ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ನೀಡಿರುವ ಸರ್ಕಾರ ಈಗ ಮತ್ತೊಂದು ವಿನೂತನ ಪ್ರಯೋಗದ ಮೂಲಕ ಈ ಭಾಗದ ಜನರಿಗೆ ಗುಣಮಟ್ಟದ ಸೇವೆ ಒದಗಿಸಲು ಚಿಂತನೆ ನಡೆಸಿದೆ. ಹಾಗಿದ್ದರೇ ಏನಿದು ಯೋಜನೆ ಅಂತೀರಾ ತೋರಿಸ್ತಿವಿ ನೋಡಿ.. ಅವಳಿ ನಗರಗಳ ನಡುವೆ ಬಿ.ಆರ್.ಟಿ.ಎಸ್ ಬಸ್ಸಿನ ಜೊತೆಗೆ ಲಘು ರೈಲು(Light rail along with BRTS buses) ಸಾರಿಗೆಯನ್ನು ಪರಿಚಯಿಸಲು ಸರ್ಕಾರ ಮುಂದಾಗಿದೆ. ಒಂದು ವೇಳೆ, ಈ ಯೋಜನೆಯು ಕಾರ್ಯರೂಪಕ್ಕೆ ಬಂದರೆ, ದೇಶದಲ್ಲೇ ಮೊದಲ ಬಾರಿಗೆ ಲಘು ರೈಲು ಸಾರಿಗೆಯನ್ನು ಹುಬ್ಬಳ್ಳಿ-ಧಾರವಾಡ ಮಹಾನಗರಗಳು ಪಡೆಯಲಿವೆ. ಹೌದು.. ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ನಗರ ಸಾರಿಗೆ ಮೇಲೆ ಒತ್ತಡ ಹೆಚ್ಚಿರುವ ಹಿನ್ನೆಲೆಯಲ್ಲಿ ಜನರಿಗೆ ಉತ್ತಮ ಸಾರಿಗೆ ಸಂಪರ್ಕವನ್ನು ಒದಗಿಸಲು ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹುಬ್ಬಳ್ಳಿ ಧಾರವಾಡ ರಸ್ತೆಯಲ್ಲಿ ಖಾಸಗಿ ವಾಹನಗಳ ಒತ್ತಡವನ್ನು ಕಡಿಮೆ ಮಾಡಲು ಸರ್ಕಾರವು ಸಾರ್ವಜನಿಕ ಸಾರಿಗೆಯನ್ನು ಬಲಪಡಿಸಲು ಹೆಚ್ಚು ಒತ್ತು ನೀಡುತ್ತಿದೆ. ಇನ್ನೂ ನಾಲ್ಕು ವಾರಗಳಲ್ಲಿ ಪ್ರಸ್ತಾವನೆ ಸಿದ್ಧವಾಗಲಿದೆ.…
Author: Prajatv Kannada
SHARE ಆಳಂದ: ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತದ ಜೈನ ಮುನಿ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕಣವನ್ನು ಕೇಂದ್ರ ಸಚಿವ ಭಗವಂತ ಖೂಬಾ ಅವರು ಇಂದಿಲ್ಲಿ ತೀವ್ರವಾಗಿ ಖಂಡಿಸಿದರು.ಸುದ್ದಿಗಾರರೊಂದಿಗೆ ಹತ್ಯೆಯ ಘಟನೆಯನ್ನು ವಿಷಾಧಿಸಿ ಮಾತನಾಡಿದರು. ರಾಜ್ಯದಲ್ಲಿ ಜೈನ್ ಮುನಿಯ ಈ ಹತ್ಯೆ ಘೋರ ನಿಂಧನೆಯಾಗಿದೆ. ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯವಾಗಿದೆ. ಮುಖ್ಯ ಆರೋಪಿಗಳ ಬಚಾವೂ ಮಾಡಲು ಸರ್ಕಾರ ಯತ್ನಿಸುತ್ತಿದೆ. ಇಂಥ ಘಟನೆ ರಾಜ್ಯಕ್ಕೆ ಶೋಭೆಯಲ್ಲ. ಈ ಸರ್ಕಾರ ಬೇಗ ತೊಲಗಲಿ ಎಂದು ಜನ ಬಯಸುತ್ತಿದ್ದಾರೆ ಎಂದು ಅವರು ಹೇಳಿದರು. ಕೇಂದ್ರ ಪರಿಹಾರ ಯತ್ನ: ರಾಜ್ಯದಲ್ಲಿ ಮಳೆ ಬೆಳೆ ಕೊರತೆಯಾದ ಬಗ್ಗೆ ರಾಜ್ಯ ಸರ್ಕಾರ ಬರ ಘೋಷಣೆ ಮಾಡಿದರೆ ಕೇಂದ್ರದ ಎನ್ಡಿಆರ್ ತಂಡ ಕಳುಹಿಸಿಕೊಟ್ಟು ಪರಿಶೀಲಿಸಿ ಪರಿಹಾರದ ನೇರವಿಗೆ ಕೇಂದ್ರ ಬರಲಿದೆ. ರಾಜ್ಯ ಸರ್ಕಾರ ತನ್ನ ಕಾರ್ಯವನ್ನು ಮೊದಲು ಮಾಡಲಿ ಎಂದು ಸಚಿವರು ಹೇಳಿದರು. ಗ್ಯಾರಂಟಿ ಹೆಸರಿನಲ್ಲಿ ಲೂಟಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ವಾರದಲ್ಲೇ ಬೆಲೆ ಹೆಚ್ಚಿಸಿ ಜನತೆಗೆ…
ಮಂಗಳೂರು: ಮಂಗಳೂರಿನ ಸುರತ್ಕಲ್ ಬೀಚ್ನಲ್ಲಿ ಅಪರೂಪದ ಮೀನು(Mangalore) ಪತ್ತೆಯಾಗಿದೆ. ಸ್ಪಾಟೆಡ್ ಮೊರೈ ಈಲ್ಸ್ ಹೆಸರಿನ ಅಪರೂಪದ ಮೀನು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಪ್ಪು ಚುಕ್ಕೆಗಳಿಂದ ಆಕರ್ಷಣೀಯವಾಗಿ ಕಾಣುವ ಈ ಮೀನು, ದ್ವೀಪದ ಬಳಿಯ ಹವಳ ದಿಬ್ಬದಂತಹ ಸ್ಥಳಗಳಲ್ಲಿ ವಾಸ ಮಾಡುತ್ತದೆ. ಪ್ರಕ್ಷುಬ್ಧವಾದ ಕಡಲಿನ ಅಬ್ಬರದಿಂದ ತೀರಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯವಾಗಿ ಆರೋಳಿ ಎಂದು ಕರೆಯಲ್ಪಡುವ ಈ ಮೀನನ್ನು ಸ್ಥಳೀಯರು ತಿನ್ನಲ್ಲ ಎಂದು ಮೀನುಗಾರರು ಮಾಹಿತಿ ನೀಡಿದರು.
ಬೆಂಗಳೂರು: ವಿಪಕ್ಷಗಳ ಮಹಾಮೈತ್ರಿಕೂಟದ ಸಭೆಗೆ IASಗಳ ನಿಯೋಜನೆ ವಿಚಾರಕ್ಕೆ ಸಂಬಂಧಿಸಿ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. IAS ಅಧಿಕಾರಿಗಳನ್ನು ಸ್ವಾಗತ ಕೋರಲು ಬಳಸಿಕೊಂಡಿದ್ದು ಸರಿಯಲ್ಲ. ಕಾಂಗ್ರೆಸ್ ಆರ್ಭಟ ನೋಡಿದ್ರೆ ಇಡೀ ದೇಶವನ್ನೇ ಗೆದ್ದ ರೀತಿ ಆಡ್ತಿದೆ. ಮುಂದಿನ ದಿನದಲ್ಲಿ ಬಿಜೆಪಿ ಇದಕ್ಕೆ ಉತ್ತರ ಕೊಡಲಿದೆ. ಕಾಂಗ್ರೆಸ್ ಆಡಳಿತದಲ್ಲಿ ಐಎಎಸ್ ಅಧಿಕಾರಿಗಳು ಅಸಹಾಯಕರಾಗಿದ್ದಾರೆ. ಅಧಿಕಾರಿಗಳು ಮಾತ್ರವಲ್ಲ ಜನರು ಕೂಡ ಅಸಹಾಯಕರಾಗಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದ ಅಮಲಿನಲ್ಲಿ ಮುಳುಗಿ ಹೋಗಿದೆ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ಕೇರಳದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕೇರಳ ಕಾಂಗ್ರೆಸ್ ನ ಹಿರಿಯ ನಾಯಕ ಉಮ್ಮನ್ ಚಾಂಡಿ (79) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬೆಂಗಳೂರಿನ ಇಂದಿರಾ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಓಮನ್ ಚಾಂಡಿ ಚಿಕಿತ್ಸೆ ಫಲಕಾರಿಯಾಗದೆ ದೈವಾಧೀನರಾಗಿದ್ದಾರೆ. ಕೇರಳ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಓಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಸಾಧನೆ ಮಾಡಿದವರಾಗಿದ್ದ ಇವರು 2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯಪಾಲರಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು.
ಬೆಂಗಳೂರು : ಈ ಬಾರಿ ಪ್ರಧಾನಿ ನರೇಂದ್ರ ಮೋದಿಗೆ ಮೆಜಾರಿಟಿ ಸಿಗೋದಿಲ್ಲ. ಅವರು ಸೋಲ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧಾಂತದ ಬಗ್ಗೆ ಅವರಿಗೆ ಈಗ ಅರಿವಾಯ್ತಾ? ಎಂದು ಕಿಡಿಕಾರಿದರು. ಮಹಾಘಟಬಂಧನ್ ಅಂತ ಬಂದು ನಂತರ ಏನಾಯ್ತು ನೋಡಿದ್ರಲ್ಲಾ ಎಂಬ ಹೆಚ್.ಡಿ ಕುಮಾರಸ್ವಾಮಿ ಆರೋಪ ವಿಚಾರವಾಗಿ ಮಾತನಾಡಿ, ಅವರನ್ನೆಲ್ಲಾ ಕರೆದಿದ್ದವರು ಯಾರು? ಅದನ್ನು ಮುಂದುವರೆಸಿದ್ರಾ? ಅವರು ಬಂದು ಇನ್ವೈಟ್ ಮಾಡಿದ್ರು, ಅದನ್ನು ಮುಂದುವರೆಸಲಿಲ್ಲ. ಅಲ್ಲಿಗೆ ನಿಂತೋಯ್ತು. ಅವರೆಲ್ಲಾ ಬಂದಿದ್ರು, ಹೋದ್ರು ಎಂದು ಛೇಡಿಸಿದರು. ಜೆಡಿಎಸ್ ಪಕ್ಷಕ್ಕೆ ಸಿದ್ಧಾಂತವೇ ಇಲ್ಲ. ಬಿಜೆಪಿ ಜೊತೆಗೆ ಹೋದರೂ ಜಾತ್ಯಾತೀತನಾ? ನಿತೀಶ್ ಕುಮಾರ್ ಸಿದ್ದಾಂತ ವಿಚಾರ ಅವರಿಗೆ ಯಾಕೆ ಬೇಕು. ಅವರ ವಿಚಾರ ಬೇಡ ಎಂದು ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು. ಇದು ಬೆಂಗಳೂರಿನಲ್ಲಿ ಎರಡನೇ ಸಭೆ ನಡೆಯುತ್ತಿದೆ. ಸುಮಾರು 24 ಪಕ್ಷದ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಎಲ್ಲಾ ವಿಪಕ್ಷ ನಾಯಕರು ಕೂಡ ಭಾಗಿಯಾಗುತ್ತಿದ್ದಾರೆ. ಇಂದು ಈ ಬಗ್ಗೆ ಚರ್ಚೆ ನಡೆಯಲಿದೆ. ಮುಂದಿನ…
ಬೆಂಗಳೂರು: 8ನೇ ತರಗತಿಯ ನಂತರ ಕನ್ನಡ ಭಾಷೆಯನ್ನು ಪಠ್ಯಕ್ರಮದಲ್ಲಿ ಸೇರಿಸಬಾರದು ಎಂದು ಖಾಸಗಿ ಶಾಲೆಯೊಂದರ ವಿದ್ಯಾರ್ಥಿಗಳ ಪೋಷಕರು ಶಾಲಾ ಆಡಳಿತ ಮಂಡಳಿಗೆ ಒತ್ತಾಯಿಸಿದ್ದಾರೆ. ನಗರದ ಚಾಲುಕ್ಯ ವೃತ್ತದ ಬಳಿಯ ಖಾಸಗಿ ಶಾಲೆಯಲ್ಲಿ ಓದುತ್ತಿರುವ 50 ಕ್ಕೂ ಹೆಚ್ಚು ಮಕ್ಕಳ ಪೋಷಕರು ಪಠ್ಯಕ್ರಮದಿಂದ ಕನ್ನಡ ಭಾಷೆ ಕೈಬಿಡುವಂತೆ ಶಾಲೆಯನ್ನು ಸಂಪರ್ಕಿಸಿ ಮನವಿ ಸಲ್ಲಿಸಿದ್ದಾರೆ. ಪಠ್ಯಕ್ರಮದಲ್ಲಿ ಕನ್ನಡದ ಬದಲು ಇಂಗ್ಲಿಷ್ ಸೇರಿಸಿದರೆ ಮಕ್ಕಳು ಉನ್ನತ ವ್ಯಾಸಂಗಕ್ಕೆ ಆಯ್ಕೆಯಾದಾಗ ಅನುಕೂಲವಾಗುತ್ತದೆ ಎಂದು ಪೋಷಕರು ವಾದ ಮಾಡಿದ್ದಾರೆ. ಈ ಮಧ್ಯೆ, ಪಠ್ಯಕ್ರಮದಿಂದ ಕನ್ನಡ ಭಾಷೆಯನ್ನು ಕೈಬಿಡಬೇಕೆಂಬ ಪೋಷಕರ ಆಗ್ರಹದ ವಿರುದ್ಧ ಕನ್ನಡ ಪರ ಸಂಘಟನೆಗಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಕನ್ನಡವನ್ನು ವಿರೋಧಿಸುತ್ತಿರುವ ಶಾಲೆ ಮತ್ತು ಪೋಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು: ಇನ್ಫೋಸಿಸ್ (Infosys) ಸಂಸ್ಥೆ ಮುಖ್ಯಸ್ಥರಾದ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ತಿರುಪತಿಗಿರಿವಾಸನಾದ ಶಂಖಚಕ್ರಧಾರಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆ ನೀಡಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮೂಲಕ ಸುಧಾಮೂರ್ತಿ ಅವರು ಸಾಕಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ಮೊದಲಿನಿಂದಲೂ ಸರಳ ಜೀವನ ನಡೆಸುತ್ತಾ ಅನೇಕರಿಗೆ ಮಾದರಿಯಾಗಿದ್ದಾರೆ. ಅವರ ದಾಂಪತ್ಯ ಜೀವನಕ್ಕೆ ಈಗ ನಲವತ್ತೈದು ವರ್ಷ. ಈ ನಲವತ್ತು ವರ್ಷಗಳಲ್ಲಿ ತಮ್ಮ ಬಳಿಯಿದ್ದ ಕೆಲವೇ ಕೆಲವು ಆಭರಣಗಳಿಂದ ಈ ಬಂಗಾರದ ಶಂಖವನ್ನು ಮಾಡಿಸಿ ತಿಮ್ಮಪ್ಪನಿಗೆ ನೀಡಿದ್ದಾರೆ.
ಬೆಂಗಳೂರು ;– ಘಟಬಂಧನಕ್ಕಾಗಿ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ IAS ಅಧಿಕಾರಿಗಳ ಬಳಕೆ ಮಾಡಿಕೊಂಡಿರುವ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಪ್ರಶ್ನಿಸಿದ್ದಾರೆ. ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ವಿಪರೀತ ದರ್ಪ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಕಾಂಗ್ರೆಸ್ ಪಕ್ಷಕ್ಕೆ ಹೋಗಿ ಮೆರೆಯುತ್ತಿದ್ದಾರೆ. ಅವರಿಗೆ ತಾಕತ್ತಿದ್ದರೆ ಕಾಂಗ್ರೆಸ್ನಿಂದ ಹೊರಬಂದು ಒಂದು ಹೊಸ ಪಕ್ಷ ಕಟ್ಟಿ 5 ಸ್ಥಾನ ಗೆದ್ದು ತೋರಿಸಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಬಹಿರಂಗ ಸವಾಲ್ ಹಾಕಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ತಾಕತ್ತಿದ್ದರೆ ಕಾಂಗ್ರೆಸ್ನಿಂದ (Congress) ಹೊರಬಂದು ಒಂದು ಪಕ್ಷ ಕಟ್ಟಿ 5 ಸ್ಥಾನ ಗೆದ್ದು ತೋರಿಸಲಿ ಎಂದು ಸವಾಲ್ ಹಾಕಿದ್ದಾರೆ. ನಾನು ಸ್ಪಷ್ಟವಾಗಿ ಹೇಳಿದ್ದೇನೆ. 123 ಸ್ಥಾನ ಕೊಟ್ಟು ಪಂಚರತ್ನ ಯೋಜನೆ ಜಾರಿ ಮಾಡದೇ ಹೋದ್ರೆ ಪಕ್ಷ ವಿಸರ್ಜನೆ ಮಾಡ್ತೀನಿ ಅಂತಾ ಹೇಳಿದ್ದೆ. 123 ಬಂದಿಲ್ಲ ವಿಸರ್ಜನೆ ಮಾಡಿಲ್ಲ ಅಂತ ಅಲ್ಲಿ ಟೇಂಕಾರದ ಮಾತು ಆಡ್ತಾರೆ. ಇದೇ ಮನುಷ್ಯ 58 ಸ್ಥಾನ ನನ್ನಿಂದ ಬಂತು ಅಂತಾ ಹೇಳಿದ್ದರು. 1999ರಲ್ಲಿ ಇದೇ ಮನುಷ್ಯ ಜೆಡಿಎಸ್ ಅಧ್ಯಕ್ಷ ಆಗಿದ್ದಾಗ 10 ಸ್ಥಾನಕ್ಕೆ ಬಂದಿದ್ವಿ. ಅವರೂ ಸೋತಿದ್ದರು. ಆದ್ರೆ ನಾನು ಒಬ್ಬ ಏಕಾಂಗಿಯಾಗಿ…