Author: Prajatv Kannada

ಬೆಂಗಳೂರು ;- ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವ ವಿಚಾರವಾಗಿ ಸಚಿವ ಚೆಲುವರಾಯಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಕೆಶಿ ಬ್ಯುಸಿನೆಸ್ ಮಾಡಿಕೊಂಡು ಬಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಏನು ಮಾಡಿಕೊಂಡು ಬಂದಿದ್ದಾರೆ ಹೇಳಿಬಿಡಲಿ ಎಂದರು. ಕುಮಾರಸ್ವಾಮಿ ಎಲ್ಲಾ ಸಂದರ್ಭದಲ್ಲೂ ಎಲ್ಲರ ಮೇಲೂ ಮಾತನಾಡ್ತಾನೆ ಬಂದಿದ್ದಾರೆ. ಪ್ರಧಾನಿಯಿಂದ ರಾಜ್ಯದ ನಾಯಕರ ಬಗ್ಗೆಯೂ ಮಾತನಾಡ್ತಾ ಬಂದಿದ್ದಾರೆ. 25 ವರ್ಷದಿಂದಲೂ ಮಾತನಾಡ್ತಾ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಅಧಿವೇಶನ ನಡೆಯುತ್ತಿದೆ. ದಾಖಲೆ ಬಿಡುಗಡೆ ಮಾಡಲಿ. ನಾವೇನಾದ್ರು ಅವರಿಗೆ ಬಿಡುಗಡೆ ಮಾಡಬೇಡಿ ಎಂದು ಹೇಳಿದ್ದೀವಾ..?. ದಾಖಲೆ ಇದ್ರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

Read More

ಬೆಂಗಳೂರು: ರಾಜ್ಯದ ಅಂಗನವಾಡಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅವರಿಗೆ ಫಿಲ್ಟರ್ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ. ಕರ್ನಾಟಕ ವಿಧಾನ ಸಭೆಯಲ್ಲಿ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಕೆ.ಎಂ. ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬರುವ ಬಜೆಟ್ ನಲ್ಲಿ ಈ ಯೋಜನೆ ಅಳವಡಿಸಿಕೊಳ್ಳಲು ಮುಖ್ಯಮಂತ್ರಿಗೆ ಈಗಾಗಲೇ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಅನೇಕ ಅಂಗನವಾಡಿಗಳ ಕಟ್ಟಡಗಳ ನಿರ್ಮಾಣ ಕಾರ್ಯ ಅರ್ಧದಲ್ಲಿದ್ದು ಅವುಗಳನ್ನು ಪೂರ್ತಿಗೊಳಿಸಲು ಹಾಗೂ ಅಂಗನವಾಡಿ ಮಕ್ಕಳಿಗೂ ಶೌಚಾಲಯ ವ್ಯವಸ್ಥೆ ಒದಗಿಸಿಕೊಡಲು ಕ್ರಮ ಕೈಗೊಳ್ಳಬೇಕು ಎಂಬ ಶಾಸಕ ನಾರಾಯಣಸ್ವಾಮಿ ಅವರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳಕರ, ಆದಷ್ಟೂ ಶೀಘ್ರವೇ ಈ ಕುರಿತು ಕ್ರಮ ಕೈಗೊಳ್ಳಲಾಗುವುದು. ಸಂಬಂಧಪಟ್ಟ ಇಲಾಖೆಗೆ ಈ ಕುರಿತು ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

Read More

ಬೆಂಗಳೂರು ;- ಬಾಕಿ ಉಳಿದಿರುವ ಕಾಮಗಾರಿ ಬಿಲ್ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ಜು.15ರ ತನಕ ಗುತ್ತಿಗೆದಾರರು ಗಡುವು ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪತ್ರ ಬರೆದಿದ್ದು, ಗುತ್ತಿಗೆದಾರರಿಗೆ ಬರಬೇಕಾಗಿರುವ ನೂರಾರು ಕೋಟಿ ರೂ. ಹಣವನ್ನು ಬಿಡುಗಡೆ ಮಾಡುವಲ್ಲಿ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದಾಗಲೂ ತ್ವರಿತವಾಗಿ ಬಿಲ್ ಮೊತ್ತವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದೆವು. ಅದರಂತೆ ಜೂ.28ರಂದು ಸರ್ಕಾರ ಸುತ್ತೋಲೆ ಹೊರಡಿಸಿತು. ಆದರೆ ಈ ಆದೇಶ ಹೊರಡಿಸಿ ಒಂದು ವಾರ ಕಳೆದರೂ ಹಣ ಬಿಡುಗಡೆ ಮಾಡುತ್ತಿಲ್ಲ. ಕಳೆದ ಒಂದೂವರೆ ತಿಂಗಳಿನಿಂದ ಗುತ್ತಿಗೆದಾರರಿಗೆ ಹಣ ಬಿಡುಗಡೆ ಯಾಗಿಲ್ಲ. ಇದರಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಕಣ್ಣೋರೆಸುವ ತಂತ್ರ ಬಿಟ್ಟು ಕೂಡಲೇ ಸ್ಪಂದಿಸಬೇಕು ಎಂದು ಕೆಂಪಣ್ಣ ಒತ್ತಾಯಿಸಿದ್ದಾರೆ. ಒಂದು ವೇಳೆ ಜು.15ರೊಳಗೆ ಹಣ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಅವರು ಗಡುವು ನೀಡಿದ್ದಾರೆ.

Read More

ಬೆಂಗಳೂರು ;– ಸದನಕ್ಕೆ ಗೈರಾದ ಸಚಿವರ ವಿರುದ್ಧ ಬಿಜೆಪಿ ಸದಸ್ಯರು ಕೆಂಡಾಮಂಡಲವಾಗಿದ್ದಾರೆ. ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಸಾಗರ ಶಾಸಕ ಬೇಳೂರು ಗೋಪಾಲ ಕೃಷ್ಣ ಚರ್ಚೆ ಮುಂದುವರೆಸಿದರು. ಸದನಕ್ಕೆ ಬಾರದ ಸಚಿವರ ವಿರುದ್ಧ ಬಿಜೆಪಿ ಸದಸ್ಯರು ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಶಾಸಕ ಸುನೀಲ್ ಕುಮಾರ್, ಕಲಾಪ ಆರಂಭವಾದರೂ ಸಚಿವರು ಆಗಮಿಸಿಲ್ಲ. ಸಚಿವರು ವರ್ಗಾವಣೆ ದಂಧೆಯಲ್ಲಿ ಇದ್ದಾರೆ ಎಂದರೆ ಮುಗಿಸಿಕೊಂಡೇ ಬರಲಿ… ಸದನವನ್ನು ಸ್ವಲ್ಪ ಹೊತ್ತು ಮುಂದೂಡಿ ಎಂದು ಸ್ಪೀಕರ್ ಖಾದರ್ ಅವರಿಗೆ ಒತ್ತಾಯಿಸಿದರು.

Read More

ಬೆಂಗಳೂರು: ಕೊಬ್ಬರಿಗೆ ಬೆಂಬಲ ಬೆಲೆ ನಿರ್ಣಯ ಮಾಡದಿದ್ರೆ ಇಲ್ಲೇ ಪ್ರತಿಭಟನೆ ಮಾಡುವುದಾಗಿ ವಿಧಾನಸಭೆಯಲ್ಲಿ (Karnataka Assembly Session)  ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಹೇಳಿದರು. ಪಂಚೆ ಹಾಸಿಕೊಂಡು ಸದನದಲ್ಲೇ ಮಲಗುತ್ತೇವೆ. ಕೊಬ್ಬರಿಗೆ ಬೆಂಬಲ ಬೆಲೆ ಬಗ್ಗೆ ಇವತ್ತೇ ನಿರ್ಧಾರ ಮಾಡಿ. ಇಲ್ಲವಾದಲ್ಲಿ ಇಲ್ಲೇ ಪಂಚೆ ಹಾಸಿಕೊಂಡು ನಾವು ಮಲಗುತ್ತೇವೆ ಎಂದಿದ್ದಾರೆ.

Read More

ಬೆಂಗಳೂರು: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್​ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್​ನವರು ಕೂಡ ಪ್ರತಿಕ್ರಿಯೆ ನೀಡುತ್ತಲೇ ಬಂದಿದ್ದಾರೆ ಹಾಗೆ ಇಂದು ಕೂಡ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ವಿರೋಧ ಪಕ್ಷಗಳು ಅವರ ರಾಜಕಾರಣ ಮಾಡಲಿ. ಅವರು ಯಾವ ಬಾಂಬ್ ಬೇಕಾದರೂ ಹಾಕಲಿ. ಏನಾದರೂ ಮಾಡಲಿ. ಜನರ ಸೇವೆ ಮಾಡುವುದು ನಮ್ಮ ಕರ್ತವ್ಯ. ನಾವು ಅದನ್ನು ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅವರು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Read More

ನವದೆಹಲಿ:  ದೇಶದೆಲ್ಲೆಡೆ  ತರಕಾರಿ ಬೆಲೆಯಲ್ಲಿ ಏರಿಕೆಯಾಗಿದೆ. ದೆಹಲಿಯ ಹಾಗೂ ಉತ್ತರಪ್ರದೇಶದಲ್ಲಿ ಟೊಮೆಟೋ ಬೆಲೆ (Tomato Price) ಗಗನಕ್ಕೇರಿದೆ. ಕಡಿಮೆ ದರದಲ್ಲಿ ಸಿಗುತ್ತಿದ್ದ ಟೊಮೆಟೋ ಕಳೆದ ಕೆಲ ದಿನಗಳಿಂದ 100ರ ಗಡಿ ದಾಟುತ್ತಿದೆ. ದೆಹಲಿಯ ಸಫಲ್ ಸ್ಟೋರ್ ನಲ್ಲಿ ಕೆ.ಜಿ ಟೊಮೆಟೋ 129 ರೂ.ಗೆ ಮಾರಾಟವಾದರೆ, ಉತ್ತರಪ್ರದೇಶದಲ್ಲಿ 150 ರೂ.ಗೆ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಗ್ರಾಹಕರು ತಬ್ಬಿಬ್ಬಾಗಿದ್ದಾರೆ. ಉತ್ತರ ಪ್ರದೇಶ ಮತ್ತು ಹರಿಯಾಣದಂತಹ ನೆರೆಯ ರಾಜ್ಯಗಳಿಂದ ಪೂರೈಕೆ ಕಡಿಮೆಯಾದ ಕಾರಣ ದೆಹಲಿಯಲ್ಲಿ ಕೆಲ ದಿನಗಳಿಂದ ಟೊಮೆಟೋ ಬೆಲೆ ದ್ವಿಗುಣಗೊಂಡಿದೆ ಎಂದು ಹೇಳಲಾಗುತ್ತಿದೆ. ಉತ್ತರಪ್ರದೇಶದಲ್ಲಿಯೂ (Uttarpradesh) ಟೊಮೆಟೋ ದರದಲ್ಲಿ ಏರಿಕೆಯಾಗಿದ್ದು, ಕೆ.ಜಿಗೆ 150 ರೂ. ಆಗಿದೆ. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಇತ್ತ ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಸೇರಿದಂತೆ ಬೆಂಗಳೂರು ಸುತ್ತಮುತ್ತ ಭಾಗಗಳಲ್ಲಿ ಟೊಮೆಟೋ ಬೆಳೆ ನಾಶವಾಗಿದೆ. ಹೀಗಾಗಿ ದರದಲ್ಲಿ ಏರಿಕೆಯಾಗಿದೆ ಎನ್ನಲಾಗಿದೆ. ಉತ್ಪಾದನೆ ಕೊರತೆ, ತೀವ್ರವಾದ ಬಿಸಿಲು ಮತ್ತು ಮುಂಗಾರು ಆಗಮನ ವಿಳಂಬವಾಗಿದ್ದರಿಂದ ಟೊಮೆಟೋ ದರದಲ್ಲಿ ಏರಿಕೆಯಾಗಿದೆ ಎಂದು ರೈತರು ತಿಳಿಸಿದ್ದಾರೆ.

Read More

ನವದೆಹಲಿ: ಉಕ್ರೇನ್ ಸಂಘರ್ಷದ ನಂತರ ರಷ್ಯಾದೊಂದಿಗಿನ ಭಾರತದ ವ್ಯಾಪಾರವು ಉತ್ತೇಜನ ಕಂಡಿದ್ದು, ಉತ್ತಮ ವಿದೇಶಾಂಗ ನೀತಿ ಇಲ್ಲದಿದ್ದರೆ, ಪೆಟ್ರೋಲ್ ಬೆಲೆ, ಅಡುಗೆ ಎಣ್ಣೆ ಬೆಲೆ ತುಂಬಾ ಹೆಚ್ಚಾಗಿರುತ್ತಿತ್ತು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಹೇಳಿದ್ದಾರೆ. ದೆಹಲಿಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಭಾರತದ ಪ್ರಸ್ತುತ ವಿದೇಶಾಂಗ ನೀತಿ ಉತ್ತಮವಾಗಿದೆ ಎಂದು ಹೇಳಿದ್ದಾರೆ. ‘ದೇಶದ ರಾಜತಾಂತ್ರಿಕ ಕಾರ್ಯಕ್ರಮಗಳಲ್ಲಿ ಭಾರತೀಯ ಜನರ ಹಿತಾಸಕ್ತಿಗೆ ಆದ್ಯತೆ ನೀಡಬೇಕು. ಉಕ್ರೇನ್ ಸಂಘರ್ಷದ ನಂತರ ರಷ್ಯಾದೊಂದಿಗಿನ ಭಾರತದ ವ್ಯಾಪಾರವು ಉತ್ತೇಜನ ಕಂಡಿದೆ ಎಂದು ಹೇಳಿದರು. ಉಕ್ರೇನ್ ಯುದ್ಧದ ಬಗ್ಗೆ ಭಾರತದ ನಿಲುವನ್ನು ತೀಕ್ಷ್ಣವಾಗಿ ಪ್ರತಿಪಾದಿಸಲು ಮತ್ತು ವಿವರಿಸಲು ಹೆಸರುವಾಸಿಯಾದ ಡಾ ಜೈಶಂಕರ್, ಪಾಶ್ಚಿಮಾತ್ಯ ದೇಶಗಳೊಂದಿಗಿನ ರಷ್ಯಾದ ವ್ಯಾಪಾರ ಸಂಬಂಧದಲ್ಲಿನ ದೊಡ್ಡ ಬದಲಾವಣೆಯನ್ನು ವಿವರಿಸಿದರು. “ರಷ್ಯಾದ ಪ್ರಮುಖ ಆರ್ಥಿಕ ಪಾಲುದಾರ ಪಾಶ್ಚಿಮಾತ್ಯ ದೇಶಗಳು. ಉಕ್ರೇನ್ ಸಂಘರ್ಷದ ನಂತರ, ಆ ಮಾರ್ಗವನ್ನು ಮುಚ್ಚಲಾಯಿತು.…

Read More

ನವದೆಹಲಿ:  ವಿಧಾನಸಭೆ ಅಧಿವೇಶನದ ಹೊರತಾಗಿಯೂ ಕರ್ನಾಟಕದಲ್ಲಿ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಘೋಷಿಸದಿರುವ ಬಗ್ಗೆ ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಗೆದ್ದಾಗ ಬಿಜೆಪಿ ಅಬ್ಬರ ಜೋರಾಗುತ್ತದೆ ಆದರೆ, ‘ಸೋತಾಗ ಕುಸಿಯುತ್ತದೆ ಮತ್ತು ಅರಚುತ್ತದೆ’ ಎಂದು ಹೇಳಿದೆ. ರಾಜ್ಯ ಚುನಾವಣೆಯಲ್ಲಿ ಸೋತ ನಂತರ ಬಿಜೆಪಿ ಇನ್ನೂ ವಿಧಾನಸಭೆಯಲ್ಲಿ ತನ್ನ ನಾಯಕನನ್ನು ಆಯ್ಕೆ ಮಾಡಿಲ್ಲ. ಹೈಕಮಾಂಡ್ ನಾಯಕರು ತೂಗಿ ಅಳೆದು ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲಿ ತೊಡಗಿದ್ದಾರೆ. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಕೇಂದ್ರದ ವೀಕ್ಷಕರಾಗಿ ಕೇಂದ್ರ ಸಚಿವ ಮನ್‌ಸುಖ್ ಮಾಂಡವಿಯಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೇಮಕ ಮಾಡಿದ್ದಾರೆ. ಬೆಂಗಳೂರಿನಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದಿರುವ ಬಿಜೆಪಿಯಲ್ಲಿ ಇದು ಗುಂಪುಗಾರಿಕೆಯನ್ನು ತೋರಿಸುತ್ತದೆ ಮತ್ತು ಅದನ್ನು ‘ಅತ್ಯಂತ ಅಶಿಸ್ತಿನ’ ರಾಜಕೀಯ ಪಕ್ಷ ಎಂದು ಕರೆದರು.

Read More

ಕೋಲ್ಕತ್ತಾ: ಪಂಚಾಯತ್ ಚುನಾವಣೆಗೆ ಮುನ್ನ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಸುಳ್ಳಿನ ಬಗ್ಗೆ ಜನರಿಗೆ ಅರಿವಾಗಿರುವುದರಿಂದ ಅದರ ‘ಡಬಲ್-ಎಂಜಿನ್’ ಸರ್ಕಾರದ ಪರಿಕಲ್ಪನೆ ಹಳಿತಪ್ಪಿದೆ ಎಂದು ಹೇಳಿದ್ದಾರೆ. ‘ಬಿಜೆಪಿಯ ಅವಧಿ ಮುಗಿಯುತ್ತಿದೆ; ‘ಡಬಲ್-ಇಂಜಿನ್’ ಸರ್ಕಾರದ ಪರಿಕಲ್ಪನೆಯು ಹಳಿತಪ್ಪಿದೆ. ಅವರು ಮತ್ತೊಮ್ಮೆ ಸುಳ್ಳು ಭರವಸೆಗಳನ್ನು ನೀಡುತ್ತಾರೆ. ಆದರೆ, ಈ ಬಾರಿ ಅವರ ಸುಳ್ಳುಗಳ ಬಗ್ಗೆ ಜನರಿಗೆ ತಿಳಿದಿದೆ’ ಎಂದು ಅವರು ಹೇಳಿದರು. ಎಲ್‌ಪಿಜಿ ಬೆಲೆ ಏರಿಕೆ ಬಗ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಬಿಜೆಪಿ ಸರ್ಕಾರ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 1,200 ರೂ. ಗೆ ಏರಿಸಿರುವುದನ್ನು ಕಂಡು ನಾನು ನಿರಾಶೆಗೊಂಡಿದ್ದೇನೆ. ಆದರೆ, ಚುನಾವಣಾ ಸಮಯದಲ್ಲಿ ಅವರು ಸೋಪ್ ನೀಡುವುದಾಗಿ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ’ ಎಂದರು. ಬಿರ್‌ಭೂಮ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯ ನಿಧಿಯ ಸಹಾಯದಿಂದ ಬಾಮ್-ರಾಮ್-ಶ್ಯಾಮ್ ನಮ್ಮ ವಿರುದ್ಧ ಕೈಜೋಡಿಸಿದ್ದಾರೆ ಎಂಬುದನ್ನು ನಾವು ನೆನಪಿಟ್ಟುಕೊಳ್ಳಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ. ಅಲ್ಪಸಂಖ್ಯಾತರಿಗಾಗಿ ಐಕ್ಯಶ್ರೀ ಅಥವಾ ಮೇಧಾಶ್ರೀ…

Read More