PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸೌಂದರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ: ಸಿಕ್ಕಿಬಿದ್ದ ಕಳ್ಳಿ

March 23, 2023

ಇನ್ಮುಂದೆ ಸಲ್ಮಾನ್ ಖಾನ್ ಮನೆ ಮುಂದೆ ಯಾರು ನಿಲ್ಲಂಗಿಲ್ಲ

March 23, 2023

Shilpa Shetty: ಸತ್ಯವತಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ನಟಿ ಶಿಲ್ಪಾ ಶೆಟ್ಟಿ

March 22, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » KCC 2023: ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಂದ್ಯದಲ್ಲಿ ಸೋತವರು ಯಾರು? ಗೆದ್ದವರು ಯಾರು?
ಕ್ರೀಡೆ Prajatv KannadaBy Prajatv KannadaFebruary 25, 2023

KCC 2023: ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಂದ್ಯದಲ್ಲಿ ಸೋತವರು ಯಾರು? ಗೆದ್ದವರು ಯಾರು?

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಶುಕ್ರವಾರದಿಂದ  ಬೆಂಗಳೂರಿನಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (Celebrity Cricket League) ಪಂದ್ಯ ಪ್ರಾರಂಭವಾಗಿದ್ದು, ಮೊದಲ ದಿನ ಮೂರು ಪಂದ್ಯಗಳನ್ನು ಆಯೋಜಿಸಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಕ್ರಿಕೆಟ್ ಲೀಗ್ ಅನ್ನು ಉದ್ಘಾಟಿಸಿದ ನಂತರ ಮೊದಲ ದಿನದ ಪಂದ್ಯಗಳು ಆರಂಭವಾದವು. ಒಟ್ಟು ಮೂರು ಪಂದ್ಯಗಳನ್ನು ಮೊದಲ ದಿನಕ್ಕಾಗಿ ಆಯೋಜನೆ ಮಾಡಲಾಗಿತ್ತು. ಇವುಗಳಲ್ಲಿ ಮೊದಲ ಪಂದ್ಯವಾಗಿ ನಟ ಧನಂಜಯ (Dhananjay) ಅವರ ಗಂಗಾ ವಾರಿಯರ್ಸ್ ಹಾಗೂ ಸುದೀಪ್ (Sudeep) ನೇತೃತ್ವದ ಹೊಯ್ಸಳ ಈಗಲ್ಸ್ ಮುಖಾಮುಖಿಯಾದವು.

ಮೊದಲ ಪಂದ್ಯದಲ್ಲಿ ಗಂಗಾ ವಾರಿಯಸ್ ವಿರುದ್ಧ ಗೆಲ್ಲುವಲ್ಲಿ ಹೊಯ್ಸಳ ಈಗಲ್ಸ್ ವಿಫಲವಾಯಿತು. ಗಂಗಾ ವಾರಿಯರ್ಸ್ ನ ಕರಣ್ ಆರ್ಯನ್ 54 ರನ್ ಗಳನ್ನು ಬಾರಿಸಿ ವಿಜಯಕ್ಕೆ ಕಾರಣರಾದರು. ಹತ್ತು ಓವರ್ ಗಳಲ್ಲಿ ಗಂಗಾ ವಾರಿಯರ್ಸ್ 4 ವಿಕೆಟ್ ನಷ್ಟಕ್ಕೆ 114 ರನ್ ಗಳನ್ನು ಕಲೆಹಾಕಿತ್ತು. ಆದರೆ, ಹೊಯ್ಸಳ ಈಗಲ್ಸ್ ಗುರಿ ತಲುಪುವಲ್ಲಿ ವಿಫಲವಾಗಿ ಸೋಲು ಒಪ್ಪಿಕೊಳ್ಳಬೇಕಾಯಿತು.

ಎರಡನೇ ಪಂದ್ಯವಾಗಿ ಶಿವರಾಜ್ ಕುಮಾರ್ ನೇತೃತ್ವದ ಒಡೆಯರ್ ಚಾರ್ಜಸ್ ಹಾಗೂ ಸುದೀಪ್ ಅವರ ಹೊಯ್ಸಳ್ ಈಗಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದದ್ದು ಒಡೆಯರ್ ಚಾರ್ಜಸ್. ಹತ್ತು ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 105 ರನ್ ಗಳನ್ನು ಕಲೆಹಾಕಿ, ಹೊಯ್ಸಳ ಈಗಲ್ಸ್ ತಂಡಕ್ಕೆ 106 ರನ್ ಗಳ ಗುರಿ ನೀಡಿತು. ಹೊಯ್ಸಳ ಈಗಲ್ಸ್ ತಂಡದ ಕ್ರಿಸ್ ಗೇಲ್ 23 ಎಸೆತಗಳಲ್ಲಿ 59 ರನ್ ಗಳನ್ನು ಕಲೆ ಹಾಕುವ ಮೂಲಕ ಗೆಲುವಿಗೆ ಸುಲಭ ಹಾದಿ ಹಾಕಿಕೊಟ್ಟರು. ಪರಿಣಾಮ ಶಿವಣ್ಣ ತಂಡವು ಸೋಲನುಭವಿಸಬೇಕಾಯಿತು.

ಅಂತಿಮ ಪಂದ್ಯವು ಧ್ರುವ ಸರ್ಜಾ ನೇತೃತ್ವದ ರಾಷ್ಟ್ರಕೂಟ ಫ್ಯಾಂಥರ್ಸ್ ಹಾಗೂ ಗಣೇಶ್ ನಾಯಕತ್ವದ ಕದಂಬ ಲಯನ್ಸ್ ನಡುವೆ ನಡೆಯಿತು. ಕದಂಬ ಲಯನ್ಸ್ ತಂಡ 10 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಕಲೆ ಹಾಕಿದ್ದು 111 ರನ್ ಗಳನ್ನು. ಎದುರಾಳಿ ರಾಷ್ಟ್ರಕೂಟ ಫ್ಯಾಂಥರ್ಸ್ ಈ ಗುರಿಯನ್ನು ಮುಟ್ಟಲು ಸಾಧ್ಯವಾಗದೇ ಇರುವ ಕಾರಣದಿಂದಾಗಿ ಕದಂಬ ಲಯನ್ಸ್ ಸುಲಭವಾಗಿ ಗೆಲುವು ಸಾಧಿಸಿತು. ಇಂದು ಎರಡನೇ ದಿನ ಪಂದ್ಯಗಳು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿವೆ.

Share. Facebook Twitter WhatsApp Pinterest LinkedIn Tumblr Telegram Email

Related Posts

WPL 2023: ಡೆಲ್ಲಿ ಕ್ಯಾಪಿಟಲ್ಸ್‌ಗೆ 5 ವಿಕೆಟ್‌ ಜಯ – ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

March 22, 2023

Aisa Cup 2023: ಏಷ್ಯಾಕಪ್ ಆಡಲು ಪಾಕಿಸ್ತಾನಕ್ಕೆ ಕಳುಹಿಸಿಕೊಡಿ: ಪ್ರಧಾನಿ ಮೋದಿ ಬಳಿ ಮನವಿ ಮಾಡಿಕೊಂಡ ಶಾಹಿದ್ ಅಫ್ರಿದಿ

March 22, 2023

IND vs AUS: 3ನೇ ಒಡಿಐನಲ್ಲಿ ಸ್ಟ್ರಾಂಗ್ ಬ್ಯಾಟ್ಸ್ ಮನ್ ಔಟ್: ಆ ಜಾಗಕ್ಕೆ ಬರುವರು ಯಾರು..?

March 22, 2023

ರೋಚಕ ಜಯದೊಂದಿಗೆ ಗುಜರಾತ್ ಜೈಂಟ್ಸ್, RCBಗೆ ಗೇಟ್‌ ಪಾಸ್‌ ಕೊಟ್ಟ ಯು.ಪಿ ವಾರಿಯರ್ಸ್‌!

March 21, 2023

ಈ ಬಾರಿ ಸಿಎಸ್‌ಕೆ ಕಪ್ ಗೆಲ್ಲಲ್ಲ, ಆರ್‌ಸಿಬಿ ಗೆದ್ರೆ ಖುಷಿ – ಈ ರೀತಿ ಭವಿಷ್ಯ ಹೇಳಿದ್ಯಾರು?

March 20, 2023

RCB ತಂಡಕ್ಕೆ ಆನೆ ಬಲ – ವಿಲ್‌ ಜಾಕ್ಸ್‌ ಬದಲಿಗೆ ಕಿವೀಸ್‌ ಆಲ್‌ರೌಂಡರ್‌ ಎಂಟ್ರಿ

March 20, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.