ಮಂಡ್ಯ :- ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಪಿ.ಸ್ವಾಮಿ ಅವರ ಪ್ರಚಾರದ ಭರಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಪ್ರಚಾರಕ್ಕೆ ಮತ್ತಷ್ಟು ಪುಷ್ಟಿ ನೀಡಲು ಸೋಮವಾರ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಪ್ರಚಾರದ ಅಖಾಡಕ್ಕೆ ಧುಮುಕಿ ಮದ್ದೂರು ಪಟ್ಟಣದ ವಿವಿಧೆಡೆ ಭರ್ಜರಿ ರೋಡ್ ಶೋ ನಡೆಸಿ ಎಸ್.ಪಿ.ಸ್ವಾಮಿ ಅವರ ಪರ ಮತ ಯಾಚಿಸಿದರು. ಮದ್ದೂರು ಪಟ್ಟಣದ ಪ್ರವಾಸಿ ಮಂದಿರದ ವೃತ್ತಕ್ಕೆ ಸಂಜೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದೆ ಸುಮಲತಾ ಅಂಬರೀಶ್, ನಟಿ ತಾರಾ ಅನುರಾಧ ಮತ್ತು ಗಣ್ಯರನ್ನು ಬಿಜೆಪಿ ತಾಲೂಕು ಘಟಕ ಹಾಗೂ ಅಭ್ಯರ್ಥಿ ಎಸ್.ಪಿ.ಸ್ವಾಮಿ ಅದ್ದೂರಿ ಸ್ವಾಗತ ನೀಡಿ ಬರಮಾಡಿಕೊಂಡರು. ಬಳಿಕ ಹಳೇ ಎಂ.ಸಿ.ರಸ್ತೆ ಮೂಲಕ ತೆರೆದೆ ವಾಹನದಲ್ಲಿ ರೋಡ್ ಶೋ ನಡೆಸಿ ರಾಮಮಂದಿರ ಪಾರ್ಕ್ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ ಬಿಜೆಪಿ ಅಭ್ಯರ್ಥಿ ಎಸ್.ಪಿ.ಸ್ವಾಮಿ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಸತತ 16 ವರ್ಷಗಳ ಕಾಲ ಸಮಾಜ ಸೇವೆ ಮತ್ತು ಕೋವಿಡ್ ಸೇರಿದಂತೆ…
Author: Prajatv Kannada
ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗಾಗಿ ಇಡೀ ಬದುಕನ್ನು ಮೀಸಲಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವ ಮೇಲೆ ಜನರು ವಿಶ್ವಾಸ ಇಟ್ಟಿದ್ದಾರೆ. ಡಬಲ್ ಇಂಜಿನ್ ಸರ್ಕಾರದ(Double engine Govt) ಕೊಡುಗೆ ರಾಜ್ಯದ ಜನರಿಗೆ ಗೊತ್ತು. ರಾಜ್ಯದ ರೈಲ್ವೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ನೀಡಿದೆ. ಕಾಂಗ್ರೆಸ್ಸಿಗರು ಮುಕ್ತ ಮನಸ್ಸಿನಿಂದ ನೋಡಿದರೇ ಸಾಧನೆಗಳು ಕಾಣುತ್ತೆ. ರಷ್ಯಾ-ಉಕ್ರೇನ್ ಯುದ್ಧ ವೇಳೆ ವಿದ್ಯಾರ್ಥಿಗಳನ್ನು ಕರೆತರಲಾಯ್ತು. ನಂಬಿಕೆಯ ಆಧಾರದಲ್ಲಿ ಮೋದಿ ಬಂದಾಗ ಜನರು ಸೇರುತ್ತಾರೆ. ಕಾಂಗ್ರೆಸ್ಸಿಗರು ಹತಾಶೆಯಿಂದ ಪ್ರಧಾನಿ ಮೋದಿ ಟೀಕೆ ಮಾಡುತ್ತಾರೆ. ಶಾಸಕ ಪ್ರಿಯಾಂಕ್ ಖರ್ಗೆ ಅವರು ತಂದೆಯ ಹೆಸರಿನಲ್ಲಿ ರಾಜಕೀಯ ಮಾಡುತ್ತಾರೆ. ಪ್ರಧಾನಿ ಮೋದಿ ರಾಜ್ಯಕ್ಕೆ ಬಂದ ಮೇಲೆ ಸರ್ವೆ ವರದಿ ಗಮನಿಸಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿ ಮ್ಯಾಜಿಕ್ ನಂಬರ್ ಕ್ರಾಸ್ ಮಾಡುತ್ತೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ(CT Ravi) ಹೇಳಿದ್ದಾರೆ.
ಕೊಪ್ಪಳ: ನನ್ನ ಸೋಲಿಸೋಕೆ ಇದು ಗುಜರಾತ್ ಅಲ್ಲ, ಇದು ಕರ್ನಾಟಕ ಎಂದು ಅಮಿತ್ ಶಾ ಹೇಳಿಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadeesh Shettar) ತೀರುಗೇಟು ನೀಡಿದ್ದಾರೆ. ಕೊಪ್ಪಳ(Koppala) ದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡುತ್ತಾ ಶೆಟ್ಟರ್, ಸವದಿ 50 ಸಾವಿರ ಮತಗಳ ಅಂತರದಿಂದ ಸೋಲ್ತಾರೆ ಎನ್ನೋ ಅಮಿತ್ ಶಾ (Amitshah) ಹೇಳಿಕೆಗೆ ತೀರುಗೇಟು ನೀಡಿದರು. ಹುಬ್ಬಳ್ಳಿಯ ಜನರ ಹೃದಯದಲ್ಲಿದ್ದೇನೆ. ಹುಬ್ಬಳ್ಳಿ (Hubballi) ಜನ ಏನು ಅಂತ ನಂಗೆ ಗೊತ್ತಿದೆ. ನಾನೇನು ಎನ್ನೋದು ನನ್ನ ಜನತೆಗೆ ಗೊತ್ತಿದೆ. ನಾನು ಗೆದ್ದು ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನನ್ನನ್ನ ಕಾಂಗ್ರೆಸ್ ಸೇರ್ಪಡೆಯಾಗುವಂತೆ ಮಾಡಿದ್ದೇ ಬಿಜೆಪಿ. ರಾಜ್ಯದ ಕೆಲವೇ ಕೆಲವು ಜನರ ಕಪಿಮುಷ್ಠಿಯಲ್ಲಿ ಬಿಜೆಪಿ ಇದೆ. ನಂಗೆ ಎಲ್ಲಾ ಕೊಟ್ಟಿದ್ದೀವಿ ಅಂತಾರೆ. ನಮ್ಮ ಕುಟುಂಬ ಬಿಜೆಪಿಗೆ ಏನು ಮಾಡಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ (BJP) ಕಟ್ಟೋಕೆ ಶೆಟ್ಟರ್ ಶ್ರಮವಿದೆ. ನಂಗೆ ಒಬ್ಬ ಎಂಎಲ್ಎ ರೀತಿ ಪತ್ರ ಬರೀರಿ ಅಂತಾರೆ. ನಾನು ರಾಜಕೀಯಕ್ಕೆ…
ಚಾಮರಾಜನಗರ: ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಬಿಜೆಪಿ (BJP) ಸರ್ಕಾರ ಎಷ್ಟು ಲೂಟಿ ಮಾಡಿದೆಯೋ ಅಷ್ಟನ್ನೂ ಜನರಿಗೆ ವಾಪಸ್ ಕೊಡ್ತೀವಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದರು. ನಗರದಲ್ಲಿ ಕಾಂಗ್ರೆಸ್ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಪ್ರಕಾರ ಆಯ್ಕೆಯಾಗಿರುವ ಸರ್ಕಾರವಲ್ಲ. ಶಾಸಕರನ್ನು ಖರೀದಿಸಿ ಕದ್ದು ರಚನೆ ಮಾಡಿರುವ ಸರ್ಕಾರ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಗನ ಬಳಿ 8 ಕೋಟಿ ಸಿಕ್ತು. ಪಿಎಸ್ಐ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ ಹೀಗೆ ಹಗರಣಗಳ ಪಟ್ಟಿಯೇ ಇದೆ. ಆದರೆ ಕರ್ನಾಟಕಕ್ಕೆ ಬರುತ್ತಿರುವ ಮೋದಿ ಈ ಭ್ರಷ್ಟಾಚಾರದ ಬಗ್ಗೆ ಚಕಾರವೆತ್ತುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. 40% ಕಮಿಷನ್ ಆರೋಪದ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಮೋದಿಯವರೇ? ಯಾರನ್ನು ಜೈಲಿಗೆ ಕಳಿಸಿದ್ದೀರಿ, ಏನು ತನಿಖೆ ಮಾಡಿದ್ದೀರಿ ಎಂದು ಪ್ರಧಾನಿ ಮೋದಿ (Narendra Modi) ಅವರನ್ನು ಪ್ರಶ್ನಿಸಿದರು. ಕಾಂಗ್ರೆಸ್ ಎಲ್ಲ ನಾಯಕರ ಹೆಸರನ್ನು ಹೇಳುತ್ತದೆ. ಆದರೆ ಬಿಜೆಪಿ ನರೇಂದ್ರ ಮೋದಿ ಅವರ…
ಚಿಕ್ಕಮಗಳೂರು: ಇಂದು ಕಾಫಿನಾಡಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಆಗಮಿಸಲಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ರೋಡ್ ಶೋ ನಡೆಸಿ, ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ (HD Tammaiah)ಅವರ ಪರ ಮತಯಾಚನೆ ಮಾಡಲಿದ್ದಾರೆ. ಕೆಇಬಿ ಸರ್ಕಲ್ ನಿಂದ ಅಜಾದ್ ಪಾರ್ಕ್ ಸರ್ಕಲ್ವೆರೆಗೂ ರೋಡ್ ಶೋ ನಡೆದು, ಕೊನೆಗೆ ಆಜಾದ್ ಪಾರ್ಕ್ನಲ್ಲಿ ನಡೆಯುವ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗುತ್ತಾರೆ. ರೋಡ್ ಶೋ ನಲ್ಲಿ 20 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದ್ದು, ಬಿಜೆಪಿ ಭದ್ರಕೋಟೆಯಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಕಾವು ತಾರಕಕ್ಕೇರಿದೆ. ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಶಕ್ತಿ ಪ್ರದರ್ಶನವಾಗುತ್ತಿದೆ. ನಿನ್ನೆ ಬಿಜೆಪಿಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿರುಸಿನ ಪ್ರಚಾರ ನಡೆಸಿದರು. ಇತ್ತ ಕಾಂಗ್ರೆಸ್ನಲ್ಲಿ ನಾಯಕ ರಾಹುಲ್ ಗಾಂಧಿಯವರ ಪ್ರಚಾರದ ಭರಾಟೆ ಜೋರಾಗಿಯೇ ಇತ್ತು. ಹಾಗೇ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಹಲವು ಮಹತ್ವದ ಘೋಷಣೆಗಳನ್ನು…
ಚಾಮರಾಜನಗರ: ಇಂದುಚಾಮರಾಜನಗರ ಜಿಲ್ಲೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ(Minister Amit Shah) ಪ್ರಚಾರ ನಡೆಸಲಿದ್ದಾರೆ. ಹನೂರು, ಕೊಳ್ಳೇಗಾಲ ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆ ಮಾಡಲಿದ್ದಾರೆ. ಹನೂರಿನ ಆರ್.ಎಸ್.ದೊಡ್ಡಿ ಬಳಿಯ ಮೈದಾನದಲ್ಲಿ ಬಿಜೆಪಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಹನೂರು ಬಿಜೆಪಿ ಅಭ್ಯರ್ಥಿ ಪ್ರೀತನ್ ನಾಗಪ್ಪ ಪರ ಮತಯಾಚನೆ ಮಾಡಲಿದ್ದಾರೆ. ಬಳಿಕ ಕೊಳ್ಳೇಗಾಲ ಕ್ಷೇತ್ರದ ಸಂತೇಮರಹಳ್ಳಿಯಲ್ಲಿ ಕೊಳ್ಳೇಗಾಲ ಅಭ್ಯರ್ಥಿ ಎನ್.ಮಹೇಶ್ ಪರ ಮತಯಾಚಿಸಲಿದ್ದಾರೆ. ಹಾಗೂ ಸಿದ್ದರಾಮಯ್ಯ ಮಣಿಸಲು ಕೇಂದ್ರ ಸಚಿವ ಅಮಿತ್ ಶಾ ರಣತಂತ್ರ ಹೆಣೆದಿದ್ದು ಬೆಳಗ್ಗೆ 11 ಗಂಟೆಗೆ ವರುಣ ಕ್ಷೇತ್ರದ ಹೊಸಕೋಟೆ ಬಳಿ ಸಮಾವೇಶ ನಡೆಸಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ(Former CM Yeddyurappa), ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಭಾಗಿಯಾಗಲಿದ್ದಾರೆ.
ಲಕ್ನೋ: ಐಪಿಎಲ್ (IPL 2023) ಹಬ್ಬದಲ್ಲಿ ಪ್ರತಿದಿನವೂ ಒಂದೊಂದು ವಿಶೇಷತೆಗಳು ಕಂಡುಬರ್ತಿದೆ. ಅದರಲ್ಲೂ ಆರ್ಸಿಬಿ (RCB) ಮ್ಯಾಚ್ ಇದ್ದರೆ ಅಭಿಮಾನಿಗಳಂತೂ ಸುದ್ದಿಯಲ್ಲೇ ಇರ್ತಾರೆ. ಸೋಮವಾರ ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ವಿರುದ್ಧ ನಡೆಯುತ್ತಿದ್ದ ಪಂದ್ಯದ ವೇಳೆ ಯುವತಿಯರಿಬ್ಬರು ʻಒಂದು ಹುಡ್ಗನ್ನ ಪಟಾಯಿಸಿಕೊಡು ವಿರಾಟ್ʼ ಅಂತಾ ಪೋಸ್ಟರ್ ಹಿಡಿದುಕೊಂಡು ಸುದ್ದಿಯಾಗಿದ್ದಾರೆ. ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್ ಟೂರ್ನಿಯಲ್ಲಿ ಆರ್ಸಿಬಿ ತಂಡಕ್ಕೆ ಸಾಕಷ್ಟು ಟ್ರೆಂಡ್ ಇದೆ. ಇಲ್ಲಿಯವರೆಗೂ ಒಂದೇ ಒಂದು ಬಾರಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದೇ ಇದ್ದರೂ ಆರ್ಸಿಬಿ, ಇತರೆ ಎಲ್ಲಾ ತಂಡಗಳಿಗಿಂತಲೂ ಅತ್ಯಂತ ಹೆಚ್ಚಿನ ಅಭಿಮಾನಿಗಳನ್ನ ಹೊಂದಿದೆ. ಕೆಕೆಆರ್ (KKR) ವಿರುದ್ಧ ತವರಿನಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ಫ್ಯಾನ್ಸ್ ʻನಮ್ಮದು ಆರ್ಸಿಬಿ ಬ್ಲಡ್ ಗ್ರೂಪ್ʼ ಅಂತಾ ಪೋಸ್ಟರ್ ಹಿಡಿದುಕೊಂಡಿದ್ದರು. ಇದು ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಆದರೀಗ ಇಬ್ಬರು ಯುವತಿಯರು ಒಂದು ಹುಡುಗನನ್ನ ಹುಡುಕಿಕೊಡುವಂತೆ ರಿಕ್ವೆಸ್ಟ್ ಮಾಡಿದ್ದಾರೆ. ಯುವತಿಯರ ನಡೆಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ತಮಾಷೆಯಾಗಿ…
ಬೆಂಗಳೂರು: ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್ ಟೂರ್ನಿಯಲ್ಲಿ ಆರ್ಸಿಬಿ (RCB) ತಂಡಕ್ಕೆ ಸಾಕಷ್ಟು ಟ್ರೆಂಡ್ ಇದೆ. ಇಲ್ಲಿಯವರೆಗೂ ಒಂದೇ ಒಂದು ಬಾರಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದೇ ಇದ್ದರೂ ಆರ್ಸಿಬಿ, ಇತರೆ ಎಲ್ಲಾ ತಂಡಗಳಿಗಿಂತಲೂ ಅತ್ಯಂತ ಹೆಚ್ಚಿನ ಅಭಿಮಾನಿಗಳನ್ನ ಹೊಂದಿದೆ. ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಕೋಟ್ಯಂತರ ಫಾಲೋವರ್ಸ್ ಇದ್ದಾರೆ. ಪಂದ್ಯ ಗೆದ್ದರೂ, ಸೋತರೂ ಆರ್ಸಿಬಿ ತಂಡವನ್ನ ಬೆಂಬಲಿಸುವ ಪ್ರಾಮಾಣಿಕ ಅಭಿಮಾನಿಗಳು ಇವರಾಗಿದ್ದಾರೆ. ಪ್ರತಿ ಮ್ಯಾಚ್ ನಡೆದಾಗಲೂ ಆರ್ಸಿಬಿ ಅಭಿಮಾನಿಗಳು ಸುದ್ದಿಯಲ್ಲಿರುತ್ತಾರೆ. ಕಳೆದ 15 ಆವೃತ್ತಿಗಳಲ್ಲಿ ಒಮ್ಮೆಯೂ ಆರ್ಸಿಬಿ ಪ್ರಶಸ್ತಿ ಗೆದ್ದಿಲ್ಲವಾದರೂ ಅಭಿಮಾನಿಗಳ ಪ್ರೀತಿ, ಬಲ, ನಂಬಿಕೆ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. ಒಂದಲ್ಲ ಒಂದು ದಿನ ಆರ್ಸಿಬಿ ಕಪ್ ಗೆದ್ದೇ ಗೆಲ್ಲುತ್ತೆ ಎಂಬ ವಿಶ್ವಾಸದೊಂದಿಗೆ ಅಭಿಮಾನಿಗಳು ಮೈದಾನಕ್ಕೆ ಬಂದು ತಮ್ಮ ನೆಚ್ಚಿನ ತಂಡಕ್ಕೆ ಬೆಂಬಲ ವ್ಯಕ್ತಪಡಿಸುತ್ತಾರೆ. ಅದೇ ರೀತಿ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ (Rashmika Mandanna) ಸಹ ಆರ್ಸಿಬಿ ಆಟಗಾರರಿಗೆ ಫ್ಯಾನ್ ಆಗಿದ್ದಾರೆ. ಈ ಕುರಿತು ರಶ್ಮಿಕಾ ಮಂದಣ್ಣ…
ಲಖನೌ: ಲಖನೌ ಸೂಪರ್ ಜಯಂಟ್ಸ್ ವಿರುದ್ಧ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಪಂದ್ಯದಲ್ಲಿ ನಾವು ಮೊದಲು ಬ್ಯಾಟ್ ಮಾಡಿದ ನಿರ್ಧಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿಗೆ ಟರ್ನಿಂಗ್ ಪಾಯಿಂಟ್ ಆಯಿತು ಎಂದು ನಾಯಕ ಫಾಫ್ ಡು’ಪ್ಲೆಸಿಸ್ ತಿಳಿಸಿದ್ದಾರೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆರ್ಸಿಬಿ, ನಾಯಕ ಫಾಫ್ ಡು’ಪ್ಲೆಸಿಸ್ (44 ರನ್) ಹಾಗೂ ವಿರಾಟ್ ಕೊಹ್ಲಿ (31 ರನ್) ಅವರ ಬ್ಯಾಟಿಂಗ್ ನೆರವಿನಿಂದ ತನ್ನ ಪಾಲಿನ 20 ಓವರ್ಗಳಿಗೆ 9 ವಿಕೆಟ್ ನಷ್ಟಕ್ಕೆ 126 ರನ್ಗಳನ್ನು ಗಳಿಸಿತು. ಬಳಿಕ ಗುರಿ ಹಿಂಬಾಲಿಸಿದ ಲಖನೌ ಸೂಪರ್ ಜಯಂಟ್ಸ್ 108 ರನ್ಗಳಿಗೆ ಆಲ್ಔಟ್ ಆಯಿತು. ಆರ್ಸಿಬಿ ಪರ 44 ರನ್ ಗಳಿಸಿದ ಫಾಫ್ ಡು’ಪ್ಲೆಸಿಸ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಕಾರಣರಾದರು. ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಮಾತನಾಡಿದ ಫಾಫ್ ಡು’ಪ್ಲೆಸಿಸ್, “ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಮತ್ತು ಇಲ್ಲಿನ ಪಿಚ್ ಸಂಪೂರ್ಣ ವಿರುದ್ಧವಾಗಿದೆ. ನಾವು ಪಂದ್ಯದ ಮೊದಲ 6 ಓವರ್ಗಳಲ್ಲಿ…
ಲಖನೌ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜಯಂಟ್ಸ್ ನಡುವಣ ಪಂದ್ಯದ ಬಳಿಕ ಜಗಳ ಮಾಡಿಕೊಂಡ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಅವರಿಗೆ ಪಂದ್ಯದ ಸಂಭಾವನೆಯಲ್ಲಿ ಶೇ. 100 ರಷ್ಟು ದಂಡವನ್ನು ವಿಧಿಸಲಾಗಿದೆ. ಇದರ ಜೊತೆಗೆ ಲಖನೌ ವೇಗಿ ನವೀನ್ ಉಲ್ ಹಕ್ ಅವರಿಗೂ ಪಂದ್ಯದ ಸಂಭಾವನೆಯಲ್ಲಿ ಶೇ. 50 ರಷ್ಟು ದಂಡವನ್ನು ವಿಧಿಸಲಾಗಿದೆ. ಸೋಮವಾರ ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಮೈದಾನದಲ್ಲಿ ನಡೆದಿದ್ದ ಲೋ ಸ್ಕೋರಿಂಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ರನ್ಗಳಿಂದ ಗೆಲುವು ಸಾಧಿಸಿತ್ತು. ಆದರೆ, ಐಪಿಎಲ್ ಕೋಡ್ ಆಫ್ ಕಂಡಕ್ಟ್ ಎರಡನೇ ಹಂತದ ಅಪರಾಧವೆಸಗಿದ ಕಾರಣ ಕೊಹ್ಲಿ ಹಾಗೂ ಗಂಭೀರ್ಗೆ ದುಬಾರಿ ದಂಡ ವಿಧಿಸಲಾಗಿದೆ. ಇದನ್ನು ಇವರಿಬ್ಬರೂ ಒಪ್ಪಿಕೊಂಡಿದ್ದಾರೆ. “ಲಖನೌದ ಅಟಲ್ ಬಿಹಾರಿ ವಾಜಪೇಯಿ ಏಕನಾ ಮೈದಾನದಲ್ಲಿ ನಡೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದದ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ ಕಾರಣ ಲಖನೌ ಸೂಪರ್ ಜಯಂಟ್ಸ್ ಮೆಂಟರ್…