Author: Prajatv Kannada

ಬೆಂಗಳೂರು ;- ಬಜೆಟ್‌ನಲ್ಲಿ ಘೋಷಿಸಿದ್ದಂತೆ ಅಬಕಾರಿ ಸುಂಕವನ್ನು ಶೇ.20ರವರೆಗೆ ಹೆಚ್ಚಿಸಿರುವ ಕಾರಣದಿಂದ ಮದ್ಯದ ದರ ಹೆಚ್ಚಾಗಿದೆ. ನಿರೀಕ್ಷೆಯಂತೆ ಶುಕ್ರವಾರದಿಂದಲೆ ಹೊಸ ದರ ಜಾರಿಗೆ ಬಂದಿದೆ. ಪಂಚತಾರಾ ಹೊಟೆಲ್‌ಗಳು ಸೇರಿ ಇತರೆಡೆ ಸವೀರ್‍ಸ್‌ ಚಾಜ್‌ರ್‍, ಸೈಡ್‌್ಸ ಸೇರಿಸಿದರೆ ಹೊಸ ದರಕ್ಕೆ ಮತ್ತಷ್ಟುಮೊತ್ತ ಸೇರ್ಪಡೆಯಾಗಲಿದೆ. ಹೀಗಾಗಿ ಟೇಬಲ್‌ ಎದುರು ಕುಳಿತುಕೊಳ್ಳುವ ಮುನ್ನ ಕಿಸೆಗೆ ಕತ್ತರಿ ಬೀಳುವ ಕುರಿತು ಯೋಚಿಸುವಂತಾಗಿದೆ ಎಂದು ಮದ್ಯಪ್ರಿಯರು ಹೇಳಿದ್ದಾರೆ ಕಿಂಗ್‌ಫಿಷರ್‌ ಬಿಯರ್‌ 5 ರಿಂದ 10 ರುಪಾಯಿ ಹೆಚ್ಚಳವಾಗಿದೆ. ಬಕಾರ್ಡಿ ಲೆಮನ್‌ ಸಿಟ್ರಸ್‌ 750 ಎಎಲ್‌ಗೆ .2189, ಬ್ಲ್ಯಾಕ್‌ಡಾಗ್‌ .4043 ದರ ತಲುಪಿವೆ. ಒಟಿ ವಿಸ್ಕಿ 180 ಎಂಎಲ್‌ಗೆ .87ರಿಂದ .100 ಆಗಿದೆ. ಸ್ಮಿರ್ನಾಫ್‌ ಆಯಪಲ್‌/ಆರೆಂಜ್‌ 750 ಎಂಎಲ್‌ಗೆ .1839ರಿಂದ .2164ಕ್ಕೆ ಏರಿದೆ ಎಂದು ಮದ್ಯ ವರ್ತಕರು ತಿಳಿಸಿದ್ದಾರೆ. ಮೊದಲ ದಿನ ಹೆಚ್ಚಿನ ಬದಲಾವಣೆ ಕಂಡು ಬಂದಿಲ್ಲ. ಆದರೆ, ಇನ್ನೊಂದು ವಾರ, ಹದಿನೈದು ದಿನಗಳು ಕಳೆದರೆ ಗ್ರಾಹಕರಿಂದ ಯಾವ ರೀತಿ ಪ್ರತಿಕ್ರಿಯೆ ಬರಲಿದೆ ಎಂಬುದು ತಿಳಿಯಲಿದೆ ಎಂದು ಬೆಂಗಳೂರು ಮದ್ಯ ವರ್ತಕರ…

Read More

ಬೆಂಗಳೂರು ;– ರಾಜ್ಯದಾದ್ಯಂತ ಭಾರೀ ಸದ್ದು ಮಾಡಿದ್ದ ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ ಸರ್ಕಾರ ಆದೇಶಿಸಿದೆ.‌ ಕಳೆದ ಬಿಜೆಪಿ ಸರ್ಕಾರದಲ್ಲಿ ಸದ್ದು ಮಾಡಿದ್ದ 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗವನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. 545 ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು 3 ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ. ಕಳೆದ ಬಿಜೆಪಿ ಸರ್ಕಾರದಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಭಾರೀ ಸದ್ದು ಮಾಡಿತ್ತು. ಕಾಂಗ್ರೆಸ್ ಇದೇ ವಿಚಾರವಾಗಿ ಬಿಜೆಪಿ ಸರ್ಕಾರ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಹೋರಾಟವನ್ನೇ ನಡೆಸಿತ್ತು. ಈ ಅಕ್ರಮವನ್ನು ತನಿಖೆ ನಡೆಸುವುದಾಗಿ ಕಾಂಗ್ರೆಸ್ ಹೇಳುತ್ತಿತ್ತು. ಇದೀಗ ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಕ್ರಮವನ್ನು ಹೈ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದೆ

Read More

ಬೆಂಗಳೂರು ;- ಹೆತ್ತವರನ್ನ‌ ಕೊಲೆ ಮಾಡಿ ಪರಾರಿಯಾಗಿದ್ದ ಮಗನನ್ನು ಅರೆಸ್ಟ್ ಮಾಡುವಲ್ಲಿ ಕೊಡಿಗೆಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. 25 ವರ್ಷದ ಶರತ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬ್ಯಾಟರಾಯನಪುರ ನಿವಾಸಿಗಳಾದ ಭಾಸ್ಕರ್ ಹಾಗೂ ಶಾಂತಾ ದಂಪತಿಯನ್ನು ಸೋಮವಾರ ರಾತ್ರಿ ಹತ್ಯೆ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ನಾಲ್ಕು ದಿನದ ನಂತರ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದ್ದು, ವಿಚಾರಣೆ ನಂತರ ಕೊಲೆಗೆ ನಿಖರ ಕಾರಣವೇನು? ಎಂಬುದು ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಬೆಂಗಳೂರು ;- ಧೈರ್ಯ ಇದ್ದಿದ್ದರೆ ಸದನದ ಚರ್ಚೆಯಲ್ಲಿ ಬಿಜೆಪಿ ಅವರು ಭಾಗವಹಿಸುತ್ತಿದ್ದರು, ಆದರೆ ಅವರಿಗೆ ಧೈರ್ಯ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡಿರುವುದನ್ನು ಕಂಡು ಬಿಜೆಪಿ ಸದಸ್ಯರು ಆಘಾತಕ್ಕೊಳಗಾಗಿದ್ದಾರೆ. ಹೀಗಾಗಿ ಅನಗತ್ಯ ವಿಚಾರವಾಗಿ ಗದ್ದಲ ಮಾಡಿದ್ದಾರೆ. ಅವರಿಗೆ ಪ್ರತಿಪಕ್ಷದ ನಾಯಕತ್ವದ ಮಹತ್ವ ಗೊತ್ತಿಲ್ಲ. ಇದು ಸಾಂವಿಧಾನಿಕ ಹುದ್ದೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಬಜೆಟ್ ಅಧಿವೇಶನ ಹಾಗೂ ರಾಜ್ಯಪಾಲರ ಭಾಷಣ ವಿರೋಧ ಪಕ್ಷದ ನಾಯಕರ ಅನುಪಸ್ಥಿತಿಯಲ್ಲಿ ನಡೆದಿದೆ. ರಾಜಕೀಯವಾಗಿ ತಮ್ಮ ಅಸ್ತಿತ್ವ ತೋರಿಸಲು ಧರಣಿಗಳನ್ನು ಮಾಡುತ್ತಿದ್ದಾರೆ ಎಂದರು. ಕುಮಾರಸ್ವಾಮಿ ಹಾಗೂ ಬೊಮ್ಮಾಯಿ ಅವರ ಜಂಟಿ ಸುದ್ದಿಗೋಷ್ಠಿ ಹಾಗೂ ಆ ಬಗ್ಗೆ ಅವರದೇ ಪಕ್ಷದ ನಾಯಕರ ಅಸಮಾಧಾನದ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ, ‘ಅದು ಅವರಿಗೆ ಬಿಟ್ಟ ವಿಚಾರ. ಆ ಬಗ್ಗೆ ನಾವು ಮಾತನಾಡುವುದಿಲ್ಲ. ಜಾತ್ಯತೀತತೆ ವಿಚಾರವಾಗಿ ದೇವೇಗೌಡರು ತಮ್ಮ ಪುಸ್ತಕದಲ್ಲಿ ಹೇಳಿಕೊಂಡಿದ್ದಾರೆ. ದೇವೇಗೌಡರೇನು ತಮ್ಮ ಸಿದ್ಧಾಂತ ಬದಲಿಸಿದ್ದಾರಾ? ಪಕ್ಷದ ಸಿದ್ಧಾಂತ,…

Read More

ಬೆಂಗಳೂರು ;– ಮಾರಕಾಸ್ತ್ರಗಳಿಂದ ಗ್ಯಾಂಗ್​ವೊಂದು ಬೊಮ್ಮಸಂದ್ರ ಪುರಸಭೆಯ ಉಪಾಧ್ಯಕ್ಷ ವಸಂತ್​ರ ಮಗ ಗೌತಮ್ ಕೊಲೆಗೆ ದಾಳಿ ಮಾಡಿದೆ. ಬೆಂಗಳೂರಿನ ಚಂದಾಪುರದ ಬಳಿ ಘಟನೆ ನಡೆದಿದ್ದು, ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ನೇಹಿತನ ಜನ್ಮದಿನಕ್ಕೆ ಕಾರಿನಲ್ಲಿ ಗೆಳೆಯರ ಜೊತೆಗೂಡಿ ಗೌತಮ್​ ತೆರಳಿದ್ದ. ಹಳೆ ಚಂದಾಪುರದ ಬಳಿ ಟೀ ಕುಡಿಯಲು ಕಾರು ಅನ್ನು ನಿಲ್ಲಿಸಿದ್ದ ಗೌತಮ್​. ಈ ವೇಳೆ, ಮೂರು ಕಾರಿನಲ್ಲಿ ಬಂದ ಹತ್ತಕ್ಕೂ ಹೆಚ್ಚು ಜನರು ಮಾರಕಾಸ್ತ್ರಗಳಿಂದ ಏಕಾಏಕಿ ಹಲ್ಲೆಗೆ ಮುಂದಾಗಿದ್ದಾರೆ. ಗೌತಮ್ ಮೇಲೆ ಲಾಂಗ್​ ಬೀಸಿದಾಗ ಕೈಗಳಿಂದ ಅಡ್ಡಗಟ್ಟಿದ್ದಾನೆ. ಗೌತಮ್​ ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಿಂದ ಓಡಿ ಹೋಗಿದ್ದಾನೆ. ಗಂಭೀರ ಗಾಯಗೊಂಡಿದ್ದ ಪ್ರಮೋದ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಈ ಘಟನೆ ಕುರಿತು ಸೂರ್ಯಸಿಟಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಸೂರ್ಯೋದಯ: 06.03 AM, ಸೂರ್ಯಾಸ್ತ : 06.49 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಅದಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಗ್ರೀಷ್ಮ ಋತು, ತಿಥಿ: ಇವತ್ತು ತದಿಗೆ 06:58 AM ತನಕ ನಂತರ ಚೌತಿ ನಕ್ಷತ್ರ: ಇವತ್ತು ಮಖ 01:58 PM ತನಕ ನಂತರ ಪುಬ್ಬಾ ಯೋಗ: ಇವತ್ತು ವ್ಯತೀಪಾತ 12:24 PM ತನಕ ನಂತರ ವರಿಯಾನ್ ಕರಣ: ಇವತ್ತು ಗರಜ 06:58 AM ತನಕ ನಂತರ ವಣಿಜ 08:12 PM ತನಕ ನಂತರ ವಿಷ್ಟಿ ರಾಹು ಕಾಲ: 10:30 ನಿಂದ 12:00 ವರೆಗೂ ಯಮಗಂಡ: 03:00 ನಿಂದ 04:30 ವರೆಗೂ ಗುಳಿಕ ಕಾಲ: 07:30 ನಿಂದ 09:00 ವರೆಗೂ ಅಮೃತಕಾಲ: 11.16 AM to 01.04 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:56 ನಿಂದ ಮ.12:48 ವರೆಗೂ ಮೇಷ: ವಾಹನ ಬಿಡಿಭಾಗ ತಯಾರಿಕರಿಗೆ ಹಾಗೂ ಮಾರಾಟಗಾರರಿಗೆ ಧನ ಲಾಭ, ಪಾರ್ಶ್ವ ವಾಯು ರೋಗಿಗಳಿಗೆ ನಿಧಾನ ಚೇತರಿಕೆ, ಅದಿರು…

Read More

ವಿರಾಟ್​​ ಕೊಹ್ಲಿ ಒಬ್ಬ ಫಿಟ್​ನೆಸ್​ ಫ್ರೀಕ್​ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರವೇ. ಜಿಮ್​ ವರ್ಕೌಟ್​, ಡಯಟ್​ ವಿಷ್ಯದಲ್ಲಿ ಕಾಂಪ್ರಮೈಸ್​ ಆಗೋ ಮಾತೆಯಿಲ್ಲ. ಹಾಗಾದ್ರೆ, ಕೊಹ್ಲಿಯ ವರ್ಕೌಟ್ ಹೇಗಿರುತ್ತೆ, ಡಯಟ್​​ ಪ್ಲಾನ್ಸ್​​ ಏನು, ಅವರು ತಿನ್ನುವ ಆಹಾರ ಏನೇನು..? ಹಾರ್ಡ್​ವರ್ಕ್ ಈ ಪದಕ್ಕೆ ಇನ್ನೊಂದು ಹೆಸರು ಕಿಂಗ್​​ ಕೊಹ್ಲಿ. ಆಟದ ವಿಚಾರದಲ್ಲಿ ಕಾಂಪ್ರಮೈಸೇ​​​ ಆಗದ ವಿರಾಟ್​, ಫಿಟ್​ನೆಸ್​​ ವಿಚಾರದಲ್ಲೂ ಸಿಕ್ಕಾಪಟ್ಟೆ ಸ್ಟ್ರಿಕ್ಟ್​​. ಕಾಂಪ್ರಮೈಸ್ ಆಗೋ ಮಾತೇ ಇಲ್ಲ. ಸದ್ಯ ಕೆರಿಬಿಯನ್​ ನಾಡಲ್ಲಿ ಬೀಡು ಬಿಟ್ಟಿರೋ ಕಿಂಗ್​, ಸರಣಿ ಆರಂಭಕ್ಕೂ ಮುನ್ನ high intensity ವರ್ಕೌಟ್ ನಡೆಸ್ತಿದ್ದಾರೆ. ವರ್ಕೌಟ್​​ನಲ್ಲಿ ವಿರಾಟ್​ ಕೊಹ್ಲಿ ನೋ ಕಾಂಪ್ರಮೈಸ್​..! ಪ್ರತಿ ಕ್ರೀಡಾಳುವಿನ ಲಾಂಗ್​ ಟೈಮ್​ ಸಕ್ಸಸ್​ ಸಿಕ್ರೇಟ್​ ಫಿಟ್ನೆಸ್. ಮಾನಸಿಕವಾಗಿ, ದೈಹಿಕವಾಗಿ ಸೃದೃಢವಾಗಿದ್ದಲ್ಲಿ ಮಾತ್ರವೇ ಓರ್ವ ಆಟಗಾರ ಸಕ್ಸಸ್​ ಕಾಣೋದಲ್ಲದೇ, ಕನ್ಸಿಸ್ಟೆಂಟ್​ ಆಗಿ ಆ ಯಶಸ್ಸಿನ ಹಾದಿಯಲ್ಲಿ ಮುಂದುವರೆಸೋಕೆ ಸಾಧ್ಯ. ಇದಕ್ಕೆ ಬೆಸ್ಟ್​ ಎಕ್ಸಾಂಪಲ್​​ ವಿರಾಟ್​​ ಕೊಹ್ಲಿ. ಕಟ್ಟು ನಿಟ್ಟಾದ ದಿನಚರಿಯನ್ನ ರೂಪಿಸಿಕೊಂಡಿರೋ ಕಿಂಗ್​ ಕೊಹ್ಲಿ, ವಾರದ 5…

Read More

ತಮ್ಮ ಅನುಮತಿ ಇಲ್ಲದೇ ತಮ್ಮ ಫೋಟೋ ಮತ್ತು ವಿಡಿಯೋವನ್ನು ಹಾಸ್ಟೇಲ್ ಹುಡುಗರು ಬೇಕಾಗಿದ್ದರೆ ಸಿನಿಮಾ ತಂಡ ಬಳಸಿಕೊಂಡಿದೆ ಎಂದು ಚಿತ್ರತಂಡದ ವಿರುದ್ಧ ನಟಿ ರಮ್ಯಾ ಕೋರ್ಟ್ ಮೆಟ್ಟಿಲೇರಿದ್ದರು. ತಮ್ಮ  ಅನುಮತಿ ಇಲ್ಲದೇ ಫೋಟೋ ಮತ್ತು ವಿಡಿಯೋ ಬಳಸಿಕೊಂಡಿದ್ದಕ್ಕೆ ಪರಿಹಾರವಾಗಿ ಒಂದು ಕೋಟಿ ರೂಪಾಯಿ ನೀಡಬೇಕು ಎಂದು ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದರು. ಆದರೆ ಇದೀಗ ಈ ವಿಷಯದಲ್ಲಿ ಹಾಸ್ಟೆಲ್ ಹುಡುಗರಿಗೆ ಜಯ ಸಿಕ್ಕಿದೆ. ಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ ಹಾಸ್ಟೆಲ್ ಹುಡುಗರ ಪರ ಆದೇಶ ಹೊರ ಬಂದಿದ್ದು, ಯಾವುದೇ ತಡೆ ಇಲ್ಲದೆ ಹಾಸ್ಟೆಲ್ ಹುಡುಗರು ಸಿನಿಮಾ ರಿಲೀಸ್ ಆಗಲಿದೆ. ಹಾಸ್ಟೆಲ್ ಹುಡುಗರ ಪರ ವಕೀಲ ವೇಲನ್ ಅವರು ವಾದ ಮಾಡಿದ್ದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಲಯವು, ರಮ್ಯಾ ಹಾಕಿದ್ದ ಕೇಸ್ ತೆರವುಗೊಳಿಸಿ, ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ರಮ್ಯಾ ಸೇರಿದಂತೆ ಅನೇಕ ಸ್ಟಾರ್ ನಟ-ನಟಿಯರು ಈ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ದಿಗಂತ್ ಸೇರಿದಂತೆ…

Read More

ತಮ್ಮ ಅತ್ಯದ್ಭುತ ನಟನೆಯ ಮೂಲಕ ಕನ್ನಡಿಗರ ಮನದಲ್ಲಿ ಅಚ್ಚಳಿಯದೆ ಉಳಿದಿರುವವರು ಖ್ಯಾತ ಹಾಸ್ಯ ನಟ ದಿ. ಟಿ.ಆರ್ ನರಸಿಂಹರಾಜು. ಜುಲೈ 24 ನರಸಿಂಹರಾಜು ಅವರ ನೂರನೇ ವರ್ಷದ ಹುಟ್ಟುಹಬ್ಬ. ಈ ಸಂಭ್ರಮವನ್ನು ನರಸಿಂಹರಾಜು ಜನ್ಮ‌ ಶತಮಾನೋತ್ಸವ ಎಂಬ ಹೆಸರಿನಿಂದ ವರ್ಷವಿಡೀ ಹಲವು ಕಾರ್ಯಕ್ರಮಗಳೊಂದಿಗೆ ಆಚರಿಸಲು ನರಸಿಂಹರಾಜು ಅವರ ಕುಟುಂಬದವರು ಹಾಗೂ ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಕಾರ್ಯಕ್ರಮಗಳ ಪೈಕಿ ಮೊದಲನೆಯದಾಗಿ ನರಸಿಂಹರಾಜು ಅವರನ್ನು ಈಗಿನ ಯುವಜನತೆಗೆ ತಲುಪಿಸುವ ಪ್ರಯತ್ನ. ಹಾಗಾಗಿ ಹನ್ನೆರಡು ಜನರ ತಂಡ ಎರಡು ಟ್ರಕ್ ಗಳ ಮೂಲಕ ಕರ್ನಾಟಕದ ಮೂವತ್ತೆರಡು ಜಿಲ್ಲೆಗಳ ಆಯ್ದ ಕಾಲೇಜುಗಳಿಗೆ ಭೇಟಿ ನೀಡುತ್ತಿದೆ. ಆ ಟ್ರಕ್ ನಲ್ಲಿ ಎಲ್ ಇ ಡಿ ಅಳವಡಿಸಿ, ಆ ಮೂಲಕ ವಿದ್ಯಾರ್ಥಿಗಳಿಗೆ ನರಸಿಂಹರಾಜು ಅವರ ಬಗೆಗಿನ ತುಣುಕುಗಳನ್ನು ತೋರಿಸಲಾಗುತ್ತದೆ. ಆನಂತರ ನರಸಿಂಹರಾಜು ಅವರ ಕುರಿತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕೇಳಲಾಗುತ್ತದೆ. ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವ(ಹಾಸ್ಯದ ಕುರಿತು) ಆಯೋಜಿಸಲಾಗುವುದು. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ದೊಡ್ಡಮಟ್ಟದ ಸಮಾರಂಭ ಆಯೋಜಿಸಿ, ಆ ಕಾರ್ಯಕ್ರಮದಲ್ಲಿ ಪ್ಯಾನ್…

Read More

ಕೇವಲ ಮುಖದ ಕಾಂತಿಯನ್ನು ಹೆಚ್ಚಿಸಿಕೊಂಡರೆ ಸಾಲದು. ತುಟಿಯ ಬಗ್ಗೆಯೂ ಗಮನವಿರಬೇಕು. ಚಳಿಗಾಲ ಮತ್ತು ಬೇಸಿಗೆ ಕಾಲದಲ್ಲಿ ತುಟಿಯ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು. ಗಮನಹರಿಸದೆ ಹೋದರೆ ತುಟಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ತುಟಿ ಕಪ್ಪಾದರೆ ಮುಖದ ಸೌಂದರ್ಯ ಕಡಿಮೆಯಾಗುತ್ತದೆ. ಹುಡುಗಿಯರಿಗೆ ಲಿಪ್​ಸ್ಟಿಕ್​ ಅಂದರೆ ತುಂಬಾ ಇಷ್ಟ. ಆದರೆ ಕಡಿಮೆ ದರದ ಲಿಪ್​ಸ್ಟಿಕ್ ಬಳಸಿದಾಗ ತುಟಿ ಕಪ್ಪಾಗುತ್ತದೆ.ನೈಸರ್ಗಿಕ ಗುಲಾಬಿ ವರ್ಣದ ತುಟಿಗಳನ್ನು ಪಡೆಯಲು ಮನೆಮದ್ದು ಇಲ್ಲಿದೆ ನೋಡಿ – ಒಂದು ತುಂಡು ಬೀಟ್ರೂಟ್ ಅನ್ನು ತುರಿದು ಹಿಂಡಿ ರಸ ಸಂಗ್ರಹಿಸಿ. ಈ ರಸವನ್ನು ಒಂದು ದಿನವಿಡೀ ಫ್ರಿಜ್ಜಿನಲ್ಲಿಟ್ಟು ಗಟ್ಟಿಯಾಗುವಂತೆ ಮಾಡಿ. ಬಳಿಕ ಇದರಲ್ಲಿ ಒಂದು ಚಿಕ್ಕ ಚಮಚದಷ್ಟು ಪ್ರಮಾಣವನ್ನು 1/3 ಚಿಕ್ಕ ಚಮಚದಷ್ಟು ಗ್ಲಿಸರಿನ್ ದ್ರವದಲ್ಲಿ ಮಿಶ್ರಣ ಮಾಡಿ ತುಟಿಗಳಿಗೆ ಲೇಪಿಸಿಕೊಳ್ಳಿ. ಇದರ ಬಣ್ಣ ನಿಮ್ಮ ನಿತ್ಯದ ಲಿಪ್ ಸ್ಟಿಕ್ಗೆ ಸರಿಸಮನಾಗಿರುವ ಕಾರಣ ನಿತ್ಯದ ಲಿಪ್ ಸ್ಟಿಕ್ ಬದಲಿಗೆ ಹಚ್ಚಿಕೊಂಡು ಹೊರಹೋಗಬಹುದು. ಕೆಲವೇ ದಿನಗಳಲ್ಲಿ ಮೃದು ಹಾಗೂ ಗುಲಾಬಿ ವರ್ಣದ ತುಟಿಗಳು ನಿಮ್ಮದಾಗುತ್ತವೆ. –…

Read More