ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯನ್ನ ಇಂದಿನಿಂದ ಜಾರಿಗೆ ತಂದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ನೀಡಿದ್ದ ಗ್ಯಾರಂಟಿಯಲ್ಲಿ ಮುಖ್ಯವಾದದ್ದು ಅನ್ನಭಾಗ್ಯ ಯೋಜನೆ. ಈ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿಕೊಂಡಿತ್ತು.
ಕೇಂದ್ರ ಸರ್ಕಾರದಿಂದ ಬರುವ 5 ಕೆಜಿ ಅಕ್ಕಿ ಜೊತೆಗೆ ರಾಜ್ಯ ಸರ್ಕಾರ ಇನ್ನೂ 5 ಕೆಜಿ ಅಕ್ಕಿ ನೀಡುತ್ತೇವೆ ಅಂತ ಹೇಳಿತ್ತು. ಆದರೆ ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುವುದನ್ನು ಕಡಿತಗೊಳಿಸಿತು .ಈ ಹಿನ್ನೆಲೆಯಲ್ಲಿ 5 ಕೆಜಿ ಅಕ್ಕಿ ಅದರ ಜೊತೆ 5 ಕೆಜಿ ಅಕ್ಕಿ ಬದಲು ಹಣ ನಿಡೋದಾಗಿ ಹೇಳಿತು.
ಆದರೇ ಪಡಿತರ ವಿತರಕರು ಇದನ್ನ ವಿರೋಧಿಸಿದ್ದಾರೆ. ಇದರಿಂದ ನಮ್ಮ ಕಮಿಷನ್ಗೆ ಬ್ರೇಕ್ ಬೀಳಲಿದೆ. ಸರ್ಕಾರ ಹಣವನ್ನ ನೀಡದೇ ಅದರ ಬದಲು ಇತರೆ ದಿನಸಿ ಪದಾರ್ಥಗಳನ್ನ ನೀಡಬೇಕು. ರಾಜ್ಯದಲ್ಲೇ ಬೆಳೆಯುವ ಬೆಳೆಕಾಳು, ಸಕ್ಕರೆ, ಉಪ್ಪು, ಬೆಲ್ಲ, ಹೀಗೆ ಬೇರೆ ಪದಾರ್ಥಗಳನ್ನ ಕೊಡಿ. ಹಣ ನೀಡುವುದರಿಂದ ಸರ್ಕಾರಕ್ಕೂ ಹೊರೆ ಆಗಲಿದೆ ಎಂಬ ವಿಚಾರವನ್ನು ಸರ್ಕಾರಕ್ಕೆ ಮನವರಿಕೆ ಮಾಡಲು ಪಡಿತರ ವಿತರಕರ ಸಂಘ ನಿರ್ಧರಿಸಿದೆ. ಈ ಸಂಬಂಧ ಇದೇ ಜುಲೈ 4 ಸಭೆ ಮಾಡಲು ಪಡಿತರ ವಿತರಕರ ಸಂಘ ನಿರ್ಧಾರ ಮಾಡಿದೆ