ರಾಯಚೂರು: ಇಂದು ಆಷಾಢ ಮಾಸದ ಗುರುಪೂರ್ಣಿಮಾ ಹಿನ್ನೆಲೆ ಮಂತ್ರಾಲಯದ ರಾಯರ ಮಠದಲ್ಲಿ ಗುರು ಪೂರ್ಣಿಮಾ ಸಂಭ್ರಮ ಜೋರಾಗಿದೆ. ಇಂದು ರಾಯರ ಮೂಲ ಬೃಂದಾವನಕ್ಕೆ ತಿರುಪತಿ ತಿರುಮಲ ದೇವಸ್ಥಾನದ ಶ್ರೀವಾರಿ ವಸ್ತ್ರ ಸಮರ್ಪಿಸಲಾಗಿದೆ. ಬಳಿಕ ರಾಯರ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.
Author: Prajatv Kannada
ಹುಬ್ಬಳ್ಳಿ: ಯಾರೋ ಕಿಡಗೇಡಿಗಳು ಚಲಿಸುತ್ತಿದ್ದ ವಂದೇ ಭಾರತ ರೈಲಿಗೆ ಚಲಿಸುತ್ತಿದ್ದಾಗಲೇ ಕಲ್ಲು ಎಸೆದಿರುವ ಘಟನೆ ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿ ಬರುವ ದಾವಣಗೆರೆಯಲ್ಲಿ ನಡೆದಿದೆ. ಹೌದು ಜೂನ್ 27 ರಂದು ಆರಂಭವಾದ ಧಾರವಾಡ ಬೆಂಗಳೂರು ಮಧ್ಯೆ ವಂದೇ ಭಾರತ ಟ್ರೈನ್ಗೆ ಯಾರೋ ಕಿಡಗೇಡಿಗಳು ಗಾಜಿಗೆ ಕಲ್ಲು ಎಸೆದಿದ್ದಾರೆ. ಎಸೆತದಿಂದ ಟ್ರೈನ್ ಗ್ಲಾಸ್ ಒಡೆದಿದ್ದು, ಪ್ರಯಾಣಿಕರು ಭಯಭೀತರಾಗಿದ್ದಾರೆ. ಇನ್ನು ಕಲ್ಲು ಎಸೆದವರನ್ನು ಹುಬ್ಬಳ್ಳಿಯ ನೈರುತ್ಯ ರೈಲ್ವೆ ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ…
ಧಾರವಾಡ: ಮೊದಲು ಯಾರು ಬೇಕಾದರೂ ಎಲ್ಲಿ ಬೇಕಾದಲ್ಲಿ ಬಾಂಬ್ ಹಾಕಿ ಓಡಿ ಹೋಗುತ್ತಿದ್ದರು. ಬಾಂಬ್ ಹಾಕಿದ ಮೇಲೆ ನಾವು ಅಳುತ್ತಾ ಕುಳಿತು ಬಿಡುತ್ತಿದ್ದೆವು. ಆದರೆ ಈಗ ಬಾಂಬ್ ಹಾಕಿದವರ ದೇಶಕ್ಕೆ ನುಗ್ಗಿ ಹೊಡೆಯುವ ಸಾಮರ್ಥ್ಯ ನಮ್ಮಲ್ಲಿ ಬೆಳೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು. ಧಾರವಾಡ (Dharwad) ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಆರೋಗ್ಯ ಶಿಬಿರ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಭಾರತದ ಮೇಲೆ ಯಾರೂ ಈಗ ಕಣ್ಣು ಕೆಕ್ಕರಿಸಿ ನೋಡುವುದಿಲ್ಲ. ಹಾಗೆ ನಾವು ನಮ್ಮ ಸೈನ್ಯವನ್ನು ಬಲಪಡಿಸಿದ್ದೇವೆ ಎಂದರು. ಸದ್ಯದಲ್ಲೇ ರಾಮ ಮಂದಿರ ನಿರ್ಮಾಣ ಆಗಲಿದೆ, ನೀವೆಲ್ಲ ಅಯೋಧ್ಯೆಗೆ ರಾಮ ಮಂದಿರ ಉದ್ಘಾಟನೆಗೆ ಬರಬೇಕು ಎಂದು ಕಾರ್ಯಕ್ರಮದಲ್ಲಿ ಜೋಶಿ ಕರೆ ನೀಡಿದರು.
ಚಿಕ್ಕಬಳ್ಳಾಪುರ: ಇಂದು ಚಿಕ್ಕಬಳ್ಳಾಪುರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಲಿದ್ದಾರೆ. ನಂದಿಗಿರಿಧಾಮ, ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ ದೆಹಲಿಯಿಂದ ಐಎಎಫ್ಎಂಐ-17 ವಿಶೇಷ ವಿಮಾನದ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಮಧ್ಯಾಹ್ನ 3.55ಕ್ಕೆ ಹೆಲಿಕಾಪ್ಟರ್ ಮೂಲಕ ಮುದ್ದೇನಹಳ್ಳಿಗೆ ತೆರಳುತ್ತಾರೆ. ಹೀಗಾಗಿ ಭದ್ರತಾ ದೃಷ್ಟಿಯಿಂದ ಜುಲೈ 2ರ ಬೆಳಗ್ಗೆ 6 ಗಂಟೆಯಿಂದ ಜುಲೈ 3ರ ಸಂಜೆ 6 ಗಂಟೆಯ ವರೆಗೆ ನಂದಿಗಿರಿಧಾಮ ಮತ್ತು ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರದಲ್ಲಿ ದ್ರೌಪದಿ ಮುರ್ಮು ಭೇಟಿ ಹಿನ್ನಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. 60 ಪಿಎಸ್ಐಗಳು, ಕೆಎಸ್ಆರ್ಪಿಯ 3 ತುಕಡಿ, 3 ಎಸ್ಪಿಗಳು, 10 ಡಿವೈಎಸ್ಪಿಗಳು, 28 ಪೊಲೀಸ್ ಇನ್ಸ್ಪೆಕ್ಟರ್, 700 ಪೊಲೀಸ್ ಸಿಬ್ಬಂದಿಯನ್ನು ನಿಯೋಜನ ಮಾಡಲಾಗಿದೆ. ಸತ್ಯಸಾಯಿ ಯೂನಿವರ್ಸಿಟಿ ಫಾರ್ ಹ್ಯೂಮನ್ ಎಕ್ಸಲೆನ್ಸ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕ್ರೀಡೆ ಮತ್ತು ದೇಹದಾರ್ಢ್ಯತೆ ವಿಭಾಗದಲ್ಲಿ ಪುಲ್ಲೇಲ ಗೋಪಿಚಂದ್, ಆರೋಗ್ಯ ವಿಭಾಗದಲ್ಲಿ ಡಾ.ಪ್ರತಿಮಾ ಮೂರ್ತಿ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಪ್ರೊ.ಅಜಯ್…
ಬೆಳಗಾವಿ: ಆಗಸ್ಟ್ನಿಂದ ಗೃಹಲಕ್ಷ್ಮಿ (Gruhalakshmi) ಯೋಜನೆ ಮನೆಯ ಯಜಮಾನಿಗೆ ಸಿಗುತ್ತದೆ. ಕೊಟ್ಟ ಭಾಷೆ ಉಳಿಸಿಕೊಳ್ಳುತ್ತಿದ್ದೇವೆ. ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಜನರ ನಿರೀಕ್ಷೆಗೆ ತಕ್ಕ ಹಾಗೆ ಕೆಲಸ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ (Belagavi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜುಲೈ 14ರಿಂದ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆ ಶುರು ಬಗ್ಗೆ ಮಾತನಾಡಿಕೊಂಡಿದ್ದೇವೆ. ಜುಲೈ 3 ಅಥವಾ 4ನೇ ತಾರೀಖು ಈ ಬಗ್ಗೆ ಘೋಷಣೆ ಮಾಡುತ್ತೇವೆ ಎಂದರು. ರಾಜ್ಯ ಕಾಂಗ್ರೆಸ್ (Congress) ಸರ್ಕಾರದಲ್ಲಿ ವೈಎಸ್ಟಿ (YST) ಸಂಗ್ರಹ ಎಂಬ ಹೆಚ್ಡಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿಯವರು (H.D.Kumaraswamy) ಕೂಡಾ ಸರ್ಕಾರ ನಡೆಸಿದಂತ ಅನುಭವ ಇದ್ದವರು. ಕುಮಾರಸ್ವಾಮಿ ಅಣ್ಣ ಹಿರಿಯರು, ರಾಜಕೀಯ ಮುತ್ಸದ್ಧಿಗಳು. ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಗೊತ್ತಿಲ್ಲ. ಸರ್ಕಾರ ರಚನೆ ಆಗಿ ಈಗ ಒಂದು ತಿಂಗಳು ಐದು ದಿನ ಆಗಿದೆ. ಸರ್ಕಾರಕ್ಕೆ ಕೆಲಸ ಮಾಡಲು…
ಗುರು ಪೂರ್ಣಿಮಾ ಸೂರ್ಯೋದಯ: 05.58 AM, ಸೂರ್ಯಾಸ್ತ : 06.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಆಷಾಢ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಗ್ರೀಷ್ಮ ಋತು, ತಿಥಿ: ಇವತ್ತು ಹುಣ್ಣಿಮೆ 05:08 PM ತನಕ ನಂತರ ಪಾಡ್ಯ ನಕ್ಷತ್ರ: ಇವತ್ತು ಮೂಲ 11:02 AM ತನಕ ನಂತರ ಆಷಾಢ ಯೋಗ: ಇವತ್ತು ಬ್ರಹ್ಮ 03:45 PM ತನಕ ನಂತರ ಇಂದ್ರ ಕರಣ: ಇವತ್ತು ವಿಷ್ಟಿ 06:47 AM ತನಕ ನಂತರ ಬವ 05:08 PM ತನಕ ನಂತರ ಬಾಲವ ರಾಹು ಕಾಲ: 07:30 ನಿಂದ 09:00 ವರೆಗೂ ಯಮಗಂಡ: 10:30 ನಿಂದ 12:00 ವರೆಗೂ ಗುಳಿಕ ಕಾಲ: 03:00 ನಿಂದ 04:30 ವರೆಗೂ ಅಮೃತಕಾಲ: 05.14 AM to 06.41 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:54 ನಿಂದ ಮ.12:46 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc…
ಬೆಂಗಳೂರು ;- ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎಂಬ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎನ್ನುವ ಮೌಢ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ. ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ಬಸವಣ್ಣನವರು 12ನೇ ಶತಮಾನದಲ್ಲೇ ಇಂಥ ಮೌಢ್ಯ ಮತ್ತು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದರು. ಜಾಗೃತಿ ಮೂಡಿಸಿದ್ದರು ಎಂದು ತಿಳಿಸಿದರು. ಎಲ್ಲರಿಗೂ ಶಿಕ್ಷಣ ದೊರೆತರೆ ಜಾತಿ ವ್ಯವಸ್ಥೆ ಹೋಗುತ್ತದೆ ಎಂದುಕೊಂಡಿದ್ದೆ. ಆದರೆ ಅದು ಆಗುತ್ತಿಲ್ಲ. ಶಿಕ್ಷಣ ದೊರೆತರೆ ಜಾತಿ, ಮೌಢ್ಯ ಹೋಗುತ್ತದೆ ಎನ್ನುವ ಮಾತು ಸುಳ್ಳಾಗಿದೆ. ನಮ್ಮ ದೇಶದಲ್ಲಿ ಜಾತಿ ವ್ಯವಸ್ಥೆ ಬಹಳ ಆಳವಾಗಿ ಬೇರುಬಿಟ್ಟಿದೆ. ಯಾವ ಸಮಾಜದಲ್ಲಿ ಚಲನೆಯಿರುವುದಿಲ್ಲವೋ ಆಗ ವ್ಯವಸ್ಥೆ ಬದಲಾವಣೆಯಾಗುವುದಿಲ್ಲ. ಇಂದು ವಿದ್ಯಾವಂತರೂ ಜಾತಿ ವ್ಯವಸ್ಥೆಗೆ ಈಡಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ವಿದ್ಯೆ ಜ್ಞಾನದ ವಿಕಾಸಕ್ಕೆ ಕಾರಣವಾಗಬೇಕು. ಆದರೆ ಸಂಕುಚಿತ ಭಾವನೆ ಹೆಚ್ಚಾಗುತ್ತಿದೆ. ಕುವೆಂಪು ಅವರು ಹೇಳಿದಂತೆ…
ಬೆಂಗಳೂರು ;- ಲವ್ ಮಾಡುವಾಗ ಮದುವೆ ಆಗುವುದಾಗಿ ಹೇಳಿ ಬಳಿಕ ಮದುವೆ ಆಗದಿದ್ದರೆ ಅದು ವಂಚನೆ ಅಲ್ಲ ಎಂದು ಬೆಂಗಳೂರಿನ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕ್ರಿಮಿನಲ್ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಪ್ರಕರಣದಲ್ಲಿ ಆರೋಪಿಯು ಸಂತ್ರಸ್ತೆ ಎಂದಿರುವವರಿಗೆ ಪ್ರೀತಿಸುವ ಸಂದರ್ಭದಲ್ಲಿ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಇದಾದ ಬಳಿಕ ಇಬ್ಬರ ನಡುವಿನ ಸಂಬಂಧ ದೂರವಾಗಿದೆ. ಈ ಪ್ರಕ್ರಿಯೆಯನ್ನು ವಂಚನೆ ಆರೋಪದಲ್ಲಿ ವ್ಯಾಪ್ತಿಗೆ ತರಲಾಗುವುದಿಲ್ಲ. ಅಲ್ಲದೆ, ಅರ್ಜಿದಾರರನ್ನು ವಂಚನೆ ಆರೋಪದಲ್ಲಿ ಅಪರಾಧಿ ಎಂದು ನಿರ್ಣಯಿಸಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ. ಜೊತೆಗೆ, ಪ್ರಸ್ತುತ ಪ್ರಕರಣದಲ್ಲಿ ವಯಸ್ಕರಾದ ಸಂತ್ರಸ್ತೆ ಮತ್ತು ಅರ್ಜಿದಾರರು ಒಟ್ಟಾಗಿ ತಿರುಗಾಡಿದ್ದಾರೆ. ಅಲ್ಲದೇ, ಮದುವೆಯಾಗುವುದಾಗಿ ಒಪ್ಪಿಕೊಂಡು ಬಳಿಕ ಮದುವೆ ಆಗುವುದಕ್ಕೆ ಸಾಧ್ಯವಾಗಿಲ್ಲ. ಐಪಿಸಿ ಸೆಕ್ಷನ್ 415ರ ಪ್ರಕಾರ ಮೋಸ ಎಂದು ಪರಿಗಣಿಸಲಾಗದು. ಹೀಗಾಗಿ ಮೇಲ್ಮನವಿದಾರನನ್ನು ವಂಚನೆ ಆರೋಪದಲ್ಲಿ ಶಿಕ್ಷೆಗೆ ಗುರಿಪಡಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ.
ಬೆಂಗಳೂರು ;- ಕಾಲಕೂಡಿ ಬಂದಾಗ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಜೆಪಿ ಭವನದಲ್ಲಿ ಮಾತನಾಡಿದ ಅವರು, ಕಾಲವೂ ಕೂಡಿ ಬರುತ್ತದೆ, ರಾಜ್ಯದಲ್ಲಿ ಜೆಡಿಎಸ್ ಸರಕಾರವೂ ಬರುತ್ತದೆ. ಪಕ್ಷದಲ್ಲಿ ನಿಷ್ಠರಾಗಿ ಉಳಿಯುವ ಎಲ್ಲರಿಗೂ ಅಧಿಕಾರ, ಜನರ ಸೇವೆ ಮಾಡುವ ಅವಕಾಶ ಸಿಗುತ್ತದೆ ಎಂದು ಹೇಳಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ಸಮರ್ಥವಾಗಿ ಎದುರಿಸುವ ಕುರಿತು ಶಾಸಕರಿಗೆ ಟಿಪ್ಸ್ ನೀಡಿದ ಎಚ್ಡಿಡಿ ಪತಿಕ್ರೆಗಳನ್ನು ಗಂಭೀರವಾಗಿ ಓದುವಂತೆ, ಸುದ್ದಿ ಮಾಧ್ಯಮಗಳನ್ನು ಗಮನಿಸುವಂತೆ ಸಲಹೆ ನೀಡಿದ್ದಾರೆ. ಜನರ ಸಮಸ್ಯೆಗಳನ್ನು ಸರಕಾರದ ಮುಖಕ್ಕೆ ಹಿಡಿಯಿರಿ. ಹೋರಾಡುವುದಕ್ಕೆ ಅಂಜಿಕೆ, ಅಳಲು ಏಕೆ. ಇವತ್ತಿನ ರಾಜ್ಯ ಮತ್ತು ದೇಶದ ರಾಜಕಾರಣ ಗೊಂದಲಮಯವಾಗಿದೆ. ನಾವು ಜನನಿಷ್ಠರಾಗಿ ಅವರ ಜತೆ ನಿಲ್ಲೋಣ ಎಂದು ಶಾಸಕರನ್ನು ಹುರಿದುಂಬಿಸಿದ್ದಾರೆ. ಯಾರೂ ಎದೆಗುಂದಬೇಕಿಲ್ಲ. ಪಕ್ಷ ಕಟ್ಟಿ. ಸೋಲಿನಿಂದ ಹತಾಶರಾಗುವುದು ಬೇಡ. ಛಲವಿದ್ದರೆ ಗೆಲುವು ಖಚಿತ. ಅಧೈರ್ಯವೇ ಅವಸಾನಕ್ಕೆ ನಾಂದಿ ಆಗುತ್ತದೆ ಎಚ್ಚರ ಇರಲಿ. ಪಕ್ಷವನ್ನು ಉಳಿಸಲೇಬೇಕು, ಈ…
ಬೆಂಗಳೂರು ;– ಸಿಎಂ ಸಿದ್ದರಾಮಯ್ಯ ಅವರು ಮುಂದಿನ ರಾಜಕೀಯ ನಡೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜನರ ಪ್ರೀತಿ ವಿಶ್ವಾಸ, ಗೌರವ ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ. ಚುನಾವಣೆಯಿಂದ ನಿವೃತ್ತಿ ಅಷ್ಟೇ. ಆದ್ರೆ, ರಾಜಕೀಯ ನಿವೃತ್ತಿ ಆಗುವುದಿಲ್ಲ, ನಾನು ನಿಮ್ಮ ಪರವಾಗಿ ಹೋರಾಟ ಮಾಡೇ ಮಾಡುತ್ತೇವೆ. ಅವಕಾಶ ವಂಚಿತರ ಪರವಾಗಿ ಇರುತ್ತೇ, ಹೋರಾಟ ಮಾಡುತ್ತೇನೆ ಎಂದರು. ಎರಡನೇ ಬಾರಿ ಸಿಎಂ ಆಗುವ ಅವಕಾಶ ಸಿಕ್ಕಿದೆ. ಜನರ ಆಶೀರ್ವಾದ ಸಿಕ್ಕಿದ್ದು, ಐದು ಗ್ಯಾರೆಂಟಿ ಜೊತೆಗೆ ಬೇರೆ ಭರವಸೆಯನ್ನ ಕೊಟ್ಟಿದ್ದೇನೆ. ರಾಜಕೀಯಕ್ಕಾಗಿ ಕೆಲವರು ಟೀಕೆ ಮಾಡಬಹುದು. 2013ರಲ್ಲಿ 6 ಭರವಸೆಯನ್ನ ಈಡೇರಿಸಿದ್ದೆವೆ. 5 ಗ್ಯಾರೆಂಟಿಗಳನ್ನ ಈ ಬಜೆಟ್ ನಲ್ಲಿ ಘೋಷಣೆ ಮಾಡುತ್ತೇವೆ. ಯಾರು ಏನೇ ಹೇಳಿದರೂ ಗ್ಯಾರೆಂಟಿ ಪೂರೈಕೆ ಬೇಕೇ ಬೇಕು. 50 ರಿಂದ 60 ಸಾವಿರ ಕೋಟಿ ರೂ. ಹಣ ಗ್ಯಾರೆಂಟಿಗೆ ಖರ್ಚಾಗುತ್ತದೆ. ನಾವು ಅಧಿಕಾರಕ್ಕೆ ಬಂದು ಇವತ್ತಿಗೆ 50 ದಿನ ಆಗಿದೆ. ಐದು ಗ್ಯಾರೆಂಟಿಗಳನ್ನ ಚಾಚು ತಪ್ಪದೇ…