ಮಂಡ್ಯ: ದೇಶದ ಭವಿಷ್ಯ ರೂಪಿಸುವ ಚುನಾವಣೆ ಇದು. ಕಾಂಗ್ರೆಸ್ ಅಧಿಕಾರದ ಅಮಲಿನಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಬಿಜೆಪಿ-ಜೆಡಿಎಸ್ ನಾಯಕರ ಸಭೆ ಬಳಿಕ ಮಾತನಾಡಿರುವ ಬಿ.ವೈ.ವಿಜಯೇಂದ್ರ, ದೇಶದ ಭವಿಷ್ಯ ರೂಪಿಸುವ ಚುನಾವಣೆ ಇದು. ಕಾಂಗ್ರೆಸ್ ಅಧಿಕಾರದ ಅಮಲಿನಲ್ಲಿದೆ. ರಾಜ್ಯಕ್ಕೆ ದಾರುಣ ಪರಿಸ್ಥಿತಿ ಬಂದಿದೆ.
ಬರಗಾಲ ಇದೆ, ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜನ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಸಿಎಂ ಸಿದ್ದರಾಮಯ್ಯ ಜನರ ಸಮಸ್ಯೆಗಳಿಗೆ ಎಳ್ಳಷ್ಟು ಸ್ಪಂದಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇಂತಹ ಮುಖ್ಯಮಂತ್ರಿ ಪಡೆದದ್ದು ನಮ್ಮ ದುರಾದೃಷ್ಟಕರ. ಜಾತಿ-ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವುದೇ ಕಾಂಗ್ರೆಸ್ ಸಾಧನೆ.
ಮೂರನೇ ಬಾರಿಗೆ ಮೋದಿ ಪ್ರಧಾನಿಮಂತ್ರಿ ಮಾಡುವ ಸಂಕಲ್ಪ ನಮ್ಮದು. ಬಿಜೆಪಿ ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಿದ್ದೆಗೆಡಿಸಿದೆ. ಸಚಿವರನ್ನು ಅಭ್ಯರ್ಥಿಯನ್ನಾಗಿ ಮಾಡುವ ಯೋಜನೆಯಲ್ಲಿ ಕಾಂಗ್ರೆಸ್ ಇತ್ತು. ಯಾವುದೇ ಒಬ್ಬ ಮಂತ್ರಿ ಅಭ್ಯರ್ಥಿ ಆಗುವ ಧೈರ್ಯ ಮಾಡಲಿಲ್ಲ. ಕಾರಣ ಮೋದಿ ಜನಪ್ರಿಯತೆ, ಬಿಜೆಪಿ ಜೆಡಿಎಸ್ ಮೈತ್ರಿ ಎಂದು ಹೇಳಿದ್ದಾರೆ.