Browsing: ಅಂತರಾಷ್ಟ್ರೀಯ

ಕೇಪ್ ಕೆನವೆರಲ್: ಜಗತ್ತಿನಲ್ಲೇ ಮೊಟ್ಟಮೊದಲ ಬಾರಿಗೆ ಖಾಸಗಿ ಕಂಪನಿಯೊಂದರ ಲ್ಯಾಂಡರ್, ಚಂದ್ರನ ಮೇಲೆ ಲ್ಯಾಂಡ್ ಆಗುವ ನಿರೀಕ್ಷೆಯಿದೆ. ಈ ಯೋಜನೆಯನ್ನು ನಾಸಾ ಕೈಗೊಂಡಿದ್ದು, ಕೆನವೆರಲ್ ಲ್ಯಾಂಡರ್ ಹೊತ್ತ ರಾಕೆಟ್ ಉಡಾವಣೆಗೊಂಡಿದೆ. ಈವರೆಗೆ ಸರ್ಕಾರಿ ಸಂಸ್ಥೆಗಳು ಮಾತ್ರ ಚಂದ್ರನ ಮೇಲೆ ತಮ್ಮ ಲ್ಯಾಂಡರ್‌ಗಳನ್ನು ಇಳಿಸಿದ್ದವು. ಆದರೆ ನಾಸಾ, ಈ ಯೋಜನೆಯನ್ನು ಖಾಸಗಿಯವರಿಗೂ ವಿಸ್ತರಿಸಿದೆ. ಈ ಲ್ಯಾಂಡರನ್ನು ಪಿಟ್ಸ್‌ಬರ್ಗ್‌ ಮೂಲದ ಆಕ್ಟೋಬೋಟಿಕ್ ಸಂಸ್ಥೆ ತಯಾರಿಸಿದ್ದು, ಇದು ಫೆ.23ರಂದು ಚಂದ್ರನ ನೆಲದ ಮೇಲಿಳಿವ ನಿರೀಕ್ಷೆಯಿದೆ. ಆದರೆ, ಉಡಾವಣೆ ಬಳಿಕಎಂಜಿನ್‌ ಸಮಸ್ಯೆ ಕಾಣಿಸಿಕೊಂಡಿದ್ದು, ವಿಜ್ಞಾನಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 1972ರಲ್ಲಿ ಕೊನೆಯ ಬಾರಿ ನಾಸಾ ಚಂದ್ರಯಾನ ಕೈಗೊಂಡಿತ್ತು. ಇದಾದ 50 ವರ್ಷ ಬಳಿಕ ಮತ್ತೆ ಇಂಥ ಯತ್ನ ನಡೆದಿದೆ. ಅಮೆರಿಕದ ಈ ಚಂದ್ರಯಾನ ಯೋಜನೆಗೆ ಭಾರತದ ನಂಟಿದೆ. ಲ್ಯಾಂಡರ್ ತಯಾರಿಸಿರುವ ಆಸ್ಫೋಬೋಟಿಕ್‌ ಸಂಸ್ಥೆಯ ನಿರ್ದೇಶಕ ಶರದ್‌ ಭಾಸ್ಕರನ್ ಅವರು ಭಾರತ ಮೂಲದವರಾಗಿದ್ದಾರೆ. ಈ ಯೋಜನೆಗಾಗಿ ಇವರು 7 ವರ್ಷಗಳ ಕಾಲ ಯೋಜನಾ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದು, ಯೋಜನೆ ಯಶಸ್ವಿಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಾಷಿಂಗ್ಟನ್‌: ಇದೇ ಜನವರಿ 22ರಂದು ಐತಿಹಾಸಿಕ ರಾಮಮಂದಿರ ಉದ್ಘಾಟನೆ ನೆರವೇರಲಿದೆ. ಜೊತೆಗೆ ರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ  ನಡೆಯಲಿದೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ…

ಒಂದು ಕಾಲದಲ್ಲಿ ಲಕ್ಷದ್ವೀಪಗಳನ್ನು ‘ಲಕ್ಕಾಡಿವ್ ದ್ವೀಪಗಳು’ ಎಂದು ಕರೆಯಲಾಗುತ್ತಿತ್ತು. ಭಾರತದ ಕೆಲವು ಸುಂದರ ಮತ್ತು ವಿಲಕ್ಷಣ ದ್ವೀಪಗಳಲ್ಲಿ ಇವು ಕೂಡ ಒಂದಾಗಿದೆ. ಭಾರತದ ಚಿಕ್ಕ ಕೇಂದ್ರಾಡಳಿತ ಪ್ರದೇಶವು…

ವಾಷಿಂಗ್ಟನ್‌: ಇದೇ ಜನವರಿ 22ರಂದು ಐತಿಹಾಸಿಕ ರಾಮಮಂದಿರ ಉದ್ಘಾಟನೆ ನೆರವೇರಲಿದೆ. ಜೊತೆಗೆ ರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ  ನಡೆಯಲಿದೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ…

ಕವರಟ್ಟಿ: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ  ಅವರು ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪ  ಸಮುದ್ರತೀರಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿ ಭೇಟಿ ಬಳಿಕ ಪ್ರವಾಸಿಗರ ಚಿತ್ತ ಲಕ್ಷದ್ವೀಪದತ್ತ ಹರಿದಿದ್ದು,…

ಲಂಡನ್: ಕ್ಯಾನ್ಸರ್‌ ರೋಗ ಮಾರಣಾಂತಿಕ ಕಾಯಿಲೆ. ಈ ರೋಗ ಬಂದವ್ರೆಲ್ಲ ತೀವ್ರ ಭಯದಿಂದ ನರಳುತ್ತಿರುತ್ತಾರೆ. ನಾವು ಬದುಕೋದು ಇನ್ನು ಕೆಲವು ದಿನಗಳು ಮಾತ್ರ, ಸಾಯೋದು ಗ್ಯಾರಂಟಿ ಎಂಬ ಬೀತಿ…

ಟೋಕಿಯೊ: ಒಂದೇ ದಿನ 155 ಬಾರಿ ಭೂಕಂಪ ಸಂಭವಿಸಿದ ಪರಿಣಾಮ ಜಪಾನ್‌ನಲ್ಲಿ  13 ಮಂದಿ ಸಾವಿಗೀಡಾಗಿದ್ದಾರೆ. ಹೊಸ ವರ್ಷದಂದೇ ಭೂಕಂಪ ಸಂಭವಿಸಿ ಅಪಾರ ಸಾವು-ನೋವಿಗೆ ಕಾರಣವಾಗಿದೆ. ಹೊನ್ಶುವಿನ…

ಟೋಕಿಯೋ(ಜ.02): ಸೋಮವಾರದಿಂದ ಸುಮಾರು 18 ಗಂಟೆಗಳಲ್ಲಿ 155 ಭೂಕಂಪಗಳು ಸಂಭವಿಸಿರುವ ಜಪಾನ್‌ನಲ್ಲಿ ಜನರು ತೀವ್ರ ಭಯಭೀತರಾಗಿದ್ದಾರೆ. ಇಶಿಕಾವಾದಲ್ಲಿ ಪ್ರಬಲವಾದ ಕಂಪನವನ್ನು ಅನುಭವಿಸಲಾಯಿತು, ಅದರಲ್ಲಿ ಒಂದರ ತೀವ್ರತೆ 7.6…

ಪೋರ್ಟ್ ಲೂಯಿಸ್: ಪ್ರಧಾನಿ ನರೇಂದ್ರ ಮೋದಿಯವರಿಂದ ಮಾತ್ರ ಅಯೋಧ್ಯೆಯನ್ನು ಮತ್ತೆ ಬೆಳಕಿಗೆ ತರುವಲ್ಲಿ ಸಾಧ್ಯವಾಯಿತು. ಹೀಗಾಗಿ ಮೋದಿಯವರ ಮೇಲೆ ನಮಗೆ ವಿಶೇಷ ಗೌರವ ಇದ್ದು, ನಿಜಕ್ಕೂ ನಾವು ಹೆಮ್ಮೆಪಡುತ್ತೇವೆ…

ಜಮ್ಮು–ಕಾಶ್ಮೀರ: ಅಯೋಧ್ಯೆ ರಾಮ ಮಂದಿರವು  ಇನ್ನು ಕೆಲವೇ ದಿನಗಳಲ್ಲಿ ಉದ್ಘಾಟನೆಯಾಗುತ್ತಿದೆ. ಈ ಮಂದಿರಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ…