Author: Prajatv Kannada

ಬಾಗಲಕೋಟೆ: ಸಿಂಗಾಪುರದಲ್ಲಿ ಆಪರೇಷನ್​ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರ ‘ಬಿಜೆಪಿಯವರು ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರುವವರಲ್ಲ, ಅಡ್ಡದಾರಿ ಹಿಡಿದು ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆಂದು ಬಾಗಲಕೋಟೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಜನರು ತಿರಸ್ಕರಿಸಿದರೂ ಅವರ ಪ್ರಯತ್ನ ‌ನಡೆದಿರಬೇಕು ಎಂದಿದ್ದಾರೆ. ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಭಿನ್ನಾಭಿಪ್ರಾಯ ಇದೆ ಎನ್ನುವುದು ಸತ್ಯ. ಡಿ. ಕೆ. ಶಿವಕುಮಾರ್ ಸರ್ಕಾರದ ಅಸ್ಥಿರತೆಯ ಬಗ್ಗೆ ಎರಡು ಬಾರಿ ಬಹಿರಂಗವಾಗಿ ಹೇಳಿಕೆ ನೀಡಿದರೂ ಸಿಎಂಗೆ ಮಾಹಿತಿ ಇಲ್ಲ ಎಂದರೆ ಇಬ್ಬರ ನಡುವೆ ಹೊಂದಾಣಿಕೆ ಇಲ್ಲ ಅಂತ ಅರ್ಥ ಎಂದು ಅಭಿಪ್ರಾಯ ಪಟ್ಟರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಜೈನ ಮುನಿ ಹತ್ಯೆಯಿಂದ ಹಿಡಿದು ನಿತ್ಯ ಕೊಲೆ ನಡೆಯುತ್ತಿವೆ. ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದೆ. ನ್ಯಾಯಾಧೀಶರಿಗೆ ಅಂತಾರಾಷ್ಟ್ರೀಯ ಮಟ್ಟದ ಕೊಲೆ ಬೆದರಿಕೆ ಬರುತ್ತಿದೆ. ನ್ಯಾಯಾಧೀಶರಿಗೆ ರಕ್ಷಣೆ ಇಲ್ಲದಿದ್ದರೆ ಬೇರೆಯವರಿಗೆ ಹೇಗೆ ರಕ್ಷಣೆ ನೀಡುತ್ತಾರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ : ನಿರಂತರ ಮಳೆ…

Read More

ದಾವಣಗೆರೆ : ನಿರಂತರ ಮಳೆ ಸುರಿಯುತ್ತಿರುವ ಮಳೆಯಿಂದಾಗಿ  ಮನೆ ಗೋಡೆ ಕುಸಿದು ಎಳೆ ಕಂದಮ್ಮ ದಾರುಣ ಸಾವಿಗೀಡಾಗಿರುವ ಘಟನೆ ದಾವಣಗೆರೆಯಲ್ಲಿ  ನಡೆದಿದೆ. ಮನೆಯೊಂದರ ಗೋಡೆ ಕುಸಿದ ಪರಿಣಾಮ 1 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹರಿಹರ ತಾಲೂಕಿನ ಕುಂಬಳೂರಿನಲ್ಲಿ ನಡೆದಿದೆ. ಕುಂಬಳೂರಿನ ಲಕ್ಷ್ಮಿ ಹಾಗೂ ಕೆಂಚಪ್ಪ ದಂಪತಿಯ ಪುತ್ರಿ ಸ್ಪೂರ್ತಿ ಮನೆಯ ಗೋಡೆ ಕುಸಿದು ಅದರಡಿ ಸಿಲುಕಿ ದಾರುಣ ಅಂತ್ಯ ಕಂಡ ಕಂದಮ್ಮ. ಕಳೆದ 4-5 ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದಿದೆ. ತಂದೆ-ತಾಯಿ ಜೊತೆ ಮಲಗಿದ್ದ ಬಾಲಕಿ ಮೇಲೆ ಗೋಡೆ ಬಿದ್ದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಬಾಲಕಿಯ ತಂದೆ-ತಾಯಿಗೂ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಟ್ಟ ಕಂದಮ್ಮನ ಅಗಲಿಕೆಯಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ : ಬೀದರ್‌ನ ಮಳೆ ಹಾನಿ ಪ್ರದೇಶಗಳಿಗೆ.. ರಾಜ್ಯ ಸರ್ಕಾರದಿಂದ 50 ಸಾವಿರ…

Read More

ರಾಯಚೂರು : ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಖಾಸಗಿ ಸೈಬರ್​ ಕೇಂದ್ರಗಳಲ್ಲಿ ಅಕ್ರಮವಾಗಿ ಗ್ರಾಹಕರಿಂದ 100, 200 ರೂಪಾಯಿ ಹಣ ಪಡೆಯುತ್ತಿರುವ  ಹಿನ್ನಲೆ ಮೂರು ಸೈಬರ್ ಕೇಂದ್ರಗಳ ವಿರುದ್ಧ ಪೊಲೀಸರು FIR​ ದಾಖಲಿಸಿದ್ದು, ಜಿಲ್ಲೆಯ ಮಾನ್ವಿಯ 3 ಸೈಬರ್ ಕೇಂದ್ರಗಳ ವಿರುದ್ಧ ಮಾನ್ವಿ ತಹಶೀಲ್ದಾರ್ ಚಂದ್ರಕಾಂತ್ ದೂರು ಆಧರಿಸಿ ಪ್ರಕರಣ ದಾಖಲು ಮಾಡಲಾಗಿದೆ. ಇತ್ತ ಇನ್ನೊಂದು ಕಡೆ  ಆಡಳಿತ ಪಕ್ಷ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ‌ ಅರ್ಜಿ ನೊಂದಣಿ ಹಿನ್ನೆಲೆ ಗದಗ ಜಿಲ್ಲೆ ನರಗುಂದ ಪಟ್ಟಣದ ಪುರಸಭೆಯಲ್ಲಿ ಸಾವಿರಾರು ಮಹಿಳೆಯರ ಕ್ಯೂ ನಿಂತಿರುವ ದೃಶ್ಯ ಸೆರೆಯಾಗಿದೆ. ಅರ್ಜಿ ಸ್ವಿಕೃತಿ ಹಿನ್ನೆಲೆ ಮಹಿಳೆಯರು ಕಿಕ್ಕಿರಿದು ತುಂಬಿದ್ದು, ಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿದೆ. ಇನ್ನೂ ಪುರಸಭೆ ಕಚೇರಿಗೆ ಅರ್ಜಿ ಸಲ್ಲಿಸಲು ಮಹಿಳೆಯರು ಪರದಾಟ ನಡೆಸಿದ್ದು, ಮಹಿಳಾ ಮಣಿಗಳನ್ನ ನಿಯಂತ್ರಿಸಲು ಹೋಂ ಗಾರ್ಡ್ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ. ಇದನ್ನೂ ಓದಿ : ಭಾರತ – ವೆಸ್ಟ್ ಇಂಡೀಸ್‌ ನಡುವಿನ ಎರಡನೇ ಟೆಸ್ಟ್‌ ಪಂದ್ಯಕ್ಕೆ ಮಳೆ ಅಡ್ಡಿ..!

Read More

ಬೀದರ್ : ಗಡಿ ಜಿಲ್ಲೆಯಾದ್ಯಂತ ಕಳೆದೊಂದು ವಾರದಿಂದ ನಿರಂತರ ಮಳೆ ಆಗ್ತಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗುತ್ತಿವೆ. ಅತೀವ ಮಳೆಯಿಂದಾಗಿ ಈಗಾಗಲೇ ಕೆಲವೆಡೆ ಬೆಳೆ ಹಾನಿ ಆಗಿದ್ದು, ಇನ್ನು ಕೆಲವೆಡೆ ಮನೆ ಕುಸಿತವಾಗಿದೆ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಭಾಲ್ಕಿ ತಾಲೂಕಿನ ಹುಪಳಾ ಗ್ರಾಮದಲ್ಲಿ ಮಳೆ ಹಾನಿಗೊಳಗಾದ ಪ್ರದೇಶ ವೀಕ್ಷಣೆ ಮಾಡಿದರು. ಮನೆ ಕುಸಿತವಾಗಿದ್ದ ಧನರಾಜ ರಾಮಚಂದ್ರ ಸಾನೆ ಅವರ ಮನೆ ವೀಕ್ಷಣೆ ಮಾಡಿ, ವೈಯಕ್ತಿಕವಾಗಿ 10 ಸಾವಿರ ನೀಡಿದರು. ಸರ್ಕಾರದಿಂದ 50 ಸಾವಿರ ಪರಿಹಾರ ನೀಡಲಾಗುವುದು ಭರವಸೆ ನೀಡಿದರು ವೈದ್ಯರು, ಸಿಬ್ಬಂದಿಗಳಿಗೆ ತರಾಟೆ ಬಳಿಕ‌ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ವೈದ್ಯರು ಹಾಗೂ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡು ಅಸ್ಪತ್ರೆಯಲ್ಲಿ ಸ್ವಚ್ಚತೆ ಅನ್ನೋದು ಸಂಪೂರ್ಣ ಮರಿಚಿಕೆ ಆಗಿದ್ದು, ಅವ್ಯವಸ್ಥೆಯ ಆಗರವಾಗಿದೆ. ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಬೇಕು ಹಾಗು ಸೊರುತ್ತಿರುವ ಮೇಲ್ಚಾವಣಿಯನ್ನ ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಇದನ್ನೂ ಓದಿ : ಬೆಳಗಾವಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆ : ಗೋಕಾಕ್ ಫಾಲ್ಸ್…

Read More

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಲಾಗಿದೆ. ಇಂದು(ಜು.25) ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆ ಮುಂದೂಡಿಕೆಗೆ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ಪರಿಷ್ಕೃತ ದಿನಾಂಕ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೇತ್ರಾವತಿ, ಕುಮಾರಧಾರಾ, ಕಾಳಿ, ಕಾವೇರಿ, ಲಕ್ಷ್ಮಣ ತೀರ್ಥ ಸೇರಿ ರಾಜ್ಯದಲ್ಲಿ ಹಲವು ನದಿಗಳು ಅಪಾಯಮಟ್ಟದಲ್ಲಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಆಸ್ತವ್ಯಸ್ತಗೊಂಡಿದೆ. ಇದರ ಜೊತೆ ಕರಾವಳಿ ಭಾಗದ 3 ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್​ ಘೋಷಣೆಯಾಗಿದೆ. ಇದನ್ನೂ ಓದಿ : ಬೆಳಗಾವಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆ : ಗೋಕಾಕ್ ಫಾಲ್ಸ್ ವೀಕ್ಷಣೆಗೆ ನಿಷೇಧ!

Read More

ಬೆಳಗಾವಿ : ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿನ ಗೋಕಾಕ್ ಫಾಲ್ಸ್ ನೋಡಲು ಪ್ರವಾಸಿಗರಿಗೆ ನಿಷೇಧಸಲಾಗಿದ್ದು, ಪೊಲೀಸರಿಂದ ಬ್ಯಾರಿಕೇಡ್ ಹಾಕುವ ಮೂಲಕ ಬಂದೂಬಸ್ತ್ ಮಾಡಲಾಗಿದೆ. ಬೆಳಗಾವಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಹಾಲಿನ ನೊರೆಯಂತೆ ಗೋಕಾಕ್ ಫಾಲ್ಸ್ ಮೈ ದುಂಬಿ ಹರಿಯುತ್ತಿದ್ದು, ನೋಡಲು ಬಂದ ಪ್ರವಾಸಿಗರು ಹುಚ್ಚಾಟ ಮೆರೆದಿದ್ದಾರೆ. ಅಪಾಯದ ಅಂಚಿನಲ್ಲಿ ನಿಂತು ಯುವಕ ಯುವತಿಯರು ಸೆಲ್ಫಿ ಕ್ಲಿಕಿಸಿಕೊಂಡಿದ್ದಾರೆ. ಪ್ರವಾಸಿಗರ ಹುಚ್ಚಾಟಕ್ಕೆ ಪೊಲೀಸರು ಬ್ರೇಕ್ ಹಾಕುತ್ತಿಲ್ಲ. ಈ ಹಿನ್ನೆಲೆ ಗೋಕಾಕ್ ಫಾಲ್ಸ್ ಬಳಿ ಪೋಲಿಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಫಾಲ್ಸ್ ನೋಡಲು ಆಗಮಿಸುವ ಪ್ರವಾಸಿಗರಿಗೆ ಪೋಲಿಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಮಳೆಗಾಲ ಆರಂಭದ ಹಿನ್ನೆಲೆ ಗೋಕಾಕ್ ಫಾಲ್ಸ್ ನೋಡಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಫೋಟೋ ಸೆಲ್ಫಿಗಾಗಿ ಮುಗಿಬೀಳುತ್ತಿರುವ ಕುರಿತು ಸುದ್ದಿ ಪ್ರಸಾರ ಮಾಡಿದ ಹಿನ್ನಲೆ ಪೋಲಿಸ್ ಇಲಾಖೆಯಿಂದ ಪ್ರವಾಸಿಗರಿಗೆ ಫಾಲ್ಸ್ ನೋಡಲು ನಿಷೇಧಿಸಲಾಗಿದೆ. ಇದನ್ನೂ ಓದಿ : ನಯನತಾರಾ ಜೊತೆ ಅವಳಿ ಮಕ್ಕಳ ತುಂಟಾಟ : ವಿಘ್ನೇಶ್ ಶಿವನ್ ಹೇಳಿದ್ದೇನು..?

Read More

ಮಂಡ್ಯ;- ಕೆಆರ್ ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಕೆ.ಆರ್. ಎಸ್ ಡ್ಯಾಂನ ನೀರಿನ ಮಟ್ಟ 100 ಅಡಿ ತಲುಪಿದೆ. ಒಂದೂವರೆ ತಿಂಗಳಿಂದ‌ ಮಳೆಯಿಲ್ಲದೆ ಕಂಗಾಲಾಗಿದ್ದ ಸಕ್ಕರೆ ನಾಡಿನ ಅನ್ನದಾತರು ಸಂತಸಗೊಂಡಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎರಡನೇ ದಿನದಲ್ಲಿ ಕೆ.ಆರ್ ಎಸ್ ಡ್ಯಾಂ 8 ಅಡಿ ಭರ್ತಿಯಾಗಿದೆ. ಕೆ.ಆರ್.ಎಸ್ ಒಳಹರಿವಿನ ಪ್ರಮಾಣವೂ ಹೆಚ್ಚಾಗುತ್ತಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆ.ಆರ್.ಎಸ್ ಸದ್ಯ 100 ಅಡಿ ತಲುಪಿದೆ. ಡ್ಯಾಂ ಭರ್ತಿಯತ್ತ ಸಾಗುತ್ತಿರುವುದಕ್ಕೆ ಮಂಡ್ಯ ಜಿಲ್ಲೆ ರೈತರಲ್ಲಿ ಮಂದಹಾಸ ಮೂಡಿಸಿದ್ದು, ಇದೀಗ ಕೃಷಿ ಚಟುವಟಿಕೆಗಳತ್ತ ಮುಖ ಮಾಡಿದ್ದಾರೆ. ಸದ್ಯ ಡ್ಯಾಂಗೆ 48,025 ಕ್ಯೂಸೆಕ್ ಒಳ ಹರಿವು ಬರುತ್ತಿದ್ದು, ಮಧ್ಯಾಹ್ನದ ವೇಳೆಗೆ ಒಳ ಹರಿವಿನ ಪ್ರಮಾಣ ಮತ್ತಷ್ಟು ಏರಿಕೆ ಸಾಧ್ಯತೆ ಇದೆ ಇದನ್ನೂ ಓದಿ : ಚಿರಂಜೀವಿ ಸರ್ಜಾ ನಟನೆಯ ಕೊನೆ ಚಿತ್ರದಲ್ಲಿ ರಾಯನ್: ಮಾಹಿತಿ ಹಂಚಿಕೊಂಡ ಮೇಘನಾ ರಾಜ್..!

Read More

ತಮಿಳು ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ಹಾಗೂ ಪತಿ ನಿರ್ದೇಶಕ ವಿಘ್ನೇಶ್ ಶಿವನ್ ಸಿನಿಮಾಗಳ ಜೊತೆ ಜೊತೆಗೆ ತಮ್ಮ ಮುದ್ದಾದ ಅವಳಿ ಮಕ್ಕಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳಿಂದ ಕೊಂಚ ಬಿಡುವು ಸಿಕ್ಕರೂ ಮಕ್ಕಳೊಂದಿಗೆ ನಟಿ ನಯನತಾರಾ ಸಮಯ ಕಳೆಯುತ್ತಿದ್ದು, ಇದೀಗ ಪತ್ನಿ ಮಕ್ಕಳೊಂದಿಗೆ ಆಡುತ್ತಿರುವ ಫೋಟೋವನ್ನು ಪತಿ ನಿರ್ದೇಶಕ ವಿಘ್ನೇಶ್ ಶಿವನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.. ತಮಿಳು ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಟಿ ನಯನತಾರಾ ಪುಟ್ಟ ಮಕ್ಕಳ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ದು, ಕಳೆದ ವರ್ಷದ ಹಿಂದೆ ಜೂನ್ 9ರಂದು  ಮದುವೆಯಾದ ಕೆಲವೇ ತಿಂಗಳಲ್ಲಿ ಬಾಡಿಗೆ ತಾಯಿಯ ಮೂಲಕ ಅವಳಿ ಮಕ್ಕಳನ್ನು ಪಡೆಯುವ ಮೂಲಕ ಸಖತ್ ಸುದ್ದಿಯಾಗಿದ್ದಾರೆ. ವಿಘ್ನೇಶ್ ಹಾಗೂ ನಯನತಾರಾ ತಮ್ಮ ಮಕ್ಕಳೊಂದಿಗೆ ಖುಷಿ ಜೀವನ ನಡೆಸುತ್ತಿದ್ದಾರೆ. ನಯನತಾರಾ ಮಕ್ಕಳೊಂದಿಗೆ ಇರುವಂತಹ ಕೆಲವು ಹೊಸ ಫೋಟೋಗಳನ್ನು ನಿರ್ದೇಶಕ ಶೇರ್ ಮಾಡಿದ್ದಾರೆ. ತಾಯಿ-ಮಗು ಆಟವಾಡುತ್ತಿರುವ ಫೋಟೋವನ್ನು ವಿಘ್ನೇಶ್ ಶಿವನ್ ಹಂಚಿಕೊಂಡಿದ್ದು, ನನ್ನ ಎರಡು ಜೀವಗಳು ಎಂದು ಬರೆದುಕೊಂಡಿದ್ದಾರೆ. ಮಕ್ಕಳಿಗೆ ಉಯಿರ್…

Read More

ಟ್ರಿನಿಡಾಡ್‌ (ವೆಸ್ಟ್ ಇಂಡೀಸ್‌): ಭಾರತ ಹಾಗೂ ವೆಸ್ಟ್ ಇಂಡೀಸ್‌ ನಡುವಣ ಎರಡನೇ ಟೆಸ್ಟ್‌ ಪಂದ್ಯದ ಐದನೇ ಹಾಗೂ ಅಂತಿಮ ದಿನಕ್ಕೆ ಮಳೆ ಅಡ್ಡಿ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಅಂತಿಮ ದಿನದಾಟದ ಸ್ವಲ್ಪ ತಡವಾಗಿದೆ. ಆರಂಭವಾಗಲಿದೆ. ಭಾರತ ತಂಡ ನೀಡಿರುವ 365 ರನ್ ಗಳ ಗುರಿ ಹಿಂಬಾಲಿಸಿದ ವೆಸ್ಟ್ ಇಂಡೀಸ್‌ ನಾಲ್ಕನೇ ದಿನದಾಟದ ಅಂತ್ಯಕ್ಕೆ ಎರಡು ವಿಕೆಟ್‌ ವಿಕೆಟ್‌ ನಷ್ಟಕ್ಕೆ 76 ರನ್‌ಗಳನ್ನು ಕಲೆ ಹಾಕಿತ್ತು. ಇದೀಗ ಐದನೇ ದಿನವಾದ ಸೋಮವಾರ ಆತಿಥೇಯ ವೆಸ್ಟ್ ಇಂಡೀಸ್‌ ತಂಡಕ್ಕೆ ಗೆಲ್ಲಲು 289 ರನ್‌ಗಳ ಅಗತ್ಯವಿದೆ. ಆದರೆ, ಭಾರತ ತಂಡಕ್ಕೆ ಸತತ ಎರಡನೇ ಗೆಲುವು ಪಡೆಯಲು 8 ವಿಕೆಟ್‌ಗಳನ್ನು ಪಡೆಯಬೇಕಾದ ಅಗತ್ಯವಿದೆ. ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್‌ಗಳಿಂದ ಭರ್ಜರಿ ಗೆಲುವು ಪಡೆದಿತ್ತು. ಇದೀಗ ಎರಡನೇ ಟೆಸ್ಟ್‌ ಪಂದ್ಯದಲ್ಲಿಯೂ ಗೆದ್ದು ಎರಡು ಪಂದ್ಯಗಳ ಟೆಸ್ಟ್‌ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್‌ ಸ್ವೀಪ್‌ ಮಾಡಿಕೊಳ್ಳಲು ಎದುರು ನೋಡುತ್ತಿದೆ. ಆದರೆ, ಐದನೇ ದಿನದ…

Read More

ಕೊಲಂಬೊ: ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧ ನಡೆದ ಏಕದಿನ ಕ್ರಿಕೆಟ್‌ ಸರಣಿಯಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಎಲ್‌ಬಿಡಬ್ಲ್ಯೂ ವಿವಾದದ ಬೆನ್ನಲ್ಲೇ ಎಮರ್ಜಿಂಗ್‌ ಏಷ್ಯಾಕಪ್‌ ಟೂರ್ನಿಯಲ್ಲಿ ನೋಬಾಲ್‌ ವಿವಾದದ (Noball Controversy) ಅಲೆ ಎದ್ದಿದೆ. ಭಾರತ ಎ ತಂಡದ  ಸೋಲಿನ ಬಳಿಕ ನೋಬಾಲ್‌ ವಿವಾದ ಸೃಷ್ಟಿಯಾಗಿದ್ದು, ಪಾಕ್‌ ಮೋಸದಾಟವಾಡಿತಾ? ಅಂಪೈರ್‌ಗಳು ಕಂಡೂ ಕಾಣದಂತೆ ವರ್ತಿಸಿದ್ರಾ? ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ. ಕೊಲಂಬೊದಲ್ಲಿ ಭಾನುವಾರ ನಡೆದ ಅಂಡರ್‌ 23 ಏಷ್ಯಾಕಪ್‌ ಟೂರ್ನಿ ಫೈನಲ್‌ ಪಂದ್ಯದಲ್ಲಿ ಭಾರತ (India A Team)-ಪಾಕ್‌ ನೀಡಿದ ಬೃಹತ್‌ ಮೊತ್ತದ ಗುರಿ ಬೆನ್ನತ್ತಿತ್ತು. ಬ್ಯಾಟಿಂಗ್‌ ಫಾರ್ಮ್‌ನಲ್ಲಿದ್ದ ಚೆನ್ನೈ ಮೂಲದ ಆಟಗಾರ ಸಾಯಿ ಸುದರ್ಶನ್‌ ಉತ್ತಮ ರನ್‌ ಕಲೆಹಾಕುವ ವಿಶ್ವಾಸದಲ್ಲಿದ್ದರು. ಆದ್ರೆ 9ನೇ ಓವರ್‌ನಲ್ಲಿ ಪಾಕ್‌ ವೇಗಿ ಅರ್ಷದ್‌ ಇಕ್ಬಾಲ್‌ ಬೌಲಿಂಗ್‌ಗೆ ಕ್ಯಾಚ್‌ ನೀಡಿ ಔಟಾದರು ಇಕ್ಬಾಲ್‌ 9ನೇ ಓವರ್‌ನ 3ನೇ ಬಾಲ್‌ ಎಸೆಯುವಾಗ ಅವರ ಎಡಗಾಲು ಸಂಪೂರ್ಣ ಕ್ರೀಸ್‌ನಿಂದ ಹೊರಕ್ಕೆ ಬಂದಿದೆ. ಆದ್ರೆ ಅಂಪೈರ್‌ ಇದನ್ನು ಗಮನಿಸದೇ ಔಟ್‌ ತೀರ್ಪು ನೀಡಿದ್ದಾರೆ. ಇದು…

Read More