Browsing: ರಾಷ್ಟ್ರೀಯ

ತೆಲಂಗಾಣ:  ತೆಲಂಗಾಣದಲ್ಲೊಬ್ಬ ಡಾಕ್ಟರ್‌ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿರುವ ಘಟನೆ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇಲ್ಲಿನ ಜೋಗುಲಾಂಬ ಗದ್ವಾಲಾ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದು ಮಗುವಿನ ತಲೆಗೆ…

ಭುವನೇಶ್ವರ್: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಭಾಷಣ ಮಾಡುತ್ತಿದ್ದಾಗ ವಿದ್ಯುತ್ಕಡಿತಗೊಂಡ (Power Outage) ಘಟನೆ ಓಡಿಶಾದ (Odisha) ಬರಿಪಾದದ ಮಹಾರಾಜ ಶ್ರೀರಾಮಚಂದ್ರ ಭಂಜಾ ದೇವು ವಿಶ್ವವಿದ್ಯಾಲಯದಲ್ಲಿ…

ಮಧ್ಯಪ್ರದೇಶ: ಮಧ್ಯಪ್ರದೇಶ(Madhya Pradesh) ನಗರದ ಜಿಲ್ಲಾ ಆರೋಗ್ಯ ಕೇಂದ್ರದ ಹೊರಗೆ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ವೈದ್ಯರು ಮತ್ತು ದಾದಿಯರು ಸುತ್ತಲೂ ಇದ್ದರು ಆದರೆ ಯಾರೂ ಸಹಾಯಕ್ಕೆ…

ಬಸ್​ ಪಲ್ಟಿಯಾಗಿ 5 ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ(Uttar Pradesh) ಜಲೌನ್ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬಸ್​ನಲ್ಲಿ…

ನವದೆಹಲಿ: ದೇಶದಲ್ಲಿ ಇಂದು 2,380 ಹೊಸ ಕೋವಿಡ್‌ -19 ಪ್ರಕರಣಗಳು(A case of Covid-19) ದಾಖಲಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಸಕ್ರಿಯ ಪ್ರಕರಣಗಳ ಸಂಖ್ಯೆ ಹಿಂದಿನ…

ಪಾಟ್ನಾ: ಬಿಹಾರದ ಮಹಿಳೆಯೊಬ್ಬಳು (Bihar Women) ಮತ್ತೊಬ್ಬನನ್ನ ಮದುವೆಯಾಗಲು ತನ್ನ ನಾಲ್ಕು ಮಕ್ಕಳನ್ನು ಬಿಟ್ಟು ಓಡಿಹೋಗಿರುವ ಘಟನೆ ಬಿಹಾರದ (Bihar) ಮುಜಾಫರ್‌ಪುರದಲ್ಲಿ ನಡೆದಿದೆ. ಕತ್ರಾ ಪೊಲೀಸ್ ಠಾಣಾ (Katra…

ನವದೆಹಲಿ: ಹಾರ್ವರ್ಡ್ ಮತ್ತು ಆಕ್ಸ್‌ಫರ್ಡ್‌ನಂತಹ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಶಿಕ್ಷಣ ಪಡೆದಿರುವ ಭಾರತದ ಅನೇಕ ವಕೀಲರು ಮತ್ತು ನ್ಯಾಯಾಧೀಶರು ಇಂಗ್ಲಿಷ್‌ನಲ್ಲಿ ಯೋಚಿಸುತ್ತಾರೆ ಮತ್ತು ಮಾತನಾಡುತ್ತಾರೆ. ಆದರೆ ಅವರು ತಮ್ಮ ಆಲೋಚನೆಗಳಲ್ಲಿ ನಡೆಗಳಲ್ಲಿ ‘ಭಾರತೀಯರು‘ ಆಗಿ ಇರುವುದು ಅಗತ್ಯ ಹಾಗೂ ಬಹಳ ಮುಖ್ಯ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು  ಹೇಳಿದ್ದಾರೆ. ಇಂಗ್ಲಿಷ್ ಮಾತನಾಡುವ ವಕೀಲರು ಸ್ಥಳೀಯ ಭಾಷೆಗಳಲ್ಲಿ ಮಾತನಾಡುವವರಿಗೆ ಹೋಲಿಸಿದರೆ ಹೆಚ್ಚು ಶುಲ್ಕವನ್ನು ಪಡೆಯುತ್ತಿರುವ ಬಗ್ಗೆಯೂ ಕಾನೂನು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಭಾರತದಲ್ಲಿರುವ ಅನೇಕ ಒಳ್ಳೆಯ ನ್ಯಾಯಾಧೀಶರು ಹಾಗೂ ವಕೀಲರು ವಿದೇಶಿ ವಿಶ್ವವಿದ್ಯಾನಿಲಯಗಳಾದ ಹಾರ್ವರ್ಡ್‌(Harvard)  ಹಾಗೂ ಆಕ್ಸ್‌ಫರ್ಡ್‌ಗಳಲ್ಲಿ  (Oxford) ಶಿಕ್ಷಣ ಪಡೆದವರಾಗಿದ್ದು, ಅವರು ಮಾತು ಹಾಗೂ ಯೋಚನೆ ಕೂಡ ಇಂಗ್ಲೀಷ್‌ನಲ್ಲೇ ಇರುತ್ತದೆ. ಆದರೆ  ಮೂಲದಲ್ಲಿ ಹಾಗೂ  ಆಲೋಚನೆಯಲ್ಲಿ ಅವರು ಭಾರತೀಯರಾಗಿ ಉಳಿಯುವುದು  ಬಹಳ ಅಗತ್ಯ. ಇದರಿಂದ ಅವರು ಬಹಳ ವಿನಮ್ರರಾಗಬಹುದು ಎಂದು ಕಾನೂನು ಸಚಿವ ಕಿರೆನ್ ರಿಜಿಜು ಹೇಳಿದರು. ಕುತೂಹಲಕಾರಿ ಅಂಶವೆಂದರೆ ಭಾರತದ ಪ್ರಸ್ತುತ ಮುಖ್ಯ ನ್ಯಾಯಮೂರ್ತಿ (Chief Justice of India) ಡಿ.ವೈ .ಚಂದ್ರಚೂಡ್ (DY Chandrachud) ಅವರು ಹಾರ್ವರ್ಡ್ ವಿಶ್ವವಿದ್ಯಾಲಯದಿಂದ (Harvard University) ಸ್ನಾತಕೋತ್ತರ ಪದವಿಯನ್ನು ಪೂರ್ಣಗೊ ಳಿಸಿದ್ದಾರೆ. ಸ್ಥಳೀಯ ಭಾಷೆಗಳಲ್ಲಿ ಮಾತನಾಡುವವರಿಗೆ ಹೋಲಿಸಿದರೆ ಇಂಗ್ಲಿಷ್ ಮಾತನಾಡುವ ವಕೀಲರು ಹೆಚ್ಚು ಶುಲ್ಕವನ್ನು ಪಡೆಯುತ್ತಿರುವ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು.  ದೆಹಲಿ ನ್ಯಾಯಾಲಯದಲ್ಲಿ ಇಂಗ್ಲಿಷ್‌ನ ಮೇಲಿನ ಅಧಿಕಾರದ ಆಧಾರದ ಮೇಲೆ ವಕೀಲರಿಗೆ ಪಾವತಿಸುವ ಬಗ್ಗೆಯೂ ಅವರು ಈ ಸಂದರ್ಭದಲ್ಲಿ ಉಲ್ಲೇಖಿಸಿದರು.  ಇಂಗ್ಲಿಷ್ ಚೆನ್ನಾಗಿ ಮಾತನಾಡುವ ವಕೀಲರಿಗಿಂತ ಭಾರತೀಯ ಭಾಷೆಗಳಲ್ಲಿ ಮಾತನಾಡುವ ವಕೀಲರು ಹೆಚ್ಚು ಸಮರ್ಥರಾಗಿದ್ದಾರೆ ಎಂಬ ಅಂಶವನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ರಿಜಿಜು ಹೇಳಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಕೆಲವು ವಕೀಲರಿದ್ದಾರೆ, ಅವರ ಕಾನೂನು ಜ್ಞಾನವನ್ನು ಲೆಕ್ಕಿಸದೆ, ಅವರು ಉತ್ತಮ ಇಂಗ್ಲಿಷ್ ಮಾತನಾಡುತ್ತಾರೆ ಎಂಬ ಕಾರಣದಿಂದ ಹೆಚ್ಚು ಸಂಬಳ ಪಡೆಯುತ್ತಾರೆ. ನೀವು ಚೆನ್ನಾಗಿ ಇಂಗ್ಲಿಷ್‌ನಲ್ಲಿ ಮಾತನಾಡುತ್ತೀರಿ ಎಂಬ ಕಾರಣಕ್ಕಾಗಿ ನೀವು ಹೆಚ್ಚು ಹಣವನ್ನು ಪಡೆಯುತ್ತೀರಿ ಎಂಬುದು ಸರಿಯಲ್ಲ. ಸ್ವಲ್ಪ ಯೋಚಿಸಿ, ಮರಾಠಿ (Marathi), ಹಿಂದಿಯಲ್ಲಿ (Hindi) ಉತ್ತಮ ಹಿಡಿತ ಹೊಂದಿರುವ ವಕೀಲರಿದ್ದಾರೆ, ಆದರೆ ಅವರ ಶುಲ್ಕ ಕಡಿಮೆ ಇರುತ್ತದೆ, ಏಕೆಂದರೆ ಅವರಿಗೆ ಇಂಗ್ಲಿಷ್‌ನಲ್ಲಿ ಮಾತನಾಡಲು ಸಾಧ್ಯವಿಲ್ಲ, ಎಂದು ಅವರು ಹೇಳಿದರು. ಮುಂದೆ ಇಂತಹ ಪ್ರವೃತ್ತಿ ರಾಷ್ಟ್ರಕ್ಕೆ ಒಳ್ಳೆಯದಲ್ಲ, ಕಾನೂನು ಬಾಂಧವರು ಈ ಬಗ್ಗೆ ಚಿಂತನೆ ನಡೆಸಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು.

ಮದುವೆ ಮನೆ ಅಂದ್ರೆ ಸಂಭ್ರಮ, ಸಡಗರ ಇದ್ದೇ ಇರುತ್ತೆ. ಆದ್ರೆ ಇತ್ತೀಚಿನ ಮದುವೆ ಮನೆಗಳಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗೋದು ಸಾಮಾನ್ಯವಾಗಿ ಹೋಗಿದೆ. ಮಂಟಪ, ಡೆಕೊರೇಷನ್, ವರದಕ್ಷಿಣೆ, ಊಟ ಹೀಗೆ ನಾನಾ ಕಾರಣಗಳಿಗೆ ಗಲಾಟೆ ನಡೆಯುತ್ತದೆ. ಕೆಲವೊಮ್ಮೆ ಸಮಾರಂಭಕ್ಕೆ ಬಂದ ಅತಿಥಿಗಳು ಸಹ ಗಲಾಟೆ ಮಾಡುತ್ತಾರೆ. ಜಾರ್ಖಂಡ್ ಮದುವೆಯೊಂದರಲ್ಲಿ ಬಿಸಿ ಪೂರಿಗಳನ್ನು ಕೊಡಲು ನಿರಾಕರಿಸಿದ್ದಕ್ಕೆ ಅತಿಥಿಗಳು ಗಲಾಟೆ ನಡೆಸಿದ್ದಾರೆ. ಮಾತ್ರವಲ್ಲ ಕಲ್ಲು ತೂರಾಟ ಕೂಡಾ ಮಾಡಿದ್ದಾರೆ. ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಈ ಘಟನೆ ನಡೆದಿದೆ. ಬಿಸಿ ಬಿಸಿ ಪೂರಿ ಕೊಡದ್ದಕ್ಕೆ ಅತಿಥಿಗಳಿಗೆ ಸಿಟ್ಟು ರಾತ್ರಿ ಮುಫಾಸಿಲ್ ಠಾಣಾ ವ್ಯಾಪ್ತಿಯ ಪಟರೋಡಿ ಪ್ರದೇಶದಲ್ಲಿ ಶಂಕರ್ ಯಾದವ್ ಎಂಬುವರು ಆಯೋಜಿಸಿದ್ದ ಮದುವೆ (Marriage) ಸಮಾರಂಭದಲ್ಲಿ ಯುವಕರ ಗುಂಪೊಂದು ಪಾಲ್ಗೊಂಡಿತ್ತು. ಊಟ ಮಾಡುವ ಸಂದರ್ಭದಲ್ಲಿ ಅತಿಥಿಗಳು (Guest) ಬಿಸಿ ಬಿಸಿ ಪೂರಿಯನ್ನು ಕೇಳಿದ್ದಾರೆ. 2 ಗಂಟೆ ಸುಮಾರಿಗೆ ಬಿಸಿ ಬಿಸಿ ಪೂರಿಯನ್ನು ಕೇಳಲು ಆರಂಭಿಸಿದ ಯುವಕನೊಬ್ಬನಿಂದ ಗಲಾಟೆ ಶುರುವಾಗಿದೆ ಎಂದು ತಿಳಿದುಬಂದಿದೆ. ಬಿಸಿ ಪೂರಿ ರೆಡಿ ಇಲ್ಲವಾದ ಕಾರಣ ಜಗಳವಾಡಿದ್ದಾರೆ. ನಂತರ ಮದುವೆ ಮನೆಯಲ್ಲೇ ಎರಡು ಗುಂಪಿನ ಮಧ್ಯೆ ಮಾರಾಮಾರಿ ನಡೆದಿದೆ ಎಂದು ತಿಳಿದುಬಂದಿದೆ. ಮದ್ವೆ ಮನೆಯಲ್ಲಿ ಗಲಾಟೆ, ಪರಿಸ್ಥಿತಿ ನಿಯಂತ್ರಿಸಿದ ಪೊಲೀಸರು ಗಲಾಟೆ ಮಾಡಲು ಕೆಲವು ಇತರ ಯುವಕರನ್ನು ಹೊರಗಿನಿಂದ ಕರೆಸಲಾಗಿತ್ತು ಎಂದು ನಂತರ ತಿಳಿದುಬಂತು. ಪರಿಸ್ಥಿತಿ ತ್ವರಿತವಾಗಿ ಉಲ್ಬಣಗೊಂಡಿತು ಮತ್ತು ಕಲ್ಲು ತೂರಾಟ ಮತ್ತು ಗೂಂಡಾಗಿರಿಯ ನಡೆಸಲಾಯಿತು. ಇದರ ಪರಿಣಾಮವಾಗಿ ಮೂರ್ನಾಲ್ಕು ಜನರಿಗೆ ಗಾಯಗಳಾಗಿವೆ (Injury). ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಪೊಲೀಸರು ಅತಿಥಿಗಳನ್ನು (Guests) ಶಾಂತಗೊಳಿಸಲು ಮತ್ತು ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದರು. ಇಡೀ ವಿವಾದಕ್ಕೆ ಪ್ರಚೋದನೆ ನೀಡಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ (Treatment) ಪಡೆಯುತ್ತಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೇ 8ರಿಂದ 11ರ ನಡುವೆ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಅದಕ್ಕೆ ಮಳೆ ತೊಂದರೆ ಕೊಡುವ ಆತಂಕ ಎದುರಾಗಿದೆ. ಬಂಗಾಳ ಕೊಲ್ಲಿಯ (Bay of Bengal)ಆಗ್ನೇಯ ದಿಕ್ಕಿನಲ್ಲಿ ಚಂಡಮಾರುತವೊಂದು ರೂಪುಗೊಳ್ಳುವ ಲಕ್ಷಣ ಕಂಡುಬಂದಿದೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ಬುಧವಾರ ತಿಳಿಸಿದೆ. ಮೇ 9ರ ವೇಳೆಗೆ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ (cyclone) ಸೃಷ್ಟಿಯಾಗುವ ಸಾಧ್ಯತೆ ದಟ್ಟವಾಗಿದ್ದು, ಅದರ ಪಥ ಯಾವ ಕಡೆ ಇರಲಿದೆ ಎಂಬುದನ್ನು ಇನ್ನು ಕೆಲವೇ ದಿನಗಳಲ್ಲಿ ಹೇಳುವುದಾಗಿ ಮಾಹಿತಿ ನೀಡಿದೆ. ಮೇ 6ರ ವೇಳೆಗೆ ಬಂಗಾಳ ಕೊಲ್ಲಿಯಲ್ಲಿ ಹಲವು ಬದಲಾವಣೆಗಳಾಗಲಿವೆ. ಅದಾದ ಮರುದಿನವೇ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಹಾಗೂ ಹಡಗು ನಡೆಸುವವರು ಬಂಗಾಳ ಕೊಲ್ಲಿಗೆ ಇಳಿಯಬಾರದು ಎಂದು ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ (Mrityunjaya Mohapatra) ಅವರು ಮನವಿ ಮಾಡಿದ್ದಾರೆ. ಒಂದು ವೇಳೆ ಈ ಚಂಡಮಾರುತ ಸೃಷ್ಟಿಯಾದದ್ದೇ ಆದಲ್ಲಿ ಅದು ಭಾರತ ಕಾಣುತ್ತಿರುವ ಈ ವರ್ಷದ ಮೊದಲ ಚಂಡಮಾರುತ ವಾಗಲಿದ್ದು, ಅದಕ್ಕೆ ಸರದಿಯ ಪ್ರಕಾರ ‘ಮೋಕಾ’ ಎಂಬ ಹೆಸರನ್ನು ಇಡಬೇಕಾಗುತ್ತದೆ. ಈ ಹೆಸರನ್ನು ಯೆಮೆನ್‌ ಸೂಚಿಸಿದೆ. ಮೋಕಾ ಎಂಬುದು ಯೆಮೆನ್‌ನಲ್ಲಿರುವ ಕೆಂಪು ಸಮುದ್ರದ ಬಂದರು ನಗರಿಯ ಹೆಸರಾಗಿದೆ. ಭಾರತದಲ್ಲಿ ಎರಡು ಚಂಡಮಾರುತ ಋುತುಗಳು ಇವೆ. ಏಪ್ರಿಲ್‌- ಮೇ– ಜೂನ್‌ ಅವಧಿಯಲ್ಲಿ ಚಂಡಮಾರುತ ಕಂಡುಬರುತ್ತವೆ. ಬಳಿಕ ಅಕ್ಟೋಬರ್‌- ನವೆಂಬರ್‌- ಡಿಸೆಂಬರ್‌ ಅವಧಿಯಲ್ಲೂ ಚಂಡಮಾರುತಗಳು ಕಾಣಿಸಿಕೊಳ್ಳುತ್ತವೆ.

ವೆಡ್ಡಿಂಗ್‌ ಡೇ ಎಂಬುದು ಎಲ್ಲರ ಪಾಲಿಗೆ ಜೀವನದಲ್ಲೇ ದಿ ಬಿಗ್ ಡೇ. ಹೀಗಾಗಿಯೇ ಈ ದಿನ ಯಾವಾಗ್ಲೂ ಮೆಮೊರೆಬಲ್ ಆಗಿರಬೇಕೆಂದು ಫೋಟೋ, ವೀಡಿಯೋ ಮಾಡಿಕೊಳ್ತಾರೆ. ಆದ್ರೆ ಇಲ್ಲೊಂದು ಮದ್ವೆ ಮನೆ ನೂತನ ವಧು–ವರರ ಜೊತೆ ಫೋಟೋ ತೆಗೆದುಕೊಳ್ಳುವ ವಿಚಾರಕ್ಕಾಗಿಯೇ ರಣಾಂಗಣವಾಗಿಬಿಟ್ಟಿದೆ.  ಮದುವೆಗಳು (Marriage) ವಿಶೇಷವಾಗಿರುತ್ತವೆ ಮತ್ತು ಮದುವೆಯ ಚಿತ್ರಗಳು ಇನ್ನೂ ಹೆಚ್ಚು ವಿಶೇಷವಾಗಿರುತ್ತವೆ. ಏಕೆಂದರೆ ಈ ಚಿತ್ರಗಳು ವಧು ಮತ್ತು ವರ ಮತ್ತು ಅವರ ಕುಟುಂಬದ ಸುಂದರ ಕ್ಷಣಗಳನ್ನು ಶಾಶ್ವತವಾಗಿ ಸೆರೆಹಿಡಿಯುತ್ತವೆ. ಆದರೆ ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ಮದುವೆಯೊಂದರಲ್ಲಿ, ವಧು ಮತ್ತು ವರನ (Bride-groom) ಜೊತೆ ಚಿತ್ರಗಳನ್ನು ತೆಗೆದುಕೊಳ್ಳುವ ಬಗ್ಗೆ ಗಲಾಟೆಯೇ ನಡೆದು ಹೋಯ್ತು. ಯಾರು ಮೊದಲು ಫೋಟೋ ತೆಗೆದುಕೊಳ್ಳಬೇಕು ಅನ್ನೋ ವಿಚಾರವಾಗಿ ವಧು ಮತ್ತು ವರನ ಕುಟುಂಬ ಸದಸ್ಯರ ನಡುವೆ ಜಗಳ ನಡೆದು ಜನರು ದಿಕ್ಕಾಪಾಲಾದರು. ಸುಂದರವಾದ ದಿನವೊಂದು ಗಲಾಟೆಯಲ್ಲಿ (Fight) ಕೊನೆಗೊಂಡಿತು.