PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Sunday, September 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಭಯ ಹುಟ್ಟಿಸಿ ಚುನಾವಣಾ ತಂತ್ರ ನಡೆಯುತ್ತಿದೆ, ಯಾರೂ ಎದೆಗುಂದಬಾರದು: ನಿಖಿಲ್ ಕುಮಾರಸ್ವಾಮಿ ಅಭಯ
ಜಿಲ್ಲೆ Prajatv KannadaBy Prajatv KannadaMarch 16, 2023

ಭಯ ಹುಟ್ಟಿಸಿ ಚುನಾವಣಾ ತಂತ್ರ ನಡೆಯುತ್ತಿದೆ, ಯಾರೂ ಎದೆಗುಂದಬಾರದು: ನಿಖಿಲ್ ಕುಮಾರಸ್ವಾಮಿ ಅಭಯ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭಯದ ವಾತಾವರಣ ಸೃಷ್ಟಿಸಿ ಚುನಾವಣೆ ನಡೆಸುವ ತಂತ್ರ ನಡೆಯುತ್ತಿದೆ. ಆದರೆ ಯಾರೂ ಎದೆಗುಂದಬಾರದು. ಯುವ ಜನರಲ್ಲಿ ಧೈರ್ಯ ತುಂಬವ ಕೆಲಸವನ್ನು ನಾನು ಮಾಡುತ್ತೇನೆ ಎಂದು ಯುವ ಜನತಾದಳದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಭಯ ನೀಡಿದರು.

ರಾಜಕಾರಣದಿಂದ ಅಂತರ ಕಾಯ್ದಕೊಂಡಿದ್ದ ಯುವ ಮುಖಂಡರಾದ ಮಂಚನಬಲೆ ಮಧು ಹಾಗೂ ಅಂಗರೇಖನಹಳ್ಳಿ ರವಿಕುಮಾರ್ ಅವರ ಮನೆಗಳಿಗೆ ಭೇಟಿ ನೀಡಿ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಹುರಿದುಂಬಿಸಿದರು. ಪಕ್ಷದ ಬೆಳವಣಿಗೆ ಹಾಗೂ ಗೆಲುವಿಗೆ ಯುವಪಡೆಯನ್ನು ಚುರುಕುಗೊಳಿಸಲು ಇಬ್ಬರು ಜವಾಬ್ದಾರಿ ತೆಗೆದುಕೊಳ್ಳುವಂತೆ ಮಾತುಕತೆ ನಡೆಸಿದರು. ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.

ಭಯಪಡುವ ಅಗತ್ಯವಿಲ್ಲ:

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಒಲವಿದೆ. ಜೆಡಿಎಸ್ ಪಕ್ಷದ ಬದ್ರಕೋಟೆ ಚಿಕ್ಕಬಳ್ಳಾಪುರ. ಆದ್ರೆ ಇಲ್ಲಿ ಈ ಬಾರಿ ಹಣಬಲ ಹಾಗೂ ಸ್ವಾಭಿಮಾನದ ಮಧ್ಯೆ ಪೈಪೋಟಿ ನಡೆಯುತ್ತಿದೆ. ಯಾರ ಹೆದರಿಕೆಗೂ ಯಾರೂ ಭಯಪಡುವ ಅಗತ್ಯವಿಲ್ಲ. ನಿಮ್ಮ ಜೊತೆಗೆ ನಾನಿದ್ದೇನೆ. ಎಲ್ಲರೂ ಸೇರಿ ಪಕ್ಷವನ್ನು ಸಂಘಟಿಸಿ ಈ ಬಾರಿ ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡರನ್ನು ಗೆಲ್ಲಿಸಿಕೊಳ್ಳೋಣ ಎಂದರು.

ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡರು ಪ್ರಾಮಾಣಿಕರು. ಆದರೆ ವಿಧಾನಸಭಾ ಕ್ಷೇತ್ರದಲ್ಲಿ ಭಯದ ವಾತಾವರಣ ಸೃಷ್ಟಿಸುವ ಕೆಲಸ ನಡೆಯುತ್ತಿದೆ. ಇದಕ್ಕೆಲ್ಲಾ ಯಾರೂ ಹೆದರುವ ಅಗತ್ಯವಿಲ್ಲ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ದಿನೆ ದಿನೇ ಗಟ್ಟಿಯಾಗುತ್ತಿದೆ. ಕಳೆದ 45 ದಿನಗಳಿಂದ ಮನೆ ಮನೆಗೆ ಭೇಟಿ ನೀಡುತ್ತಿರುವ ಮಾಜಿ ಶಾಸಕ ಬಚ್ಚೇಗೌಡರು ಜನರಲ್ಲಿ ವಿಶ್ವಾಸಗಳಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಚಿಕ್ಕಬಳ್ಳಾಪುರದಲ್ಲಿ ಈ ಬಾರಿ ಹಣ ಮತ್ತು ಸ್ವಾಭಿಮಾನದ ಮಧ್ಯೆ ಕದನ ನಡೆಯುತ್ತಿದೆ. ಮಾಜಿ ಶಾಸಕ ಬಚ್ಚೇಗೌಡರು ಕೈ ಕಟ್ಟಿ ಕುಳಿತಿಲ್ಲ. ಮನೆ ಮನೆಗೆ ಭೇಟಿ ಮಾಡಿ ಮತದಾರರ ಮನವೊಲಿಸುತ್ತಿದ್ದಾರೆ. ಅವರೇನು ಇನ್ನೊಬ್ಬರ ಹಾಗೆ 50 ಲಕ್ಷಕ್ಕೋ ಒಂದು ಕೋಟಿಗೆ ಮಾರಾಟವಾಗುವ ವಸ್ತುವಲ್ಲ. ಕ್ಷೇತ್ರದಲ್ಲಿ ಭಯದ ವಾತಾವರಣ ಸೃಷ್ಟಿಸಿ ಗೆಲ್ಲುವ ಕನಸು ಕಾಣುತ್ತಿರುವವರಿಗೆ ಸೋಲಿನ ರುಚಿ ತೋರಿಸುತ್ತಾರೆ. ನಾನು ಯುವಕರ ಹಿಂದೆ ಇದ್ದು ಧೈರ್ಯ ತುಂಬುವ ಕೆಲಸ ಮಾಡುತ್ತೇನೆ ಎಂದರು.

ಈ ವೇಳೆ ಜೆಡಿಎಸ್ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಜಾತ್ಯತೀತ ಜನತಾದಳ ಜಿಲ್ಲಾಧ್ಯಕ್ಷ ಕೆ.ಎಂ.ಮುನೇಗೌಡ, ಮುಖಂಡರಾದ ವೆಂಕಟೇಶ್, ರಾಜಾಕಾಂತ್, ಯುವ ಮುಖಂಡರಾದ ಮಂಚನಬಲೆ ಮಧು, ಅಂಗರೇಖನಹಳ್ಳಿ ರವಿ, ಅಕಿಲ್ ರೆಡ್ಡಿ, ವೀಣಾರಾಮು, ನಾರಾಯಣಗೌಡ, ಪ್ರಭಾನಾರಾಯಣಗೌಡ ಸೇರಿದಂತೆ ಹಲವರಿದ್ದರು.

 

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಕಾವೇರಿ ವಿಚಾರದಲ್ಲಿ ವಿಪಕ್ಷಗಳು ರೈತರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿವೆ – ಚಲುವರಾಯಸ್ವಾಮಿ

September 24, 2023

ಸನಾತನ ಧರ್ಮ ಭಗವಂತನಿಂದ ನಿರ್ಮಾಣ, ಚಪ್ಪರ್ ಗಳಿಂದ ನಾಶ ಅಸಾಧ್ಯ – ಯತ್ನಾಳ್

September 24, 2023

 ದ್ವೇಷ ಭಾಷಣ ಆರೋಪ ವಿವಾರವಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ಧ ಕೇಸ್

September 23, 2023

ಜೆಡಿಎಸ್ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇ – ವೀರಪ್ಪ ಮೊಯಿಲಿ ವ್ಯಂಗ್ಯ

September 23, 2023

ಬರಗಾಲದ ವಿಚಾರದಲ್ಲಿ ಕಾಂಗ್ರೆಸ್​ ನಾಯಕರು ರಾಜಕಾರಣ ಮಾಡುತ್ತಿದ್ದಾರೆ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

September 23, 2023

ಪ್ರಧಾನಿ ಮೋದಿ ಅವರನ್ನು ವಿರೋಧ ಮಾಡಲು ಕಾಂಗ್ರೆಸ್​ ಸರ್ಕಾರ ಕರ್ನಾಟಕದ ಜನರನ್ನು ಬಲಿ ಕೊಡ್ತಾ ಇದೆ – ಜಿ.ಟಿ. ದೇವೇಗೌಡ

September 23, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.