ಬೆಂಗಳೂರು ;- ಜುಲೈ ತಿಂಗಳ ಕರೆಂಟ್ ಬಿಲ್ ಕಟ್ಟಿದ್ರೆ ವಾಪಸ್ ಹಣ ಕೊಡ್ತೀವಿ ಎಂದು ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಜೂನ್ ತಿಂಗಳ ವಿದ್ಯುತ್ ಬಿಲ್ನಲ್ಲಿ ಸ್ವಲ್ಪ ಗೊಂದಲಗಳಿತ್ತು. ಆ ತಿಂಗಳ ಬಿಲ್ನಲ್ಲಿ ಜುಲೈ ತಿಂಗಳ ಕೆಲವು ದಿನಗಳು ಸೇರಿಕೊಂಡಿವೆ. ಈ ಸಮಸ್ಯೆ ಕೆಲವರಿಗೆ ಮಾತ್ರ ಆಗಿದೆ. ಅಂತಹ ಗ್ರಾಹಕರಿಗೆ ಕ್ರೆಡಿಟ್ ಕೊಡುತ್ತೇವೆ. ಬಾಕಿ ಮೊತ್ತ ಇಲ್ಲದಿದ್ದರೆ ನಾಲ್ಕು ತಿಂಗಳ ಬಳಿಕ ಹಣ ಹಿಂದಿರುಗಿಸುತ್ತೇವೆ. ಜುಲೈ ತಿಂಗಳ ಬಿಲ್ ಕಟ್ಟಿದರೆ ವಾಪಸ್ ಹಣ ನೀಡುತ್ತೇವೆ ಎಂದರು.
ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆ ಜಾರಿಯಾಗಿದೆ. ಆದರೆ ಇದಕ್ಕೆ ಅಧಿಕೃತವಾಗಿ ಚಾಲನೆಯನ್ನು ಅಗಸ್ಟ್ 5 ಕ್ಕೆ ನೀಡಲಾಗುವುದು. ಇದಕ್ಕಾಗಿ ಕಲಬುರಗಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.
ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ನೋಂದಣಿಗೆ ಅವಕಾಶ ನೀಡಲಾಗಿತ್ತು. ಅದರಂತೆ, 1 ಕೋಟಿ 40 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಜೂನ್ 25 ರ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಿರುವ ಫಲಾನುಭವಿಗಳಿಗೆ ಜುಲೈ ತಿಂಗಳಿನಿಂದ ಶೂನ್ಯ ವಿದ್ಯುತ್ ಬಿಲ್ ಸಿಗಲಿದೆ ಎಂದು ಮಾಹಿತಿ ನೀಡಿದ್ದಾರೆ.
![Demo](https://prajatvkannada.com/wp-content/uploads/2023/08/new-Aston-Band.jpeg)