ಮಂಡ್ಯ: ಪ್ರಸ್ತುತ ಮಳೆ ಸಮಸ್ಯೆ ಎದುರಾಗಿದೆ. ಮತ್ತೊಂದೆಡೆ ತಮಿಳುನಾಡು ತನ್ನ ಪಾಲಿನ ನೀರಿಗೆ ಬೇಡಿಕೆಯಿಟ್ಟಿದೆ. ರಾಜ್ಯದಲ್ಲೇ ಕುಡಿಯುವ ನೀರಿಗೆ ಸಮಸ್ಯೆ ಇರುವಾಗ ತಮಿಳುನಾಡಿಗೆ ನೀರು ಬಿಡುವುದಾದರೂ ಹೇಗೆ? ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರು ಕಾವೇರಿ ನೀರಿಗಾಗಿ ತಮಿಳುನಾಡು ಒತ್ತಡ ಹೇರುತ್ತಿರುವ ಬಗ್ಗೆ ಪ್ರಶ್ನೆ ಕೇಳಿದಾಗ, ಕೆಆರ್ಎಸ್ ಅಣೆಕಟ್ಟೆಯಲ್ಲಿ ಅಲ್ಪ ಪ್ರಮಾಣದಲ್ಲಿ ನೀರು ಶೇಖರಣೆಯಾದ ಬೆನ್ನಲ್ಲೇ ಕೇಂದ್ರದ ನೀರು ನಿರ್ವಹಣಾ ಸಮಿತಿ ಎದುರು ತಮಿಳುನಾಡು ನೀರಿಗಾಗಿ ಬೇಡಿಕೆ ಇಟ್ಟಿದೆ. ಈ ಕುರಿತು ಕಾವೇರಿ ನೀರಾವರಿ ಸಮಿತಿ ಸಭೆಯ ಬಳಿಕವಷ್ಟೆನಿರ್ಧಾರ ಕೈಗೊಳ್ಳಲು ಸಾಧ್ಯ ಎಂದು ಉತ್ತರಿಸಿದರು. ಈ ತಿಂಗಳಾಂತ್ಯಕ್ಕೆ ರಾಜ್ಯದಲ್ಲಿ ಮಳೆಯಾಗುವ ಎಣಿಕೆ ಇದೆ. ಅದಾದರೂ ಹೇಗೆ ಭರವಸೆ ಇಟ್ಟುಕೊಳ್ಳುವುದು? ತಮಿಳುನಾಡು ವಾಡಿಕೆ ಪ್ರಕಾರ ಬಿಡಬೇಕಾದ ನೀರನ್ನು ಕೇಳುತ್ತಿದೆ. ಈ ಬಗ್ಗೆ ಮೊದಲು ಸಭೆ ನಡೆಸಲಿದ್ದೇವೆ, ಅಲ್ಲದೆ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರ ಜೊತೆಗೂ ಚರ್ಚಿಸಲಾಗುವುದು ಎಂದರು.
Author: Prajatv Kannada
ತುಮಕೂರು: ವಿಧಾನಸಭಾ ಚುನಾವಣೆಯಲ್ಲಿ ನಾವು 136 ಸೀಟು ಗೆದ್ದಿದ್ದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಹೊಟ್ಟೆಉರಿಯುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಳು ಹೆಚ್ಚಾಗಿವೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್, ನಾವು 136 ಸೀಟ್ ಗೆದ್ದ ಜೋಶ್ನಲ್ಲಿದ್ದೇವೆ. ಆದರೆ, ಅವರ ಪಕ್ಷ ಗೆದ್ದು ಅಧಿಕಾರಕ್ಕೆ ಬರಲಿಲ್ಲ. ಆದ್ದರಿಂದ ಅವರಿಗೆ ಹೊಟ್ಟೆಉರಿ ಇರಬಹುದು. ಅದಕ್ಕೆ ಆ ರೀತಿಯಲ್ಲಿ ಮಾತನಾಡುತ್ತಾರೆ ಎಂದರು. ಬೇಕಿದ್ದರೆ, ಅವರ ಸರ್ಕಾರ ಇದ್ದಾಗ ರಾಜ್ಯದಲ್ಲಿ ಎಷ್ಟುಕೊಲೆಗಳಾಗಿವೆ. ಎಷ್ಟುರೇಪ್ ಪ್ರಕರಣಗಳು ನಡೆದಿವೆ. ಎಷ್ಟು ಕ್ರಿಮಿನಲ್ ಕೇಸ್ಗಳು ಆಗಿವೆ ಎಂಬುದರ ಲೆಕ್ಕ ಕೊಡುತ್ತೇನೆ. ನಮ್ಮ ಸರ್ಕಾರದ ಅವಧಿಯಲ್ಲಿ ಯಾರೇ ಕೊಲೆ ಮಾಡಲಿ, ಕೂಡಲೇ ತಪ್ಪಿತಸ್ಥರನ್ನು ಹಿಡಿದು ಶಿಕ್ಷೆ ಕೊಡಿಸುತ್ತಿದ್ದೇವೆ. ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಕೊಂದವರನ್ನು 6 ಗಂಟೆಯಲ್ಲಿ ಹಿಡಿದು ಕೋರ್ಚ್ಗೆ ಒಪ್ಪಿಸಿದ್ದೇವೆ. ಹತ್ಯೆ ಸಂಬಂಧ ತನಿಖೆ…
ಮೈಸೂರು;- ಸಿಎಂ ಸಿದ್ದರಾಮಯ್ಯರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ರಂಜನೀಶ್ ಬಂಧಿತ ಯುವಕ ಎಂದು ಗುರುತಿಸಲಾಗಿದೆ. ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ ಸಂಬಂಧ ಸಿದ್ರಾಮುಲ್ಲಾ ಖಾನ್ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆಯಿಲ್ಲ. ಈ ಸರ್ಕಾರ ಬಂದ ಮೇಲೆ ಹಿಂದೂಗಳ ಮೇಲೆ ಸಲೀಸಾಗಿ ಕೊಲೆಗಳು ಆಗುತ್ತಿವೆ ಎಂದು ಪೋಸ್ಟ್ ಮಾಡಿದ್ದ ರಂಜನೀಶ್. ಈ ಘಟನೆ ಸಂಬಂಧ ಸೈಬರ್ ಕ್ರೈಂಗೆ ದೂರು ನೀಡಿದ್ದ.ಮೆಲ್ಲಹಳ್ಳಿ ರವಿ. ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆ 504,505ನೇ (1)ಬಿ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಟಿ.ನರಸೀಪುರ ಪೋಲೀಸರು. ಯುವಕ ರಂಜನೀಶ್ರನ್ನ ಬಂಧಿಸಿ ಬಳಿಕ ಬೇಲ್ ಮೂಲಕ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು;- ಇಂದಿನಿಂದ ರಾಜಧಾನಿ ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆ ನಡೆಯಲಿದ್ದು, ನಗರದ ಹಲವೆಡೆ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದೆ. ವಿಧಾನಸೌಧದಲ್ಲಿ ಅಧಿವೇಶನ ಹಾಗೂ ತಾಜ್ ವೆಸ್ಟೆಂಡ್ ಹೊಟೇಲ್ನಲ್ಲಿ ಲೋಕಸಭಾ ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಈ ಹಿನ್ನೆಲೆ, ಬಿಆರ್ ಅಂಬೇಡ್ಕರ್ ರಸ್ತೆ, ಕಬ್ಬನ್ ರಸ್ತೆ, ಪ್ಯಾಲೆಸ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಶೇಷಾದ್ರಿ ರಸ್ತೆಗಳಲ್ಲಿ ವಾಹನ ಸವಾರರು ಸಂಚರಿಸದೆ ಪರ್ಯಾಯ ಮಾರ್ಗಗಳನ್ನ ಬಳಸುವಂತೆ ನಗರ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಕೆಲವು ಕಡೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ. ಅಂಬೇಡ್ಕರ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ ಹಾಗೂ ರೇಸ್ ಕೋರ್ಸ್ ರಸ್ತೆಗಳಲ್ಲಿ ವಾಹನ ಪಾರ್ಕಿಂಗ್ಗೆ ನಿಷೇಧ ಹೇರಲಾಗಿದೆ.
ಬೆಂಗಳೂರು ;- ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯನ್ನು ಕಟ್ಟಿಹಾಕಲೇಬೇಕೆಂದು ದೇಶದ ಪ್ರತಿಪಕ್ಷಗಳೆಲ್ಲ ಒಗ್ಗಟ್ಟಿನ ಮಂತ್ರ ಪಠಿಸುತ್ತಿವೆ.ಇದಕ್ಕಾಗಿ ಇಂದು ಬೆಂಗಳೂರಿನಲ್ಲಿ ಶಕ್ತಿಪ್ರದರ್ಶನಕ್ಕೆ ಸಜ್ಜಾಗಿವೆ. ಈ ಬಾರಿ ಒಟ್ಟು 24 ಪಕ್ಷಗಳಿಗೆ ಆಹ್ವಾನ ನೀಡಲಾಗಿದೆ. ಇಂದಿನ ಸಭೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಗರಾದಾದ್ಯಂತ ಫ್ಲೆಕ್ಸ್ಗಳು ರಾರಾಜಿಸುತ್ತಿವೆ. ವಿಪಕ್ಷಗಳ ಒಕ್ಕೂಟದ ಸಭೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಜೊತೆಗೆ ಬಿಹಾರ ಸಿಎಂ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಜಾರ್ಖಂಡ್ನ ಹಾಲಿ ಸಿಎಂ ಹೇಮಂತ್ ಸೊರೇನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸಹ ಆಗಮಿಸಲಿದ್ದಾರೆ. ಅಷ್ಟೇ ಅಲ್ಲದೇ ಎನ್ಸಿಪಿಯ ಶರದ್ ಪವಾರ್, ಆರ್ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್, ಮಹಾರಾಷ್ಟ್ರ ಮಾಜಿ ಸಿಎಂ ಶಿವಸೇನೆಯ ಉದ್ಧವ್ ಠಾಕ್ರೆ, ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್, ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ,…
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಅಂಗನವಾಡಿಯಲ್ಲಿ ಕೊಳೆತ ಮೊಟ್ಟೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಈ ಹಿನ್ನೆಲೆಯಲ್ಲಿ ಬಿಸಿಯೂಟದ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯೂ ಮಹತ್ವದ ಮಾರ್ಗ ಸೂಚಿಗಳನ್ನು ಬಿಡುಗಡೆಗೊಳಿಸಿದ್ದು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಿದೆ. ರಾಜ್ಯದ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯ ಅಡುಗೆ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯು ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ್ದು ಮಧ್ಯಾಹ್ನದ ಬಿಸಿಯೂಟದಲ್ಲಿ ನೈರ್ಮಲ್ಯ, ಸ್ವಚ್ಛತೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಏಪ್ರಾನ್, ತಲೆಗವಸು, ಕೈಗವಸು ಕಡ್ಡಾಯಗೊಳಿಸಿದೆ. ಇದಲ್ಲದೇ ಅಡುಗೆ ಕೋಣೆ ಸ್ವಚ್ಛ ಹಾಗೂ ಧೂಳು ರಹಿತವಾಗಿ ಇರುವಂತೆ ನೋಡಿಕೊಳ್ಳಬೇಕು, ಶುದ್ಧ ನೀರಿನಲ್ಲಿ ಪಾತ್ರೆ ಪರಿಕರಗಳನ್ನು ತೊಳೆಯಬೇಕು. ಗೋಡೆ, ಕಿಟಕಿಗಳು ಹಲ್ಲಿ, ಜೇಡ, ಜಿರಳೆ, ನೊಣಗಳಿಂದ ಮುಕ್ತವಾಗಿರಬೇಕು, ಆಹಾರ ಧಾನ್ಯಗಳಲ್ಲಿ ಕ್ರಿಮಿ, ಕೀಟಗಳು ಇಲ್ಲದಿರುವುದನ್ನು ನೋಡಿಕೊಂಡು ಅಡುಗೆಗೆ ಬಳಕೆ ಮಾಡುವಂತೆ ಸೂಚನೆ ನೀಡಿದೆ. ಇನ್ನೂ ಸಿದ್ಧಪಡಿಸಿದ ಆಹಾರದ ಪಾತ್ರೆಗಳನ್ನು ಸುರಕ್ಷಿತವಾಗಿ ಮುಚ್ಚಿಡಬೇಕು, ಹಸಿ ಸೊಪ್ಪು ತರಕಾರಿಗಳನ್ನು ಶುದ್ಧ ನೀರಿನಿಂದ ಚೆನ್ನಾಗಿ ತೊಳೆದು ಸಾಂಬಾರ್ ಮಾಡಬೇಕು, ಸಿದ್ಧಪಡಿಸಿದ ಆಹಾರ ವಿತರಿಸೋ ಮುನ್ನ ಶುಚಿ-ರುಚಿ…
ಬಿಡಿಎನಲ್ಲಿ ಬಿಲಗಳನ್ನ ತೋಡಿಕೊಂಡು ಹೆಗ್ಗಣಗಳು ಸಿಕ್ಕಪಟ್ಟೆ ಮೆಯ್ದಿದಿವೆ.ಇದೀಗ ಭ್ರಷ್ಟ ಅಧಿಕಾರಿಗಳ ಭೇಟೆಗೆ ಸರ್ಕಾರ ಮುಂದಾಗಿದೆ.ಪ್ರಾಧಿಕಾರದಲ್ಲಿ ನಡೆದಿರುವ ಕೋಟ್ಯಾಂತರ ರೂ ಹಗರಣಗಳ ತನಿಖೆಗೆ ಸರ್ಕಾರ ಎಸ್ಐಟಿ ರಚನೆಗೆ ಮುಂದಾಗಿದೆ. ಇದರಿಂದ ಕೋಟಿ ಕೋಟಿ ನುಂಗಿದವರಿಗೆ ಚಳಿ ಜ್ವರ ಬರೋದಕ್ಕೆ ಶುರುವಾಗಿದ್ದು, ದೊಡ್ಡ ದೊಡ್ಡ ಐಎಎಸ್ ಹಾಗೂ ಕೆಎಎಸ್ ಅಧಿಕಾರಿಳಿಗೆ ನಡುಕ ಹುಟ್ಟಿಸಿದೆ..ಹಾಗಾದ್ರೆ ಯಾವೆಲ್ಲಾ ಹಗರಣಗಳು ತನಿಖೆಯಾಗಲಿ ಅನ್ನೋದನ್ನ ತೋರಿಸುತ್ತೇವೆ ಈ ಕಂಪ್ಲೀಟ್ ರಿಪೋರ್ಟ್ ನಲ್ಲಿ. ಬಿಡಿಎ ಇದು ಭ್ರಷ್ಟರ ಸಾಮಾಜ್ರ್ಯ.ಇಲ್ಲಿ ನಡೆಯುವ ಅಕ್ರಮಗಳು ಒಂದಲ್ಲ ಎರಡೆರಡು ಅಲ್ಲ ಬಿಡಿ.ಸಾರ್ವಜನಿಕ ಸ್ವತ್ತನ್ನ ಗುಳಂ ಮಾಡೋದಕ್ಕೆ ಅಂತ ಇಲ್ಲಿಗೆ ಅಧಿಕಾರಿಗಳು ಬರುತ್ತಾರೆ.ಇದೀಗ ಇಲ್ಲಿ ನಡೆದಿರುವ ಹಗರಣಗಳನ್ನ ತನಿಖೆ ನಡೆಸಿ, ಭ್ರಷ್ಟರನ್ನ ಬೀದಿಗೆ ತರಲು ಸರ್ಕಾರ ಮುಂದಾಗಿದೆ.. ಕಳೆದ ಹತ್ತು ವರ್ಷಗಳಲ್ಲಿ ನಡೆಇದಿದೆ ಎನ್ನಲಾದ ಹಗರಣಗಳ ತನಿಖೆ ನಡೆಸಲು ವಿಶೇಷ ಕಾರ್ಯಪಡೆ ರಚಿಸಲು ತೀರ್ಮಾನಿಸಲಾಗಿದೆ. ಹೌದು ಕಳೆದ ಹಲವು ವರ್ಷಗಳದಿಂದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ನಿವೇಶನಗಳನ್ನ ಅಧಿಕಾರಿಗಳು ಏಜೆಂಟರ ಜತೆ ಶಾಮೀಲಾಗಿ ಪಟ್ಟಭ್ರದ್ರ ಹಿತಾಶಕ್ತಿಗಳಿಗೆ…
ಬೆಂಗಳೂರು ;- ದಳಪತಿ ಹೆಚ್ಡಿ ಕುಮಾರಸ್ವಾಮಿ ಬಿಜೆಪಿ ಜೊತೆ ಸಖ್ಯ ಬೆಳೆಸಲು ದೆಹಲಿಗೆ ತೆರಳುವ ಸಾಧ್ಯತೆ ದಟ್ಟವಾಗಿದೆ. ತೆನೆ ಹೊತ್ತ ಮಹಿಳೆ ಬಹುತೇಕ ಕಮಲ ಮುಡಿಯೋದು ಫಿಕ್ಸ್ ಆಗಿದ್ದು, ದೆಹಲಿಯಲ್ಲಿ ಅಂತಿಮ ಮುದ್ರೆ ಬೀಳುವ ಸಾಧ್ಯತೆ ದಟ್ಟವಾಗಿದೆ. ಹೌದು ಇಂದು ಅಥವಾ ನಾಳೆ ಹೆಚ್.ಡಿ ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, NDA ಸಭೆಗೂ ಮುನ್ನ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಪ್ರಧಾನಿ ಮೋದಿ ಜತೆಗೆ ಉತ್ತಮ ಬಾಂಧವ್ಯದ ಮಾತುಗಳನ್ನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಕಮಲ ಮುಡಿಯುವು ಫಿಕ್ಸ್ ಆಗಿದೆ. ಬಿಜೆಪಿ ಕಟ್ಟಿಹಾಕಲು ವಿರೋಧ ಪಕ್ಷಗಳು ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿವೆ. ಇದರ ಮಧ್ಯೆ ಬಿಜೆಪಿ ಸಹ ತನ್ನ ಬಲ ಹೆಚ್ಚಿಸಿಕೊಳ್ಳಲು ಜುಲೈ 18ರಂದು ಸಭೆ ನಡೆಸುತ್ತಿದೆ. ಎನ್ಡಿಎ ಮೈತ್ರಿಕೂಟವನ್ನ ಮತ್ತೆ ಬಲಪಡಿಸಿ ಅಧಿಕಾರದ ಗದ್ದುಗೆ ಉಳಿಸಿಕೊಳ್ಳೋ ಪ್ರಯತ್ನಕ್ಕೆ ಮುಂದಾಗಿದೆ. ಈ ಪೈಕಿ ಜೆಡಿಎಸ್ಗೂ ಗಾಳ ಹಾಕಿದೆ. ಹೆಚ್ಡಿ ಕುಮಾರಸ್ವಾಮಿ ಸಹ ಬಿಜೆಪಿ ಜೊತೆ ಮೈತ್ರಿಗೆ ಒಲವು ಹೊಂದಿದ್ದಾರೆ…
ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿ ರಾಜ್ಯ ರಾಜಕೀಯದಲ್ಲಿ ಸದ್ಯ ಚರ್ಚಿತ ವಿಷಯವಾಗಿದೆ. ಈ ಸಂಬಂಧ ಇದೀಗ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಅವರು ನಾವು ಹೇಳಿದ ಮಾತನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಿಜ ಮಾಡಲು ಹೊರಟಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿ ಬಿ ಟೀಂ ಜೆಡಿಎಸ್ ಎಂದು ನಾವು ಅನೇಕ ಬಾರಿ ಹೇಳಿದ್ದೆವು. ಈಗ ಹೆಚ್ಡಿಕೆ ನಮ್ಮ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ. ಕೋಮುವಾದಿ ಪಕ್ಷ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಜೆಡಿಎಸ್ಗೆ ಯಾವ ಸಿದ್ಧಾಂತವಿದೆ?. ಅದೊಂದು ಅವಕಾಶವಾದಿ ಪಕ್ಷ. ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ ಎಂದಿದ್ದಾರೆ. ಜೆಡಿಎಸ್ ಮುಂದಿರುವ ಜಾತ್ಯಾತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ. 2006 ರಲ್ಲಿ ಬಿಜೆಪಿ ಜೊತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯಾತೀತ ತತ್ವಕ್ಕೆ ಹೆಚ್ಡಿಕೆ ಎಳ್ಳು ನೀರು ಬಿಟ್ಟಿದ್ದರು. ಆಗಲೇ ಜೆಡಿಎಸ್ನ ಅವನತಿ…
ಹಾವೇರಿ ;– ಜು.18ರ ಬಳಿಕ ವಿಪಕ್ಷ ನಾಯಕನ ಆಯ್ಕೆ ತೀರ್ಮಾನ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಶ್ಯಾಡೊ ಸಿಎಂ ಚರ್ಚೆ ನಡೆದಿದೆ. ಈಗಾಗಲೇ ವಿಧಾನಸಭೆಯಲ್ಲಿ ಹಲವು ವಿಚಾರಗಳನ್ನು ಎತ್ತಿದ್ದೇವೆ. ಸಿಎಂ ಕಚೇರಿಯಿಂದ ಹಿಡಿದು ಎಲ್ಲಾ ಕಡೆಗೂ ಹೊರಗಿನವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ವರ್ಗಾವಣೆಯಲ್ಲಿ ನಾನು ಯಾವುದಕ್ಕೂ ಹಣ ತೆಗೆದುಕೊಂಡಿಲ್ಲ ಎಂದು ಸಿಎಂ ಹೇಳುತ್ತಿದ್ದಾರೆ. ಸಿಎಂ ಸ್ವಂತಕ್ಕೆ ಹಣ ತೆಗೆದುಕೊಂಡಿಲ್ಲ ಎಂದು ಜಾರಿಕೊಳ್ಳುತ್ತಿದ್ದಾರೆ. ಅವರ ಸರ್ಕಾರದ ಮಂತ್ರಿ ಮಂಡಲದ ಸದಸ್ಯರು, ಚೇಲಾಗಳು ತೆಗೆದುಕೊಳ್ಳುತ್ತಿರುವುದು ಸ್ಪಷ್ಟವಾಗಿದೆ ಎಂದರು.