ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚೆಗೆ ಗುರುತು ಸಿಗದ ಮೃತದೇಹಗಳು ಪತ್ತೆಯಾಗುತ್ತಿವೆ. ಹಂತಕರ ಪತ್ತೆಗೂ ಮುನ್ನ ಹತ್ಯೆಯಾದವರ ಗುರುತು ಪತ್ತೆಹಚ್ಚುವುದೇ ಸವಾಲಾಗಿದ್ದು ಈಗ ಪೀಣ್ಯ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿದೆ. ಈ ಕುರಿತ ಡಿಟೇಲ್ಸ್ ಇಲ್ಲಿದೆ ನೋಡಿ. ಇಂದು ಬೆಳಗ್ಗೆ ಸುಮಾರು 6 ಗಂಟೆ ಸಮಯ, ಬೆಂಗಳೂರಿನ ಚಿಕ್ಕ ಬಿದರಕಲ್ಲು ಸಮೀಪದ ಚನ್ನನಾಯಕನಪಾಳ್ಯದ ಕೆಲವು ಜನ ನಿದ್ದೆಯಿಂದೆದ್ದು ವಾಕಿಂಗ್ ಅಂತ ಹೋಗಿದ್ರು. ಅಲ್ಲಿನ ಚನ್ನನಾಯಕನಪಾಳ್ಯ ಬಯಲು ಎಂದೇ ಕರೆಯಲ್ಪಡುವ ಸ್ಥಳದಲ್ಲಿ ಗಿಡಗಳ ಬಳಿ ಬೆಂಕಿ ಉರಿಯುತ್ತಿದ್ದು, ಹೊಗೆಯಾಡುತ್ತಿತ್ತು. ಏನೋ ಹೋಗೆಯಾಡ್ತಿದೆಯಲ್ಲಾ ಅಂತ ಹತ್ತಿರ ಹೋಗಿ ನೋಡಿದ್ರೆ ನಿಗಿ-ನಿಗಿ ಕೆಂಡದಲ್ಲಿ, ಕಸದ ರಾಶಿಯ ಮೇಲಿನ ಬೆಂಕಿಯಲ್ಲಿ ವ್ಯಕ್ತಿಯೊಬ್ಬನ ಶವ ಸುಡುತ್ತಾ ಇತ್ತು.ಕೂಡಲೇ ಗಾಬರಿಗೊಂಡ ಸ್ಥಳೀಯರು ಪೀಣ್ಯಾ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿ ಪೀಣ್ಯ ಪೊಲೀಸ್ರು ಬೆಂಕಿ ನಂದಿಸಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ರು. ಅಷ್ಟರಲ್ಲಿ ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಸಿಗುತ್ತ ಅಂತ ಸ್ಥಳೀಯರನ್ನ ವಿಚಾರಸಿದ್ರೆ ಮೃತನ ಗುರುತನ್ನ ಯಾರು ಹೇಳಲಿಲ್ಲ.…
Author: Prajatv Kannada
ಬೆಂಗಳೂರು: ಇತ್ತೀಚಿಗೆ ಅಂತೂ ಸರ್ಕಾರಿ ಬಸ್ ಗಳು ಸಿಕ್ಕಪಟ್ಟೆ ಕೆಟ್ಟು ನಿಲ್ಲುತ್ತಾ ಇದೆ..ಹೀಗಾಗಿ ಪ್ರಯಾಣಿಕರಿಗೆ ಸಾಕಷ್ಟು ಕಿರಿಕಿರಿ ಆಗ್ತಿದೆ.ಇದರಿಂದ ನಿಗಮಕ್ಕೂ ಕೂಡ ಕೆಟ್ಟ ಹೆಸರು ಬರುತ್ತಿದೆ ಆದ್ರೆ ಇದೀಗ.ಇದನ್ನು ನಿಲ್ಲಿಸೋದಕ್ಕೆ ಶೀಘ್ರದಲ್ಲೇ ಸಾವಿರಕ್ಕೂ ಹೆಚ್ಚು ಪ್ರೀಮಿಯಂ ಆಧಾರಿತ ಬಸ್ ಗಳನ್ನ ಖರೀದಿಸಲು ಸರ್ಕಾರ ಮುಂದಾಗಿದೆ. ರಾಜ್ಯ ಸಾರಿಗೆ ನಿಗಮಗಳು ಜನ್ರ ನಾಡಿಮಿಡಿತ. ವರ್ಷಕ್ಕೆರೆಡು ರಾಷ್ಟ್ರಮಟ್ಟದ ಪ್ರಶಸ್ತಿ ,ಬೆಸ್ಟ್ ಸಾರ್ವಜನಿಕ ಸಾರಿಗೆ ಅನ್ನೋ ಗರಿ ಇದೆ.ಹೀಗಿದ್ದು ಇತ್ತೀಚಿಗೆ ಕೆಟ್ಟ ದಿನಗಳನ್ನು ಎದುರಿಸುತ್ತಾ ಇದೆ.ಬಸ್ ಗಳು ಫಿಟ್ ಇಲ್ಲ. ಆಕ್ಸಿಡೆಂಟ್ ಗಳು ಜಾಸ್ತಿ ಆಗ್ತಿತ್ತಿವೆ..ಸದ್ಯ ನಿಗಮದ ಹಲವು ಬಸ್ ಗಳು 9 ಲಕ್ಷ ದಾಟಿದ ಬಸ್ ಗಳೇ ಆಗಿವೆ.ಇದರಿಂದ ಸಾಕಷ್ಟು ಕಿರಿಕಿರಿ ಅನುಭವಿಸುತ್ತಿದ್ದ ನಿಗಮ ಇದೀಗ ಹೊಸ ಬಸ್ ಖರೀದಿನತ್ತ ಮುಖ ಮಾಡಿದೆ.ಈಗಾಗಲೇ ಎಲೆಕ್ಟ್ರಿಕ್ ಬಸ್ ಗಳನ್ನ ಖರೀದಿ ಮಾಡ್ತಾ ಇರೋ ನಿಗಮ, ಇದೀಗ ಶಕ್ತಿ ಯೋಜನೆಯಿಂದ ಬಸ್ ಗಳ ಬೇಡಿಕೆ ಬಂದ ಬೆನ್ನಲ್ಲೇ ಹೊಸ ಬಸ್ ಖರೀದಿ, ಸಿಬ್ಬಂದಿ ನೇಮಕ ಜತೆ ಆದಾಯ ಹೆಚ್ಚಳ…
ಬೆಂಗಳೂರು: ಇಂದಿನಿಂದ ಜುಲೈ 14ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು 5 ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ. ‘ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ’ ಶೀರ್ಷಿಕೆ ಅಡಿ ಸದನದ ಒಳಗೆ, ಹೊರಗೆ ಹೋರಾಟ ನಡೆಸಲು ಬಿಜೆಪಿ ತೀರ್ಮಾನ ಮಾಡಿದೆ. ಗಾಂಧಿ ಪ್ರತಿಮೆ ಬಳಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಧರಣಿ ಮಾಡಿದ್ರೆ, ಸದನದ ಒಳಗೆ ಹೋರಾಟ ನಡೆಸಲು ಬಿಜೆಪಿ ಶಾಸಕರು ಮುಂದಾಗಿದ್ದಾರೆ. ಹಾಗೂ ಫ್ರೀಡಂಪಾರ್ಕ್ನಲ್ಲಿ ಬಿಎಸ್ವೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಬಜೆಟ್ ಮಂಡನೆ ಮಾಡೋದಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿದ್ದತೆಯಲ್ಲಿದ್ದಾರೆ. ಗ್ಯಾರಂಟಿ ಘೊಷಣೆ ಜಾರಿ ಮಾಡೋದಕ್ಕೆ ಬಜೆಟ್ ಮಂಡನೆಗೆ ಸಭೆ ಮೇಲೆ ಸಭೆ ಮಾಡಿರೋ ಸಿಎಂ ಸಿದ್ದರಾಮಯ್ಯ ಗೆ ಗ್ಯಾರಂಟಿಗೆ ಹಣ ಹೊಂದಿಸೋದು ಸವಾಲಾಗಿದೆ. ಹೀಗಾಗಿ ಪ್ರಮುಖ ಇಲಾಖೆಗಳಿಗೆ ಅನುಧಾನ ಕಡಿತ ನಿಚ್ಚಳ ಎನ್ನಲಾಗ್ತಿದೆ. ಅಧಿವೇಶನದ ಸಿದ್ಧತೆಗಳನ್ನ ಸ್ಪೀಕರ್ ಖಾದರ್ ಪರಿಶೀಲನೆ ನಡೆಸಿ ಫೈನಲ್ ಟಚ್ ನೀಡಿದ್ರು…. ಎಸ್… ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7 ರಂದು ಮಂಡಿಸಲಿರುವ ಬಜೆಟ್ನಲ್ಲಿ ಪ್ರಮುಖ ಇಲಾಖೆಗಳ ಅನುದಾನ ಕಡಿತಗೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ. ಯಾಕಂದ್ರೆ ಚುನಾವಣಾ ಪೂರ್ವದಲ್ಲಿ ನೀಡಿರೋ ಗ್ಯಾರಂಟಿಗಳ ಜಾರಿ ಈ ಸರಕಾರದ ಆದ್ಯತೆಯಾಗಿದ್ದು ಇದಕ್ಕೆ ಸಾಕಷ್ಟು ಅನುಧಾನ ಬೇಕಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ 50 ರಿಂದ 60 ಸಾವಿರ ಕೋಟಿ ಅನುಧಾನ ಬೇಕಾಗಿದ್ದು ಇಷ್ಟು ಹಣವನ್ನು ಹೊಂದಿಸಬೇಕಾಗಿದೆ. ಕಳೆದ ಕೆಲ ತಿಂಗಳ ಹಿಂದಷ್ಟೇ ಬೊಮ್ಮಾಯಿ ಬಜೆಟ್ ಮಂಡಿಸಿದ್ದು ಅಲ್ಲಿಂದ ಇಲ್ಲಿಯವರೆಗೆ ಹಣಕಾಸು ವಿಚಾರದಲ್ಲಿ ಬಹುದೊಡ್ಡ ಸುಧಾರಣೆ ಏನು ಆಗಿಲ್ಲ.…
ಬೆಂಗಳೂರು: ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎಂಬ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎನ್ನುವ ಮೌಡ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ. ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದೇನೆ.” ಬಸವಣ್ಣನವರು 12ನೇ ಶತಮಾನದಲ್ಲೇ ಇಂಥಾ ಮೌಡ್ಯ ಮತ್ತು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದರು. ಜಾಗೃತಿ ಮೂಡಿಸಿದ್ದರು. ಶಿಕ್ಷಣ ದೊರೆತರೆ ಜಾತಿ, ಮೌಡ್ಯ ಹೋಗುತ್ತದೆ ಎನ್ನುವ ಮಾತು ಸುಳ್ಳಾಗಿದೆ ಎಂದರು. ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಾ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಯೋಜಿಸಿದ್ದ “ನೀನಲ್ಲದೆ ಮತ್ತಾರೂ ಇಲ್ಲವಯ್ಯಾ” ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ಜಾತಿಮುಕ್ತ ಸಮಾಜ ನಿರ್ಮಾಣ ಆಗಬೇಕು ಎನ್ನುವ ಬಸವಣ್ಣನವರ ಆಶಯ ಇನ್ನೂ ಈಡೇರಿಲ್ಲ. ವಿದ್ಯಾವಂತರಲ್ಲೇ ಜಾತಿ ತಾರತಮ್ಯ ಹೆಚ್ಚುತ್ತಿದೆ. ಬಸವಣ್ಣನವರು ಕನಸು ಕಂಡಿದ್ದ ಸಮಾಜ ನಿರ್ಮಾಣ ಆಗಬೇಕು. ಕಾಯಕ ಮತ್ತು ದಾಸೋಹ ಮೌಲ್ಯಗಳು ಹೆಚ್ಚಬೇಕು.…
ಬೆಂಗಳೂರು: ಇಂದಿನಿಂದ ಜುಲೈ 14ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು ಇಂದು ಮಧ್ಯಾಹ್ನ 12ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಅಧಿವೇಶನದಲ್ಲಿ ಎಷ್ಟು ವಿಧೇಯಕ ಮಂಡನೆ ಆಗಲಿದೆ ಎಂದು ಗೊತ್ತಾಗಲಿದೆ. ಸೌಹಾರ್ದಯುತವಾಗಿ ಅಧಿವೇಶನ ನಡೆಸಬೇಕೆಂದು ಸ್ಪೀಕರ್ ಮನವಿ ಮಾಡಿದ್ದಾರೆ. ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು(Legislature Session) ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ(Siddaramaiah) ಬಜೆಟ್ ಮಂಡಿಸಲಿದ್ದಾರೆ. 16ನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಹಲವು ವಿಷಯ ಪ್ರಸ್ತಾಪವಾಗಲಿದ್ದು ಸರ್ಕಾರ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳ(Congress Guarantees) ಅನುಷ್ಠಾನ ವಿಚಾರ, ಬಿಜೆಪಿ ಅವಧಿಯ ವಿವಾದಿತ ತಿದ್ದುಪಡಿ ಕಾಯ್ದೆಗಳನ್ನು ಕೈಬಿಡುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ಸಂಜೆ 6 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಹೈಕಮಾಂಡ್ ವೀಕ್ಷಕರಾದ ವಿನೋದ್ ತಾವಡೆ, ಮನ್ಸುಖ್ ಮಾಂಡವೀಯ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ. ಬಿಜೆಪಿ ಶಾಸಕಾಂಗ ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗುತ್ತೆ. ಶಾಸಕರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ಗೆ ಮಾಹಿತಿ ನೀಡಲಾಗುತ್ತೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ವಿಪಕ್ಷ ನಾಯಕ ಸ್ಥಾನ ಸಾಧ್ಯತೆ. ನಾನ್ ಲಿಂಗಾಯತ ನಿರ್ಧಾರಕ್ಕೆ ಬಂದರೆ ವಿ.ಸುನೀಲ್ ಕುಮಾರ್ಗೆ ಸ್ಥಾನ.
ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ಕ್ಷಣಗಣನೆ ಶುರುವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಒಟ್ಟು 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. 16ನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಹಲವು ವಿಷಯ ಪ್ರಸ್ತಾಪವಾಗಲಿದೆ. 16ನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಹಲವು ವಿಷಯ ಪ್ರಸ್ತಾಪವಾಗಲಿದ್ದು ಸರ್ಕಾರ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳ(Congress Guarantees) ಅನುಷ್ಠಾನ ವಿಚಾರ, ಬಿಜೆಪಿ ಅವಧಿಯ ವಿವಾದಿತ ತಿದ್ದುಪಡಿ ಕಾಯ್ದೆಗಳನ್ನು ಕೈಬಿಡುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಸದನದಲ್ಲಿ ಆಡಳಿತ ಪಕ್ಷಕ್ಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ಸಿದ್ಧತೆ ಮಾಡಿಕೊಂಡಿದ್ದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಲು ಆಡಳಿತ ಪಕ್ಷ ಕಾಂಗ್ರೆಸ್ ಸಜ್ಜಾಗಿದೆ.
ಬೆಂಗಳೂರು;- ನಗರ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ನೋಂದಣಿ ಮಾಡುವಾಗ ನಕಲಿ ಲಿಂಕ್ ಹಾಗೂ ಆಯಪ್ಗಳ ಬಗ್ಗೆ ಎಚ್ಚರವಹಿಸಿ ಎಂದು ಹೇಳಿದೆ. ಗ್ಯಾರಂಟಿ ಯೋಜನೆಗಳಿಗೆ ನಾಗರಿಕರು ಸೇವಾಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಸಿಕೊಳ್ಳಬೇಕು. ಆದರೆ ಸೈಬರ್ ಖದೀಮರು ಹಲವು ನಕಲಿ ಆಯಪ್ ಹಾಗೂ ಲಿಂಕ್ಗಳನ್ನು ಹರಿಯಬಿಟ್ಟು, ನಾಗರಿಕರ ಮಾಹಿತಿಗೆ ಕನ್ನ ಹಾಕುತ್ತಿದ್ದಾರೆ. ‘ಗ್ಯಾರಂಟಿ ಯೋಜನೆಗಳ ನೋಂದಣಿಗೆ ಸರ್ಕಾರ ಯಾವುದೇ ಆಯಪ್ ಅನ್ನು ಪರಿಚಯಿಸಿಲ್ಲ. ಆದರೆ ಹಲವು ನಕಲಿ ಆಯಪ್ಗಳು ಡೌನ್ಲೋಡ್ ಮಾಡಿಕೊಳ್ಳಲು ಲಭ್ಯವಿದೆ. ಫಲಾನುಭವಿಗಳು ಇದರ ಬಗ್ಗೆ ಎಚ್ಚರಿಕೆಯಿಂದಿರಬೇಕು. ಆಯಪ್ಗಳನ್ನು ರಿಪೋರ್ಟ್ ಮಾಡಬೇಕು. ಈ ಬಗ್ಗೆ ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ’ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಸ್.ಡಿ ಶರಣಪ್ಪ ತಿಳಿಸಿದ್ದಾರೆ. ಅಲ್ಲದೇ ಸೇವಾಸಿಂಧು ವೆಬ್ಸೈಟ್ ಮೂಲಕವೇ ಯೋಜನೆಗಳಿಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹಂಚಲಾಗುತ್ತಿರುವ ನಕಲಿ ಲಿಂಕ್ಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಹೇಳಿದ್ದಾರೆ.
ಬೆಂಗಳೂರು ;- ಚಾತುರ್ವರ್ಣ ವ್ಯವಸ್ಥೆ ಮಹಿಳೆ ಮತ್ತು ಶೂದ್ರರನ್ನು ಶಿಕ್ಷಣ ವಂಚಿತರನ್ನಾಗಿಸಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಚನ ಪಿತಾಮಹ ಫ.ಗು. ಹಳಕಟ್ಟಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಚಾತುರ್ವರ್ಣ ವ್ಯವಸ್ಥೆ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು ಮತ್ತು ಶೂದ್ರರಿಗೆ ಶಿಕ್ಷಣ ಭಾಗ್ಯವನ್ನು ಕಲ್ಪಿಸಿ ಕ್ರಾಂತಿ ಮಾಡಿದವರು ವಚನಕಾರರು ಮತ್ತು ಬಸವಣ್ಣನವರು’ ಎಂದರು. ಅತ್ಯಂತ ಕೆಳಜಾತಿಯಲ್ಲಿ ಜನಿಸಿ ಅತ್ಯುನ್ನತ ಎತ್ತರಕ್ಕೆ ಏರಿದ ಅಲ್ಲಮಪ್ರಭುರನ್ನು ಅನುಭವ ಮಂಟಪದ ಮುಖ್ಯಸ್ಥರನ್ನಾಗಿಸಿದ್ದರು. ಈ ಅನುಭವ ಮಂಟಪದ ಆಶಯವನ್ನು, ವಚನಗಳ ಮಹತ್ವವನ್ನು ಮುಂದಿನ ತಲೆಮಾರುಗಳಿಗೆ ದಾಟಿಸಿದವರಲ್ಲಿ ಫ.ಗು.ಹಳಕಟ್ಟಿ ಪ್ರಮುಖರು ಎಂದು ಸ್ಮರಿಸಿದರು. ಚಾತುವರ್ಣ ವ್ಯವಸ್ಥೆ ಕಾರಣಕ್ಕೆ ಶಿಕ್ಷಣದಿಂದ, ಸಂಪತ್ತಿನಿಂದ ಶೂದ್ರ ಸಮುದಾಯ ವಂಚಿತವಾಗಿತ್ತು. ಅದಕ್ಕೇ ಕಾಯಕ ಮತ್ತು ದಾಸೋಹ ಸಂಸ್ಕಾರದ ಮೂಲಕ ಸರ್ವರಿಗೂ ಶಿಕ್ಷಣ ಮತ್ತು ಅವಕಾಶಗಳಲ್ಲಿ ಸಮಪಾಲು ಸಿಗುವಂತೆ ಮಾಡಿದ್ದು ಬಸವಣ್ಣನವರು. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ ಇದೇ ಕಾಯಕ ಮತ್ತು ದಾಸೋಹ ಸಂಸ್ಕೃತಿಯನ್ನು ಪಾಲಿಸುತ್ತಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.