PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಕ್ಷಮೆ ಕೇಳದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

March 29, 2023

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023
Facebook Twitter Instagram
Thursday, March 30
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಪ್ರಧಾನಿ ಮೋದಿಗೆ ಜೆಡಿಎಸ್ ಬಗ್ಗೆ ಮಾತನಾಡಲು ಸಬ್ಜೆಕ್ಟ್ ಇಲ್ಲ: HDK ವ್ಯಂಗ್ಯ
ಜಿಲ್ಲೆ Prajatv KannadaBy Prajatv KannadaMarch 13, 2023

ಪ್ರಧಾನಿ ಮೋದಿಗೆ ಜೆಡಿಎಸ್ ಬಗ್ಗೆ ಮಾತನಾಡಲು ಸಬ್ಜೆಕ್ಟ್ ಇಲ್ಲ: HDK ವ್ಯಂಗ್ಯ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಹಾಸನ: ಪ್ರಧಾನಿ ನರೇಂದ್ರ ಮೋದಿಯವರಿಗೆ ಜೆಡಿಎಸ್ ಬಗ್ಗೆ ಮಾತನಾಡಲು ಸಬ್ಜೆಕ್ಟ್ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಹೇಳಿದ್ದಾರೆ.

ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಮೋದಿ ಜೆಡಿಎಸ್ (JDS) ಬಗ್ಗೆ ಮಾತನಾಡದಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಯಾವುದೇ ರೀತಿಯಲ್ಲಿ ಜೆಡಿಎಸ್ ಪಕ್ಷದ ಬಗ್ಗೆ ಚರ್ಚೆ ಮಾಡಲಿಕ್ಕೆ ಅವರತ್ರ ಸರಕು ಇಲ್ಲದೆ ಇರುವುದರಿಂದ ಜೆಡಿಎಸ್ ಬಗ್ಗೆ ಮಾತನಾಡಲು ಆಗಲ್ಲ. ದೇವೇಗೌಡರು ಪ್ರಧಾನಮಂತ್ರಿ ಆದಾಗ, ನಾನು ಮುಖ್ಯಮಂತ್ರಿ ಆದಾಗ ಇರಬಹುದು ಯಾವುದೇ ರೀತಿಯ ಈಗಿನ ಸರ್ಕಾರಗಳ ನಡವಳಿಕೆ ಏನಿದೆ. ಆ ರೀತಿ ಯಾವುದೇ ಭ್ರಷ್ಟಾಚಾರಕ್ಕೆ, ಕಾನೂನುಬಾಹಿರ ಚಟುವಟಿಕೆಗೆ ನಾವು ಪ್ರೋತ್ಸಾಹ ಕೊಡದೆ ಇರುವುದರಿಂದ ನಮ್ಮ ಪಕ್ಷದ ಬಗ್ಗೆ ಚರ್ಚೆ ಮಾಡಲು ಎರಡು ರಾಷ್ಟ್ರೀಯ ಪಕ್ಷಗಳಿಗೆ ಸರಕಿಲ್ಲ ಎಂದು ವಾಗ್ದಾಳಿ ನಡೆಸಿದರು.

ಜೆಡಿಎಸ್ ಪಕ್ಷದ ಬಗ್ಗೆ ಏನು ಮಾತಾಡ್ತಾರೆ, ಮಾತನಾಡಲು ಸಬ್ಜೆಕ್ಟ್ ಏನಿದೆ..?. ನಾನು ಎರಡನೇ ಬಾರಿ ಮುಖ್ಯಮಂತ್ರಿ ಆದಾಗ ಮಂಡ್ಯಗೆ ಹಲವಾರು ಯೋಜನೆ ಕೊಟ್ಟೆ. ಇದೇ ಬಿಜೆಪಿ ನಾಯಕರು ಮಂಡ್ಯ ಬಜೆಟ್ ಅಂತ ಹೇಳಿ ವಿಧಾನಸಭೆ ಕಲಾಪದಲ್ಲಿ ಹಾಸ್ಯ ಮಾಡಿದ್ರು. ಕೊಟ್ಟಂತಹ ಹಣವನ್ನು ಬೇರೆ ಕಡೆ ಡೈವರ್ಟ್ ಮಾಡಿದ್ರು ಆ ಸತ್ಯ ಹೇಳಕೆ ಆಗುತ್ತಾ..?. ಆ ಸತ್ಯ ಹೇಳಲು ಸಾಧ್ಯವಿಲ್ಲ, ಆದ್ದರಿಂದ ಜೆಡಿಎಸ್ ಮಾತನಾಡಲು ಸರಕಿಲ್ಲ ಎಂದರು.

ನಾನು ಕೆಲವು ಮಾಧ್ಯಮಗಳಲ್ಲಿ ಕೆಲವು ಅಂಶ ಗಮನಿಸಿದ್ದೇನೆ. ನರೇಂದ್ರ ಮೋದಿ (Narendra Modi) ಯವರು ಮಂಡ್ಯಗೆ ಬಂದ ತಕ್ಷಣ ದಳಪತಿಗಳಲ್ಲಿ ತಳಮಳ ಅಂತ. ನಮಗೆ ನರೇಂದ್ರ ಮೋದಿ ಬಂದಿದ್ದು ಗೊತ್ತಿಲ್ಲ, ಹೋಗಿದ್ದು ಗೊತ್ತಿಲ್ಲ. ಮೋದಿಯವರು ಇನ್ನೂ ಹತ್ತು ಸಲ ಬಂದ್ರು, ನಾಟ್ ಓನ್ಲಿ ಮಂಡ್ಯ, ಯಾವುದೇ ಭಾಗಕ್ಕೆ ಬಂದ್ರು ನಮಗೆ ಅದರ ಚಿಂತೆ ಇಲ್ಲ ಎಂದು ಹೇಳಿದರು.

ಮೋದಿಯವರು ತಾತ್ಕಾಲಿಕವಾಗಿ ಮಾತಿನಲ್ಲಿ ಖುಷಿ ಪಡಿಸಲಿಕ್ಕೆ ಬಂದು ಹೋದರೂ ಜನರು ಅವರ ಮಾತಿಗೆ ಈಗ ಮರುಳಾಗುವ ದಿನಗಳು ಉಳಿದಿಲ್ಲ. ಆದ್ದರಿಂದ ಯಾವುದೇ ತಳಮಳವೂ ಇಲ್ಲ, ಜನತಾದಳಕ್ಕೆ ಭೀತಿಯು ಇಲ್ಲ. ನಾವು ಇವತ್ತು ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ಮಾಡುವ ನೈತಿಕ ಶಕ್ತಿಯನ್ನು ಉಳಿಸಿಕೊಂಡಿದ್ದೇವೆ, ಮುಂದುವರಿಯುತ್ತೆ ಎಂದು ತಿಳಿಸಿದರು.

Share. Facebook Twitter WhatsApp Pinterest LinkedIn Tumblr Telegram Email

Related Posts

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023

Bansuri Swaraj: ಸಕ್ರಿಯ ರಾಜಕಾರಣಕ್ಕೆ ಸುಷ್ಮಾ ಸ್ವರಾಜ್‌ ಪುತ್ರಿ ಪದಾರ್ಪಣೆ: ಯಾರಿದು ಬಾನ್ಸುರಿ?

March 29, 2023

ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪ ಶುದ್ಧ ಸುಳ್ಳು: ಸಚಿವ ಬೈರತಿ‌ ಬಸವರಾಜ್

March 29, 2023

CM Ibrahim: 2023ರ ಚುನಾವಣೆಯಲ್ಲಿ HDK ಸಿಎಂ ಆಗದಿದ್ರೆ ನಾನು ರಾಜಕೀಯ ನಿವೃತ್ತಿ: ಸಿಎಂ ಇಬ್ರಾಹಿಂ

March 29, 2023

ಜನಾರ್ದನ ರೆಡ್ಡಿ ಪಕ್ಷಕ್ಕೆ ಅಧಿಕೃತ ಚಿಹ್ನೆ ದೊರೆತ ಬಳಿಕ ಮೊದಲ ಪ್ರವಾಸ ಕಾರ್ಯಕ್ರಮ

March 29, 2023

Death: ನೀರಿನ ಆಳ ಪರೀಕ್ಷೆಗಿಳಿದು ಮೂವರು ವಿದ್ಯಾರ್ಥಿಗಳು ನೀರುಪಾಲು

March 29, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.