Author: Prajatv Kannada

ಚೆನ್ನೈ: ಕೊಯಮತ್ತೂರು ಪೊಲೀಸ್ ಉಪ ಮಹಾನಿರೀಕ್ಷಕ (Coimbatore DIG) ವಿಜಯಕುಮಾರ್ (IPS) ತಮ್ಮ ಅಧಿಕೃತ ನಿವಾಸದಲ್ಲಿ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಸುಮಾರು 6:15ರ ವೇಳೆಗೆ ವಿಜಯಕುಮಾರ್ ರೇಸ್ ಕೋರ್ಸ್ ಬಳಿಯ ರೆಡ್ ಫೀಲ್ಡ್ಸ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಕರ್ತವ್ಯದಲ್ಲಿದ್ದ ಗನ್‌ಮ್ಯಾನ್‌ನಿಂದ ಪಿಸ್ತೂಲ್ ಅನ್ನು ಪಡೆದು ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಜಯಕುಮಾರ್ (Vijayakumar) ತೀವ್ರ ಖಿನ್ನತೆಗೆ ಒಳಗಾಗಿದ್ದರು ಹಾಗೂ ನಿದ್ರಾಹೀನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರಿಗೆ ಕೌನ್ಸೆಲಿಂಗ್ ಕೂಡಾ ನಡೆಯುತ್ತಿತ್ತು ಹಾಗೂ ಕೆಲ ದಿನಗಳ ಹಿಂದಷ್ಟೇ ಅವರ ಕುಟುಂಬವನ್ನು ಚೆನ್ನೈಯಿಂದ ಕೊಯಮತ್ತೂರಿಗೆ ಕರೆತರಲಾಗಿತ್ತು. 2009ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ವಿಜಯಕುಮಾರ್ ಅವರು ಈ ವರ್ಷದ ಜನವರಿಯಲ್ಲಿ ಕೊಯಮತ್ತೂರು ವ್ಯಾಪ್ತಿಯ ಡಿಐಜಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದಕ್ಕೂ ಮೊದಲು ಅವರು ಕಾಂಚೀಪುರಂ, ಕಡಲೂರು, ನಾಗಪಟ್ಟಿಣಂ ಮತ್ತು ತಿರುವರೂರಿನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಗೂ ಅಣ್ಣಾನಗರದ ಉಪ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

Read More

ಧಾರವಾಡ ;– ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯ ಸಾಲದ ಕೂಪಕ್ಕೆ ಹೋಗುವ ಲಕ್ಷಣಗಳು ಎದ್ದು ಕಾಣಸ್ತಿವೆ ಎಂದಿದ್ದಾರೆ. ಬಜೆಟ್ ನಿಂದ ರಾಜ್ಯ ಸಾಲದ ಕೂಪಕ್ಕೆ ಹೋಗುವ ಲಕ್ಷಣಗಳು ಎದ್ದು ಕಾಣುತ್ತಿದೆ. ಪದೇ ಪದೆ ಭಾರತ ಸರ್ಕಾರದ ಮೇಲೆ ಮಂತ್ರಿಗಳು ಸಚಿವರು ಆರೋಪ ಮಾಡ್ತಿದ್ದಾರೆ. ಜುಲೈ 1ಕ್ಕೆ ನೀಡಿರುವ ಅಕ್ಕಿಯೂ ಕೇಂದ್ರ ಸರ್ಕಾರದ್ದು, ಕರ್ನಾಟಕ ಸೇರಿ 80 ಕೋಟಿ ಜನರಿಗೆ ಅಕ್ಕಿ ವಿತರಣೆ ಮಾಡಿದ್ದೇವೆ ಎಂದು ತಿಳಿಸಿದರು. ಈ ಅಕ್ಕಿಯನ್ನು ಕೇಂದ್ರ ಸರ್ಕಾರದಿಂದ ಕೊಟ್ಟಿದ್ದೇವೆ. ನೀವು ರಾಜ್ಯ ಸರ್ಕಾರ ಅಕ್ಕಿಯನ್ನು ಕೊಟ್ಟಿಲ್ಲ. ಅದನ್ನ ನೀವು ಒಪ್ಪಿ ಕೊಳ್ಳಲೇಬೇಕು. ಎಲ್ಲ ಯೋಜನೆ ಅನಗತ್ಯ ಷರತ್ತು ಹಾಕಲಾಗಿದೆ. ಗ್ಯಾರಂಟಿ ಯೋಜನೆ ಷರತ್ತು ವಿಧಿಸಲಾಗುತ್ತಿದ್ದು, ಆ ಮೂಲಕ ನೀವು ಜನರಿಗೆ ಮೋಸ ಮಾಡಿದ್ದೀರಿ. ಸಿಎಂ ಕಾರ್ಯಾವಧಿ ಶುರುವಾಗುತ್ತಿದ್ದಂತೆ ವರ್ಗಾವಣೆಯಲ್ಲಿ‌ ಅನೇಕ ಕಡೆ ಒಂದೊಂದು ಪೋಸ್ಟಿಗೆ ನಾಲ್ಕು ನಾಲ್ಕು ಪತ್ರ ಕೊಡುತ್ತಿದ್ದಾರೆ ಎಂದು ದೂರಿದರು. ವರ್ಗಾವಣೆ…

Read More

ಬೆಂಗಳೂರು ;– ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಾಂಗ್ರೆಸ್ ಸರ್ಕಾರದ 2023-24 ಸಾಲಿನ ನೂತನ ಬಜೆಟ್ ಮಂಡನೆ ಮಾಡಿದ್ದಾರೆ. • 4 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿ ಸೇರಿದಂತೆ ರಾಮನಗರ, ದಾವಣಗೆರೆ ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಯುವ ಜನರಿಗೆ ಕೌಶಲ್ಯ ತರಬೇತಿಯನ್ನು ಪ್ರಾರಂಭ. • ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾ ಸೌಲಭ್ಯಗಳನ್ನು ಹಾಗೂ ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜುಗಳ ಸ್ಥಾಪನೆ. • ಬೆಳಗಾವಿ ಸೇರಿದಂತೆ ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಕಾರ್ಯಾರಂಭಿಸಲು ಮತ್ತು ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ 155 ಕೋಟಿ ರೂ. ನೆರವು. • ಮಹದಾಯಿ ನ್ಯಾಯಾಧಿಕರಣದಿಂದ ಕಳಸಾ ಮತ್ತು ಬಂಡೂರಾ ನಾಲಾ ತಿರುವು ಕುಡಿಯುವ ನೀರಿನ ಯೋಜನೆಗೆ ಹಂಚಿಕೆಯಾದ…

Read More

ಬೆಂಗಳೂರು ; ರಾಜ್ಯದಲ್ಲಿ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಮಾಡಲು ಮುಂದಾಗಿದ್ದು, ರಾಜ್ಯ ಸರ್ಕಾರದಿಂದ 100 ಕೋಟಿ ರೂಪಾಯಿ ಷೇರು ಬಂಡವಾಳ ಹೂಡಲಿದೆ. ಆಕಸ್ಮಿಕ ಮರಣ ಹೊಂದುವ ಕುರಿ, ಮೇಕೆ ಸಾಕಾಣಿಕೆದಾರರು ವಲಸೆ ಕುರಿಗಾರರ ಕುಟುಂಬಕ್ಕೆ 5 ಲಕ್ಷ ರೂ. ವಿಮಾ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ. ʻಗೋವಿನಿಂದ ಗ್ರಾಹಕರವರೆಗೆ ಗುಣಮಟ್ಟದ ಶ್ರೇಷ್ಠತೆʼ ಎಂಬ ಧ್ಯೇಯವಾಕ್ಯ ಹೊಂದಿರುವ ʻನಂದಿನಿʼಯು ಕೋಟ್ಯಾಂತರ ಜನರ ಬದುಕಿಗೆ ಆಸರೆಯಾಗಿದೆ. ನಂದಿನಿ ಬ್ರಾಂಡ್‌ ಕನ್ನಡಿಗರೊಂದಿಗೆ ಭಾವನಾತ್ಮಕ ಬೆಸುಗೆಯನ್ನು ಹೊಂದಿದ್ದು, ಇದನ್ನು ಉಳಿಸಿ ಇನ್ನಷ್ಟು ಬೆಳೆಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಬಜೆಟ್ ಭಾಷಣದ ವೇಳೆ ತಿಳಿಸಿದರು. ಕಳೆದ ಬಾರಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುವ ಸಂಕಷ್ಟ ನಿವಾರಣೆಗೆ ʻಅನುಗ್ರಹʼ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಆದರೆ,…

Read More

ಬೆಂಗಳೂರು ;- ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ದೇಶದ್ರೋಹ ಅಲ್ಲ ಎಂದು ಕರ್ನಾಟಕ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ಕಲಬುರ್ಗಿ ವಿಭಾಗೀಯ ಪೀಠದ ಮುಖ್ಯ ನ್ಯಾಯಾಮೂರ್ತಿ ಹೇಮಂತ್​ ಚಂದನ್​ಗೌಡರ್​ ಅವರಿದ್ದ ಏಕಸದಸ್ಯ ಪೀಠವು ಬೀದರ್​ನ ಶಾಹೀನ್​ ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಅಲ್ಲಾವುದ್ದೀನ್, ಅನ್ದುಲ್​ ಕಲೇಕ್​, ಮೊಹಮ್ಮದ್​ ಬಿಲಾಲ್​ ಇನಾಮ್​ದಾರ್​, ಮೊಹಮ್ಮದ್​ ಮೆಹ್ತಾಬ್​ ವಿರುದ್ಧ ದಾಖಲಾಗಿದ್ದ FIRಅನ್ನು ರದ್ದು ಮಾಡಿದೆ. ವಾದ-ಪ್ರತಿವಾದವನ್ನು ಸುಧೀರ್ಘವಾಗಿ ಆಲಿಸಿದ ನ್ಯಾಯಾಧೀಶರು ಐಪಿಸಿ ಸೆಕ್ಷನ್​ 153(ಎ) ಅಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಯಾವುದೇ ಅಂಶಗಳು ಸಹ ಕಂಡು ಬಂದಿಲ್ಲ. ಪ್ರಧಾನಿ ಚಪ್ಪಳಿಯಲ್ಲಿ ಹೊಡೆಯಬೇಕು ಎಂದು ಹೇಳಿರುವುದು ಅವಹೇಳನಕಾರಿಯಲ್ಲ ಬೇಜವಾಬ್ದಾರಿತನದಿಂದ ಕೂಡಿರುವ ಹೇಳಿಕೆ. ಸರ್ಕಾರ ಹೊಸದಾಗಿ ನೀತಿ ಅಥವಾ ಕಾಯ್ದೆಗಳನ್ನು ಜಾರಿಗೆ ತಂದಾಗ ಟೀಕಿಸುವುದು ಸಹಜ. ಆದರೆ, ಮಕ್ಕಳ ನಾಟಕದ ಮೂಲಕ ಹಿಂಸಾಚಾರ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಕದಡುವ ಯಾವುದೇ ಆಂಶಗಳು ಕಂಡು ಬಂದಿಲ್ಲ. ಆರೋಪಿತರ ಪೈಕಿ ಒಬ್ಬರು ನಾಟಕದ ತುಣಕನ್ನು ಸಾಮಾಜಿಕ ಜಾಲತಾಣಗಳಲ್ಲಿ…

Read More

ಬೆಂಗಳೂರು ;– ಸಿಎಂ ಸಿದ್ದರಾಮಯ್ಯ ಅವರು ಜನವಿರೋಧಿ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಜನ ವಿರೋಧಿ ಬಜೆಟ್ ಆಗಿದ್ದು, ಜನರಿಗೆ ಭಾರ ಹೊರಿಸಿರುವ, ಅಭಿವೃದ್ಧಿ ವಿರೋಧಿ, ಅಭಿವೃದ್ಧಿಗೆ ಮಾರಕವಾಗುವ, ಯಾವುದೆ ಹೊಸ ಭರವಸೆ ಮೂಡಿಸದ, ಜನತೆಗೆ ನಿರಾಶಾದಾಯಕ ಬಜೆಟ್ ಆಗಿದೆ. ರಾಜ್ಯವನ್ನು ಹಿಂದಕ್ಕೆ ತೆಗೆದುಕೊಂಡು ಹೋಗುವ ರಿವರ್ಸ್ ಗೇರ್ ಬಜೆಟ್ ಎಂದು ಟೀಕಿಸಿದರು. ನಾವು ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್​​ಗೆ ನಾಲ್ಕು ತಿಂಗಳ ಲೇಖಾನುದಾನ ಪಡೆದಿದ್ದೆವು. ಈಗ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ್ದಾರೆ. ಇದು ರಾಜಕೀಯ ಪ್ರೇರಿತ ಬಜೆಟ್ ಆಗಿದೆ. ಹಲವಾರು ಅಂಕಿ – ಅಂಶಗಳನ್ನು ಆಧರಿಸಿ ವಾಸ್ತವಾಂಶಕ್ಕೆ ಎಲ್ಲ ಸರ್ಕಾರಗಳು ಬಜೆಟ್​ ಮಾಡಲಿವೆ. ಆದರೆ, ಇವರು ಎಲ್ಲವನ್ನೂ 2013ಕ್ಕೆ ಹೋಲಿಕೆ ಮಾಡಿದ್ದಾರೆ. ಇದು ರಿವರ್ಸ್ ಗೇರ್ ಇರುವ ಸರ್ಕಾರ, ನಾವು ಹಿಂದೆ ಹೋಗಬೇಕಾ ಮುಂದೆ ಹೋಗಬೇಕಾ? ಎಂದು ಪ್ರಶ್ನಿಸಿದರು.

Read More

ಬೆಂಗಳೂರು ;- ಸ್ವಿಗ್ಗಿ, ಜೊಮೊಟೊ ಒಳಗೊಂಡಂತೆ ಇ – ಕಾರ್ಮಸ್​ನ ಅಸಂಘಟಿತ ನೌಕರರಿಗೆ ಬಜೆಟ್​ನಲ್ಲಿ‌ ರಾಜ್ಯ ಸರ್ಕಾರ ಗುಡ್​ನ್ಯೂಸ್ ನೀಡಿದೆ. ಸ್ವಿಗ್ಗಿ, ಜೊಮಾಟೊ, ಅಮೆಜಾನ್ ಸೇರಿ ಇ-ಕಾರ್ಮಸ್ ಸಂಸ್ಥೆಗಳಲ್ಲಿ ಪೂರ್ಣ ಹಾಗೂ ಅರೆಕಾಲಿಕ ನೌಕರರಾಗಿ ಕೆಲಸ ಮಾಡುತ್ತಿರುವವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು 2 ಲಕ್ಷ ಜೀವವಿಮೆ ಹಾಗೂ 2 ಲಕ್ಷ ಅಪಘಾತ ವಿಮಾ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆರು ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳಲ್ಲಿ ಒಟ್ಟು 35 ಬೆಡ್​ಗಳ ಸಾಮರ್ಥ್ಯದ ಐಸಿಯು ‌ನಿರ್ಮಾಣಕ್ಕೆ 13 ಕೋಟಿ ವೆಚ್ಚದಲ್ಲಿ, ಆರು ಆಸ್ಪತ್ರೆಗಳಲ್ಲಿ 25 ಡಯಾಲಿಸಿಸ್ ಘಟಕ ನಿರ್ಮಾಣಕ್ಕೆ ಐದು ಕೋಟಿ ಮೀಸಲಿರಿಸಿದೆ. ಎರಡು ಆಸ್ಪತ್ರೆಗಳಲ್ಲಿ ಹೊಸ‌ ಲೆವೆಲ್ ನ ಟ್ರಾಮಾ ಕೇರ್ ಸೆಂಟರ್ ಗಳನ್ನ 24 ಕೋಟಿ ರೂ ವೆಚ್ಚದಲ್ಲಿ, ನಾಲ್ಕು ಆಸ್ಪತ್ರೆಗಳಲ್ಲಿ ಮಾಡ್ಯುಲಾರ್ ಆಪರೇಷನ್ ಥಿಯೇಟರ್ ಗಳ ನಿರ್ಮಾಣಕ್ಕೆ 8 ಕೋಟಿ, ರೋಗ ಪತ್ತೆ ಹಚ್ಚುವ ಕೇಂದ್ರಗಳ ಉನ್ನತೀಕರಣಕ್ಕಾಗಿ 35 ಕೋಟಿ ಸೇರಿ ಒಟ್ಟು 85 ಕೋಟಿ ವೆಚ್ಚದಲ್ಲಿ ಸಮಗ್ರ…

Read More

ಬೆಂಗಳೂರು ;- ಸಿಎಂ ಸಿದ್ದರಾಮಯ್ಯ ತರ ಬಜೆಟ್ ಕೊಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದು ಪರಿಷ್ಕರಣಾ ಬಜೆಟ್. ಯಾರೇ ಆ ಸ್ಥಾನದಲ್ಲಿದ್ರು ಸಿಎಂ ಸಿದ್ದರಾಮಯ್ಯ ತರ ಬಜೆಟ್ ಕೊಡಲು ಸಾಧ್ಯವಿಲ್ಲ. ಈ ಬಜೆಟ್​ನ್ನು ಎಲ್ಲರೂ ಒಪ್ಪುತ್ತಾರೆ. ವಿರೋಧ ಪಕ್ಷ ಟೀಕಿಸಬಹುದು. ಐದು ಭರವಸೆ ಈಡೇರಿಸಲು ಸಮಸ್ಯೆ ಆಗದಂತೆ ಬಜೆಟ್ ಮಂಡಿಸಿದ್ದಾರೆ. ಎಲ್ಲ ರೀತಿಯಲ್ಲೂ ಉತ್ತಮದ ಬಜೆಟ್ ಇದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು ಬಾರಿ ಸಿಎಂ ಆದ ಕುಮಾರಸ್ವಾಮಿ ಅವರು ಬಜೆಟ್‌ಗೆ ಬಂದಿಲ್ಲ‌.ಅವರ ಬಗ್ಗೆ ನಗಬೇಕೋ, ಅಳಬೇಕೋ ಗೊತ್ತಿಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು. ಅನೇಕ ಇಲಾಖೆಗಳಲ್ಲಿ ಕಾರ್ಯಕ್ರಮ ಮುಂದುವರೆಸಿಕೊಂಡು ಹೋಗ್ತಿದ್ದಾರೆ. ನಮ್ಮ ಇಲಾಖೆಯಲ್ಲಿ ನಂದಿನಿ ಬ್ರಾಂಡ್ ಮಾಡಲು ನಿರ್ಧರಿಸಿದ್ದೇವೆ. ನರೇಗಾ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆ ಮುಂದುವರೆಸುವ ಬಗ್ಗೆಯೂ ಯೋಚಿಸಿದ್ದೇವೆ ಎಂದು ತಿಳಿಸಿದರು. ಇದು ಚೆಂಡು ಹೂ ಮುಡಿಸುವ ಬಜೆಟ್ ಅನ್ನೋ ಹೆಚ್​ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಒಂದು ಪಕ್ಷದ…

Read More

ಬೆಂಗಳೂರು ;- ಮಾಜಿ ಸಚಿವ ಆರ್.ಅಶೋಕ್ ಅವರು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಅನ್ನು ಟೀಕಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ನಾಲಾಯಕ್ ಬಜೆಟ್ ಮಂಡಿಸಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸಿದ ಆಯವ್ಯಯ ಸುಳ್ಳು, ಮೋಸ, ಮೇಕೇದಾಟಿಗೆ 10 ಸಾವಿರ, ಮಹದಾಯಿಗೆ 10 ಸಾವಿರ ಕೋಟಿ ಇಡ್ತೀನಿ ಅಂದ್ರು. ಆದರೆ ಇಡೀ ಆಯವ್ಯಯ ಪುಸ್ತಕ ನೋಡಿದರೆ ಎಲ್ಲೂ ಹಣ ಇಟ್ಟಿಲ್ಲ ಎಂದು ಕಿಡಿಕಾರಿದರು. ಬೆಂಗಳೂರು ಅಭಿವೃದ್ಧಿಗೆ ಏನೂ ಇಟ್ಟಿಲ್ಲ. ಬೆಂಗಳೂರು ಅತಿ ಹೆಚ್ಚು ಟ್ಯಾಕ್ಸ್ ನೀಡುತ್ತೆ. ಈ ಸರ್ಕಾರ ಪೊಳ್ಳು ಭರವಸೆ ಜಾರಿಗೆ ತರಲು ಬಜೆಟ್​ ಮಾಡಿದೆ ಬಿಟ್ರೆ ಏನೂ ಇಲ್ಲ. ನೀರಾವರಿ ಇಲಾಖೆಯಲ್ಲಿ ಬಿಜೆಪಿ ಮಾಡಿರೋ ಯೋಜನೆ ಜಾರಿಗೆ ತರಲು ಆರು ವರ್ಷ ಬೇಕು ಅನ್ನೋ ವಿಚಾರವಾಗಿ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ, ಕುಮಾರಸ್ವಾಮಿ ಅವಧಿಯಲ್ಲಿ ಇದ್ದ ಬಾಕಿ ಕಾಮಗಾರಿ ತೋರಿಸಿಲ್ಲ. ಅದೆಲ್ಲ ತೋರಿಸಬೇಕಿತ್ತು ಎಂದು ವಾಗ್ದಾಳಿ ನಡೆಸಿದರು.

Read More

ಬೆಂಗಳೂರು ;- ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಕಾಗೆ ಹಾರಿಸುವ ಬಜೆಟ್ ಆಗಿದೆ ಎಂದು ಸಚಿವ ಸುನೀಲ್ ಕುಮಾರ್ ಟೀಕಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದು ಕಾಗೆ ಹಾರಿಸುವ ಬಜೆಟ್ ಆಗಿದೆ. ಕಾಂಗ್ರೆಸ್ ಕಚೇರಿಯಲ್ಲಿ ಹೇಳುವ ಭಾಷಣವನ್ನು ಬಜೆಟ್​ನಲ್ಲಿ ಹೇಳಿದ್ದಾರೆ. ಕನಸು ಇಲ್ಲ ದಾರಿಯೂ ಇಲ್ಲ ಎಂಬ ಬಜೆಟ್ ಇದಾಗಿದೆ. ಎನ್​ಇಪಿಯನ್ನು ಕೈ ಬಿಡುತ್ತೇವೆ ಎಂದಿದ್ದಾರೆ. ಇಡೀ ಶಿಕ್ಷಣ ವ್ಯವಸ್ಥೆಯನ್ನು ಅಲುಗಾಡಿಸುವ ಕೆಲಸ ಮಾಡುತ್ತಿದ್ದಾರೆ. ಯಾವ ಭಾಗಕ್ಕೂ ನ್ಯಾಯ ಒದಗಿಸದ ವಿಚಿತ್ರ ಬಜೆಟ್ ಇದಾಗಿದೆ. ಬಜೆಟ್ ಮೇಲಿನ ಚರ್ಚೆ ವೇಳೆ ಇದೆಲ್ಲವನ್ನೂ ಪ್ರಸ್ತಾಪಿಸುತ್ತೇವೆ. ಹಿಂದಿನ ಸರ್ಕಾರದ ಯೋಜನೆಗಳಿಗೆ ಮರು ನೇಮಕ ಮಾಡುವ ಕೆಲಸ ಆಗಿದೆ. ಕಾಂಗ್ರೆಸ್ ಯಾವತ್ತೂ ಅಲ್ಪಸಂಖ್ಯಾತರಿಗೆ ಒತ್ತು ನೀಡುವ ಕೆಲಸ ಮಾಡುತ್ತಾರೆ‌ ಎಂದು ಕಿಡಿಕಾರಿದರು. 128 ಪುಟದ ಈ ಬಜೆಟ್​ನ್ನು ಒಂದು ಲೈನ್ ನಲ್ಲಿ ಹೇಳುವುದಾದರೆ.‌ ಕೇಂದ್ರ ಸರ್ಕಾರವು ಏನೂ ಕೊಡಲಿಲ್ಲ. ರಾಜ್ಯ ಸರ್ಕಾರ ಏನೂ ಮಾಡಿಲ್ಲ. ಮುಂದೆ ನಾನೂ ಏನೂ ಮಾಡಲು ಆಗುವುದಿಲ್ಲ ಎಂಬಂತಿದೆ. ಬಜೆಟ್ ಎಂದರೆ…

Read More