Author: Prajatv Kannada

ಬೆಂಗಳೂರು : ಇತ್ತಿಚೆಗೆ ಬೆಂಗಳೂರಿನ ಶಿವಾಜಿನಗರ ಮಸೀದಿಯಲ್ಲಿ(Shivajinagar Masjid) ಬಾಂಬ್‌ ಇಟ್ಟು ಸ್ಫೋಟಿಸುವ ಸಂಚಿನ ಬೆದರಿಕೆ ಕರೆ ಮಾಡಿ ಆತಂಕ ಸೃಷ್ಟಿಸಿದ್ದ ಸೈಯದ್‌ ಖಾಜಿ ಮಹಮದ್‌ ಅನ್ವರ್‌ ಉಲ್ಲಾ(37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಉಸ್ಮಾನಾಬಾದ್‌(Osmanabad, Maharashtra) ನಿವಾಸಿಯಾದ ಸೈಯದ್‌ ಖಾಜಿ ಅವಿವಾಹಿತನಾಗಿದ್ದು, ದೇಶದ ಹಲವು ನಗರಗಳಲ್ಲಿ ಸುತ್ತಾಟ ನಡೆಸಿ ಭಿಕ್ಷಾಟನೆ ಮಾಡುತ್ತಿದ್ದ. ಮಸೀದಿಗಳ ಬಳಿ ಆಶ್ರಯ ಪಡೆದು ಅಲ್ಲಿಯೇ ಮಲಗುತ್ತಿದ್ದ. ಜು.4ರಂದು ನಗರಕ್ಕೆ ಆಗಮಿಸಿ ಶಿವಾಜಿನಗರ ಮಸೀದಿ ಬಳಿ ತೆರಳಿದ್ದ. ರಾತ್ರಿ ವೇಳೆ ಅಲ್ಲಿಯೇ ಉಳಿದುಕೊಳ್ಳಲು ಕೇಳಿದ್ದ. ಮಸೀದಿಯಲ್ಲಿ ರಾತ್ರಿ ವೇಳೆ ಭದ್ರತಾ ಸಿಬ್ಬಂದಿ ಹೊರತುಪಡಿಸಿ, ಇತರರಿಗೆ ಅವಕಾಶವಿಲ್ಲ ಎಂದು ಹೇಳಿ ಆತನನ್ನು ಅಲ್ಲಿಂದ ಕಳುಹಿಸಲಾಗಿತ್ತು. ಮಸೀದಿ ಶೋಧನೆ ಬಳಿಕ ಹುಸಿ ಬಾಂಬ್‌ ಬೆದರಿಕೆ ಕರೆ ಎಂಬುದು ಖಚಿತಪಟ್ಟಿತ್ತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕರೆ ಬಂದಿದ್ದ ಮೊಬೈಲ್‌ನ ನಂಬರ್‌ ಜಾಡು ಹಿಡಿದು ತನಿಖೆ ಚುರುಕುಗೊಳಿಸಿದರು. ಆಗ ವ್ಯಕ್ತಿಯೊಬ್ಬ ಮಸೀದಿ ಬಳಿ ಬಂದಿದ್ದ ಮಾಹಿತಿ ಸಿಕ್ಕಿತ್ತು. ಮೊಬೈಲ್‌ ಸಂಖ್ಯೆಯ ಜಾಡು…

Read More

ಆಹಾರ ಹರಿಸಿ‌ ಕಾಡಿನಿಂದ ನಾಡಿಗೆ ಬಂದ ಚಿರತೆ ಗ್ರಾಮದ ಸ್ವಲ್ಪ ದೂರದಲ್ಲಿ ಶ್ವಾನವನ್ನು ಭೇಟಿಯಾಡಿದ ಚಿರತೆ ಕಳೆದ ರಾತ್ರಿ ನಡೆದಿರುವ ಘಟನೆ ತಾಲ್ಲೂಕಿನ ಆಲೂರ ಕೆ ಹೊನ್ನಲಗೆರೆ ರಸ್ತೆಯಲ್ಲಿ ನಡೆದಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ಹೊನ್ನಲಗೆರೆ ರಸ್ತೆ ಚಿರತೆ ಭೇಟಿಯಾಡುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

Read More

ಮಂಡ್ಯ:  ಕಾವೇರಿ ಜಲಾನಯನ ಪ್ರದೇಶದಲ್ಲಿ (Mungaru Rain) ಉತ್ತಮ ಮಳೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೆಆರ್‌ಎಸ್‌ (KRS) ಜಲಾಶಯದಲ್ಲಿ 2.50 ಅಡಿ ನೀರು ಭರ್ತಿಯಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಡ್ಯಾಂಗೆ ಎರಡು ದಿನಗಳ ಅವಧಿಯಲ್ಲಿ 3 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಆರ್‌ಎಸ್‌ ಜಲಾಶಯಕ್ಕೆ (KRS Dam) ಒಳ ಹರಿವಿನ ಪ್ರಮಾಣವೂ ಹೆಚ್ಚಾಗಿದೆ. ಇದರಿಂದ 24 ಗಂಟೆಯಲ್ಲಿ 2.50 ಅಡಿ ನೀರು ಭರ್ತಿಯಾಗಿದೆ. ಶನಿವಾರ ಬೆಳಗ್ಗೆ 82 ಅಡಿಯಷ್ಟಿದ್ದ ಜಲಾಶಯದ ನೀರಿನ ಮಟ್ಟ ಭಾನುವಾರ (ಜು.9) 84.50 ಅಡಿಗಳಿಗೆ ತಲುಪಿದೆ. ಕೆಆರ್‌ಎಸ್‌ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಹೊಂದಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಸದ್ಯ 12.915 ಟಿಎಂಸಿ ನೀರು ಶೇಖರಣೆಯಾಗಿದೆ. ಡ್ಯಾಂನ ಒಳಹರಿವು 14,556 ಕ್ಯೂಸೆಕ್ ಇದ್ದು, 367 ಕ್ಯೂಸೆಕ್ ಹೊರಹರಿವು ಇದೆ. ಕೆಆರ್‌ಎಸ್ ಇಂದಿನ ನೀರಿನ ಮಟ್ಟ ಗರಿಷ್ಠ ಮಟ್ಟ – 124.80 ಅಡಿಗಳು ಇಂದಿನ ಮಟ್ಟ – 84.50 ಅಡಿಗಳು ಗರಿಷ್ಠ…

Read More

ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋಧಿ (Prime Minister Modi) ಅವರ ನೇತೃತ್ವದ ಕೇಂದ್ರ ಸರ್ಕಾರದ 9 ವರ್ಷದ ಜನಪರ ಆಡಳಿತ ಹಾಗೂ ಸಾಧನೆ ಕುರಿತು,  ಬಿಜೆಪಿ ವತಿಯಿಂದ ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಪ್ರಬದ್ಧರ ಬೃಹತ್ ಸಭೆಯನ್ನು ಮಾಡಿದರು. ಈ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, (Union Minister Prahlada Joshi)ಆರ್ಥಿಕ ತಜ್ಞರಾದ ವಿಶ್ವನಾಥ್ ಭಟ್, ಶಾಸಕ ಮಹೇಶ್ ಟೆಂಗಿನಕಾಯಿ, ಶಾಸಕ ಎಂ.ಆರ್ ಪಾಟೀಲ್, ಮೇಯರ್ ವೀಣಾ ಭಾರದ್ವಾಡ್, ಬಿಜೆಪಿ ಗ್ರಾಮೀಣ ಅಧ್ಯಕ್ಷ ಬಸವರಾಜ ಕುಂದಗೋಳಮಠ, ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಭಾಗವಹಿಸಿದ್ದರು. ಈ ಸಭೆಯಲ್ಲಿ ಸಾವಿರಾರು ಜನರು ಕೂಡ ಭಾಗವಹಿಸಿದ್ದು, ಆರ್ಥಿಕ ತಜ್ಞ ವಿಶ್ವನಾಥ ಭಟ್ ಅವರು ವಿಶೇಷ ಉಪನ್ಯಾಸ ಮಾಡಿದರು.

Read More

ಬೆಳಗಾವಿ: ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ (Jain Muni’s murder)ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜೈನ ಸಮುದಾಯದ ಮುಖಂಡರು, ಜೈನ ಮುನಿಗಳು ಸೇರಿ ಸುವರ್ಣ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಸುವರ್ಣ ವಿಧಾನಸೌಧದ ಮುಂದೆ ಪ್ರತಿಭಟನೆಗೆ ಪ್ಲ್ಯಾನ್‌ ಮಾಡಿದ್ದು, ಹಲಗಾ ಗ್ರಾಮದ 108ನೇ ಸಿದ್ದಸೇನ ಮಹಾರಾಜ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ವೇಳೆ ಶ್ರಾವಕ್, ಶ್ರಾವಿಕೆಯರು ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆಯಿದೆ.

Read More

ಹಾಸನ: ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಒಂದು ವಾರ ಅಲ್ಲ, ಹತ್ತು ದಿನ ತಡೆಯಿರಿ. ಅದಕ್ಕೆ ಎಲ್ಲದಕ್ಕೂ ಅಸೆಂಬ್ಲಿಯೊಳಗೇ ಉತ್ತರ ಕೊಡುತ್ತೇವೆ. ಹೌಸ್​ನಲ್ಲಿ ಆಫೀಸರ್ ನೇಮಕ ಆಗಿದೆ ತನಿಖೆ ಮಾಡೋದಕ್ಕೆ. ಎಲ್ಲರಿಗೂ ಅಸೆಂಬ್ಲಿಯೊಳಗೆ ತೃಪ್ತಿದಾಯಕ ಉತ್ತರ ಕೊಟ್ಟಿದ್ದೇವೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ(Chaluvarayaswamy) ಹೇಳಿದರು.

Read More

ಮೈಸೂರು: ವಿಧವೆಯರು, ಅವಿವಾಹಿತರಿಗೆ ಆನ್‌ಲೈನ್‌ನಲ್ಲಿ (Online Matrimony) ಗಾಳ ಹಾಕಿ ಒಂದಲ್ಲ, ಎರಡಲ್ಲ ಬರೋಬ್ಬರಿ 15 ಮಹಿಳೆಯರ ಜೊತೆ ಮದುವೆಯಾಗಿ, ಹಣ ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ಖತರ್ನಾಕ್ ಕಿಲಾಡಿಯನ್ನ ಮೈಸೂರಿನ ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿ ಬಡಾವಣೆ ನಿವಾಸಿ ಮಹೇಶ್ (35) ಬಂಧಿತ ಆರೋಪಿ. ಬಂಧಿತನಿಂದ 2 ಲಕ್ಷ ನಗದು, 2 ಕಾರ್, ಒಂದು ಬ್ರೇಸ್‌ಲೈಟ್‌, ಒಂದು ಉಂಗುರ, 2 ಚಿನ್ನದ ಬಳೆ, ಒಂದು ನೆಕ್ಲೆಸ್ ಹಾಗೂ 7 ಮೊಬೈಲ್‌ಗಳನ್ನ ವಶ ಪಡಿಸಿಕೊಳ್ಳಲಾಗಿದೆ. ಮಹೇಶ್‌ ಸಿಕ್ಕಿಬಿದ್ದದ್ದು ಹೇಗೆ? ಆರೋಪಿ ಮಹೇಶ್‌ ಮೈಸೂರಿನ ನಿವಾಸಿ ಹೇಮಲತಾ ಎಂಬವರಿಗೆ ತಾನು ಡಾಕ್ಟರ್ ಎಂದು ಹೇಳಿಕೊಂಡು ಮೋಸ ಮಾಡಿದ್ದ. ಆನ್‌ಲೈನ್‌ ಮ್ಯಾಟ್ರೋಮೊನಿ ವೇದಿಕೆಯಲ್ಲಿ ಪರಿಚಯಿಸಿಕೊಂಡು ನಂಬಿಸಿ ವಿಶಾಖಪಟ್ಟಣದಲ್ಲಿ ಮದುವೆ ಮಾಡಿಕೊಂಡಿದ್ದ. ಕ್ಲಿನಿಕ್ ತೆರೆಯಬೇಕೆಂದು 70 ಲಕ್ಷ ಸಾಲ ಕೊಡಿಸುವಂತೆ ಮಹೇಶ್ ಹೇಮಲತಗೆ ಒತ್ತಾಯ ಹೇರಿದ್ದ, ಸಾಲ ಕೊಡಿಸಲು ಹೇಮಲತಾ ಹಿಂದೇಟು ಹಾಕಿದ್ದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ 15 ಲಕ್ಷ ಹಣ ಹಾಗೂ ಚಿನ್ನಾಭರಣ ಕದ್ದು ಪರಾರಿಯಾಗಿದ್ದ.…

Read More

ಬೆಂಗಳೂರು ;– ಪವಿತ್ರ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರು ಭಾರೀ ಮಳೆಯ ಕಾರಣ ಸಿಲುಕಿಕೊಂಡಿದ್ದಾರೆ. ಇವರಲ್ಲಿ 20ಕ್ಕೂ ಹೆಚ್ಚು ಕನ್ನಡಿಗರು ಸೇರಿದ್ದಾರೆ. ಸರ್ಕಾರ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಐಎಎಸ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿಗಳು ಟ್ವೀಟ್‌ನಲ್ಲಿ, “ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಾಗಿದೆ” ಎಂದು ಹೇಳಿದ್ದಾರೆ. ಗದಗದಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 ಕಿ. ಮೀ. ದೂರದಲ್ಲಿರುವ ಪಂಚತಾರ್ನಿ ಟೆಂಟ್‌ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಜಾಲಿ ರೈಡ್ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಇಲ್ಲೊಬ್ಬ ತಡರಾತ್ರಿ ಜಾಲಿ ರೈಡ್ ಮಾಡಲು ಹೋಗಿ ಏನಾದ ಅನ್ನೋದನ್ನ ಹೇಳ್ತೀವಿ ಕೇಳಿ.. ಶನಿವಾರ ತಡರಾತ್ರಿ ಜಾಲಿ ರೈಡ್ ಹೊರಟಿದ್ದ ಬೈಕ್ ಸವಾರರು ಫ್ಲೈಓವರ್ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು ಈ ಘಟನೆ ನಡೆದಿದ್ದು ಬೆಂಗಳೂರಿನ ಪದ್ಮನಾಭನಗರದ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಜರುಗಿದ್ದು. ತಡರಾತ್ರಿ ಸ್ನೇಹಿತರ ಜೊತೆಗೆ ತಡರಾತ್ರಿ 2 ಗಂಟೆ ಸುಮಾರಿಗೆ ಜಾಲಿ ರೈಡ್ ಹೊರಟಿದ್ದ ಯಶವಂತ ಹಾಗೂ ಟೆಕ್ಕಿ ರಾಮಕುಮಾರ್ ಫ್ಲೈಓವರ್ ಗೆ ಡಿಕ್ಕಿ ಹೊಡೆದ ಪರಿಣಾಮ ಫ್ಲೈಓವರ್ ಮೇಲಿಂದ ಬಿದ್ದು ರಾಮಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯಶವಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ.ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಹಿರೇಕೋಡಿಯ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. DK Visit: ಇಂದಿರಾ ಕ್ಯಾಂಟೀನ್​ಗೆ ಸರ್ಪ್ರೈಸ್ ವಿಸಿಟ್ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. HDK Pendrive Bomb: ಹೆಚ್‌ಡಿಕೆ ಪೆನ್‌ಡ್ರೈವ್‌ ಬ್ರಹ್ಮಾಸ್ತ್ರ: ಸೋಮವಾರ ವಿಧಾನಸಭೆಯಲ್ಲಿ ಸ್ಫೋಟವಾಗಲಿದೆಯಾ? ಜುಲೈ 6ರಿಂದ ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದರು. ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.…

Read More