PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Sunday, September 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » Statue Politics: ಶಿವಾಜಿ ಪ್ರತಿಮೆಯ ಕ್ರೆಡಿಟ್ ವಾರ್ ಗೆ MES ಎಂಟ್ರಿ! ಕ್ಷೀರಾಭಿಷೇಕ ನಡೆಸಲು ನಿರ್ಧಾರ!
ಜಿಲ್ಲೆ Prajatv KannadaBy Prajatv KannadaMarch 19, 2023

Statue Politics: ಶಿವಾಜಿ ಪ್ರತಿಮೆಯ ಕ್ರೆಡಿಟ್ ವಾರ್ ಗೆ MES ಎಂಟ್ರಿ! ಕ್ಷೀರಾಭಿಷೇಕ ನಡೆಸಲು ನಿರ್ಧಾರ!

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಳಗಾವಿ: ರಾಜಹಂಸಗಡ ಕೋಟೆ ಶಿವಾಜಿ ಪ್ರತಿಮೆಯ ಬಿಜೆಪಿ (BJP), ಕಾಂಗ್ರೆಸ್ (Congress) ಕ್ರೆಡಿಟ್ ಪಾಲಿಟಿಕ್ಸ್‌ಗೆ ಎಂಇಎಸ್ (MES) ಎಂಟ್ರಿಯಾಗಿದೆ.

ರಾಜಹಂಸಗಡ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ (Chhatrapati Shivaji Maharaj Statue) ವಾರ್ ಮುಂದುವರಿದಿದ್ದು ಶಿವಾಜಿ ಪ್ರತಿಮೆಗೆ ಇಂದು ಎಂಇಎಸ್ ಮುಖಂಡರು ಕ್ಷೀರಾಭಿಷೇಕ ಮಾಡಲು ನಿರ್ಧರಿಸಿದ್ದಾರೆ. ಕಾಂಗ್ರೆಸ್, ಬಿಜೆಪಿ ನಾಯಕರಿಂದ ಛತ್ರಪತಿ ಶಿವಾಜಿ ಮಹಾರಾಜರಿಗೆ ಅಪಮಾನ ಆರೋಪಿಸಿ ಭಾನುವಾರ ಎಂಇಎಸ್‌ನಿಂದ ರಾಜಹಂಸಗಡದ (Rajahamsagada) ಶಿವಾಜಿ ಪ್ರತಿಮೆ ಶುದ್ಧೀಕರಣ ಕಾರ್ಯಕ್ರಮ ನಡೆಸಲಾಗುತ್ತಿದೆ.

ಈಗಾಗಲೇ ಎರಡು ಬಾರಿ ಲೋಕಾರ್ಪಣೆ ಆದರೂ ವಿಧಿವಿಧಾನವಾಗಿ ಆಗಿಲ್ಲ ಎಂದು ಆರೋಪಿಸಿ ಎಂಇಎಸ್ ಮುಖಂಡರು ಇಂದು ಶಿವಾಜಿ ಮಹಾರಾಜರ ಪ್ರತಿಮೆ ಶುದ್ಧೀಕರಣ ಹೆಸರಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ. ರಾಜಹಂಸಗಡ ಕೋಟೆಯ ಪ್ರವೇಶ ದ್ವಾರದಿಂದ ರಾಜಹಂಸಗಡ ಕೋಟೆವರೆಗೆ ಮೆರವಣಿಗೆ ನಡೆಯಲಿದ್ದು, ಬಳಿಕ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಬಳಿಯ ಚಿಕ್ಕ ಮೂರ್ತಿಗೆ ಕ್ಷೀರಾಭಿಷೇಕಕ್ಕೆ ನಿರ್ಧಾರ ಮಾಡಲಾಗಿದೆ. ಇತ್ತೀಚೆಗಷ್ಟೇ ರಾಜಹಂಸಗಡ ಕೋಟೆಯ ಶಿವಾಜಿ ಪ್ರತಿಮೆ ಎದುರು ನಿಂತು ಎಂಇಎಸ್ ಮುಖಂಡರು ನಾಡದ್ರೋಹಿ ಘೋಷಣೆ ಕೂಗಿದ್ದರು‌. ಹೀಗಾಗಿ ಎಂಇಎಸ್‌ನ ಇಂದಿನ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿಯನ್ನು ಬೆಳಗಾವಿ ಜಿಲ್ಲಾಡಳಿತ ನೀಡಿದೆ.

ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆಗೆ ಕ್ಷೀರಾಭಿಷೇಕ ನೆರವೇರಿಸದಂತೆ ಷರತ್ತು ಹಾಕಲಾಗಿದ್ದು, ಇಂದು ರಾಜಹಂಸಗಡ ಕೋಟೆಯಲ್ಲಿ ವಿವಿಧ ಕಾರ್ಯಕ್ರಮ ಆಯೋಜನೆಗೆ ನಿರ್ಧರಿಸಲಾಗಿದೆ. ಇತ್ತೀಚೆಗೆ ರಾಜಹಂಸಗಡ ಕೋಟೆಯಲ್ಲಿ ನಾಡದ್ರೋಹಿ ಘೋಷಣೆ ಕೂಗಿದ್ದ ಎಂಇಎಸ್ ಮುಖಂಡರ ವಿರುದ್ಧ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

 

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಕಾವೇರಿ ವಿಚಾರದಲ್ಲಿ ವಿಪಕ್ಷಗಳು ರೈತರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿವೆ – ಚಲುವರಾಯಸ್ವಾಮಿ

September 24, 2023

ಸನಾತನ ಧರ್ಮ ಭಗವಂತನಿಂದ ನಿರ್ಮಾಣ, ಚಪ್ಪರ್ ಗಳಿಂದ ನಾಶ ಅಸಾಧ್ಯ – ಯತ್ನಾಳ್

September 24, 2023

 ದ್ವೇಷ ಭಾಷಣ ಆರೋಪ ವಿವಾರವಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ಧ ಕೇಸ್

September 23, 2023

ಜೆಡಿಎಸ್ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇ – ವೀರಪ್ಪ ಮೊಯಿಲಿ ವ್ಯಂಗ್ಯ

September 23, 2023

ಬರಗಾಲದ ವಿಚಾರದಲ್ಲಿ ಕಾಂಗ್ರೆಸ್​ ನಾಯಕರು ರಾಜಕಾರಣ ಮಾಡುತ್ತಿದ್ದಾರೆ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

September 23, 2023

ಪ್ರಧಾನಿ ಮೋದಿ ಅವರನ್ನು ವಿರೋಧ ಮಾಡಲು ಕಾಂಗ್ರೆಸ್​ ಸರ್ಕಾರ ಕರ್ನಾಟಕದ ಜನರನ್ನು ಬಲಿ ಕೊಡ್ತಾ ಇದೆ – ಜಿ.ಟಿ. ದೇವೇಗೌಡ

September 23, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.