PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಓಲಾ ಶೇರಿಂಗ್, ಉಬರ್ ಪೂಲಿಂಗ್‌ʼಗೆ ಅವಕಾಶ ನೀಡಲು ಸಂಸದರ ಪಟ್ಟು: ಕೆರಳಿದ ಖಾಸಗಿ ಸಾರಿಗೆ ಚಾಲಕರು

October 2, 2023

BMTC ನೌಕರರಿಗೆ ಗುಡ್ ನ್ಯೂಸ್: ಡಿಪೋಗಳಲ್ಲೇ ಊಟ ತಿಂಡಿ ಒದಗಿಸುವ ಕ್ಯಾಂಟೀನ್‌ ಆರಂಭ!

October 2, 2023

ಗಾಂಧಿಜೀ ಅವರ ಕನಸಾದ ಸ್ವಚ್ಛ ಭಾರತ ಕನಸನ್ನ ನನಸು ಮಾಡಬೇಕಿದೆ: ಗ್ರಾ.ಪಂ.ಅಧ್ಯಕ್ಷ ಅಶೋಕ್

October 2, 2023
Facebook Twitter Instagram
Monday, October 2
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಚುನಾವಣಾ ಹೊಸ್ತಿಲಲ್ಲಿ ಬಿಜೆಪಿ ಪಕ್ಷದ ನಾಯಕರ ಶೀತಲ ಸಮರ: ಹೈಕಮಾಂಡ್ ಗೆ ದೊಡ್ಡ ತಲೆನೋವು
ಬೆಂಗಳೂರು Prajatv KannadaBy Prajatv KannadaMarch 18, 2023

ಚುನಾವಣಾ ಹೊಸ್ತಿಲಲ್ಲಿ ಬಿಜೆಪಿ ಪಕ್ಷದ ನಾಯಕರ ಶೀತಲ ಸಮರ: ಹೈಕಮಾಂಡ್ ಗೆ ದೊಡ್ಡ ತಲೆನೋವು

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ಚುನಾವಣಾ ಹೊಸ್ತಿಲಲ್ಲಿ ರಾಜ್ಯ ಬಿಜೆಪಿಯ ನಾಯಕರ ನಡುವಿನ ಮುಸುಕಿನ ಗುದ್ದಾಟ ತೀವ್ರಗೊಂಡಿದೆ. ಸಚಿವ ವಿ. ಸೋಮಣ್ಣ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ನಡುವಿನ ತಿಕ್ಕಾಟ ಒಂದು ಕಡೆಯಾದರೆ, ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಡುವಿನ ಫೈಟ್ ಕೂಡಾ ಬಹಿರಂಗವಾಗಿಯೇ ನಡೆಯುತ್ತಿದೆ.

ಇದರ ಜೊತೆಗೆ ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನಡುವಿನ ಮುಸುಕಿನ ಗುದ್ದಾಟವೂ ಬಿಜೆಪಿ ಹೈಕಮಾಂಡ್ ತಲೆನೋವಿಗೆ ಕಾರಣವಾಗಿದೆ.

ವಿ. ಸೋಮಣ್ಣ v/s ವಿಜಯೇಂದ್ರ

ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದ ಸಚಿವ ವಿ. ಸೋಮಣ್ಣ ದಿಢೀರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಅವರು ವಿಜಯೇಂದ್ರ ವಿರುದ್ದ ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ಈ ನಡುವೆ ಸೋಮಣ್ಣ ಅವರು ಡಿ.ಕೆ.ಶಿವಕುಮಾರ್ ಜೊತೆಗೆ ಇದ್ದ ಫೋಟೋ ಕೂಡಾ ವೈರಲ್ ಆಗಿತ್ತು.

ಈ ಬೆನ್ನಲ್ಲೇ ಹೈಕಮಾಂಡ್ ಸೋಮಣ್ಣ ‌ಅವರನ್ನು ದೆಹಲಿಗೆ ಕರೆಸಿಕೊಂಡಿತ್ತು. ದೆಹಲಿಯಲ್ಲಿ ಹೈಕಮಾಂಡ್ ಸೂಚನೆಯ ಬಳಿಕ ಸೋಮಣ್ಣ ಮುನಿಸು ತಣ್ಣಗಾಯಿತು. ಬೆಂಗಳೂರಿಗೆ ಆಗಮಿಸಿದ ಅವರು, ಬಿ.ಎಸ್.ಯಡಿಯೂರಪ್ಪ ಈ ಕುರಿತಾಗಿ ಮೆಚ್ಚುಗೆ ಮಾತನ್ನು ಆಡಿದರೂ ವಿಜಯೇಂದ್ರ ಬಗ್ಗೆ ಪರೋಕ್ಷವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಈ ಮುನಿಸು ಮುಂದಿನ ದಿನಗಳಲ್ಲೂ ತೀವ್ರವಾಗುವ ಸಾಧ್ಯತೆಗಳು ದಟ್ಟವಾಗಿದೆ. ಲಿಂಗಾಯತ ಸಮುದಾಯದ ನಾಯಕತ್ವಕ್ಕಾಗಿ ಒಂದು ಕಡೆಯಲ್ಲಿ ಸೋಮಣ್ಣ ಪ್ರಯತ್ನ ಪಟ್ಟರೆ ಮತ್ತೊಂದು ಕಡೆಯಲ್ಲಿ ವಿಜಯೇಂದ್ರ ಪ್ರಯತ್ನ ನಡೆಸುತ್ತಿರುವುದೇ ಈ ಒಳಜಗಳಕ್ಕೆ ಕಾರಣವಾಗಿದೆ

ಸಿ.ಟಿರವಿ v/s ಎಂಪಿಕುಮಾರಸ್ವಾಮಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ನಡುವಿನ ಫೈಟ್ ಕೂಡಾ ಜೋರಾಗಿದೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಒಂದು ಗುಂಪು ತಿರುಗಿಬಿದ್ದಿದ್ದು, ಗುರುವಾರ ಪ್ರತಿಭಟನೆ ನಡೆಸಿತ್ತು. ಆದರೆ ಈ ಪ್ರತಿಭಟನೆಯ ಹಿಂದೆ ಸಿ.ಟಿ ರವಿ ಕೈವಾಡ ಇದೆ ಎಂಬುವುದು ಎಂಪಿ ಕುಮಾರಸ್ವಾಮಿ ಆಪ್ತರ ಆರೋಪವಾಗಿದೆ.

ಎಂ.ಪಿ.ಕುಮಾರಸ್ವಾಮಿ ಈ ಹಿಂದೆಯೂ ಸಿಟಿ ರವಿ ವಿರುದ್ಧ ಪರೋಕ್ಷವಾಗಿ ಆಕ್ರೋಶ ಹೊರಹಾಕಿದ್ದರು. ಕ್ಷೇತ್ರಕ್ಕೆ ಅನುದಾನ ಕಡತದಲ್ಲಿ ಅವರ ಪಾತ್ರ ಇದೆ ಎಂಬ ಆರೋಪವನ್ನು ಆಂತರಿಕವಾಗಿ ಮಾಡಿದ್ದರು. ಇವರಿಬ್ಬರ ನಡುವಿನ ಮುಸುಕಿನ ಗುದ್ದಾಟ ಇದೀಗ ತೀವ್ರವಾಗೊಂಡಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜೆಪಿಗೆ ಹೊಡೆತ ಬೀಳುವ ಸಾಧ್ಯತೆ ಅಲ್ಲಗಳೆಯುವ ಹಾಗಿಲ್ಲ.

ಬೈರತಿಬಸವರಾಜ v/s ನಂದೀಶ್ರೆಡ್ಡಿ

ಕೆ.ಆರ್.ಪುರಂ ಮಾಜಿ ಶಾಸಕ ನಂದೀಶ್ ರೆಡ್ಡಿ ಹಾಗೂ ಸಚಿವ ಬೈರತಿ ಬಸವರಾಜ ನಡುವಿನ ಶೀತಲ ಸಮರವೂ ರಾಜ್ಯ ಬಿಜೆಪಿ ನಾಯಕರ ತಲೆನೋವಿಗೆ ಕಾರಣವಾಗಿದೆ. ತಮ್ಮ ಕ್ಷೇತ್ರವಾದ ಕೆ.ಆರ್.ಪುರವನ್ನು ಬಿಟ್ಟುಕೊಡುವಂತೆ ಬಿಜೆಪಿ ಹೈಕಮಾಂಡ್ ಬಳಿ ಪಟ್ಟು ಹಿಡಿಯುತ್ತಿದ್ದಾರೆ. ಪರಿಣಾಮವಾಗಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡು ಸಚಿವರಾಗಿರುವ ಬೈರತಿ ಬಸವರಾಜ ಹಾಗೂ ನಂದೀಶ್ ರೆಡ್ಡಿ ನಡುವಿನ ವೈಮನಸ್ಸು ತೀವ್ರಗೊಂಡಿದೆ. ಕೆ.ಆರ್ ಪುರಂ ಕ್ಷೇತ್ರದಲ್ಲಿ ಬಿಜೆಪಿ ಎರಡು ಗುಂಪುಗಳಾಗಿ ವಿಭಜನೆಗೊಂಡಿದ್ದು, ಈ ಎರಡು ಗುಂಪುಗಳ ನಡುವೆ ಮುಸುಕಿನ ಗುದ್ದಾಟವೂ ಜೋರಾಗಿದೆ.

ಬೆಳಗಾವಿಯ ಪ್ರಭಾವಿ ನಾಯಕರಾದ ಲಕ್ಷ್ಮಣ ಸವದಿ ವರ್ಸಸ್ ರಮೇಶ್ ಜಾರಕಿಹೊಳಿ ನಡುವಿನ ತಿಕ್ಕಾಟವೂ ತೀವ್ರಗೊಂಡಿದೆ. ಅಥಣಿಯಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಮಹೇಶ್‌ ಕುಮಟಳ್ಳಿ ಅವರಿಗೆ ಟಿಕೆಟ್‌ ನೀಡದಿದ್ದರೆ ತಾವು ಕೂಡ ಗೋಕಾಕದಿಂದ ಚುನಾವಣೆಗೆ ಸ್ಪರ್ಧಿಸೊಲ್ಲ ಎಂಬ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿಕೆ ನೀಡಿದ್ದರು.

ಆದರೆ ರಮೇಶ್ ಜಾರಕಿಹೊಳಿ ಹೇಳಿಕೆಗೆ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕುಟುಂಬದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಚುನಾವಣೆಯಲ್ಲಿ ಅಥಣಿಯಲ್ಲಿ ನನ್ನ ತಂದೆ ಲಕ್ಷ್ಮಣ ಸವದಿ ಸ್ಪರ್ಧಿಸೋದು ಖಚಿತ ಎಂದು ಪುತ್ರ ಚಿದಾನಂದ ಸವದಿ ಹೇಳುವ ಮೂಲಕ ಕ್ಷೇತ್ರದಲ್ಲಿ ಇಬ್ಬರು ನಾಯಕರ ನಡುವಿನ ಭಿನ್ನಾಭಿಪ್ರಾಯ ಬಹಿರಂಗಗೊಂಡಿದೆ.

2004ರಿಂದ ಬಿಜೆಪಿ ಸಂಘಟನೆಗೆ ನನ್ನ ತಂದೆ ಲಕ್ಷ್ಮಣ ಸವದಿ ಶ್ರಮಿಸುತ್ತಿದ್ದಾರೆ. 2019ರಲ್ಲಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕ್ಷೇತ್ರವನ್ನು ಬೇರೆಯವರಿಗೆ ಬಿಟ್ಟುಕೊಡುವ ಪ್ರಸಂಗ ಬಂತು. ಕ್ಷೇತ್ರದ ಸಾವಿರಾರು ಕಾರ್ಯಕರ್ತರು, ಮುಖಂಡರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಅವರೇ ಸ್ಪರ್ಧಿಸಬೇಕೆಂದು ಒತ್ತಡ ಹಾಕುತ್ತಿದ್ದಾರೆ ಎಂದು ಸವದಿ ಪುತ್ರ ಹೇಳಿದ್ದಾರೆ. ಬೇರೆಯವರಿಗೆ ಕ್ಷೇತ್ರ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದಿರುವುದು ಮುಂದಿನ ದಿನಗಳಲ್ಲಿ ಬೆಳಗಾವಿ ಬಿಜೆಪಿಯಲ್ಲಿ ಇಬ್ಬರು ಪ್ರಭಾವಿ ನಾಯಕರ ತಿಕ್ಕಾಟ ತೀವ್ರಗೊಳ್ಳುವ ಮುನ್ಸೂಚನೆ ನೀಡಿದೆ.

ನಾಯಕರಗುದ್ದಾಟಹೈಕಮಾಂಡ್ಗೆತಲೆನೋವು
ಕರ್ನಾಟಕದಲ್ಲಿ ಬಿಜೆಪಿ ನಾಯಕರ ನಡುವಿನ ಗುದ್ದಾಟ ಹೈಕಮಾಂಡ್ ಗೂ ತಲೆನೋವು ಸೃಷ್ಟಿಸಿದೆ. ಚುನಾವಣಾ ದೃಷ್ಟಿಯಿಂದ ಬಹಿರಂಗವಾಗಿ ಯಾವುದೇ ತಿಕ್ಕಾಟ ನಡೆಸದಂತೆ ಸೂಚನೆ ನೀಡಿದೆ. ವಿ. ಸೋಮಣ್ಣ ಅವರು ಯಡಿಯೂರಪ್ಪ ವಿರುದ್ಧವಾಗಿ ಬಹಿರಂಗ ಹೇಳಿಕೆ ನೀಡಿದ ಬೆನ್ನಲ್ಲೇ ಅವರನ್ನು ದೆಹಲಿಗೆ ಕರೆದು ಬಹಿರಂಗವಾಗಿ ಹೇಳಿಕೆ ಕೊಡದಂತೆ ಸೂಚನೆ ನೀಡಿತ್ತು‌. ಈ ಮೂಲಕ ಭಿನ್ನಾಭಿಪ್ರಾಯವನ್ನು ಶಮನ ಮಾಡಲು ಪ್ರಯತ್ನವನ್ನು ನಡೆಸುತ್ತಿದೆ.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಓಲಾ ಶೇರಿಂಗ್, ಉಬರ್ ಪೂಲಿಂಗ್‌ʼಗೆ ಅವಕಾಶ ನೀಡಲು ಸಂಸದರ ಪಟ್ಟು: ಕೆರಳಿದ ಖಾಸಗಿ ಸಾರಿಗೆ ಚಾಲಕರು

October 2, 2023

BMTC ನೌಕರರಿಗೆ ಗುಡ್ ನ್ಯೂಸ್: ಡಿಪೋಗಳಲ್ಲೇ ಊಟ ತಿಂಡಿ ಒದಗಿಸುವ ಕ್ಯಾಂಟೀನ್‌ ಆರಂಭ!

October 2, 2023

ಗಾಂಧಿಜೀ ಅವರ ಕನಸಾದ ಸ್ವಚ್ಛ ಭಾರತ ಕನಸನ್ನ ನನಸು ಮಾಡಬೇಕಿದೆ: ಗ್ರಾ.ಪಂ.ಅಧ್ಯಕ್ಷ ಅಶೋಕ್

October 2, 2023

ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ!

October 2, 2023

ಶಿವಮೊಗ್ಗ ಗಲಭೆ: ಗೃಹ ಸಚಿವ ಪರಮೇಶ್ವರ್​​ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ: ಆರ್.‌ ಅಶೋಕ್‌ ಕಿಡಿ!

October 2, 2023

ವಿಮಾನದಲ್ಲಿ ಎಮರ್ಜೆನ್ಸಿ ಬಾಗಿಲು ತೆಗೆಯಲು ಯತ್ನಿಸಿದವನ ಬಂಧನ: ವಿಡಿಯೋ ವೈರಲ್

October 2, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.