PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Monday, September 25
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಕ್ರಿಕೆಟ್ ಇತಿಹಾಸದಲ್ಲಿ ಧೋನಿ ಸ್ಥಾನ ತುಂಬಲು ಯಾರಿಂದಲೂ ಸಾಧ್ಯವಿಲ್ಲ: ಹೀಗೆಂದಿದ್ದು ಯಾರಂತೀರಾ?
ಕ್ರೀಡೆ Prajatv KannadaBy Prajatv KannadaJune 1, 2023

ಕ್ರಿಕೆಟ್ ಇತಿಹಾಸದಲ್ಲಿ ಧೋನಿ ಸ್ಥಾನ ತುಂಬಲು ಯಾರಿಂದಲೂ ಸಾಧ್ಯವಿಲ್ಲ: ಹೀಗೆಂದಿದ್ದು ಯಾರಂತೀರಾ?

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಹೊಸದಿಲ್ಲಿ: ಇತ್ತೀಚೆಗೆ ಮುಕ್ತಾಯವಾಗಿದ್ದ 2023ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಎಂಎಸ್‌ ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಕಳೆದ ಸೋಮವಾರ ನಡೆದಿದ್ದ ಫೈನಲ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್ ವಿರುದ್ಧ ಗೆದ್ದು ಸಿಎಸ್‌ಕೆ ವಿಶ್ವದ ಶ್ರೀಮಂತ ಫ್ರಾಂಚೈಸಿ ಲೀಗ್‌ನಲ್ಲಿ ಐದನೇ ಬಾರಿ ಚಾಂಪಿಯನ್‌ ಆಗಿ ಹೊರ ಹೊಮ್ಮಿತು. ಈ ಹಿನ್ನೆಲೆಯಲ್ಲಿ ಎಂಎಸ್‌ ಧೋನಿಯನ್ನು ಮಾಜಿ ಆಲ್‌ರೌಂಡರ್‌ ರವಿ ಶಾಸ್ತ್ರಿ ಶ್ಲಾಘಿಸಿದ್ದಾರೆ.

2023ರ ಐಪಿಎಲ್‌ ಫೈನಲ್‌ ಬಳಿಕ ಮಾತನಾಡಿದ್ದ ಟೀಮ್‌ ಇಂಡಿಯಾ ಮಾಜಿ ಹೆಡ್‌ ಕೋಚ್‌ ರವಿ ಶಾಸ್ತ್ರಿ, ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ಎಂಎಸ್‌ ಧೋನಿ ಪರಂಪರೆಯನ್ನು ಸರಿದೂಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ. ಜಾರ್ಖಂಡ್‌ ರಾಜ್ಯವಾದರೂ ದಕ್ಷಿಣ ಭಾರತದ ರಾಜ್ಯಗಳಿಂದ ಎಂಎಸ್‌ ಧೋನಿ ಮೇಲೆ ಅಪಾರ ಪ್ರೀತಿ ಇದೆ ಎಂದು ಹೇಳಿದ್ದಾರೆ.

“250 ಐಪಿಎಲ್‌ ಪಂದ್ಯಗಳು ಎಂಎಸ್‌ ಧೋನಿಯ ಫಿಟ್‌ನೆಸ್‌ ಅನ್ನು ಸಾಬೀತುಪಡಿಸುತ್ತವೆ. ಈ ಟೂರ್ನಿಯಲ್ಲಿ ಎಂಎಸ್‌ ಧೋನಿ ಬಿಟ್ಟು ಹೋಗಲಿರುವ ಪರಂಪರೆಯನ್ನು ಯಾರಿಂದಲೂ ಸರಿಗಟ್ಟಲು ಸಾಧ್ಯವಿಲ್ಲ. ಚೆನ್ನೈ ಸೇರಿದಂತೆ ತಮಿಳುನಾಡಿನ ಸಂಪೂರ್ಣ ಜನ ಎಂಎಸ್‌ ಧೋನಿಯನ್ನು ತಲಾ ಎಂದು ಕರೆಯುತ್ತಾರೆ. ಜಾರ್ಖಂಡ್‌ನ ಒಬ್ಬ ವ್ಯಕ್ತಿ ದಕ್ಷಿಣ ಭಾರತದ ಸಿಎಸ್‌ಕೆ ಅಭಿಮಾನಿಗಳಿಂದ ಸ್ವೀಕರಿಸಿದ ಪ್ರೀತಿ ಮತ್ತು ಪ್ರಶಂಸೆ ಈ ಕ್ರಿಕೆಟಿಗನ ಶ್ರೇಷ್ಠತೆಗೆ ಸಾಕ್ಷಿಯಾಗಿದೆ,” ಎಂದು ರವಿ ಶಾಸ್ತ್ರಿ ಗುಣಗಾನ ಮಾಡಿದ್ದಾರೆ.

ಫೈನಲ್‌ ಪಂದ್ಯದ ಬಳಿಕ ಎಂಎಸ್‌ ಧೋನಿಗೆ ನಿವೃತ್ತಿ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಎಂಎಸ್‌ ಧೋನಿ, ನಿವೃತ್ತಿ ಘೋಷಿಸಲು ಇದು ಉತ್ತಮ ಸಮಯ. ಆದರೆ, ಟೂರ್ನಿಯುದ್ದಕ್ಕೂ ಅಭಿಮಾನಿಗಳು ನನ್ನ ಮೇಲೆ ಸಾಕಷ್ಟು ಪ್ರೀತಿ ಹಾಗೂ ವಾತ್ಸಲ್ಯ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ನೊಂದು ಆವೃತ್ತಿಯಲ್ಲಿ ಆಡಲು ಬಯಸುತ್ತಿದ್ದೇನೆ. ಇದಕ್ಕಾಗಿ ಮುಂದಿನ 9 ತಿಂಗಳ ಕಾಲ ಕಠಿಣ ಪರಿಶ್ರಮ ಪಡುತ್ತೇನೆ. ಆದರೆ, ಇದೆಲ್ಲವೂ ನನ್ನ ದೇಹವನ್ನು ಅವಲಂಬಿಸಿರುತ್ತದೆ ಎಂದು ಹೇಳಿದ್ದರು

“ಇಲ್ಲಿಂದ ಹೊರಗಡೆ ಹೋಗುವುದು ತುಂಬಾ ಸುಲಭ ಆದರೆ, ಮತ್ತೊಮ್ಮೆ ಕಮ್‌ಬ್ಯಾಕ್ ಮಾಡುವುದು ತುಂಬಾನೇ ಕಷ್ಟ. ನಾನು ಎಲ್ಲಿಗೇ ಹೋದರೂ ನನ್ನ ಮೇಲೆ ಅಭಿಮಾನಿಗಳು ತೋರುತ್ತಿದ್ದ ಪ್ರೀತಿ ಹಾಗೂ ವಾತ್ಸಲ್ಯ ಅದ್ಭುತವಾಗಿತ್ತು. ಇವರಿಗಾಗಿ ನಾನು ಮತ್ತೊಂದು ಆವೃತ್ತಿಯಲ್ಲಿ ಆಡಲು ಬಯಸುತ್ತಿದ್ದೇನೆ. ಮತ್ತೊಂದು ಟೂರ್ನಿಯಲ್ಲಿ ಆಡಲು ಮುಂದಿನ 9 ತಿಂಗಳ ಕಾಲ ಕಷ್ಟಪಡುತ್ತೇನೆ. ನನ್ನ ಫಿಟ್ನೆಸ್‌ ಸರಿಯಾಗಿದ್ದು ನಾನು ಇಲ್ಲಿಗೆ ಮರಳಿಸಿದರೆ, ಇದು ಅಭಿಮಾನಿಗಳಿಗೆ ವರದಾನವಾಗಲಿದೆ,” ಎಂದು ಎಂಎಸ್‌ ಧೋನಿ ತಿಳಿಸಿದ್ದಾರೆ.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಭಾರತೀಯ ಏಷ್ಯನ್ ಗೇಮ್ಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಶಫಾಲಿ ವರ್ಮಾ

September 23, 2023

ಟೀಮ್ ಇಂಡಿಯಾ ಆಯ್ಕೆ ಮಾಡಿದ ಶ್ರೀಲಂಕಾ ದಿಗ್ಗಜ ಅರ್ಜುನ ರಣತುಂಗ

September 23, 2023

ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಜಯ

September 23, 2023

ಮಳೆಯಿಂದ ಭಾರತ-ಮಲೇಷ್ಯಾ ಪಂದ್ಯ ರದ್ದು, ರನ್ ರೇಟ್ ಆಧಾರಿಸಿ ಕ್ವಾರ್ಟರ್ ಫೈನಲ್‍ಗೆ ಟೀಂ ಇಂಡಿಯಾ

September 22, 2023

ಈ ಬಾರಿ ವಿಶ್ವಕಪ್‌ ಗೆಲ್ಲಲು ಕ್ರಿಕೆಟಿಗರ ಕಸರತ್ತು ಹೇಗಿದೆ ಗೊತ್ತಾ?

September 22, 2023

ಈ ಸಲ ವಿಶ್ವಕಪ್‌ ಸಿಗೋದು ಇವರಿಂದಲೇ: ಕ್ರಿಕೆಟ್‌ ದಿಗ್ಗಜರ ವಿಶ್ವಾಸ: ಯಾರಿದು?

September 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.