Author: Prajatv Kannada

ದೆಹಲಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಅನುಮತಿ ನೀಡಿದ್ದು, ಹಿಂದೂಗಳಿಗೆ ಜಯವಾಗಿದೆ. ಐವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ಉತ್ತರ ಪ್ರದೇಶದ ವಾವಾರಣಾಸಿ ಕೋರ್ಟ್‌ ಇಂದು ವಿಚಾರಣೆ ನಡೆಸಿತು. ಮಸೀದಿಗೂ ಮೊದಲು ಈ ಸ್ಥಳದಲ್ಲಿ ಏನಿತ್ತು? ಇದನ್ನು ಅರಿಯೋದಕ್ಕೆ ಸರ್ವೆಗೆ ಕೋರ್ಟ್ ಅನುಮತಿ ನೀಡಿದೆ. ಪುರಾತತ್ವ ಇಲಾಖೆಯಿಂದ ಜ್ಞಾನವಾಪಿ ಸಂಕೀರ್ಣದಲ್ಲಿ ಸರ್ವೆ ನಡೆಯಲಿದೆ. ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಸಮೀಕ್ಷೆ ನಡೆಸಿ ಅಂತಿಮ ವರದಿಯನ್ನು ಆಗಸ್ಟ್ 4 ರೊಳಗೆ ಸಲ್ಲಿಸಬೇಕು ಎಂದು ವಾರಣಾಸಿ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ. ಹಿಂದೂ ಪರ ವಕೀಲ ಸುಭಾಷ್ ನಂದನ್ ಚತುರ್ವೇದಿ ಮಾತನಾಡಿ, ಇದು ಸತ್ಯಕ್ಕೆ ಸಂದ ಜಯ. ASIS ಸರ್ವೆಗೆ ನಮ್ಮ ಅರ್ಜಿಯನ್ನು ನ್ಯಾಯಾಲಯ ಸ್ವೀಕರಿಸಲಾಗಿದೆ. ಇದು ಪ್ರಕರಣದಲ್ಲಿ ಮಹತ್ವದ ತಿರುವು ಎಂದು ಹೇಳಿದ್ದಾರೆ. ಹಿಂದೂ ಪರ ವಾದ ಮಂಡಿಸಿದ ವಿಷ್ಣು ಶಂಕರ್ ಜೈನ್ ಮಾತನಾಡಿ, ನಮ್ಮ ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದೆ. ವಾಜು ಟ್ಯಾಂಕ್ ಹೊರತುಪಡಿಸಿ ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸರ್ವೆ ನಡೆಸಲು ನ್ಯಾಯಾಲಯ ಆದೇಶಿಸಿದೆ. 3 ರಿಂದ 6 ತಿಂಗಳೊಳಗೆ ಸಮೀಕ್ಷೆಯನ್ನು ಪೂರ್ಣಗೊಳಿಸಬಹುದು ಎಂದು ಹೇಳಿದ್ದಾರೆ.

Read More

ದೆಹಲಿ: ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಅರ್ಜಿದಾರ ಪೂರ್ಣೇಶ್ ಈಶ್ವರಭಾಯಿ ಮತ್ತು ಗುಜರಾತ್ ಸರ್ಕಾರಕ್ಕೆ (Gujarat government) ನೋಟಿಸ್ ನೀಡಿದೆ. ಇಂದು ಪ್ರಕರಣ ವಿಚಾರಣೆ ನಡೆಸಿದ ನ್ಯಾ.ಬಿ.ಆರ್ ಗವಾಯಿ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠ ಪ್ರತಿವಾದಿಗಳ ವಾದ ಆಲಿಸದೇ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ, ಮುಂದಿನ ವಿಚಾರಣೆ ಅಗಸ್ಟ್ 4 ರಂದು ನಡೆಯಲಿದೆ ಎಂದು ತಿಳಿಸಿತು ಗಾಂಧಿ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಮಧ್ಯಂತರ ತಡೆಯಾಜ್ಞೆಗೆ ಒತ್ತಾಯಿಸಿದರು. ಅರ್ಜಿದಾರರು 111 ದಿನಗಳಿಂದ ಸಂಕಷ್ಟದಲ್ಲಿದ್ದಾರೆ. ಅವರು ಈಗಾಗಲೇ ಒಂದು ಅಧಿವೇಶನ ಕಳೆದುಕೊಂಡಿದ್ದಾರೆ. ಸದ್ಯ ನಡೆಯುತ್ತಿರುವ ಅಧಿವೇಶನಕ್ಕೆ ಹಾಜರಾಗಿಲ್ಲ. ವಯನಾಡಿನ ಸಂಸತ್ ಕ್ಷೇತ್ರಕ್ಕೆ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ತಡೆ ನೀಡಬಹುದು ಎಂದು ಮನವಿ ಮಾಡಿದರು. ಸಿಂಘ್ವಿ ವಾದ ಆಲಿಸಿದ…

Read More

ಮಂಡ್ಯ :- ಪ್ರತಿಯೊಬ್ಬರಲ್ಲೂ ಒಂದು ಶಕ್ತಿ, ಜೊತೆಗೊಬ್ಬ ಕಲಾವಿದ ಕೂಡ ಇರುತ್ತಾನೆ. ಆದರೆ, ಅದನ್ನು ಹೊರ ತರಲು ತರಬೇತಿ ಶಿಬಿರಗಳು ಸಹಕಾರಿಯಾಗಲಿವೆ ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದರು. ಮದ್ದೂರು ಪಟ್ಟಣದ ಪಿಕಾರ್ಡ್ ( ಪಿ ಎಲ್ ಡಿ ) ಬ್ಯಾಂಕ್ ನ ಕುವೆಂಪು ಸಭಾಂಗಣವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ತರಬೇತಿಗಳು ಜನರಲ್ಲಿ ಇರುವ ಮಾಹಿತಿ ಕೊರತೆ ಹೊಗಲಾಡಿಸುವ ತನ್ಮೂಲಕ ಶಿಕ್ಷಣ ಮತ್ತು ಸಂವಹನ ಮೂಡಿಸುವಲ್ಲಿ ಸಹಕಾರಿಯಾಗಲಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸುವ ಜೊತೆಗೆ ರೈತರು, ಯುವ ಜನರು, ಮಹಿಳಾ ಸಂಘಗಳ ಕುಶಲತೆ ಹೆಚ್ಚಿಸಲು ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಿರುವ ಪಿಕಾರ್ಡ್ ಬ್ಯಾಂಕ್ ನ ಆಡಳಿತ ಮಂಡಳಿ ಕಾರ್ಯ ಶ್ಲಾಘನೀಯವಾಗಿದೆ ಎಂದರು. ಈ ತರಬೇತಿ ಕೇಂದ್ರಕ್ಕೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ರಾಜ್ ಆಶಯಗಳ ಕುರಿತು ಸಂಪನ್ಮೂಲ ವ್ಯಕ್ತಿ ಕೆ. ರವಿಕುಮಾರ್ ಮಾತನಾಡಿದರು. ಆರ್ಥಿಕ ಸಾಕ್ಷರತೆ ಕುರಿತು ಅರುಣಾ ಕುಮಾರಿ ರವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಂಪೇಗೌಡ ವಹಿಸಿದ್ದರು. ಕಾರ್ಯಕ್ರಮದಲ್ಲಿ…

Read More

ನಮ್ಮ ದೇಹ ಫಿಟ್ ಆಗಿರಲು ಹಲವಾರು ರೀತಿಯ ವಿಟಮಿನ್‌ ಬೇಕು. ಹೀಗಾಗಿ ಜೋಳವನ್ನು ಸೇವಿಸುವುದರಿಂದ ತೂಕ ಕಡಿಮೆಯಾಗುತ್ತದೆ. ಇದು ಬಹಳಷ್ಟು ಫೈಬರ್ ಅನ್ನು ಹೊಂದಿರುವುದರಿಂದ ಹೊಟ್ಟೆಯನ್ನು ಆರೋಗ್ಯಕರವಾಗಿರಿಸುತ್ತದೆ. ಮತ್ತೆ ಮತ್ತೆ ಹಸಿವಿನ ಅನುಭವವಾಗುವುದಿಲ್ಲ. ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಣ್ಣುಗಳಿಗೆ ಪ್ರಯೋಜನಕಾರಿ – ಕಣ್ಣುಗಳನ್ನು ಆರೋಗ್ಯವಾಗಿಟ್ಟುಕೊಳ್ಳಲು ಕಾರ್ನ್‌ ಅನ್ನು ನಿಯಮಿತವಾಗಿ ಸೇವನೆ ಮಾಡಬೇಕು. ಇದು ಬಹಳಷ್ಟು ಲುಟೀನ್ ಅನ್ನು ಹೊಂದಿರುತ್ತದೆ. ಹಾಗಾಗಿ ಜೋಳದ ಸೇವನೆಯಿಂದ ದೃಷ್ಟಿಶಕ್ತಿ ಹೆಚ್ಚುತ್ತದೆ. ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ಅವಶ್ಯವಾಗಿ ಕಾರ್ನ್‌ ತಿನ್ನಿ. ಜೀರ್ಣಕ್ರಿಯೆಗಾಗಿ – ಕಾರ್ನ್ ಜೀರ್ಣಾಂಗ ವ್ಯವಸ್ಥೆಗೆ ಪ್ರಯೋಜನಕಾರಿಯಾಗಿದೆ. ಇದು ಜೀರ್ಣಕ್ರಿಯೆಯನ್ನು ಆರೋಗ್ಯಕರವಾಗಿರಿಸುತ್ತದೆ. ಏಕೆಂದರೆ ಇದರಲ್ಲಿ ಫೈಬರ್‌ ಅಂಶ ಹೇರಳವಾಗಿದೆ. ಮಲವಿಸರ್ಜನೆಯ ಸಮಸ್ಯೆಗಳಿದ್ದರೆ ಕಾರ್ನ್ ಅನ್ನು ಸೇವಿಸಬಹುದು. ರಕ್ತದಲ್ಲಿನ ಸಕ್ಕರೆನಿಯಂತ್ರಣ – ಕಾರ್ನ್ ರಕ್ತದಲ್ಲಿನ ಸಕ್ಕರೆ ನಿಯಂತ್ರಣ ಮಾಡುತ್ತದೆ. ಇದನ್ನು ಪ್ರತಿದಿನ ಸೇವಿಸಿದರೆ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ

Read More

ಮಂಡ್ಯ :- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಚಾಲನೆ ದೊರೆತಿದ್ದು, ಮದ್ದೂರು ತಾಲೂಕಿನ ವಿವಿಧ ಬಾಪೂಜಿ ಸೇವಾ ಕೇಂದ್ರಗಳಿಗೆ ತಾ.ಪಂ ಆಡಳಿತಾಧಿಕಾರಿ ಧನರಾಜ್ ಬೋರಾಳೆ ಭೇಟಿ ನೀಡಿ ಪರಿಶೀಲನೆ ನಡೆಸಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿದರು. ಮದ್ದೂರು ತಾಲೂಕಿನ ಗೆಜ್ಜಲಗೆರೆ, ಹೆಮ್ಮನಹಳ್ಳಿ, ನಿಡಘಟ್ಟ, ಸೋಮನಹಳ್ಳಿ ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡರು. ಸೇವಾ ಕೇಂದ್ರಗಳಿಗೆ ಆಗಮಿಸುವ ಫಲಾನುಭವಿಗಳಿಗೆ ಕುಡಿಯುವ ನೀರು, ಶೌಚಾಲಯ, ಆಸನದ ವ್ಯವಸ್ಥೆ, ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಪಿಡಿಓ ಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯನ್ನು ಎಪಿಎಲ್ – ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿರುವ ಮನೆ ಯಜಮಾನಿ ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಅರ್ಹ ಫಲಾನುಭವಿಗಳಿಗೆ ಆಗಸ್ಟ್ ತಿಂಗಳಿನಿಂದಲೇ ಮಾಸಿಕ 2 ಸಾವಿರ ರೂ. ಹಣವನ್ನು ನೇರವಾಗಿ ಮನೆ ಯಜಮಾನಿಯ ಖಾತೆಗೆ ಜಮೆಯಾಗಲಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಿ…

Read More

ಸೂರ್ಯೋದಯ: 06.03 AM, ಸೂರ್ಯಾಸ್ತ : 06.49 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಅದಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ವರ್ಷ ಋತು, ತಿಥಿ: ಇವತ್ತು ಚೌತಿ 09:26 AM ತನಕ ನಂತರ ಪಂಚಮಿ ನಕ್ಷತ್ರ: ಇವತ್ತು ಪುಬ್ಬಾ 04:58 PM ತನಕ ನಂತರ ಉತ್ತರ ಫಾಲ್ಗುಣಿ ಯೋಗ: ಇವತ್ತು ವರಿಯಾನ್ 01:25 PM ತನಕ ನಂತರ ಪರಿಘ ಕರಣ: ಇವತ್ತು ವಿಷ್ಟಿ 09:26 AM ತನಕ ನಂತರ ಬವ 10:37 PM ತನಕ ನಂತರ ಬಾಲವ ರಾಹು ಕಾಲ:  09:00 ನಿಂದ 10:30 ವರೆಗೂ ಯಮಗಂಡ: 01:30 ನಿಂದ 03:00 ವರೆಗೂ ಗುಳಿಕ ಕಾಲ:  06:00 ನಿಂದ 07:30 ವರೆಗೂ ಅಮೃತಕಾಲ: 09.46 AM to 11.34 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:56 ನಿಂದ ಮ.12:48 ವರೆಗೂ ಮೇಷ : ಕಾರ್ಯಗಳ ಅಡಚಣೆ ನಿವಾರಣೆ, ಗುತ್ತಿಗೆ ಆಧಾರಿತ  ಉದ್ಯೋಗಗಳಿಗೆ ಖಾಯಂ,ಕೃಷಿ ಭೂಮಿ ಖರೀದಿಗಾಗಿ ಓಡಾಟ,ದಾಯಾದಿಗಳಿಂದ ಭೂಮಿ…

Read More

ಬೆಂಗಳೂರು ;- ಸಾರ್ವಜನಿಕರು ಎದುರಿಸುವ ಟ್ರಾಫಿಕ್ ಸಂಬಂಧಿತ ಸಮಸ್ಯೆಗಳನ್ನು ಈಗ 112 ಸೇವೆಯ ಮೂಲಕ ಪರಿಹರಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಬೆಂಗಳೂರು ಟ್ರಾಫಿಕ್ ಪೊಲೀಸ್ ಆನ್ ಕೋಬ್ರಾಸ್ 112 ಸೇವೆಯ ಮೂಲಕ ಸ್ವೀಕರಿಸಿದ ಟ್ರಾಫಿಕ್ ನಿರ್ವಹಣೆಗೆ ಸಂಬಂಧಿಸಿದ ದೂರುಗಳನ್ನು ಪರಿಹಾರ ಮಾಡು ಕೆಲಸ ಮಾಡುತ್ತಾರೆ. ಈ ಹಿಂದೆ ಮಾಸಿಕ ಜನಸಂಪರ್ಕ ಸಭೆಯಲ್ಲಿ ಸಂಚಾರ ವಿಭಾಗದವರು ಸಾಮಾನ್ಯವಾಗಿ ಎದುರಿಸುವ ಸಮಸ್ಯೆಗಳಿಗೆ 112 ಸೇವೆಯನ್ನು ತೆರೆಯುವ ಆಲೋಚನೆಯನ್ನು ನಾಗರಿಕರೊಬ್ಬರು ಸೂಚಿಸಿದ್ದರು. ಅದರಂತೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಸಭೆ ತಿರುಪತಿ ಕನ್ವೆನ್ಷನ್ ಹಾಲ್‌ನಲ್ಲಿ ಶನಿವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಮಾಸಿಕ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಲಾಗಿದೆ. ದಯಾನಂದ ಅವರು ಹನುಮಂತನಗರದ ಶಂಕರ್ ನಾಗ್ ಸರ್ಕಲ್ ಬಳಿಯ ತಿರುಪತಿ ಕನ್ವೆನ್ಷನ್ ಹಾಲ್‌ನಲ್ಲಿ ಮಾಸಿಕ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಡಿಸಿಪಿಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಲಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಕೆಲಸ ಮಾಡುವ ಪೊಲೀಸ್‌ ವ್ಯವಸ್ಥೆಯ ಸುಧಾರಣೆಯ…

Read More

ಬೆಂಗಳೂರು ;- ಅಕ್ರಮ ಆಸ್ತಿ ಪ್ರಕರಣ ಸಂಬಂಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಜುಲೈ 26ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠದ ಮುಂದೆ ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್ ಚೌಟಾ, ಸಿಬಿಐ ತನಿಖೆಯನ್ನು ಉಪ ಪೊಲೀಸ್ ವರಿಷ್ಠಾಧಿಕಾರಿಗೆ ವಹಿಸಿರುವುದು ಅನುಮಾನಾಸ್ಪದವಾಗಿದೆ. ತಮ್ಮ ಕುಟುಂಬದ ಸದಸ್ಯರ ಆದಾಯವನ್ನು ತಮ್ಮ ವೈಯಕ್ತಿಕ ಆದಾಯದ ಭಾಗವಾಗಿ ಸೇರಿಸಲಾಗಿದೆ ಎಂದು ಅವರು ನ್ಯಾಯಾಲಯಕ್ಕೆ ಸಲ್ಲಿಸಿದರು. ಎಫ್‌ಐಆರ್‌ನಲ್ಲಿ ಅವರ ಕುಟುಂಬದ ಸದಸ್ಯರನ್ನು ಹೆಸರಿಸಿಲ್ಲ. ಅವರ ವೆಚ್ಚಗಳು ಅಥವಾ ಅವಲಂಬಿತರನ್ನು ಉಲ್ಲೇಖಿಸಿಲ್ಲ. ಎಫ್‌ಐಆರ್‌ನಲ್ಲಿ ತನಿಖೆಯ ಅವಧಿಯನ್ನೂ ಉಲ್ಲೇಖಿಸಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಹೀಗಾಗಿ ಸಿಬಿಐ ತನಿಖೆಯೇ ಪ್ರಶ್ನಾರ್ಹವಾಗಿದೆ ಎಂದು ವಾದಿಸಿದರು. ಮೇಲಾಗಿ ಇಲ್ಲಿ ತನಿಖೆಯನ್ನು ಪೊಲೀಸ್ ಅಧೀಕ್ಷಕರು ನಡೆಸಬೇಕು. ಆದರೆ ಉಪ ಪೊಲೀಸ್ ವರಿಷ್ಠಾಧಿಕಾರಿಗಳು ನಿರ್ವಹಿಸಿದ್ದಾರೆ. ಆದ್ದರಿಂದ ತನಿಖೆಯು ಅನುಮಾನಾಸ್ಪದವಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಆಗ ಅವರ ವಾದವನ್ನು ಸಿಬಿಐ ಪರ ವಕೀಲ ಎಸ್‌ಪಿ ಪ್ರಸನ್ನ ಕುಮಾರ್‌ ಆಕ್ಷೇಪಿಸಿ,…

Read More

ಬೆಂಗಳೂರು ;- ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಹೊಸ ಪಡಿತರ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಸದನದಲ್ಲಿ ರಾಜ್ಯದಲ್ಲಿ ಹೊಸ ಪಡಿತರ ಚೀಟಿ ನೀಡುವ ಹಾಗೂ ಹೆಸರು ಸೇರ್ಪಡೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿದಾಗ ಸಚಿವರು ಉತ್ತರ ನೀಡಿದ್ದಾರೆ. ಹೊಸ ಬಿಪಿಎಲ್ ಪಡಿತರ ಕಾರ್ಡ್ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ಬೇರೆ ಬೇರೆ ಸಂದರ್ಭಗಳಲ್ಲಿ ರೇಷನ್ ಕಾರ್ಡ್ ಕೇಳುತ್ತಿದ್ದು, ಹೊಸ ಪಡಿತರ ಚೀಟಿ ನೀಡುವ ಪ್ರಕ್ರಿಯೆಯನ್ನು ಆದ್ಯತೆ ಮೇಲೆ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ನೀಡಿದ ಶೇಕಡ 60ರಷ್ಟು ಮೀರಿ ರಾಜ್ಯದಲ್ಲಿ ಶೇಕಡ 80 ರಷ್ಟು ಬಿಪಿಎಲ್ ಕಾರ್ಡ್ ವಿತರಿಸಲಾಗಿದೆ. ಕೆಲವು ನಿರ್ದಿಷ್ಟ ಸೂಚನೆ ಮೀರಲಾಗಿದೆ. ಆರೋಗ್ಯ ವಿಚಾರಕ್ಕೆ ಬಂದಾಗ ಎಲ್ಲರಿಂದಲೂ ಬಿಪಿಎಲ್ ಕಾರ್ಡ್ ಗೆ ಬೇಡಿಕೆ ಇದೆ. ಹೀಗಾಗಿ ಬಿಪಿಎಲ್ ಕಾರ್ಡ್ ನೀಡುವ…

Read More

ಬೆಂಗಳೂರು ;- NEP ಅಡಿ 2024ರ ಶೈಕ್ಷಣಿಕ ಸಾಲಿನಿಂದ ಕನ್ನಡ ಸೇರಿದಂತೆ ಸ್ಥಳೀಯ ಭಾಷೆಗಳ ಮಾಧ್ಯಮಗಳಲ್ಲೂ ಸಿಬಿಎಸ್ ಇ ಶಿಕ್ಷಣ ನೀಡಬಹುದಾಗಿದೆ ಎಂದು ಕೇಂದ್ರೀಯ ಪಠ್ಯಕ್ರಮದ ಅಧೀನದ ಶಾಲೆಗಳಿಗೆ ಸೂಚಿಸಿದೆ. ಸಿಬಿಎಸ್ ಇ ಶಾಲೆಗಳಲ್ಲಿ ಈವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಮಾತ್ರ ಪಠ್ಯಕ್ರಮಗಳು ಇದ್ದವು, ಇದೀಗ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಸಿಬಿಎಸ್ ಇ ಮಾಧ್ಯಮದಲ್ಲಿ ಪಠ್ಯಕ್ರಮ ಬೋಧಿಸಬಹುದು. ಈ ಬಗ್ಗೆ ಸಿಬಿಎಸ್ ಇ ಶಾಲೆಗಳಿಗೆ ಪತ್ರ ಬರೆದಿದ್ದು, ಶಾಲೆಗಳು ತಮ್ಮಲ್ಲಿನ ಲಭ್ಯ ಸಂಪನ್ಮೂಲ ಬಳಸಿಕೊಂಡು ತಜ್ಞರ ಸಂಪರ್ಕಿಸಿ ಪ್ರಾದೇಶಿಕ ಭಾಷೆಗಳಲ್ಲಿ ಸಿಬಿಎಸ್ ಇ ಶಿಕ್ಷಣ ನೀಡಬಹುದು ಎಂದು ಹೇಳಿದೆ.

Read More