ಬೆಂಗಳೂರು ;- ಯುವಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು ಅತಿ ಅವಶ್ಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಶ್ವ ಹೆಪಟೈಟಿಸ್ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೆಪಟೈಟಿಸ್ ಸೋಂಕು ಆಹಾರ ಮತ್ತು ಜೀವನಶೈಲಿಯಲ್ಲಿ ಆಗುವ ಬದಲಾವಣೆಗಳಿಂದ ಬರುತ್ತದೆ. ಮಾನವನ ಅಂಗಾಂಗದಲ್ಲಿ ಲಿವರ್ಗೆ ನಾವು ಹೆಚ್ಚು ಪ್ರಾಮುಖ್ಯತೆ ನೀಡಬೇಕಾಗಿದೆ. ಲಿವರ್ನ್ನು ನಾವು ಎಷ್ಟು ಚೆನ್ನಾಗಿ ನೋಡಿಕೊಳ್ಳುತ್ತೇವೋ, ಅದು ನಮಗೆ ಅಷ್ಟೇ ಉತ್ತಮ ಆರೋಗ್ಯವನ್ನು ನೀಡುವಂತಹ ಒಂದು ಅಂಗಾಂಗವಾಗಿದೆ ಎಂದರು. ಮಾನವನ ದೇಹದಲ್ಲಿ ಲಿವರ್ 500 ಕ್ಕೂ ಹೆಚ್ವು ಕಾರ್ಯವನ್ನು ಮಾಡುವ ಪ್ರಮುಖ ಅಂಗಾಂಗ. ಎ, ಬಿ, ಸಿ, ಡಿ ಮತ್ತು ಇ ರೀತಿಯ ಹೆಪಟೈಟಿಸ್ ವೈರಸ್ಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಬಿ ಮತ್ತು ಸಿ ವೈರಸ್ ಲಿವರ್ ಡ್ಯಾಮೇಜ್ ಮಾಡುವ ವೈರಸ್ ಗಳಾಗಿದ್ದು, ಮಾರಕ ಕಾಯಿಲೆಯನ್ನು ಉಂಟುಮಾಡುತ್ತವೆ ಎಂದು ಸಚಿವರು ಹೇಳಿದರು. ಹೆಪಟೈಟಿಸ್ ವೈರಸ್ ನಿಂದಾಗಿ ದೇಶದಲ್ಲಿ 3.5 ಕೋಟಿಗೂ ಹೆಚ್ಚು ಜನರು ಇಂದು ಲಿವರ್ ಸಮಸ್ಯೆ ಎದುರಿಸುತ್ತಿದ್ದಾರೆ. ಕರ್ನಾಟದಲ್ಲಿ ಶೇ. 1 ರಷ್ಟು ಹೆಪಟೈಟಿಸ್…
Author: Prajatv Kannada
ಹುಬ್ಬಳ್ಳಿ ;– ಶಾಸಕಾಂಗ ಸಭೆಯಲ್ಲಿ ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕುರಿತು ಮಾತನಾಡಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಸಭೆಯಲ್ಲಿ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದಿದ್ದಾರೆ. ಸರ್ಕಾರ ಬಂದು ಎರಡು ತಿಂಗಳಷ್ಟೇ ಆಗಿದೆ. ಅನುದಾನದ ಕುರಿತು ಒಂದು, ಎರಡು ಶಾಸಕರಿಗೆ ಅಸಮಾಧಾನ ಆಗಿರಬಹುದು. ಶಾಸಕರು ಹೇಳಿರುವ ಕೆಲಸವನ್ನು ಸಚಿವರು ಹಾಗೂ ಮುಖ್ಯಮಂತ್ರಿ ಸಾಮಾನ್ಯವಾಗಿ ಮಾಡಿಯೇ ಮಾಡುತ್ತಾರೆ’ ಎಂದು ಪ್ರತಿಕ್ರಿಯಿಸಿದರು. ಬಿಜೆಪಿ ಸರ್ಕಾರದ ಕೊನೆಯಲ್ಲಿ ಮಿತಿ ಮೀರಿ ಟೆಂಡರ್ ಕರೆಯಲಾಗಿದೆ. ಅವುಗಳಲ್ಲಿ ಯಾವುದು ಕೆಲಸ ಆರಂಭವಾಗಿಲ್ಲ ಎಂದು ಪರಿಶೀಲನೆ ನಡೆಸಿ, ಆದ್ಯತೆ ಮೇರೆಗೆ ಕಾಮಗಾರಿ ಆರಂಭಿಸಲಾಗುವುದು. ಕಾಮಗಾರಿ ಆರಂಭಿಸುವ ಗುತ್ತಿಗೆದಾರರಿಗೆ ತಕ್ಷಣ ಬಿಲ್ ಪಾವತಿಸಲಾಗುವುದು ಎಂದರು.
ತುಮಕೂರು ;- ಕಾಂಗ್ರೆಸ್ ಸರ್ಕಾರ ಅಸ್ಥಿರ ಮಾಡೋಕೆ ಯಾರಿಂದಲೂ ಆಗಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸುವ ಮೂಲಕ ಸರ್ಕಾರ ರಚಿಸಿರುವ ಕಾಂಗ್ರೆಸ್ ಗೆ, ವಿಪಕ್ಷಗಳ ಭಯ ಶುರುವಾದಂತೆ ಕಾಣುತ್ತಿದೆ. ಈಗಾಗಲೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿದೇಶ ಪ್ರವಾಸವನ್ನ ಕೈಗೊಂಡಿದ್ದು, ಈ ಸರ್ಕಾರ ಅಸ್ಥಿರ ಮಾಡೋಕೆ ಯಾರಿಂದಲೂ ಆಗಲ್ಲ ಎಂದರು. ಯಾರು ಹೇಗೆ ಎಲ್ಲಿ ವಿದೇಶಕ್ಕೆ ಹೋಗುತ್ತಾರೆ ಅನ್ನೋದು ನಮಗೆ ಗೊತ್ತಿಲ್ಲ. ಸರ್ಕಾರ ಅಸ್ಥಿರ ಮಾಡೋಕೆ ಯಾರಿಂದಲೂ ಆಗಲ್ಲ, ನಾವು ಸುಭ್ರದ್ರವಾಗಿದ್ದೇವೆ ಎಂದು ತಿಳಿಸಿದರು. ಉಡುಪಿ ಯುವತಿ ವಿಡಿಯೋ ಪ್ರಕರಣದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಹೇಳಿಕೆಯನ್ನೇ ಬಿಜೆಪಿಯವರು ಪ್ರಚಾರಕ್ಕೆ ಬಳಸಿದರೆ ಬಳಸಿಕೊಳ್ಳಲಿ. ನಮಗೆ ಜವಾಬ್ದಾರಿ ಇದೆ. ಸರ್ಕಾರ ನಡೆಸುವ ನಾವು ಇಂತಹ ಘಟನೆ ಲಘುವಾಗಿ ಸ್ವೀಕರಿಸುವುದಿಲ್ಲ. ಆದರೆ, ಇವರು ಬೇರೆ ಬೇರೆ ಅರ್ಥ ಕಲ್ಪಿಸೋದು ಸರಿಯಲ್ಲ. ಅವರು ಹೇಳಿದ್ದಕ್ಕೆ, ವ್ಯಾಖ್ಯಾನಕ್ಕೆ…
ಬಾಗಲಕೋಟೆ ;- ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತಹಶೀಲ್ದಾರ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಬಕವಿಯ ಕೃಷ್ಣಾ ನದಿಗೆ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ನಮ್ಮ ನದಿಗೆ ನೀರು ಬಂದಿದೆ. ಅಷ್ಟೊಂದು ಪ್ರಮಾಣದಲ್ಲಿ ನೀರು ಇಲ್ಲ ಮಹಾರಾಷ್ಟ್ರದ ಕೊಯ್ನಾ ಡ್ಯಾಮ್ ನಿಂದ 3 ಲಕ್ಷ ಕ್ಯೂಸೆಕ್ ನೀರ್ ಬಂದರೆ ನಮಗೆ ಪ್ರವಾಹ ಬರಬಹುದು. ಆದರೆ ಈಗಿನ ಮಟ್ಟದಲ್ಲಿ ಪ್ರವಾಹ ಭೀತಿಯಗೆ ಭಯಪಡುವ ಅಗತ್ಯವಿಲ್ಲ. ನಮ್ಮ ತಾಲೂಕಿನ ಒಬ್ಬ ಅಧಿಕಾರಿಗಳನ್ನು ಸಾಂಗ್ಲಿಯಲ್ಲಿ ನಾವು ನೇಮಿಸಿದ್ದೇವೆ ದಿನದಿಂದ ದಿನಕ್ಕೆ ಮಹಾರಾಷ್ಟ್ರದಿಂದ ಕರ್ನಾಟಕ ಎಷ್ಟು ಪ್ರಮಾಣ ನೀರು ಹರಿದು ಬರುತ್ತದೆ ಎಂದು ಮಾಹಿತಿ ನೀಡುತ್ತಿದ್ದಾರೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ತಮದಡ್ಡಿ ಮತ್ತು ಅಸ್ಕಿ ಗ್ರಾಮಗಳು ನದಿಯ ಪಕ್ಕದಲ್ಲಿ ಇರುವುದರಿಂದ ಪುನರ ವಸತಿ ನಿರ್ಮಿಸಬೇಕೆಂದು ಸರ್ಕಾರ ಚಿಂತನೆಯಲ್ಲಿತ್ತು ಅಷ್ಟರಲ್ಲಿ ಇದು ನ್ಯಾಯಾಲಯದ ಮೆಟ್ಟಿಲು ಎರಿವುದರಿಂದ ಸ್ವಲ್ಪ ತೊಂದರೆ ಆಗಿದೆ ಅದನ್ನು ಅತಿ ಶೀಘ್ರದಲ್ಲಿ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು. ಪ್ರಕಾಶ ಕುಂಬಾರ ಬಾಗಲಕೋಟೆ
ಮೈಸೂರು;- ಮೈಸೂರು- ಬೆಂಗಳೂರು ರಾ.ಹೆದ್ದಾರಿಯಲ್ಲಿ ಇನ್ಮುಂದೆ ಇಷ್ಟಬಂದಂಗೆ ವಾಹನ ಚಲಾಯಿಸುವ ಮುನ್ನ ತಪ್ಪದೇ ಈ ಸುದ್ದಿ ನೋಡಿ. ಟ್ರಾಫಿಕ್ ಪೊಲೀಸರ ಕ್ಯಾಮರಾ ನಿಮ್ಮ ವಾಹನದ ವೇಗದ ಮೇಲೆ ಕಣ್ಣಿಟ್ಟಿದೆ. ಸಂಚಾರ ನಿಯಮ ಕೊಂಚ ಉಲ್ಲಂಘನೆಯಾದ್ರೂ ದಂಡ ಬೀಳಲಿದೆ. ಮೈಸೂರು ಮತ್ತು ಬೆಂಗಳೂರು ರಾ.ಹೆದ್ದಾರಿಗೆ ಎಎನ್ ಪಿ ಆರ್ ಕ್ಯಾಮರಾ ಅಳವಡಿಕೆ ಮಾಡಲಾಗಿದ್ದು, ಅಪಘಾತ ನಿಯಂತ್ರಣಕ್ಕೆ ಎನ್ ಪಿ ಆರ್ ಕ್ಯಾಮರಾ ಅಳವಡಿಕೆ ಮಾಡಲಾಗುತ್ತಿದೆ. ಅತಿವೇಗದ ಚಾಲನೆ ಮತ್ತು ಒನ್ ವೇ ವಾಹನ ಚಲಾಯಿಸಿದ್ರೆ ದಂಡ ಬೀಳುತ್ತೆ. ಸದ್ಯ ಬೆಂಗಳೂರು ಸಂಚಾರ ಪೊಲೀಸರು ಎಎನ್ ಪಿಆರ್ ಕ್ಯಾಮರಾ ಬಳಸಿ ದಂಡ ವಿಧಿಸುತ್ತಿದೆ. ಮೈಸೂರು ಮತ್ತು ಬೆಂಗಳೂರು ರಾ.ಹೆದ್ದಾರಿಯಲ್ಲಿ ಹೆಚ್ಚಾಗುತ್ತಿರುವ ಅಪಘಾತಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ, ಹೀಗಾಗಿ ಎಎನ್ ಪಿಆರ್ ಕ್ಯಾಮರಾ ಬಳಸಲು ನಿರ್ಧಾರ ಮಾಡಲಾಗಿದೆ. ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಆದೇಶದ ಮೇರೆಗೆ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಕ್ಯಾಮರಾ ಅಳವಡಿಕೆ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ನಗರ ಆರೋಗ್ಯ, ಸ್ವಚ್ಛತೆಯನ್ನು ಕಾಪಾಡುತ್ತಿರುವ ಪೌರಕಾರ್ಮಿಕರ ವೇತನದಲ್ಲಿನ 500 ಕೋಟಿಗೂ ಹೆಚ್ಚು ಇ.ಎಸ್.ಐ ಮತ್ತು ಪಿ.ಎಫ್ ಹಣವನ್ನು ಕಳೆದ 5 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದು ಇವರ ಭವಿಷ್ಯ ಹಾಗೂ ಆರೋಗ್ಯದೊಂದಿಗೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಕಸ ವಿಲೇವಾರಿ ಗುತ್ತಿಗೆದಾರರು ಸೇರಿ ಕಾರ್ಮಿಕರ ಜೀವನಕ್ಕೆ ಸಂಚಕಾರ ತರುತ್ತಿದ್ದಾರೆ ಇದೊಂದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದು ಹೇಳಿದರು. ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿ ನಡೆದ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಬ್ರ್ಯಾಂಡ್ ಬೆಂಗಳೂರನ್ನು ಮಾಡಲು ಹೊರಟಿರುವ ಉಪಮುಖ್ಯಮಂತ್ರಿಗಳು, ಮೊದಲು ಪೌರಕಾರ್ಮಿಕರ ಮೂಲ ಸಮಸ್ಯೆಗಳನ್ನು ಬಗೆಹರಿಸಿ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದು ಆಗ್ರಹಿಸಿದರು. ಬಿಬಿಎಂಪಿಯಲ್ಲಿ ಕಸ ನಿರ್ವಹಣೆಗೆ ಇರುವ ಪೌರಕಾರ್ಮಿಕರ ಒಟ್ಟು ಸಂಖ್ಯೆ 32,000, ಇದರಲ್ಲಿ ಕೇಲವ 700 ಪೌರಕಾರ್ಮಿಕರು ಮಾತ್ರ ಖಾಯಂ ನೌಕರರಾಗಿದ್ದಾರೆ. 16,000 ಪೌರ ಕಾರ್ಮಿಕರಿಗೆ ಪಾಲಿಕೆಯು ನೇರ ವೇತನವನ್ನು ನೀಡುತ್ತಿದೆ, ಇನ್ನುಳಿದ 16,000 ಕಾರ್ಮಿಕರು ಗುತ್ತಿಗೆ ಏಜೆನ್ಸಿಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಬೆಂಗಳೂರು: ಅಲೆಮಾರಿ ಜನಾಂಗದವರಿಗೆ ಆಯೋಗ ರಚನೆಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ತೀರ್ಮಾನಕ್ಕೆ ಬರಲಾಗುವುದು. ಈ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಅನುದಾನ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಲಾಗುವುದು. ಅಲೆಮಾರಿ ಜನಾಂಗಗಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಖ್ಯವಾಹಿನಿಗೆ ಬರಬೇಕು. ಇವರಿಗೆ ವಿಶೇಷವಾಗಿ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆಯೂ ಪರಿಶೀಲಿಸಲಾಗುವುದು. ಸಾಮಾಜಿಕ ನ್ಯಾಯ ಎಲ್ಲರಿಗೂ ದೊರಕಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ಇಂದು ರಾಜ್ಯದ ಎಸ್.ಸಿ, ಎಸ್.ಟಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಸಮನ್ವಯ ಸಮಿತಿಯ ರಾಜ್ಯ ಮುಖಂಡರೊಂದಿಗೆ ಅಲೆಮಾರಿ ಜನರ ಕುಂದುಕೊರತೆಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು. ಅಲೆಮಾರಿಗಳ ಸಮಸ್ಯೆಗಳು ವಿಶಿಷ್ಟವಾಗಿದ್ದು, ಒಟ್ಟು 120 ಜಾತಿಗಳಿವೆ. ಈ ಪೈಕಿ ಎಸ್.ಸಿ 51, ಎಸ್.ಟಿ 23 ಹಾಗೂ ಹಿಂದುಳಿದ ವರ್ಗದ 46 ಜಾತಿಗಳಿವೆ. ವಿವಿಧ ರಾಜ್ಯ ಮಟ್ಟದ ಸಂಘಟನೆಗಳಿದ್ದು ,…
ಬೆಂಗಳೂರು : ಬಿಜೆಪಿಯವರಿಗೆ ಕಿತಾಪತಿ ಮಾಡದೆ ಇದ್ರೆ ನಿದ್ರೆಯೇ ಬರೋದಿಲ್ಲ, ನಾಲ್ಕು ವರ್ಷ ಅಧಿಕಾರದಲ್ಲಿದ್ರು, ಅವರಿಗೆ ಅಧಿಕಾರ ನಡೆಸೋ ಯೋಗ್ಯತೆ ಇಲ್ಲ ಜನರೇ ಅವರನ್ನ ತಿರಸ್ಕಾರ ಮಾಡಿದ್ದಾರೆಂದು ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ದ ವಾಗ್ದಾಳಿಯನ್ನ ನಡೆಸಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದ ಸರ್ಕಾರಿ ಶಾಲೆಗೆ ಭೇಟಿ ನೀಡಿ ವಿಧ್ಯಾರ್ಥಿಗಳಿಗೆ ಪರಿಕರಗಳನ್ನ ವಿತರಣೆ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭಯೋತ್ಪಾದಕರನ್ನ ಬೆಳೆಸುವ ಕೆಲಸ ಮಾಡುವುದು ಬಿಜೆಪಿಯವರು, ಕಾಂಗ್ರೆಸ್ ಪಕ್ಷ ಯಾವತ್ತು ಸಹ ಮಾಡುವುದಿಲ್ಲ. ಭಯೋತ್ಪಾದಕರಿಗೆ ಬಿಜೆಪಿಯವರು ಕುಮ್ಮಕ್ಕು ನೀಡುತ್ತಿದ್ದಾರೆ. ಉಡುಪಿಯಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಸಂಬಂಧ ಪಟ್ಟಂತೆ ಬಿಜೆಪಿ ಪಕ್ಷದಿಂದ ಆಯೋಗದ ಸದಸ್ಯೆ ಖುಷ್ಬೂ ರವರು ಭೇಟಿ ನೀಡಿ ಅಲ್ಲಿ ಯಾವುದೇ ಕ್ಯಾಮಾರ ಇರಲಿಲ್ಲ ಇದನ್ನ ರಾಜಕೀಯವಾಗಿ ಬಳಸಿಕೊಳ್ಳಬೇಡಿ ಅಂತ ಹೇಳಿದ್ದಾರೆ. ಆದ್ರೆ ಬಿಜೆಪಿಯವರಿಗೆ ಕಿತಾಪತಿ ಮಾಡದೆ ಇದ್ರೆ ನಿದ್ರೆಯೇ ಬರೋದಿಲ್ಲ ಎಂದು ಬಿಜೆಪಿಯವರ ವಿರುದ್ದ ಹರಿಹಾಯ್ದಿದ್ದಾರೆ.
ಬೆಂಗಳೂರು ;- ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ.ಎಸ್ ಎಂಬವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಹೈಗ್ರೌಂಡ್ಸ್ ಠಾಣಾ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ಉಡುಪಿ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣದ ಕುರಿತು ರಾಜ್ಯ ಕಾಂಗ್ರೆಸ್ ಮಾಡಿದ್ದ ಟ್ವೀಟ್ ವಿರೋಧಿಸುವ ಭರದಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರು ಸಿದ್ದರಾಮಯ್ಯ ಅವರ ಕುಟುಂಬ ಸದಸ್ಯರನ್ನು ಉಲ್ಲೇಖಿಸಿ ಮರು ಟ್ವೀಟ್ ಮಾಡಿದ್ದರು. ಮುಖ್ಯಮಂತ್ರಿಗಳು ಮತ್ತು ಅವರ ಕುಟುಂಬ ಸದಸ್ಯರ ಕುರಿತು ಅವಾಚ್ಯ ಶಬ್ದ ಬಳಸಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತ ಹನುಮಂತರಾಯ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಶಕುಂತಲಾರನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರು;- ಸಿದ್ದರಾಮಯ್ಯ ಅನರ್ಹತೆ ಕೋರಿ ಅರ್ಜಿ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರಿದ್ದ ನ್ಯಾಯಪೀಠ, ನೋಟಿಸ್ ಜಾರಿ ಮಾಡಿ ಸೆಪ್ಟೆಂಬರ್ 1ಕ್ಕೆ ವಿಚಾರಣೆಯನ್ನು ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ”ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಇದು ಲಂಚಕ್ಕೆ ಸಮವಾಗಿದ್ದು, ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ಪ್ರಕಾರ ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4) ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧವಾಗಿದೆ. ಹಾಗಾಗಿ, ಅಕ್ರಮಗಳನ್ನು ಎಸಗುವ ಮೂಲಕ ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು” ಎಂದು ಕೋರಿದರು. ಅಲ್ಲದೇ, ಕಾಂಗ್ರೆಸ್ ಪಕ್ಷ ಮತ್ತು ಅಭ್ಯರ್ಥಿ ಸಿದ್ದರಾಮಯ್ಯ ಅವರು ಪ್ರಕಟಿಸಿದ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಸಮ್ಮತಿಯೊಂದಿಗೆ…