Author: Prajatv Kannada

ಬೆಂಗಳೂರು: ರಾಜ್ಯ ವಿಧಾನಸಭಾ ಅಧಿವೇಶನದ 30 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೆ ಅಧಿವೇಶನ ಮುಗಿಸುವ ಮೂಲಕ ಇತಿಹಾಸ ಪುಟ ಸೇರಿದ ರಾಜ್ಯ ವಿಧಾನಸಭೆ ಹಾಗೆ ಇದೊಂದು ಬಿಜೆಪಿ ಪಕ್ಷಕ್ಕೆ ದೊಡ್ಡ ಕಪ್ಪುಚುಕ್ಕೆಯಾಗಿ ಉಳಿದುಬಿಡುತ್ತದೆ. ವಿಧಾನಸಭೆ ಅಧಿವೇಶನ ಆರಂಭವಾದಾಗಿನಿಂದಲೂ ರಾಜ್ಯ ಬಿಜೆಪಿಯಲ್ಲಿ ಗೊಂದಲವೋ ಗೊಂದಲ, ವಿರೋಧ ಪಕ್ಷದ ನಾಯಕನಿಲ್ಲದೇ ಬಜೆಟ್ ಮೇಲಿನ ಚರ್ಚೆಯ ವೇಳೆ ನಾಮ್‌ಕೇವಾಸ್ತೆ ವಿಪಕ್ಷದ ಸಾರಥ್ಯವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಹಿಸಿಕೊಂಡಿದ್ದರು. ಬಿಜೆಪಿ ಪಕ್ಷದ ಗುಂಪುಗಾರಿಕೆಯಿಂದ ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗಿದೆ, ಇದರೊಂದಿಗೆ ಅಧಿವೇಶನದಲ್ಲಿ ಕೇಸರಿ ಪಡೆ ನಾಯಕರು ತೀವ್ರ ಮುಜುಗರಕ್ಕೆ ಈಡಾಗಿದ್ದರು, ವಿಪಕ್ಷ ನಾಯಕನ ಆಯ್ಕೆ ಕಗ್ಗಂಟಾಗೇ ಉಳಿದಿದ್ದರು ಬಿಜೆಪಿ ವರಿಷ್ಠರು ತಲೆಕೆಡಿಸಿಕೊಂಡಿಲ್ಲ. ರಾಜ್ಯ ವಿಧಾನಸಭಾ ಅಧಿವೇಶನದ ಆರಂಭವಾದಾಗಿನಿಂದ ಗಲಾಟೆ,ಗದ್ದಲ, ಪ್ರತಿಭಟನೆಗಳಿಂದಲೇ ಮುಗಿದಿದ್ದು ಒಟ್ಟಾರೆ ಅಧಿವೇಶನವು ಜ್ವಲಂತ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆಯೇ ನಡೆಯದೇ ಇಂದು ಮುಕ್ತಾಯವಾಗಲಿದೆ.

Read More

ಬೆಂಗಳೂರು: ಎನ್​ಡಿಎ ಮತ್ತು ಯುಪಿಎ ಎರಡರ ಜೊತೆಗೂ ಜೆಡಿಎಸ್ ಸೇರೋದು ಬೇಡ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಹೆಚ್​ಡಿಕೆಗೆ ತಿಳಿಸಿದ್ದಾರೆ. ಎನ್‌ಡಿಎ ಜೊತೆ ಮೈತ್ರಿಯ ಬಗ್ಗೆ ಕುಮಾರಸ್ವಾಮಿ ಒಲವುತೋರಿಸಿದ್ದರು, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮಾತ್ರ ಬಿಜೆಪಿ-ಕಾಂಗ್ರೆಸ್‌ ಯಾವುದರ ಜೊತೆ ಸೇರೋದು ಬೇಡ ಏಕಾಂಗಿಯಾಗಿ ಸ್ಪರ್ಧೆ ಮಾಡೋಣ ಎಂದಿದ್ದಾರೆ. ಈ ಬಗ್ಗೆ ನಿನ್ನೆಯ ಜೆಡಿಎಲ್‌ಪಿ ಸಭೆಯಲ್ಲಿ ಚರ್ಚೆ ನಡೆದಿದ್ದು, ಎನ್‌ಡಿಎ ಜೊತೆ ದೋಸ್ತಿಯಿಂದ ಜೆಡಿಎಸ್‌ಗೆ ಲಾಭವಾಗುವುದರಿಂದ ಎನ್​ಡಿಎ ಗೆ ಬೆಂಬಲ ನೀಡುಬೇಕು ಎನ್ನುವ ಕುಮಾರಸ್ವಾಮಿ ಪ್ರಸ್ತಾಪವನ್ನು ಹೆಚ್.ಡಿ ದೇವೇಗೌಡ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಏಕಾಂಗಿ ಸ್ಪರ್ಧೆಯಿಂದ ಎಷ್ಟು ಸ್ಥಾನ ಗೆಲ್ಲುತ್ತೇವೆ ಅದನ್ನ ಜನ ನಿರ್ಧರಿಸಲಿ ಎಂದಿರುವ ಮಾಜಿ ಪ್ರಧಾನಿ ದೇವೇಗೌಡರ ಅಭಿಪ್ರಾಯದಂತೆ ದೂರ ಇರಲು ನಿರ್ಧಾರಿಸಿದ್ದಾರೆ. ಹಾಗಾದರೇ ಜೆಡಿಎಸ್‌ ಮುಂದಿನ ನಡೆ ಏನು ಅನ್ನೋದೇ ನಿಗೂಢವಾಗಿದೆ.

Read More

ಬೆಂಗಳೂರು ;- ಬಿಜೆಪಿ‌ಯ ಅವನತಿ ಕರ್ನಾಟಕದಿಂದ ಶುರುವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಬಿಜೆಪಿ ಯಾವಾಗಲೂ ವಿಪಕ್ಷವಾಗಿಯೇ ಇರಬೇಕು. ಬಿಜೆಪಿ‌ಯ ಅವನತಿ ಕರ್ನಾಟಕದಿಂದ ಶುರುವಾಗಿದೆ. ಬಿಜೆಪಿಯವರು ಪ್ರಧಾನಿ ನರೇಂದ್ರ ಮೋದಿ ಮೇಲೆ ಅವಲಂಬಿತರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಪ್ರಧಾನಿ ಮೋದಿ ಜನಪ್ರಿಯತೆ ದಿನೇ ದಿನೇ ಮಸುಕಾಗುತ್ತಿದೆ. ವಿಧಾನಸಭೆ ಚುನಾವಣೆ ವೇಳೆ ಮೋದಿ 28 ಬಾರಿ ಬಂದಿದ್ದಾರೆ. ಒಂದು ಅಸೆಂಬ್ಲಿ ಚುನಾವಣೆಗೆ ಯಾವ ಪ್ರಧಾನಿ ಕೂಡ ಇಷ್ಟು ಬಾರಿ ಚುನಾವಣೆ ಪ್ರಚಾರ ಮಾಡಿಲ್ಲ. ಮೈಸೂರು, ಬಾದಾಮಿ, ಬೆಂಗಳೂರು ಸೇರಿ ಹಲವೆಡೆ ಪ್ರಚಾರ ಮಾಡಿದ್ದು, ಮೋದಿ ಪ್ರಚಾರ ಮಾಡಿದ ಎಲ್ಲಾ ಕಡೆಯೂ ನಾವು ಗೆದ್ದಿದ್ದೇವೆ. ಇವರು ಯಾವುದೇ ಚುನಾವಣೆಗಳಲ್ಲೂ ಹೆಚ್ಚು ಮತ ಪಡೆದಿಲ್ಲ. ನಮ್ಮ ಮತಗಳ ಶೇಕಡಾವಾರು ಜಾಸ್ತಿಯಾಗುತ್ತಲೇ ಹೋಗುತ್ತಿದೆ ಎಂದು ಹೇಳಿದರು. ಡೆಪ್ಯುಟಿ ಸ್ಪೀಕರ್​ ಮೇಲೆ ಬಿಜೆಪಿ ಶಾಸಕರು ಕಾಗದ ಹರಿದು ಎಸೆದ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಪ್ರಜಾಪ್ರಭುತ್ವದ ವಿರೋಧಿಗಳು. ಸದನದಲ್ಲಿ ನಿನ್ನೆ ಬಿಜೆಪಿಯವರ ನಡವಳಿಕೆ ಬಗ್ಗೆ ಏನಂತ ಕರೆಯಬೇಕು? ಬಿಜೆಪಿಯವರನ್ನು ಅನಾಗರಿಕರು…

Read More

ಬೆಂಗಳೂರು ;- ಸಭಾಪತಿ ಸ್ಥಾನದಲ್ಲಿರುವವರು ಅದರ ಘನತೆ ಕಾಪಾಡಬೇಕು, ಧ್ವನಿ ಹತ್ತಿಕ್ಕುವ ಕೆಲಸ ಈ ಸರ್ಕಾರ ಮಾಡ್ತಿದೆ, ಮುಂದಿನ ದಿನಗಳಲ್ಲಿ ಜನರೇ ಇವರಿಗೆ ಬುದ್ದಿ ಕಲಿಸ್ತಾರೆ ಎಂದು ಪರಿಷತ್ ಸದಸ್ಯ ಟಿಎ ಶರವಣ ಅವರು ಕಿಡಿಕಾರಿದರು. ಬೆಂಗಳೂರಿನಲ್ಲಿ ನಡೆದ ವಿಪಕ್ಷಗಳ ಸಭೆಗೆ IAS ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡ ಆಡಳಿತ ಪಕ್ಷದ ವಿರುದ್ಧ ಬಿಜೆಪಿ ಜೆಡಿಎಸ್ ಮುಖಂಡರು ಸದನದಲ್ಲಿ ಪ್ರತಿಭಟನೆ ಮಾಡಿದರು. ಹೀಗಾಗಿ ಪ್ರಶ್ನಿಸಿದವರನ್ನು ಸ್ಪೀಕರ್ ಅಮಾನತು ಮಾಡಿ ಆದೇಶ ಹೊರಡಿಸಿದರು. ಇದನ್ನು ಖಂಡಿಸಿ, ಜೆಡಿಎಸ್ ಮತ್ತು ಬಿಜೆಪಿ ಶಾಸಕರುಗಳು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಸ್ಪೀಕರ್ ಯುಟಿ ಖಾದರ್ ವಿರುದ್ಧ ದೂರು ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಟಿಎ ಶರವಣ ಅವರು, ಬೆಂಗಳೂರಿನ ನಡೆದ ವಿಪಕ್ಷಗಳ ಸಭೆಗೆ ಆಗಮಿಸಿದ್ದ ಗಣ್ಯರಿಗೆ ಆತಿಥ್ಯ ನೀಡಲು ಐಎಎಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿ ದುರ್ಬಳಕೆ ಮಾಡಿಕೊಂಡಿರುವುದು ಅಪರಾಧ. ಈ ವಿಚಾರದಲ್ಲಿ ಸರ್ಕಾರ ಕ್ಷಮೆ ಕೇಳಬೇಕು. ಕಾಂಗ್ರೆಸ್ನ ಸರ್ವಾಧಿಕಾರ ಮಾಡುತ್ತಿದೆ. ಪ್ರತಿಯೊಬ್ಬರಿಗೂ ಪ್ರತಿಭಟನೆ ಮಾಡುವ ಪ್ರಶ್ನಿಸುವ ಹಕ್ಕಿದೆ, ಪ್ರಶ್ನಿಸಿದವರ ಮೇಲೆ…

Read More

ಬೆಂಗಳೂರು: ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ನಾನು 14 ಬಜೆಟ್ ಮಂಡಿಸಿದ್ದೇನೆ. ಇದೇ ಮೊದಲ ಸಲ ವಿಪಕ್ಷದವರು ಒಬ್ಬರೂ ಇಲ್ಲದ ಸಮಯದಲ್ಲಿ ಉತ್ತರ ಕೊಡುತ್ತಿದ್ದೇನೆ. ವಿಪಕ್ಷದವರ ಆಸನಗಳು ಖಾಲಿ ಇವೆ. ಈ ತರಹದ ಬಜೆಟ್ ಉತ್ತರ ಇದೇ ಮೊದಲು. ವಿಪಕ್ಷ ನಾಯಕ ಇಲ್ಲದೇ ಮೊದಲ ಸಲ ಬಜೆಟ್ ಅಧಿವೇಶನ ನಡೆದಿದೆ. ರಾಷ್ಟ್ರೀಯ ಪಕ್ಷ ಬಿಜೆಪಿಗೆ ಒಬ್ಬ ವಿಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲು ಆಗಿಲ್ಲ ಅಂದರೆ ಅದು ಪ್ರಜಾಪ್ರಭುತ್ವಕ್ಕೆ ಮಾರಕ. ಬಿಜೆಪಿಯವರಿಗೆ ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವ ವ್ಯವಸ್ಥೆಗಳ ಮೇಲೆ ನಂಬಿಕೆ ಇಲ್ಲ ಎಂದರು. ಮಹದಾಯಿ ಯೋಜನೆ ಬಗ್ಗೆ ಶಾಸಕ ಎನ್​​.ಹೆಚ್​​​.ಕೋನರೆಡ್ಡಿ ಪ್ರಸ್ತಾಪ ಮಾಡಿದ್ದು, ಬಜೆಟ್​​ನಲ್ಲಿ ಹೇಳಿದಂತೆ ಮಹದಾಯಿ ಯೋಜನೆ ಜಾರಿ ಮಾಡಬೇಕು. ಮಹದಾಯಿ ಯೋಜನೆ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು. ಸಿಎಂ ಮಹದಾಯಿ ಯೋಜನೆ ಜಾರಿ ಮಾಡುವ ಭರವಸೆ ಕೊಡಬೇಕು. ಬಸವರಾಜ ಬೊಮ್ಮಾಯಿ ಅವರು ಯೋಜನೆ ಜಾರಿ ಮಾಡುತ್ತಾರೆ ಎಂದು ಅಂದುಕೊಂಡಿದ್ದೆ. ಈ ಹಿಂದೆ ಯೋಜನೆ ಜಾರಿಗೆ ಆಗ್ರಹಿಸಿ ಅವರು ಪಾದಯಾತ್ರೆ…

Read More

ಬೆಂಗಳೂರು: ರಾಜ್ಯಪಾಲರಿಗೆ ದೂರು ನೀಡಿ ಬಿಜೆಪಿ, JDS ನಾಯಕರು ಹೊರಬಂದಿದ್ದಾರೆ. ಸ್ಪೀಕರ್, ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲ ಗೆಹ್ಲೋಟ್​ಗೆ ಮಾಜಿ ಸಿಎಂಗಳಾದ ಬೊಮ್ಮಾಯಿ, ಹೆಚ್​ಡಿಕೆ ನೇತೃತ್ವದಲ್ಲಿ ದೂರು ನೀಡಲಾಗಿದೆ. ರಾಜ್ಯಪಾಲರಿಗೆ ದೂರು ನೀಡಿ ಬಿಜೆಪಿ, JDS ನಾಯಕರು ಹೊರಬಂದಿದ್ದಾರೆ. ಸ್ಪೀಕರ್, ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲ ಗೆಹ್ಲೋಟ್​ಗೆ ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಹೆಚ್​ಡಿಕೆ ನೇತೃತ್ವದಲ್ಲಿ ದೂರು ನೀಡಲಾಗಿದೆ.

Read More

ಬೆಂಗಳೂರು :  ಸಿಲಿಕಾನ್ ಸಿಟಿಯಲ್ಲಿ ಭಯಾನಕ ಸ್ಫೋಟ ನಡೆಸಲು  ಸಜ್ಜಾಗಿದ್ದ ಐವರು ಶಂಕಿತ ಉಗ್ರರನ್ನ ಸಿಸಿಬಿ ಅರೆಸ್ಟ್‌ ಮಾಡಿದ್ದು ಈಗ  ಸಿಸಿಬಿ  ಅಧಿಕಾರಿಗಳು ಐವರು ಶಂಕಿತ  ತನಿಖೆ ಶುರುಮಾಡಿದೆ.  ಆದರೆ ತನಿಖೆ ವೇಳೆ ಭಯಾನಕ ಸ್ಪೋಟಕ ಅಂಶಗಳು ಹೊರಬಿದ್ದಿದೆ. ಹಣದ ಮೂಲ. ಹಾಗು ಸಿಕ್ಕ ಜೀವಂತ ಗುಂಡುಗಳು ಬೇರೆಯದ್ದೆ ಕಥೆ ಹೇಳುತ್ತಿವೆ. ಹೌದು.. ಸಿಸಿಬಿ ಕೈಯಲ್ಲಿ ಲಾಕ್ ಆಗಿರುವ ಕ್ರಿಮಿಗಳ ಬಳಿ 45 ಜೀವಂತ ಗುಂಡು, ಏಳು ಪಿಸ್ತೂಲ್, ವಾಕಿಟಾಕಿ, ಮೊಬೈಲ್ ಸಿಮ್ ಕಾರ್ಡ್​ಗಳು ಸಿಕ್ಕಿವೆ. ಇವುಗಳನ್ನೆಲ್ಲ ಖರೀದಿಸಲು ಖುದ್ದು ಎ2 ಆರೋಪಿ ಮಹಮ್ಮದ್ ಜುನೈದ್ ವಿದೇಶದಲ್ಲಿ ಕುಳಿತು ಫಂಡ್ ಕೊಡುತ್ತಿದ್ದ ಎನ್ನುವ ಮಾಹಿತಿ ತಿಳಿದುಬಂದಿದೆ. ಮೊಬೈಲ್ ಬಳಸಲು ಸಾಧ್ಯವಿಲ್ಲದ ಕಡೆ ಉಗ್ರರು ವಾಕಿಟಾಕಿ (Walkie-Talkie) ಬಳಕೆ ಮಾಡುತ್ತಾರೆ. ಕಾಡಿನಲ್ಲಿ ತರಬೇತಿ (Forest Training) ನಡೆಸುವಾಗ ವಾಕಿಟಾಕಿ ಬಳಕೆ ಮಾಡಲಾಗುತ್ತದೆ. ಒಂದು ವೇಳೆ ನಿರ್ದಿಷ್ಟ ಪ್ರದೇಶದಲ್ಲಿ ಅಥವಾ ಕಟ್ಟಡಗಳ ಮೇಲೆ ದಾಳಿ ಮಾಡಿದಾಗ ಜಾಮರ್ ಬಳಕೆ ಮಾಡಲಾಗುತ್ತದೆ. ಅಂತಹ ಸಂದರ್ಭದಲ್ಲಿ ಮೊಬೈಲ್ ಸಿಗ್ನಲ್‌ಗಳು…

Read More

ವಿಶ್ವ ಕ್ರಿಕೆಟ್​ನ ಸಾಮ್ರಾಟ ಕಿಂಗ್​ ಕೊಹ್ಲಿಗೆ ಗೆಲುವಿನ ಉಡುಗೊರೆ ನೀಡಲು ಟೀಂ ಇಂಡಿಯಾ ಬಯಸುತ್ತಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯಲಿದೆ. ಇದಕ್ಕಾಗಿ ಟೀಂ ಇಂಡಿಯಾ ಟ್ರಿನಿಡಾಡ್ ತಲುಪಿದ್ದು, ವೆಸ್ಟ್ ಇಂಡೀಸ್ ಕೂಡ ತನ್ನ 13 ಸದಸ್ಯರ ತಂಡವನ್ನು ಪ್ರಕಟಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ 1-0 ಅಂತರದ ಮುನ್ನಡೆ ಸಾಧಿಸಿದೆ. ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದು, ಸರಣಿ ತನ್ನದಾಗಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಇದೆ. ಅಲ್ಲದೆ ಈ ಟೆಸ್ಟ್ ಪಂದ್ಯ ಉಭಯ ದೇಶಗಳ ನಡುವಿನ 100ನೇ ಟೆಸ್ಟ್ ಪಂದ್ಯವಾಗಿರುವುದರಿಂದ ಈ ಪಂದ್ಯವನ್ನು ಗೆಲ್ಲುವುದು ಉಭಯ ದೇಶಗಳ ಗುರಿಯಾಗಿದೆ. ಹಾಗೆಯೇ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಇದು 500ನೇ ಅಂತಾರಾಷ್ಟ್ರೀಯ ಪಂದ್ಯವಾಗಿರುವುದರಿಂದ ವಿಶ್ವ ಕ್ರಿಕೆಟ್​ನ ಸಾಮ್ರಾಟ ಕಿಂಗ್​ ಕೊಹ್ಲಿಗೆ ಗೆಲುವಿನ ಉಡುಗೊರೆ ನೀಡಲು ಟೀಂ ಇಂಡಿಯಾ ಬಯಸುತ್ತಿದೆ. ಜುಲೈ 20 ರ…

Read More

ಇತ್ತೀಚೆಗಷ್ಟೇ ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾ ತೆರೆಗೆ ಬಂದಿದ್ದು ಬಾಕ್ಸ್ ಆಫೀಸ್ ನಲ್ಲಿ ಸೈಲೆಂಟ್ ಆಗಿ ಬಿಟ್ಟಿತ್ತು. ಚಿತ್ರ ತೆರೆಕಂಡ ವಾರದೊಳಗೆ ಥಿಯೇಟರ್ ನಿಂದ ಎತ್ತಂಗಡಿ ಮಾಡಲಾಗಿತ್ತು. ಈ ಮಧ್ಯೆ ಪ್ರಭಾಸ್ ನಟನೆಯ ಪ್ರಾಜೆಕ್ಟ್ ಕೆ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು ಅದು ಕೂಡ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಪ್ರಾಜೆಕ್ಟ್ ಕೆ ಸಿನಿಮಾ ತಂಡ ಬಿಲ್ಡ್ ಅಪ್ ಕೊಟ್ಟಂತೆ, ಅಚ್ಚರಿಯೊಂದು ಅಭಿಮಾನಿಗಳಿಗೆ ಕಾದಿದೆ ಎಂದೇ ಹೇಳಲಾಗಿತ್ತು. ಆದರೆ, ಯಾವುದೇ ಅಚ್ಚರಿ ಮೂಡಿಸದೇ ನಿರಾಸೆ ಮಾಡಿದೆ ಚಿತ್ರತಂಡ. ಪ್ರಭಾಸ್ ಅವರ ಮಾಮೂಲು ಲುಕ್ ಇರುವಂತಹ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ಇದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಪ್ರಾಜೆಕ್ಟ್ ಕೆ ಸಿನಿಮಾದ ಶೂಟಿಂಗ್ ಈಗಾಗಲೇ ಶುರುವಾಗಿದ್ದು, ಪ್ರಭಾಸ್ ಜೊತೆ ಕಮಲ್ ಹಾಸನ್,  ರಾಣಾ ದಗ್ಗುಬಾಟಿ ಈಗಾಗಲೇ ಅಮೆರಿಕಾಗೆ ಪ್ರವಾಸ ಬೆಳೆಸಿದ್ದಾರೆ. ಸುಮಾರು 600 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಸಿನಿಮಾ ತಯಾರಾಗಲಿದ್ದು, ಅನೇಕ ದಿಗ್ಗಜ ಕಲಾವಿದರು ಈ ಚಿತ್ರಕ್ಕಾಗಿ ಒಂದಾಗಿದ್ದಾರೆ. ಇಷ್ಟೊಂದು ನಿರೀಕ್ಷೆ…

Read More

ಹೆಸರು ಕಾಳು ಸಸ್ಯ ಆಧಾರಿತ ಪ್ರೋಟೀನ್‌ನ ಅತ್ಯುತ್ತಮ ಮೂಲವಾಗಿದೆ. ಅಷ್ಟೇ ಅಲ್ಲ, ಎಲ್ಲಾ ಅಗತ್ಯ ಅಮೈನೋ ಆಮ್ಲಗಳು ಇದರಲ್ಲಿ ಕಂಡುಬರುತ್ತವೆ.ಇದನ್ನು ಮೊಳಕೆ ಬರಿಸಿ ತಿನ್ನುವುದರಿಂದ ಅದರ ಉತ್ಕರ್ಷಣ ನಿರೋಧಕ ಗುಣಗಳನ್ನು ಹೆಚ್ಚಿಸುತ್ತದೆ ಮತ್ತು ಪ್ರೋಟೀನ್ ಪ್ರಮಾಣವನ್ನು ಹೆಚ್ಚಿಸುತ್ತದೆ. ಹೆಸರು ಕಾಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ​ ಹೆಸರು ಕಾಳುಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟವು ಫ್ರೀ ರಾಡಿಕಲ್ ಹಾನಿ, ಉರಿಯೂತ ಮತ್ತು ಹೃದಯ ಕಾಯಿಲೆಗೆ ಸಂಬಂಧಿಸಿದೆ. ಹೆಸರು ಕಾಳು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ​ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸುತ್ತದೆ​ ಹೆಸರು ಕಾಳಿನಲ್ಲಿ ನಾರಿನಂಶ ಅಧಿಕವಾಗಿದೆ. ಆದ್ದರಿಂದ ಅವು ನಿಮ್ಮ ಜೀರ್ಣಾಂಗ ವ್ಯವಸ್ಥೆ ಮತ್ತು ಕರುಳಿನ ಆರೋಗ್ಯಕ್ಕೂ ಉತ್ತಮವಾಗಿವೆ. ಮಲಬದ್ಧತೆ ಅಥವಾ ಅಜೀರ್ಣದಂತಹ ಸಮಸ್ಯೆಗಳಿಂದ ನೀವು ತೊಂದರೆಗೊಳಗಾಗಿದ್ದರೆ, ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಕರುಳಿನ ಚಲನೆಯನ್ನು ಉತ್ತೇಜಿಸಲು ನೀವು ಹೆಸರು ಕಾಳು ಅಥವಾ ಅದರ ಗಂಜಿ ತಿನ್ನಬೇಕು. ಇದು ಕರಗಬಲ್ಲ ಫೈಬರ್ ಮತ್ತು ಪೆಕ್ಟಿನ್…

Read More