Author: Prajatv Kannada

ಕರ್ಕ ಸಂಕ್ರಾಂತಿ ಸೂರ್ಯೋದಯ: 06.01 AM, ಸೂರ್ಯಾಸ್ತ : 06.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಆಷಾಢ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಗ್ರೀಷ್ಮ ಋತು, ತಿಥಿ: ಇವತ್ತು ಚತುರ್ದಶಿ 10:08 PM ತನಕ ನಂತರ ಅಮವಾಸ್ಯೆ ನಕ್ಷತ್ರ: ಇವತ್ತು ಮೃಗಶಿರ 12:23 AM ತನಕ ನಂತರ ಆರ್ದ್ರಾ ಯೋಗ: ಇವತ್ತು ಧ್ರುವ08:33 AM ತನಕ ನಂತರ ವ್ಯಾಘಾತ ಕರಣ: ಇವತ್ತು ವಿಷ್ಟಿ 09:17 AM ತನಕ ನಂತರ ಶಕುನಿ 10:08 PM ಚತುಷ್ಪಾದ ರಾಹು ಕಾಲ: 04:00 ನಿಂದ 06:00 ವರೆಗೂ ಯಮಗಂಡ: 12:00 ನಿಂದ 01:30 ವರೆಗೂ ಗುಳಿಕ ಕಾಲ: 03:00ನಿಂದ 04:30 ವರೆಗೂ ಅಮೃತಕಾಲ: 03.42 PM to 05.27 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:56 ನಿಂದ ಮ.12:48 ವರೆಗೂ ಮೇಷ ರಾಶಿ: ರಾಶಿಯವರಿಗೆ ಮಗಳು ಒಳ್ಳೆಯ ಸ್ನೇಹಿತೆ, ವಿದೇಶದಲ್ಲಿ ನೆಲೆಸಿರುವ ನಿಮ್ಮ ಕುಟುಂಬ ಸದಸ್ಯರಿಂದ ಶುಭಸಮಾಚಾರ ಕೇಳುವಿರಿ, ಉದ್ಯೋಗದಲ್ಲಿ ಅಪಕೀರ್ತಿ, ಕೆಲಸದಲ್ಲಿ ಅಧಿಕ…

Read More

ದಾವಣಗೆರೆ ;- ಶಾಸಕ ಬಸವರಾಜ ಶಿವಗಂಗಾ ನೇತೃತ್ವದಲ್ಲಿ ಚನ್ನಗಿರಿ ಪೊಲೀಸ್ ಠಾಣೆ ಮುಂದೆ ಶನಿವಾರ ಸಂಜೆ ಪ್ರತಿಭಟನೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಠಾಣೆಯ ಬಳಿ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದರು. ಸ್ಥಳಕ್ಕೆ ಎಸ್ಪಿ ಬರಬೇಕು ಎಂದು ಪಟ್ಟು ಹಿಡಿದರು. ಶಾಸಕ ಬಸವರಾಜ ಶಿವಗಂಗಾ ಕಾರ್ಯಕರ್ತರೊಂದಿಗೆ ಠಾಣೆಯ ಮುಂದೆ ಕುಳಿತುಕೊಂಡರು. ನಮ್ಮದೇ ಸರ್ಕಾರವಿದ್ದರೂ ಕಾರ್ಯಕರ್ತರನ್ನು ಗುರಿಯಾಗಿಸಿ ದ್ವೇಷ ಸಾಧಿಸಲಾಗುತ್ತಿದೆ, ಅವರಿಗೆ ಕಿರುಕುಳ ನೀಡಲಾಗುತ್ತಿದೆ. ರಾಜಕೀಯ ಪ್ರೇರಿತವಾಗಿ ಉದ್ದೇಶಪೂರ್ವಕವಾಗಿ ದೂರು ದಾಖಲಿಸುತ್ತಿದ್ದಾರೆ. ಶಾಸಕರ ಮಾತಿಗೂ ಕಿಮ್ಮತ್ತಿಲ್ಲದಂತೆ ವರ್ತಿಸುತ್ತಿದ್ದಾರೆ ಎಂದು ಪೊಲೀಸರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಶಿವಗಂಗಾ, ಕ್ಷೇತ್ರದಲ್ಲಿ ನನ್ನ ಕಾರ್ಯಕರ್ತರ ಹಿತ ರಕ್ಷಣೆ ನನಗೆ ಮುಖ್ಯ. ನಾನು ದೂರವಾಣಿ ಕರೆ ಮಾಡಿದರೂ ಪೊಲೀಸರು ಸ್ಪಂದಿಸುತ್ತಿಲ್ಲ. ಪೊಲೀಸ್ ಇನ್‌ಸ್ಪೆಕ್ಟರ್ ಮತ್ತು ಪಿಎಸ್‌ಐ ಅವರನ್ನು ಅಮಾನತುಗೊಳಿಸಿ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

Read More

ಶಿವಮೊಗ್ಗ : ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ(Madhu Bangarappa)  ಹೇಳಿದರು. ಜಿಲ್ಲೆಯ ಸಾಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಶಿಕ್ಷಣ ತಜ್ಞರ ಜೊತೆ ಚರ್ಚಿಸಿ ಪುಸ್ತಕಗಳ ಹೊರೆ ಇಳಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಪಠ್ಯಪುಸ್ತಕಗಳ ಪರಿಷ್ಕರಣೆ ಮಾಡಲಾಗಿದೆ. ಪೂರಕ ಪುಸ್ತಕಗಳನ್ನು ಈಗಾಗಲೇ ವಿದ್ಯಾರ್ಥಿಗಳಿಗೆ ತಲುಪಿಸಲಾಗಿದೆ ಎಂದರು. ಶಿಕ್ಷಕರ ಸಮಾಲೋಚನೆ (ಕೌನ್ಸಲಿಂಗ್) ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ರಾಜ್ಯದ ಅನೇಕ ಕಡೆಗಳಲ್ಲಿ ಶಾಲಾ ಕಟ್ಟಡಗಳ ದುರಸ್ತಿಗೆ ಕ್ರಮ ವಹಿಸಲಾಗಿದ್ದು, ಒಂದರಿಂದ ಎಂಟನೇ ತರಗತಿವರೆಗೆ ಇದ್ದ ಮೊಟ್ಟೆ ವಿತರಣೆಯನ್ನು 10ನೇ ತರಗತಿಯ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ. ಪ್ರಸ್ತುತ ವಾರಕ್ಕೆ ಎರಡು ಮೊಟ್ಟೆಗಳು ವಿತರಣೆಯಂತೆ 84 ಮೊಟ್ಟೆಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು. ಅನ್ನಭಾಗ್ಯ ಯೋಜನೆ ಅಡಿ ಹೆಚ್ಚುವರಿ ಐದು ಕೆಜಿ ಅಕ್ಕಿಗೆ ಹಣ ವಿತರಣೆ ವಿಷಯದಲ್ಲಿ ಸಮಸ್ಯೆ…

Read More

ಕೋಲಾರ ;- ಸತತವಾಗಿ 60 ವರ್ಷಗಳನ್ನು ಆಳ್ವಿಕೆ ಮಾಡಿರುವಂತಹ ಕಾಂಗ್ರೆಸ್ ಪಕ್ಷ ಸುಳ್ಳು ಆಶ್ವಾಸನೆಗಳನ್ನು ಕೊಟ್ಟು ಚುನಾವಣೆಯಲ್ಲಿ ಗೆದ್ದಿರುವಂತದ್ದು ಎಂದು ಸಂಸದ ಎಸ್ ಮುನಿಸ್ವಾಮಿ ಹೇಳಿದರು. ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಜೂನಿಯರ್ ಕಾಲೇಜು ಬಳಿ ಅನ್ನಭಾಗ್ಯ ಯೋಜನೆಯ ನಗದು ಸಮಾವೇಶದಲ್ಲಿ ಭಾಗವಹಿಸಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದ್ರು. 2023 ರ ಚುನಾವಣೆಯಲ್ಲಿ ೫ ಗ್ಯಾರಂಟಿಗಳನ್ನು ಕೊಟ್ಟು ಕಂಡಿಷನ್ ಗಳನ್ನು ಹಾಕಿ ೧೦ ಕೆಜಿ ಅಕ್ಕಿ ಕೊಡುತ್ತೆವೆ ಅಂತ ಹೇಳಿ ೫ ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದಾರೆ ಎಂದು ಸರ್ಕಾರದ ವಿರುದ್ದ ಗುಡುಗಿದರು. ಅಲ್ಲದೆ ಮಾಲೂರು ತಾಲೂಕಿನಲ್ಲಿ ೧೦೦೦೦ ಸಾವಿರ ರೇಷನ್ ಕಾರ್ಡ್ ದಾರರಿಗೆ ಇದರ ಸೌಲಭ್ಯ ಸಿಕ್ಕಿಲ್ಲ ಚುನಾವಣಾ ಸಂದರ್ಭದಲ್ಲಿ ೫ ಗ್ಯಾರಂಟಿಗಳನ್ನು ಆಶ್ವಾಸನೆಗಳನ್ನು ಕೊಟ್ಟಿದ್ದರು ಅದು ಕಾಂಗ್ರೆಸ್ ನ ಪ್ರಣಾಳಿಕೆಯಾಗಿತ್ತು ಬಿಜೆಪಿ ಪ್ರಣಾಳಿಕೆಯಾಗಿರಲಿಲ್ಲ ನರೇಂದ್ರ ಮೋದಿಯವರನ್ನು ಕೇಳಿ ಚುನಾವಣಾ ಮ್ಯಾನಿಫೆಸ್ಟ್ ಮಾಡಿರಲಿಲ್ಲ ಇವತ್ತು ೫ ಕೆಜಿ ಅಕ್ಕಿ ಕೊಡುತ್ತೆವೆ ಅಂತ ಹೇಳಿದ್ದಾರೆ ಅದನ್ನು ಹತ್ತು ಕೆಜಿ ಕೆಜಿ ಅಕ್ಕಿ ಕೊಡುವವರೆಗು ನಿರಂತರ…

Read More

ಬೆಂಗಳೂರು ;- ಕಾಂಗ್ರೆಸ್‌ ಅವಧಿಯಲ್ಲಿ ಕೊಲೆ ಹೆಚ್ಚಾಗಿವೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ಈ ಸಂಬಂಧ ತುಮಕೂರಿನಲ್ಲಿ ಮಾತನಾಡಿದ ಅವರು, ನಾವು 136 ಸೀಟ್‌ ಗೆದ್ದ ಜೋಶ್‌ನಲ್ಲಿದ್ದೇವೆ. ಅದೇ ಅವರನ್ನು ಗೆಲ್ಲಿಸಲಿಲ್ಲ, ಆದ್ದರಿಂದ ಅವರಿಗೆ ಹೊಟ್ಟೆಉರಿ ಇರಬಹುದು. ಅದಕ್ಕೆ ಆ ರೀತಿಯಲ್ಲಿ ಮಾತನಾಡುತ್ತಾರೆ. ಅವರ ಸರ್ಕಾರ ಇದ್ದಾಗ ಎಷ್ಟುಕೊಲೆಯಾಗಿದೆ, ಎಷ್ಟುರೇಪ್‌ ಆಗಿದೆ, ಕ್ರಿಮಿನಲ. ಕೇಸ್‌ಗಳು ಆಗಿವೆ ಎಂಬ ಲೆಕ್ಕ ಕೊಡುತ್ತೇನೆ ಎಂದ ಅವರು ನಮ್ಮ ಸರ್ಕಾರದಲ್ಲಿ ಯಾರೇ ಕೊಲೆ ಮಾಡಲಿ ಮತ್ತೊಂದು ಮಾಡಲಿ. ಕೂಡಲೇ ಹಿಡಿದು ಶಿಕ್ಷೆ ಮಾಡುತ್ತಿದ್ದೇವೆ ಎಂದರು. ಜೈನ ಮುನಿಗಳನ್ನ ಕೊಂದವರನ್ನು 6 ಗಂಟೆಯಲ್ಲಿ ಹಿಡಿದು ಕೋರ್ಚ್‌ಗೆ ಒಪ್ಪಿಸಿದ್ದಾಗಿ ತಿಳಿಸಿದ ಅವರು ಅದರ ಬಗ್ಗೆ ತನಿಖೆ ನಡಿತಿದೆ. ಬೆಂಗಳೂರಿನಲ್ಲಿ ಜೋಡಿ ಕೊಲೆ ಆಯ್ತು. ಅವರನ್ನು 7 ಗಂಟೆಯಲ್ಲಿ ಕುಣಿಗಲ. ಬಳಿ ಬಂಧಿಸಿದ್ದಾಗಿ ತಿಳಿಸಿದರು. ಸುಮ್ಮನೆ ಲಾ ಆಂಡ್‌ ಆರ್ಡರ್‌ ಹಾಳಾಗಿ ಹೋಗಿದೆ ಅಂತ ಹೇಳಿಕೆ ಕೊಡುತ್ತಿರುವ ಅವರ…

Read More

ಬೆಂಗಳೂರು ;– ಪಕ್ಷ ಸೂಚಿಸಿದರೆ ಲೋಕಸಭೆಗೆ ಸ್ಪರ್ಧೆಗೆ ಸಿದ್ಧನಿದ್ದೇನೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೈಕಮಾಂಡ್‌ ಸೂಚಿಸಿದರೆ ಸ್ಪರ್ಧೆಗೆ ಸಿದ್ಧನಿದ್ದೇನೆ. ರಾಜಕೀಯದಲ್ಲಿ ಯಾವುದನ್ನೂ ಹೇಳಲಿಕ್ಕೆ ಆಗುವುದಿಲ್ಲ. ಕೊನೆ ಗಳಿಗೆಯಲ್ಲಿ ಏನಾದರೂ ಆಗಬಹುದು. ಪಕ್ಷದ ಹೈಕಮಾಂಡ್‌ ಸೂಚನೆ ನೀಡಿದರೆ ಲೋಕಸಭೆಗೆ ಸ್ಪರ್ಧಿಸುವುದಾಗಿ ತಿಳಿಸಿದರು. ಲೋಕಸಭಾ ಚುನಾವಣೆ ಸಂಬಂಧ ಇತ್ತೀಚೆಗೆ ಬೆಂಗಳೂರಿನಲ್ಲಿ ಸಭೆ ನಡೆದಿದೆ. ಆಕಾಂಕ್ಷಿಗಳ ದೊಡ್ಡ ಲಿಸ್ಟ್‌ ಇದೆ. ಇನ್ನೆರಡು ತಿಂಗಳಲ್ಲಿ ಬೆಳಗಾವಿ, ಚಿಕ್ಕೋಡಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು. ನಮ್ಮ ಕುಟುಂಬದಿಂದ ಯಾರಾದರೂ ಚುನಾವಣೆಗೆ ಸ್ಪರ್ಧೆ ಕುರಿತು ಸರ್ವೆ ಆಗಬೇಕು. ನಮ್ಮ ಬೇಡಿಕೆ ಮೇಲೆ ಚುನಾವಣೆ ನಡೆಯುವುದಿಲ್ಲ. ಪಬ್ಲಿಕ್‌ ಡಿಮ್ಯಾಂಡ್‌ ಮೇಲೆ ಚುನಾವಣೆ ನಡೆಯುತ್ತದೆ ಎಂದರು. ಬಹಳಷ್ಟುಜನ ಚಿಕ್ಕೋಡಿ ಟಿಕೆಟ್‌ ನೀಡಿದರೆ ಕಾಂಗ್ರೆಸ್‌ಗೆ ಬರುವುದಾಗಿ ಹೇಳಿದ್ದಾರೆ. ಪಕ್ಷಕ್ಕಾಗಿ ಬರುವವರು ಬರಲಿ. ಅದನ್ನು ಸ್ಥಳೀಯರು ಹಾಗೂ ನಾವು ಸೇರಿ ಅವರ ಹೆಸರು ಶಿಫಾರಸು ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ಎರಡೂವರೆ ವರ್ಷ…

Read More

ಬೆಂಗಳೂರು : ತಮ್ಮ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದೇ ಇಲ್ಲ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಭ್ರಷ್ಟಾಚಾರದಲ್ಲಿ ಸಿಲುಕಿರುವ ಭಯ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraja Bommai) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಲದಲ್ಲಿ ಯಾವುದೇ ಭ್ರಷ್ಟಾಚಾರ ನಡೆದೇ ಇಲ್ಲ ಎಂದು ಹೇಳಿದ್ದಾರೆ. ಅವರ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆಯದಿದ್ದರೆ 2013ರಿಂದ ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಸಲಿ ಎಂದು ಸವಾಲು ಹಾಕಿದರು. ಸಿದ್ದರಾಮಯ್ಯ ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆಯದಿದ್ದರೆ ನ್ಯಾಯಾಂಗ ಆಯೋಗ ರಚನೆ ಏಕಾಯಿತು? ಎಸಿಬಿ ಮಾಡಿದ್ದೇ ಭ್ರಷ್ಟಾಚಾರ ಮುಚ್ಚಿ ಹಾಕಲು. ಇದು ಇಡೀ ಜಗತ್ತಿಗೆ ಗೊತ್ತಿದೆ. ಸಣ್ಣ ನೀರಾವರಿ, ದೊಡ್ಡ ನೀರಾವರಿ ಎಲ್ಲದರಲ್ಲೂ ಭ್ರಷ್ಟಾಚಾರ ನಡೆದಿದೆ. ಅವರಿಗೆ ಭಯ ಇಲ್ಲದಿದ್ದರೆ 2013ರಿಂದ ಎಲ್ಲ ಪ್ರಕರಣಗಳನ್ನು ತನಿಖೆಗೆ ವಹಿಸಲಿ. ಅವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಸಿಲುಕಿಕೊಳ್ಳುವ ಭಯ ಇದೆ ಎಂದರು. ಯಡಿಯೂರಪ್ಪ ಅವರು ತಮ್ಮ ಕಾಲದ ಅವಧಿಯ ಅಕ್ರಮ ಗಣಿಗಾರಿಕೆಯ ಪ್ರಕರಣಗಳನ್ನು ತನಿಖೆಗೆ ನೀಡಿದ್ದರು ಎಂದರು.

Read More

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ಜುಲೈ 17 ರಂದು ರಾಷ್ಟ್ರೀಯ ನಾಯಕರಿಂದ ಚಾಲನೆ ಕೊಡಿಸಲಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ತಿಳಿಸಿದರು. ಗೃಹಲಕ್ಷ್ಮಿ ಯೋಜನೆಯಡಿ ಮನೆಯೊಡತಿ ಖಾತೆಗೆ 2 ಸಾವಿರ ಹಣ ಜಮೆ ಯೋಜನೆಗೆ ಜುಲೈ 17 ರಂದು  ಸೋಮವಾರ ಸಂಜೆ 5 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ ನಲ್ಲಿ ರಾಷ್ಟ್ರೀಯ ನಾಯಕರಿಂದ ಚಾಲನೆ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ತಿಳಿಸಿರುವಂತೆ ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ  ಎಂದು ಗುರುತಿಸಿರುವಂತೆ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಫಲಾನುಭವಿಗಳು ಅತ್ತೆಯಾಗಬೇಕ ಅಥವಾ ಸೊಸೆಯಾಗಬೇಕೆ ಎನ್ನುವ ವಿಚಾರವನ್ನು ಅರ್ಜಿಯಲ್ಲಿ ನಮೂದಿಸಿ ಸಲ್ಲಿಸಬೇಕು.  ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗುರತಕ್ಕದ್ದಲ್ಲ ಎಂದಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಯೋಜನೆ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ, ಎಪಿಎಲ್, ಬಿಪಿಎಲ್ ಅಂತ್ಯೋದಯ ಕಾರ್ಡ್ ನವರು ಈ ಯೋಜನೆ ಫಲಾನುಭವಿಗಳಾಗಿರುತ್ತಾರೆ. ಅರ್ಜಿಸಲ್ಲಿಕೆಗೆ ಯಾವುದೆ…

Read More

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ‌ ಸೋಲಿಸೋಕೆ ರಾಷ್ಟ್ರೀಯ ಮಟ್ಟದಲ್ಲಿ ಪ್ರಯತ್ನ ನಡೆದಿವೆ.ಕಾಂಗ್ರೆಸ್ ನೇತೃತ್ವದ ಸಮಾನಮನಸ್ಕ ಪಕ್ಷಗಳು ಒಕ್ಕೂಟ ರಚನೆಗೆ ಮುಂದಾಗಿವೆ.. ಜುಲೈ ೧೮ ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದಾರೆ..ಇದು ಬಿಜೆಪಿ ನಾಯಕರ ಆತಂಕಕ್ಕೆ ಕಾರಣವಾಗಿದೆ..ಕರ್ನಾಟಕ ಸೋಲು ಹಾಗೂ ಗ್ಯಾರೆಂಟಿಗಳು ಬಿಜೆಪಿ‌ ವರಿಷ್ಠರಿಗೆ ಭಯ ತಂದಿಟ್ಟಿವೆ..ಇದ್ರಿಂದ ಪ್ರಾದೇಶಿಕ ಪಕ್ಷಗಳ ಜೊತೆ ಹೊಂದಾಣಿಕೆ ಮುಂದಾಗಿದೆ..ಜುಲೈ ೧೮ ರಂದು ದೆಹಲಿಯಲ್ಲಿ ಮೈತ್ರಿಕೂಟದ ಸಭೆ ಕರೆಯಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಎಫೆಕ್ಟ್ ರಾಷ್ಟ್ರೀಯ ಮಟ್ಟದಲ್ಲಿ ಸದ್ದುಮಾಡಿದೆ..ಕಾಂಗ್ರೆಸ್ ಗ್ಯಾರೆಂಟಿಗಳು ಪಂಚ ರಾಜ್ಯಗಳ ಚುನಾವಣೆ ಮೇಲೂ ಎಫೆಕ್ಟ್ ಆಗುವ ಚರ್ಚೆಗಳು ನಡೆದಿವೆ..ಇದು ಬಿಜೆಪಿ‌ ವರಿಷ್ಠರ ಆತಂಕಕ್ಕೆ ಕಾರಣವಾಗಿದೆ..ಇದ್ರ ಜೊತೆಗೆ ಕಾಂಗ್ರೆಸ್,ಎಎಪಿ,ಟಿಎಂಸಿ,ಜೆಡಿಯು ಸೇರಿ ಅನೇಕ ಪಕ್ಷಗಳು ಘಟಬಂದನ ರಚನೆಗೆ ಹೊರಟಿವೆ..ಜೂನ್ ೨೩ ರಂದು ಪಾಟ್ನಾದಲ್ಲಿ ಸಭೆ ನಡೆಸಿದ್ದು ಪ್ರತಿಪಕ್ಷಗಳು ಇದೀಗ ಜುಲೈ ೧೮ ರಂದು ಬೆಂಗಳೂರಿನಲ್ಲಿ ಸಭೆ ಕರೆದಿವೆ.. ಇದೆಲ್ಲವೂ ಬಿಜೆಪಿ ನಾಯಕರಿಗೆ ಆತಂಕ ಶುರುವಾಗಿದೆ.. ಹಾಗಾಗಿಯೇ ಎನ್ ಡಿಎ ಮೈತ್ರಿ ಕೂಡ ಬಲವರ್ಧನೆಗೆ ಕೈಹಾಕಿದ್ದಾರೆ.. ಜುಲೈ ೧೮ ರಂದೇ ದೆಹಲಿಯಲ್ಲಿ ಸಭೆ…

Read More

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮೀ ಯೋಜನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ನ ಹೈಕಮಾಂಡ್ ನಾಯಕರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ‌. ಆ್ಯಪ್ ಮೂಲಕ ನೋಂದಣಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು 1 ಕೋಟಿ 20 ಲಕ್ಷ ಕುಟುಂಬಗಳಿಗೆ ಇದರ ಲಾಭ ಸಿಗಲಿದೆ. ಯೋಜನೆಯ ಅನುಷ್ಠಾನ , ರಿಜಿಸ್ಟ್ರೇಶನ್, ಸರ್ಕಾರ ಕೈಗೊಂಡಿರುವ ಕ್ರಮಗಳ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ….. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.‌ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ  ಸಚಿವೆ ಲಕ್ಷ್ಮೀ‌ ಹೆಬ್ಬಾಳ್ಕರ್ ಯೋಜನೆ ಅನುಷ್ಠಾನದ ಮಾಹಿತಿ ನೀಡಿದ್ರು. ನಮ್ಮ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಕಡೆಯಿಂದ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ಮಾಡಿಸಲು ನಿರ್ಧರಿಸಿದ್ದೊ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನ ಅರ್ಪೋಚ್ ಮಾಡಿದ್ದೊ ಆದ್ರೆ ಅವರು ಸಮಯದ ಕೊರತೆಯಿಂದ ಬರ್ತಿಲ್ಲ. ಆದ್ರಿಂದ ಸಿಎಂ ಸಿದ್ದರಾಮಯ್ಯ ಜುಲೈ 19 ರಂದು ಸಂಜೆ 5…

Read More