ಮುಂಬೈ: ಸಾಲ (Loan) ತೆಗೆದುಕೊಂಡು ಅದನ್ನು ಮರುಪಾವತಿ ಮಾಡಲು ಸಾಧ್ಯವಾಗದೇ ಹೋಗಿದ್ದಕ್ಕೆ ಪತಿಯೆದುರೇ ಮಹಿಳೆಯ ಮೇಲೆ ಅತ್ಯಾಚಾರ (Rape) ಎಸಗಿರುವ ಘಟನೆ ಮಹಾರಾಷ್ಟ್ರದ (Maharashtra) ಪುಣೆಯಲ್ಲಿ (Pune) ನಡೆದಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ. ಘಟನೆ ಈ ವರ್ಷ ಫೆಬ್ರವರಿಯಲ್ಲಿ ನಡೆದಿದೆ. ಆದರೆ ಈಗ ಬೆಳಕಿಗೆ ಬಂದಿದೆ. ಅತ್ಯಾಚಾರ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಪೊಲೀಸರ ಪ್ರಕಾರ ವ್ಯಕ್ತಿಯೊಬ್ಬ 40,000 ರೂ. ಸಾಲ ಪಡೆದಿದ್ದು, ಅದನ್ನು ಮರುಪಾವತಿ ಮಾಡಲು ಸಾಧ್ಯವಾಗದೇ ಹೋಗಿದ್ದಕ್ಕೆ ಸಾಲ ನೀಡಿದಾತ ಆತನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಮಹಿಳೆಯ ಪತಿಗೆ ಚಾಕು ತೋರಿಸಿ, ಬೆದರಿಸಿ ನಂತರ ಆತನ ಸಮ್ಮುಖದಲ್ಲೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಕೃತ್ಯದ ವೀಡಿಯೋವನ್ನು ತನ್ನ ಮೊಬೈಲ್ ಫೋನ್ನಲ್ಲಿ ರೆಕಾರ್ಡ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೀಗ ಆರೋಪಿಯನ್ನು…
Author: Prajatv Kannada
ಭೋಪಾಲ್: ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ನೀಡಲಾದ ಚಪಾತಿ ಊಟದಲ್ಲಿ ಜಿರಳೆ (Cockroach) ಕಂಡು ದಿಗ್ಭ್ರಮೆಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ರಾಜಧಾನಿ ಭೋಪಾಲ್ನಿಂದ ಗ್ವಾಲಿಯರ್ಗೆ ಪ್ರಯಾಣಿಸುತ್ತಿದ್ದ ವೇಳೆ IRCTC ಕ್ಯಾಟರಿಂಗ್ ಸಿಬ್ಬಂದಿ ಬಡಿಸಿದ ಚಪಾತಿ ಊಟದಲ್ಲಿ ಜಿರಳೆ ಪತ್ತೆಯಾಗಿದೆ. ಬ್ಲಾಗರ್ ಸುಬೋಧ್ ಪಹಲಾಜನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಕುರಿತ ಫೋಟೋಗಳನ್ನ ಹಂಚಿಕೊಂಡಿದ್ದು ಭಾರೀ ಸದ್ದು ಮಾಡ್ತಿದೆ. ಟ್ವೀಟ್ ಮೂಲಕ ಹಂಚಿಕೊಳ್ಳಲಾದ ಫೋಟೋಗಳಲ್ಲಿ ಚಪಾತಿಗೆ ಸಣ್ಣ ಜಿರಳೆಯೊಂದು ಅಂಟಿಕೊಂಡಿರುವುದನ್ನ ತೋರಿಸಿದೆ. ಇದನ್ನ ಐಆರ್ಸಿಟಿಸಿ ಅಧಿಕೃತ ಖಾತೆಗೆ ಟ್ಯಾಗ್ ಮಾಡಿದ್ದು, ವಂದೇ ಭಾರತ್ ರೈಲಿನಲ್ಲಿ ನನಗೆ ನೀಡಲಾದ ಆಹಾರದಲ್ಲಿ ಜಿರಳೆ ಕಂಡುಬಂದಿದೆ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಐಆರ್ಸಿಟಿಸಿ, ಪ್ರಯಾಣಿಕನ ಸಮಸ್ಯೆಯನ್ನ ಬಗೆಹರಿಸಿದೆ. ಅಲ್ಲದೇ ನಿಮಗೆ ಸಂಭವಿಸಿದ ಅಹಿತಕರ ಘಟನೆಗಾಗಿ ವಿಷಾದಿಸುತ್ತೇವೆ. ಮುಂದೆ ಅಂತಹ ಯಾವುದೇ ಘಟನೆಗಳು ನಡೆಯದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪ್ರತಿಕ್ರಿಯಿಸಿದೆ.
ಅಹಮದ್ನಗರ: ಮದುವೆ ಮನೆಯೆಂದರೆ ಹೇಗಿರುತ್ತದೆ? ಹೂವು ತೋರಣಗಳಿಂದ ಅಲಂಕರಿಸಿದ ಸುಂದರ ಮಂಟಪ, ಹೋಮದ ಕುಂಡ, ಪುರೋಹಿತರ ಮಂತ್ರೋಚ್ಛಾರ, ಜೋರಾದ ವಾಲಗದ ಸದ್ದು, ಫೋಟೋಗ್ರಾಫರ್ಗಳ ಕ್ಲಿಕ್ ಸದ್ದು, ಒಂದೆಡೆ ಸಂಭ್ರಮ ಮತ್ತೊಂದೆಡೆ ಮದುವೆ ಸುಗಮವಾಗಿ ನೆರವೇರುತ್ತದೆಯೇ ಎಂಬ ಆತಂಕ… ಇದು ನಾವು ನೋಡುವ ಸಾಮಾನ್ಯ ಮದುವೆ ಸನ್ನಿವೇಶ. ವಿವಿಧ ಧರ್ಮಗಳಲ್ಲಿ ಅವರದೇ ಆದ ಆಚರಣೆಗಳು ಇರುತ್ತವೆ. ಆದರೆ ಮಹಾರಾಷ್ಟ್ರದ ಅಹಮದ್ನಗರದ ರಹಾತ ನಗರದಲ್ಲಿ ನಡೆದ ಮದುವೆಯೊಂದು ವ್ಯಾಪಕ ಚರ್ಚೆಗೆ ಒಳಗಾಗಿದೆ. ಶುಭದಿನ, ಶುಭ ಲಗ್ನ ಮತ್ತು ಒಳ್ಳೆಯ ಜಾಗದಲ್ಲಿ ಮದುವೆಯಾಗಬೇಕು ಎನ್ನುವುದು ಎಲ್ಲರ ನಂಬಿಕೆ. ಆದರೆ ಈ ಮದುವೆ ನಡೆದಿರುವುದು ಹೊತ್ತಿ ಉರಿಯುತ್ತಿರುವ ಚಿತೆ, ಸುಟ್ಟುಹೋದ ಶವದ ಬೂದಿಯ ನಡುವೆ. ಜನರು ಕನಸು ಮನಸಿನಲ್ಲಿಯೂ ತೆರಳಲು ಬಯಸದ ಜಾಗವದು. ನಿಜ. ವಿವಾಹ ನಡೆದಿರುವುದು ಸ್ಮಶಾನದಲ್ಲಿ. ಮಸಣ ಜೋಗಿಯಾಗಿರುವ (ಸ್ಮಶಾನದಲ್ಲಿ ಕೆಲಸ ಮಾಡುವ ವೃತ್ತಿಯವರು) ವ್ಯಕ್ತಿ, ಮೂಢನಂಬಿಕೆಗಳನ್ನು ಮುರಿಯಲು ಸ್ಮಶಾನದಲ್ಲಿಯೇ ಮಗಳ ಮದುವೆ ಮಾಡಿಸಿದ್ದಾರೆ. ಈ ಮೂಲಕ ತಾವು ಮಾಡುವ ವೃತ್ತಿ ಕುರಿತಾದ ಪ್ರೀತಿ ಹಾಗೂ…
ಬೆಳಗಾವಿ: ‘ರಾಜ್ಯದಲ್ಲಿರುವ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್ಗಳ ಪೈಕಿ ಅಂದಾಜು 8 ಲಕ್ಷ ಕಾರ್ಡ್ದಾರರು ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಪಡೆಯುತ್ತಿಲ್ಲ. ಹೀಗಾಗಿ ಅಂತಹವರನ್ನು ಪತ್ತೆ ಹಚ್ಚಿ ಉಚಿತ ಅಕ್ಕಿ ವಿತರಣೆಯಿಂದ ಹೊರಗಿಡಲು ನಿರ್ಧರಿಸಿದ್ದು, ಇದಕ್ಕಾಗಿ ಮನೆ-ಮನೆ ಸಮೀಕ್ಷೆ ನಡೆಸಲಾಗುವುದು’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಹಲವು ಬಿಪಿಎಲ್ ಕಾರ್ಡ್ದಾರರು ಹಲವು ತಿಂಗಳಿಂದ ಪಡಿತರ ಅಕ್ಕಿಯನ್ನೇ ಪಡೆದಿಲ್ಲ. ಅವರು ಕೇವಲ ಆಯುಷ್ಮಾನ್ ಭಾರತ್ ಆರೋಗ್ಯ ಸೇವೆ ಮತ್ತಿತರ ಸರ್ಕಾರಿ ಸೌಲಭ್ಯಗಳಿಗೆ ಸೀಮಿತವಾಗಿ ಬಿಪಿಎಲ್ ಕಾರ್ಡ್ ಬಳಸುತ್ತಾರೆ. ಹೀಗಾಗಿ ಅಗತ್ಯವಿಲ್ಲದವರ ಹೆಸರಿನಲ್ಲಿ ಅಕ್ಕಿ ದುರ್ಬಳಕೆ ಆಗುವುದನ್ನು ತಪ್ಪಿಸಲು ನಿರ್ಧರಿಸಲಾಗಿದೆ. ಈಗಾಗಲೇ ಕಳೆದ ಮೂರು ತಿಂಗಳಿಂದ ಪಡಿತರ ಅಕ್ಕಿ ಪಡೆಯದ ಬಿಪಿಎಲ್ ಕಾರ್ಡ್ದಾರರಿಗೆ ಹೆಚ್ಚುವರಿ 5 ಕೆ.ಜಿ. ಅಕ್ಕಿಗೆ ನೀಡುವ ನಗದು ವರ್ಗಾವಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಕಾರಣಗಳಿಗೆ ಹಲವರು ಅಕ್ಕಿ ಪಡೆಯುತ್ತಿಲ್ಲ. ಅಕ್ಕಿ ಪಡೆದರೂ ಬೇರೆಯವರಿಗೆ ನೀಡುವುದು,…
ಚಿಕ್ಕಮಗಳೂರು: ಬಿಜೆಪಿಯವರು ಪೊಲೀಸ್ ಠಾಣೆಯನ್ನೇ ಕಾಪಾಡಲು ಆಗದವರು, ಶಾಸಕರ ಮನೆಗೆ ಬೆಂಕಿ ಹಾಕಲು ಬಿಟ್ಟವರು. ಇವರ ಯೋಗ್ಯತೆ ಏನು ಎನ್ನುವುದನ್ನು ನಾವು ಹೇಳಬೇಕಾ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರುದ್ಯೋಗಿಗಳಾಗಿರುವ ಬಿಜೆಪಿಯವರಿಗೆ 5 ಗ್ಯಾರಂಟಿಗಳು ಜಾರಿ ಆಗಿರುವುದು, ಚೆನ್ನಾಗಿ ನಡೆಯುತ್ತಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಹಾಗಾಗಿ ಸದಾ ಸರ್ಕಾರದ ವಿರುದ್ಧ ಕುಂಟು ನೆಪ, ಸುಳ್ಳು ಆರೋಪಗಳನ್ನು ಮಾಡುತ್ತಾ ಮೈ ಪರಚಿಕೊಳ್ಳುತ್ತಿದ್ದಾರೆ. ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ. ಅಮಾಯಕರನ್ನು ಬಿಡು ಎಂದು ಯಾರೂ ಹೇಳಿಲ್ಲ. ಯಾವುದೇ ಸಮುದಾಯಕ್ಕೆ ಅನ್ಯಾಯ ಆಗದಂತೆ ನಾವು ನೋಡಿಕೊಳ್ಳುತ್ತೇವೆ. ಅದನ್ನು ಬಿಜೆಪಿಯವರಿಂದ ಹೇಳಿಸಿಕೊಂಡು ಮಾಡಬೇಕಿಲ್ಲ ಎಂದರು. ರಾಜ್ಯದಲ್ಲಿ ಪ್ರತಿಪಕ್ಷಗಳೇ ಇಲ್ಲ. ಬಿಜೆಪಿಯವರಿಗೆ ತಮ್ಮ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಆಗಿಲ್ಲ. ಜೆಡಿಎಸ್ಗೆ ಮುಂದೆ ಅಸ್ತಿತ್ವ ಇರುತ್ತೋ ಇಲ್ವೋ ಗೊತ್ತಿಲ್ಲ. ಬಿಜೆಪಿಯಲ್ಲಿ ವಿಲೀನ ಆಗುತ್ತೇನೋ ಗೊತ್ತಿಲ್ಲ. ಈಗ ರಾಜ್ಯದಲ್ಲಿ ಒರಿಜಿನಲ್ ಬಿಜೆಪಿಯೂ ಇಲ್ಲ, ಜೆಡಿಎಸ್…
ಹುಬ್ಬಳ್ಳಿ : ಈ ಸಲ ಮಂತ್ರಿಗಳಿಗೂ ಹೆಚ್ಚಿನ ಅನುದಾನ ಸಿಗುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತೀವ್ರ ಕಿಡಿಕಾರಿದ್ದಾರೆ. ಕರ್ನಾಟಕದಲ್ಲಿ ಅಭಿವೃದ್ಧಿಯೇ ಇಲ್ಲ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಅಧಿಕಾರದ ಹಸಿವಿನಿಂದ ಆಶ್ವಾಸನೆ ಕೊಟ್ಟು ಅವುಗಳನ್ನು ಪೂರೈಸಲೂ ಆಗದೆ ಅಭಿವೃದ್ಧಿಗೆ ಹಣ ಇಲ್ಲ ಎಂದು ಉಪ ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಈ ಸರ್ಕಾರಕ್ಕೆ ದೂರದೃಷ್ಟಿಯೂ ಇಲ್ಲ, ಜವಾಬ್ದಾರಿಯೂ ಇಲ್ಲ ಎಂದಿದ್ದಾರೆ. 17 ಸಾವಿರ ಕೋಟಿ ಬಿಡುಗಡೆ: ಈ ಮಧ್ಯೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತಿನ ದೇಶದ 8.5 ಕೋಟಿಗೂ ಹೆಚ್ಚು ಫಲಾನುಭವಿ ರೈತರ ಖಾತೆಗಳಿಗೆ 17 ಸಾವಿರ ಕೋಟಿ ಬಿಡುಗಡೆಯಾಗಿದೆ. ರಾಜ್ಯದ ಒಟ್ಟು 50.45ಲಕ್ಷ ರೈತರಿಗೆ 1,009 ಕೋಟಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಧಾರವಾಡ ಜಿಲ್ಲೆಯ 1.08 ಲಕ್ಷ ರೈತರ ಖಾತೆಗೆ .21.65 ಕೋಟಿ ಜಮೆಯಾಗಿದೆ ಎಂದು ಜೋಶಿ ತಿಳಿಸಿದ್ದಾರೆ. ಇದೇ ಸಮಯದಲ್ಲಿ ರೈತರಿಗೆ ಒಂದೇ ಸೂರಿನಡಿ ಎಲ್ಲ ಸೌಲಭ್ಯಗಳು ದೊರಕುವ 1.25 ಲಕ್ಷ ಪ್ರಧಾನಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಪ್ರಧಾನಿ ಮೋದಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ. ಇದರಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 225 ಕೇಂದ್ರಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ಎಂದರು. ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರದಿಂದ 784 ಕೋಟಿ ಅನುದಾನ: ಕೇಂದ್ರ ರಸ್ತೆ ಮೂಲ ಸೌಕರ್ಯ ನಿಧಿಯ ಸೇತುಬಂಧನ್ ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ .784 ಕೋಟಿ ವೆಚ್ಚದಲ್ಲಿ 22 ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ. ಈ ಅನುಮೋದನೆಯಲ್ಲಿ ನನ್ನ ಲೋಕಸಭಾ ಕ್ಷೇತ್ರದ 2 ಕಾಮಗಾರಿಗಳೂ ಸೇರಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿ, ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ಸಂಭವಿಸುತ್ತಿರುವ ಅಪಘಾತ ತಡೆ ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಮೇಲ್ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ. ಹಿಂದೆ ನಾನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಲೋಕಸಭಾ ಕ್ಷೇತ್ರದ ಅಣ್ಣಿಗೇರಿ ಪಟ್ಟಣದ ರೈಲ್ವೆ ಗೇಟ್ ನಂ. 19ಕ್ಕೆ ಮೇಲ್ಸೇತುವೆ ಹಾಗೂ ಅಳ್ನಾವರ ಪಟ್ಟಣದ ರೈಲ್ವೆ ಅಂಡರ ಬ್ರಿಡ್ಜ್ ತುಂಬಾ ಕಿರಿದಾಗಿದ್ದು, ಅದರ ಅಗಲೀಕರಣಕ್ಕೆ ವಿನಂತಿಸಿದ್ದೆ. ನನ್ನ ವಿನಂತಿಯ ಮೇರೆಗೆ ಕೇಂದ್ರ ಸಚಿವರು ಈ ಎರಡೂ ಕಾಮಗಾರಿಗಳಿಗೆ ತಲಾ .30 ಕೋಟಿಯಂತೆ ಒಟ್ಟು .60 ಕೋಟಿ ಅನುದಾನ ಒದಗಿಸಿದ್ದಾರೆ. ಇದರಿಂದ ಖಾನಾಪೂರ–ಅಳ್ನಾವರ–ಹಳಿಯಾಳ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಸಂಪರ್ಕ ವ್ಯವಸ್ಥೆ ಸುಗಮಗೊಳ್ಳಲಿದೆ. ಇದರ ಜೊತೆಗೆ ಅಳ್ನಾವರ ಪಟ್ಟಣದ ನಾಗರಿಕರಿಗೆ ದಿನನಿತ್ಯದ ಸಂಚಾರದಲ್ಲಿ ಆಗುತ್ತಿದ್ದ ಅಡೆತಡೆ ನಿವಾರಣೆಯಾಗಲಿದೆ. ಹಾಗೆಯೇ ಅಣ್ಣಿಗೇರಿ ಪಟ್ಟಣದ ಓವರ್ ಬ್ರಿಡ್ಜ್ ನಿರ್ಮಾಣದಿಂದ ಅಣ್ಣಿಗೇರಿ– ಹಳ್ಳಕೇರಿ– ಇಬ್ರಾಹಿಂಪೂರ ಮುಖ್ಯರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ರೈಲ್ವೆ ಗೇಟ್ ರಹಿತವಾಗಿ ಯಾವುದೇ ಅಡತಡೆ ಇಲ್ಲದೇ ಸಂಚರಿಸಬಹುದು. ಈ ಎರಡು ಬೇಡಿಕೆಗಳು ಬಹುದಿನಗಳಿಂದ ಇದ್ದು, ಅವುಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಮಾಡಿದ್ದು, 24 ತಿಂಗಳಲ್ಲಿ ಈ ಕಾರ್ಯ ಪೂರ್ಣಗೊಳಿಸುವಂತೆ ರಾಜ್ಯದ ಲೋಕೋಪಯೋಗಿ ಇಲಾಖೆಯ ರಾಷಿತ್ರೕಯ ಹೆದ್ದಾರಿ ವಿಭಾಗಕ್ಕೆ ತಿಳಿಸಲಾಗಿದೆ. ಈ ಕಾಮಗಾರಿಯನ್ನು ಕೈಗೊಳ್ಳಲು ಕೂಡಲೇ ಟೆಂಡರ್ ಪ್ರಕ್ರಿಯೆ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಹಾಗೂ ಲೋಕೋಪಯೋಗಿ ಸಚಿವರಿಗೆ ಕೋರುತ್ತೇನೆ ಎಂದು ಸಚಿವ ಜೋಶಿಯವರು ತಿಳಿಸಿದ್ದಾರೆ.
ಹಾವೇರಿ: ಗೃಹ ಸಚಿವರು ಹೆಣ್ಣುಮಕ್ಕಳ ವಿಚಾರದಲ್ಲಿ ಹಗುರವಾಗಿ ಮಾತನಾಡಿದ್ದಾರೆ. ಇಡೀ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದರು. ಹಾವೇರಿಯಲ್ಲಿ (Haveri) ಮಾತನಾಡಿದ ಅವರು, ಹೆಣ್ಣುಮಕ್ಕಳ ಬಗ್ಗೆ ಸರ್ಕಾರಕ್ಕೆ ಏನು ಗೌರವವಿದೆ. ತನಿಖೆಗೂ ಮೊದಲೇ ಏನೂ ಆಗಿಲ್ಲ ಅಂದ್ರೆ ಪೊಲೀಸರು ಉಡುಪಿ ಪ್ರಕರಣವನ್ನ ಮುಚ್ಚಿ ಹಾಕುತ್ತಾರೆ. ಪ್ರಕರಣದಲ್ಲಿ ಏನು ಇಲ್ಲಾ ಅಂದ್ರೆ, ವಾರ ಬಿಟ್ಟು ಎಫ್ಐಆರ್ ಯಾಕೆ ಹಾಕಿದ್ರು? ಎಲ್ಲಾ ಮುಚ್ಚಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕೆಜಿ ಹಳ್ಳಿ, ಡಿಜೆ ಹಳ್ಳಿ, ಹುಬ್ಬಳ್ಳಿ ಪ್ರಕರಣ ಬೇರೆ. ಹೋರಾಟಗಾರರ ಪ್ರಕರಣಗಳು ಬೇರೆ. ಓಲೈಕೆ ರಾಜಕಾರಣಕ್ಕಾಗಿ ದಂಗೆಕೋರರನ್ನ ಕೈಬಿಡುತ್ತೀರಿ ಅಂದ್ರೆ ಯಾರ ಪರವಾಗಿದೆ ಸರ್ಕಾರ ಎಂದು ಅಸಮಾಧಾನ ಹೊರಹಾಕಿದರು. ಸೂಚ್ಯಂಕದಲ್ಲಿ ಹಾವೇರಿ ಜಿಲ್ಲೆ ಹಿಂದಿದೆ. ಸಿಎಂ ಆಡಳಿತ ಮಾಡಿರುವ ಜಿಲ್ಲೆ ಎಂದು ಸಿದ್ದರಾಮಯ್ಯ ನವರು ಹಾವೇರಿಗೆ ಬಂದಾಗ ಹೇಳಿದ್ದಾರೆ. ಹಿಂದೆ ನೀವು 2013 ರಲ್ಲಿ ಸಿಎಂ ಆಗಿದ್ದಾಗ ಹಾವೇರಿಗೆ ಬಂದಿದ್ದ ಮೆಡಿಕಲ್ ಕಾಲೇಜನ್ನು ಗದಗ ಜಿಲ್ಲೆಗೆ…
ಬೆಂಗಳೂರು ;- ದೇಶದ ಉಳಿವಿಗಾಗಿ ಯುವಕರು ಎಚ್ಚೆತ್ತುಕೊಳ್ಳಿ ಎಂದು ಯುವ ಕಾಂಗ್ರೆಸ್ ನಾಯಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಭವಿಷ್ಯದ ನಾಯಕರನ್ನು ರೂಪಿಸಲು ಯುವ ಘಟಕಗಳು ಪ್ರಮುಖ ಪಾತ್ರ ವಹಿಸುತ್ತವೆ. ನಾನು ಕೂಡ ಪಂಚಾಯತಿ ಮಟ್ಟದಲ್ಲಿ ರಾಜಕೀಯ ಆರಂಭಿಸಿ, ಇಂದು ಕರ್ನಾಟಕದಲ್ಲಿ ಸಚಿವೆಯಾಗಿರುವೆ. ಎರಡು ಬಾರಿ ಚುನಾವಣೆಯಲ್ಲಿ ಸೋತರೂ ಎದೆಗುಂದದೇ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಇಂದು ಸಚಿವೆಯಾಗಿರುವೆ ಎಂದರು. ಇನ್ನೂ ನಮ್ಮೆಲ್ಲರ ನಾಯಕ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಜೈಲಿಗಟ್ಟಿದರೂ ಎದೆಗುಂದದೆ ಮುನ್ನಡೆದರು. ಅವರ ರಾಜ್ಯದ ಅಚ್ಚುಮೆಚ್ಚಿನ ನಾಯಕ ಸಿದ್ದರಾಮಯ್ಯ ಕೂಡಾ ಜತೆಗೂಡಿ ಪಕ್ಷ ಕಟ್ಟಿದ ಫಲವಾಗಿ ಕಾಂಗ್ರೆಸ್ ಇಂದು ಕರ್ನಾಟಕದಲ್ಲಿ ಅಧಿಕಾರ ಹಿಡಿದಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಯುವ ಸಮುದಾಯ ಎಂದರೆ ಭವಿಷ್ಯ ಎಂಬುದನ್ನು ಅರಿತ ಇಂದಿರಾ ಗಾಂಧಿ ಅವರು, ಭವಿಷ್ಯದ ನಾಯಕರ ನಿರ್ಮಾಣಕ್ಕೆ ಯುವ ಕಾಂಗ್ರೆಸ್ ಆರಂಭಿಸಿದರು. ಪರಿಣಾಮ ಯುವ ಕಾಂಗ್ರೆಸ್ನಿಂದ ಅನೇಕ…
ಬೆಂಗಳೂರು ;- ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣವನ್ನು ಬೆಂಗಳೂರಿನ ಹೈಕೋರ್ಟ್ ರದ್ದುಪಡಿಸಿ ಆದೇಶ ನೀಡಿದೆ. ತನ್ನ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಅಜಯ್ ಹಿಲೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ತಿರ್ಪುನ್ನು ಕಾಯ್ದಿರಿಸಿದ್ದು, ಶುಕ್ರವಾರ ಪ್ರಕಟಿಸಿತು. ಅರ್ಜಿದಾರರನ್ನು ಈಗಾಗಲೇ ಇಲಾಖಾ ವಿಚಾರಣೆಯಲ್ಲಿ ದೋಷಮುಕ್ತಗೊಳಿಸಲಾಗಿದೆ. ಆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ಪ್ರಕರಣ ರದ್ದು ಗೊಳಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಅರ್ಜಿದಾರರು 2020ರ ಸೆ.9ರಂದು ತಮ್ಮ ವಿರುದ್ಧ ವಿಚಾರಣೆಗೆ ಸರ್ಕಾರ ಪೂರ್ವಾನುಮತಿ ನೀಡಿದ್ದನ್ನು ಮತ್ತು 2020ರ ಜ.7ರಂದು ಸಿಬಿಐ ತನಿಖೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಬೆಂಗಳೂರು ;– ಒಳ ಉಡುಪಿನಲ್ಲಿ ಮೊಬೈಲ್ ಇಟ್ಟು ಜೈಲಿನೊಳಗೆ ಸಾಗಿಸುತ್ತಿದ್ದಾಗ ಡಿ ದರ್ಜೆ ನೌಕರ ಸಿಕ್ಕಿಬಿದ್ದ ಘಟನೆ ಜರುಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ತರಬೇತಿ ನೀಡುತ್ತಿದ್ದ ಎಂಬ ಆತಂಕಕಾರಿ ವಿಷಯ ಸಿಸಿಬಿ ತನಿಖೆಯಲ್ಲಿ ಬಯಲಾದ ಬೆನ್ನಲ್ಲೇ ಒಳ ಉಡುಪಿನಲ್ಲಿ ಜೈಲಿನೊಳಗೆ ಮೊಬೈಲ್ ಸಾಗಿಸುತ್ತಿದ್ದ ಡಿ ದರ್ಜೆ ನೌಕರ ಸಿಬ್ಬಂದಿ ಸಿಕ್ಕಿ ಬಿದ್ದಿದ್ದಾನೆ. ಪೊಲೀಸ್ ತಪಾಸಣೆ ವೇಳೆ ಒಳಉಡುಪಿನಲ್ಲಿ ಜೈಲಿನೊಳಗೆ ಸಾಗಿಸುತ್ತಿದ್ದ 52 ವರ್ಷದ ಭಾನುಪ್ರಕಾಶ್ ಸಿಕ್ಕಿಬಿದ್ದಿದ್ದು, ಜೈಲಿನ ಅಧೀಕಕ್ಷ ಮಲ್ಲಿಕಾರ್ಜುನ ಎಂಬುವರು ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ. ಡಿ ದರ್ಜೆ ನೌಕರನಾಗಿರುವ ಭಾನುಪ್ರಕಾಶ್ ನಿತ್ಯ ಪೊಲೀಸ್ ವಾಹನಗಳನ್ನ ಸ್ವಚ್ಛತೆ ಮಾಡುತ್ತಿದ್ದ. ಇದೇ ತಿಂಗಳು 25ರಂದು ಜೈಲಿನೊಳಗೆ ಪ್ರವೇಶಿಸುವಾಗ ಭದ್ರತಾ ತಪಾಸಣಾ ವೇಳೆ ಒಳ ಉಡುಪಿನಲ್ಲಿ ಮೊಬೈಲ್ ಇಟ್ಟುಕೊಂಡಿರುವುದು ಗೊತ್ತಾಗಿದೆ. ಈ ಬಗ್ಗೆ ಪ್ರಶ್ನಿಸಿದಾಗ ಅನುಮಾನಸ್ಪಾದವಾಗಿ ಹೇಳಿಕೆ ನೀಡಿದ್ದರು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಕಡಿಮೆ ಬೆಲೆಯ ಬೇಸಿಕ್ ಸೆಟ್ ಮೊಬೈಲ್ ಖರೀದಿಸಿದ್ದು, ಮರೆತು ಒಳ ಜೇಬಿನಲ್ಲಿ…