Author: Prajatv Kannada

ಬೆಂಗಳೂರು ;– ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ರೈತರು ಪಂಪ್‍ ಸೆಟ್‍ಗಳಿಗೆ ಸೌರ ವಿದ್ಯುತ್‍ ಸಂಪರ್ಕ ಅಳವಡಿಸಿಕೊಳ್ಳಲು ಸುಮಾರು 4.5 ಲಕ್ಷ ರೂ. ಖರ್ಚಾಗಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸುಮಾರು 3.5 ಲಕ್ಷ ರೂಪಾಯಿ ಸಹಾಯಧನದ ರೂಪದಲ್ಲಿ ದೊರೆಯಲಿದೆ. ಇನ್ನೊಂದು ಲಕ್ಷ ರೂ. ವನ್ನು ರೈತರು ಭರಿಸುವುದು ಕಷ್ಟವಾಗಲಿದೆ ಎಂಬುದನ್ನು ಮನಗಂಡಿರುವ ಸರ್ಕಾರ, ಯಾವುದಾದರೂ ಬ್ಯಾಂಕ್‍ ಮೂಲಕ ಸಾಲ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಿದೆ ಎಂದರು. ರೈತರು ರಾಜ್ಯದ ಜೀವನಾಡಿಯಾಗಿದ್ದು, ಅವರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ರೈತರ ಪಂಪ್‍ಸೆಟ್‍ಗಳಿಗೆ ನಿರಂತರ ವಿದ್ಯುತ್‍ ಪೂರೈಕೆಗೆ ಏನೆಲ್ಲಾ ಮಾಡಬಹುದು ಎಂಬ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುವುದು. ಅಕ್ರಮ – ಸಕ್ರಮ ಯೋಜನೆ ಒಂದು ಬಾರಿಗೆ ಮಾತ್ರ ಸೂಕ್ತವಾಗಿದ್ದು, ಎಲ್ಲಾ ಕಾಲಕ್ಕೂ ಈ ಯೋಜನೆ ಅನ್ವಯ ಮಾಡುವುದು ಕಷ್ಟವಾಗುತ್ತದೆ ಎಂದರು

Read More

ಬೆಂಗಳೂರು ;- ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಯ್ಯನಪಾಳ್ಯದಲ್ಲಿ ಪ್ರಥಮ ಪಿಯುಸಿಯಲ್ಲಿ ಎರಡು ಬಾರಿ ಫೇಲಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಜರುಗಿದೆ. 17 ವರ್ಷದ ಚಾರ್ಲಿ ಆತ್ಮಹತ್ಯೆಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ಹತ್ತನೇ ತರಗತಿ ಪಾಸಾಗಿ ತನ್ನ ಇಷ್ಟದ ಖಾಸಗಿ ಕಾಲೇಜಿಗೆ ಚಾರ್ಲಿ ಸೇರಿದ್ದ. ಆದರೆ ಓದು ತಲೆಗೆ ಹತ್ತದೇ ಆರು ತಿಂಗಳ ಹಿಂದೆ ಮೊದಲ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದ. ಇದರಿಂದ ನೊಂದಿದ್ದ ಚಾರ್ಲಿಯನ್ನು ಅಪ್ಪ ಮತ್ತು ಅಣ್ಣ ಧೈರ್ಯ ತುಂಬಿ ಟ್ಯೂಷನ್​ಗೆ ಕಳುಹಿಸಿದ್ದರು. ಬಳಿಕ ಇತ್ತೀಚೆಗೆ ಮತ್ತೊಮ್ಮೆ ಸಪ್ಲಿಮೆಂಟ್ರಿ ಪರೀಕ್ಷೆ ಬರೆದಾಗಲೂ ಚಾರ್ಲಿ ಫೇಲ್ ಆಗಿದ್ದಾನೆ. ನಂತರ ತಾನು ಓದುತ್ತಿದ್ದ ಕಾಲೇಜಿನವರು ಬೇರೆ ಕಾಲೇಜಿಗೆ ಹೋಗಿ ಎಂದು ಟಿಸಿ ಕೊಡಲು ಮುಂದಾಗಿದ್ದಾರೆ. ಇಷ್ಟವಾದ ಕಾಲೇಜಲ್ಲಿ ಓದೋಕೆ ಆಗ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ಆತ್ಮಹತ್ಯೆಗೆ ಶರಣಾಗಿದ್ದಾನೆ.

Read More

ಬೆಂಗಳೂರು: ದುಡಿಯಲು ಸಮರ್ಥಳಾಗಿರುವ ಪತ್ನಿಯು ಪತಿಯಿಂದ ಹೆಚ್ಚಿನ ಜೀವನಾಂಶ ಕೋರಲಾಗದು ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಅಲ್ಲದೆ, ಕೌಟುಂಬಿಕ ವ್ಯಾಜ್ಯವೊಂದರಲ್ಲಿ ಪತ್ನಿಗೆ ಮ್ಯಾಜಿಸ್ಪ್ರೇಟ್‌ ನ್ಯಾಯಾಲಯ ಘೋಷಿಸಿದ್ದ ಮಾಸಿಕ 10 ಸಾವಿರ ರೂ. ಜೀವನಾಂಶ ಹಾಗೂ 3 ಲಕ್ಷ ರೂ. ಪರಿಹಾರವನ್ನು ಕ್ರಮವಾಗಿ 5 ಸಾವಿರ ರೂ. ಹಾಗೂ 2 ಲಕ್ಷ ರೂ.ಗಳಿಗೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಜೀವನಾಂಶ ಹಾಗೂ ಪರಿಹಾರದ ಮೊತ್ತ ಕಡಿತಗೊಳಿಸಿದ್ದ ಬೆಂಗಳೂರಿನ 66ನೇ ಹೆಚ್ಚುವರಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿ ಆನೇಕಲ್‌ನ ಮಹಿಳೆ ಮತ್ತವರ ಅಪ್ರಾಪ್ತ ಪುತ್ರ ಸಲ್ಲಿಸಿದ್ದ ಕ್ರಿಮಿನಲ್‌ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್‌ ಅವರಿದ್ದ ಏಕಸದಸ್ಯಪೀಠ, ಈ ಆದೇಶ ಮಾಡಿದೆ. ಪತ್ನಿ ಈಗ ಕೆಲಸ ಮಾಡಲು ಏಕೆ ಸಮರ್ಥರಿಲ್ಲ ”ವಿವಾಹಕ್ಕೂ ಮುನ್ನ ಅರ್ಜಿದಾರ ಮಹಿಳೆ ಕೆಲಸ ಮಾಡುತ್ತಿದ್ದರು ಎನ್ನುವುದು ದಾಖಲೆಗಳಿಂದ ತಿಳಿದು ಬಂದಿದೆ. ಪತಿಯಿಂದ ದೂರವಾದ ಬಳಿಕ ತಾಯಿ ಹಾಗೂ ಮಗನೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಪತ್ನಿ, ಪತಿಯ ತಾಯಿ ಹಾಗೂ…

Read More

ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಟೀಸರ್ ಇಂದು ಮುಂಜಾನೆ ರಿಲೀಸ್ ಆಗಿದೆ. ರಗಡ್ ಲುಕ್‌ನಲ್ಲಿ ಪ್ರಭಾಸ್ ಎಂಟ್ರಿ ಕೊಟ್ಟಿದ್ದಾರೆ. ಜೊತೆಗೆ ಪೃಥ್ವಿರಾಜ್ ಸುಕುಮಾರನ್ ಪಾತ್ರ ಕೂಡ ಗಮನ ಸೆಳೆದಿದೆ. ಚಿತ್ರದಲ್ಲಿ ಬರುವ ಸೆಟ್​ಗಳು ‘ಕೆಜಿಎಫ್’ ಸಿನಿಮಾವನ್ನು ನೆನೆಪಿಸುವಂತಿದೆ. ಮೇಕಿಂಗ್​, ಮ್ಯೂಸಿಕ್ ಸಹ ಭರ್ಜರಿಯಾಗಿದೆ. ಟೀಸರ್‌ನಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಲುಕ್ ನೋಡುಗರಿಗೆ ರಸದೌತಣವನ್ನು ನೀಡಿದೆ. ಈ ಸಿನಿಮಾವು ಒಂದು ಭರ್ಜರಿ ಆಕ್ಷನ್‌ ಎಂಟರ್‌ಟೇನರ್‌ ಆಗಿರಲಿದೆ ಎಂಬುದಕ್ಕೆ ಬಿಡುಗಡೆಯಾಗಿರುವ ಟೀಸರ್‌ ಸಾಕ್ಷಿಯಾಗಿದೆ ಸಲಾರ್’ ಎರಡು ಭಾಗದಲ್ಲಿ ರಿಲೀಸ್ ಆಗಲಿದೆ ಎಂಬುದು ಈ ಮೊದಲೇ ಸುದ್ದಿ ಆಗಿತ್ತು. ಇದೀಗ ಅದು ಟೀಸರ್​ನಲ್ಲಿ ಖಚಿತವಾಗಿದೆ. ಈ ಸಿನಿಮಾ ಎರಡು ಭಾಗದಲ್ಲಿ ಬರುತ್ತಿರುವ ವಿಚಾರವನ್ನು ತಂಡದವರು ಖಚಿತಪಡಿಸಿದ್ದಾರೆ. ಈ ಮೂಲಕ ದೊಡ್ಡ ಸೀಕ್ರೆಟ್ ರಿವೀಲ್ ಆಗಿದೆ. ಮೊದಲ ಪಾರ್ಟ್​​ಗೆ ‘ಸಲಾರ್​: ಸೀಸ್​ಫೈರ್’ ಎಂದು ಹೆಸರು ಇಡಲಾಗಿದೆ. ‘ಕೆಜಿಎಫ್’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಸಹ ನಟಿಸಿದ್ದಾರೆ. ಶ್ರುತಿ ಹಾಸನ್…

Read More

ಪ್ರಭಾಸ್ ನಟನೆಯ, ‘ಕೆಜಿಎಫ್’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಚಿತ್ರದ ಮೊದಲ ಟೀಸರ್ ಇಂದು ಬೆಳಗ್ಗೆ ರಿಲೀಸ್ ಆಗಿದ್ದು ಟೀಸರ್ ನೋಡಿದ ಅಭಿಮಾನಿಗಳು ಫುಲ್ ಥ್ರಿಲ್ ಆಗಿದ್ದಾರೆ. ಸದ್ಯ ಬಿಡುಗಡೆ ಆಗಿರುವ 1.46 ನಿಮಿಷಗಳ ಟೀಸರ್‌ನಲ್ಲಿ ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್ ಹಾಗೂ ಬಾಲಿವುಡ್‌ನ ಹಿರಿಯ ನಟ ಟಿನು ಆನಂದ್ ಅವರನ್ನು ಮಾತ್ರವೇ ಹೈಲೈಟ್ ಮಾಡಲಾಗಿದ್ದು, ಇಂದೊಂದು ಭರ್ಜರಿ ಆ್ಯಕ್ಷನ್ ಎಂಟರ್‌ಟೇನರ್‌ ಆಗಿರಲಿದೆ ಎಂಬುದಕ್ಕೆ ಈ ಟೀಸರ್‌ ಸಾಕ್ಷಿಯಾಗಿದೆ. ‘ಸಲಾರ್’ ಸಿನಿಮಾ ಆರಂಭವಾದಾಗಿನಿಂದಲೂ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈ ಬಗ್ಗೆ ಇದುವರೆಗೂ ಚಿತ್ರತಂಡ ಯಾವುದೇ ಮಾಹಿತಿ ನೀಡಿರಲಿಲ್ಲ. ಆದರೆ ಇದೀಗ ರಿಲೀಸ್ ಆಗಿರುವ ಟೀಸರ್‌ನಲ್ಲಿ ಆ ಕುತೂಹಲಕ್ಕೆ ತೆರೆಬಿದ್ದಿದೆ. ಸೆಪ್ಟೆಂಬರ್ 28ರಂದು ‘ಸಲಾರ್’ ಚಿತ್ರದ ಮೊದಲ ಭಾಗ ತೆರೆಗೆ ಬರಲಿದ್ದು, ಸದ್ಯ ಆಗಲಿರುವ ಭಾಗ 1ಕ್ಕೆ ‘ಕದನವಿರಾಮ’ ಎಂದು ಹೆಸರು ಇಡಲಾಗಿದೆ. ಸದ್ಯ ರಿಲೀಸ್ ಆಗಿರುವ ಟೀಸರ್‌ನಲ್ಲಿ ‘ಕೆಜಿಎಫ್’ ಸಿನಿಮಾದ ಜತೆಗೆ ‘ಸಲಾರ್‌’ಗೆ…

Read More

ಕರ್ನಾಟಕ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದ ನಟ ನಿಖಿಲ್ ಕುಮಾರಸ್ವಾಮಿ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿದ್ದಾರೆ. ಚುನಾವಣೆ ಆರಂಭಕ್ಕೂ ಮುನ್ನ ನಿಖಿಲ್ ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಆದರೆ ಎರಡು ಸಿನಿಮಾಗಳ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್ ನೀಡಿರಲಿಲ್ಲ. ತಮ್ಮನ್ನು ಸಂಪೂರ್ಣವಾಗಿ ಪಕ್ಷ ಸಂಘಟಿಸಲು ನಿಯೋಜಿಸಿಕೊಂಡಿದ್ದು ನಿಖಿಲ್ ಇದೀಗ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಚಿತ್ರೀಕರಣದತ್ತ ಮುಖ ಮಾಡಿದ್ದಾರೆ. 2021ರಲ್ಲಿ ತೆರೆಕಂಡ ರೈಡರ್ ಸಿನಿಮಾದ ಬಳಿಕ ನಿಖಿಲ್ ಯಾವುದೇ ಸಿನಿಮಾಗಳಲ್ಲೂ ಕಾಣಿಸಿಕೊಂಡಿರಲಿಲ್ಲ. ಆದರೆ ಧನುಷ್ ಹಾಗೂ ಯದುವೀರ ಹೆಸರಿನ ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಇದೀಗ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ನಿಖಿಲ್ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಈ ಮಧ್ಯೆ ಮತ್ತೊಂದು ಹೆಸರಾಂತ ಸಂಸ್ಥೆ ನಿಖಿಲ್ ಚಿತ್ರ ಮಾಡಲು ಮುಂದಾಗಿದೆ ಎನ್ನಲಾಗುತ್ತಿದೆ. ದಕ್ಷಿಣ ಭಾರತದ ಶ್ರೀಮಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಇದೀಗ ನಿಖಿಲ್ ಅವರ ಸಿನಿಮಾವನ್ನು ನಿರ್ಮಾಣ ಮಾಡಲು ಮುಂದೆ ಬಂದಿದೆ. ಈಗಾಗಲೇ ನಿಖಿಲ್ ಜೊತೆ ಮಾತುಕತೆ ಮುಗಿದಿದ್ದು ಚಿತ್ರದಲ್ಲಿ ನಟಿಸಲು ನಿಖಿಲ್ ಗ್ರೀನ್…

Read More

ಬೆಂಗಳೂರು ;- ಮಹದೇವಪುರ ವಲಯ ಮಾರತಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ ವಲಯ ಜಂಟಿ ಆಯುಕ್ತರಾದ ಡಾ. ದಾಕ್ಷಾಯಿಣಿ ರವರು ವಿವಿಧ ಜಾತಿಯ 15 ಸಸಿಗಳನ್ನು ನೆಟ್ಟು, ಅದನ್ನು ಪೋಷಿಸುವ ಜವಾಬ್ದಾರಿಯನ್ನು ಆಸ್ಪತ್ರೆಯ ಸಿಬ್ಬಂದಿಯಾದ ಚೇತನ್ ಎಂಬುವರಿಗೆ ವಹಿಸಿದ್ದಾರೆ. ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸನ್ಮಾನ್ಯ ಉಪ ಮುಖ್ಯಮಂತ್ರಿಯವರಾದ ಶ್ರೀ ಡಿ.ಕೆ.ಶಿವಕುಮಾರ್ ರವರ ನಿರ್ದೇಶನದಂತೆ ಇಂದು ಮಾರತಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸಸಿಗಳನ್ನು ನೆಟ್ಟು ವೃಕ್ಷ ಕವಚ(Tree Guard) ಅಳವಡಿಸಿ ಸಸಿಗಳನ್ನು ಪೋಷಿಸಿ ಅವುಗಳು ಬೆಳೆಯುವವರೆಗೆ ಅದರ ಜವಾಬ್ದಾರಿಯನ್ನು ನಾಲ್ಕನೇ ದರ್ಜೆಯ ನೌಕರರಾದ ಚೇತನ್ ರವರಿಗೆ ಜವಾಬ್ದಾರಿ ನೀಡಲಾಗಿದೆ. ನೆಟ್ಟಿರುವ ಎಲ್ಲಾ ಸಸಿಗಳಿಗೆ ಚೇತನ್ ಹೆಸರಿನ ನಾಮಫಲಕಗಳನ್ನು ಅಳವಡಿಸಲಾಗಿದೆ. ಸ್ಮಾರ್ಟ್ ವರ್ಚ್ಯುಯಲ್ ಕ್ಲಿನಿಕ್ ಪರಿವೀಕ್ಷಣೆ: ಮಾರತಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ಮಾರ್ಟ್ ವರ್ಚ್ಯುಯಲ್ ಕ್ಲಿನಿಕ್ ತೆರೆಯಲಾಗಿದ್ದು, ಆನ್ ಲೈನ್ ಮೂಲಕ ನೇತ್ರ ಪರೀಕ್ಷೆ ಹಾಗೂ ಚರ್ಮ ರೋಗದ ಪರೀಕ್ಷೆ ನಡೆಸಲಾಗುತ್ತಿದ್ದು, ವಲು ಜಂಟಿ ಆಯುಕ್ತರು ಸ್ಥಳಕ್ಕೆ ಭೇಟಿ…

Read More

ಬೆಂಗಳೂರು ;- ಚಾಲಕನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿಗೆ ಅಧಿಕಾರ ಇಲ್ಲ. ಅದಕ್ಕಾಗಿ ಏನೇನೋ ಮಾತನಾಡ್ತಾ ಇದ್ದಾರೆ. ಚಾಲಕನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಆತನನ್ನು ಬೇರೆ ಯಾವುದೋ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಿರಲಿಲ್ಲ. ನಾಗಮಂಗಲದಿಂದ ಮಂಡ್ಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಕೇವಲ 30 ಕಿ.ಮೀ. ದೂರ ವರ್ಗಾವಣೆ ಮಾಡಿರೋದು. ಆತನ ಜೀವಕ್ಕೆ ಏನಾದ್ರೂ ಹೆಚ್ಚು ಕಮ್ಮಿ ಆದ್ರೆ ಕುಮಾರಸ್ವಾಮಿ ನೇರ ಹೊಣೆ” ಎಂದು ಕಿಡಿ ಕಾರಿದರು. ಇನ್ನೂ ವರ್ಗಾವಣೆ ದಂಧೆ ವಿಚಾರವಾಗಿ ಮಾತನಾಡಿದ ಅವರು, ”ಕುಮಾರಸ್ವಾಮಿಯವರು ಹೊಸದಾಗಿ ಪ್ರಸ್ತಾಪ ಮಾಡ್ತಿಲ್ಲ. ವರ್ಗಾವಣೆ ವಿಚಾರದಲ್ಲಿ ನಾನು ಯಾವುದೇ ಪತ್ರ ಕೊಟ್ಟಿಲ್ಲ. ಸದನದಲ್ಲಿ ಕುಮಾರಸ್ವಾಮಿಗೆ ನಮ್ಮ ಮಂತ್ರಿಗಳನ್ನು, ಮುಖ್ಯಮಂತ್ರಿಗಳನ್ನು ನೋಡಲು ಆಗ್ತಿಲ್ಲ. ದೇವರು ಕುಮಾರಸ್ವಾಮಿಯವರಿಗೆ ಸಮಾಧಾನ ನೀಡಲಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಎಷ್ಟು ವರ್ಗಾವಣೆ ಮಾಡುದ್ರು ಕೇಳಿ” ಎಂದು ಟೀಕಿಸಿದರು.

Read More

ಬೆಂಗಳೂರು ;- ಮುಂಗಾರು ಮಳೆ ಕೊರತೆ ಮುಂದುವರಿದರೆ, ಬರಪೀಡಿತ ಪ್ರದೇಶಗಳ ಘೋಷಣೆಗೆ ಪರಿಶೀಲನೆ ಮಾಡಲಾಗುತ್ತದೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಜೂನ್ ತಿಂಗಳಿನಲ್ಲಿ ಮಳೆಯ ಕೊರತೆ ಇತ್ತು. ಕಳೆದ 10 ದಿನಗಳಿಂದ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದ ಒಳನಾಡಿನಲ್ಲಿ ಉತ್ತಮ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ವಿವರಿಸಿದರು. ಪ್ರಕೃತಿ ವಿಕೋಪ ಪರಿಸ್ಥಿತಿ ಬಗ್ಗೆ ಚರ್ಚಿಸಲು ಕಳೆದ ಮಂಗಳವಾರ ಸಚಿವ ಸಂಪುಟ ಉಪಸಮಿತಿ ಸಭೆ ನಡೆಸಿದ್ದು, ಎಲ್ಲೆಲ್ಲಿ ಮಳೆ ಕೊರತೆ ಇದೆ ಎಂಬ ಮಾಹಿತಿಯನ್ನು ಪಡೆದುಕೊಂಡಿದ್ದೇವೆ. ಹೋಬಳಿ ಮಟ್ಟದಲ್ಲೂ ಮಳೆಯ ವ್ಯತ್ಯಾಸವಾಗುತ್ತಿದೆ. ಆದರೆ ಸರಾಸರಿ ಮಳೆಯ ಪ್ರಮಾಣ ಸುಧಾರಣೆಯಾಗುತ್ತಿದೆ. ಈ ತಿಂಗಳ 15ರ ವರೆಗೂ ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಬರಪೀಡಿತ ಪ್ರದೇಶಗಳ ಘೋಷಣೆ ಬಗ್ಗೆ ನಿರ್ಧರಿಸಲಾಗುವುದು ಎಂದರು. ರಾಜ್ಯದಲ್ಲಿ 193 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಇದೆ. 339 ಬೋರ್ವೆಲ್​ಗಳನ್ನು ಬಾಡಿಗೆ ಪಡೆದು ಟ್ಯಾಂಕರ್ ಮೂಲಕ ಕುಡಿವ ನೀರು ಸರಬರಾಜು ಮಾಡಲಾಗುತ್ತಿದೆ. ಗ್ರಾಮ…

Read More

ಬೆಂಗಳೂರು ;- ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಅರೆ ವೈದ್ಯಕೀಯ ಸಿಬ್ಬಂದಿ ಕೊರತೆ ನೀಗಿಸಿ ಕಾಯಕಲ್ಪ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಡಾ. ಅವಿನಾಶ್ ಉಮೇಶ್ ಜಾಧವ್ ಅವರ ಪ್ರಶ್ನೆಗೆ ಉತ್ತರಿಸಿದರು. ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರು, ತಜ್ಞವೈದರ ಕೊರತೆ ಇರುವುದು ಗಮನಕ್ಕೆ ಬಂದಿದೆ. ಸಿಬ್ಬಂದಿ ಕೊರತೆ ನೀಗಿಸಲು ಪ್ರಾಮಾಣೀಕ ಪ್ರಯತ್ನ ಮಾಡಲಾಗುವುದು. ಈ ಸಂಬಂಧ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಹಲವು ಕಡೆಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡಗಳಿವೆ. ವೈದ್ಯರು ಹಾಗೂ ಇತರೆ ಸಿಬ್ಬಂದಿಗಳಿಲ್ಲ. ಅಂತಹ ಕಡೆಗಳಲ್ಲಿ ವೈದ್ಯರು, ಸಿಬ್ಬಂದಿಯನ್ನು ನೇಮಕ ಮಾಡಿ ಒಳ್ಳೆ ರೀತಿಯಲ್ಲಿ ನಿರ್ವಹಣೆ ಮಾಡುವುದು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಏಳು ಹಳೆಯ ತಾಲೂಕುಗಳಲ್ಲಿ ಇರುವ ಆಸ್ಪತ್ರೆಗಳನ್ನು ನೂರು ಹಾಸಿಗೆ ಸಾಮರ್ಥ್ಯಕ್ಕೆ ಹೆಚ್ಚಿಸಬೇಕಿದೆ. ಆನಂತರ ಹೊಸ ತಾಲ್ಲೂಕುಗಳಲ್ಲಿ ಆಸ್ಪತ್ರೆ ಮಂಜೂರು ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Read More