ಸೂರ್ಯೋದಯ: 06.04 AM, ಸೂರ್ಯಾಸ್ತ : 06.48 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಅದಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ವರ್ಷ ಋತು, ತಿಥಿ: ಇವತ್ತು ನವಮಿ 03:47 PM ತನಕ ನಂತರ ದಶಮಿ ನಕ್ಷತ್ರ: ಇವತ್ತು ಸ್ವಾತಿ 01:10 AM ತನಕ ನಂತರ ವಿಶಾಖ ಯೋಗ: ಇವತ್ತು ಶುಭ 01:39 PM ತನಕ ನಂತರ ಶುಕ್ಲ ಕರಣ: ಇವತ್ತು ಬಾಲವ 03:56 AM ತನಕ ನಂತರ ಕೌಲವ 03:47 PM ತನಕ ನಂತರ ತೈತಲೆ ರಾಹು ಕಾಲ: 01:30 ನಿಂದ 03:00 ವರೆಗೂ ಯಮಗಂಡ: 06:00 ನಿಂದ 07:30 ವರೆಗೂ ಗುಳಿಕ ಕಾಲ: 09:00 ನಿಂದ 10:30 ವರೆಗೂ ಅಮೃತಕಾಲ: 04.34 PM to 06.11 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:57 ನಿಂದ ಮ.12:48 ವರೆಗೂ ಮೇಷ: ಸಂಗಾತಿ ಜೊತೆ ಪುನರ್ಮಿಲನೆಯ ದಿನ,ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ,ವಿವಾಹ ಸಮಸ್ಯೆಗಳಿಗೆ ಬಂಧುಗಳ ನೆರವಿನಿಂದ ಪರಿಹಾರ,…
Author: Prajatv Kannada
ಬೆಂಗಳೂರು: ಆತಿಥೇಯ ವೆಸ್ಟ್ ಇಂಡೀಸ್ ಎದುರು ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಲ್ಲಿ ಪೈಪೋಟಿ ನಡೆಸಲಿದೆ. ಈ ಸರಣಿಯ ಮೊದಲ ಎರಡೂ ಪಂದ್ಯಗಳು ಬ್ರಿಡ್ಜ್ ಟೌನ್ನಲ್ಲಿರುವ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಇಂದು ಜುಲೈ 27 ಮತ್ತು 29ರಂದು ನಡೆಯಲಿದೆ. ಸದ್ಯದಲ್ಲೇ ನಡೆಯೋ 2023 ಐಸಿಸಿ ಏಕದಿನ ವಿಶ್ವಕಪ್ ದೃಷ್ಟಿಕೋನದಿಂದ ಈ ಟೂರ್ನಿ ಮಹತ್ವದ್ದಾಗಿದೆ. ಇನ್ನೊಂದೆಡೆ ವಿಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಕ್ಯಾಪ್ಟನ್ ರೋಹಿತ್ ಶರ್ಮಾ ಹೊಸ ದಾಖಲೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ 13 ಸಾವಿರ ರನ್ ಪೂರೈಸಲು ಕೊಹ್ಲಿಗೆ ಕೇವಲ 102 ರನ್ ಬೇಕು. ಒಂದು ವೇಳೆ ಕೊಹ್ಲಿ 102 ರನ್ ಗಳಿಸಿ 13 ಸಾವಿರ ರನ್ ಪೂರೈಸಿದರೆ ಕೊಹ್ಲಿ ಮತ್ತೊಂದು ದಾಖಲೆ ಸೃಷ್ಟಿಸಲಿದ್ದಾರೆ. 13 ಸಾವಿರಕ್ಕೂ ಹೆಚ್ಚು ರನ್ ಪೂರೈಸಿದ ವಿಶ್ವದ 5ನೇ ಮತ್ತು ಸಚಿನ್ ನಂತರ ಭಾರತದ 2ನೇ ಬ್ಯಾಟರ್ ಆಗಲಿದ್ದಾರೆ. ಸಚಿನ್ 321 ಇನ್ನಿಂಗ್ಸ್ಗಳಲ್ಲಿ 13,000…
ಟ್ರಿನಿಡಾಡ್ (ವೆಸ್ಟ್ ಇಂಡೀಸ್): ಭಾರತ ತಂಡದ ಯುವ ವಿಕೆಟ್ ಕೀಪರ್ ಇಶಾನ್ ಕಿಶನ್ ಇಲ್ಲಿನ ಫೋರ್ಟ್ ಆಫ್ ಸ್ಪೇನ್ ಕ್ವೀನ್ಸ್ ಪಾರ್ಕ್ನಲ್ಲಿ ನಡೆದಿದ್ದ ಎರಡನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಟಿ20 ಮಾದರಿಯ ರೀತಿ ಬ್ಯಾಟ್ ಬೀಸಿ ಕೇವಲ 34 ಎಸೆತಗಳಲ್ಲಿ ಅಜೇಯ 52 ರನ್ ಬಾರಿಸಿದರು. ತಮ್ಮ ಬ್ಯಾಟಿಂಗ್ ಯಶಸ್ಸಿಗೆ ನಾಯಕ ರೋಹಿತ್ ಶರ್ಮಾ ನೀಡಿದ ಸಲಹೆಯೇ ಕಾರಣ ಎಂದು ಇಶಾನ್ ಕಿಶನ್ ಹೇಳಿಕೊಂಡಿದ್ದಾರೆ. ಎರಡನೇ ಟೆಸ್ಟ್ ನಾಲ್ಕನೇ ದಿನ ವಿರಾಟ್ ಕೊಹ್ಲಿ ಅವರ ನಾಲ್ಕನೇ ಕ್ರಮಾಂಕದಲ್ಲಿ ಬಡ್ತಿ ಪಡೆದು ಬ್ಯಾಟ್ ಬೀಸಿದ ಇಶಾನ್ ಕಿಶನ್, ಸಿಡಿಲಬ್ಬರದ ಆಟದಿಂದ ಚೊಚ್ಚಲ ಟೆಸ್ಟ್ ಅರ್ಧಶತಕ (52* ರನ್) ಸಿಡಿಸಿದರು. ಆ ಮೂಲಕ ಭಾರತ ತಂಡ 181 ರನ್ ಕಲೆ ಹಾಕಲು ನೆರವು ನೀಡಿದ್ದರು. ಆ ಮೂಲಕ ಟೀಮ್ ಇಂಡಿಯಾ ಎದುರಾಳಿ ವೆಸ್ಟ್ ಇಂಡೀಸ್ಗೆ 365 ಕಠಿಣ ರನ್ ಗುರಿ ನೀಡಿತ್ತು. ಆದರೆ, ಮಳೆಯಿಂದ ಪಂದ್ಯದ ಐದನೇ ದಿನ ಸಂಪೂರ್ಣ ಬಲಿಯಾಯಿತು. ಮೊದಲ ಪಂದ್ಯದ…
ತೆಲುಗು ಸಿನಿಮಾ ರಂಗದ ಖ್ಯಾತ ನಟ ಚಿರಂಜೀವಿ ಇತ್ತೀಚೆಗಷ್ಟೇ ಪತ್ನಿಯೊಂದಿಗೆ ವಿಮಾನದಲ್ಲಿ ಪ್ರಯಾಣಿಸಿದ್ದರು. ಆ ಫೋಟೋಗಳನ್ನು ಚಿರಂಜೀವಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ವಿರಾಮ ಬಯಸಿ ಅವರು ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಸಲಿ ಸುದ್ದಿ ಈಗ ಹೊರ ಬಿದ್ದಿದೆ. ಮೆಗಾಸ್ಟಾರ್ ಚಿರಂಜೀವಿ ಪತ್ನಿಯೊಂದಿಗೆ ಪ್ರಯಾಣ ಬೆಳೆಸಿದ್ದು ಅಮೆರಿಕಾಗೆ ಎಂದು ಹೇಳಲಾಗುತ್ತಿದೆ. ಅಮೆರಿಕಾದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿರಂಜೀವಿ ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಅದಕ್ಕಾಗಿ ಪತ್ನಿಯೊಂದಿಗೆ ಅಮೆರಿಕಾಗೆ ತೆರಳಿದ್ದರು ಎನ್ನಲಾಗುತ್ತಿದೆ. ಭೋಲಾ ಶಂಕರ್ ಸಿನಿಮಾದ ಶೂಟಿಂಗ್ ಮುಗಿಯುತ್ತಿದ್ದಂತೆಯೇ ಅಮೆರಿಕಾಗೆ ಹಾರಿದ್ದರು ಚಿರಂಜೀವಿ. ಕಾಲಿನಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ಪಡೆಯಲಾಗಿತ್ತು. ಸಣ್ಣದೊಂದು ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದರು. ಅದರಂತೆ ಚಿರಂಜೀವಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರಂತೆ. ಈವರೆಗೂ ಈ ವಿಷಯವನ್ನು ಗೌಪ್ಯವಾಗಿ ಇಡಲಾಗಿತ್ತು. ಆದರೆ, ಆಪ್ತರು ಈ ಮಾಹಿತಿಯನ್ನು ಹಂಚಿಕೊಂಡಿದ್ದರಿಂದ ಅದು ದೊಡ್ಡ ಸುದ್ದಿಯಾಗಿದೆ. ಈಗಾಗಲೇ ಶಸ್ತ್ರ ಚಿಕಿತ್ಸೆ ನಡೆದಿದ್ದು, ಆತಂಕ ಪಡುವಂತಹ ಅಗತ್ಯವಿಲ್ಲ ಎಂದು…
ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾದಲ್ಲಿ ದೊಡ್ಡ ತರಾಬಳಗವೇ ಇದೆ. ಈಗಾಗಲೇ ಚಿತ್ರದಲ್ಲಿ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ನಟಿಸಿರುವ ಕುರಿತು ಚಿತ್ರತಂಡ ಮಾಹಿತಿ ಹಂಚಿಕೊಂಡಿದ್ದು ಕಳೆದ ಎರಡು ದಿನಗಳ ಹಿಂದೆ ಸೇತುಪತಿ ಅವರ ಲುಕ್ ಕೂಡ ರಿವೀಲ್ ಮಾಡಲಾಗಿತ್ತು. ಇದೀಗ ಚಿತ್ರದಲ್ಲಿ ತಮಿಳಿನ ಮತ್ತೋರ್ವ ಸ್ಟಾರ್ ನಟ ಇರಲಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಜವಾನ್ ಸಿನಿಮಾದಲ್ಲಿ ದಳಪತಿ ವಿಜಯ್ ಕೂಡ ಇದ್ದಾರೆ ಎನ್ನುವ ಮಾಹಿತಿ ಹೊರ ಬಿದ್ದಿದೆ. ಈ ಸಿನಿಮಾದಲ್ಲಿ ಅವರದ್ದು ಅತಿಥಿ ಪಾತ್ರವಾಗಿದ್ದು, ಯಾವ ರೀತಿಯ ಪಾತ್ರ ಎನ್ನುವುದನ್ನು ಚಿತ್ರತಂಡ ಬಹಿರಂಗ ಪಡಿಸಿಲ್ಲ. ‘ಜವಾನ್’ ಸಿನಿಮಾದ ಬಗ್ಗೆ ದಿನದಿಂದ ದಿನಕ್ಕೆ ನಿರೀಕ್ಷೆ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ವಿಜಯ್ ಸೇತುಪತಿ ಲುಕ್ ಶೇರ್ ಮಾಡಿದ್ದ ಶಾರುಖ್ ‘ಸಾವಿನ ವ್ಯಾಪಾರಿ’ ಎಂದು ಬಣ್ಣಿಸಿದ್ದರು. ಜವಾನ್ ಚಿತ್ರದ ಮೂಲಕ ಶಾರುಖ್ ಹಾಗೂ ಸೇತುಪತಿ ಇದೇ ಮೊದಲ ಬಾರಿಗೆ ಮುಖಾಮುಖಿಯಾಗಲಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ‘ಜವಾನ್’ ಚಿತ್ರದ ಪ್ರಿವ್ಯೂನಲ್ಲಿ ವಿಜಯ್ ಸೇತುಪತಿ ಅವರ ಝಲಕ್…
ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟು ಬಳಿಕ ಟಾಲಿವುಡ್ ನಲ್ಲಿ ಮಿಂಚಿ ಸದ್ಯ ಬಾಲಿವುಡ್ ನಲ್ಲಿ ಬ್ಯುಸಿಯಾಗಿರುವ ನಟಿ ಸಿನಿಮಾಗಳ ಜೊತೆ ಜೊತೆಗೆ ತಮ್ಮ ಪರ್ಸನಲ್ ವಿಷಯದಲ್ಲೂ ಸಖತ್ ಸದ್ದು ಮಾಡುತ್ತಿರುತ್ತಾರೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಸಾಕಷ್ಟು ಸಮಯದಿಂದ ಹರಿದಾಡುತ್ತಿದೆ. ಇದೀಗ ನೆಟ್ಟಿಗರು ಈ ಜೋಡಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಬಿಟ್ಟಿದ್ದಾರೆ. ತೆಲುಗಿನ ‘ಗೀತಾ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ನಟಿಸಿದ್ದು ಸಿನಿಮಾ ಸೂರ್ ಹಿಟ್ ಆಗಿತ್ತು. ಆ ಬಳಿಕ ಡಿಯರ್ ಕಾರ್ಮೆಡ್ ಚಿತ್ರದಲ್ಲೂ ಜೋಡಿ ಹಕ್ಕಿಗಳು ಒಟ್ಟಾಗಿ ನಟಿಸಿತ್ತು. ಆ ಬಳಿಕ ಇಬ್ಬರ ಮಧ್ಯೆ ಸಮ್ ಥಿಂಗ್ ಸಮ್ ಥಿಂಗ್ ಇದೆ ಎಂದು ಹೇಳಲಾಗುತ್ತಿತ್ತು. ಜೊತೆಗೆ ವಿಜಯ್ ಕುಟುಂಬದ ಜೊತೆಗೂ ರಶ್ಮಿಕಾಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಇತ್ತೀಚಿಗೆ ವಿಜಯ್ ತಮ್ಮ ಆನಂದ್ ದೇವರಕೊಂಡ ನಟನೆಯ ಬೇಬಿ ಸಿನಿಮಾ ನಟಿ…
ತಮನ್ನಾ ಸಖತ್ತಾಗೆ ಸ್ಟೆಪ್ ಹಾಕಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ನ ‘ಜೈಲರ್’ ಸಿನಿಮಾದ ಕಾವಾಲಾ ಹಾಡು ಇಡೀ ದೇಶದ ಡಾನ್ಸ್ ಪ್ರೇಮಿಗಳ ಮನಸ್ಸು ಗೆದಿತ್ತು. ಈ ಹಾಡಿಗೆ ಸಾಕಷ್ಟು ಮಂದಿ ರೀಲ್ಸ್ ಮಾಡಿದ್ದು, ತಮಿಳಿನಲ್ಲಿ ರಿಲೀಸ್ ಆಗಿದ್ದ ಈ ಹಾಡನ್ನು ಇದೀಗ ತೆಲುಗು ಭಾಷೆಯಲ್ಲೂ ತಯಾರು ಮಾಡಲಾಗಿತ್ತು. ಆ ಹಾಡಿನ ಬಿಡುಗಡೆ ಕಾರ್ಯಕ್ರಮವನ್ನು ಹೈದರಾಬಾದ್ ನಲ್ಲಿ ಆಯೋಜಿಸಲಾಗಿತ್ತು. ಆದರೆ ಅದಕ್ಕೀಗ ವರುಣ ಬ್ರೇಕ್ ಹಾಕಿದ್ದಾನೆ. ಕಾವಾಲಾ ಹಾಡಿನ ಬಿಡುಗಡೆಗಾಗಿ ತಮನ್ನಾ ಸೇರಿದಂತೆ ಚಿತ್ರತಂಡದ ಹಲವು ಸದಸ್ಯರು ಹೈದರಾಬಾದ್ ಗೆ ಆಗಮಿಸಿದ್ದರು. ರಜನಿಕಾಂತ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದ ಮಾಹಿತಿ ಕೂಡ ಸಿಕ್ಕಿತ್ತು. ಆದರೆ ಹೈದರಾಬಾದ್ ನಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಕ್ಯಾನ್ಸಲ್ ಆಗಿದೆ. ಈ ಮಾಹಿತಿಯನ್ನು ಸ್ವತಃ ಚಿತ್ರತಂಡವೇ ಹಂಚಿಕೊಂಡಿದೆ. ಕಾವಾಲಾ ತೆಲುಗು ಹಾಡನ್ನು ಕೇಳಲು ನೀವೆಲ್ಲ ಉತ್ಸುಕರಾಗಿದ್ದೀರಿ ಎನ್ನುವುದನ್ನು ನಾವು ಬಲ್ಲೆವು. ಆದರೆ, ಮಳೆಯ ಕಾರಣದಿಂದಾಗಿ ಈ ಕಾರ್ಯಕ್ರಮವನ್ನು ರದ್ದುಗೊಳಿಸುವುದು ಅನಿವಾರ್ಯವಾಗಿದೆ. ಹಾಗಂತ…
ಮಳೆಗಾಲದಲ್ಲಿ ಆಹಾರ ಕ್ರಮದ ಕಡೆ ತುಂಬಾನೇ ಗಮನಹರಿಸಬೇಕು, ಇಲ್ಲದಿದ್ದರೆ ಮಳೆಗಾಲ ಕಳೆಯುವಷ್ಟರಲ್ಲಿ ನಮ್ಮ ಮೈ ತೂಕ ಹೆಚ್ಚಾಗಿರುತ್ತದೆ ಹಾಗೆ ಇನ್ನು ಮಧುಮೇಹಿಗಳು, ಕೊಲೆಸ್ಟ್ರಾಲ್ ಇರುವವರು ಮಳೆಗಾಲದಲ್ಲಿ ಆಹಾರಕ್ರಮದ ಕಡೆಗೆ ಹೆಚ್ಚಿನ ಗಮನಹರಿಸಬೇಕು ಇಲ್ಲದಿದ್ರೆ ಆರೋಗ್ಯ ಕೆಡೋದು ಗ್ಯಾರಂಟಿ. ಹಾಗಾಗಿ ಇಲ್ಲಿದೆ ನೋಡಿ ಏನು ಸವಿದರೆ ಒಳ್ಳೆಯದು ಅಂತಾ! ಮಳೆಗಾಲದಲ್ಲಿ ನಿಮ್ಮ ಆರೋಗ್ಯ ಕಾಪಾಡಲು ಮಟ್ಟಾ ರೈಸ್ ಅಥವಾ ಕೆಂಪಕ್ಕಿ ಅನ್ನ ತುಂಬಾನೇ ಸಹಕಾರಿಯಾಗಿದೆ ನೋಡಿ. ಮಧುಮೇಹ ನಿಯಂತ್ರಣದಲ್ಲಿಡಬೇಕು, ಫಿಟ್ನೆಸ್ ಕಾಪಾಡಬೇಕೆಂದು ಬಯಸುವವರಿಗೆ ಈ ಮಟ್ಟಾ ರೈಸ್ ತುಂಬಾನೇ ಪ್ರಯೋಜನಕಾರಿ. ಮಟ್ಟಾ ರೈಸ್ನಲ್ಲಿ ಪೋಷಕಾಂಶ ಅಧಿಕವಿದೆ: ಇದನ್ನು ಪಾಲಿಷ್ ಮಾಡಿರುವುದಿಲ್ಲ, ಇದರಲ್ಲಿ ನಾರಿನಂಶ ಅಧಿಕವಿರುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಇದರಲ್ಲಿ ಖನಿಜಾಂಶ, ವಿಟಮಿನ್ಸ್ ಇದ್ದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಗ್ಲುಟೇನ್ ಫ್ರೀ : ಇದರಲ್ಲಿ ಗ್ಲುಟೀನ್ ಅಂಶ ಇರುವುದಿಲ್ಲ. ಗ್ಲುಟೀನ್ ಫ್ರೀ ಆಹಾರ ಮಧುಮೇಹಿಗಳಿಗೆ ತುಂಬಾನೇ ಒಳ್ಳೆಯದು. ಇದರ ಸೇವನೆಯಿಂದ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಇದು ತುಂಬಾನೇ ಸಹಕಾರಿಯಾಗಿದೆ. ಮೆಗ್ನಿಷ್ಯಿಯಂ ಅತ್ಯಧಿಕವಿದೆ’ : ಮೆಗ್ನಿಷ್ಯಿಯಂ…
ಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಯಾಕೆಂದರೆ ಈ ಮಾನ್ಸೂನ್ ಸಂದರ್ಭದಲ್ಲಿ ಮಕ್ಕಳ ಬಗ್ಗೆ ಜಾಗರೂಕತೆ ವಹಿಸದಿದ್ದರೆ ಅನಾರೋಗ್ಯಕ್ಕೆ ತುತ್ತಾಗುವುದು ಹೆಚ್ಚು. ಹೀಗಾಗಿ ಮಕ್ಕಳ ಆರೋಗ್ಯ ಕಾಳಜಿ ಮಾಡಬೇಕು. . ಹೌದು, ಮಳೆಗಾಲ ಸಾಮಾನ್ಯವಾಗಿ ಜೂನ್ ತಿಂಗಳಿಂದ ತುಂತುರು ಮಳೆಯ ಆಗಮನವಾಗುತ್ತಿದೆ. ನಾವು ಸಮಯದಲ್ಲಿ ಆರೋಗ್ಯದ ಕಾಳಜಿ ಹೇಗೆ ಮಾಡಬೇಕು ಈ ಸಮಯದಲ್ಲಿ ನಮ್ಮ ಆಹಾರದಲ್ಲಿ ಯಾವೆಲ್ಲಾ ಬದಲಾವಣೆ ಮಾಡಿಕೊಳ್ಳಬೇಕು ಎಂಬುವುದಕ್ಕೆ ಇಲ್ಲಿದೆ ಉತ್ತರ.. ಹಾಗಿದ್ರೆ ಏನೆಲ್ಲಾ ತಿನ್ನಬಾರದು..? ಮಳೆಗಾಲದಲ್ಲಿ ಬೀದಿ ಬದಿಯ ಅಂಗಡಿಗಳಲ್ಲಿ ಮತ್ತು ಹೊಟೇಲ್ಗಳಲ್ಲಿ ತಿನ್ನುವುದನ್ನು ಕಡಿಮೆ ಮಾಡಿ ಏಕೆಂದರೆ, ಮಳೆಗಾಲದಲ್ಲಿ ವೈರಸ್, ಬ್ಯಾಕ್ಟೀರಿಯಾ ಮತ್ತು ಇತರ ರೋಗಕಾರಕಗಳು ನಮ್ಮನ್ನು ಮುತ್ತಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ನಾವು ಈ ಕಾಲದಲ್ಲಿ ಆಹಾರ ಪದಾರ್ಥಗಳನ್ನು ಶುದ್ಧವಾಗಿ ತೊಳೆದು ತಯಾರಿ ಮಾಡಿದ ಆಹಾರದ ಸೇವನೆಯನ್ನು ಮಾಡಬೇಕು. ಏನನ್ನು ಕಡಿಮೆ ಮಾಡಬೇಕು? ಮಾಂಸ, ಮೊಟ್ಟೆ ಮತ್ತು ಮೀನು ಇತ್ಯಾದಿಗಳ ಜೊತೆ ಜೊತೆಗೆ ಈರುಳ್ಳಿ ಮತ್ತು ಬೆಳ್ಳುಳ್ಳಿಯ ಸೇವನೆಯನ್ನು ಕೂಡ ಆದಷ್ಟು…
ಮಹಿಳೆಯರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಹೊಟ್ಟೆ ನೋವಿಗೆ ಹಲವಾರು ಕಾರಣಗಳು ಇರುವುದು. ಇದು ಒಬ್ಬರಿಂದ ಮತ್ತೊಬ್ಬರಿಗೆ ಭಿನ್ನವಾಗಿ ಇರುವುದು ಮಾತ್ರವಲ್ಲದೆ, ನೋವು ಲಘು ಪ್ರಮಾಣದಿಂದ ತೀವ್ರವಾಗಿ ಇರುವುದು. ಮತ್ತೆ ಅನೇಕ ಬಾರಿ ಮನೆ ಮದ್ದಿನಿಂದ ಕಡಿಮೆಯಾಗುತ್ತದೆ. ಆದ್ರೆ ಕೆಲವೊಮ್ಮೆ ತೀವ್ರವಾದ ಹೊಟ್ಟೆ ನೋವು ಇದ್ದಕ್ಕಿದ್ದಂತೆ ಕಾಣಿಸಿಕೊಳ್ಳುತ್ತದೆ. ಯಾವುದೇ ಮನೆ ಮದ್ದು ಇದಕ್ಕೆ ನಾಟುವುದಿಲ್ಲ. ಹೊಟ್ಟೆ ನೋವು ತಡೆಯಲಾರದೆ ಬಿದ್ದು ಉಳ್ಳಾಡುವವರಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ವೈದ್ಯರನ್ನು ಭೇಟಿಯಾಗುವುದು ಅನಿವಾರ್ಯವಾಗುತ್ತದೆ. ಇದಲ್ಲೆ ಮುಟ್ಟಿನ ಸಮಸ್ಯೆ, ಗರ್ಭಾವಸ್ಥೆ, ಅಂಡಾಶಯದಲ್ಲಿನ ಚೀಲಗಳ ಕಾರಣದಿಂದ ಇದು ಸಂಭವಿಸುತ್ತದೆ. ಮಹಿಳೆಯರಲ್ಲಿ ಕಾಡುವ ವಿಪರೀತ ಹೊಟ್ಟೆ ನೋವಿಗೆ ಕಾರಣವೇನು ಎಂಬುದನ್ನು ನಾವಿಂದು ಹೇಳ್ತೇವೆ. ಮಹಿಳೆಯರಲ್ಲಿ ಕಾಡುವ ಹೊಟ್ಟೆ ನೋವಿಗೆ ಕಾರಣಗಳು : ಅಜೀರ್ಣದಿಂದ ಹೊಟ್ಟೆ ನೋವು : ಕೆಲವೊಮ್ಮೆ ಹೊಟ್ಟೆಯ ಮೇಲ್ಭಾಗದಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಆಹಾರ ಸೇವನೆ ಮಾಡಿದ ನಂತ್ರ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಇವು ಅಜೀರ್ಣದ ಲಕ್ಷಣವಾಗಿದೆ. ಅಜೀರ್ಣ ಸಮಸ್ಯೆಯಿಂದ ತೊಂದರೆಗೀಡಾಗಿದ್ದರೆ, ಹೊಟ್ಟೆಯ ಮೇಲ್ಭಾಗದಲ್ಲಿ ಉರಿ, ನೋವು ಅಥವಾ ಉಬ್ಬರ ಕಾಣಿಸಿಕೊಳ್ಳುತ್ತದೆ. ಊಟದ ನಂತ್ರ ವಾಕರಿಕೆ ಬಂದಂತೆ ಆಗುತ್ತದೆ. ಕೊಬ್ಬಿನ ಆಹಾರಗಳ ಸೇವನೆ, ಧೂಮಪಾನ,…