PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Shilpa Shetty: ಸತ್ಯವತಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ನಟಿ ಶಿಲ್ಪಾ ಶೆಟ್ಟಿ

March 22, 2023

ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ: 7 ನಿಧನ

March 22, 2023

ಕೋವಿಡ್ ಪ್ರಕರಣ ಸಂಖೆ ಹೆಚ್ಚಳ: ಮೋದಿಯಿಂದ ಉನ್ನತ ಮಟ್ಟದ ಸಭೆ

March 22, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » Prahlhad joshi: ಕಾಂಗ್ರೆಸ್ ಪಕ್ಷ ಇಷ್ಟು ವರ್ಷಗಳ ಕಾಲ ಕತ್ತೆ ಕಾಯ್ತಾ ಇತ್ತಾ? – ಪ್ರಹ್ಲಾದ್ ಜೋಶಿ ಕಿಡಿ
ಜಿಲ್ಲೆ Prajatv KannadaBy Prajatv KannadaFebruary 24, 2023

Prahlhad joshi: ಕಾಂಗ್ರೆಸ್ ಪಕ್ಷ ಇಷ್ಟು ವರ್ಷಗಳ ಕಾಲ ಕತ್ತೆ ಕಾಯ್ತಾ ಇತ್ತಾ? – ಪ್ರಹ್ಲಾದ್ ಜೋಶಿ ಕಿಡಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಧಾರವಾಡ: ಧಾರವಾಡ ಐಐಟಿ (IIT Dharwad) ಉದ್ಘಾಟನೆ ಮಾ.11ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಇದೇ ವೇಳೆ ಹಲವು ಕಾಮಗಾರಿಗೆ ಅವರು ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದರು. ಧಾರವಾಡದಲ್ಲಿ ಮಹದಾಯಿ ಯೋಜನೆ (Mahadayi Project) ವಿಚಾರವಾಗಿ ಮಾತನಾಡಿದ ಅವರು, ಮೋದಿ ಸರ್ಕಾರ ಮತ್ತೊಮ್ಮೆ ರಾಜ್ಯಕ್ಕೆ ಕೊಡುಗೆ ಕೊಟ್ಟಿದೆ. ಈ ಹಿಂದೆ ರಾಜ್ಯಕ್ಕೆ ಹನಿ ನೀರು ಕೊಡಲ್ಲವೆಂದು ಕಾಂಗ್ರೆಸ್ ಹೇಳಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 3 ರಾಜ್ಯಗಳಿಗೂ ಹೆಚ್ಚು ನೀರು ಹೋಗಬಾರದು ಅಂತಾ ನಿರ್ವಹಣಾ ಪ್ರಾಧಿಕಾರ ರಚನೆ ಮಾಡುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಮಹದಾಯಿ ನೀರು ಹಂಚಿಕೆಯಾಗುತ್ತದೆ. ಇದು ಒಳ್ಳೆಯ ಬೆಳವಣಿಗೆಯಾಗಿದೆ. ಹೀಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಧನ್ಯವಾದ ಹೇಳುತ್ತೇನೆ ಎಂದರು.

ಕಾಂಗ್ರೆಸ್ ಪಕ್ಷ ಹೆಚ್ಚು ಕಾಲ ಆಡಳಿತದಲ್ಲಿದ್ದರೂ ಏನೂ ಕೆಲಸ ಮಾಡಿಲ್ಲ, ಅವರು ಸದಾ ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸಿದ್ದಾರೆ. ಇಂದು ಅಭಿವೃದ್ಧಿ ಕಾರ್ಯ ನೋಡಿ ಜನರು ಬಿಜೆಪಿಗೆ ಮತ ಹಾಕುತ್ತಿದ್ದಾರೆ. ಇದನ್ನು ಸಹಿಸಿಕೊಳ್ಳದೇ ಕಾಂಗ್ರೆಸ್‌ನವರು ನಾಟಕ ಮಾಡುತ್ತಿದ್ದಾರೆ ಎಂದರು. ಮದ್ಯಪಾನ ವಯೋಮಿತಿಯನ್ನು ಕಡಿಮೆ ಮಾಡುವ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿದ್ದೇನೆ. ಆದರೆ ಈ ಬಗ್ಗೆ ಪ್ರಸ್ತಾವನೆ ಇಲ್ಲ ಎಂದು ಹೇಳಿರುವುದಾಗಿ ತಿಳಿಸಿದರು.

ಅಧಿಕಾರಕ್ಕೆ ಬಂದರೆ ಉಚಿತವಾಗಿ 10 ಕೆಜಿ ಅಕ್ಕಿ ನೀಡುವ ಘೋಷಣೆ ಮಾಡಿದ ಬಗ್ಗೆ ಕಾಂಗ್ರೆಸ್ಗೆ ಟಾಂಗ್ ಕೊಟ್ಟ ಪ್ರಲ್ಹಾದ್ ಜೋಶಿ, ಕಾಂಗ್ರೆಸ್ ಪಕ್ಷ ಇಷ್ಟು ವರ್ಷಗಳ ಕಾಲ ಕತ್ತೆ ಕಾಯ್ತಾ ಇತ್ತಾ? ನಾವು ಈಗಾಗಲೇ ಉಚಿತವಾಗಿ 5 ಕೆಜಿ ಅಕ್ಕಿ ಕೊಡುತ್ತಿದ್ದೇವೆ. ನಾವು 10 ಕೆಜಿ ಕೊಟ್ಟರೆ ಕಾಂಗ್ರೆಸ್ನವರು 20 ಕೆಜಿ ಅಂತಾರೆ. ಕಾಂಗ್ರೆಸ್‌ನವರು ಹೇಳಿದ್ದನ್ನು ಯಾವುದಾದರೂ ಮಾಡಿದ್ದಾರಾ ಇದೇ ಕಾಂಗ್ರೆಸ್ನವರು ಮೊದಲು ಗರೀಬಿ ಹಠಾವೋ ಅಂದರು. ಅದೆಲ್ಲ ಆಗಿದ್ದರೆ ಇವತ್ತೇಕೆ ಮತ್ತೆ ಅಕ್ಕಿ ಕೊಡುವ ಸ್ಥಿತಿ ಬರುತ್ತಿತ್ತು? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸುಳ್ಳು ಹೇಳಲು ಅತ್ಯಂತ ನಿಸ್ಸೀಮವಾಗಿರುವ ಪಕ್ಷ. ದೇಶದಲ್ಲಿ ಕಾಂಗ್ರೆಸ್ನವರು 57-58 ವರ್ಷ ಆಡಳಿತ ಮಾಡಿದ್ದಾರೆ. ಈಗಲೂ ವಿದ್ಯುತ್ ಕೊಡುತ್ತೇವೆ ಅಂತಾ ಕಾಂಗ್ರೆಸ್ ಹೇಳುತ್ತದೆ. ಈಗ ನಾವು 24 ಗಂಟೆಗಳ ಕಾಲ ವಿದ್ಯುತ್ ಕೊಡುತ್ತಿದ್ದೇವೆ. ಕಾಂಗ್ರೆಸ್ನವರು ಈಗ ಉಚಿತ ವಿದ್ಯುತ್ ಕೊಡುತ್ತೇವೆ ಅಂತಾರೆ. ಇಷ್ಟು ದಿನ ಕಾಂಗ್ರೆಸ್‌ನವರು ಕತ್ತೆ ಕಾಯ್ತಾ ಇದ್ರಾ? 75 ವರ್ಷದಲ್ಲಿ 58 ವರ್ಷ ಅಧಿಕಾರದಲ್ಲಿದ್ದರಲ್ಲ, ನಿಮಗೆ ನಾಚಿಕೆ ಆಗುವುದಿಲ್ವಾ? ಸುಳ್ಳು ಹೇಳುವುದು ಕಾಂಗ್ರೆಸ್‌ನವರ ಡಿಎನ್‌ಎನಲ್ಲೇ ಇದೆ ಎಂದು ವಾಗ್ದಾಳಿ ನಡೆಸಿದರು.

 

Share. Facebook Twitter WhatsApp Pinterest LinkedIn Tumblr Telegram Email

Related Posts

Ugadi 2023: ಹೊಸ ಸಂವತ್ಸರದ ಮೊದಲ ಬೇಸಾಯಕ್ಕೆ ಸಿದ್ಧತೆ; ರೈತರಲ್ಲಿ ಹೊಸ ಹುರುಪು

March 22, 2023

ಚುನಾವಣಾ ಗಿಮಿಕ್: ಬಿಜೆಪಿ ಶಾಸಕನಿಂದ ಮುಸ್ಲಿಂ ಟೋಪಿ ಧರಿಸಿ ಮಸೀದಿ ನಿರ್ಮಾಣಕ್ಕೆ ಭೂಮಿಪೂಜೆ

March 22, 2023

Rape attempt: ಮನೆ ಮುಂದೆ ನಿಂತಿದ್ದ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗಳಿಗಾಗಿ ಶೋಧ

March 22, 2023

ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾದ ಏಳು ಲಕ್ಷ ಮೌಲ್ಯದ ಮದ್ಯ

March 22, 2023

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ: ಮುನ್ಸೂಚನೆ ನೀಡಿದ ಬೊಂಬೆ ಭವಿಷ್ಯ

March 22, 2023

ಮನೆಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಿಂದ ವಿತರಣೆ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.