Author: Prajatv Kannada

ಅರುಣಾಚಲಪ್ರದೇಶ: ಅರುಣಾಚಲಪ್ರದೇಶದಲ್ಲಿ ಭೂಕಂಪ(Earthquake) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಅರುಣಾಚಲ ಪ್ರದೇಶದ ಸಿಯಾಂಗ್​​ನ ಉತ್ತರಕ್ಕೆ ಭೂಕಂಪ ಸಂಭವಿಸಿದೆ. ಇಲ್ಲಿಯವರೆಗೆ ಭೂಕಂಪದಿಂದ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಅರುಣಾಚಲಪ್ರದೇಶದ ಸಿಯಾಂಗ್​ ಜಿಲ್ಲೆಯ ಪ್ಯಾಂಗಿನ್ ಬಳಿ ಭೂಕಂಪ ಸಂಭವಿಸಿದೆ, ಎನ್​ಸಿಎಸ್ ಪ್ರಕಾರ ಭೂಕಂಪವು 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಇದಕ್ಕೂ ಮುನ್ನ ಜುಲೈ 22 ರಂದು ಅರುಣಾಚಲಪ್ರದೇಶದ ತವಾಂಗ್​ನಲ್ಲಿ 3.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪ ಬೆಳಗ್ಗೆ 6.56ಕ್ಕೆ 5 ಕಿ.ಮೀ ಆಳದಲ್ಲಿ ಅಪ್ಪಳಿಸಿತ್ತು.

Read More

ಗ್ಯಾಂಗ್ಟಾಕ್: ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ತಮ್ಮ ರಾಜ್ಯದಲ್ಲಿ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 12 ತಿಂಗಳ ಹೆರಿಗೆ ರಜೆ ಹಾಗೂ ಮಗುವಿನ ತಂದೆಗೆ 1 ತಿಂಗಳ ರಜೆ ನೀಡುವ ಹೊಸ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸುವುದಾಗಿ ಬುಧವಾರ ತಿಳಿಸಿದ್ದಾರೆ. ಸಿಕ್ಕಿಂ ರಾಜ್ಯ ನಾಗರಿಕ ಸೇವಾ ಅಧಿಕಾರಿಗಳ ಸಂಘದ (SSCSOA) ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರಿ ಉದ್ಯೋಗಿಗಳಿಗೆ ಈ ಹೊಸ ಪ್ರಯೋಜನವನ್ನು ಶೀಘ್ರವೇ ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ. ಇದು ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಮತ್ತು ಕುಟುಂಬವನ್ನು ಉತ್ತಮವಾಗಿ ನೋಡಿಕೊಳ್ಳಲು ಸಹಾಯ ಮಾಡಲಿದೆ. ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಹೆರಿಗೆ ಪ್ರಯೋಜನ ಕಾಯಿದೆ 1961ರ ಪ್ರಕಾರ ಕೆಲಸ ಮಾಡುವ ಮಹಿಳೆ 6 ತಿಂಗಳು ಅಥವಾ 26 ವಾರಗಳ ವೇತನ ಸಹಿತ ಹೆರಿಗೆ ರಜೆಗೆ ಅರ್ಹಳಾಗಿರುತ್ತಾಳೆ. ಹಿಮಾಲಯದ ತಪ್ಪಲಿನಲ್ಲಿರುವ ಸಿಕ್ಕಿಂ, ಭಾರತದಲ್ಲಿ ಅತ್ಯಂತ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ರಾಜ್ಯವಾಗಿದೆ. ಇಲ್ಲಿ ಸುಮಾರು 6.32 ಲಕ್ಷ ಜನರು ನೆಲೆಸಿದ್ದಾರೆ. ಸಿಕ್ಕಿಂ…

Read More

ಗಾಂಧಿನಗರ: ಮದುವೆಯಾಗಿ 8 ವರ್ಷ ಕಳೆದ ನಂತರ ತನ್ನ ಪತಿ (Husband) ಮೊದಲು ಮಹಿಳೆಯಾಗಿದ್ದಳು ಎಂಬ ಸತ್ಯ ತಿಳಿದುಬಂದಿದ್ದು, ಗುಜರಾತ್‍ನ ವಡೋದರಾದಲ್ಲಿ (Gujarat Vadodara) ಮಹಿಳೆಯೊಬ್ಬರು ಶಾಕ್ ಆಗಿದ್ದಾಳೆ. 40 ವರ್ಷದ ಮಹಿಳೆಯೊಬ್ಬರು 2014ರಲ್ಲಿ ಮದುವೆಯಾದ ವ್ಯಕ್ತಿ ಪುರುಷನಾಗಲು ಲಿಂಗ ಬದಲಾವಣೆಯ ಶಸ್ತ್ರಚಿಕಿತ್ಸೆಗೆ(Sex Change Operation) ಒಳಗಾಗಿದ್ದು, ಈ ವಿಚಾರವನ್ನು ತನ್ನಿಂದ ಮುಚ್ಚಿಟ್ಟಿರುವುದು ತಿಳಿದು ಕಂಗಲಾಗಿದ್ದಾಳೆ. ಈ ಸಂಬಂಧ ಮಹಿಳೆ ಬುಧವಾರ ಗೋತ್ರಿ ಪೊಲೀಸ್‍ನಲ್ಲಿ(Gotri Police) ದೂರು ದಾಖಲಿಸಿದ್ದು, ತನ್ನ ಪತಿ ವಿರಾಜ್ ವರ್ಧನ್ ವಂಚನೆ ಮತ್ತು ಅಸ್ವಾಭಾವಿಕ ಲೈಂಗಿಕತೆಗೆ ನಡೆಸಿರುವುದಾಗಿ ಆರೋಪಿಸಿದ್ದಾರೆ. ಎಫ್‍ಐಆರ್‌ನಲ್ಲಿ ಅವರ ಕುಟುಂಬಸ್ಥರ ಹೆಸರನ್ನು ಉಲ್ಲೇಖಿಸಿದ್ದಾಳೆ. ಹಿಂದೆ ವಿಜೈತಾ(Vijaita) ಎಂದು ಗುರುತಿಸಿಕೊಂಡಿದ್ದ ವಿರಾಜ್ ವರ್ಧನ್ (Viraj Vardhan) ಅವರನ್ನು ಒಂಬತ್ತು ವರ್ಷಗಳ ಹಿಂದೆ ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಭೇಟಿಯಾಗಿದ್ದೆ. ನನ್ನ ಮೊದಲ ಪತಿ 2011ರಲ್ಲಿ ರಸ್ತೆ ಅಪಘಾತದಲ್ಲಿ (Road Accident) ನಿಧನರಾದರು ಮತ್ತು ನಮಗೆ 14 ವರ್ಷದ ಮಗಳಿದ್ದಳು (Daughter) ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ. ಫೆಬ್ರವರಿ (February)…

Read More

ಶಿವಮೊಗ್ಗ: ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ, ಶಿವಮೊಗ್ಗ, ಹುಬ್ಬಳಿ ಗಲಾಟೆ ಪ್ರಕರಣ ಆರೋಪಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನ ವಾಪಸ್ ಪಡೆಯಲು ಪರಿಶೀಲಿಸುವಂತೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಡಿಜೆ ಹಳ್ಳಿ, ಕೆಜಿ ಹಳ್ಳಿ ಗಂಟೆಗಟ್ಟಲೆ ಹೊತ್ತಿ ಉರಿದಿತ್ತು. ಪೊಲೀಸ್ ಸ್ಟೇಷನ್, ಶಾಸಕರ ಮನೆಗಳು ಹೊತ್ತಿ ಉರಿದವು. ಘಟನೆಗೆ ಕಾರಣರಾದವರನ್ನ ಅಮಾಯಕರು ಎನ್ನುತ್ತಿದ್ದಾರೆ.‌ ಇವರನ್ನು ಅಮಾಯಕರು ಎನ್ನುವುದಾದರೆ ನಿಜವಾದ ಅಮಾಯಕರನ್ನು ಏನೆನ್ನಬೇಕು ಎಂದು ಪ್ರಶ್ನಿಸಿದರು. ಒಂದು ಸಮುದಾಯವನ್ನು ಓಲೈಕೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದು ಇಂಥವರಿಗೆ ಪ್ರೇರಣೆ ನೀಡುವ ಕೆಲಸ ಮಾಡುತ್ತಿದೆ. ಮೊನ್ನೆ ಐದು ಜನರನ್ನು ಬಂಧಿಸುವಾಗ ಓರ್ವ ಆರೋಪಿ ಕಾಂಗ್ರೆಸ್ ಸರ್ಕಾರ‌ ಬಂದಿದೆ ಹುಷಾರ್ ಎಂದು ಪೊಲೀಸರಿಗೆ ಧಮಕಿ ಹಾಕಿದ್ದಾನೆ. ಈ ಬಗ್ಗೆ ನನಗೆ ಮಾಹಿತಿ ಬಂದಿದೆ. ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಹಿಂದೆ ಶಾರಿಕ್ ಗೂ ಭಯೋತ್ಪಾದಕನಲ್ಲ…

Read More

ಧಾರವಾಡ ;- ಜಿಲ್ಲೆಯಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ನಿಟ್ಟಿನಲ್ಲಿ ಶಾಲಾ ಕಟ್ಟಡ ಶಿಥಿಲಗೊಂಡ ಅದೆಷ್ಟೋ ಪ್ರಕರಣಗಳು ಬೆಳಕಿಗೆ ಬಂದಿದೆ. ಇದಕ್ಕೆ ಸಾಕ್ಷಿ ಎಂಬುವಂತೆ ಹುಬ್ಬಳ್ಳಿ ತಾಲೂಕಿನ ಹೆಬಸೂರಿನ ಹೆಣ್ಣು ಮಕ್ಕಳ ಮಾದರಿಯ ಶಾಲೆಯಲ್ಲಿ ಇಂತಹದೊಂದು ಪರಿಸ್ಥಿತಿ ಗೋಚರಿಸುತ್ತಿದೆ. ಹೌದು.. ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗ್ರಾಮೀಣ ಪ್ರದೇಶದಲ್ಲಿರುವ ಶಾಲಾ ಕಟ್ಟಡಗಳು ವಿಶೇಷವಾಗಿ ತರಗತಿ ಕೋಣೆಗಳ ಮೇಲ್ಛಾವಣಿಗಳು ಸೋರುತ್ತಿದ್ದು, ಕೆಲವು ಕಟ್ಟಡಗಳು ಸಿಥಿಲಗೊಂಡಿದ್ದು, ಇಂಥ ಶಾಲೆಗಳ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಎಸ್.ಡಿ.ಎಮ್.ಸಿ.ಪದಾಧಿಕಾರಿಗಳು ನಿತ್ಯದ ಎಲ್ಲ ಚಟುವಟಿಕೆಗಳನ್ನು ಬದಿಗಿಟ್ಟು ಖುದ್ದಾಗಿ ಪರಿಶೀಲಿಸಿ ಫೋಟೋ ವಿಡಿಯೋ ಸಹಿತ ಸಂಬಂಧಿಸಿದ ಮೇಲಾಧಿಕಾರಿಗಳಿಗೆ ಹಾಗೂ ಕಂದಾಯ ಇಲಾಖೆಗೆ ಸ್ಥಳೀಯ ಸಂಸ್ಥೆಗಳಿಗೆ ಲಿಖಿತ ವರದಿ ಸಲ್ಲಿಸುತ್ತಿದ್ದಾರೆ. ಆದರೆ ನೆಪ ಮಾತ್ರಕ್ಕೆ ಎಂಬುವಂತೇ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ ವಿನಃ ಮತ್ತೇ ಮಳೆಗಾಲದ ಅವಧಿಯಲ್ಲಿಯೇ ಭೇಟಿ ನೀಡುತ್ತಾರೆ.

Read More

ಚಿಕ್ಕಬಳ್ಳಾಪುರ: ಗಣೇಶನ ಹಬ್ಬಕ್ಕೆ ಕ್ಷೇತ್ರದ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 19 ಸಾವಿರ ಮಕ್ಕಳಿಗೆ ಬಟ್ಟೆ ಕೊಡಿಸು ವುದಾಗಿ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಅಜ್ಜವಾರ ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಅವರು, ” ಸರಕಾರಿ ಶಾಲೆ ಮಕ್ಕಳಿಗೆ ಯಾವುದೇ ತೊಂದರೆ ಆಗಬಾರದು. ಹೀಗಾಗಿ ಅವರಿಗೆ ಗಣೇಶನ ಹಬ್ಬಕ್ಕೆ ಎಲ್ಲ ಮಕ್ಕಳಿಗೂ ಬಟ್ಟೆಕೊಡಿಸುತ್ತಿದ್ದೇನೆ. ಮಹಿಳೆಯರಿಗೆ ವರಲಕ್ಷ್ಮೀ ಹಬ್ಬಕ್ಕೆ ಸೀರೆ ಕೊಡಿಸುತ್ತಿದ್ದೇನೆ ” ಎಂದು ತಿಳಿಸಿದರು. ಚಿಕ್ಕಬಳ್ಳಾಪುರದ ಮಕ್ಕಳಿಗೆ ನೀಟ್‌ ತರಬೇತಿ ಕೇಂದ್ರ :  ಅದೇ ರೀತಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳಿಗೆ ನೀಟ್‌ ತರಬೇತಿ ನೀಡುತ್ತಿದ್ದು, ಈಗಾಗಲೇ ಸಾಕಷು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಬೇರೆ ಜಿಲ್ಲೆಗಳಿಂದ ಸಾಕಷ್ಟು ಮಂದಿ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಆದರೆ ಚಿಕ್ಕಬಳ್ಳಾಪುರ ಕ್ಷೇತ್ರದ ಮಕ್ಕಳಿಗಾಗಿ ಮಾತ್ರ ಈ ತರಬೇತಿ ಕೇಂದ್ರವನ್ನು ಸ್ಥಾಪಿಸುತ್ತಿದ್ದೇನೆ ಎಂದು ಹೇಳಿದರು. ನಮಸ್ತೆ ಚಿಕ್ಕಬಳ್ಳಾಪುರ ಅಂಗವಾಗಿ ಗ್ರಾಮಗಳಿಗೆ ಭೇಟಿ ನೀಡಿದ ವೇಳೆ ಸಾಕಷ್ಟು ಜನರು ಪಡಿತರ ಚೀಟಿ ಹಾಗೂ ಮೂಲಭೂತ ಸೌಲಭ್ಯಗಳನ್ನು ಕೇಳುತ್ತಿದ್ದಾರೆ.…

Read More

ಮಂಡ್ಯ: ತಡೆಗೋಡೆ ಇಲ್ಲದ ಪರಿಣಾಮ 2018ರಲ್ಲಿ ಖಾಸಗಿ ಬಸ್ಸೊಂದು ನಾಲೆಗೆ ಉರುಳಿ 30 ಜನರು ಮೃತರಾಗಿದ್ರು. ಘಟನೆಯಿಂದ ಎಚ್ಚೆತ್ತುಕೊಳ್ಳದ ಮಂಡ್ಯ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಮತ್ತೊಂದು ಕಾರು ನಾಲೆಗೆ ಉರುಳಿದ್ದು, ಚಾಲಕ ನಾಪತ್ತೆಯಾಗಿದ್ದಾನೆ. ಘಟನೆಯಿಂದ ಆಕ್ರೋಶಗೊಂಡಿರೋ ಸ್ಥಳೀಯ ಜನ್ರು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರ ಹಾಕ್ತಿದ್ದಾರೆ. ಈ ಕುರಿತ ಒಂದು ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ ನಾಲೆಯಲ್ಲಿ ಮುಳುಗಿದ್ದ ಕಾರನ್ನು ಕ್ರೇನ್ ಮೂಲಕ ಹೊರ ತೆಗೆಯುತ್ತಿರುವ ಅಗ್ನಿಶಾಮಕ ಸಿಬ್ಬಂದಿ… ನಾಪತ್ತೆಯಾಗಿರೋ ಚಾಲಕನಿಗಾಗಿ ಶೋಧ ನಡೆಸ್ತಿರೋ ಅಗ್ನಿಶಾಮಕ ಸಿಬ್ಬಂದಿ… ಸ್ಥಳದಲ್ಲಿ ಮುಗಿಲು ಮುಟ್ಟಿದ ನಾಪತ್ತೆಯಾಗಿರುವ ಚಾಲಕನ ಕುಟುಂಬಸ್ಥರ ಆಕ್ರಂಧನ… ಜಿಲ್ಲಾಡಳಿತ, ಜನಪ್ರತಿನಿಧಿಗಳು, ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡು, ಆಕ್ರೋಶ ಹೊರ ಹಾಕ್ತಿರೋ ಸ್ಥಳೀಯರು… ಈ ಎಲ್ಲಾ ದೃಶ್ಯ ಕಂಡು ಬಂದಿದ್ದು ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ… ಈ ಫೋಟೋದಲ್ಲಿರೋ ವ್ಯಕ್ತಿ ಹೆಸರು ಲೋಕೇಶ್ ಅಂತಾ. ಮಂಡ್ಯ ತಾಲೂಕಿನ ಶಿವಳ್ಳಿ ಗ್ರಾಮದ ನಿವಾಸಿ. ಸ್ನೇಹಿತರಿಂದ ಕಾರು ಪಡೆದು ಕೆಲಸ ನಿಮಿತ್ತ…

Read More

ಬೆಂಗಳೂರು ;– ನಮ್ಮ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ದಂಧೆ ನಡೆದಿಲ್ಲ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ‌ಇಲಾಖೆಯಲ್ಲಿ ಟ್ರಾನ್ಸಫರ್ ದಂಧೆ ನಡೆದಿಲ್ಲ, ನಡೆಯುವುದಿಲ್ಲ. ಪಾರದರ್ಶಕ ಮತ್ತು ಪ್ರಾಮಾಣಿಕವಾಗಿ ಎಲ್ಲರ ಸಮ್ಮುಖದಲ್ಲಿ ನಾನು ಮಂತ್ರಿಯಾಗಿ ಚುರುಕು ಮುಟ್ಟಿಸುವಂತ ಕೆಲಸ ಮಾಡುತ್ತಿದ್ದೇನೆ ಎಂದರು. ವಿವಿಧ ಇಲಾಖೆಗೆ ಸಂಬಂಧಿಸಿದ ಶಾಸಕರಿಗೆ ಅನುದಾನ ಸಿಗುತ್ತಿಲ್ಲ ಎಂದು ಬಿ.ಆರ್. ಪಾಟೀಲ್ ಪತ್ರ ಬರೆದಿದ್ದಾರೆ ಎನ್ನಲಾದ ಬಗ್ಗೆ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಆ ಪತ್ರವನ್ನು ಬಿಜೆಪಿಯವರು ತಿರುಚಿ ಕಟ್ ಅಂಡ್ ಪೇಸ್ಟ್ ಮಾಡಿ ಆಯಡ್ ಮಾಡಿದ್ದಾರೆ ಎಂದು ಕಾನೂನು ಕ್ರಮ ತೆಗೆದುಕೊಳ್ಳಲು ದೂರು ಕೊಟ್ಟಿದ್ದಾರೆ ಎಂದು ಸಮರ್ಥಿಸಿಕೊಂಡರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಸಭೆ ಕೂಡಾ ಕರೆಯಲಾಗಿದೆ. ನಮ್ಮ‌ ಸರ್ಕಾರ 2,000 ಕೋಟಿ ರೂ. ಜೊತೆಗೆ 3,000 ಕೋಟಿ ರೂ. ಅನುದಾನ‌ ಕೊಟ್ಟಿದೆ. ಒಟ್ಟು 5,000 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಸಚಿವರು ಇದೇ ವೇಳೆ ತಿಳಿಸಿದರು. ಬಳಿಕ ಉಡುಪಿ ಕಾಲೇಜು…

Read More

ಬೆಂಗಳೂರು ;- ಗರಿಷ್ಠ ಒಂದು ವರ್ಷದ ಮಿತಿಯಲ್ಲಿ ವಿಚ್ಚೇದನ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ. ಮನುಷ್ಯ ಜೀವನದ ಅಲ್ಪಾವಧಿ ಗಮನದಲ್ಲಿಟ್ಟುಕೊಂಡು ವೈವಾಹಿಕ ಪ್ರಕರಣಗಳ ವಿಲೇವಾರಿಯನ್ನು ಯುದ್ದೋಪಾದಿಯಲ್ಲಿ ಕೈಗೊಳ್ಳಬೇಕಿದೆ. ಈ ರೀತಿ ಕೌಟುಂಬಿಕ ಪ್ರಕರಣಗಳು ವಿಲೇವಾರಿಯಲ್ಲಿ ವಿಳಂಬವಾದಲ್ಲಿ ಎರಡೂ ಕುಟುಂಬಗಳ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಪೀಠ ತಿಳಿಸಿದೆ. ಲೈಫ್ ಈಸ್ ಟೂ ಶಾರ್ಟ್ ಟು ಬಿ ಲಿಟ್ಲ್ (ಬದುಕು ತೀರಾ ಚಿಕ್ಕದು) ಎಂಬ ಆಂಗ್ಲ ಇತಿಹಾಸಕಾರರೊಬ್ಬರ ಹೇಳಿಕೆಯನ್ನು ಆದೇಶದಲ್ಲಿ ಉಲ್ಲೇಖಿಸಿರುವ ನ್ಯಾಯಮೂರ್ತಿಗಳು, ಮದುವೆಯ ವಿಸರ್ಜನೆ ಅಥವಾ ಅನೂರ್ಜಿತತೆ ಬಯಸುವ ವೈವಾಹಿಕ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಗರಿಷ್ಠ ಒಂದು ವರ್ಷದ ಮಿತಿಯೊಳಗೆ ವಿಲೇವಾರಿಗೊಳಿಸುವ ಎಲ್ಲ ಪ್ರಯತ್ನಗಳನ್ನು ಕೌಟುಂಬಿಕ ಅಥವಾ ವಿಚಾರಣಾ ನ್ಯಾಯಾಲಯಗಳು ಮಾಡಬೇಕೆಂದು ಆದೇಶದಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು ;– ಪ್ರಸ್ತುತ ಜೆಡಿಎಸ್ ಅಸ್ತಿತ್ವ ಕ‌ಳೆದುಕೊಳ್ಳುತ್ತಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಿಡಿಒ ವರ್ಗಾವಣೆ ಸಂಬಂಧ ಹೆಚ್.ಡಿ. ರೇವಣ್ಣ ಬಳಿ ಯಾವ ಪೆನ್ ಡ್ರೈವ್ ಇದೆಯೋ ಅದನ್ನು ಕೊಡಲಿ” ಎಂದರು. ರೇವಣ್ಣ ಬಹಳ ಹುಷಾರು ಅನ್ಕೊಂಡಿದ್ದೆ. ಹೌದು, ನೇರವಾಗಿ ಪಿಡಿಒ ವರ್ಗಾವಣೆ ಸರ್ಕಾರದ ಮಟ್ಟದಲ್ಲಿ ಆಗುತ್ತದೆ. ಪಿಡಿಒಗಳು ಈಗ ಸ್ಟೇಟ್ ಕೇಡರ್​ನಲ್ಲಿ ಬರುತ್ತಾರೆ. ಮೊದಲು ಸಿಇಒ ಹಾಗೂ ಕಮಿಷನರ್ ಹಂತದಲ್ಲಿ ಪಿಡಿಒ ಆಗುತ್ತಿತ್ತು. ಈ ಕುರಿತು ಡೀಲ್​ ಏನಾದ್ರೂ ನಡೆದಿದ್ದರೆ, ದಾಖಲೆ ಇದ್ದರೆ ಕೊಡಿ” ಎಂದರು. ”ವರ್ಗಾವಣೆ ಮಾಡಬೇಕು, ಕಾನೂನು ಪ್ರಕಾರವೇ ಅದು ಆಗುತ್ತೆ. ಪಿಡಿಒ ಅಸೋಸಿಯೇಷನ್ ಅವರನ್ನು ಕರೆದು ಕೇಳಲಿ. ರೇವಣ್ಣ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡ್ತಾರೆ. ಪ್ರಸ್ತುತ ಜೆಡಿಎಸ್ ಅಸ್ತಿತ್ವ ಕ‌ಳೆದುಕೊಳ್ಳುತ್ತಿದೆ. ಹೀಗಾಗಿ ಹೀಗೆಲ್ಲ ಮಾತನಾಡುತ್ತಾರೆ’ ಎಂದು ತಿರುಗೇಟು ನೀಡಿದರು.

Read More