Author: Prajatv Kannada

ಬೆಂಗಳೂರು: ರಾಜ್ಯದಲ್ಲಿ 754 ವಿದೇಶಿಗರು ವೀಸಾ ಮುಗಿದರೂ ಅಕ್ರಮವಾಗಿ ವಾಸವಾಗಿದ್ದಾರೆ. ವೀಸಾ ಅವಧಿ ಮುಗಿದವರನ್ನು ಶೀಘ್ರವಾಗಿ ವಾಪಸ್ ಕಳುಹಿಸುವ ಕೆಲಸ ಮಾಡುತ್ತೇವೆ ಹಾಗೆ ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳಿಗೆ ಸ್ಥಳಾವಕಾಶದ ಕೊರತೆ ಇದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದ (Session) ವೇಳೆ ಬಿಜೆಪಿಯ (BJP) ಪ್ರತಾಪ್ ಸಿಂಹ ನಾಯಕ್ ಕಾರಾಗೃಹಗಳ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಸಚಿವರು ಕಾರಾಗೃಹಗಳಲ್ಲಿ ಸ್ಥಳಾವಕಾಶಕ್ಕಿಂತ ಹೆಚ್ಚು ಕೈದಿಗಳಿದ್ದಾರೆ. ರಾಜ್ಯದಲ್ಲಿ 54 ವಿವಿಧ ಮಾದರಿಯ ಕಾರಾಗೃಹಗಳಿವೆ. ಇದರಲ್ಲಿ 28 ಕಾರಾಗೃಹಗಳಲ್ಲಿ ಸ್ಥಳಾವಕಾಶಕ್ಕಿಂತ ಹೆಚ್ಚು ಕೈದಿಗಳನ್ನು ಇರಿಸಲಾಗಿದೆ ಎಂದಿದ್ದಾರೆ ವಿದೇಶಿ ಪ್ರಜೆಗಳು ವಿದ್ಯಾಭ್ಯಾಸ, ಪ್ರವಾಸಕ್ಕೆ ಸೇರಿ ಹಲವು ವಿಚಾರಕ್ಕೆ ರಾಜ್ಯಕ್ಕೆ ಬರುತ್ತಾರೆ. ರಾಜ್ಯದಲ್ಲಿ ಸುಮಾರು 4,890 ವಿದೇಶಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಲು ಬಂದಿದ್ದಾರೆ. ಇದಲ್ಲದೆ ಒಟ್ಟಾರೆ ಬೆಂಗಳೂರು (Bengaluru) ನಗರ ಮತ್ತು ಉಳಿದ ಜಿಲ್ಲೆಯಲ್ಲಿ ಒಟ್ಟು 8,862 ವಿದೇಶಿಯರು ವಿದೇಶಿ ವೀಸಾದ ಮೇಲೆ ನೆಲೆಸಿದ್ದಾರೆ. ಇದರಲ್ಲಿ 754 ವಿದೇಶಿಯರು ವೀಸಾ ಮುಕ್ತಾಯವಾದರೂ…

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದ ಬಳಿಕ ಲವ್ ಜಿಹಾದ್ ಪ್ರಕರಣಗಳು ಜಾಸ್ತಿಯಾಗಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದರು‌. ವಿಧಾನಸೌಧದಲ್ಲಿ ಮಾತನಾಡಿದ ಅವರು,‌ ಲವ್ ಜಿಹಾದ್ ಮತ್ತು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗುವವರ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆಲ್ಲ‌ ಇವರು ಅವಕಾಶ ಕೊಟ್ಟಿದ್ದಾರೆ ಎಂದು ಆರೋಪಿಸಿದರು. ನಮ್ಮ ಸರ್ಕಾರದ ಅವಧಿಯಲ್ಲಿ ನಿಷೇಧಕ್ಕೆ ಒಳಗಾದ ಪಿಎಫ್ಐ ಸಂಘಟನೆಯ ಚಟುವಟಿಕೆ ಜಾಸ್ತಿಯಾಗುತ್ತಿದೆ‌. ಇವರೆಲ್ಲ ಟಿಪ್ಪು ಸಿದ್ಧಾಂತ ಇಟ್ಕೊಂಡು ಬಂದಿರೋರು.ಈ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಎಂದು ಕಿಡಿಕಾರಿದರು ಜುಲೈ 18 ರಂದು ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದಾರೆ. ಅವರೆಲ್ಲ ಇಲ್ಲಿಗೆ ಆಗಮಿಸುತ್ತಿರುವುದು ಈ ಸರ್ಕಾರವನ್ನು ಎಟಿಎಂ ಮಾಡಿಕೊಳ್ಳಲು.‌ ವರ್ಗಾವಣೆ ದಂಧೆ ಮಾಡೋದಿಕ್ಕೂ‌ ಅವರು ಇಲ್ಲಿಗೆ ಬರುತ್ತಿದ್ದಾರೆ ಎಂದು ಆರೋಪಿಸಿದರು

Read More

ಬೆಂಗಳೂರು: ಭ್ರಷ್ಟಾಚಾರದ ವಿಷಯ ಬಂದಾಗ ಕೆಲವರಿಗೆ ಜಾತಿ ನೆನಪಾಗಿಬಿಡುತ್ತದೆ. ಅಂತಹ ಸಂದರ್ಭದಲ್ಲಿ ಕೆಲವರು ಜಾತಿಯನ್ನೇ ರಕ್ಷಾ ಕವಚ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವರೊಬ್ಬರಿಗೆ ಕಟುವಾಗಿ ತಿರುಗೇಟು ನೀಡಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು; ಬುಧವಾರ ಸದನದಲ್ಲಿ ಒಂದು ನಿರ್ದಿಷ್ಟ ಇಲಾಖೆಯಲ್ಲಿ ವರ್ಗಾವರ್ಗಿಗಾಗಿ ಸಿದ್ಧಪಡಿಸಲಾಗುವ ರೇಟ್ ಕಾರ್ಡ್ ಬಗ್ಗೆ ಹೇಳಿದ್ದೆ. ಆ ಇಲಾಖೆಗೆ ಸಂಬಂಧಿಸಿದ ಸಚಿವರು ರೇಟ್ ಕಾರ್ಡ್ ಬಗ್ಗೆ ಉತ್ತರ ಕೊಡುವುದು ಬಿಟ್ಟು ತಮ್ಮ ಜಾತಿಯನ್ನು ಎಳೆದು ತಂದಿದ್ದಾರೆ. ಭ್ರಷ್ಟಾಚಾರಕ್ಕೆ ಜಾತಿ ವ್ಯವಸ್ಥೆ ಇದೆಯಾ? ಭ್ರಷ್ಟಾಚಾರದ ಬಗ್ಗೆ ಹೇಳಿದರೆ ಅದಕ್ಕೆ  ಜಾತಿ ಬಣ್ಣ ಕಟ್ಟುತ್ತಾರೆ ಎಂದು ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟರು. ನಾವು ನಿರಂತರವಾಗಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದೇವೆ. ಅಧಿಕಾರಿಗಳು ಪೋಸ್ಟಿಂಗ್ ಪಡೆಯಲು ಹಣ ಕೊಡ್ತಿದ್ದಾರೆ. ಅಂತಿಮವಾಗಿ ಅವರು ಜನರ ಜೇಬಿಗೆ ಕೈ ಹಾಕುತ್ತಿದ್ದಾರೆ. ನನಗೆ ಯಾರ ಮೇಲೂ ದ್ವೇಷ, ಅಸಮಾಧಾನ ಇಲ್ಲ. ಅವರು ನಮ್ಮನ್ನು ಬಿಟ್ಟು ಹೋದ…

Read More

ಬೆಂಗಳೂರು: ನನ್ನ ಕ್ಷೇತ್ರದಲ್ಲಿ ಅಧಿಕಾರಿಗಳು ನಾನು ಶಾಸಕಿ ಆಗಿದ್ದರೂ ಶಿಷ್ಟಾಚಾರಕ್ಕಾದರೂ ಗೌರವ ಕೊಡುತ್ತಿಲ್ಲ. ನನ್ನ ಮಾತನ್ನು ಕೇಳುತ್ತಿಲ್ಲ. ನನಗೆ ಜನ ಸೇವೆ ಮಾಡಲು ಅವಕಾಶ ಕೊಡಬೇಕು ಎಂದು ವಿಧಾನಸಭೆಯಲ್ಲಿ ದೇವದುರ್ಗದ ಜೆಡಿಎಸ್ ಶಾಸಕಿ ಕರೆಮ್ಮ ಜಿ. ನಾಯಕ್ ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. ದೇವದುರ್ಗದಲ್ಲಿ ಅಕ್ರಮ ಮರಳು ದಂಧೆ ಮಿತಿ ಮೀರಿದೆ. ಅದನ್ನು ಬಂದ್ ಮಾಡಿಸುವ ಪ್ರಯತ್ನ ಮಾಡಿದೆ. ಕೆಲವರು ನನ್ನ ಮೇಲೆ ಲಾರಿ ಹತ್ತಿಸ್ತೀನಿ ಅಂತ ಮಾತಾಡ್ತಾರೆ ಅಂತಾ ಗಂಭೀರವಾದ ವಿಷಯವನ್ನು ಪ್ರಸ್ತಾಪ ಮಾಡಿದ್ರು. ಮಾಜಿ ಶಾಸಕರ ಬೆಂಬಲಿಗರು ನಮ್ಮ ಮೇಲೆ ದಬ್ಬಾಳಿಕೆ ಮಾಡ್ತಿದ್ದಾರೆ. ಅಧಿಕಾರಿಗಳು ನಾನೊಬ್ಬ ಶಾಸಕಿ ಅನ್ನೋದನ್ನೇ ಪರಿಗಣಿಸದೇ ಪ್ರತಿಷ್ಠೆ ತೋರಿಸುತ್ತಿದ್ದಾರೆ. ಮಟ್ಕಾ ದಂಧೆ ಬಂದ್ ಮಾಡಿಸಿದರೂ ಪೊಲೀಸರು ಸಹಕಾರ ನೀಡ್ತಿಲ್ಲ. ಶಿಷ್ಟಾಚಾರಕ್ಕೂ ಪೊಲೀಸರು ಶಾಸಕಿ ಅಂತ ನನಗೆ ಗೌರವ ನೀಡ್ತಿಲ್ಲ ಅಂತಾ ಅಸಹಾಯಕತೆ ವ್ಯಕ್ತಪಡಿಸಿದ್ರು.

Read More

ಬೆಂಗಳೂರು: ಪೆನ್​ಡ್ರೈವ್ ಖಾಲಿ ಇಲ್ಲ, ಈ ಪೆನ್​ಡ್ರೈವ್ ಬೇರೆಯದ್ದು ಎಂದು ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ದಾಖಲೆ ಕೊಡಿ ಅಂದರೆ ದುಡ್ಡು ಕೊಡಲು ಸಾಧ್ಯವಾ? ಈ ಪೆನ್​ಡ್ರೈವ್​​​ ಆಪರೇಷನ್ ಮಾಡಿದ ಸಿಡಿ ರೀತಿ ಅಲ್ಲ. ಅದು ಸಾಮಾನ್ಯ ಪೆನ್‍ಡ್ರೈವ್ ಅಲ್ಲ. ಈ ಪೆನ್‍ಡ್ರೈವ್ ರಿಲೀಸ್‍ಗೆ ನನಗೆ ಆತುರ ಇಲ್ಲ. ಪೆನ್‍ಡ್ರೈವ್ ಬಿಡುಗಡೆಯನ್ನು ಕಾಂಗ್ರೆಸ್‌ನವರೇ ತಡೆಯುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಪೆನ್​ಡ್ರೈವ್​ ಬಿಡುಗಡೆಗೆ ಕಾಂಗ್ರೆಸ್​​ನವರಿಗೆ ಯಾಕೆ ಇಷ್ಟು ಆತುರ? ಇವರ ಸಮಸ್ಯೆ ಬಗ್ಗೆ ಎಲ್ಲವನ್ನೂ ಬಿಚ್ಚಿಟ್ಟಿದ್ದೇನೆ, ಸಲಹೆ ನೀಡಿದ್ದೇನೆ. ಸರಿಪಡಿಸಿಕೊಳ್ಳುವುದಾದರೆ ಸರಿಪಡಿಸಿಕೊಳ್ಳಲಿ ಎಂದರು. ಕಾಂಗ್ರೆಸ್ಸಿಗರು ಇನ್ನೂ ಕೆಲ ವಿಕೆಟ್ ಬೀಳಲಿ ಅಂತಾ ಹೇಳುತ್ತಿದ್ದಾರೆ. ನಾನು ಪ್ರಚೋದನೆಗೆ ಒಳಗಾಗಲ್ಲ ಎಂದರು. ವರ್ಗಾವಣೆ ದಂಧೆಗೆ ಅಡ್ಡಗಳನ್ನು ಮಾಡಿಕೊಂಡಿದ್ದಾರೆ. ಈ ದರಪಟ್ಟಿ (Transfer Rate Card) ಅವರೇ ಕೊಟ್ಟಿದ್ದ ಜಾಹೀರಾತಿನ ಮುಂದುವರೆದ ಭಾಗ ಇರಬಹುದು. ವಾಸ್ತವಾಂಶವನ್ನು ಸದನದ ಮುಂದೆ ಇಟ್ಟಿದ್ದೇನೆ. ಭ್ರಷ್ಟಾಚಾರ ನಿಲ್ಲಿಸುವ ಧೈರ್ಯವಿದ್ದರೆ ಕ್ರಮ ಕೈಗೊಳ್ಳಲಿ.…

Read More

ಬೆಂಗಳೂರು: ಕಾರು ಕಳ್ಳತನ ಮಾಡೋದು ಮೊಬೈಲ್ ಕದಿಯೋದನ್ನು  ನೋಡಿಯೇ ಇರ್ತಿರಾ,  ಆದ್ರೆ ಇಲ್ಲೋಬ್ಬ ಆಸಾಮಿ ನಿಂತಿದ್ದ‌ ಲಾರಿಗಳನ್ನೆ ಕದ್ದು ಕ್ಷಣಾರ್ಧದಲ್ಲಿ ಎಸ್ಕೇಪ್ ಆಗ್ತಾಯಿದ ರಾಜ್ಯದಿಂದ‌ ರಾಜ್ಯಕ್ಕೆ ಹೋಗಿ ಕದ್ದ‌ ಲಾರಿಗಳನ್ನು ಮಾರಾಟ ಮಾಡ್ತಾಯಿದ್ದವನಿಗೆ ಬೆಂಗಳೂರು ವಿ ವಿ ಪುರ ಪೊಲೀಸರ ಜೈಲಿನ ದಾರಿ ತೋರಿಸಿದ್ದಾರೆ.. ಒಂದು ಲಾರಿ ಖರೀದಿ ಮಾಡಬೇಕು ಅಂದ್ರೆ ಅದು ಸುಮ್ಮನೆ ಮಾತಲ್ಲ ಬಿಡಿ.. ಲೋನ್ ಮಾಡಬೇಕು, ಸಾಲ ಮಾಡಬೇಕು, ಅದಾದ ನಂತರ ಅದನ್ನು ಮೇಂಟೇನ್ ಮಾಡಬೇಕು ಹೀಗೆ ಸಾಕಷ್ಟು ಶ್ರಮ ಇರತ್ತೆ.. ಆದ್ರೆ ಅದೇ ಲಾರಿಯನ್ನು  ಖದಿಯೋದಕ್ಕೆ ಮಾತ್ರ ಯಾವ ಶ್ರಮವು ಬೇಡ..‌ಹೌದು.. ಈ ಫೋಟೋದಲ್ಲಿರುವ ಆಸಾಮಿಯ ಹೆಸರು ಮುತ್ತು.. ಮೂಲತಃ ತಮಿಳುನಾಡಿನವನು.. ವೃತ್ತಿಯಲ್ಲಿ ಲಾರಿ ಡ್ರೈವರ್ ಆಗಿದ್ದ ಈತನಿಗೆ ಲಾರಿಗಳ ಬಗ್ಗೆ‌ ಸಾಕಷ್ಟು ವಿಚಾರಗಳು ಸಹ ತಿಳಿದಿದ್ದು, ಹೆಚ್ಚಿನ ತಿಳುವಳಿಕೆಯು ಸಹ‌ ಇತ್ತು.. ಆದನ್ನೆ ಅಡ್ವಾಂಟೇಜ್ ತಗೊಂಡ ಈತ ಡ್ರೈವಿಂಗ್ ಕೆಲಸ ಮಾಡುದ್ರೆ ಏನು ಲಾಭಾ ಇಲ್ಲಾ ಅಂತ ಲಾರಿಗಳನ್ನೆ ಹೈಜಾಕ್ ಮಾಡೋದಕ್ಕೆ ಶುರುಮಾಡಿದ್ದ.. ತನ್ನ ಕಣ್ಣಿಗೆ…

Read More

ಬೆಂಗಳೂರು :  ಸಿಲಿಕಾನ್ ಸಿಟಿಯನ್ನೇ ನಡುಗಿಸಿದ ಅಮೃತಹಳ್ಳಿ ಪಂಪಾನಗರದಲ್ಲಿ ನಡೆದಿದ್ದ ಡಬಲ್ ಮರ್ಡರ್  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪಾರಿ ಹಂತಕ ಜಿ-ನೆಟ್​​ ಕಂಪನಿ ಮಾಲೀಕ, ಎಎಪಿ ಮುಖಂಡ ಅರುಣ್ ಕುಮಾರ್ ನನ್ನ ಅಮೃತಹಳ್ಳಿ ಪೊಲೀಸರು ಜು.12ರ ರಾತ್ರಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಅರುಣ್ ಕುಮಾರ್, ಜಿ-ನೆಟ್ ಕಂಪನಿ ಮಾಲೀಕನಾಗಿದ್ದ. ಅಷ್ಟೆ ಅಲ್ಲದೆ ಎಎಪಿ ಪಕ್ಷದ ಮುಖಂಡನೂ ಆಗಿದ್ದ. ಅದೇ ಕಂಪನಿಯಲ್ಲಿ ಹೆಚ್ ಆರ್ ಆಗಿ ಫಣೀಂದ್ರ ಕೆಲಸ ಮಾಡುತ್ತಿದ್ದ. ಜಿ-ನೆಟ್ ನಲ್ಲಿ ಸಿಇಓ‌ ಆಗಿ ವಿನು ಕುಮಾರ್ ಕೆಲಸ ಮಾಡುತ್ತಿದ್ದ. ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಕೊಲೆ ಮಾಡಿ ಯಾವ ರೀತಿ ಎಸ್ಕೇಪ್ ಆಗ ಬೇಕು ಎಂಬ ಬಗ್ಗೆಯೂ ಹಂತಕರು ಪ್ಲಾನ್ ಮಾಡಿಕೊಂಡಿದ್ದರು. ಬೈಕ್ ನಲ್ಲಿ ಬಂದಿದ್ದ ಹಂತಕರು ಎಸ್ಕೇಪ್ ಆಗಿದ್ದು ಬರಿಗಾಲಲ್ಲಿ. ಕೊಲೆ ನಂತರ ಎಸ್ಕೇಪ್ ಆಗೋದು ಹೇಗೆ ಅನ್ನೊದನ್ನ ಫಿಲೆಕ್ಸ್ ಮೊದಲೆ ಪ್ಲಾನ್ ಮಾಡಿದ್ದ. ಒಂದು ತಿಂಗಳ ಹಿಂದೆಯೇ ಸ್ಥಳಕ್ಕೆ ಬಂದಿದ್ದ ಫಿಲೆಕ್ಸ್, ಎಸ್ಕೇಪ್ ಆಗೋ ರೂಟ್ ಗಳನ್ನ…

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಧಿಕಾರಿಗಳ ವರ್ಗಾವಣೆ ಬಗ್ಗೆ ಆರೋಪ ಮಾಡುತ್ತಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೃಷಿ ಇಲಾಖೆ ಅಧಿಕಾರಿಗಳ ವರ್ಗಾವಣೆ ಮತ್ತು ವಿವಿಧ ಯೋಜನೆಗಳಿಗೆ ನಿಗದಿ  ಪಡಿಸಲಾಗಿದ್ದ ಕಮಿಷನ್ ದರಪಟ್ಟಿಯನ್ನು ವಿಧಾನಸಭೆಗೆ ಸಲ್ಲಿಸಿದ್ದಾರೆ. ರಾಜ್ಯದ ಜನ ಇಷ್ಟು ದಿನ ಟೊಮ್ಯಾಟೋ, ತರಕಾರಿ,ಆಹಾರ ಧಾನ್ಯ, ಗ್ಯಾಸ್ ಇತ್ಯಾದಿಗಳ ಬೆಲೆ ಏರಿಕೆಯಿಂದ ಚಕಿತರಾಗಿ ಬಸವಳಿದು ಹೋಗಿದ್ದಾರೆ.ಈಗ ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ.ಇದು ಕಾಂಗ್ರೆಸ್ ಸರಕಾರದ 6ನೇ ಗ್ಯಾರಂಟಿ. ಒಂದು ಕಡೆ ಉಚಿತ ಕೊಡುಗೆಯಾದ್ರೆ ಇನ್ನೊಂದು ಕಡೆ ಖಚಿತ ಸುಲಿಗೆ ಎಂದು ಟ್ವೀಟ್ ಮೂಲಕ ವ್ಯಂಗ್ಯ ಮಾಡಿದ್ದಾರೆ. ಭಾಗ್ಯಗಳ ಮೇಲೆ ಭಾಗ್ಯಗಳನ್ನು ಕೊಟ್ಟ ಕಾಂಗ್ರೆಸ್ ಸರಕಾರ ಕೊಡುತ್ತಿರುವ ವರ್ಗಾವಣೆ ‘ ಸಂಕಷ್ಟಭಾಗ್ಯ ‘ಎಂದು ಟೀಕೆ ಮಾಡಿದೆ. ಕೊಡುಗೆ ಮತ್ತು ಸುಲಿಗೆ ಒಟ್ಟೊಟ್ಟಿಗೆ ಕೊಂಡೊಯ್ಯುವುದೇ ಅಭಿವೃದ್ದಿಯ ಹೊಸ ಭರವಸೆ, ಹೊಸ ಕನಸು ಎಂಬುದು ನನಗೆ ಈಗಷ್ಟೇ ಅರ್ಥವಾಗಿದೆ. ಕರ್ನಾಟಕ ಮಾದರಿ ಅಭಿವೃದ್ಧಿ ಎಂದರೆ ಇದೇನಾ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್…

Read More

ಬೆಂಗಳೂರು: ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿ ಅಕ್ಕಿ ಕೊಡುವುದರಲ್ಲೂ ನೀವು ರಾಜಕಾರಣ ಮಾಡುತ್ತಿದ್ದೀರಲ್ಲಾ? ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸ್ತಾರೆ ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ K.M.ಶಿವಲಿಂಗೇಗೌಡ ವಾಗ್ದಾಳಿ ನಡೆಸಿದರು. ಕೇಜ್ರಿವಾಲ್ ಏನು ಪ್ರಧಾನಿ ಕೇಳಿ ಉಚಿತ ಘೋಷಣೆ ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಎಂದಿದ್ದರು ಕೊಟ್ರಾ? ರಾಜ್ಯ ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ನೆರವಿಗೆ ಬರಬೇಕು. ಕಳೆದ ಬಾರಿ ಕೇಂದ್ರದಿಂದ ನೆರೆ ಹಣ ಬಂತಾ? ಎಂದು ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಶಿವಲಿಂಗೇಗೌಡ ಮಾತಿಗೆ ಶಾಸಕ R.ಅಶೋಕ್ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸದನದಲ್ಲಿ ಆಡಳಿತ, ವಿಪಕ್ಷ ಸದಸ್ಯರ ನಡುವೆ ಗದ್ದಲ ಶುರುವಾಯಿತು.

Read More

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿಂದು ಹಲವು ವಿಷಯಗಳ ಬಗ್ಗೆ ಗಂಭೀರ ಚರ್ಚೆಗಳು ನಡೆದ್ವು..ಕುಮಾರಸ್ವಾಮಿ ಭಾಷಣದ ವೇಳೆ ಕಲಾಪ ಸದ್ದುಗದ್ದಲಕ್ಕೂ ಕಾರಣವಾಯ್ತು. ವರ್ಗಾವಣೆ ದಂಧೆಯ ಆರೋಪ ಸದನದಲ್ಲಿ ವಾಕ್ಸಮರಕ್ಕೆ ಕಾರಣವಾಯ್ತು..ಇನ್ನು ಜೈನಮುನಿ ಹಾಗೂ ವೇಣುಗೋಪಾಲ್ ಹತ್ಯೆ ಪ್ರಕರಣ ಸಂಬಂಧಪಟ್ಟಂತೆ ಬಿಜೆಪಿಯವರು ರಾಜ್ಯಪಾಲರು ಮೊರೆ ಹೋಗಿದ್ರು. ಸರ್ಕಾರದ ಗ್ಯಾರೆಂಟಿಗಳ ಚರ್ಚೆ ವೇಳೆ ಅಶ್ವಥ್ ನಾರಾಯಣ್ ಹಾಗೂ ಪ್ರಿಯಾಂಕ್ ಖರ್ಗೆ ನಡುವೆ ವಾಕ್ಸಮರೇ ನಡೆದುಹೋಯ್ತು..ಮಾಜಿ ಸಿಎಂ ಕುಮಾರಸ್ವಾಮಿ ಗ್ಯಾರೆಂಟಿಗಳ ಬಗ್ಗೆ ಮಾತನಾಡ್ತಿದ್ರು..ಹಿಂದಿನ ಬಿಜೆಪಿ‌ ಸರ್ಕಾರ ಭ್ರಷ್ಟಾಚಾರದ ಸರ್ಕಾರ ಅಂತ ಕಾಂಗ್ರೆಸ್ ನವರು ಮಾತನಾಡ್ತಿದ್ರು..ಇಂತದ್ದಕ್ಕೆ ಇಷ್ಟು ರೇಟು ಅಂತ ಪೇಪರ್ ಗಳಲ್ಲಿ ಆ್ಯಡ್ ಕೊಟ್ಟಿದ್ರು..ಈಗ ನೋಡಿದ್ರೆ ಇವರ ಸರ್ಕಾರದಲ್ಲೇ ದಂಧೆ ಶುರುವಾಗಿದೆ ಅಂತ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ರು..ಈ ವೇಳೆ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಕೂಡ ಧ್ವನಿಗೂಡಿಸಿದ್ರು..ಇದಕ್ಕೆ ಪ್ರತಿಯಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗಿಬಿದ್ರು..ರೇಟನ್ನ ನಾವು ಹೇಳಿದ್ದಲ್ಲ,ನಿಮ್ಮ ಪಕ್ಕದಲ್ಲಿರುವ ಶಾಸಕರು ಅಂತ ಯತ್ನಾಳ್ ಕಡೆ ಕೈತೋರಿಸಿದ್ರು..ಈ ವೇಳೆ ಇಬ್ಬರ ನಡುವೆ ಜೋರು ಧ್ವನಿಯಲ್ಲಿ ಟಾಕ್ ವಾರ್ ಶುರುವಾಯ್ತು. ಇನ್ನು…

Read More