ಅಮರಾವತಿ: ಮುತ್ತು ಕೊಡುವ ವೇಳೆ ಗಂಡನ (Husband) ನಾಲಿಗೆಯನ್ನು ಪತ್ನಿ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಆಂಧ್ರಪ್ರದೇಶದ (Andhra Pradesh) ಕರ್ನೂಲ್ನಲ್ಲಿ (Kurnool) ನಡೆದಿದೆ. ಗಂಡನ ಮೇಲಿನ ಸಿಟ್ಟನ್ನು ಹೆಂಡತಿ (Wife) ಈ ರೀತಿ ವಿಚಿತ್ರವಾಗಿ ತೀರಿಸಿಕೊಂಡಿದ್ದಾಳೆ. ಈಗ ಇಬ್ಬರ ಗಲಾಟೆ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಆಂಧ್ರದ ಥಾರಚಂದ್ ನಾಯ್ಕ್ ಹಾಗೂ ಪುಷ್ಪಾವತಿ 2015ರಲ್ಲೇ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಯಲ್ಲಮ್ಮಗುಟ್ಟಾ ಥಂಡಾದಲ್ಲಿ ಇವರಿಬ್ಬರು ವಾಸವಾಗಿದ್ದರು. ಅನ್ಯೋನ್ಯವಾಗಿದ್ದ ಗಂಡ, ಹೆಂಡ್ತಿ ಮಧ್ಯೆ ಕಳೆದ ಎರಡು ವರ್ಷಗಳಿಂದ ಆಗಾಗ ಜಗಳಗಳು ನಡೆಯುತ್ತಿತ್ತು. ಇದರಿಂದ ಬೇಸತ್ತಿದ್ದ ಹೆಂಡತಿ ಈ ನಿರ್ಧಾರ ಕೈಗೊಂಡಿದ್ದಾಳೆ ಎನ್ನಲಾಗಿದೆ. ಇತ್ತೀಚೆಗೆ ದಂಪತಿ ನಡುವೆ ಜೋರು ಜಗಳ ನಡೆದಿದೆ. ಈ ವೇಳೆ ಇವರಿಬ್ಬರ ಕಿತ್ತಾಟ ಇಡೀ ಬೀದಿಯ ಜನರಿಗೆಲ್ಲಾ ಕೇಳಿಸಿದೆ. ಸ್ವಲ್ಪ ಸಮಯದ ಬಳಿಕ ಇಬ್ಬರ ಕೋಪ ತಣ್ಣಗಾಗಿ ಜಗಳವೂ ನಿಂತಿದೆ. ಬಳಿಕ ಪತಿ ಪುಷ್ಪಾವತಿಗೆ ಮುತ್ತು ಕೊಡಲು ಹೋಗಿದ್ದಾನೆ. ಇದರಿಂದ ಕೋಪಗೊಂಡ ಪುಷ್ಪಾವತಿ ಪತಿಯ ನಾಲಿಗೆಯನ್ನು ರಕ್ತ ಬರುವ…
Author: Prajatv Kannada
ರಾಂಚಿ: ಪ್ರೀತಿಗೆ ಜಾತಿ, ಧರ್ಮ, ಭಾಷೆ, ದೇಶ, ಗಡಿಯ ಹಂಗಿಲ್ಲ ಎನ್ನುವುದಕ್ಕೆ ಇತ್ತೀಚಿನ ಉದಾಹರಣೆ ಎಂಬಂತೆ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಲವ್ ಸ್ಟೋರಿಯೇ ಸಾಕ್ಷಿ. ಪಬ್ಜೀ ಲವರ್ಗಾಗಿ ಪಾಕಿಸ್ತಾನದಿಂದ ಅಕ್ರಮವಾಗಿ ಭಾರತ ಪ್ರವೇಶಿಸಿ ಸುದ್ದಿಯಾಗಿದ್ದಾಳೆ. ಇದರ ಬೆನ್ನಲ್ಲೇ ಇನ್ಸ್ಟಾ ಬಾಯ್ಫ್ರೆಂಡ್ಗಾಗಿ ಪೋಲೆಂಡ್ ಮಹಿಳೆಯೊಬ್ಬಳು ಜಾರ್ಖಂಡ್ಗೆ ಆಗಮಿಸಿ, ಸುದ್ದಿಯಲ್ಲಿದ್ದಾಳೆ. ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಬಾಯ್ಫ್ರೆಂಡ್ಗಾಗಿ ಪೋಲೆಂಡ್ನ 49 ವರ್ಷದ ಮಹಿಳೆಯೊಬ್ಬರು ಜಾರ್ಖಂಡ್ನ ಹಜಾರಿಬಾಗ್ನಲ್ಲಿ ತನ್ನ ಪ್ರೇಮಿಯೊಂದಿಗೆ ವಾಸಿಸಲು ಭಾರತಕ್ಕೆ ಆಗಮಿಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಪರಿಚಯ ಪೊಲೆಂಡ್ನ ಮಹಿಳೆ ಬಾರ್ಬಾರಾ ಪೊಲಾಕ್ ಹಾಗೂ ಜಾರ್ಖಂಡ್ನ ಹಜಾರಿಬಾಗ್ನ ಶಾದಾಬ್ ಮಲಿಕ್ ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗುತ್ತಾರೆ. ಪರಿಚಯ ಸ್ನೇಹಕ್ಕೆ ತಿರುಗಿ, ಸ್ನೇಹ ಪ್ರೀತಿಗೆ ತಿರುಗುತ್ತದೆ. ಇಬ್ಬರೂ ಪ್ರೀತಿಯಲ್ಲಿ ಬೀಳುತ್ತಾರೆ. ಒಬ್ಬರನ್ನೊಬ್ಬರು ಬಿಟ್ಟಿರಲು ಸಾಧ್ಯವಾಗದೇ, ವಿದೇಶಿ ಮಹಿಳೆ ತನ್ನ ಆರು ವರ್ಷದ ಮಗಳು ಅನನ್ಯಾಳೊಂದಿಗೆ ಭಾರತಕ್ಕೆ ಆಗಮಿಸಿದ್ದು, ಪ್ರಸ್ತುತ ಪ್ರಿಯಕರ ಶಾದಾಬ್ ಜೊತೆ ಬರತುವಾ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಇಬ್ಬರು ಮೊದಲ ಬಾರಿಗೆ 2021 ರಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಭೇಟಿಯಾದರು. ಶೀಘ್ರದಲ್ಲೇ ಅವರ ಸ್ನೇಹ ಪ್ರೀತಿಯಾಗಿ ಅರಳಿತು.…
ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಮಳೆ ಅಬ್ಬರ ಹಿನ್ನೆಲೆ ಮಳೆ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್(Santosh Lad) ಭೇಟಿ ನೀಡಿದ್ದಾರೆ. ಅಳ್ನಾವರ ತಾಲೂಕಿನ ಭಾಗದಲ್ಲಿ ಹೆಚ್ಚಿನ ಹಾನಿ ಆಗಿದ್ದು ತಾಲೂಕಿನಲ್ಲಿ ಸಂಚಾರ ನಡೆಸಿದ್ದಾರೆ. ಕಂಬಾರಗಣವಿ ಹಳ್ಳದ ಸೇತುವೆ ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗ : ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಹೆಸರಿನಲ್ಲಿ ಜೀವನ ಮಾಡುತ್ತಿರು ವಂತಹ ವ್ಯಕ್ತಿಗಳು. ಅವರು ಸಂವಿಧಾನಕ್ಕೆ ಕಟಿಬದ್ಧರಲ್ಲ. ಸಂವಿಧಾನಕ್ಕೆ ಗೌರವ ಕೊಡುವವರು ನಿಜ ಕಾಂಗ್ರೆಸ್ಸಿಗರು. ಅವರು ಈ ಹಿಂದೆ ಇದ್ದರು ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ(KS Eshwarappa) ಹೇಳಿದ್ದಾರೆ. ರಾಜಕೀಯ ನಾಯಕ ಆತಿಥ್ಯಕ್ಕೆ ಐಎಎಸ್ ಅಧಿಕಾರಿಗಳ ನಿಯೋಜನೆ ಹಾಗೂ ಬಿಜೆಪಿ ಶಾಸಕರನ್ನು ಸದನದಿಂದ ಅಮಾನತು ಮಾಡಿರುವ ವಿಚಾರಕ್ಕೆ ಶಿವಮೊಗ್ಗದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ಅಂಬೇಡ್ಕರ್ ಸಂವಿಧಾನದ ಬಗ್ಗೆ ಗೌರವ ಇಲ್ಲ. ಅಂಬೇಡ್ಕರ್ ಸಂವಿಧಾನವನ್ನು ಒಪ್ಪುವರು ಐಎಎಸ್ ಅಧಿಕಾರಿಗಳನ್ನು ಯಾವ ಲೆಕ್ಕಾಚಾರದ ಮೇಲೆ ಜೈಲಿನಲ್ಲಿದ್ದು ಜಾಮೀನಿನ ಮೇಲೆ ಹೊರಬಂದ ಆರೋಪಿಗಳನ್ನು ಆಹ್ವಾನ ಮಾಡಲು ಕಳಿಸಿದ್ದೀರಿ ಎಂದು ಪ್ರಶ್ನೆ ಮಾಡಿದರು. ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲು ಕಾನೂನು ಬದ್ಧವಾಗಿ ಅವಕಾಶ ಇದೆಯಾ? ಇದನ್ನು ಬಂಡತನದ ಕಾಂಗ್ರೆಸ್ ಕೇಳಲು ಸಾಧ್ಯವಿಲ್ಲ, ಯಾಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಹೆಸರಿನಲ್ಲಿ ಜೀವನ…
ಬೆಂಗಳೂರು: ಪಿಎಸ್ಐ ಹಗರಣ ನ್ಯಾಯಾಂಗ ತನಿಖೆಗೆ ವಹಿಸಿದ್ದು ದ್ವೇಷದ ರಾಜಕಾರಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದವರು ಪಿಎಸ್ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ್ದಾರೆ. ಈ ದ್ವೇಷದ ರಾಜಕಾರಣ ಎಲ್ಲಿಗೆ ಹೋಗುತ್ತಿದೆ ಅನ್ನುವುದು ಗೊತ್ತಾಗುತ್ತಿಲ್ಲ. ಪಿಎಸ್ಐ ಹಗರಣ ನಾವೇ ಹೊರಗೆ ತಂದು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇವು. ಪ್ರಕರಣದಲ್ಲಿ ಎಡಿಜಿಪಿ ಹುದ್ದೆಯ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದ್ದೇವೆ.ಈ ಹಗರಣದಲ್ಲಿ ಕಾಂಗ್ರೆಸ್ನವರು ಇದ್ದಾರೆ. ಪ್ರಕರಣದ ತನಿಖೆ ನಡೆದು ಕೊರ್ಟ್ನಲ್ಲಿದೆ. ಈ ಸಂದರ್ಭ ಮತ್ತೆ ತನಿಖೆಗೆ ಆದೇಶ ಮಾಡಿರುವುದು ದ್ವೇಷ ರಾಜಕೀಯವನ್ನು ತೋರಿಸುತ್ತದೆ ಎಂದರು. ದರ ಹೆಚ್ಚಳ ಮಾಡಿದ ಕಾಂಗ್ರೆಸ್ ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ವಿದ್ಯುತ್ ದರ ಹೆಚ್ಚಳ ಮಾಡಿದರು. ಎಲ್ಲ ಕಾಯಿಪಲ್ಯೆ ದರ ಹೆಚ್ಚಳ ಆಗಿದೆ. ಈಗ ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಆಗಸ್ಟ್ 1ರ ನಂತರ ಸೈಟ್, ಕಾರು, ಹೊಸ ಮನೆ ಖರೀದಿ ದರವೂ ಹೆಚ್ಚಳವಾಗಲಿದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬಂದ…
,ಸೂರ್ಯೋದಯ: 06.03 AM, ಸೂರ್ಯಾಸ್ತ : 06.49 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಅದಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ವರ್ಷ ಋತು, ತಿಥಿ: ಇವತ್ತು ಪಂಚಮಿ 11:44 AM ತನಕ ನಂತರ ಷಷ್ಠಿ ನಕ್ಷತ್ರ: ಇವತ್ತು ಉತ್ತರ ಫಾಲ್ಗುಣಿ 07:47 PM ತನಕ ನಂತರ ಹಸ್ತ ಯೋಗ: ಇವತ್ತು ಪರಿಘ 02:17 PM ತನಕ ನಂತರ ಶಿವ ಕರಣ: ಇವತ್ತು ಬಾಲವ 11:44 AM ತನಕ ನಂತರ ಕೌಲವ ರಾಹು ಕಾಲ: 04:30 ನಿಂದ 06:00 ವರೆಗೂ ಯಮಗಂಡ: 12:00 ನಿಂದ 01:30 ವರೆಗೂ ಗುಳಿಕ ಕಾಲ: 03:00 ನಿಂದ 04:30 ವರೆಗೆ ಅಮೃತಕಾಲ: 11.44 AM to 01.32 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:56 ನಿಂದ ಮ.12:48 ವರೆಗೂ ಮೇಷ ರಾಶಿ: ಉದ್ಯೋಗ ಸಮಸ್ಯೆಯಿಂದ ಕೋರ್ಟ್ ಮೆಟ್ಟಲೆರುವ ಸಂಭವ, ಉದ್ಯೋಗ ಸ್ಥಳಕ್ಕೆ ಸಾಲಗಾರರ ಕಾಟ,ಮಕ್ಕಳು ವಿರೋಧಿಯಾಗಲು ನಿಮ್ಮ ಸ್ವಭಾವವೇ ಕಾರಣ, ಪ್ರೇಮಿಗಳಿಬ್ಬರು ಮನಸ್ತಾಪವಾಗಲು…
ಬೆಂಗಳೂರು : ಬಿಲ್ಲವ, ಈಡಿಗ ಸಮಾವೇಶದಲ್ಲಿ ನಾನು ಹೇಳಿದ ಮಾತಿಗೆ ಬದ್ಧನಾಗಿದ್ದೇನೆ. ಕಾದು ನೋಡಿ ರಾಜಕಾರಣ ಏನೇನು ಆಗುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ” ಅಸಮಾಧಾನದ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ಶುಕ್ರವಾರ ನಾನು ಹೇಳಿದ್ದು ನಿಜ ಒಪ್ಪಿಕೊಳ್ಳುತ್ತೇನೆ ” ಎಂದರು. ” ನಾನು ಒಂದು ಸರಿ ಹೇಳಿದ ಮಾತು ವಾಪಾಸ್ ತಗೆದುಕೊಳ್ಳೋದಿಲ್ಲ. ನಾನು ಹೇಳಿದ ಮಾತಿಗೆ ಬದ್ದನಾಗಿರುತ್ತೇನೆ. ನಾನು ಹೇಳದ ಮೇಲೆ ನನ್ನ ಮಾತಲ್ಲ. ಹಾಗಿದ್ದರೂ,ನಾನು ಹೇಳಿದ ಮೇಲೆ ನನ್ನ ಮಾತಿಗೆ ಬದ್ದನಾಗಿರುತ್ತೇನೆ ” ಎಂದರು. ಕ್ಯಾಮೆರಾ ಇರಲಿಲ್ಲ ಎಂದು ಮಾತಾಡಿದ್ದೇನೆ ಶುಕ್ರವಾರ ಸಭೆಗೆ ಕರೆದಿದ್ದರು ಹೋಗಿದ್ದೆ ಅಷ್ಟೇ. ಅಲ್ಲಿ ಕ್ಯಾಮೆರಾಗಳು ಇರಲಿಲ್ಲ ಮಾತಾಡಿದ್ದೇನೆ. ಕ್ಯಾಮೆರಾಗಳು ಇದ್ದಿದ್ದರೆ ಮಾತಾಡುತ್ತಿರಲಿಲ್ಲ. ನಾವು ಹಿಂದುಳಿದವರು ಅಷ್ಟೆಲ್ಲಾ ಗಮನಿಸಿಲ್ಲ. ಯಾರೋ ವಿಡಿಯೋವನ್ನು ಹಾಕಿರುತ್ತಾರೆ” ಎಂದು ಹೇಳಿದರು. ಏನಂದಿದ್ದರು ಬಿ.ಕೆ ಹರಿಪ್ರಸಾದ್? ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಬಿಕೆ ಹರಿಪ್ರಸಾದ್, ಪರೋಕ್ಷವಾಗಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಟ್ವೀಟ್ ವಾರ್ ಮುಂದುವರೆದಿದೆ. ತಾವು ‘ಸತ್ಯರಾಮಯ್ಯ’ನವರೇ ಆಗಿದ್ದರೆ, ಸ್ವತಃ ತಾವುಗಳೇ ನೇಮಿಸಿದ್ದ, ತಮ್ಮದೇ ಸರ್ಕಾರದ ಕಾನೂನು ಸಚಿವರೇ ಮುಖ್ಯಸ್ಥರಾಗಿದ್ದ ಸದನ ಸಮಿತಿ ನೀಡಿದ್ದ ನೈಸ್ ಕರ್ಮಕಥೆಯನ್ನು ದಯಮಾಡಿ ಓದಿ. ನೈಸ್ ಅಕ್ರಮ ತನಿಖೆಗೆ ನಾನೇನು ಮಾಡಿದ್ದೆ ಎಂದು ಸಿಎಂ ಕೇಳಿದ್ದಾರೆ. ಈ ಬಾಲಿಶ ಪ್ರಶ್ನೆಗೆ ಗೌರವದಿಂದಲೇ ಉತ್ತರಿಸುವೆ. ನಾನು ಸಿಎಂ ಆಗಿದ್ದಾಗ ನನ್ನ ಜತೆಗಿದ್ದ ಅಡ್ವೋಕೇಟ್ ಜನರಲ್, ಅವರ ಕಾನೂನು ತಂಡ ನೈಸ್ ದೌಲತ್ತಿನ ಹುಟ್ಟಡಗಿಸಿತ್ತು. ಅಧಿಕಾರಿಗಳನ್ನು ಬೆದರಿಸಿದ್ದ ಆ ಕಂಪನಿಗೆ ಬೊಂಬೆ ತೋರಿಸಿದ್ದೆವು ಎಂದು ಟ್ವೀಟ್ ಮೂಲಕ ಸಿಎಂ ವಿರುದ್ಧ ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.
ಗದಗ;- ಜಿಲ್ಲೆಯ ಬೆಟಗೇರಿ ಅವಳಿ ನಗರದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಬೈಕ್ ರೈಡಿಂಗ್ ನಿಂದ ಜನರು ಹೈರಾಣಾಗಿದ್ದು ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೆಕ್ಕಲ್ಲ ಕಡಿವಾಣ ಹಾಕಲು ಮಂಗಳವಾರ ಮತ್ತು ಬುಧವರಾ ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆಯಲ್ಲಿ ತೋಡಗಿರುವ ಜಿಲ್ಲಾ ಪೊಲೀಸ್ ಇಲಾಖೆ ಮಕ್ಕಳಿಗೆ ಮತ್ತು ಬೈಕ್ ಚಲಾಯಿಸಲು ಅನುಮತಿ ನಿಡುವ ಪಾಲಕರಿಗೂ ಬಿಸಿ ಮುಟ್ಟಿಸಿದ್ದಾರೆ. ದಾಳಿಯಲ್ಲಿ ಸಂದರ್ಭದಲ್ಲಿ ಅತ್ಯಂತ ಕರ್ಕಶವಾಗಿ ಶಬ್ದ ಮಾಡುವ ಸೈಲೆನ್ಸರ್ಗಳನ್ನು ಬಳಕೆ ಮಾಡುತ್ತಿದ್ದ 91 ದ್ವಿಚಕ್ರ ವಾಹನಗಳನ್ನು ನಾಶ ಮಾಡಿದ್ದಾರೆ. ಕರ್ಕಶ ಶಬ್ದ ಹೊರಸೂಸುವ ಸೈಲೆನ್ಸರ್ ಗಳನ್ನು ಅಳವಡಿಸಿಕೊಡುಇವ ಗ್ಯಾರೇಜ್ಗಳಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಗದಗ ನಗರದ ಪೊಲೀಸ್ ಭವನದ ಆವರಣದಲ್ಲಿ ರೂಲರ್ ಹತ್ತಿಸಿ ಡಿಫೆಕ್ಟಿವ್ ಸೈಲೆನ್ಸರ್ ನಾಶ ಮಾಡಿದ್ದಾರೆ. ರೂಲರ್ ಹತ್ತಿದ್ದಂತೆ ಕರ್ಕಶ ಶಬ್ದ ಬೀರ್ತಿದ್ದ ಸೈಲೆನ್ಸರ್ ಗಳು ಪುಡಿ ಪುಡಿ ಮಾಡಲಾಗಿದೆ. ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯ ಅನೇಕ ಕಡೆ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದ ಡಿಫೆಕ್ಟಿವ್ ಸೈಲೆನ್ಸರ್ ಗಳು ಒಂದೇ ಏಟಿಗೆ 91 ದ್ವಿಚಕ್ರ ವಾಹನಗಳ…
ಧಾರವಾಡ ;– ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರರನ್ನು ಬಂಧಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಬಿಜೆಪಿ ಶಾಸಕ ಮಹೇಶ ತೆಂಗಿನಕಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಬಂಧನವಾಗಿರುವ ಉಗ್ರರನ್ನು ಅಮಾಯಕರಂತೆ ಕಾಂಗ್ರೆಸ್ ಬಿಂಬಿಸುತ್ತಿದೆ. ಇದಕ್ಕೆ ರಾಜ್ಯ ಗೃಹ ಮಂತ್ರಿಗಳ ಹೇಳಿಕೆಯೇ ಸಾಕ್ಷಿ. ಗೃಹ ಸಚಿವರು ಬಂಧಿತ ಉಗ್ರರರನ್ನು ಉಗ್ರರರು ಎಂದು ಹೇಳಲು ಆಗುವುದಿಲ್ಲ ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತರ ಪುಷ್ಟೀಕರಣ ನೀತಿಯನ್ನು ಸ್ಪಷ್ಟವಾಗಿ ಮಾಡುತ್ತಿದೆ ಕಾಂಗ್ರೆಸ್ನ ಈ ನೀತಿಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಗೆ ಬರದಂತೆ ಮಾಡುತ್ತಿದೆ. ಕಾಂಗ್ರೆಸ್ನವರಿಗೆ ಒಂದು ಸೌಜನ್ಯತೆ ಇರಬೇಕು. ತನಿಖೆಗೆ ಮೊದಲೇ ಉಗ್ರರ ಬಗ್ಗೆ ಸಾಫ್ಟ್ ಕಾರ್ನರ್ ತೋರಿಸಿವುದು ಸರಿಯಲ್ಲ. ಈ ಸಾಪ್ಟ್ ಕಾರ್ನರ್ನಿಂದ ಮತ್ತಷ್ಟು ಉಗ್ರರು ಹುಟ್ಟಿಕೊಳ್ಳಲು ಅವಕಾಶ ನೀಡುತ್ತದೆ ಎಂದರು. ಇನ್ನೂ ಭಜರಂಗದಳ ಕಾರ್ಯಕರ್ತರ ಗಡಿ ಪಾರು ವಿಚಾರವಾಗಿ ಮಾತನಾಡಿ, ಬಜರಂಗದಳದ ಕಾರ್ಯಕರ್ತರನ್ನು ಗಡಿಪಾರು ಮಾಡಲು ಕಾಂಗ್ರೆಸ್ನವರ ಬಳಿ ಏನು ಅಜೆಂಡಾ ಇದೆ. ಅಲ್ಪಸಂಖ್ಯಾತರ ಓಲೈಕೆಗೆ ಇಂತ ಕಾರ್ಯ ಮಾಡುತ್ತಿದೆ. ಓಲೈಕೆಗಾಗಿ ಯಾವ ಹಂತಕ್ಕಾದರೂ ಹೋಗುತ್ತೇವೆ ಎನ್ನುವುದಕ್ಕೆ…