Author: Prajatv Kannada

ಬೆಂಗಳೂರು ;– ಹುಡುಗಿ ಕೈ ಕೊಟ್ಟ ಹಿನ್ನೆಲೆ ಡೆತ್ ನೋಟ್ ನಲ್ಲಿ ಪ್ರಿಯತಮೆ ಹೆಸರು ಬರೆದಿಟ್ಟು ಯುವಕ ಆತ್ಮಹತ್ಯೆ ಶರಣಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. 27 ವರ್ಷದ ನವೀನ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ನಗರದ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ನಿನ್ನೆ ಸಂಜೆ ಹೊತ್ತಿಗೆ ನವೀನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ನವೀನ್ ಕುಟುಂಬಸ್ಥರು ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Read More

ಮಂಡ್ಯ;- ಕೊಡಗು ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಜೀವನದಿ ಕಾವೇರಿ ನೀರಿನ ಮಟ್ಟ ಏರಿಕೆಯಾಗಿದೆ. ಈ ಹಿನ್ನೆಲೆ ಕೆ.ಆರ್.ಎಸ್ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ. 30 ಸಾವಿರ ಕ್ಯೂಸೆಕ್ ಗೆ ಒಳಹರಿವಿನ ಪ್ರಮಾಣ ಏರಿಕೆ ಆಗಿದೆ. ಒಳ ಹರಿವಿನ ಹೆಚ್ಚಳದಿಂದ ಡ್ಯಾಂ ನ ನೀರಿನ ಮಟ್ಟ ಕೂಡ 95 ಅಡಿ ಗೆ ಏರಿಕೆ ಆಗಿದೆ. ಡ್ಯಾಂ ನ ನೀರಿನ ಮಟ್ಟ ಏರಿಕೆಯಿಂದ ಜಿಲ್ಲೆಯ ರೈತರ ಮೊಗದಲ್ಲಿ ಮೂಡಿದ ಮಂದಹಾಸ ಮೂಡಿದೆ. ಕೆ.ಆರ್.ಸಾಗರ ಅಣೆಕಟ್ಟೆಯ ಇಂದಿನ ನೀರಿನ ಮಟ್ಟ ಗರಿಷ್ಟ ಮಟ್ಟ:124.80 ಅಡಿ ಇಂದಿನ‌ಮಟ್ಟ : 95.00 ಅಡಿ ಒಳಹರಿವು :29,552 ಕ್ಯೂಸೆಕ್ ಹೊರಹರಿವು : 5297 ಕ್ಯೂಸೆಕ್ ಪ್ರಸ್ತುತ ನೀರಿನ ಸಂಗ್ರಹ: 19.139 TMC. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ KRS..

Read More

ಚಿಕ್ಕಬಳ್ಳಾಪುರ ;– ಟೊಮೆಟೊ ತೋಟಕ್ಕೆ ಸರ್ಕಾರಿ ಬೋರ್ ವೇಲ್ ದುರ್ಬಳಕೆ ಮಾಡಿಕೊಂಡ ವಾಟರ್ ಮ್ಯಾನ್​ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಕಾನಗಮಾಕಲಪಲ್ಲಿ ಗ್ರಾಮ ಪಂಚಾಯಿತಿಯ ವಾಟರ್ ಮನ್ ಶ್ರೀರಾಮನಾಯಕ್ ಎನ್ನುವವರು ಸರ್ಕಾರಿ ಬೋರ್ ವೆಲ್ ನೀರನ್ನ ತನ್ನ ಜಮೀನಿಗೆ ಹರಿಸಿಕೊಂಡು ಟೊಮೆಟೊ ಬೆಳೆಯುತ್ತಿದ್ದಾರೆ. ಇತ್ತ ಗ್ರಾಮದ ನಲ್ಲಿಯಲ್ಲಿ ನೀರು ಯಾಕೆ ಬರುತ್ತಿಲ್ಲ ಅಂತ ವಿಚಾರಿಸಿದಾಗ ವಾಟರ್ ಮ್ಯಾನ್​ನ ಅಸಲಿ ಕರಾಮತ್ತು ಬಯಲಾಗಿದೆ. ಕಾನಗಮಾಕಲಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂರಗಮಾಕಲಪಲ್ಲಿ ಗ್ರಾಮಕ್ಕೆ ಒಂದು ವಾರದಿಂದ ನೀರು ಪೂರೈಕೆಯಾಗಿಲ್ಲ. ಇದರಿಂದ ಗ್ರಾಮದ ಮಹಿಳೆಯರು ಗ್ರಾಮ ಹೊರವಲಯದ ಕಿಲೋಮೀಟರ್ ದೂರ ಸಾಗಿ ಖಾಸಗಿ ಬೋರ್ ವೆಲ್​ಗಳಿಂದ ನೀರು ತರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಬೋರ್ ವೇಲ್​ನಿಂದ ಗ್ರಾಮಕ್ಕೆ ನೀರು ಪೂರೈಕೆ ಮಾಡುತ್ತಿಲ್ಲ ಅಂತ ಕೇಳಿದ ಗ್ರಾಮಸ್ಥರಿಗೆ ವಾಟರ್ ಮ್ಯಾನ್ ಶ್ರೀರಾಮನಾಯಕ್ ಧಮ್ಕಿ ಹಾಕ್ತಿದ್ದಾನಂತೆ. ಇದರಿಂದ ರೋಸಿಹೋದ ಗ್ರಾಮಸ್ಥರು ಶ್ರೀರಾಮನಾಯಕ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

Read More

ಬೆಂಗಳೂರು:  ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ‘ಯುವನಿಧಿ’ ಬಹುತೇಕ ಡಿಸೆಂಬರ್‌ನಿಂದ ಜಾರಿಯಾಗಲಿದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶನಿವಾರ ವಿಧಾನಸೌಧ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಚುನಾವಣೆ ಪ್ರಣಾಳಿಕೆಯಲ್ಲಿ ಐದನೇ ಗ್ಯಾರಂಟಿಯಾಗಿ ‘ಯುವನಿಧಿ’ ಘೋಷಿಸಲಾಗಿತ್ತು. ಅದರಂತೆ 2022-23ರಲ್ಲಿ ಪದವೀದರರಾಗಿ ಹೊರಬಂದು ನಿರುದ್ಯೋಗಿಗಳಾದಲ್ಲಿ ಅವರಿಗೆ ಮೂರು ಸಾವಿರ ಭತ್ಯೆ, ಡಿಪ್ಲಮೋ ಪದವೀಧರರಿಗೆ ಒಂದೂವರೆ ಸಾವಿರ ರುಪಾಯಿ ಭತ್ಯೆ ನೀಡುವ ಯೋಜನೆಯನ್ನು ಘೋಷಿಸಿದ್ದೇವೆ. ಈ ಯೋಜನೆ ನಿರುದ್ಯೋಗಿಗಳಿಗೆ ಆಶಾದಾಯಕವಾಗಲಿದೆ. ಬಹುತೇಕ ಡಿಸೆಂಬರ್‌ನಲ್ಲಿ ಆರಂಭವಾಗಲಿದೆ. ಜೊತೆಗೆ ಕೌಶಲ್ಯ ಇಲಾಖೆಯಿಂದ ತರಬೇತಿ ನೀಡುವ ಕೆಲಸವನ್ನು ಮಾಡಲಾಗುವುದು ಎಂದರು. ಶೀಘ್ರವೇ ಕೈಗಾರಿಕೋದ್ಯಮಿಗಳ ಜೊತೆ ಸಭೆ ನಡೆಸಿ ಉದ್ಯಮಗಳಲ್ಲಿ ಪ್ರಸ್ತುತ ಮಾರುಕಟ್ಟೆಯ ಕಾಲಕ್ಕನುಗುಣವಾಗಿ ಯಾವ ರೀತಿ ಉದ್ಯೋಗಿಗಳು ಬೇಕಾಗುತ್ತಾರೆ ಎಂಬುದನ್ನು ತಿಳಿಯಲಾಗುವುದು. ಅದಕ್ಕೆ ಅನುಗುಣವಾದ ಪಠ್ಯವನ್ನು ಕಾಲೇಜು ಶಿಕ್ಷಣದಲ್ಲಿ ಅಳವಡಿಸಿ ಬೋಧನೆ ಮಾಡಲಾಗುವುದು. ಇದರಿಂದ ನಿರುದ್ಯೋಗವೂ ನಿಯಂತ್ರಣವಾಗಲಿದೆ, ಕೈಗಾರಿಕೆಗಳಿಗೆ ಉದ್ಯೋಗಿಗಳೂ ಲಭ್ಯರಾಗುತ್ತಾರೆ ಎಂದು ಹೇಳಿದರು. ಹಿಂದೆ ನಮ್ಮ ಸರ್ಕಾರವಿದ್ದಾಗ ಕೈಗಾರಿಕಾ ಬೆಳವಣಿಗೆಗಾಗಿ ಪ್ರತ್ಯೇಕ ಕೌಶಲ್ಯ ತರಬೇತಿ ಇಲಾಖೆ ತರೆದು ವಿವಿಧ ಕಾರ್ಯಕ್ರಮ ಆರಂಭಿಸಲಾಗಿತ್ತು. ಆದರೆ ಬಳಿಕ ಬಂದ ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಲಿಲ್ಲ. ಆದರೆ ನಾವೀಗ ಆ ಇಲಾಖೆಯ ಕಾರ್ಯಕ್ರಮಗಳಿಗೆ ಪುನಃ ಅದಕ್ಕೆ ಶಕ್ತಿ ತುಂಬಲಿದ್ದೇವೆ. ಕೈಗಾರಿಕೆ ಬೆಳೆದರೆ ಉದ್ಯೋಗ ಸೃಷ್ಟಿಯಾಗುತ್ತದೆ. ಅದರಿಂದ ರಾಜ್ಯದ ಜಿಡಿಪಿ ಬೆಳೆಯುತ್ತದೆ. ಆ ಮೂಲಕ ದೇಶದ ಜಿಡಿಪಿಗೆ ರಾಜ್ಯದಿಂದ ಹೆಚ್ಚು ಕೊಡುಗೆ ನೀಡಲು ಸಾಧ್ಯವಾಗಲಿದೆ ಎಂದರು. ಏನಿದು ಯುವನಿಧಿ ಯೋಜನೆ? 2022-23ನೇ ಸಾಲಿನಲ್ಲಿ ಯಾವುದೇ ವೃತ್ತಿಪರ ಕೋಸ್‌, ಪದವಿ, ಡಿಪ್ಲಮೋ ಪದವಿ ಪಡೆದವರಿಗೆ ಅನ್ವಯ. ಪದವಿ ಪಡೆದ 6 ತಿಂಗಳಲ್ಲಿ ಯಾವುದೇ ಉದ್ಯೋಗ ಸಿಗದೇ ಇದ್ದಲ್ಲಿ ಮುಂದಿನ 24 ತಿಂಗಳ ಅವಧಿಯಿಗೆ ಪದವೀಧರಿಗೆ ಮಾಸಿಕ 3000 ರು. ಮತ್ತು ಡಿಪ್ಲಮೋ ಪದವೀಧರರಿಗೆ ಮಾಸಿಕ 1500 ರು. ನಿರುದ್ಯೋಗ ಭತ್ಯೆ ನೀಡಲಾಗುವುದು.

Read More

ಬೆಂಗಳೂರು ;- ಕಬ್ಬನ್ ಉದ್ಯಾನದ ಜಾಗದಲ್ಲಿ ಕ್ಲಬ್ ಸೆಂಚುರಿ ಕ್ಲಬ್ ಅನ್ನು ನಿರ್ಮಿಸಿರುವುದೇ ಅಕ್ಷಮ್ಯ. ಇದನ್ನು ಕಬ್ಬನ್ ಉದ್ಯಾನದಿಂದ ಬೇರ್ಪಡಿಸಬೇಕು ಎಂಬ ಸದಸ್ಯೆ ತೇಜಸ್ವಿನಿಗೌಡ ಅವರ ವಿಚಾರವನ್ನು ಖಂಡಿಸುತ್ತೇವೆ. ಕಬ್ಬನ್ ಉದ್ಯಾನದ ಉಳಿವಿಗಾಗಿ ಸಾಕಷ್ಟು ಹೋರಾಟ ಕೈಗೊಂಡು, ಕ್ಲಬ್ ಹಾಗೂ ಇತರೆ ವಾಣಿಜ್ಯ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂಬ ನ್ಯಾಯಾಲಯದಲ್ಲಿ ದೂರು ದಾಖಲಿಸಿ ನಿರಂತರವಾಗಿ ಹೋರಾಡುತ್ತಿದ್ದೇವೆ. ಹೀಗಿರುವಾಗಿ ಉದ್ಯಾನ ವ್ಯಾಪ್ತಿಯಿಂದ ಸೆಂಚುರಿ ಕ್ಲಬ್ ಅನ್ನು ಹೊರಗಿಡಬೇಕು ಎಂಬುದಕ್ಕೆ ಯಾವುದೇ ಅರ್ಥವಿಲ್ಲ. ಕಟ್ಟಡವನ್ನು ತೆರವುಗೊಳಿಸಲಿ ಎಂದು ಕಬ್ಬನ್‍ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷ ಎಸ್. ಉಮೇಶ್ ಒತ್ತಾಯಿಸಿದ್ದಾರೆ. ಇನ್ನೂ ಕಬ್ಬನ್ ಉದ್ಯಾನ ದಲ್ಲಿ ಕ್ಲಬ್‍ಗಳ ಅಭಿವೃದ್ಧಿ ಕೆಲಸಗಳಿಗೆ ಅವಕಾಶ ಕೊಡದೆ, ಉದ್ಯಾನವನ್ನು ರಕ್ಷಿಸಬೇಕು ಎಂದು ಕಬ್ಬನ್‍ಪಾರ್ಕ್ ನಡಿಗೆದಾರರ ಸಂಘ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

Read More

ಬೆಂಗಳೂರು ;- ಸಚಿವರಾಗಿದ್ದಾಗ ಹನಿಟ್ರ್ಯಾಪ್ ಮಾಡಲು ಮುನಿರತ್ನ ಸ್ಟುಡಿಯೋ ಇಟ್ಟು ಕೊಂಡಿದ್ದರು ಎಂದು ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕರೆಯಿಸುವುದು ಹನಿಟ್ರ್ಯಾಪ್ ಮಾಡುವುದು ಹೆದರಿಸುವುದು. ಜೆ.ಪಿ.ಪಾರ್ಕ್‌, ಡಾಲರ್ಸ್‌ ಕಾಲೋನಿಯಲ್ಲಿ ಇದಕ್ಕಾಗಿ ಸ್ಟುಡಿಯೋ ಇದೆ. ಅವರು ಸಿನಿಮಾ ನಿರ್ಮಾಪಕರಲ್ಲವೇ. ಹೀಗಾಗಿ ಹನಿಟ್ರ್ಯಾಪ್ ಮಾಡಿಸಿ ಹೆದರಿಸುತ್ತಾರೆ ಎಂದರು. ಮುನಿರತ್ನಗೆ ಚುನಾವಣೆ ಎದುರಿಸುವುದು ಹೇಗೆ ಎಂದು ಕೇಳಿದೆವು. ನಿಮ್ಮದು ಈಸ್ಟ್‌ಮನ್ ಕಲರ್ ಪಿಕ್ಚರ್‌ ಇದೆ ತೋರಿಸಲಾ? ಇಲ್ಲ ಕೆಲಸ ಮಾಡುತ್ತೀರಾ ಅಂತಾ ಮುನಿರತ್ನ ಹೆದರಿಸುತ್ತಿದ್ದರು. ಮುನಿರತ್ನ ನಿರ್ಮಾಪಕನಾಗಿ ಮಾಡಿದ ಮೊದಲ ಚಿತ್ರ ಆಂಟಿ ಪ್ರೀತ್ಸೆ. ಹೀಗಾಗಿ ಮುನಿರತ್ನ ಸಚಿವರಾದ ಮೇಲೂ ಬರೀ ಆಂಟಿಗಳೇ ಇರುತ್ತಿದ್ದರು. ವಿಕಾಸಸೌಧ, ವಿಧಾನಸೌಧ ಚೇಂಬರ್‌ನಲ್ಲೆಲ್ಲಾ ಬರೀ ಆಂಟಿಗಳೇ ಇರುತ್ತಿದ್ದರು ಎಂದು ಆರೋಪಿಸಿದರು. ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗುತ್ತಿದ್ದು, ಇದಕ್ಕಾಗಿ ಆಡಳಿತರೂಢ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ. ಅದರಲ್ಲೂ ಮುಖ್ಯವಾಗಿ ಬಿಬಿಎಂಪಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಡಿಕೆ…

Read More

ಬೆಂಗಳೂರು ;- ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಕೂಸಾದ ಅನ್ನಭಾಗ್ಯ ಕಾರ್ಯಕ್ರಮಕ್ಕೆ ಚಾಲನೆ ದೊರೆತ ನಂತರ ಇದುವರೆಗೆ ರಾಜ್ಯ ಸರ್ಕಾರ 24 ಜಿಲ್ಲೆಯ 78.4 ಲಕ್ಷ ಫಲಾನುಭವಿಗಳಿಗೆ 456.73 ಕೋಟಿ ರೂ. ಜಮಾ ಮಾಡಿದೆ. ಇನ್ನುಳಿದ ಏಳು ಜಿಲ್ಲೆಗಳಲ್ಲಿ ಫಲಾನುಭವಿಗಳಿಗೆ ನೇರ ಲಾಭ ವರ್ಗಾವಣೆ (DBT) ಪ್ರಕ್ರಿಯೆಯಲ್ಲಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡಿದ ಮಾಹಿತಿ ಪ್ರಕಾರ ಒಂದು ಕಡತವು ಕೇವಲ 20,000 ನೇರ ಲಾಭ ವರ್ಗಾವಣೆಯನ್ನು ಪ್ರಕ್ರಿಯೆಗೊಳಿಸಬಹುದು. ಪ್ರತಿ ಜಿಲ್ಲೆಗೆ ಬಹು ಕಡತಗಳನ್ನು ರಚಿಸಬೇಕಾಗಿದೆ. ಇದು ಸಮಯ ತೆಗೆದುಕೊಳ್ಳುವುದರಿಂದ, ಪಾವತಿಗಳು ವಿಳಂಬವಾಗಿದೆ ಆದರೆ ಅವು ಎಂಟು ದಿನಗಳಲ್ಲಿ ಪೂರ್ಣಗೊಳ್ಳುತ್ತವೆ ಎಂದು ತಿಳಿಸಿದೆ ಚಾಮರಾಜನಗರ, ವಿಜಯಪುರ, ಹಾಸನ, ಚಿಕ್ಕಬಳ್ಳಾಪುರ, ಉಡುಪಿ, ವಿಜಯನಗರ, ಮತ್ತು ಶಿವಮೊಗ್ಗ ಜಿಲ್ಲೆಗಳ ಫಲಾನುಭವಿ ಖಾತೆಗಳಿಗೆ ಹಣ ಜಮೆಯಾಗಬೇಕಿದೆ. ಈ ಜಿಲ್ಲೆಗಳಲ್ಲಿ ಒಟ್ಟು 18.86 ಲಕ್ಷ ಫಲಾನುಭವಿಗಳಿದ್ದಾರೆ. ಸರ್ಕಾರವು ಪ್ರತಿ ಫಲಾನುಭವಿಗೆ ತಿಂಗಳಿಗೆ ಕೇಜಿಗೆ 34 ರೂ. ನಂತೆ ಐದು ಕೇಜಿಗೆ 170 ರೂ. ವರ್ಗಾಯಿಸುತ್ತದೆ. ಕುಟುಂಬದ…

Read More

ಟೀಂ ಇಂಡಿಯಾ ರನ್ ಮಷೀನ್ ವಿರಾಟ್‌ ಕೊಹ್ಲಿ, ಬರೋಬ್ಬರಿ 5 ವರ್ಷಗಳ ಬಳಿಕ ವಿದೇಶಿ ನೆಲದಲ್ಲಿ ಟೆಸ್ಟ್‌ ಶತಕ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 76ನೇ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ವಿಂಡೀಸ್‌ ಎದುರಿನ ಈ ಶತಕವು ವಿರಾಟ್ ಕೊಹ್ಲಿ ಬ್ಯಾಟಿಂದ ಮೂಡಿಬಂದ 29ನೇ ಶತಕ ಎನಿಸಿಕೊಂಡಿತು. ಮೊದಲ ದಿನದಾಟದಂತ್ಯದ ವೇಳೆಗೆ ಅಜೇಯ 87 ರನ್ ಬಾರಿಸಿದ್ದ ವಿರಾಟ್ ಕೊಹ್ಲಿ, ಎರಡನೇ ದಿನದಾಟದ ಆರಂಭದಲ್ಲೇ ಶೆನೊನ್ ಗೇಬ್ರಿಲ್ ಬೌಲಿಂಗ್‌ನಲ್ಲಿ ಆಕರ್ಷಕ ಕವರ್‌ ಡ್ರೈವ್ ಬೌಂಡರಿ ಬಾರಿಸುವ ಮೂಲಕ ಮೂರಂಕಿ ಮೊತ್ತ ದಾಖಲಿಸುವಲ್ಲಿ ಸಫಲರಾದರು. ಅಂದಹಾಗೆ ಇದು ವಿರಾಟ್ ಕೊಹ್ಲಿ, 4ನೇ ಕ್ರಮಾಂಕದಲ್ಲಿ ಬಾರಿಸಿದ 25ನೇ ಶತಕ ಎನಿಸಿಕೊಂಡಿತು. ಈ ಮೂಲಕ 4ನೇ ಕ್ರಮಾಂಕದಲ್ಲಿ ಬ್ರಿಯನ್ ಲಾರಾ(24) ಬಾರಿಸಿದ್ದ ಶತಕದ ದಾಖಲೆಯನ್ನು ಹಿಂದಿಕ್ಕುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದಾರೆ. 4ನೇ ಕ್ರಮಾಂಕದಲ್ಲಿ ಅತಿಹೆಚ್ಚು ಶತಕ ಬಾರಿಸಿದ ಟಾಪ್‌ 5 ಕ್ರಿಕೆಟಿಗರಿವರು: ಸಚಿನ್ ತೆಂಡುಲ್ಕರ್(ಭಾರತ): 44 ಶತಕ 2.…

Read More

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಸೂಪರ್ ಹಿಟ್ ಆಗಿದ್ದು ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡಿದೆ. ಆ ಬೆನ್ನಲ್ಲೇ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ದಿ ಕಾಶ್ಮೀರ್ ಫೈಲ್ಸ್ ಕುರಿತಾಗಿ ಮತ್ತೊಂದು ಡಾಕ್ಯುಮೆಂಟರಿ ಮಾಡಿ, ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ನೆಟ್ಟಿಗರೊಬ್ಬರು ‘ನಿಮಗೆ ತಾಕತ್ತಿದ್ದರೆ ಮಣಿಪುರ ಫೈಲ್ಸ್ ಮಾಡಿ’ ಎಂದು ಸವಾಲು ಹಾಕಿದ್ದಾರೆ. ನೆಟ್ಟಿಗನ ಸವಾಲಿಗೆ ಉತ್ತರಿಸಿರುವ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ‘ನನ್ನ ಮೇಲೆ ವಿಶ್ವಾಸವಿಟ್ಟಿದ್ದಕ್ಕೆ ಧನ್ಯವಾದಗಳು. ಎಲ್ಲವನ್ನೂ ನಾನೇ ಏಕೆ ಮಾಡಬೇಕು ಎಂದು ಬಯಸುತ್ತೀರಿ? ಚಿತ್ರೋದ್ಯಮದಲ್ಲಿ ಬೇರೆ ಯಾರೂ ಇಲ್ಲವೆ?’ ಎಂದು ಪ್ರಶ್ನೆ ಮಾಡಿದ್ದಾರೆ. ಆರಂಭದಲ್ಲಿ ಸಾಕಷ್ಟು ವಿವಾದ ಹುಟ್ಟುಹಾಕಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಳಿಕ ಬಾಕ್ಸ್ ಆಫೀಸ್ ನಲ್ಲಿ 250 ಕೋಟಿ ಕಲೆಕ್ಷನ್ ಮಾಡಿತ್ತು. ಈ ಚಿತ್ರದ ನಿರ್ದೇಶಕ ಫ್ಯಾನ್ಸ್ ಮತ್ತೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ ಬಾರಿ ಅವರು ಮತ್ತೊಂದು ‘ದಿ ಕಾಶ್ಮೀರ್ ಫೈಲ್ಸ್’…

Read More

ಸಮುದ್ರಶಾಸ್ತ್ರದ ಪ್ರಕಾರ, ನಮ್ಮ ದೇಹದಲ್ಲಿನ ಎಲ್ಲಾ ರೀತಿಯ ಗುರುತುಗಳು ಮತ್ತು ಸಂಕೇತಗಳು ಇವೆಲ್ಲವೂ ಖಂಡಿತವಾಗಿಯೂ ಕೆಲವು ಅರ್ಥವನ್ನು ಹೊಂದಿವೆ. ಅಂತೆಯೇ, ದೇಹದ ಮೇಲೆ ಮಚ್ಚೆ ಸಹ ಇರುತ್ತದೆ. ನಮ್ಮ ದೇಹದ ಮೇಲಿನ ಮಚ್ಚೆ ಸೌಂದರ್ಯವನ್ನು ಹೆಚ್ಚಿಸಿದರೆ, ಅದು ನಮ್ಮ ಹೃದಯದ ಬಗ್ಗೆಯೂ ಹೇಳುತ್ತದೆ. ನಿಮ್ಮ ತುಟಿಗಳಲ್ಲಿ ಮಚ್ಚೆ ಇದ್ದರೆ ಇನ್ನೊಬ್ಬರ ಹೃದಯದ ಬಗ್ಗೆ ನಾವು ಹೇಗೆ ತಿಳಿಯಬಹುದು ಎನ್ನುವುದು ನಿಮಗೆ ತಿಳಿದಿದೆಯೇ..? ಈ ವಿಷಯಗಳನ್ನು ನೀವು ತಿಳಿದುಕೊಳ್ಳಲೇಬೇಕು. ಕೆಳ ತುಟಿಯ ಮಧ್ಯಭಾಗದಲ್ಲಿ ಮಚ್ಚೆ ಒಬ್ಬ ವ್ಯಕ್ತಿಯು ಅವನ ಮುಖದ ಮೇಲೆ ಕೆಳ ತುಟಿಯ ಮಧ್ಯದಲ್ಲಿ ಮಚ್ಚೆಯನ್ನು ಹೊಂದಿದ್ದರೆ, ಅಂತಹ ಮಹಿಳೆಯರು ತಮ್ಮ ಗಂಡನನ್ನು ತುಂಬಾ ಪ್ರೀತಿಸುತ್ತಾರೆ ಎನ್ನುವ ನಂಬಿಕೆಯಿದೆ. ಆದರೆ ಕೆಲವೊಮ್ಮೆ ಅವರ ಅಜ್ಞಾನದಿಂದಾಗಿ, ಇಬ್ಬರೂ ಜಗಳಕ್ಕೆ ಇಳಿಯುತ್ತಾರೆ. ಅಂತಹ ಪುರುಷರು ಸಹ ತಮ್ಮ ಹೆಂಡತಿಯನ್ನು ತುಂಬಾ ಪ್ರೀತಿಸುತ್ತಾರೆ, ಆದರೆ ಅನೇಕ ಬಾರಿ ಅವರು ಕೋಪಗೊಳ್ಳುತ್ತಾರೆ ಮತ್ತು ಸಂಗಾತಿಯೊಂದಿಗೆ ನಿರರ್ಗಳವಾಗಿ ಮಾತನಾಡುತ್ತಾರೆ. ಮೇಲ್ತುಟಿಯ ಮೇಲೆ ಎಡಭಾಗದಲ್ಲಿ ಮಚ್ಚೆ ಮೇಲ್ಭಾಗದ ತುಟಿಯ ಎಡಭಾಗದಲ್ಲಿ…

Read More