ತುಮಕೂರು: ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಕೆಳಕ್ಕೆ ಬಿದ್ದು ಪೊಟರೆಗೆ ಸಿಲುಕಿಕೊಂಡ ಘಟನೆ ನಡೆದಿತ್ತು. ಕ್ಷಣಾ ಕಾರ್ಯಾಚರಣೆ ಮುಂದುವರಿಸಿದ ಸಿಬ್ಬಂದಿ, ಸೋಮವಾರ ಆಕೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. 12 ಗಂಟೆಗಳ ಕಾರ್ಯಾಚರಣೆ ಬಳಿಕ ಯುವತಿ ಬದುಕಿ ಬಂದಿದ್ದಾರೆ. ಹೌದು ಹಂಸ (19) ಆಪತ್ತಿಗೆ ಸಿಲುಕಿದ್ದ ವಿದ್ಯಾರ್ಥಿನಿ. ಗುಬ್ಬಿ ತಾಲೂಕು ಶಿವರಾಂಪುರದ ನಿವಾಸಿ ಸೋಮನಾಥ್ ಅವರ ಪುತ್ರಿ ಹಂಸ ಅವರು ನಗರದ ಎಸ್ಐಟಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದಾರೆ. ಮೈದಾಳ ಕೆರೆ ಕೋಡಿ ಬಿದ್ದಿರುವುದನ್ನು ನೋಡಲು ತೆರಳಿದ್ದ ಯುವತಿ, ನೀರು ಹರಿಯುವ ಸ್ಥಳದಲ್ಲಿ ನಿಂತು ಸೆಲ್ಫಿ ಫೋಟೋ ತೆಗೆದುಕೊಳ್ಳಲು ಹೋಗಿದ್ದಾರೆ. ಕೆರೆ ಕೋಡಿಯಲ್ಲಿ ಕಾಲು ಜಾರಿ ಬಿದ್ದು ಕಲ್ಲಿನ ಪೊಟರೆಯೊಳಗೆ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತಡ ರಾತ್ರಿವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು. ಆದರೆ ಆಕೆ ಸಿಲುಕಿರುವ ಜಾಗಕ್ಕೆ ಹೋಗುವುದು ಸವಾಲಿನ ಕೆಲಸವಾಗಿತ್ತು. ಹತ್ತಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಭಾನುವಾರ ರಕ್ಷಣಾ ಕಾರ್ಯ ಸ್ಥಗಿತಗೊಳಿಸಿದ್ದ ಅಗ್ನಿಶಾಮಕ ಸಿಬ್ಬಂದಿ, ಸೋಮವಾರ ಘಟನೆ ನಡೆದ…
Author: Prajatv Kannada
ತುಮಕೂರು: ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ನಡೆದಿದೆ. ಹಂಸ (19), ಮೃತ ಯುವತಿಯಾಗಿದ್ದು, ಮೃತ ಯುವತಿಯನ್ನು ಮೂಲತಃ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಅವರ ಪುತ್ರಿಯಾಗಿದ್ದಾಳೆ. ಭಾನುವಾರ ರಜೆಯ ಹಿನ್ನೆಲೆ ಯುವತಿ ಮಂದಾರಗಿರಿ ಬೆಟ್ಟಕ್ಕೆ ಬಂದಿದ್ದಳು. ಈ ವೇಳೆ ಅಲ್ಲಿಯೇ ಸಮೀಪದಲ್ಲಿರುವ ಮೈದಾಳ ಕೆರೆ ಕೋಡಿ ನೋಡಲು ತೆರಳಿದ್ದಳು. ಕೆರೆ ಕೋಡಿ ನೋಡಲು ಹೋದ ಯುವತಿ ಕಾಲು ಜಾರಿ ಬಿದ್ದಿದ್ದಾಳೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಯುವತಿ ಮೃತದೇಹ ಹೊರಕ್ಕೆ ತೆಗೆಯಲಾಗಿದ್ದು, ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ಯಾಶನ್ ಹಣ್ಣು ಉಷ್ಣವಲಯದಲ್ಲಿ ಬೆಳೆಯುವ ಹೂಬಿಡುವ ಬಳ್ಳಿಯಾಗಿದ್ದು ಇದನ್ನು ಪ್ಯಾಸಿಫ್ಲೋರಾ ಎಂದು ಕರೆಯಲಾಗುತ್ತದೆ, ಇದು ದಕ್ಷಿಣ ಅಮೇರಿಕಾ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಭಾರತದಂತಹ ಉಷ್ಣ ವಾತಾವರಣವಿರುವ ದೇಶಗಳಲ್ಲಿ ಬೆಳೆಯುತ್ತಾರೆ. ಪ್ಯಾಶನ್ ಹಣ್ಣು ಸಿಹಿಯಾಗಿದ್ದು, ಗಟ್ಟಿಯಾದ ತೊಗಟೆಯ ಒಳಗೆ ಮೃದುವಾದ ತಿರುಳು ಮತ್ತು ಅನೇಕ ಬೀಜಗಳನ್ನು ಹೊಂದಿರುತ್ತದೆ. ಇದರ ಬೀಜಗಳು ಮತ್ತು ತಿರುಳನ್ನು ತಿನ್ನಬಹುದು, ಅವುಗಳನ್ನು ಜ್ಯೂಸ್ ಮಾಡಬಹುದು ಅಥವಾ ಬೇರೆ ಹಣ್ಣುಗಳ ರಸಗಳೊಂದಿಗೆ ಸೇರಿಸಬಹುದು. ಪ್ಯಾಶನ್ ಹಣ್ಣು ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳ ಮೂಲವಾಗಿದ್ದು ಸಾಕಷ್ಟು ಪೌಷ್ಠಿಕಾಂಶಗಳನ್ನು ಹೊಂದಿದ್ದು ಅನೇಕ ಆರೋಗ್ಯ ಪ್ರಯೋಜನಗಳಿವೆ. ಪ್ಯಾಶನ್ ಹಣ್ಣು ಆರೋಗ್ಯಕರ ಪೌಷ್ಟಿಕಾಂಶದ ಆಗರವನ್ನು ಹೊಂದಿರುವ ಹಣ್ಣು. ಇದು ಹೆಚ್ಚಿನ ಮಟ್ಟದ ವಿಟಮಿನ್ ಎಯನ್ನು ಹೊಂದಿರುತ್ತದೆ, ಇದು ಚರ್ಮ, ದೃಷ್ಟಿ ಮತ್ತು ದೇಹದ ಪ್ರತಿರಕ್ಷಣಾ ವ್ಯವಸ್ಥೆಗೆ ಮುಖ್ಯವಾಗಿದೆ ಮತ್ತು ಇದರಲ್ಲಿರುವ ವಿಟಮಿನ್ ಸಿ ಪ್ರಮುಖ ಉತ್ಕರ್ಷಣ ನಿರೋಧಕವಾಗಿದೆ. ಪ್ರಯೋಜನಗಳೇನು? ಪ್ಯಾಶನ್ ಫ್ರೂಟ್ ಮಧುಮೇಹ ರೋಗಿಗಳಿಗೆ ಬಹಳ ಉಪಯುಕ್ತವಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ ಏಕೆಂದರೆ…
ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ ಆಗಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಮುಖ್ಯ ಕೋಚ್ ಗೌತಮ್ ಗಂಭೀರ್ ಅಲಭ್ಯರಾಗಲಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ದದ ಸರಣಿಗಾಗಿ ವಿವಿಎಸ್ ಲಕ್ಷ್ಮಣ್ ಅವರನ್ನು ಕೋಚ್ ಆಗಿ ಕಳುಹಿಸಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ನವೆಂಬರ್ 8 ರಿಂದ ಆರಂಭವಾಗಲಿರುವ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ಮುಖ್ಯ ಕೋಚ್ ಹುದ್ದೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ವಿವಿಎಸ್ ಲಕ್ಷ್ಮಣ್ ಅವರೊಂದಿಗೆ ಸಾಯಿರಾಜ್ ಬಹುತುಲೆ, ಹೃಷಿಕೇಶ್ ಕಾನಿಟ್ಕರ್ ಮತ್ತು ಸುಭದೀಪ್ ಘೋಷ್ ಅವರು ಕೋಚಿಂಗ್ ಸಿಬ್ಬಂದಿಯ ಭಾಗವಾಗಲಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿಂದೆ ಕೂಡ ವಿವಿಎಸ್ ಲಕ್ಷ್ಮಣ್ ಭಾರತ ತಂಡದ ತಾತ್ಕಾಲಿಕ ಕೋಚ್ ಹುದ್ದೆಯಲ್ಲಿ ಕಾಣಿಸಿಕೊಂಡಿದ್ದರು. ರಾಹುಲ್ ದ್ರಾವಿಡ್ ಅವರ ಅನುಪಸ್ಥಿತಿಯ ವೇಳೆ ಲಕ್ಷ್ಮಣ್ ಅವರನ್ನು ಹಲವು ಸರಣಿಗಳಿಗೆ ಕೋಚ್ ಆಗಿ ನೇಮಿಸಲಾಗಿತ್ತು. ಇದೀಗ ಎನ್ಸಿಎ ಮುಖ್ಯಸ್ಥನ ಹುದ್ದೆಯಲ್ಲಿ…
ಮಂಗಳೂರು: ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಎಲ್ಲಾ ವಲಯದಲ್ಲೂ ಅದನ್ನ ಪೋಷಿಸುವುದು. ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಾತ್ಯಾತೀತ ಅಂತ ಹೇಳಿಕೊಳ್ಳುವಾಗ ಇಲ್ಲಿ ಜಾತಿ ಪಂಗಡಗಳ ಲೆಕ್ಕಾಚಾರ ಯಾಕೆ ಎಂದು ಉಡುಪಿ ಪೇಜಾವರ ಪ್ರಶ್ನಿಸಿ ಪರಿಷತ್ ಕಾಂಗ್ರೆಸ್ ಸದಸ್ಯ ಬಿಕೆ ಹರಿಪ್ರಸಾದ್ ವಿರುದ್ದ ಅವರು ಪರೋಕ್ಷ ವಾಗ್ದಾಳಿ ನಡೆಸಿದರು ಮಂಗಳೂರಿನ ಕುಳಾಯಿ ಚಿತ್ರಾಪುರ ಮಠದಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು, ನಾವು ಹೇಳಿದ್ದು ತಪ್ಪಂತೆ. ಪುಡಿ ರಾಜಕಾರಣ ಮಾಡುತ್ತಿದ್ದೇವೆ ಎನ್ನುತ್ತಾರೆ. ಹಾಗಾದರೆ ಇದು ಪ್ರಜಾಪ್ರಭುತ್ವ ರಾಷ್ಟ್ರ ಹೌದೋ ಅಲ್ವೋ ಹೇಳಿ ಎಂದಿದ್ದಾರೆ. ಹೌದು ಅಂತಾದ್ರೆ ಒಬ್ಬ ಮಾಠಾಧಿಪತಿಗೆ ಅಂತಲ್ಲ, ಸಾಮಾನ್ಯ ಪ್ರಜೆಗೂ ಮಾತಾಡುವ ಹಕ್ಕಿದೆ. ಹೀಗಿರುವಾಗ ಕಾವಿ ತೆಗೆದಿಟ್ಟು ಬಂದರೆ ಉತ್ತರ ಕೊಡುತ್ತೇನೆ ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಸಮಾಜದಲ್ಲಿ ಮಾತನಾಡುವ ಹಕ್ಕು ಇರುವುದು ಕೆಲವು ರಾಜಕಾರಣಿಗಳಿಗೆ ಮಾತ್ರವೇ? ಪ್ರಜೆಗಳಿಗೂ ಹಕ್ಕಿಲ್ಲ, ರಾಜಕಾರಣಿಗಳಿಗೆ…
ಸ್ಯಾಂಡಲ್ವುಡ್ ನ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಪತ್ನಿ ಸೋನಲ್ ಜೊತೆ ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಪತ್ನಿ ಜೊತೆ ಹಾಸನಾಂಬೆ ದೇವಿ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ತರುಣ್ ಸುಧೀರ್ ದಂಪತಿ ದೇವಿಯ ಬಳಿಕ ದರ್ಶನ್ ಬಿಡುಗಡೆಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ದೇವಿ ದರ್ಶನದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ತರುಣ್ ಸುಧೀರ್ ಆದಷ್ಟು ಬೇಗ ದರ್ಶನ್ ಬಿಡುಗಡೆಯಾಗಲಿ ಎಂದು ದೇವಿ ಬಳಿ ಕೇಳಿಕೊಂಡಿದ್ದೇವೆ. ಅವರು ಇದ್ದಿದ್ದರೆ ಈ ಬಾರಿ ಹಾಸನಾಂಬೆ ದೇವಿ ದರ್ಶನಕ್ಕೆ ಬರುತ್ತಿದ್ದರು. ಆದಷ್ಟು ಬೇಗ ಎಲ್ಲಾ ಒಳ್ಳೆಯದಾಗಲಿ ಎಂದು ದೇವಿಯಲ್ಲಿ ಕೇಳಿಕೊಂಡಿದ್ದೇನೆ ಎಂದು ಹೇಳಿದರು. ನಾವು ಮದುವೆಯಾದ ನಂತರ ದೇವಿ ದರ್ಶನಕ್ಕೆ ಬಂದಿದ್ದೇವೆ ಅದು ನನಗೆ ವಿಶೇಷ. ಈ ತಾಯಿ ಹತ್ತಿರ ದರ್ಶನಕ್ಕೆ ಬಂದಾಗ ಮನಸ್ಸಿನಲ್ಲಿ ಇರೋದೆನ್ನೆಲ್ಲಾ ಒಮ್ಮೆಲೆ ಹೇಳಿಕೊಳ್ಳಬೇಕು ಅನ್ನಿಸುತ್ತದೆ. ಇಲ್ಲಿ ಒಂದು ವೈಬ್ರೇಷನ್ ಇದೆ. ಪ್ರತಿ ವರ್ಷ ನಾನು ಹಾಸನಾಂಬೆ ದೇವಿ ದರ್ಶನಕ್ಕೆ ಬರುತ್ತೇನೆ. ಕಳೆದ ವರ್ಷ ಶೂಟಿಂಗ್ ಇದ್ದಿದ್ದರಿಂದ ಬರಲು ಆಗಿರಲಿಲ್ಲ ಎಂದು…
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರಭಾವ ಬಳಸಿ ರಷ್ಯಾ ಹಾಗೂ ಉಕ್ರೇನ್ ಯುದ್ಧವನ್ನು ನಿಲ್ಲಿಸಬಹುದು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ಭಾರತದ ಮಾಧ್ಯಮವೊಂದಕ್ಕೆ ಸಂದರ್ಶನದ ನೀಡಿದ ಝೆಲೆನ್ಸ್ಕಿ, ನಿಸ್ಸಂದೇಹವಾಗಿ ಪ್ರಧಾನಿ ಮೋದಿ ಈ ಕೆಲಸ ಮಾಡಬಹುದು. ಅಗ್ಗದ ಶಕ್ತಿಯನ್ನು ನಿರಾಕರಿಸುವುದು ಮತ್ತು ಆದ್ದರಿಂದ ಯುದ್ಧಗಳನ್ನು ನಡೆಸುವ ಮಾಸ್ಕೋದ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ದಿನಾಂಕ ಹತ್ತಿರ ಬರುತ್ತಿದ್ದಂತೆ ಝೆಲೆನ್ಸ್ಕಿ ಅವರಿಂದ ಈ ಹೇಳಿಕೆ ಬಂದಿರುವುದು ವಿಶೇಷ. ಒಂದು ವೇಳೆ ನಾನು ಗೆದ್ದರೆ ಉಕ್ರೇನ್ ನೀಡುತ್ತಿರುವ ಸೇನಾ ನೆರವನ್ನು ಕಡಿತಗೊಳಿಸುತ್ತೇನೆ ಎಂದು ರಿಪಬ್ಲಿಕನ್ ಅಭ್ಯರ್ಥಿ ಟ್ರಂಪ್ ಈಗಾಗಲೇ ಹೇಳಿಕೆ ನೀಡಿದ್ದಾರೆ. ಟ್ರಂಪ್ ಅಧ್ಯಕ್ಷರಾಗಿ ಆಯ್ಕೆಯಾದರೆ ಉಕ್ರೇನ್ ಹೋರಾಟಕ್ಕೆ ಭಾರೀ ಹಿನ್ನಡೆಯಾಗಲಿದೆ. ಬಲವಂತವಾಗಿ ರಷ್ಯಾಕ್ಕೆ ಗಡೀಪಾರು ಮಾಡಲಾದ ಉಕ್ರೇನಿಯನ್ ಮಕ್ಕಳನ್ನು ಮರಳಿ ಕರೆತರಲು ಸಹಾಯ ಮಾಡುವಂತೆ ಝೆಲೆನ್ಸ್ಕಿ ಮೋದಿ ಅವರನ್ನು ಕೇಳಿದರು. ರಷ್ಯಾ ಅಧ್ಯಕ್ಷ ಪುಟಿನ್ ಬಳಿ ಮೋದಿ ತಮ್ಮ…
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ 4 ತಿಂಗಳಾಗಿದೆ. ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಅವರ ಜಾಮೀನು ಅರ್ಜಿ ತಿರಸ್ಕರಿಸಲಾಗಿದ್ದು ದರ್ಶನ್ ಪರ ವಕೀಲರು ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಮಧ್ಯೆ ತನನ್ನು ನೋಡಲು ಬರುವ ನಟ, ನಟಿಯರಿಗೆ ದರ್ಶನ್ ನೋ ಎಂದಿದ್ದಾರಂತೆ. ಯಾರೂ ಬಳ್ಳಾರಿ ಜೈಲಿಗೆ ಬರುವುದು ಬೇಡ. ಸದ್ಯಕ್ಕೆ ನನಗೆ ಯಾರನ್ನೂ ಭೇಟಿಯಾಗಲು ಇಷ್ಟ ಇಲ್ಲ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೂಲಕ ಸಂದೇಶ ರವಾನೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ದರ್ಶನ್ ಬಳ್ಳಾರಿ ಜೈಲಿಗೆ ಬಂದು ಎರಡು ತಿಂಗಳಾಗಿದೆ. ಈ ಎರಡು ತಿಂಗಳ ಅವಧಿಯಲ್ಲಿ ಚಾರ್ಜ್ಶೀಟ್, ಜಾಮೀನು ಟೆನ್ಶನ್ ಜೊತೆಗೆ ಜೊತೆಗೆ ಬೆನ್ನು ನೋವಿನಿಂದ ಹೈರಾಣಾಗಿದ್ದಾರೆ. ಎರಡು ತಿಂಗಳಲ್ಲಿ ಪತ್ನಿ, ತಾಯಿ, ಸಹೋದರ, ಸಹೋದರಿ, ಸಂಬಂಧಿಗಳಾದ ಸುಶಾಂತ್, ಹೇಮಂತ್, ಚಂದ್ರ ಭೇಟಿ ಮಾಡಿದ್ದಾರೆ. ಅಲ್ಲದೇ ನಟ ಧನ್ವಿರ್, ನಿರ್ದೇಶಕ ಪ್ರಕಾಶ್, ಹರಿಕೃಷ್ಣ, ಶೈಲಜಾ ನಾಗ್ ಸೇರಿ ಒಂದಷ್ಟು…
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರದಿದ್ದಾರೆ. ಮನೆ ಮುಂದೆ ನಿಲ್ಲಿಸಿದ ಕಾರು ಜಖಂಗೊಳಿಸಿ, ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. ಕಿಡಿಗೇಡಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಗರದ ಬ್ಯಾಡರಹಳ್ಳಿಯ ತುಂಗಾನಗರದಲ್ಲಿ ಭಾನುವಾರ ರಾತ್ರಿ ಘಟನೆ ಜರುಗಿದೆ. ಶಿವಗಂಗೇಗೌಡ ಎಂಬುವರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಕಿಡಿಗೇಡಿಗಳ ಅಟ್ಟಹಾಸದ ದೃಶ್ಯಾವಳಿ ಸೆರೆಯಾಗಿದೆ. ಈ ಗ್ಯಾಂಗ್, ನಿನ್ನೆ ರಾತ್ರಿ ಶಿವಗಂಗೆಗೌಡರ ಮನೆ ಸಮೀಪ ಎಣ್ಣೆ ಹಾಕುತ್ತಾ ಕುಳಿತಿತ್ತು. ಇದನ್ನ ಪ್ರಶ್ನೆ ಮಾಡಿ ಎದ್ದು ಹೋಗುವಂತೆ ಶಿವಗಂಗೆಗೌಡ ಗದರಿದ್ದರು. ನಂತರ ಶಿವಗಂಗೆಗೌಡ ಅವರಿಗೆ ಸೇರಿದ ಇನ್ನೋವಾ ಕಾರು ಜಖಂ ಮಾಡಿದ್ದಾರೆ. ಸಿಮೆಂಟ್ ಇಟ್ಟಿಗೆಯಿಂದ ಕಾರಿನ ಗಾಜು ಒಡೆದ ಕಿಡಿಗೇಡಿಗಳು ದುಷ್ಕೃತ್ಯ ಮೆರೆದಿದ್ದಾರೆ. ಈ ವೇಳೆ ಕಿಡಿಗೇಡಿಗಳನ್ನ ಓಡಿಸಲು ಶಿವಗಂಗೆಗೌಡರು ಪ್ರಯತ್ನ ಪಟ್ಟಿದ್ದಾರೆ. ಈ ವೇಳೆ ಶಿವಗಂಗೆಗೌಡ ಮೇಲೆ ಗ್ಯಾಂಗ್ ಅಟ್ಯಾಕ್ ಮಾಡಿದೆ. ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಜರುಗಿದ್ದು, ಗಾಯಾಳು ಶಿವಗಂಗೆಗೌಡ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಇಂದು ದರ್ಶನ್ ಪರ ವಕೀಲರು ವಾದ ಮಂಡಿಸಲಿದ್ದಾರೆ. ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದೆ. ಅ. 22ಕ್ಕೆ ಅರ್ಜಿ ವಿಚಾರಣೆಗೆ ಬಂದಾಗ, ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿ ಸಲ್ಲಿಸುವಂತೆ ಬಳ್ಳಾರಿ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ದರ್ಶನ್ ಬೆನ್ನುಹುರಿ ನೋವಿನಿಂದ ಬಳಲು ತ್ತಿದ್ದಾರೆ. ಅವರಿಗೆ ಬಳ್ಳಾರಿಯ “ವಿಜಯನಗರ ವೈದ್ಯಕೀಯ ಸಂಸ್ಥೆ’ನಲ್ಲಿ ಎಂಆರ್ಐ ಸ್ಕ್ಯಾನ್ ಮಾಡಲಾಗಿದೆ. ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ, ವೈದ್ಯಕೀಯ ಮತ್ತು ಆರೋಗ್ಯದ ಕಾರಣಕ್ಕಾಗಿ ಜಾಮೀನು ನೀಡಬೇಕು ಎಂದು ದರ್ಶನ್ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ನ್ಯಾಯಾಲಯವನ್ನು ಕೋರಿದ್ದರು. ಹೀಗಾಗಿ ಇಂದು ಜಾಮೀನು ಸಿಗುತ್ತಾ ಕಾದು ನೋಡಬೇಕಾಗಿದೆ.