿಡಿಕಾರಿದರು. ಬಿಜೆಪಿ ಪತ್ರದಲ್ಲಿ ಹೆಚ್​ಡಿ ಕುಮಾರಸ್ವಾಮಿ ಸಹಿ ಬಗ್ಗೆ ಕಾಂಗ್ರೆಸ್​ ಟೀಕೆ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ. ಪರಸ್ಪರವಾಗಿ ವಿರೋಧ ಪಕ್ಷವಾಗಿ ಕೆಲಸ ಮಾಡಿದ್ದಾರೆ ಅಷ್ಟೇ. ಜನತಾದಳ ಮಣ್ಣಿನ ಪಕ್ಷ, ನಾವು ಏನಾದ್ರೂ ಮಾಡಿದ್ರೆ ಹೇಳ್ತೀರಾ. ಮಮತಾ, ನಿತೀಶ್ ಇಬ್ಬರೂ ಬಿಜೆಪಿ ಜೊತೆಗೆ ಹೋಗಿ ಬಂದವರೇ ಎಂದರು.

Read More

ಇದು ನಿಜಕ್ಕು ಸಮಾಧಾನದ ಸಂಗತಿ.ರಾಜ್ಯದಲ್ಲಿ ವನ್ಯಜೀವಿಗಳ ಸಂತತಿ ನಶಿಸುತ್ತಿದೆ.ವನ್ಯಜೀವಿಗಳ ಪೈಕಿ ವ್ಯಾಘ್ರಗಳ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಆತಂಕಗೊಂಡಿದ್ದವರಿಗೆ ಸಮಾಧಾನ ತರಿಸುವ ಸಂಗತಿ ಸಮೀಕ್ಷೆಯಿಂದಲೇ ಹೊರಬಿದ್ದಿದೆ,ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದ ವಿವಿಧ ವನ್ಯಜೀವಿ ತಾಣಗಳಲ್ಲಿ ಆಶ್ರಯ ಪಡೆದಿದ್ದ ಹುಲಿಗಳ ಸಂತತಿಯಲ್ಲಿ ಹೆಚ್ಚಳ ಕಂಡುಬಂದಿದೆ.2019 ರಲ್ಲಿ ಇದ್ದ 404 ಹುಲಿಗಳ ಸಂಖ್ಯೆ 2022 ರಲ್ಲಿ 345 ಕ್ಕೆ ಹೆಚ್ಚಳವಾಗಿದೆ. ಅಂತರಾಷ್ಟ್ರೀಯ ಹುಲಿ ದಿನದ ಇತಿಹಾಸ: 2010ರಲ್ಲಿ ಹುಲಿಗಳ ಸಂಖ್ಯೆ ಕ್ಷಿಪ್ರವಾಗಿ ಕಡಿಮೆಯಾಗುತ್ತಿರುವ ಕುರಿತು ವರದಿಯೊಂದು ಹೊರಬಿದ್ದಿತ್ತು. ಕಳೆದ ಶತಮಾನಕ್ಕೆ ಹೋಲಿಸಿದರೆ ಹುಲಿಗಳ ಸಂಖ್ಯೆಯಲ್ಲಿ ಶೇಕಡಾ 97% ರಷ್ಟು ಇಳಿಕೆಯಾಗಿವೆ ಎಂದು ಅದರಲ್ಲಿ ಉಲ್ಲೇಖಿಸಲಾಗಿತ್ತು. ಅಂದರೆ 2010 ರ ವೇಳೆಗೆ ಪ್ರಪಂಚದಾದ್ಯಂತ ಕೇವಲ 3,000 ಹುಲಿಗಳು ಮಾತ್ರ ಇದ್ದವು. ಈ ನಿಟ್ಟಿನಲ್ಲಿ ವೇಗವಾಗಿ ಅವನತಿಯತ್ತ ಸಾಗುತ್ತಿರುವ ಹುಲಿಗಳ ಸಂತತಿಯನ್ನು ಸಂರಕ್ಷಿಸಲು ಅಭಿಯಾನವನ್ನು ಪ್ರಾರಂಭಿಸಲಾಯಿತು. 2010 ರಲ್ಲಿ ರಷ್ಯಾದ ಸೇಂಟ್ ಪೀಟ್ಸ್ ಬರ್ಗ್ ನಲ್ಲಿ ಹುಲಿಗಳ ರಕ್ಷಣೆಗಾಗಿ ಸಮಾವೇಶವನ್ನು ನಡೆಸಲಾಯಿತು. ಮತ್ತು ಹುಲಿಗಳ ಸಂಖ್ಯೆ ಕಡಿಮೆಯಾಗುತ್ತಿರುವುದನ್ನು ನಿಯಂತ್ರಿಸಲು…

Read More

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಯವರಿಗೆ ಕೊಕ್‌ ನೀಡಲಾಗಿದೆ.ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ರೇಸ್​ನಲ್ಲಿ ಸಿ.ಟಿ.ರವಿಯವರು ಮುಂಚೂಣಿಯಲ್ಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದುಬರುತ್ತಿದೆ. ಸದ್ಯ ಇರುವ ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಅಧಿಕಾರಾವಧಿ ಕಳೆದ ವರ್ಷ ಆಗಸ್ಟ್‌ನಲ್ಲಿಯೇ ಮುಕ್ತಾಯವಾಗಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆ ಅವರನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲಾಗಿತ್ತು. ಹೀನಾಯ ಸೋಲಿನ ಬೆನ್ನಲ್ಲಿಯೇ ಅಧ್ಯಕ್ಷ ಸ್ಥಾನದ ಬದಲಾವಣೆಗೆ ಕೂಗು ಕೇಳಿಬಂದಿತ್ತು. ಫಲಿತಾಂಶ ಬಂದು 75 ದಿನಗಳಾದರೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ವ್ಯಕ್ತಿ ಬಂದಿಲ್ಲ. ಈ ಹಿನ್ನೆಲೆ ಸಿಟಿ ರವಿ ಅವರು ಮುಂದಿನ ರಾಜ್ಯಾಧ್ಯಕ್ಷರಾಗುವ ಸಾಧ್ಯತೆ ಇದೆ.  ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ ಕೂಡ ಬಿಜೆಪಿ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ದರು. ಈ ವೇಳೆ ಸಿಟಿ ರವಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ವಿರೋಧ ಪಕ್ಷದ…

Read More

ತುಮಕೂರು: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಕಾಡಸಿದ್ದೇಶ್ಚರ ಮಠ ಕ್ಕೆ ಭೇಟಿ ಕೊಟ್ಟ ಸಚಿವ ರಾಮಲಿಂಗ ರೆಡ್ಡಿ ಶ್ರೀ ಕರೀವೃಷಭ ದೇಶೀಕೇಂದ್ರ ಸ್ವಾಮೀಜಿಗಳ ಅಶಿರ್ವಾದ ಪಡೆದರು. ಕರಿವೃಷಭ ದೇಶಿಕೇಂದ್ರ ಸ್ವಾಮೀಜಿಗಳಿಂದ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮಠದ ವಿದ್ಯಾರ್ಥಿಗಳಿಗೆ ಸಚಿವ ರಾಮಲಿಂಗ ರೆಡ್ಡಿ ಬ್ಯಾಗ್ ವಿತರಿಸಿದರು. ಸಚಿವ ರಾಮಲಿಂಗ ರೆಡ್ಡಿಗೆ ಕಾಂಗ್ರೆಸ್ ನಾಯಕರು ಹಾಗೂ ಸ್ಥಳೀಯ ಮುಖಂಡರು ಸಾಥ್ ನೀಡಿದರು.

Read More

ಟಾಲಿವುಡ್ ನ ಮೆಗಾಸ್ಟಾರ್ ಚಿರಂಜೀವಿ ಭೋಲಾ ಶಂಕರ್ ಸಿನಿಮಾದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಸದ್ಯ ಸಿನಿಮಾದ ಟ್ರೈಲರ್ ಸಖತ್ ಹೈಪ್ ಕ್ರಿಯೆಟ್ ಮಾಡ್ತಿದ್ದು, ಮತ್ತೊಂದು ಕಡೆ ಚಿತ್ರಕ್ಕಾಗಿ ಮೆಗಾಸ್ಟಾರ್ ಪಡೆದುಕೊಂಡಿರೋ ಸಂಭಾವನೆ ವಿಚಾರವಾಗಿ ಚರ್ಚೆಗೆ ಗ್ರಾಸವಾಗಿದೆ. ಭೋಲಾ ಶಂಕರ್ ಸಿನಿಮಾಗಾಗಿ ಮೆಗಾಸ್ಟಾರ್ ಸಂಭಾವನೆ ಪಡೆದಿರೋದನ್ನ ಕೇಳಿದ್ರೆ ಅಚ್ಚರಿಪಡ್ತೀರಾ. ಮೆಗಾಸ್ಟಾರ್ ಚಿರಂಜೀವಿಗೆ ನಾಯಕಿಯಾಗಿ ತಮನ್ನಾ ನಟಿಸಿದ್ರೆ, ತಂಗಿ ಪಾತ್ರಕ್ಕೆ ಕೀರ್ತಿ ಸುರೇಶ್ ಬಣ್ಣ ಹಚ್ಚಿದ್ದಾರೆ. ಸದ್ಯ ಟ್ರೇಲರ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆ್ಯಕ್ಷನ್, ಎಮೋಷನ್, ಕಾಮಿಡಿ ದೃಶ್ಯಗಳನ್ನು ಎಡಿಟ್ ಮಾಡಿ ಟ್ರೇಲರ್‌ನಲ್ಲಿ ಹಾಕಲಾಗಿದೆ. ವಿಲನ್ ಪಾತ್ರದಲ್ಲಿ ಕನ್ನಡದ ರವಿಶಂಕರ್ ಅವರು ಮಿಂಚಿದ್ದಾರೆ. ಅವರು ಹೇಳುವ ಖಡಕ್ ಡೈಲಾಗ್ ಎಲ್ಲರ ಗಮನ ಸೆಳೆದಿದೆ. ಚಿರಂಜೀವಿ ಅವರ ಮಾಸ್ ಡೈಲಾಗ್ ಡೆಲಿವರಿ ಟ್ರೈಲರ್‌ನ ವಿಶೇಷ ಆಕರ್ಷಣೆಯಾಗಿದೆ. ಟ್ರೇಲರ್‌ನ ಕೊನೆಯಲ್ಲಿ ಪವನ್ ಕಲ್ಯಾಣ್ ಅವರ ಮ್ಯಾನರಿಸಂ ಅನ್ನು ಚಿರು ಅನುಕರಿಸಿದ್ದಾರೆ. ಇದು ಪ್ರೇಕ್ಷಕರಿಗೆ ಸಖತ್ ಕಿಕ್ ಕೊಟ್ಟಿದೆ. ಮೆಗಾಸ್ಟಾರ್ ಒಂದೊಂದು ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆಯನ್ನೇ ಚಾರ್ಜ್ ಮಾಡುತ್ತಾರೆ.…

Read More

ಬೆಂಗಳೂರು : ಬಿಜೆಪಿ ಅವರ ತರ ನಾವು ಕಳಪೆ ರಾಜಕೀಯ, ಕಚಡ ರಾಜಕೀಯ ಮಾಡೋದಕ್ಕೆ ಹೋಗಲ್ಲ ಎಂದು ಬಿಜೆಪಿ ವಿರುದ್ಧ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಗಿಂತ 100 ಪಟ್ಟು ಉತ್ತಮ ಆಡಳಿತ ಮಾಡ್ತಿದೆ ಎಂದು ಕಿಡಿಕಾರಿದರು. ಬಿಜೆಪಿ ಅವರು ಮತ್ತು ಅವರ ಪರಿವಾರ ಇದೆ. ಅವರದ್ದೇ ವಿಶ್ವವಿದ್ಯಾಲಯ ಇದೆ. ಅದಕ್ಕೆ ವಾಟ್ಸ್​ಆಫ್ ವಿಶ್ವವಿದ್ಯಾಲಯ ಅಂತ ಹೆಸರು. ಸುಳ್ಳನ್ನು ಸೃಷ್ಟಿ ಮಾಡುವವರು. ಹಿಟ್ಲರ್ ಸಂಸ್ಕೃತಿಯವರು. ನಿತ್ಯ ಸುಳ್ಳನ್ನು ಸೃಷ್ಟಿ ಮಾಡಿ ಹೊರ ಬಿಡುತ್ತಾರೆ ಎಂದು ಕುಟುಕಿದರು. ಉಡುಪಿ ಕಾಲೇಜು ಪ್ರಕರಣದ ಬಗ್ಗೆ ಖುಷ್ಬೂ ಸುಂದರ್ ಹೇಳಿದ್ದಾರೆ. ಅವರು ಬಿಜಿಪಿಯವರು. ಯಾವ ವಿಡಿಯೋನೂ ಇಲ್ಲ. ಶೌಚಾಲಯದಲ್ಲಿ ಯಾವ ಹಿಡನ್ ಕ್ಯಾಮೆರಾ ಇರಲಿಲ್ಲ. ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಅಂತ ಹೇಳಿದ್ದಾರೆ. ಅವರ ಪಕ್ಷದವರೇ ಹೇಳಿದ್ದಾರೆ. ಆದರೂ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಗುಡುಗಿದರು.

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯ(Siddaramaiah) ಸಿಎಂ ಆದ ಬಳಿಕ ಮೊದಲ ಬಾರಿ ಮಂಡ್ಯ(Mandya) ಜಿಲ್ಲೆಗೆ ಇಂದು ಭೇಟಿ ನೀಡಲಿದ್ದಾರೆ. ಬೆಂಗಳೂರಿಂದ ರಸ್ತೆ ಮಾರ್ಗವಾಗಿ ತೆರಳುವ ಸಿಎಂ ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗೇಟ್ ಬಳಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ‌ ವೀಕ್ಷಿಸಲಿದ್ದಾರೆ(Bengaluru Mysuru Expressway). ಅಪಘಾತ ಹೆಚ್ಚಾದ ಹಿನ್ನೆಲೆ 360 ಡಿಗ್ರಿ ಕ್ಯಾಮರಾ ವೀಕ್ಷಿಸಲಿದ್ದಾರೆ. ಬಳಿಕ ಮೈಸೂರಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ ಎಕ್ಸ್‌ಪ್ರೆಸ್‌ ಹೈವೇ ಪರಿಶೀಲಿಸಲಿದ್ದಾರೆ.  ಬೆಂಗಳೂರಿಂದ ರಸ್ತೆ ಮಾರ್ಗವಾಗಿ ತೆರಳಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ‌ ವೀಕ್ಷಿಸಲಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿ ಮಂಡ್ಯ ಜಿಲ್ಲೆಗೆ ಇಂದು ಭೇಟಿ ನೀಡಲಿದ್ದಾರೆ. ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗೇಟ್ ಬಳಿ ಹೆದ್ದಾರಿ ವೀಕ್ಷಣೆ ಮಾಡಿ ಬಳಿಕ ಮೈಸೂರಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

Read More