Author: Prajatv Kannada

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಮಹಾಘಟಬಂಧನ್ ಯಾಕೆ ಆಹ್ವಾನ ಕೊಟ್ಟಿಲ್ಲ ಅಂತ ಗೊತ್ತಿಲ್ಲ ಹಾಗೆ ಎನ್​ಡಿಎ  ಮೈತ್ರಿ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ನನಗೆ ಯಾರೂ ಕರೆ ಕೂಡ ಮಾಡಿಲ್ಲ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಘಟಬಂಧನ್​ ಸಭೆಗೆ ಕಾಂಗ್ರೆಸ್​ ಹಲವು ಪಕ್ಷಗಳ ನಾಯಕರಿಗೆ ಆಹ್ವಾನಿಸಿದ್ದಾರೆ. 123 ಸ್ಥಾನ ಬರದಿದ್ದರೆ ಜೆಡಿಎಸ್​​​ ವಿಸರ್ಜನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದರು. ನಾನು ಸದನದಲ್ಲಿ ವರ್ಗಾವಣೆ ದಾಖಲೆ ಬಿಡುಗಡೆ ಮಾಡಿದರೆ ನನ್ನ ಕಾಲದಲ್ಲಿ ವರ್ಗಾವಣೆಯಲ್ಲಿ ಕೋಟಿ ಕೋಟಿ ಹಣ ಪಡೆದಿದ್ದಾರೆ ಅಂತ ನನ್ನ ಮೇಲೆ ದಾಖಲೆ ಬಿಡುಗಡೆ ಮಾಡುತ್ತಿರಾ. ನನ್ನ ಕಾಲದಲ್ಲಿ ವರ್ಗಾವಣೆಗೆ ಲಂಚ ಪಡೆದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಎಂದು ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಹೇಳಿದರು. ಹಾಗೆ ಜೆಡಿಎಸ್​​ನಿಂದ ಅವಕಾಶವಾದಿ ರಾಜಕಾರಣ ಎಂಬ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ವಿಚಾರವಾಗಿ ಹೆಚ್​.ಡಿ ಕುಮಾರಸ್ವಾಮಿ ವಾಗ್ದಾಳಿ…

Read More

ಟಾಲಿವುಡ್‌ ಚಿತ್ರರಂಗದ ಖ್ಯಾತ ನಟ ಮೋಹನ್ ಬಾಬು ಮನೆಯಲ್ಲಿ ಆಸ್ತಿಗಾಗಿ ಮಕ್ಕಳ ಮಧ್ಯೆ ಕಿತ್ತಾಟ ಶುರುವಾಗಿದೆ. ಈಗಾಗ್ಲೆ ಸಾಕಷ್ಟು ಸಮಯದಿಂದ ಆಸ್ತಿಗಾಗಿ ಮಕ್ಕಳ ಮಧ್ಯೆ ಜಟಾಪಟಿ ಶುರುವಾಗಿದ್ದು ಇದೀಗ ಮಕ್ಕಳ ಕಿತ್ತಾಟಕ್ಕೆ ಬ್ರೇಕ್ ಹಾಕಲು ನಟ ಮೋಹನ್ ಬಾಬು ಮುಂದಾಗಿದ್ದಾರೆ. ತಮ್ಮ ಕೋಟಿ ಕೋಟಿ ಆಸ್ತಿಯನ್ನು ಮಕ್ಕಳಿಗೆ ಸಮನಾಗಿ ಪಾಲು ಮಾಡಲು ನಟ ನಿರ್ಧರಿಸಿದ್ದಾರೆ. ಮೋಹನ್ ಬಾಬು ಅವರ ಮೂವರು ಮಕ್ಕಳ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಎದೆಎತ್ತರಕ್ಕೆ ಬೆಳೆದ ಮಕ್ಕಳು ಕಿತ್ತಾಡ್ಕೊಂಡು ಮೂರು ದಿಕ್ಕಲ್ಲಿ ದಾರಿ ಕಂಡುಕೊಂಡಿದ್ದಾರೆ. ಈ ಕಡೆ ತಂದೆ ಇನ್ನೊಂದು ದಾರಿ ಹಿಡಿದು ಹೊರಟಿದ್ದಾರೆ. ಟಾಲಿವುಡ್‌ ಚಿತ್ರರಂಗದ ಶ್ರೀಮಂತ ನಟರಲ್ಲಿ ನಟ ಮೋಹನ್ ಬಾಬು ಕೂಡ ಒಬ್ಬರು. ತಮ್ಮದೇ ಆದ ಡಿಫರೆಂಟ್ ಸ್ಟೈಲ್‌ನಿಂದ ಟಾಲಿವುಡ್‌ನಲ್ಲಿ ಭದ್ರನೆಲೆಕಂಡುಕೊಂಡ ಮೋಹನ್‌ಬಾಬುಗೆ ಮೂವರು ಮಕ್ಕಳು. ವಿಷ್ಣು ಮಂಚು, ಮನೋಜ್ ಮಂಚು ಹಾಗೂ ಲಕ್ಷ್ಮಿ ಮಂಚು. ಮೂರೂ ಮಕ್ಕಳು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಆದರೆ ವಿಷ್ಣು ಹಾಗೂ ಮನೋಜ್ ಮಂಚುವಿನ ಪರಸ್ಪರ ಕಿತ್ತಾಟ…

Read More

ಚೀನಾದ ಆತಿಥ್ಯದಲ್ಲಿ ನಡೆಯಲಿರುವ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್ ನಲ್ಲಿ ಟೀಮ್ ಇಂಡಿಯಾವನ್ನು ಸಿಎಸ್‌ಕೆಯ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಮುನ್ನಡೆಸುತ್ತಿದ್ದು, ಮಹಾ ಕ್ರೀಡಾಕೂಟದಲ್ಲಿ ದೇಶಕ್ಕೆ ಚಿನ್ನದ ಪದಕ ಗೆದ್ದು ಕೊಡುವುದೇ ನನ್ನ ಮಹತ್ತರ ಕನಸಾಗಿದೆ ಎಂದು ತಮ್ಮ ಹೆಬ್ಬಯಕೆ ವ್ಯಕ್ತಪಡಿಸಿದ್ದಾರೆ. ಹದಿನಾರನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಎಂ.ಎಸ್ ಧೋನಿ ಪಡೆ 5ನೇ ಬಾರಿ ಟ್ರೋಫಿ ಗೆಲ್ಲಲು ನೆರವಾಗಿದ್ದ ಋತುರಾಜ್ ಗಾಯಕ್ವಾಡ್ 590 ರನ್ ಗಳಿಸಿ ಗಮನ ಸೆಳೆದಿದ್ದಾರೆ. ಏಕದಿನ ವಿಶ್ವಕಪ್ ಟೂರ್ನಿಯ ದೃಷ್ಟಿಯಿಂದ ಅನುಭವಿ ಆಟಗಾರರಿಗೆ ಏಷ್ಯನ್ ಗೇಮ್ಸ್ ನಿಂದ ವಿಶ್ರಾಂತಿ ನೀಡಿದ್ದು, ರೋಹಿತ್ ಶರ್ಮಾ ಬದಲಿಗೆ ಋತುರಾಜ್ ಗಾಯಕ್ವಾಡ್‌ಗೆ ನಾಯಕನ ಜವಾಬ್ದಾರಿಯನ್ನು ಬಿಸಿಸಿಐ ಸೆಲೆಕ್ಟರ್ಸ್ ವಹಿಸಿದ್ದಾರೆ. ಚೀನಾದ ಹಾಂಗ್‌ಝೌನಲ್ಲಿ ಸೆಪ್ಟಂಬರ್‌ 28 ರಿಂದ ಅಕ್ಟೋಬರ್‌ 8ರವರೆಗೆ ನಡೆಯಲಿರುವ ಏಷ್ಯಾ ಕ್ರೀಡಾಕೂಟದ ಬಗ್ಗೆ ಬಿಸಿಸಿಐ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ವಿಡಿಯೋ ಒಂದರಲ್ಲಿ ಋತುರಾಜ್ ಗಾಯಕ್ವಾಡ್ ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ. ಚಿನ್ನದ ಪದಕ ಗೆಲ್ಲುವುದೇ ಗುರಿ “ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಚಿನ್ನದ ಪದಕ…

Read More

ಡೊಮಿನಿಕಾ: ಕೆರಿಬಿಯನ್ ನಾಡಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 141 ರನ್ ಗೆಲುವು ಸಾಧಿಸಿದ್ದು, ನಾಯಕ ರೋಹಿತ್ ಶರ್ಮಾ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ನಾಯಕತ್ವದ ದೀರ್ಘಕಾಲದ ದಾಖಲೆ ಮುರಿದು ಗಮನ ಸೆಳೆದಿದ್ದಾರೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬ್ಯಾಟ್ ಮಾಡಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (60 ಕ್ಕೆ 5) ಬೌಲಿಂಗ್ ದಾಳಿಗೆ ಸಿಲುಕಿ 150 ರನ್ ಗಳಿಗೆ ಆಲೌಟ್ ಆಯಿತು.‌ ಟೀಮ್ ಇಂಡಿಯಾ ತಮ್ಮ ಮೊದಲ ಇನಿಂಗ್ಸ್ ನಲ್ಲಿ ಯುವ ಆಟಗಾರ ಯಶಸ್ವಿ ಜೈಸ್ವಾಲ್ (171 ರನ್), ನಾಯಕ ರೋಹಿತ್ ಶರ್ಮಾ (103ರನ್) ಮನಮೋಹಕ ಶತಕ ಹಾಗೂ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ (76 ರನ್) ಅರ್ಧಶತಕ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 421 ಬೃಹತ್ ಮೊತ್ತ ದಾಖಲಿಸಿ ಡಿಕ್ಲೇರ್ಡ್ ಘೋಷಿಸಿತು. ದ್ವಿತೀಯ…

Read More

ಬಹುಭಾಷಾ ನಟಿ ನಿತ್ಯಾ ಮೆನನ್ ಕುಟುಂಬದಲ್ಲಿ ಸೂತಕದ ಛಾಯೆ ಮನೆ ಮಾಡಿದೆ. ನಿತ್ಯಾ ಅವರ ಪ್ರೀತಿಯ ಅಜ್ಜಿ ಇತ್ತೀಚಿಗೆ ಇಹಲೋಕ ತ್ಯಜಿಸಿದ್ದಾರೆ. ಅಜ್ಜಿಯ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ನಟಿ ನಿತ್ಯಾ ಮೆನನ್ ಭಾವುಕರಾಗಿದ್ದಾರೆ. ಈ ಮೊದಲು ಅಜ್ಜನನ್ನು ಕಳೆದುಕೊಂಡಿದ್ದ ನಿತ್ಯಾ ಮೆನನ್ ಇದೀಗ ತುಂಬಾ ಪ್ರೀತಿಸುತ್ತಿದ್ದ ಅಜ್ಜಿಯನ್ನು ಕಳೆದುಕೊಂಡಿದ್ದಾರೆ. ಈಗ ಇವರಿಬ್ಬರು ಜೊತೆಗಿಲ್ಲ ಎನ್ನುವುದನ್ನು ನಿತ್ಯಾ ಮೆನನ್‌ಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ನೋವಿನಿಂದಾಗಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಅಜ್ಜಿ ಮತ್ತು ಅಜ್ಜನೊಂದಿಗಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಯುಗವೊಂದು ಕೊನೆಗೊಂಡಿದೆ. ಗುಡ್ ಬೈ ಅಜ್ಜಿ ಮತ್ತು ನನ್ನ ಚೆರ್ರಿಮನ್. ನಾನು ನಿಮ್ಮನ್ನು ಬೇರೊಂದು ಜಗತ್ತಿನಲ್ಲಿ ಭೇಟಿಯಾಗುತ್ತೇನೆ ಎಂದು ನಟಿ ಪೋಸ್ಟ್ ಮಾಡಿದ್ದಾರೆ. ತಮ್ಮ ಅಜ್ಜ, ಅಜ್ಜಿಯ ಜೊತೆಗೆ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

Read More

ಖ್ಯಾತ ನಟ ಮಾಧವನ್ ಸಿನಿಮಾಗಳಿಗಿಂತ ಹೆಚ್ಚಾಗಿ ತಮ್ಮ ಖಾಸಗಿ ವಿಚಾರದಲ್ಲೇ ಹೆಚ್ಚು ಹೆಚ್ಚು ಸುದ್ದಿಯಾಗ್ತಿದ್ದಾರೆ. ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ತೊಡಗಿಕೊಂಡಿರುವ ನಟ ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಫ್ರೆಂಚ್ ಪ್ರೆಸಿಡೆಂಟ್ ಇಮ್ಯಾನುಯೆಲ್-ಮ್ಯಾಕ್ರಾನ್ ಜೊತೆ ಡಿನ್ನರ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. ಅವರ ಜೊತೆ ಕಳೆದಂತಹ ಸುಂದರ ಕ್ಷಣಗಳನ್ನ ನಟ ಮ್ಯಾಡಿ, ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ನಟ ಮಾಧವನ್ ಫ್ರೆಂಚ್ ಪ್ರೆಸಿಡೆಂಟ್ ಇಮ್ಯಾನುಯೆಲ್-ಮ್ಯಾಕ್ರಾನ್ ಅವರು ಆಯೋಜಿಸಿದ ಡಿನ್ನರ್‌ನಲ್ಲಿ ಭಾಗಿಯಾದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವಾರ್ಥವಾಗಿ ಲೌರೆ ಮ್ಯೂಸಿಯಂನಲ್ಲಿ ಆಯೋಜಿಸಿದ್ದ ಡಿನ್ನರ್‌ನಲ್ಲಿ ಮೋದಿ ಜೊತೆ ಮಾಧವನ್ ಕೂಡಾ ಭಾಗಿಯಾಗಿದ್ದು, ಮೋದಿ ಅವರು ಮಾಧವನ್ ಅವರ ಕೈ ಹಿಡಿದು ಆಪ್ತತೆಯಿಂದ ಮಾತನಾಡುತ್ತಿರುವುದು ಫೋಟೋದಲ್ಲಿ ಕಾಣ ಬಹುದಾಗಿದೆ. ಈ ಪೋಸ್ಟ್‌ಗೆ ಶಿಲ್ಪಾ ಶೆಟ್ಟಿ, ಅನುಪಮ್ ಖೇರ್ ಸೇರಿದಂತೆ ಹಲವು ಮೆಚ್ಚುಗೆ ಸೂಚಿಸಿದ್ದಾರೆ. ತಮಿಳು, ಬಾಲಿವುಡ್ ರಂಗದಲ್ಲಿ ಗುರುತಿಸಿಕೊಂಡಿರುವ ಹೆಸರಾಂತ ನಟ ಮಾಧವನ್ ಅವರು 1998ರಲ್ಲಿ ಕನ್ನಡದ ʼಶಾಂತಿ ಶಾಂತಿ ಶಾಂತಿʼ ಎಂಬ ಚಿತ್ರದಲ್ಲಿ ನಟಿಸಿದ್ದಾರೆ. ಸದ್ಯ ಹಿಂದಿ,…

Read More

ಜೀವನ ಶೈಲಿ, ವ್ಯಾಯಾಮದ ಕೊರತೆ, ಕೆಟ್ಟ ಆಹಾರ ಪದ್ಧತಿಯಿಂದಾಗಿ ಜನರು ಅಸಿಡಿಟಿ ಸಮಸ್ಯೆಗೆ ಒಳಗಾಗ್ತಿದ್ದಾರೆ.ಈ ಅಸಿಡಿಟಿಯಿಂದ ಹೊಟ್ಟೆ ಉರಿ, ವಾಕರಿಕೆ, ವಾಂತಿ, ತಲೆನೋವು, ಮೈಕೈನೋವು ಸೇರಿದಂತೆ ಅನೇಕ ಸಮಸ್ಯೆ ಶುರುವಾಗುತ್ತದೆ.ಸಿಡಿಟಿ ಸಮಸ್ಯೆಯಿಂದ ಹೊರಗೆ ಬರಬೇಕು ಎನ್ನುವವರು ಪುದೀನಾ ಎಲೆಗಳನ್ನು ಬಳಸಬಹುದು. ಪುದೀನಾ ಎಲೆ ನಿಮ್ಮ ಅಸಿಡಿಟಿ ಸಮಸ್ಯೆಗೆ ರಾಮಬಾಣದಂತೆ ಕಾರ್ಯ ನಿರ್ವಹಿಸುತ್ತದೆ. ಪುದೀನಾ ಎಲೆಯಲ್ಲಿರುವ ಪೋಷಕಾಂಶಗಳು  ಪುದೀನಾದಲ್ಲಿ ವಿಟಮಿನ್ ಎ, ವಿಟಮಿನ್ ಬಿ, ವಿಟಮಿನ್ ಸಿ, ಕ್ಯಾಲ್ಸಿಯಂ, ರಂಜಕ ಮತ್ತು ಕಿಣ್ವಗಳಂತಹ ಪೋಷಕಾಂಶಗಳು ಕಂಡುಬರುತ್ತವೆ. ಅಸಿಡಿಟಿ ಸಮಸ್ಯೆಯಿರುವವರು ಪುದೀನಾವನ್ನು ಹೇಗೆ ಸೇವನೆ ಮಾಡಿ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ  ಖಾಲಿ ಹೊಟ್ಟೆಯಲ್ಲಿ ಪುದೀನಾ ಎಲೆ ತಿನ್ನಿ ಪುದೀನಾ ಮತ್ತು ಓಂಕಾಳಿನ ಚಟ್ನಿ ಸೇವನೆ ಮಾಡಬೇಕು ಪುದೀನಾ ಟೀ ಪುದೀನಾ ಮಜ್ಜಿಗೆ

Read More

ವಾಷಿಂಗ್ಟನ್‌: ಒಂಟಿ ಜೀವನ ಬೇಸರವಾಗಿದ್ದು, ಮದುವೆಯಾಗ್ಬೇಕು ಅಂತಾ ಅನ್ನಿಸಿದೆ, ಹುಡುಗನನ್ನ ಹುಡುಕಿ ಕೊಡಿ ಪ್ಲೀಸ್‌. ನನಗೆ ಬೇಕಾದಂತಹ ಹುಡುಗನನ್ನ ಹುಡುಕಿ ಕೊಟ್ರೆ 5 ಸಾವಿರ ಡಾಲರ್‌ (4.10 ಲಕ್ಷ ರೂ.) ಬಹುಮಾನ ಕೊಡ್ತೀನಿ ಎಂದು ಅಮೆರಿಕದ ಮಹಿಳೆಯೊಬ್ಬರ ಬಂಪರ್ ಆಫರ್ ನೀಡಿದ್ದಾರೆ. ಒಂಟಿ ಜೀವನದಿಂದ ಬೇಸರಗೊಂಡಿರುವ ಲಾಸ್ ಏಂಜಲೀಸ್‌ನ ಈವ್ ಟಿಲ್ಲಿ-ಕೊಲ್ಸನ್ (35) ಮಹಿಳೆ ದಾಂಪತ್ಯ ಜೀವನಕ್ಕೆ ಕಾಲಿಡಲು ಕಾತುರರಾಗಿದ್ದಾರೆ. 10 ಲಕ್ಷ ಫಾಲೋವರ್ಸ್‌ಗಳನ್ನು ಹೊಂದಿರುವ ಕೋಲ್ಸನ್‌ ತನಗೆ ಹುಡುಗನನ್ನ ಹುಡುಕಿಕೊಡುವಂತೆ ಇನ್ಸ್ಟಾಗ್ರಾಮ್‌ನಲ್ಲಿ ವೀಡಿಯೋ ಮೂಲಕವೂ ಹುಡುಗನನ್ನ ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ. ಟಿಲ್ಲಿ-ಕೊಲ್ಸನ್ ಈ ಹಿಂದೆ ತಮ್ಮ ಸ್ನೇಹಿತರಲ್ಲೇ ಒಬ್ಬರನ್ನ ಅಥವಾ ತಾನು ಕೆಲಸ ಮಾಡುವ ಕಂಪನಿಯ ಬಾಸ್‌ ಅವರನ್ನೇ ಮದುವೆಯಾಗುವುದಾಗಿ ಒಪ್ಪಂದ ಮಾಡಿಕೊಂಡಿದ್ದರು. ಇದೀಗ ಸಾರ್ವಜನಿಕ ಜೀವನಕ್ಕೆ ತೆರೆದುಕೊಂಡಿದ್ದಾರೆ. ನನಗೆ ನನ್ನ ಗಂಡನಾಗುವನನ್ನ ಪರಿಚಯಿಸಿದ್ರೆ, ನಾನು ಅವನನ್ನು ಮದುವೆಯಾದ್ರೆ ಹುಡುಕಿ ಕೊಟ್ಟವರಿಗೆ 5 ಸಾವಿರ ಡಾಲರ್‌ ಕೊಡುತ್ತೇನೆ. ಆದ್ರೆ ನಾನು ಅವನೊಂದಿಗೆ ಹೆಚ್ಚುಕಾಲ ಇರುವುದು ಅನುಮಾನ. 20 ವರ್ಷಗಳಲ್ಲಿ ವಿಚ್ಛೇದನ ನೀಡಬಹುದು.…

Read More

ಚಂಡೀಗಢ;- ರೈತರೊಬ್ಬರು ಬೆಕ್ಕಿನ ಮರಿಗಳೆಂದು ಭಾವಿಸಿ, ಚಿರತೆ ಮರಿಗಳನ್ನು ರಕ್ಷಿಸಿ ಗ್ರಾಮಕ್ಕೆ ತಂದು ಅವುಗಳಿಗೆ ಮೇಕೆ ಹಾಲನ್ನು ಕುಡಿಸಿರುವ ಘಟನೆ ಹರ್ಯಾಣದ ನುಹ್‌ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಮೇಕೆಗಳನ್ನು ಮೇಯಿಸಲೆಂದು ಕಾಡಿಗೆ ತೆರಳಿದ್ದ ವೇಳೆ 2 ಚಿರತೆ ಮರಿಗಳು ಸಿಕ್ಕಿವೆ. ಎಳೆಯದಾಗಿದ್ದ ಕಾರಣ ಅವುಗಳು ಬೆಕ್ಕಿನ ಮರಿಗಳಿರಬಹುದೆಂದು ಭಾವಿಸಿ ಅವುಗಳನ್ನು ಮನೆಗೆ ತಂದು, ಮೇಕೆ ಹಾಲು ಕುಡಿಸಿದ್ದಾರೆ. ಕೊನೆಗೆ ಈ ವಿಚಾರ ಅರಣ್ಯಾಧಿಕಾರಿಗಳಿಗೆ ಗೊತ್ತಾಗಿ, ಅವರು ಸ್ಥಳಕ್ಕಾಗಮಿಸಿ ಚಿರತೆ ಮರಿಗಳನ್ನು ಕೊಂಡೊಯ್ದಿದ್ದು, ತಾಯಿಯ ಜತೆಗೆ ಒಗ್ಗೂಡಿಸುವ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ಅರಣ್ಯಾಧಿಕಾರಿ ಪ್ರವೀಣ್‌ ಕಸ್ವಾನ್‌ ಚಿರತೆ ಮರಿಗಳ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, “ಕಾಡಿನಲ್ಲಿ ಈ ರೀತಿ ಮರಿಗಳನ್ನು ಕಂಡಾಗ ರಕ್ಷಿಸುವುದಕ್ಕಾಗಿ ಎತ್ತಿಕೊಳ್ಳಬೇಡಿ, ಸಾಧ್ಯವಾದರೆ ಅವುಗಳು ಇರುವ ಸ್ಥಳವನ್ನೇ ಸುರಕ್ಷಿತವಾಗಿಸಿ ಸಾಕು. ಇಲ್ಲದಿದ್ದರೆ ಮರಿಗಳನ್ನು ಹುಡುಕಿ ಬರುವ ತಾಯಿ, ದಿಕ್ಕು ತಪ್ಪುತ್ತದೆ. ಮರಿಗಳು ತಾಯಿಂದ ದೂರಾಗುತ್ತವೆ” ಎಂದಿದ್ದಾರೆ.

Read More

ಸೋಮವಾರ- ರಾಶಿ ಭವಿಷ್ಯ ಜುಲೈ-17,2023 ಅಮವಾಸೆ ಸೂರ್ಯೋದಯ: 06.02 AM, ಸೂರ್ಯಾಸ್ತ : 06.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಆಷಾಢ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಗ್ರೀಷ್ಮ ಋತು, ತಿಥಿ: ಇವತ್ತು ಪೂರ್ಣ ಅಮವಾಸ್ಯೆ ನಕ್ಷತ್ರ: ಇವತ್ತು ಆರ್ದ್ರಾ 02:39 AM ತನಕ ನಂತರ ಪುನರ್ವಸು ಯೋಗ: ಇವತ್ತು ವ್ಯಾಘಾತ08:58 AM ತನಕ ನಂತರ ಹರ್ಷಣ ಕರಣ: ಇವತ್ತು ಚತುಷ್ಪಾದ 11:02 AM ತನಕ ನಂತರ ನಾಗವ ರಾಹು ಕಾಲ: 07:30 ನಿಂದ 09:00 ವರೆಗೂ ಯಮಗಂಡ: 10:30 ನಿಂದ 12:00 ವರೆಗೂ ಗುಳಿಕ ಕಾಲ: 03:00 ನಿಂದ 04:30 ವರೆಗೂ ಅಮೃತಕಾಲ: – ಇಲ್ಲ ಅಭಿಜಿತ್ ಮುಹುರ್ತ: ಬೆಳಗ್ಗೆ.11:56 ನಿಂದ ಮ.12:48 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403…

Read More