ಮಂಡ್ಯದಲ್ಲಿ ನಡೆದ ಬೃಹತ್ ಕಾಂಗ್ರೆಸ್ ಪ್ರಚಾರ ಸಮಾವೇಶದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಂಡು ಬಿಜೆಪಿ ಹಾಗೂ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು. ಸಮಾವೇಶಕ್ಕೂ ಮುನ್ನ ಮಂಡ್ಯಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ರಾಹುಲ್ ಗಾಂಧಿ ಅವ್ರನ್ನ ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಅದ್ದೂರಿ ಸ್ವಾಗತ ನೀಡಿದ್ರು.
ರೇಷ್ಮೆ ಶಾಲು ತೊಡಿಸಿ ಬರಮಾಡಿಕೊಂಡ ಗಣಿರವಿಕುಮಾರ್, ಬೃಹತ್ ಸಮಾವೇಶದಲ್ಲಿ ರಾಹುಲ್ ಗಾಂಧಿಗೆ ಶ್ರೀಕೃಷ್ಣನ ಮೂರ್ತಿ ಕಂಚಿನ ಮೂರ್ತಿಯನ್ನು ಉಡುಗೊರೆಯಾಗಿ ನೀಡಿದ್ರು. ಇದೇ ವೇಳೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಗೆಲ್ಲಿಸಲು ತಂತ್ರಗಾರಿಕೆ ಸೇರಿದಂತೆ ರಾಜಕೀಯ ಬೆಳವಣಿಗೆಗಳ ಬಗ್ಗೆ ರಾಹುಲ್ ಗಾಂಧಿ ಅವರು ಶಾಸಕ ರವಿಕುಮಾರ್ ಗಣಿಗ ಜತೆ ಚರ್ಚೆ ನಡೆಸಿದರು.