Browsing: ರಾಷ್ಟ್ರೀಯ

ಭಾರತದಲ್ಲಿ ನಡೆಯುವ ಹೆಚ್ಚಿನ ವಿಚ್ಛೇದನಗಳಿಗೆ (divorce) ಪ್ರೇಮ ವಿವಾಹಗಳೇ (Love marriage) ಪ್ರಮುಖ ಕಾರಣ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸುಪ್ರೀಂಕೋರ್ಟ್‌ನ (Supreme Court of India) ದ್ವಿಸದಸ್ಯ ಪೀಠದ ಬಿಆರ್ ಗವಾಯಿ ಮತ್ತು ಸಂಜಯ್ ಕರೋಲ್ ವೈವಾಹಿಕ ಸಂಬಂಧದ ಅರ್ಜಿಯೊಂದರ ವಿಚಾರಣೆ ವೇಳೆ ಈ ರೀತಿ ಹೇಳಿದೆ. ಅವರದು ಪ್ರೇಮ ವಿವಾಹ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಅದಕ್ಕೆ ನ್ಯಾಯಮೂರ್ತಿ ಗವಾಯಿ ಹೆಚ್ಚಿನ ವಿಚ್ಛೇದನಗಳಿಗೆ ಪ್ರೇಮ ವಿವಾಹಗಳೇ ಕಾರಣ ಎಂದು ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.ಅಂತಿಮವಾಗಿ ಪೀಠವು ದಂಪತಿಗಳ ನಡುವೆ ಮಧ್ಯಸ್ಥಿಕೆಗೆ ಕರೆ ನೀಡಿತು. ಈ ತಿಂಗಳ ಆರಂಭದಲ್ಲಿ ಪರಸ್ಪರ ಒಪ್ಪಿಗೆ ಇದ್ದರೇ ವಿವಾಹ ವಿಚ್ಛೇದನ ಪಡೆಯಲು ಸಂವಿಧಾನದ ಪರಿಚ್ಛೇದ 142ರ ಅಡಿಯಲ್ಲಿ ಮುರಿದುಹೋದ ವಿವಾಹಗಳನ್ನು ವಿಸರ್ಜಿಸುವ ಅಧಿಕಾರ ಇದೆ. ಆರ್ಟಿಕಲ್‌ 142ರ ಮೂಲಕ ಪರಿಸ್ಥಿತಿಗನುಗುಣವಾಗಿ ವಿಚ್ಛೇದನಕ್ಕಾಗಿ ಆರು ತಿಂಗಳ ಕಡ್ಡಾಯ ಕಾಯುವ ಅವಧಿಯನ್ನು ತೆಗೆದುಹಾಕಬಹುದು ಎಂದು ಸುಪ್ರೀಂ ಹೇಳಿತ್ತು. ಜಸ್ಟಿಸ್ ಎಸ್ ಕೆ ಕೌಲ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು, ದಂಪತಿಗಳು ವಿವಾಹವು ಸರಿಹೊಂದುತ್ತಿಲ್ಲ, ಇಲ್ಲಿ ಭಾವನಾತ್ಮಕವಾಗಿ ಏನೂ ಇಲ್ಲದಿರುವುದಾಗಿ ಸುಪ್ರೀಕೋರ್ಟ್​​ಗೆ ಮನವರಿಕೆ ಮಾಡಬೇಕು. ಹೀಗಿದ್ದರೆ ಮಾತ್ರ ಮದುವೆಯನ್ನು ಮುಂದೆ ಕೊಂಡೊಯ್ಯಲು ಸಾಧ್ಯವಿಲ್ಲ ಎಂದು ಹೇಳಿ ವಿಚ್ಛೇದನ ನೀಡಬಹುದು. ಮದುವೆ ಎಂಬುದು ಸರಿಪಡಿಸಲಾಗದಂತೆ ಮುರಿದುಹೋಗಿದೆ ಎಂದು ನ್ಯಾಯಾಲಯವು ಹೇಳಿತು.ಇದಕ್ಕಾಗಿ ಹಲವಾರು ಅಂಶಗಳನ್ನು ಪರಿಗಣಿಸಬೇಕು. ಮದುವೆಯ ನಂತರ ಪಕ್ಷಗಳು ಸಹಬಾಳ್ವೆ ನಡೆಸಿದ ಅವಧಿ, ಇಬ್ಬರು ಕೊನೆಯದಾಗಿ ಸಹಬಾಳ್ವೆ ನಡೆಸಿದಾಗ ಪರಸ್ಪರ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾಡಿದ ಆರೋಪಗಳ ಸ್ವರೂಪ ಎಲ್ಲವನ್ನೂ ಪರಿಗಣಿಸಬೇಕಾಗುತ್ತದೆ. ಪರಿಗಣಿಸಬೇಕಾದ ಇತರ ಅಂಶಗಳು ಕಾಲಕಾಲಕ್ಕೆ ಕಾನೂನು ಪ್ರಕ್ರಿಯೆಯಲ್ಲಿ ಹೊರಡಿಸಿದ ಆದೇಶಗಳನ್ನು ಒಳಗೊಂಡಿವೆ, ವೈಯಕ್ತಿಕ ಸಂಬಂಧದ ಮೇಲೆ ಸಂಚಿತ ಪರಿಣಾಮ, ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಅಥವಾ ಮಧ್ಯಸ್ಥಿಕೆಯ ಮೂಲಕ ವಿವಾದಗಳನ್ನು ಇತ್ಯರ್ಥಗೊಳಿಸಲು ಎಷ್ಟು ಪ್ರಯತ್ನಗಳನ್ನು ಮಾಡಲಾಗಿದೆ? ಕೊನೆಯದು ಯಾವಾಗ ಪ್ರಯತ್ನಿಸಲಾಯಿತು ಎಂಬುದನ್ನು ನ್ಯಾಯಾಲಯ ಕೇಳಿದೆ.

ಹೊಸದಿಲ್ಲಿ: ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸಿಎಂ ರೇಸ್‌ನಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಏಕೈಕ ಉಪಮುಖ್ಯಮಂತ್ರಿಯಾಗಿ ನೇಮಕ ಆಗಿದ್ದಾರೆ. ಅದಲ್ಲದೇ ಮುಂದಿನ ಲೋಕಸಭಾ…

ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಮೇ 31ರಂದು ಅಮೆರಿಕಕ್ಕೆ (America) ಭೇಟಿ ನೀಡಲಿದ್ದು, 10 ದಿನಗಳ ಕಾಲ ದೇಶಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ…

ನವದೆಹಲಿ: ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್‌ (DK Shivakumar) ನಡುವಿನ ಕುರ್ಚಿ ಕದನ ಬಹುತೇಕ ಅಂತ್ಯವಾಗಿದ್ದು, ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ (Chief Minister) ಸ್ಥಾನ ಸಿಗುವ ಸಾಧ್ಯತೆ ಹೆಚ್ಚಾ…

ದಿಸ್ಪುರ: ಕಂಟೈನರ್ ಟ್ರಕ್‌ಗೆ (Container Truck) ಕಾರು ಡಿಕ್ಕಿ ಹೊಡೆದ ಪರಿಣಾಮ ಲೇಡಿ ಸಿಂಗಂ ಎಂದೇ ಖ್ಯಾತಿಯಾಗಿದ್ದ ಅಸ್ಸಾಂನ ಮಹಿಳಾ ಸಬ್ ಇನ್ಸ್ಪೆಕ್ಟರ್ (SI) ಜುನ್ಮೋನಿ ರಾಭಾ…

ತಿರುವನಂತಪುರಂ: ಕೋಣೆಯೊಳಗೆ ಕೂಡಿ ಹಾಕಿದ್ದ ಪತ್ನಿಯನ್ನು ರಕ್ಷಿಸಲು ಬಂದ ಪೊಲೀಸ್ ಅಧಿಕಾರಿಯ ಮೂಗನ್ನೇ ಮುರಿದ ಪ್ರಸಂಗವೊಂದು ಕೇರಳದ ಕೊಟ್ಟಾಯಂ (Kottayam Kerala) ನಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಮೇ…

ಮುಂಬೈ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಮನೆಗೆ ಹಿಂದಿರುಗಲು ಗ್ರಾಮದಿಂದ 7 ಕಿಮೀ ನಡೆದುಕೊಂಡು (Walk) ಬರುತ್ತಿದ್ದ ಗರ್ಭಿಣಿಯೊಬ್ಬಳು (Pregnant) ಸೂರ್ಯನ ಶಾಖಕ್ಕೆ (Heat Stroke) ಸಾವನ್ನಪ್ಪಿದ ಘಟನೆ…

ನವದೆಹಲಿ:  ಕರ್ನಾಟಕ ಈ ಬಾರಿ ಕಾಂಗ್ರೆಸ್ (Congress) ಮ್ಯಾಜಿಕ್‌ ನಂಬರ್‌ ದಾಟಿ ಬಹುಮತ ಪಡೆದಿದೆ. ಆದ್ರೆ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಮಧ್ಯೆ ಸಿಎಂ(chief minister) ಕುರ್ಚಿಗಾಗಿ ಫೈಟ್‌…

ನವದೆಹಲಿ: ಡಿ.ಕೆ ಶಿವಕುಮಾರ್ (DK Shivakumar) ನನ್ನ ಅಣ್ಣ, ಬಹಳಷ್ಟು ಕಷ್ಟ ಪಟ್ಟಿದ್ದಾರೆ. ಹಾಗಾಗಿ ಅವರೇ ಸಿಎಂ ಆಗಬೇಕು ಎಂದು ಸಂಸದ ಡಿ.ಕೆ ಸುರೇಶ್ (D.K Suresh) ಹೇಳಿದ್ದಾರೆ. ನಗರದಲ್ಲಿ…

ಹೈದರಾಬಾದ್: ರಿಯಾದ್‌ನಿಂದ (Riyadh) ಹೈದರಾಬಾದ್‌ಗೆ (Hyderabad) ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ ನೊಬ್ಬನನ್ನು ಬಂಧಿಸಿ ಸುಮಾರು 67 ಲಕ್ಷ ರೂ. ಮೌಲ್ಯದ 14 ಚಿನ್ನದ ಬಾರ್‌ಗಳನ್ನು (Gold…