PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Sunday, September 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಶಾಸಕ ಮಾಡಾಳ್‌ ಜಾಮೀನಿಗೆ ಆಕ್ಷೇಪ – ತುರ್ತು ವಿಚಾರಣೆಗೆ ಸುಪ್ರೀಂ ನಕಾರ
ರಾಷ್ಟ್ರೀಯ Prajatv KannadaBy Prajatv KannadaMarch 14, 2023

ಶಾಸಕ ಮಾಡಾಳ್‌ ಜಾಮೀನಿಗೆ ಆಕ್ಷೇಪ – ತುರ್ತು ವಿಚಾರಣೆಗೆ ಸುಪ್ರೀಂ ನಕಾರ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ನವದೆಹಲಿ: ಬಿಜೆಪಿ (BJP) ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಅವರಿಗೆ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಲೋಕಾಯುಕ್ತ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಎರಡು ಬಾರಿ ವಕೀಲರು ಮಂಗಳವಾರ ಮನವಿ ಮಾಡಿದರು.

ಲೋಕಾಯುಕ್ತ (Lokayukta) ಪರ ವಕೀಲರು ಮೊದಲು ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಸಾಂವಿಧಾನಿಕ ಪೀಠದಲ್ಲಿ ಭಾಗಿಯಾಗುತ್ತಿದ್ದು ತುರ್ತು ವಿಚಾರಣೆ ಸಾಧ್ಯವಿಲ್ಲ, ಕಲಾಪ ಅಂತ್ಯದ ವೇಳೆ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದರು. ಒಂದು ವೇಳೆ ತುರ್ತು ವಿಚಾರಣೆಯ ಅಗತ್ಯವಿದ್ದಲ್ಲಿ ನ್ಯಾ. ಸಂಜಯ್ ಕಿಶನ್ ಕೌಲ್ ಪೀಠದಲ್ಲಿ ಪ್ರಸ್ತಾಪಿಸಲು ಸೂಚನೆ ನೀಡಿದರು.

ಸಿಜೆಐ ಸೂಚನೆ ಮೇರೆಗೆ ನ್ಯಾ. ಸಂಜಯ್ ಕಿಶನ್ ಕೌಲ್ ಪೀಠದ ಮುಂದೆ ಲೋಕಾಯುಕ್ತ ಪರ ವಕೀಲರು ತುರ್ತು ವಿಚಾರಣೆಗೆ ಮನವಿ ಮಾಡಿದರು. ಆದರೆ ನ್ಯಾ. ಕೌಲ್ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದರು. ಅರ್ಜಿಯಲ್ಲಿ ತುರ್ತು ವಿಚಾರಣೆ ಮಾಡುವಂತದ್ದು ಏನಿದೆ? ಮಧ್ಯಂತರ ಜಾಮೀನು ರದ್ದುಗೊಳಿಸಬೇಕಾ? ಹೈಕೋರ್ಟ್ ತನ್ನ ವಿವೇಚನೆಯಲ್ಲಿ ಜಾಮೀನು ನೀಡಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು ಆರೋಪಿ ಹಾಲಿ ಶಾಸಕರಾಗಿದ್ದು, ಅಪಾರ ಪ್ರಮಾಣದ ಹಣ ವಶಪಡಿಸಿಕೊಳ್ಳಲಾಗಿದೆ ಎಂದರು.

ವಾದ ಆಲಿಸಿದ ಬಳಿಕ ಪ್ರಕರಣವನ್ನು ಸಾಧ್ಯವಾದಷ್ಟು ಬೇಗ ವಿಚಾರಣೆ ಪಟ್ಟಿ ಮಾಡಲು ಸೂಚನೆ ನೀಡಿದರು. ಇದಾದ ಬಳಿಕವೂ ವಕೀಲರು ತುರ್ತು ವಿಚಾರಣೆಗೆ ಮನವಿ ಮಾಡಿದ ವಕೀಲರಿಗೆ ತರಾಟೆಗೆ ತೆಗೆದುಕೊಂಡ ನ್ಯಾ.ಕೌಲ್ ಹಿಂದಿನ ಆದೇಶವನ್ನು ವಾಪಸ್ ಪಡೆಯವುದಾಗಿ ಎಚ್ಚರಿಸಿದರು.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಗಂಡು ಮಗುವಿನ ಆಸೆಗೆ ಹೆತ್ತ ತಂದೆಯಿಂದಲೇ ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ..!

September 23, 2023

ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆ ಕಡ್ಡಾಯವಲ್ಲ: ಸುಪ್ರೀಂಗೆ ಚುನಾವಣಾ ಆಯೋಗ ಮಾಹಿತಿ

September 23, 2023

ಭಾರತದ ಸಂಸ್ಥೆಗಳನ್ನು RSS ವಶಪಡಿಸಿಕೊಳ್ಳಲು ಬಿಡುವುದಿಲ್ಲ: ರಾಹುಲ್ ಗಾಂಧಿ

September 23, 2023

4 ವರ್ಷಗಳಿಂದ ಗೃಹ ಬಂಧನದಲ್ಲಿದ್ದ ಮಿರ್ವೈಜ್ ಉಮರ್ ಫಾರೂಕ್ ಬಿಡುಗಡೆ

September 23, 2023

ಕೇಸು ಹಿಂಪಡೆಯಲು ತಿರಸ್ಕರಿಸಿದ್ದಕ್ಕೆ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪೊಲೀಸ್..!

September 22, 2023

ಮೋದಕ ತಿನ್ನುತ ಇಂಡಿಗೋ ವಿಮಾನದಲ್ಲಿ ಬಂದಿಳಿದ ಗಣಪ..! ಫೋಟೋ ವೈರಲ್

September 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.