PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Bombay jayashree: ಪ್ರಜ್ಞಾಹೀನ ಸ್ಥಿತಿಯಲ್ಲಿ ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪತ್ತೆ

March 24, 2023

Ajith Kumar: ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ನಿಧನ

March 24, 2023

ಹಿಂಡೆನ್ ಬರ್ಗ್ ವರದಿ ಬಳಿಕ ಜಾಕ್ ಡೋರ್ಸಿ ಸಂಪತ್ತಿನ ಮೌಲ್ಯ ಭಾರೀ ಕುಸಿತ

March 24, 2023
Facebook Twitter Instagram
Friday, March 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಗ್ಯಾಸ್, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ಬೀದಿಗಿಳಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ
ಜಿಲ್ಲೆ Prajatv KannadaBy Prajatv KannadaMarch 3, 2023

ಗ್ಯಾಸ್, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ಬೀದಿಗಿಳಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಮಂಡ್ಯ :- ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮದ್ದೂರು ಪಟ್ಟಣದಲ್ಲಿ ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ನೇತೃತ್ವದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಮದ್ದೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮದ್ದೂರು ತಾಲೂಕು ಕಛೇರಿಗೆ ಮುತ್ತಿಗೆ ಹಾಕಿದ ನೂರಾರು ಕಾರ್ಯಕರ್ತರು ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶನ ಮಾಡಿ ಧರಣಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಜನ ವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಪದೇ ಪದೇ ಏರಿಕೆ ಮಾಡುತ್ತಿದೆ. ಜನ ಸಾಮಾನ್ಯರು ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದರೂ ಸಹ ಸ್ಥಳೀಯ ಶಾಸಕರು ಮತ್ತು ಜನಪ್ರತಿನಿಧಿಗಳು ಸರ್ಕಾರದ ವಿರುದ್ಧ ಯಾವುದೇ ಪ್ರತಿಭಟನೆ ನಡೆಸದೇ ಮೌನ ವಹಿಸಿದ್ದಾರೆ ಎಂದು ಧರಣಿ ನಿರತ ಕಾರ್ಯಕರ್ತರು ಆರೋಪಿಸಿದರು.

ಕೆಪಿಸಿಸಿ ಸದಸ್ಯ ಎಸ್‌.ಗುರುಚರಣ್ ಮಾತನಾಡಿ, ದೇಶದಲ್ಲಿ ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್ ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಬೆಲೆ ಏರಿಕೆಯನ್ನು ನಿಯಂತ್ರಣದಲ್ಲಿರಿಸಿತ್ತು. ಆನಂತರ ಅಧಿಕಾರಕ್ಕೆ ಬಂದ ಬಿಜೆಪಿ ಬಂಡವಾಳ ಶಾಹಿಗಳ ಪರ ತೀರ್ಮಾನ ಕೈಗೊಂಡು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರು ಮತ್ತು ಮಧ್ಯಮ ವರ್ಗದ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಆರೋಪಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ನಾಗೇಗೌಡ ಮಾತನಾಡಿ ಪದೇ ಪದೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ರಾಜ್ಯದ ಜನರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ತೀರ್ಮಾನಿಸಿದ್ದಾರೆ ಎಂದು ಭವಿಷ್ಯ ನುಡಿದರು.

ಪ್ರತಿಭಟನೆಯಲ್ಲಿ ನಿಕಟ ಪೂರ್ವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಜಿಲ್ಲಾ ಕಾರ್ಯದರ್ಶಿ ಅಜ್ಜಹಳ್ಳಿ ರಾಮಕೃಷ್ಣ, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್, ಎಸ್ಸಿ ಎಸ್ಟಿ ಘಟಕದ ಅಧ್ಯಕ್ಷ ದೊರೆಸ್ವಾಮಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ ಮುಖಂಡರಾದ ಕೆ.ಟಿ.ರಾಜಣ್ಣ, ಶಂಕರಲಿಂಗಯ್ಯ, ಕಬ್ಬಾಳಯ್ಯ, ಎಂ.ಪಿ.ಅಮರ್ ಬಾಬು, ಅರುಣ್, ಸಿದ್ದು, ರಾಘವಾ, ಡಾಬಾ ಮಹೇಶ್ ಮತ್ತಿತರರು ಇದ್ದರು.

 

ವರದಿ : ಗಿರೀಶ್ ರಾಜ್ AIN ಮಂಡ್ಯ

Share. Facebook Twitter WhatsApp Pinterest LinkedIn Tumblr Telegram Email

Related Posts

ದಾಖಲೆ ಇಲ್ಲದೇ ಸಾಗಿಸುತ್ತಿದ್ದ 53 ಲಕ್ಷ ನಗದು ವಶಕ್ಕೆ ಪಡೆದ ಗರಗ ಪೊಲೀಸರು

March 24, 2023

4 ವರ್ಷಗಳ ನಂತ್ರ 100 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

March 24, 2023

ಯಡಿಯೂರಪ್ಪ ನಿವಾಸದಲ್ಲಿ ಉಪಹಾರ ಸೇವಿಸಿದ ಸಚಿವ ಅಮಿತ್ ಶಾ

March 24, 2023

ಹೆಣ್ಣುಮಕ್ಕಳು ಮೈತ್ರಿ ಮುಟ್ಟಿನ ಕಪ್ ಬಳಕೆ ಮಾಡುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡಿ

March 23, 2023

ಸಿದ್ಧೇಶ್ವರ ರಥೋತ್ಸವಕ್ಕೆ ಹೆಲಿಕ್ಯಾಪ್ಟರ್ ಮೂಲಕ ಪುಷ್ಪಾರ್ಚಣೆ: ಅದ್ದೂರಿಯಾಗಿ ನಡೆದ ಜಾತ್ರಾ ಮಹೋತ್ಸವ

March 23, 2023

ಗ್ರಾಮೀಣ ಕ್ರೀಡೆ ಬಗ್ಗೆ ಜನರ ಆಸಕ್ತಿ : ಹೋರಿ ಸ್ಪರ್ಧೆ ನೊಡಲು ಸೇರಿದ ನೂರಾರು ಜನ.

March 23, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.