ಬೆಂಗಳೂರು ;- ಪ್ರಿಯಕರನ ವಿರುದ್ಧ ಡೆತ್ ನೋಟ್ ಬರೆದಿಟ್ಟು ಮಾಡೆಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಜರುಗಿದೆ. ವಿದ್ಯಾಶ್ರೀ ಆತ್ಮಹತ್ಯೆಗೆ ಶರಣಾದ ಯುವತಿ. ಜುಲೈ 21 ರಂದು ಯುವತಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೈರಿಯಲ್ಲಿ ಅಕ್ಷಯ್ ಕುಮಾರ್ ಹೆಸರು ಬರೆದಿಟ್ಟಿದ್ದಾಳೆ. ಈ ಸಂಗತಿ ಪ್ರಾಥಮಿಕ ತನಿಖೆ ವೇಳೆ ಕಂಡು ಬಂದ ಹಿನ್ನೆಲೆ ಅಕ್ಷಯ್ ನನ್ನ ಪೊಲೀಸರು ಬಂಧಿಸಿದ್ದಾರೆ. ವಿದ್ಯಾಶ್ರೀ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಅಕ್ಷಯ್ ಬಸವೇಶ್ವರ ನಗರವೊಂದರಲ್ಲಿ ಜಿಮ್ ಟ್ರೈನರ್ ಆಗಿದ್ದ. 2021ರಲ್ಲಿ ಫೇಸ್ಬುಕ್ ಮುಖಾಂತರ ಇಬ್ಬರ ಪರಿಚಯವಾಗಿ ಕ್ರಮೇಣ ಪ್ರೀತಿಗೆ ತಿರುಗಿತ್ತು. ವಿದ್ಯಾಶ್ರೀ ಪ್ರವೃತ್ತಿಯಲ್ಲಿ ಮಾಡೆಲಿಂಗ್ ಆಗಿದ್ದರು. ಕಳೆದ ಎರಡು ವರ್ಷಗಳಿಂದ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಜೋಡಿ ಅನೋನ್ಯವಾಗಿತ್ತು. ಈ ನಡುವೆ ಅಕ್ಷಯ್ಗೆ ಹಣಕಾಸಿನ ಸಮಸ್ಯೆಯಾಗಿತ್ತು. ಇದಕ್ಕೆ ಸ್ಪಂದಿಸಿದ್ದ ಯುವತಿ ಹಂತ – ಹಂತವಾಗಿ 1.60 ಲಕ್ಷ ಹಣ ಕೊಟ್ಟಿದ್ದರು. ಕಾಲ ಕ್ರಮೇಣ ನೀಡಿದ ಹಣ ಕೇಳಿದರೆ ಮನ ಬಂದಂತೆ ಯುವತಿಗೆ ಬೈಯುತ್ತಿದ್ದ.…
Author: Prajatv Kannada
ಬಿಜೆಪಿ ಹಿರಿಯ ಶಾಸಕರು, ಹಾಗೂ ಮಾಜಿ ಮಂತ್ರಿಗಳಾದ ಸುನಿಲ್ ಕುಮಾರ್ ವಿರುದ್ದ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ಹಿರಿಯ ನಾಯಕರಾದ T A ಶರವಣ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹಿರಿಯ ಶಾಸಕರು, ಮಾಜಿ ಮಂತ್ರಿಗಳಾದ ಸುನಿಲ್ ಕುಮಾರ್ ಅವರು ಇತ್ತಿಚಿಗೆ ಜೆಡಿಎಸ್ ಬಗ್ಗೆ ತಿರಸ್ಕಾರ ಭಾವ ಬರುವ ರೀತಿ ಖಾಸಗಿ ಪತ್ರಿಕಾ ಸಂದರ್ಶನ ಮತ್ತು ಟ್ವಿಟರನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಕುರಿತು ಮಾತನಾಡಿದ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ಹಿರಿಯ ನಾಯಕರಾದ T A ಶರವಣ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ನಾಯಕತ್ವದ ಬಗ್ಗೆ ಮಾತಾಡಲು ಇವರು ಯಾರು? ಚುನಾವಣೆಯಲ್ಲಿ ಕಾಂಗ್ರೆಸ್ಗೆ ಶರಣಾದ ಬಿಜೆಪಿಯಲ್ಲಿ ನಾಯಕರು ಯಾರಿದ್ದಾರೆ?. ಇವರ ಯೋಗ್ಯತೆಗೆ ಸಮರ್ಥ ಪ್ರತಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಬಜೆಟ್ ಅಧಿವೇಶನ, ರಾಜ್ಯಪಾಲರ ಭಾಷಣ ಪ್ರತಿಪಕ್ಷ ನಾಯಕರೇ ಇಲ್ಲದೆ ನಡೆದು, ಸಂಸದೀಯ ಇತಿಹಾಸದಲ್ಲೇ ಕೆಟ್ಟ ಪರಂಪರೆಗೆ ನಾಂದಿ ಹಾಡಿದ ಪಕ್ಷ ಬಿಜೆಪಿ. ಇಂಥ ಪಕ್ಷದ ನಾಯಕರಿಗೆ ನಮ್ಮ ನಾಯಕರ ಬಗ್ಗೆ ಮಾತನಾಡುವ…
ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಗಳಲ್ಲಿ ಒಂದಾಗ ಗೃಹಜ್ಯೋತಿ ಸ್ಕೀಂ ಕೂಡ ಒಂದು . ಜುಲೈ ತಿಂಗಳ ಗೃಹಜ್ಯೋತಿ ಯೋಜನೆಗೆ ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದೆ. ಇಂದು ಅರ್ಜಿ ಸಲ್ಲಿಸದಿದ್ದರೆ ಜುಲೈ ತಿಂಗಳಲ್ಲಿ ಉಚಿತ ವಿದ್ಯುತ್ ಸೌಲಭ್ಯ ಸಿಗುವುದಿಲ್ಲ. ಜುಲೈ 27ರ ಒಳಗಾಗಿ ವಿದ್ಯುತ್ ಉಚಿತ ಪಡೆಯಲು ನೋಂದಣಿ ಮಾಡಬೇಕು. ಇದಕ್ಕಾಗಿ ಯಾವುದೇ ಕಾಲವಕಾಶದ ಮಿತಿ ಇಲ್ಲ. ಈವರೆಗೆ ಸುಮಾರು 1 ಕೋಟಿ 20 ಲಕ್ಷ ಜನರಿಂದ ನೋಂದಣಿ. ಮಾಡಿದ್ದಾರೆ. ಈ ಪೈಕಿ ಬೆಸ್ಕಾಂ ವ್ಯಾಪ್ತಿಯಲ್ಲಿ ಸುಮಾರು 50 ಲಕ್ಷ ಮಂದಿಯಿಂದ ನೋಂದಣಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಂದಹಾಗೆಯೇ, ಈ ತಿಂಗಳ ವಿದ್ಯುತ್ ಉಚಿತ ಪಡೆಯಲು ಇಂದು ಸಂಜೆಯೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಂದಾಜು ರಾಜ್ಯದಲ್ಲಿ 1 ಕೋಟಿ 22 ಲಕ್ಷ ಬಳಕೆದಾರರಿಗೆ ಮಾತ್ರ ಜುಲೈ ತಿಂಗಳ ವಿದ್ಯುತ್ ಉಚಿತ ಸಿಗಲಿದೆ. ನಾಳೆಯಿಂದ ಗೃಹಜ್ಯೋತಿಗೆ ನೋಂದಣಿ ಮಾಡಿದರೆ ಅಗಸ್ಟ್ ತಿಂಗಳ ವಿದ್ಯುತ್ ಉಚಿತವಾಗಿ ಲಭ್ಯವಾಗಲಿದೆ. ಜನರು ಸೆಪ್ಟೆಂಬರ್ ನಲ್ಲಿ ಬರುವ ಆಗಸ್ಟ್…
ಬೆಂಗಳೂರು: ಇತ್ತೀಚಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಫ್ಯಾಮಿಲಿ ಕೂಡ ವಿದೇಶ ಪ್ರವಾಸ ಕೈಗೊಂಡಿದೆ. ಹಾಗೆ ಇಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕುಟುಂಬ ಕೂಡ ವಿದೇಶ ಟ್ರಿಪ್ ಹೊರಟ್ಟಿದ್ದಾರೆ. ಕೆಂಪೇಗೌಡ ಏರ್ಪೋರ್ಟ್ನಿಂದ ತೆರಳಿರುವ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ ವಿಜಯೇಂದ್ರ ಒಂದು ವಾರಗಳ ಕಾಲ ದುಬೈನಲ್ಲಿ ಇರಲಿದ್ದಾರೆ ಎಂದು ಹೇಳಲಾಗ್ತಿದೆ. ಇಂದು ಮುಂಜಾನೆ 3.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬಿಎಸ್ವೈ ದುಬೈಗೆ ಪ್ರಯಾಣ ಬೆಳೆಸಿದ್ದಾರೆ. ಬಿ.ಎಸ್ ಯಡಿಯೂರಪ್ಪ ಅವರಿಗೆ ಶಾಸಕ ಬಿ.ವೈ ವಿಜಯೇಂದ್ರ ಹಾಗೂ ಬಿಎಸ್ವೈ ಆಪ್ತ ರುದ್ರೇಶ್ ಸಹ ಸಾಥ್ ನೀಡಿದ್ದಾರೆ.
ಕಾರವಾರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ದನದ ಕೊಟ್ಟಿಗೆಗೆ (Cowshed) ಬೆಂಕಿ ತಗುಲಿ 7 ಜಾನುವಾರುಗಳು ಸಜೀವ ದಹನಗೊಂಡ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಮುಂಡಗೋಡ ತಾಲೂಕಿನ ಹಳೂರಿನಲ್ಲಿ ನಡೆದಿದೆ. ಮಂಜುನಾಥ್ ಶೇಟ್ ಅವರಿಗೆ ಸೇರಿದ ಜಾನುವಾರುಗಳು ಇದಾಗಿದ್ದು ತಡ ರಾತ್ರಿ ಆಕಸ್ಮಿಕವಾಗಿ ಆದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕೊಟ್ಟಿಗೆಗೆ ಬೆಂಕಿ ತಗುಲಿ 4 ಆಕಳು, 3 ಕರುಗಳು ಸಾವನ್ನಪ್ಪಿವೆ. ಅಂದಾಜು 2.5 ಲಕ್ಷ ರೂ. ಮೌಲ್ಯದ ಜಾನುವಾರಗಳು ಇದಾಗಿತ್ತು ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಮನೆಯಿಂದ ಕೊಟ್ಟಿಗೆ ದೂರ ಇರುವುದರಿಂದಾಗಿ ಮನೆಯವರು ಬೆಂಕಿ ಅನಾಹುತದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ನಗರದ (Udupi) ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವೀಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಹುತಾತ್ಮರ ಸ್ಮಾರಕದ ಬಳಿ ಎಬಿವಿಪಿ (ABVP) ಇಂದು ಪ್ರತಿಭಟನೆ (Protest) ನಡೆಸಿದೆ. ಪ್ರಕರಣದ ವಿಚಾರವಾಗಿ ಸೂಕ್ತ ತನಿಖೆ ನಡೆಯಬೇಕು. ಅಲ್ಲದೇ ಸಂತ್ರಸ್ತ ವಿದ್ಯಾರ್ಥಿನಿಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಈ ವೇಳೆ ಮಳೆಯನ್ನೂ ಲೆಕ್ಕಿಸದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಎಸ್ಪಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು ಎಂದು ಪಟ್ಟು ಹಿಡಿದಿದ್ದು. ಸ್ಥಳಕ್ಕೆ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಭೇಟಿ ನೀಡಿದ್ದಾರೆ. ಈ ವೇಳೆ ಶಾಸಕ ಯಶ್ಪಾಲ್ ಸುವರ್ಣ ಅವರನ್ನು ಪೊಲೀಸರು ತಳ್ಳಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಮಾತನಾಡಿ, ವೀಡಿಯೋ ವಿವಾದಕ್ಕೆ ತಳುಕು ಹಾಕಿ ಬೇರೆ ವೀಡಿಯೋಗಳನ್ನು ವೈರಲ್ ಮಾಡುತ್ತಿದ್ದಾರೆ. ಈ ಪ್ರಕರಣದ ವೀಡಿಯೋ ವೈರಲ್ ಆಗಿಲ್ಲ. ಮೊಬೈಲ್ ಸಂಪೂರ್ಣ ಪರಿಶೀಲನೆ ಮಾಡಲಾಗಿದ್ದು, ಯಾವ ವೀಡಿಯೋಗಳು ಸಹ ಪತ್ತೆಯಾಗಿಲ್ಲ. ಬೇರೆ…
ತುಮಕೂರು: ಉಡುಪಿ ಮಹಿಳಾ ಕಾಲೇಜಿನ ಹಾಸ್ಟೆಲ್ ನ ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟಿದ್ದ ಪ್ರಕರಣವನ್ನು ಖಂಡಿಸಿ ಡಿಸಿ ಕಚೇರಿ ಎದುರು ತುಮಕೂರಿನ ಬಿಜೆಪಿ ಮಹಿಳಾ ಮೊರ್ಚಾ ಹಾಗೂ ಬಿಜೆಪಿ ನಾಯಕರಿಂದ ಪ್ರತಿಭಟನೆ ನಡೆಸಿದರು. ಪ್ರಕರಣವನ್ನ ಮುಚ್ಚಿ ಹಾಕಲು ಕಾಂಗ್ರೆಸ್ ಯತ್ನ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಇದುವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಕೂಡಲೇ ತಪ್ಪಿತಸ್ಥರಿಗೆ ಶಿಕ್ಷೆ ಆಗ್ಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ
ಉಡುಪಿ: ಉಡುಪಿ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಖಾಸಗಿ ವಿಡಿಯೋ ಸೆರೆ ಪ್ರಕರಣದಲ್ಲಿ ಈವರೆಗೂ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಈ ಪ್ರಕರಣಕ್ಕೆ ಕೋಮುಬಣ್ಣ ಬಳಿಯಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಖುಷ್ಬೂ ಸುಂದರ್ ತಿಳಿಸಿದರು. ಪ್ರಕರಣದ ತನಿಖೆಗೆಂದು ರಾಷ್ಟ್ರೀಯ ಮಹಿಳಾ ಆಯೋಗ ಮುಂದಾಗಿದೆ. ಅದರ ಭಾಗವಾಗಿ ನಟಿ ಹಾಗೂ ಆಯೋಗದ ದಕ್ಷಿಣ ಭಾರತದ ಮಹಿಳಾ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಭೇಟಿ ನೀಡಿ ಅಲ್ಲಿನ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪೊಲೀಸರು ಕಳೆದ ಎರಡು ದಿನದ ತನಿಖೆಯ ಹಾಗೂ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಖುಷ್ಬೂ ಸುಂದರ್ ಅವರು, ” ಖಾಸಗಿ ವಿಡಿಯೋ ಮಾಡಿದ್ದಾರೆ ಎನ್ನಲಾದ ಆರೋಪಿತ ಮೂವರು ವಿದ್ಯಾರ್ಥಿನಿಯರ ಮೊಬೈಲ್ನಲ್ಲಿ ಯಾವುದೇ ವಿಡಿಯೋ ಕಂಡು ಬಂದಿಲ್ಲ. ಸಂಬಂಧಪಟ್ಟ ಮೊಬೈಲ್ಗಳನ್ನು ಪೊಲೀಸರು ವಶಕ್ಕೆ ಪಡೆದು ಪರೀಕ್ಷೆ ಮಾಡಿದ್ದು, ಏನು ಪತ್ತೆಯಾಗಿಲ್ಲ. ಮೂರು ಮೊಬೈಲ್ಗಳ ಡೇಟಾ ಸಂಗ್ರಹ ಮಾಡಿದ್ದಾರೆ. ಜತೆಗೆ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮೊಬೈಲ್…
ತುಮಕೂರು ;- ಮತ್ತೊಮ್ಮೆ ಬಡ ವ್ಯಕ್ತಿಗೆ ಉಚಿತ ಆಪರೇಷನ್ ಮಾಡಿ ಕುಣಿಗಲ್ ಶಾಸಕ ಡಾ.ರಂಗನಾಥ್ ಅವರು ಮಾನವೀಯತೆ ಮೆರೆದಿದ್ದಾರೆ. ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿದ್ದ ವ್ಯಕ್ತಿಗೆ ಫ್ರೀ ಆಪರೇಷನ್ ಮಾಡಿ ಡಾ.ರಂಗನಾಥ್ ಮಾದರಿ ಆಗಿದ್ದಾರೆ. ಚಿಕಿತ್ಸೆಗೆ ಹಣವಿಲ್ಲದೆ ಸಹಾಯ ಕೋರಿ ಶಿವನಂಜಯ್ಯ ಅವರು ಶಾಸಕರ ಬಳಿ ಬಂದಿದ್ದರು. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡವಾಣಿ ಗ್ರಾಮದ ಶಿವನಂಜಯ್ಯ ಅವರು, ಹಲವಾರು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದರು. ಆದರೆ ಅವರ ಬಳಿ ಚಿಕಿತ್ಸೆಗೆ ಹಣವಿರಲಿಲ್ಲ. ಹೀಗಾಗಿ ಚಿಕಿತ್ಸೆಗೆ ಸಹಾಯ ಮಾಡುವಂತೆ ಕೋರಿ ಶಾಸಕರ ಬಳಿ ಶಿವನಂಜಯ್ಯ ಹೋಗಿದ್ದ. ಬಡ ವ್ಯಕ್ತಿಯ ಮನವಿಗೆ ತಕ್ಷಣವೇ ಶಾಸಕರು ಸ್ಪಂದಿಸಿದರು. ಸ್ವತಃ ವೈದ್ಯರಾಗಿರೋ ಡಾ. ರಂಗನಾಥ್ ಅವರು, ತಾವೇ ಖುದ್ದು ಆಪರೇಷನ್ ಮಾಡಲು ಮುಂದಾದರು. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇನ್ನೂ ಈ ಹಿಂದೆಯೂ ಕೂಡ ಬಡ ಮಹಿಳೆಯೊಬ್ಬಳಿಗೆ ಉಚಿತ ಶಸ್ತ್ರಚಿಕಿತ್ಸೆ ಮಾಡಿ ರಂಗನಾಥ್ ಅವರು ಮಾದರಿ ಆಗಿದ್ದರು.
ಉಡುಪಿ: ವೈದ್ಯ ವಿದ್ಯಾರ್ಥಿನಿಯೊಬ್ಬಳು ಸ್ನಾನ ಮಾಡುವುದನ್ನು ಆಕೆಯ ಮಹಿಳಾ ಸಹಪಾಠಿಗಳೇ ಚಿತ್ರೀಕರಣ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಬಿಜೆಪಿ ಮುಗಿಬಿದ್ದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸರಕಾರ ಮತ್ತು ಪೊಲೀಸ್ ಇಲಾಖೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಹಾದಿ ಮನಸ್ಥಿತಿಯ ವಿರುದ್ಧ ನಮ್ಮ ಹೋರಾಟ ಯಾವ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಲ್ಲದೆ ಸರಕಾರ ಬೆದರಿಕೆ ನೀತಿಯನ್ನು ಮುಂದುವರಿಸಿದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರು, “ಉಡುಪಿಯ ನಮ್ಮ ಶಾಸಕರಾದ ಯಶ್ ಪಾಲ್ ಸುವರ್ಣ ಅವರು ರಶ್ಮಿ ಸಾಮಂತ್ ಅವರ ಮನೆಯವರನ್ನು ಭೇಟಿಯಾಗಿದ್ದಾರೆ. ಅವರ ಕುಟುಂಬದ ಜೊತೆಗೆ ನಾವಿದ್ದೇವೆ. ರಶ್ಮಿ ಸಾವಂತ್ ಮತ್ತು ಶೆಪಾಲಿ ವೈದ್ಯ ಅವರು ಯಾವ ಕಾರಣಕ್ಕೂ ಧೈರ್ಯಗೆಡುವ ಅಗತ್ಯವಿಲ್ಲ ನಿಮ್ಮ ಬೆನ್ನಿಗೆ ನಾವಿದ್ದೇವೆ. ಸರ್ಕಾರದ ಈ ಜಿಹಾದಿ ಮನಸ್ಥಿತಿಯ ವಿರುದ್ಧ ನಮ್ಮ ಹೋರಾಟ ಯಾವ ಕಾರಣಕ್ಕೂ ನಿಲ್ಲುವುದಿಲ್ಲ” ಎಂದಿದ್ದಾರೆ. “ಉಡುಪಿಯ ಕಾಲೇಜಿನಲ್ಲಿ…