Author: Prajatv Kannada

ನ್ಯೂಯಾರ್ಕ್: ಅಮೆರಿಕದ ಖ್ಯಾತ ಬಾಸ್ಕೆಟ್ಬಾಲ್ ಆಟಗಾರ, ಎನ್ಬಿಎ ಸೂಪರ್ ಸ್ಟಾರ್ ಲೆಬ್ರಾನ್ನ ಪುತ್ರ ಬ್ರಾನಿ ಜೇಮ್ಸ್ ಬಾಸ್ಕೆಟ್ಬಾಲ್ ತರಬೇತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಹೃದಯ ಸ್ಥಂಭನದಿಂದ ಕುಸಿದು ಬಿದ್ದಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಟ್ವೀಟ್ ಮಾಡಿರುವ ಟ್ವಿಟರ್ ಸಂಸ್ಥೆಯ ಮಾಲಕ ಎಲಾನ್ ಮಸ್ಕ್, ಕೋವಿಡ್ ಲಸಿಕೆಯ ಅಡ್ಡಪರಿಣಾಮ ಇದಕ್ಕೆ ಕಾರಣವಾಗಿರಬಹುದು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. `ನಾವು ಲಸಿಕೆಗೆ ಎಲ್ಲವನ್ನೂ ಆರೋಪಿಸಲು ಸಾಧ್ಯವಿಲ್ಲ, ಆದರೆ ಇದೇ ವೇಳೆ ಏನನ್ನೂ ಆರೋಪಿಸದಿರಲೂ ಸಾಧ್ಯವಿಲ್ಲ. ಮಯೊಕಾರ್ಡಿಟಿಸ್ ಎಂಬುದು ತಿಳಿದಿರುವ ಅಡ್ಡಪರಿಣಾಮವಾಗಿದೆ. ಮಸ್ಕ್ ಹೇಳಿಕೆಗೆ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಲಸಿಕೆಗಳ ಬಗ್ಗೆ ಆಧಾರವಿಲ್ಲದ ಮತ್ತು ಪಿತೂರಿ ಸಿದ್ಧಾಂತಗಳನ್ನು ಹರಡಲು ಮಸ್ಕ್ ತನ್ನ ವೇದಿಕೆಯನ್ನು ಬಳಸಿಕೊಂಡಿದ್ದಾರೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ದಕ್ಷಿಣ ಕ್ಯಾಲಿಫೋರ್ನಿಯಾದ ವಿವಿಯಲ್ಲಿ ಬಾಸ್ಕೆಟ್ಬಾಲ್ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿದ್ದ 18 ವರ್ಷದ ಜೇಮ್ಸ್ ಹೃದಯಸ್ಥಂಭನಕ್ಕೆ ಒಳಗಾದರು. ತಕ್ಷಣ ಆತನನ್ನು ಆಸ್ಪತ್ರೆಗೆ…

Read More

ಲಾಹೋರ್‌: ‘ಕಿವಿ ಕೇಳಿಸದ ಭಾರತದ ವ್ಯಕ್ತಿಯೋರ್ವ ಸಟ್ಲೆಜ್‌ ನದಿಯಲ್ಲಿ ಉಂಟಾದ ಪ್ರವಾಹದಿಂದಾಗಿ ದೇಶಕ್ಕೆ ಕೊಚ್ಚಿಕೊಂಡು ಬಂದಿದ್ದು, ಆತನನ್ನು ಗುಪ್ತಚರ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ ಎಂದು ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಅಧಿಕಾರಿಗಳು ತಿಳಿಸಿದ್ದಾರೆ. ‘ಸುಮಾರು 50 ವರ್ಷದ ಈ ವ್ಯಕ್ತಿ ಪಂಜಾಬ್‌ ಪ್ರಾಂತ್ಯದ ಕಸೂರ್‌ ಜಿಲ್ಲೆಯ ಗಂದಾ ಸಿಂಗ್‌ ವಾಲಾ ಎಂಬ ಹಳ್ಳಿಯಲ್ಲಿ ಪತ್ತೆಯಾಗಿದ್ದಾರೆ. ಸಂಕೇತ ಭಾಷೆಯ ಮೂಲಕ ಮಾತ್ರವೇ ಆತನೊಂದಿಗೆ ಸಂವಹಿಸಬಹುದಾಗಿದ್ದು, ತಾನೊಬ್ಬ ಹಿಂದೂ ಹಾಗೂ ಪ್ರವಾಹವು ತನ್ನನ್ನು ಇಲ್ಲಿಯವರೆಗೆ ಸೆಳೆದುಕೊಂಡು ಬಂದಿತು ಎಂದು ಆತ ಹೇಳಿದ್ದಾನೆ’ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದರು. ವೈದ್ಯಕೀಯ ಪರೀಕ್ಷೆಯ ಬಳಿಕ ಆತನನ್ನು ಗುಪ್ತಚರ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ: ನಟ ಕೆವಿನ್‌ ಸ್ಪೇಸಿ ದೋಷಮುಕ್ತ..!

Read More

ಲಂಡನ್‌: ಲೈಂಗಿಕ ದೌರ್ಜನ್ಯ ಮೊಕದ್ದಮೆಯೊಂದರಲ್ಲಿ ಸಿಲುಕಿದ್ದ ಅಮೆರಿಕ ನಟ ಕೆವಿನ್‌ ಸ್ಪೇಸಿ ಅವರನ್ನು ಬ್ರಿಟನ್‌ ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಆಸ್ಕರ್‌ ಪ್ರಶಸ್ತಿ ಪುರಸ್ಕೃತ ನಟ ಕೆವಿನ್‌ ಅವರು 2001ರಿಂದ 2013ರ ಅವಧಿಯಲ್ಲಿ ನಾಲ್ವರು ಪುರುಷರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಒಂಬತ್ತು ಪ್ರಕರಣಗಳು ದಾಖಲಾಗಿದ್ದವು. 12 ಗಂಟೆಗಳ ಕಾಲ ಸುದೀರ್ಘ ವಿಚಾರಣೆ ಬಳಿಕ ಲಂಡನ್‌ ನ್ಯಾಯಾಲಯವೊಂದು ಅವರನ್ನು ದೋಷಮುಕ್ತಗೊಳಿಸಿದೆ. ಇದನ್ನೂ ಓದಿ : ಇನ್ಮುಂದೆ ರಷ್ಯಾದಲ್ಲಿ ಲಿಂಗ ಬದಲಾವಣೆಗೆ ಅವಕಾಶವಿಲ್ಲ..!

Read More

ಮಾಸ್ಕೋ: ರಷ್ಯಾ ದೇಶದಲ್ಲಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿಸುವುದನ್ನು ನಿಷೇಧಿಸುವ ಕಾನೂನಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಸಹಿ ಹಾಕಿದ್ದಾರೆ. ಲಿಂಗ ಪರಿವರ್ತನೆಗೆ ಸಂಬಂಧಿಸಿದ ವೈದ್ಯಕೀಯ ಚಿಕಿತ್ಸೆಗಳನ್ನು ಕಾನೂನು ಬಾಹಿರಗೊಳಿಸುವ ಕಾನೂನಿಗೆ ಇದು ಪೂರಕವಾಗಿದೆ. ಮಕ್ಕಳ ಅಸಮರ್ಪಕ ಬೆಳವಣಿಗೆ ಮತ್ತು ಜನ್ಮ ದೋಷಗಳನ್ನು ಪರಿಹರಿಸಲು ಬಳಸುವ ವೈದ್ಯಕೀಯ ವಿಧಾನಗಳಿಗೆ ನಿರ್ಬಂಧವು ಅನ್ವಯಿಸುವುದಿಲ್ಲ. ಹಾಗೆಯೇ ಲೈಂಗಿಕ ವ್ಯತ್ಯಾಸದ ಬಾಲ್ಯದ ಅಸ್ವಸ್ಥತೆಗಳಿಗೆ ಸಂಬಂಧಿಸಿದ ಆನುವಂಶಿಕ ಮತ್ತು ಅಂತಃಸ್ರಾವಕ ಸಮಸ್ಯೆಗಳಿಗೆ ಅನ್ವಯಿಸುವುದಿಲ್ಲ ಎಂದು ರಷ್ಯಾದ ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿದೆ. ಕಾನೂನಿನ ಮುಖ್ಯ ಗುರಿಯು, ರಷ್ಯಾ ಸಮಾಜದ ಸಾಂವಿಧಾನಿಕ ನೈತಿಕ ತತ್ವಗಳು ಮತ್ತು ಕೌಟುಂಬಿಕ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು. ದೇಶದ ಜನರ ಆರೋಗ್ಯವನ್ನು, ಅದರಲ್ಲೂ ವಿಶೇಷವಾಗಿ ಮಕ್ಕಳ ಆರೋಗ್ಯವನ್ನು ಕಾಪಾಡುವುದಾಗಿದೆ. ಈ ಕಾನೂನು ಅಂಗೀಕಾರವಾದ ದಿನದಿಂದಲೇ ಜಾರಿಗೆ ಬರುತ್ತದೆ. ಈಗಾಗಲೇ ಲಿಂಗ ಬದಲಾಯಿಸಿಕೊಂಡಿರುವವರಿಗೆ ಈ ಕಾನೂನು ಅನ್ವಯವಾಗುವುದಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಇದನ್ನೂ ಓದಿ : ಅವಳಿ ಹೆಣ್ಣು ಮಕ್ಕಳ ಪ್ರಾಣ ತೆಗೆದ ಪಾಪಿ ತಾಯಿ..! 13…

Read More

ಹರಿಯಾಣ: ಕೆಟ್ಟ ಮಕ್ಕಳಿರಬಹುದು, ಆದರೆ ಕೆಟ್ಟ ತಾಯಿ(Bad mother) ಎಂದೂ ಇರಲಾರಳು ಎಂಬ ಮಾತಿದೆ. ಆದರೆ ಇಲ್ಲೊಬ್ಬಳು ತಾಯಿ ಇದಕ್ಕೆ ತದ್ವಿರುದ್ಧವಾಗಿದ್ದಾಳೆ. ಬಹುಶಃ ಈಕೆಯನ್ನೂ ಯಾರೂ ಕೂಡ ಕ್ಷಮಿಸಲಾರರು.  ಹರಿಯಾಣದ ದನೋಡಾ ಗ್ರಾಮದಲ್ಲಿ ಪಾಪಿ ತಾಯಿಯೊಬ್ಬಳು ತನ್ನ ಅವಳಿ ಹೆಣ್ಣು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ. ಶೀತಲ್ ಮಕ್ಕಳನ್ನು ಹತ್ಯೆಗೈದ ತಾಯಿಯಾಗಿದ್ದಾಳೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿತ ತಾಯಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಪತಿ ನೀಡಿದ ದೂರಿನ ಆಧಾರದ ಮೇಲೆ ಮಹಿಳೆಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದರು ಘಟನೆ ನಡೆದ 13 ದಿನಗಳ ಬಳಿಕ ಮಹಿಳೆ ಅಪರಾಧವನ್ನು ಒಪ್ಪಿಕೊಂಡಿದ್ದಾಳೆ. ಕೆಲಸದ ನಿಮಿತ್ತ ಜುಲೈ.12ರಂದು ಹೊಲಕ್ಕೆ ಹೋಗಿದ್ದೆ. ಮಧ್ಯಾಹ್ನ ಮನೆಗೆ ಬಂದಾಗ ಮನೆಯ ಹೊರಗೆ ದೊಡ್ಡ ಸಂಖ್ಯೆಯಲ್ಲಿ ಜನರು ನಿಂತಿದ್ದರು. ಮನೆಯೊಳಗೆ ಹೋದಾಗ ಅವಳಿ ಮಕ್ಕಳಾದ ಜಾನಕಿ ಮತ್ತು ಜಾನ್ವಿ ಇದ್ದಕ್ಕಿದ್ದಂತೆ ಮೃತಪಟ್ಟಿರುವುದಾಗಿ ಶೀತಲ್ ಹೇಳಿದಳು. ಆಕೆಯ ಮಾತನ್ನು ನಂಬಿ ಮಕ್ಕಳ ಮರಣೋತ್ತರ ಪರೀಕ್ಷೆ ನಡೆಸದೆ ಸಮಾಧಿ ಮಾಡಲಾಗಿತ್ತು ಎಂದು ವ್ಯಕ್ತಿ ದೂರಿನಲ್ಲಿ ಹೇಳಿಕೊಂಡಿದ್ದಾರೆ. ಮಹಿಳೆ ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ಪೊಲೀಸರು…

Read More

ಮಣಿಪುರ: ಮಣಿಪುರದಲ್ಲಿ ಹಿಂಸಾಚಾರ ಮಾತ್ರವಲ್ಲ, ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ, ಅತ್ಯಾಚಾರ ಪ್ರಕರಣವೂ ನಿಲ್ಲೋ ಹಾಗೆ ಕಾಣ್ತಿಲ್ಲ. ಇತ್ತೀಚೆಗಷ್ಟೇ, ಇಬ್ಬರು ಮಹಿಳೆಯರನ್ನು ಬೆತ್ತಲೆ ಪರೇಡ್‌ ಆಡಿಸಿರೋ ವೈರಲ್‌ ಹೊರಬಂದಿತ್ತು. ಈ ಬಳಿಕ ಅನೇಕ ಲೈಂಗಿಕ ಕಿರುಕುಳ, ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ ಎಂದು ಹೇಳಲಾಗ್ತಿದೆ. ಈ ಬೆನ್ನಲ್ಲೇ, ಬಿಎಸ್‌ಎಫ್‌ ಯೋಧರೊಬ್ಬರು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ಬಹಿರಂಗವಾಗಿದ್ದು, ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿದೆ. ಕಳೆದ ವಾರ ಜನಾಂಗೀಯ ಕಲಹ ಪೀಡಿತ ಮಣಿಪುರದ ದಿನಸಿ ಅಂಗಡಿಯೊಂದರಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ದೃಶ್ಯ ಕ್ಯಾಮರಾ ಕಣ್ಣಿಗೆ ಸೆರೆಸಿಕ್ಕಿದೆ. ಈ ಸಂಬಂಧ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಹೆಡ್ ಕಾನ್‌ಸ್ಟೆಬಲ್‌ನನ್ನು ಗಡಿ ಕಾವಲು ಪಡೆ ಅಮಾನತುಗೊಳಿಸಿದೆ. ಹಾಗೂ, ಆರೋಪಿ ಯೋಧನ ವಿರುದ್ಧ ಪ್ರಕರಣ ದಾಖಲಾಗಿದೆ. ಅಂಗಡಿಯೊಳಗಿನ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳು, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು. ಸಮವಸ್ತ್ರದಲ್ಲಿರುವ ಮತ್ತು INSAS ರೈಫಲ್ ಇಟ್ಟುಕೊಂಡಿದ್ದ ವ್ಯಕ್ತಿಯನ್ನು ತೋರಿಸಿದೆ.  ನಂತರ  ಇವರನ್ನು ಹೆಡ್ ಕಾನ್‌ಸ್ಟೆಬಲ್ ಸತೀಶ್ ಪ್ರಸಾದ್ ಎಂದು ಗುರುತಿಸಲಾಗಿದೆ. ಇವರು ಮಹಿಳೆಯನ್ನು ಅಸಹ್ಯವಾಗಿ ಮುಟ್ಟಿದ್ದು, ಲೈಂಗಿಕ ದೌರ್ಜನ್ಯ ನೀಡಿದ್ದಾರೆ. ಈ ಸಂಬಂಧ ಮಾಹಿತಿ ನೀಡಿದ ಹಿರಿಯ ಅಧಿಕಾರಿಯೊಬ್ಬರು “ಇಂಫಾಲ್‌ನಲ್ಲಿ ಜುಲೈ 20 ರಂದು ಪೆಟ್ರೋಲ್ ಪಂಪ್ ಬಳಿಯ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು ಹೆಡ್ ಕಾನ್‌ಸ್ಟೆಬಲ್ ಸತೀಶ್ ಪ್ರಸಾದ್ ಎಂದು ಗುರುತಿಸಲಾಗಿದೆ. ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ಇಂದು ರಾಜಸ್ಥಾನ, ಗುಜರಾತ್​ ಪ್ರವಾಸ ಕೈಗೊಂಡ PM ಮೋದಿ

Read More

ನವದೆಹಲಿ;- ಇಂದು ಬೆಳಗ್ಗೆ ರಾಜಸ್ಥಾನದ ಸಿಕಾರ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಶಂಕುಸ್ಥಾಪನೆ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. ಸಲ್ಫರ್ ಲೇಪಿತ ಯೂರಿಯಾದ ಹೊಸ ವಿಧವಾದ ಯೂರಿಯಾ ಗೋಲ್ಡ್ ಅನ್ನು ಬಿಡುಗಡೆ ಮಾಡುವಾಗ ಮೋದಿ 1 ಲಕ್ಷ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಭೇಟಿಯ ಸಮಯದಲ್ಲಿ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಸುಮಾರು 17,000 ಕೋಟಿ ರೂಪಾಯಿಗಳ 14 ನೇ ಕಂತು ಮೊತ್ತವನ್ನು 8.5 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ನೇರ ವರ್ಗಾವಣೆ ಮಾಡಲಿದ್ದಾರೆ. ರಾಜಸ್ಥಾನಕ್ಕೆ ಭೇಟಿ ನೀಡಿದ ನಂತರ, ಮೋದಿ ಅವರು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ, ಅಲ್ಲಿ ಅವರು ರಾಜ್‌ಕೋಟ್‌ನಲ್ಲಿ ಹೊಸದಾಗಿ ನಿರ್ಮಿಸಲಾದ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಮತ್ತು 860 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ : ಬಳಸುವ ಮುನ್ನ ಎಚ್ಚರ..! ಡ್ರಗ್ ನೀಡಿ ಯುವತಿ ಮೇಲೆ ಅತ್ಯಾಚಾರ

Read More

ನವದೆಹಲಿ: ಡೇಟಿಂಗ್ ಆ್ಯಪ್‌ನಲ್ಲಿ (Dating App) ಪರಿಚಯವಾದ ವ್ಯಕ್ತಿಯೊಬ್ಬ ಮತ್ತೊಬ್ಬ ಯುವಕನೊಂದಿಗೆ ಸೇರಿ ಯುವತಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿ ಮತ್ತು ಬರುವ ಆಹಾರ ನೀಡಿ ಬಳಿಕ ಅತ್ಯಾಚಾರ (Rape) ಎಸಗಿರುವ ಘಟನೆ ದೆಹಲಿಯ (Delhi) ಸೆಕ್ಟರ್ 50 (Sector 50) ಪ್ರದೇಶದಲ್ಲಿ ನಡೆದಿದೆ. ಯುವತಿ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ವ್ಯಕ್ತಿ ಆಕೆಯನ್ನು ಜೂನ್ 29ರಂದು ಹೋಟೆಲ್‌ಗೆ ಬರುವಂತೆ ಹೇಳಿದ್ದ. ಅಲ್ಲಿ ಆಕೆಗೆ ಇಬ್ಬರು ಪುರುಷರು ತಿನ್ನಲು ಆಹಾರ ನೀಡಿದ್ದು, ಅದನ್ನು ಸೇವಿಸಿದ ಬಳಿಕ ಆಕೆ ಪ್ರಜ್ಞೆ ಕಳೆದುಕೊಂಡಿದ್ದಾಗಿ ತಿಳಿಸಿದ್ದಾಳೆ. ತನ್ನ ಪ್ರಜ್ಞಾಹೀನ ಸ್ಥಿತಿಯ ಲಾಭ ಪಡೆದು ಅತ್ಯಾಚಾರ ಎಸಗಿದ್ದಾರೆ. ಮಾತ್ರವಲ್ಲದೆ ಕೃತ್ಯದ ವೀಡಿಯೋವನ್ನು ಕೂಡಾ ಮಾಡಿದ್ದಾರೆ. ತನಗೆ ಪ್ರಜ್ಞೆ ಬಂದ ಬಳಿಕ ನಡೆದ ಘಟನೆ ತಿಳಿದು ವಿರೋಧ ವ್ಯಕ್ತಪಡಿಸಿದ್ದಾಳೆ. ಆದರೆ ಆರೋಪಿಗಳು ತನ್ನ ವೀಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾಗಿ ಆರೋಪಿಸಿದ್ದಾಳೆ. ಯುವತಿ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದು ಪೊಲೀಸರಿಗೆ ದೂರು ನೀಡಿದ್ದಾಳೆ. ಘಟನೆ ಬಗ್ಗೆ ಸೆಕ್ಟರ್ 50…

Read More

ಬಿಜಾಪುರ: ನಗರದ ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿ ಹಾಗೂ ರಾಜ್ಯದ ಇತರ ಕಡೆ ನಡೆದ ಗಲಭೆಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ವಾಪಸ್‌ ಪಡೆಯಲು ರಾಜ್ಯ ಸರಕಾರ ಮುಂದಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಆರೋಪಿಸಿದ್ದಾರೆ. ಈ ಕುರಿತು ಶಾಸಕ ಯತ್ನಾಳ್‌ ಟ್ವೀಟ್‌ ಮಾಡಿದ್ದಾರೆ. ” ಮೈಸೂರು ಶಾಸಕ ತನ್ವೀರ್‌ ಸೇಠ್‌ ಅವರು ಗೃಹ ಸಚಿವರಿಗೆ ಪ್ರಕರಣಗಳನ್ನು ಹಿಂಪಡೆಯಲು ಮನವಿ ಸಲ್ಲಿಸಿದ್ದರು. ಅದರ ಆಧಾರದಲ್ಲಿಕ್ರಮ ಕೈಗೊಳ್ಳಲು ಗೃಹ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಆರೋಪಿಗಳಲ್ಲಿ ಪೋಲೀಸರ ವಿರುದ್ಧ ಕಲ್ಲುತೂರಿರುವವರು, ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದವರು ಹಾಗು ಗಲಭೆ ನಡೆಸಿದವರು ಇದ್ದಾರೆ ” ಎಂದಿದ್ದಾರೆ. ಪಿಎಫ್‌ಐ ಕೇಸ್‌ ವಾಪಸ್‌ ಪಡೆದು ಅಶಾಂತಿ ಟ್ವೀಟ್‌ನಲ್ಲಿ ಮುಂದುವರೆದು, ” ಹಿಂದೆ ಇವರದ್ದೇ ಸರಕಾರ ಇದ್ದಾಗ ಪಿಎಫ್‌ ಕಾರ್ಯಕರ್ತರ ವಿರುದ್ಧದ ಕೇಸುಗಳನ್ನು ವಾಪಸ್‌ ಪಡೆದು ರಾಜ್ಯದಲ್ಲಿ ಅಶಾಂತಿ ವಾತಾವರಣ ನಿರ್ಮಾಣ ಮಾಡಲು ಪ್ರಚೋದನೆ ನೀಡಿದ್ದರು. ಯಾರದ್ದೋ ಕೃಪೆಯಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ…

Read More

ಉಡುಪಿ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮರಾ ಇಟ್ಟು ಚಿತ್ರಗಳನ್ನು ತೆಗೆಯುವುದು ಹೇಯ ಕೃತ್ಯ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿರುವ  ವಿದ್ಯಾರ್ಥಿನಿಯ ವಿರುದ್ದವೇ ತನಿಖೆ ಮಾಡುವ ರೀತಿ ಪೊಲೀಸರು ನಡೆದುಕೊಳ್ಳುತ್ತಿದ್ದು, ಅವರು ಯಾರ ಅಣತಿಯಂತೆ ನಡೆಯುತ್ತಿದ್ದಾರೆ. ಪೊಲಿಸರು ಅಧಿಕಾರಸ್ಥರ ಒತ್ತಡಕ್ಕೆ ಮಣಿಯುತ್ತಿದ್ದಾರೆ ಎಂದು ಆರೋಪಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊಬೈಲ್ ವಿಡಿಯೊಗಳನ್ನು ಸೀಜ್ ಮಾಡಬೇಕು. ಅದೇನು ದೊಡ್ಡ ಪ್ರಕರಣ ಅಲ್ಲ ಅಂತ ಗೃಹ ಸಚಿವರು ಹೇಳುತ್ತಿದ್ದಾರೆ. ಕಾಲೇಜಿನಲ್ಲಿಯೇ ಮುಗಿದಿಲ್ಲ. ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದಾರೆ.‌ ಸುಮ್ಮನೇ  ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಯಿತಾ ? ಸುಮ್ಮನೇ ವಿದ್ಯಾರ್ಥಿಗಳು ತಪ್ಪೊಪ್ಪಿಗೆ ನೀಡಿದ್ದಾರಾ ? ಏನೂ ಇಲ್ಲದೆ ಕಾಲೇಜಿನವರು ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದಾರಾ ?  ಅವರ ಮೇಲೆ ಪ್ರಕರಣ ದಾಖಲಿಸಲು ತಪ್ಪೊಪ್ಪಿಗೆ ಒಂದೇ ಸಾಕು ಎಂದು ಹೇಳಿದರು. ಈ ಪ್ರಕರಣದಲ್ಲಿ ಏನೂ ಇಲ್ಲ ಎಂದು ಹೇಳುವುದಾದರೆ, ಪೊಲಿಸರಿಂದ ರಕ್ಷಣೆ ಸಿಗುವುದಿಲ್ಲ ಎನ್ನುವ ಭಾವನೆ…

Read More